ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮಹಿಳೆ’

1
ಆಗಸ್ಟ್

ಕಥೆಯಾದಳು ಹುಡುಗಿ!

– ಚಿತ್ರ ಸಂತೋಷ್

ವೇಶ್ಯಾವಾಟಿಕೆ ಎನ್ನುವುದು ಗಂಡಸು ಸೃಷ್ಟಿಸುವ ಸಮಸ್ಯೆ ಎಂದವನು ಚಾಣಕ್ಯ. ಆದರೆ, ನನಗನಿಸಿದ ಮಟ್ಟಿಗೆ ಇದು ಸಮಾಜವೇ ಸೃಷ್ಟಿಸುವ ಸಮಸ್ಯೆ. ಉತ್ತರ ಕರ್ನಾಟಕದ ಕೆಲಭಾಗಳಲ್ಲಿ ಈಗಲೂ ಹೆಣ್ಣನ್ನು ವೇಶ್ಯಾವಾಟಿಕೆಗೆ ತಳ್ಳುವ ಕೆಟ್ಟಪದ್ಧತಿ ಚಾಲ್ತಿಯಲ್ಲಿದೆ. ಇಲ್ಲಿ ಯಾವ ಕಾನೂನುಗಳೂ ಕೆಲಸಮಾಡುತ್ತಿಲ್ಲ.

ನನಗೆ ೨೨ ವರ್ಷ. ನಾವು ಐವರು ಹೆಣ್ಣುಮಕ್ಳು. ಮನೆಯಲ್ಲಿ ಬಡತನ. ನಮ್ಮ ಮದುವೆ ಕುರಿತು ಯೋಚನೆ ಮಾಡಿ ಮಾಡಿ ಅಪ್ಪಹಾಸಿಗೆ ಡಿದಿದ್ದ. ನಾನೇ ದೊಡ್ಡವಳು. ನನ್ನ ಕೊನೆಯ ತಂಗಿಯ ಹುಟ್ಟುವಾಗಲೇ ಹೆರಿಗೆಯಲ್ಲಿ ತೊಂದರೆಯಾಗಿ ಅಮ್ಮ ಸಾವನ್ನಪ್ಪಿದ್ದಳು.  ನಾನು ದೊಡ್ಡವಳಾಗಿದ್ದರಿಂದ ನನಗೆ ಸಣ್ಣ ವಯಸ್ಸಿನಲ್ಲೇ ಒಬ್ಬ ಮುದುಕನ ಜೊತೆ ಅಪ್ಪ ಮದುವೆ ಮಾಡಿದ್ದ. ಆದರೆ, ಅವನಿಗೆ ಆಗಲೇ ಮೂರು ಮಂದಿ ಪತ್ನಿಯರಿದ್ದರು. ಮರಳಿ ಮನೆಗೆ ಬಂದೆ. ಕೆಲಸ ಹುಡುಕುವುದು ಅನಿವಾರ್ಯವಾಯಿತು. ನಮ್ಮೂರಿನ ಅಂಕಲ್ ಒಬ್ರು ಕೆಲಸ ಕೊಡಿಸುತ್ತೇನೆ ಎಂದು ಆಶ್ವಾಸನೆ ನೀಡಿದ್ದರು. ಅಪ್ಪನಿಗೂ ಹೇಳದೆ ಅವನನ್ನು ನಂಬಿ ಮುಂಬೈಗೆ ತೆರಳಿದೆ.

ಮತ್ತಷ್ಟು ಓದು »

13
ಜುಲೈ

ಕಂದಮ್ಮನಿಗೆ ಎಲ್ಲವೂ ಅರ್ಥವಾಗುತ್ತೆ!

– ವಿಷ್ಣುಪ್ರಿಯ

ಮಕ್ಕಳು ಮೂರೇ ತಿಂಗಳು ಪ್ರಾಯವಾಗಿದ್ದಾಗಲೇ ಅಮ್ಮನ ಮಾತುಗಳನ್ನು ಅರ್ಥ ಮಾಡಿಕೊಳ್ಳುವ ಸಾಮಥ್ರ್ಯ ಹೊಂದಿರುತ್ತವಂತೆ. ಒಂದು ಜೀವ ತಾಯಗರ್ಭದಲ್ಲಿ ಮೊಳಕೆಯೊಡೆಯಬೇಕು ಎಂದಾದರೆ ಅಲ್ಲಿ ತಂದೆಯ ರೇತಸ್ಸು (ವೀರ್ಯ) ಮತ್ತು ತಾಯಿ ಆತ್ಮಭೂಯದ (ಅಂಡಾಣು ಎನ್ನಬಹುದು) ಮಿಲನವಾಗಬೇಕು. ಗರ್ಭದಲ್ಲಿರುವ ಮಗುವಿನ ನಾಭಿಯಿಂದ ಹೊರಟಂಥ ಕರುಳಬಳ್ಳಿ ತಾಯಿಯ ಜೊತೆಗೆ ನಂಟು ಬೆಳೆಸುತ್ತದೆ. ತಾಯಿಯ ಆತ್ಮಭೂಯ ಮತ್ತು ತಂದೆಯ ರೇತಸ್ಸಿನಲ್ಲಿ ಹಲವು ತಲೆಮಾರುಗಳ ವಂಶವಾಹಿಗಳು ಹರಿಯುವುದರಿಂದ ಸಂಬಂಧ ಬಹಳ ದೂರದವರೆಗೆ ವಿಸ್ತರಿಸುತ್ತದೆ. 

ಮಕ್ಕಳ ಗ್ರಹಣಶಕ್ತಿ ಎಷ್ಟಿರುತ್ತದೆ? ಯಾವಾಗಿನಿಂದ ಮಕ್ಕಳಿಗೆ ಈ ಶಕ್ತಿ ಲಭ್ಯವಾಗುತ್ತದೆ? ಎಂಬೆಲ್ಲ ವಿಚಾರಗಳ ಬಗ್ಗೆ ಹಲವು ವರ್ಷಗಳಿಂದ ಜಿಜ್ಞಾಸೆ ಇದೆ. ಮಕ್ಕಳಿಗೆ ಬುದ್ಧಿ ಬರುವಾಗ ಮೂರ್ನಾಲ್ಕು ವರ್ಷ ಆಗುತ್ತೆ. ಅಲ್ಲಿಯವರೆಗೆ ಆವರಿಗೆ ಏನೂ ಅರ್ಥ ಆಗಲ್ಲ ಅಂತ ಒಂದು ವಾದ ಹೇಳಿದರೆ, ನಮ್ಮ ಪುರಾಣಗಳು ಮಗು ಅಮ್ಮನ ಗರ್ಭದಲ್ಲಿರುವಾಗಲೇ ಎಲ್ಲವನ್ನೂ ಅರ್ಥ ಮಾಡಿಕೊಳ್ಳುತ್ತದೆ ಎಂದು ಹೇಳುತ್ತವೆ. ಹೀಗಿರುವಾಗ ಯಾವುದು ಸರಿ ಎಂಬ ಗೊಂದಲವೂ ಕಾಡುವುದು ಸಹಜ. ಪುರಾಣಗಳನ್ನು, ವೇದ, ಉಪನಿಷತ್ತುಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗದವರು, ಸಾಧ್ಯವಿದ್ದರೂ ಅವುಗಳತ್ತ ಕಣ್ಣೆತ್ತಿಯೂ ನೋಡದವರು, ವೇದ, ಉಪನಿಷತ್ತುಗಳು, ಪುರಾಣಗಳೆಂದರೆ ಕಟ್ಟುಕಥೆಗಳೆಂದು ಭಾವಿಸುವವರು ಮೊದಲಿನ ವಾದವನ್ನೇ ಒಪ್ಪಬಹುದು. ವೇದ, ಉಪನಿಷತ್ತುಗಳು ಮತ್ತು ಪುರಾಣಗಳನ್ನು ವೈಜ್ಞಾನಿಕ ದೃಷ್ಟಿಕೋನದಿಂದ ನೋಡುವವರು ಖಂಡಿತಕ್ಕೂ ಮೊದಲ ವಾದನನ್ನು ಸಾರಾಸಗಟು ತಳ್ಳಿಹಾಕುತ್ತಾರೆ.

12
ಜುಲೈ

ಅವರ ಹಿಂಸೆಗೆ ನನ್ನಲ್ಲಿ ಉತ್ತರವಿರಲಿಲ್ಲ

– ಚಿತ್ರಾ ಸಂತೋಷ್

ನ್ನ ಕಳೆದೆರಡು ಅಂಕಣದಲ್ಲಿ  ಅನ್ಯಾಯದ ಕುಲುಮೆಯಲ್ಲಿ ಬೆಂದ ಹೆಣ್ಣು ಮಕ್ಕಳಿಬ್ಬರ ಕಥೆ ಹೇಳಿದ್ದೆ. ಈಗ  ಮತ್ತೊಂದು ಕಥೆ ಹೇಳುತ್ತಿದ್ದೇನೆ. ಹೆಣ್ಣು ಮುಂದುವರಿದರೂ ಆಕೆಯ ಮೇಲಿನ ಅನ್ಯಾಯಗಳಿನ್ನೂ ಕೊನೆಯಾಗಲಿಲ್ಲ. ಈಕೆಯ ಹೆಸರು ಸುಲೇಖಾ ಮಹಿಪಾಲ್ . ಊರು ಡೆಹ್ರಾಡೂನ್. ಹುಟ್ಟಿದ್ದು ಜಾಡಮಾಲಿ ಕುಟುಂಬದಲ್ಲಿ. ಅಪ್ಪ ಅಮ್ಮನನ್ನು ವಿಷ ನೀಡಿ ಕೊಂದಾಗ ಸುಲೇಖಾಳಿಗೆ ಇನ್ನೂ ೧೩ ವರ್ಷ. ಅಪ್ಪನಿಂದ ದೂರಾದ ಸುಲೇಖಾಳ ಬದುಕು ಪ್ರತಿಕ್ಷಣವೂ ಶೋಷಣೆಗೊಳಗಾಯಿತು. ಭರವಸೆ ಕಳೆದುಕೊಂಡ ಅವಳ ಬದುಕಿನಲ್ಲಿ ಮತ್ತೆ ಭರವಸೆ ತುಂಬಿದ್ದು  ಸಮಾಧಾನ್ ಎಂಬ ಸರ್ಕಾರೇತರ ಸಂಸ್ಥೆ ಮತ್ತು ತನ್ನ  ಭಾ ಪತಿ. ಈಗ ಅನ್ಯಾಯದ ವಿರುದ್ಧ ಸುಲೇಖಾ ಹೋರಾಟಕ್ಕೆ ಭಾ ಪತಿಯೂ ಕೈ ಜೋಡಿಸಿದ್ದಾರೆ.

ಅಮ್ಮನನ್ನು ಉಳಿಸಿಕೊಳ್ಳಲು ಆಕೆಯಿಂದ ಸಾಧ್ಯವಾಗಲಿಲ್ಲ. ಅಪ್ಪನ ರೌದ್ರವತಾರೆದುರು ಮಗಳು ಅಸಹಾಯಕಳಾಗಿ ಮೌನವಾಗಿದ್ದಳು. ಆಕೆಗಿನ್ನೂ ೧೩ ವರ್ಷ. ಆ ಪುಟ್ಟ ಹೆಣ್ಣು ಮಗಳ ಎದುರು ಅಮ್ಮ ಹತಳಾದಳು.

 
ಮತ್ತಷ್ಟು ಓದು »

1
ಜುಲೈ

ಕ್ಷಮಿಸಿ,ನಿಮ್ಮ ನೆಮ್ಮದಿಯನ್ನು ಕಲಕುವ ಉದ್ದೇಶ!

– ಚಿತ್ರ ಸಂತೋಷ್

ನನ್ನ ಕಣ್ಣಿನಲ್ಲಿ ಕಣ್ಣೀರು ಎಂದೋ ಬತ್ತಿಹೋಗಿತ್ತು. ಅನ್ಯಾಯದ ವಿರುದ್ಧದ ದನಿ ಕುಗ್ಗಿಹೋಗಿತ್ತು. ನನಗೆ ಈಗ ದನಿ ಇಲ್ಲ. ಒಂದು ವೇಳೆ ದನಿ ಇದ್ದರೂ ಕೇಳುವ ಕಿವಿಗಳು ನನ್ನ ಬಳಿ ಇಲ್ಲ. ಅಪ್ಪ-ಅಮ್ಮನ ನೆನಪಾಗುತ್ತದೆ. ಲಂಡನ್‌ನ ನೆನಪುಗಳು ಆಗಾಗ ಸುಳಿಯುತ್ತವೆ. ಬದುಕು ಬೇಡ ಅನಿಸುತ್ತಿದೆ. ಆದರೂ, ನನ್ನ ಕೈಯಾರೆ ನಾನು ಕೊಲೆಯಾಗ ಬಯಸಲಾರೆ. ಎಲ್ಲವನ್ನೂ ಮರೆಯೋಕೆ ಕುಡಿತವನ್ನು ಬದುಕಾಗಿಸಿಕೊಂಡಿದ್ದೇನೆ.

ಆನೆ, ಹುಲಿ, ಸಿಂಹಗಳ ಅಂಗಾಂಗಳನ್ನು  ಪ್ರದರ್ಶನಕ್ಕಿಟ್ಟರೆ ದುಡ್ಡು ಕೊಟ್ಟು ನೋಡಲು ಖುಷಿಪಡ್ತೀವಿ. ಆದರೆ, ಒಬ್ಬ ಹೆಣ್ಣಿನ ಅಂಗಾಂಗಳನ್ನು ಪ್ರದರ್ಶನಕ್ಕಿಟ್ಟರೆ…ನೋಡುವುದು ಬಿಡಿ, ಕೇಳಲು ಅಸಹ್ಯವಾಗುತ್ತದೆ. ಆದರೆ, ಇಂಥದ್ದೊಂದು ನೈಜ ಘಟನೆ ಎರಡು ದಶಕಗಳ ಹಿಂದೆ ನಡೆದಿತ್ತು. ಇಂದಿಗೂ ದಕ್ಷಿಣ ಆಫ್ರಿಕಾದ ನೂರಾರು ಹೆಣ್ಣು ಮಕ್ಕಳು ಈ ಕಥೆಯನ್ನು ನೆನೆಸಿಕೊಂಡು ಕಣ್ಣೀರು ಹಾಕುತ್ತಾರೆ.

*****                                            *****
ನನ್ನ ಹೆಸರು ಸಾರಾ. ಹುಟ್ಟಿದ್ದು ೧೭೮೯ರಲ್ಲಿ. ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ. ನಾನು ಎದ್ದು ನಡೆಯುವ ಹೊತ್ತಿಗೆ ಅಪ್ಪ-ಅಮ್ಮನನ್ನು ಕಳೆದುಕೊಂಡಿದ್ದೆ. ಅವರು ಬಲಿಯಾಗಿದ್ದೂ ಬಡತನಕ್ಕೇ! ಇಂದು ನನ್ನೆದುರು ಅವರ ಮುಖವೂ ಅಸ್ಪಷ್ಟ. ಹಿಂದೆ-ಮುಂದೆ ಯಾರಿಲ್ಲ. ಒಬ್ಬಳೇ ಮಗಳು. ಒಂದಷ್ಟು ದಿನ ಸಂಬಂಧಿಕರ ಆಶ್ರಯದಲ್ಲಿ ಬೆಳೆದೆ. ಆದರೂ, ಅಲ್ಲಿ ನನ್ನ ಬದುಕಿರಲಿಲ್ಲ. ನಮ್ಮೂರಿನ ಪಕ್ಕದ ಡಚ್ ರೈತರ ಮನೆಯಲ್ಲಿ ಜೀತದಾಳಾಗಿ ಸೇರಿಕೊಂಡೆ. ಆಗಿನ್ನೂ ಹರೆಯಕ್ಕೆ ಬಂದ ವಯಸ್ಸು ಜಗತ್ತಿನ ಆಗುಹೋಗುಗಳನ್ನು ತಿಳಿಯಬಲ್ಲವಳಾಗಿದ್ದೆ. ಬಿಳಿಯರು ನಮ್ಮ ಜನಾಂಗದ ವಿರುದ್ಧ ನಡೆಸುತ್ತಿದ್ದ ಅನ್ಯಾಯಗಳ ಕುರಿತು ಕೇಳಿದ್ದೆ. ಎಲ್ಲವೂ ನನ್ನೊಡಲಲ್ಲಿ ಮೌನವಾಗಿದ್ದವು.

ಬೀದಿ-ಬೀದಿಯಲ್ಲಿ ಬೆತ್ತಲಾದೆ!
ಮತ್ತಷ್ಟು ಓದು »

20
ಜೂನ್

‘ಅನ್ಯಾಯ’ದ ಮನೆಯೊಳಗಿನ ಆಶಾಕಿರಣ.

– ಚಿತ್ರಾ ಸಂತೋಷ್

ದೆಹಲಿಯ ಜಿ.ಬಿ. ರಸ್ತೆಯಲ್ಲಿ ನನ್ನ ಪುಟ್ಟ ವಯಸ್ಸು, ಬದುಕು ಮೂರಾಬಟ್ಟೆಯಾಯಿತು ಅನಿಸಿತ್ತು. ನನ್ನ ವಿರುದ್ಧ ನಡೆಯುತ್ತಿರುವ ಅನ್ಯಾಯಗಳಿಗೆ ನನಗೆ ದನಿಯೆತ್ತಲೂ ನನ್ನ ಜೊತೆ ಯಾರಿರಲಿಲ್ಲ. ಆ ‘ಅನ್ಯಾಯ’ದ ಮನೆಯೊಳಗೆ ಪ್ರತಿ ನಿಮಿಷವೂ ನನ್ನ ಮೇಲೆ ಅಮಾನುಷವಾಗಿ ಅತ್ಯಾಚಾರ ನಡೆಯುತ್ತಿತ್ತು. ಐದು ವರ್ಷ ಆ ‘ಸೆರೆಮನೆ’ ಅನುಭವಿಸಿದೆ.
ಅಮ್ಮ ಅಂದ್ರೆ ನನಗೆ ತುಂಬಾ ಪ್ರೀತಿ. ಅವಳಿಗೆ ಒಂದಿಷ್ಟು ನೋವಾದರೂ ಮನಸ್ಸು ಸಹಿಸುತ್ತಿರಲಿಲ್ಲ. ಕೆಲವೊಮ್ಮೆ ಅಮ್ಮ ಮನೆಯಲ್ಲಿದ್ದ ಕಷ್ಟಗಳನ್ನು ನೆನೆದು ಅಳುತ್ತಿದ್ದಳು. ತುಂಬಾ ಸಲ ಅಮ್ಮ ಅಳುವುದನ್ನು ನೋಡಿ ನಾನೂ ಕಣ್ಣೀರಾಗುತ್ತಿದ್ದೆ. ತಲೆಗೆ ಸೆರಗು ಹೊದ್ದು ಅಳುವ ಅವಳನ್ನು ನೋಡಲಾಗದೆ ಸಮಾಧಾನಿಸುತ್ತಿದ್ದೆ. ಬದುಕು ಬರಿದಲ್ಲ, ಅಮ್ಮ ದೊಡ್ಡವಳಾದ ಮೇಲೆ ನಾ ನಿನ್ನ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಭರವಸೆ ತುಂಬುತ್ತಿದ್ದೆ. ಕೆಲವೊಮ್ಮೆ ನನಗೆ ದಿನನಿತ್ಯದ ಶಾಲೆಯ ಖರ್ಚು ಭರಿಸಲೂ ಕಷ್ಟವಾಗುತ್ತಿತ್ತು. ಆದರೂ, ಸಂಜೆ ಶಾಲೆಯಿಂದ ಹೊರಟಾಗ ಅಮ್ಮ ಏನು ತಿಂಡಿ ಮಾಡಿಟ್ಟಿರುತ್ತಾಳೆ ಅಂದುಕೊಂಡೇ ಹೊರಡುತ್ತಿದ್ದೆ.ಸಂಜೆಯಾಗುತ್ತಿದ್ದಂತೆ ಮನಸ್ಸೆಲ್ಲಾ ಮನೆಯಲ್ಲಿರುತ್ತಿತ್ತು. ಅಮ್ಮನ ನೋಡುವ ತವಕವಿತ್ತು. ಅಂದು ಸಂಜೆ ಎಂದಿನಂತೆ ಶಾಲೆಯಿಂದ ಹೊರಟಿದ್ದೆ. ಸುಮಾರು ಐದು ಗಂಟೆ. ಸೂರ್ಯ ಮುಳುಗಲು ಇನ್ನೂ ಕೆಲ ಸಮಯವಿತ್ತು. 

 

 

 

ನನ್ನ ಬೆಲೆ ೩೦೦ ರೂ!
ಅಮ್ಮ ಜಗುಲಿ ಮೇಲೆ ಕುಳಿತಿದ್ದಳು. ನನಗೆ ಅಮ್ಮನ ಕಾಣುವ ಹಂಬಲ, ಅವಳಿಗೆ ಮಗಳನ್ನು ಕಾಣುವ ವಾತ್ಸಲ್ಯ. ನನ್ನನ್ನೇ ಎದುರು ನೋಡುತ್ತಿದ್ದ ಆಕೆಯ ಮುಖದಲ್ಲಿ ನಾನು ಗೇಟು ದಾಟಿ ಹೋಗುತ್ತಿದ್ದಂತೆ ನಗು ಅರಳಿತು. ‘ಬಾ ಮಗಳೇ’ ಎಂದು ತೆಕ್ಕೆಗೆಳೆದುಕೊಂಡಳು. ಸೂರ್ಯ ಮುಳುಗಲು ಕ್ಷಣಗಳನ್ನು ಎಣಿಸುತ್ತಿದ್ದ. ಅಮ್ಮನೆದುರು ಕುಳಿತ ವ್ಯಕ್ತಿಯ ಹೆಸರು ಪ್ರವೀಣ್ ಪಂಡಿತ್. ಹೆಸರಷ್ಟೇ ಗೊತ್ತಿತ್ತು. ಅಮ್ಮ ಅವನ ಜೊತೆ ಅಷ್ಟು ಕೊಡು, ಇಷ್ಟು ಕೊಡು ಎಂದು ಚೌಕಾಸಿ ಮಾಡುತ್ತಿದ್ದಳು. ನನಗೊಂದೂ ಅರ್ಥವಾಗಲಿಲ್ಲ. ಅಮ್ಮ ಹೇಳಿದ ದುಡ್ಡಿಗೆ ಆತ ಒಪ್ಪಲೇ ಇಲ್ಲ. ಕೊನೆಗೆ ೩೦೦ ರೂ. ಕೊಡುತ್ತೇನೆ ಅಂದ. ಅಮ್ಮ ಒಪ್ಪಿಕೊಂಡು, “ಮಗಳೇ ನೀನು ಅಂಕಲ್ ಜೊತೆ ದೆಹಲಿಗೆ ಹೋಗಬೇಕು” ಎಂದು ಹೇಳಿದಳು.

ಮತ್ತಷ್ಟು ಓದು »

19
ಜೂನ್

‘ಹೆಣ್ಣಾಗುವ’ ಒಂದು ಪ್ರಸಂಗ

– ಸಾತ್ವಿಕ್ ಎನ್.ವಿ.

ನನ್ನ ಮೊಬೈಲ್ ಗೊಂದು ಮಿಸ್ಡ್ ಕಾಲ್. ಇದು ಯಾರು ಎಂದು ಕೇಳಿ ರಿಪ್ಲೇ ಮಾಡಿದೆ. ತಕ್ಷಣವೇ ಅಲ್ಲಿಂದ ಶುರುವಾಯ್ತು ಮೆಸೇಜುಗಳ ಸುರಿಮಳೆ.

ನಮ್ಮ ನಡುವಿನ ಸಂಭಾಷಣೆಯನ್ನು ಹಾಗೆಯೇ ನೀಡಿದರೆ ಚೆನ್ನ.

‘ನೀವು ರಚನ್ ಅಲ್ವಾ? ‘
‘ಅಲ್ಲ, ನಾನು ರಚನ್ ಅಲ್ಲ’
‘ನಿಮ್ಮ ಹೆಸರು ಕೇಳಬಹುದೇ?’
‘ಕ್ಷಮಿಸಿ, ಗುರುತಿಲ್ಲದವರಿಗೆ ಪರಿಚಯ ಹೇಳಲಾರೆ’
‘ಪರಿಚಯಕ್ಕೇನು, ಮಾಡಿಕೊಂಡರಾಯಿತು. ನಾನು ಮನು. ೩ನೇ ಸೆಮ್ ಇ ಅಂಡ್ ಸಿ. ಊರು ಬೆಂಗಳೂರು, ನೀವು?’

ನಾನು ಈಗ ನಿಜಕ್ಕೂ ಸಂಕಟಕ್ಕೆ ಸಿಲುಕಿದೆ. ಹೀಗೆಯೆ ಎಷ್ಟೊ ಜನ ಮಿಸ್ ಕಾಲ್ ಗಳಿಂದ ಪರಿಚಿತರಾಗಿ ಗೆಳೆಯರಾಗಿರುವುದನ್ನು ಕೇಳಿದ್ದೆ. ಆದರೂ ನನ್ನ ನಿಜ ಪರಿಚಯ ಕೊಡಲು ಹಿಂಜರಿಕೆಯಾಯಿತು. ಇದು ಆತನಿಗೆ ಅರ್ಥವಾಯಿತೋ ಎಂಬಂತೆ ಆತನೇ ಮಾತು ಮುಂದುವರಿಸಿದ. ‘ಪರವಾಗಿಲ್ಲ, ನೀವು ಹುಡುಗನೋ, ಇಲ್ಲ ಹುಡುಗಿಯೋ’ ಎಂದು ಕೇಳಿದ.

ಮತ್ತಷ್ಟು ಓದು »

1
ಜೂನ್

ಮನೆಮಗಳಿಗೊಂದು ಗಿಡ ನೆಡುವ ಧರ್ ಹರಾ ನಮಗೂ ಆದರ್ಶವಾಗಲಿ…

– ಚಿತ್ರ ಸಂತೋಷ್

ಹೆಣ್ಣುಮಗಳಿಗಾಗಿ ಗಿಡಗಳನ್ನು ನೆಡುವ ಬಿಹಾರದ ಧರ್‌ಹರಾ ಗ್ರಾಮದ ‘ವಿಶಿಷ್ಟ ಸಂಸ್ಕೃತಿ’ಯನ್ನು ನೋಡಿ ಅಮೆರಿಕಾವೇ ನಿಬ್ಬೆರಗಾಗಿತ್ತು. ಅಮೆರಿಕ ರಾಯಭಾರಿ ಮೆಲನ್ನೆ ವರ್ರ್ ಈ ಗ್ರಾಮವನ್ನು ಮನತುಂಬಾ ಕೊಂಡಾಡಿ, ಈ ಗ್ರಾಮ ವಿಶ್ವಕ್ಕೆ ಮಾದರಿ ಎಂದಿದ್ದರು. ಆದರೆ, ನಮ್ಮದೇ ನೆಲದ ಇಂಥದ್ದೊಂದು ಅಪೂರ್ವ ಸಂಸ್ಕೃತಿಯನ್ನು ನಮ್ಮನೆಯ ಸಂಸ್ಕೃತಿಯನ್ನಾಗಿ ಬೆಳೆಸುವ ‘ಕರ್ತವ್ಯ’ವನ್ನು ನಾವಿನ್ನೂ ಮಾಡೇ ಇಲ್ಲ!

ಬಿಟಿಯಾಕೀ ಜನ್ಮ್ ಹೋನಾ, ಹಮಾರೆ ಲಿಯೇ ತೋ ಬಹುತ್ ಖುಷಿಕೀ ಬಾತ್ ಹೈ. ಬಿಟಿಯಾ ಹಮಾರೆ ಲಿಯೇ ಬೋಜ್ ನಹೀ ಹೈ,  ಉನ್ಕೋ ಬಿ ಪಡಾಯೆತೋ ಓಬಿ ಸಾಕ್ಷರ್ ಬನಾಯೇಂಗೆ, ಶಾದಿಬೀ ಕರೇಂಗೆ. ಕ್ಯಾಂಕೀ ಬಿಟಿಯಾ ಧೋ ಘರ್ ಕೀ ಚಿರಾಗ್ ಹೈ….(ನಮಗೆ ಹೆಣ್ಣು  ಮಕ್ಕಳು ಹುಟ್ಟುವುದೆಂದರೆ ಅದೊಂದು ಸಂಭ್ರಮ, ಹೆಮ್ಮೆ. ಹೆಣ್ಣು ಮಕ್ಕಳು ನಮಗೆ ಹೊರೆಯಲ್ಲ. ಗಂಡು ಮಕ್ಕಳಂತೆ ಹೆಣ್ಣು ಮಕ್ಕಳಿಗೂ ಶಿಕ್ಷಣ ನೀಡ್ತೀವಿ. ಮದುವೆ ಮಾಡ್ತೀವಿ. ಏಕೆಂದರೆ ಹೆಣ್ಣು ಮಕ್ಕಳು ಎರಡು ಕುಟುಂಬಗಳ ಬಾಂಧವ್ಯವನ್ನು ಬೆಸೆಯುವ ಕೊಂಡಿ)

ಥತ್! ಇದ್ಯಾವುದೋ ಭಾಷಣಕಾರನ ಬೊಗಳೆ ಮಾತುಗಳು ಎಂದೆನಿಸಬಹುದು. ಆದರೆ, ನಿಮ್ಮ ಊಹೆ ಖಂಡಿತಾ ತಪ್ಪು. ಇದು ಕ್ಷಣ ಕ್ಷಣದ ಬದುಕನ್ನೂ ಕೂಲಿ-ನಾಲಿ ಮೂಲಕ ಕಂಡುಕೊಳ್ಳುವ ಜನಸಾಮಾನ್ಯರ ಮಾತು. ಇವರಿಗೆ ಹೆಣ್ಣು ಮಕ್ಕಳು ಹುಟ್ಟಿದರೆ ಹಬ್ಬದ ಸಂಭ್ರಮ. ನಮ್ಮ ಮನೆಮಗಳು ಹುಟ್ಟಿದರೆ, ಅವಳ ಬದುಕು ಅವಳೇ ಕಟ್ಟಿಕೊಳ್ಳುತ್ತಾಳೆ ಅನ್ನೋ ಗಟ್ಟಿ ನಂಬಿಕೆ ಅವರದು. ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆಗಾಗಿ ಪತ್ನಿಯನ್ನು ಪೀಡಿಸುವುದು ಅಥವಾ ಹೆಣ್ಣು ಮಗಳ ಮದುವೆಗಾಗಿ ಲಕ್ಷಾಂತರ ರೂಪಾಯಿ ಸಾಲಮಾಡಿ ಜೀವನಡೀ ಸಾಲ ತೀರಿಸಲು ಪರದಾಡುವುದು…ಇದೆಲ್ಲಾ ಈ ಊರಿನಲ್ಲಿ ಇನ್ನೂ “ಅಪರಿಚಿತ” ಸುದ್ದಿಗಳು. ಇದ್ಯಾವ ಸಂಸ್ಕೃತಿ, ಇದ್ಯಾವ ಊರು? ಅಂತೀರಾ…

ಮತ್ತಷ್ಟು ಓದು »

13
ಮೇ

ಶಾಪ ವಿಮೋಚನೆಯಾಗದ ಅಹಲ್ಯೆಯರು…

– ರೂಪ ರಾವ್,ಬೆಂಗಳೂರು

ರಾಮಾಯಣದ ಸೀತಾ ಸ್ವಯಂವರದ ನಾಟಕದ ತಾಲೀಮು ನಡೆಯುತ್ತಿತ್ತು.
ಅದರಲ್ಲಿ ಬರುವ ಅಹಲ್ಯಾ ಶಾಪ ವಿಮೋಚನೆಯ ಪ್ರಸಂಗವನ್ನೂ  ವೇದಿಕೆಯಮೇಲೆ ತರೋಣ

“ಗೀತಾ ಅಹಲ್ಯಾ ಪಾತ್ರ ನೀನೇ ಮಾಡಬೇಕು .” ಮೇಡಂ ನನ್ನನ್ನು ಈ ಪಾತ್ರಕ್ಕೆ ಕರೆದಾಗ ನಾನು ಕಕ್ಕಾಬಿಕ್ಕಿ, ಜೊತೆಗೆ ಒಮ್ಮೆಗೆ,ಮಾಡಬಾರದೆನಿಸಿತು.
“ಮೇಡಂ ನಾ………….ನು …………ಈ ಪಾರ್ಟ್ ಮಾಡಲ್ಲ. ………” ಹಿಂಜರಿಕೆಯಿಂದಲೇ ನುಡಿದೆ.

“ಯಾಕೆ ಗೀತಾ “? ನನ್ನತ್ತಲೇ ತೀಕ್ಷ್ಣವಾಗಿ ನೋಡುತ್ತಾ

“ಮೇಡಂ iam not happy with Ahalya’s charactor. ತುಂಬಾ ಸಲ ಅನ್ಕೂಂಡಿದ್ದೀನಿ ಯಾಕೆ ಈ ಪಂಚ ಮಹಾ ಕನ್ನಿಕೆಯರ ಹೆಸರಲ್ಲಿ  ಅಹಲ್ಯಾ ಹೆಸರು ಸೇರಿದೆ ಅಂತ?”
“ಯಾಕಮ್ಮಾ”? ಮತ್ತೆ ಪ್ರಶ್ನೆ ಎಸೆದರು.
” ಹಾಗಲ್ಲ ಮೇಡಂ ಗಂಡ ಇರದಿದ್ದಾಗ  ಮತ್ತೊಬ್ಬನ ಜೊತೆ ಸಂಬಂಧ ಹೊಂದಿದವಳು. ಅಸಲಿಗೆ ಆ ಕಥೆಯೇ ಬೇಕಿರಲಿಲ್ಲ .ರಾಮನ ಔನ್ನತೆಯನ್ನ ಎತ್ತಿ ತೋರೋದಿಕ್ಕೆ ಈ ಕತೆ ಸೇರಿಸಿದ್ದಾರೆ ಅಷ್ಟೇ.

“ಸರಿ.ಆಯ್ತು,ನಿನಗೆ ಯಾವ ಪಾತ್ರ ಬೇಕೋ ಅದನ್ನೇ ಚೂಸ್ ಮಾಡು.ಆದರೂ ಪಾತ್ರಕ್ಕಿಂತ ಪಾತ್ರಧಾರಿಯ ಆ ಪಾತ್ರದಲ್ಲಿ ಹೇಗೆ ಇನ್‌ವಾಲ್ವ್ ಆಗ್ತಾನೆ ಅನ್ನೋದು ಮುಖ್ಯ. ಮತ್ತೆ ಪುರಾಣದಲ್ಲಿ ಕೇಳಿದ ಕಥೆಯನ್ನ ಆ ನೆಲೆಯಲ್ಲಿಯೇ ನೋಡುವುದಕ್ಕಿಂತ ಒಂದು ವಿಭಿನ್ನ ನೆಲೆಯಲ್ಲಿ ನೋಡಿದರೆ ಪಾತ್ರ ಇಂಟರೆಸ್ಟಿಂಗ್ ಆಗಿರುತ್ತೆ. ಅಹಲ್ಯಾ ಜೀವನದಲ್ಲಿ ನಿಜಕ್ಕೂ ಏನು ನಡೆದಿರಬಹುದು ಅನ್ನೋದನ್ನ ಯೋಚಿಸಿದರೆ ಆ ಪಾತ್ರ ನಿಜಕ್ಕೂ ತುಂಬಾ ಕಾಂಪ್ಲಿಕೇಟೆಡ್ ಅನ್ಸುತ್ತೆ. “ಮೇಡ್ಂ ಒಂದೇ ಸಲಕ್ಕೆ ಒಪ್ಪಿ, ಜೊತೆಗೇ ನನ್ನ ಮನಸಲ್ಲಿ ಅಲೆಯನ್ನು ಎಬ್ಬಿಸಿದರು.
ಮತ್ತಷ್ಟು ಓದು »

10
ಮೇ

ಗಂಡಿನ ದೇಹದ ಹೆಣ್ಣಿನ ಅಂತರಂಗ

ಇಂಚರ

ನಾನ್ಯಾರು? ಇಂದಿಗೂ ನನಗೆ ಇದೊಂದು ಬಗೆಹರಿಯದ ಸಂಗತಿ.  ಸೇಲಮ್ ಬಳಿಯ ನಮಕಲ್ಲ್ ತಾಲೂಕಿನ ಪುಟ್ಟದೊಂದು ಹಳ್ಳಿಯಲ್ಲಿ ಹುಟ್ಟಿದ ನನಗೆ ಅಪ್ಪ ಅಮ್ಮ ಇಟ್ಟ ಹೆಸರು ದೊರೈಸ್ವಾಮಿ.  ಆದರೆ ನನಗೆಂದಿಗೂ ಈ ನನ್ನ ಹೆಸರು ಆಪ್ತವೆನಿಸಲೇ ಇಲ್ಲ! ನನಗೆ ಇಬ್ಬರು ಅಣ್ಣಂದಿರು, ಒಬ್ಬಳು ಅಕ್ಕ.  ನಾನೇ ಎಲ್ಲರಿಗಿಂತ ಕೊನೆಯವನಾದ ಕಾರಣ ಎಲ್ಲರ ಪ್ರೀತಿ, ಆದರ ನನಗೊಂದಿಷ್ಟು ಹೆಚ್ಚೇ ಸಿಗುತ್ತಿತ್ತು.  ನಮ್ಮದೊಂದು ಹಳೆಯ ಎರಡಂತಸ್ತಿನ ಮನೆಯಲ್ಲಿ ನಮ್ಮ ವಾಸ.  ನಮ್ಮಪ್ಪನ ಬಳಿ ಎರಡು ಲಾರಿಗಳು ಹಾಗೂ ೫ ಎಕರೆ ಒಣಭೂಮಿ ಇತ್ತು.  ಅಪ್ಪ ಲಾರಿ ಡ್ರೈವರ್, ದೊಡ್ಡಣ್ಣ ಅವರ ಬಳಿ ಕ್ಲೀನರ್ ಆಗಿ ಸಂಸಾರ ನಡೆಸಲು ಸಹಾಯ ಮಾಡುತ್ತಿದ್ದ. ಅಪ್ಪ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಹಾಲನ್ನು ಸಂಗ್ರಹಿಸಿ, ಹತ್ತಿರದ ಹಾಲಿನ ಕಾರ್ಖಾನೆಗೆ ಸರಬರಾಜು ಮಾಡುತ್ತಿದ್ದ.  ಇದಕ್ಕಾಗಿ ಈತ ಮುಂಜಾನೆ ಐದಕ್ಕೆ ಹೊರಟರೆ ಮನೆಗೆ ರಾತ್ರಿ ಹತ್ತು ಗಂಟೆಯ ತನಕವೂ ಎಡೆಬಿಡದಂತೆ ದುಡಿಯುತ್ತಿದ್ದ.  ಅಣ್ಣಂದಿರು ಕೂಡ ಈತನಿಗೆ ಸಹಾಯ ಮಾಡುತ್ತಿದ್ದರು.  ಅವರು ಬರುವ ಹೊತ್ತಿಗೆ ನಾನು ಹಾಗೂ ನನ್ನಕ್ಕ ಇಬ್ಬರೂ ಆಗಲೇ ನಿದ್ರಾವಸ್ಥೆಯಲ್ಲಿರುತ್ತಿದ್ದೆವು.  ಅಪ್ಪ ಬಂದೊಡನೆಯೇ ಊಟ ಮುಗಿಸಿ, ನನಗೊಂದಿಷ್ಟು ಮೊಸರನ್ನ ಕಲಿಸಿ, ನನ್ನನ್ನು ಅಕ್ಕರೆಯಿಂದ ಎಬ್ಬಿಸಿ ಉಣಿಸುತ್ತಿದ್ದ.
ಮತ್ತಷ್ಟು ಓದು »
26
ಏಪ್ರಿಲ್

ಕ್ರಾಂತಿಗೆ ಅಕ್ಷರದ ಹಂಗೇಕೆ?

– ಚಿತ್ರ ಸಂತೋಷ್

ಮಧ್ಯಪ್ರದೇಶದ ತಲನ್‌ಪುರ ಗ್ರಾಮದಲ್ಲಿ ಓದು ಬರಹ ತಿಳಿಯದ ಬುಡಕಟ್ಟು ಮಹಿಳೆಯರೇ ಸಾಮಾಜಿಕ ಕ್ರಾಂತಿಗೆ ಮುನ್ನುಡಿಯಾಗಿದ್ದಾರೆ. ನಿತ್ಯ ಕುಡಿದು, ಸಂಸಾರದ ಒಂದಿಷ್ಟು ಚಿಂತೆಯಿಲ್ಲದ ಪುರುಷರಿಗೆ ಬುದ್ಧಿ ಕಲಿಸಬೇಕೆಂಬ ಉದ್ದೇಶದಿಂದ ಇಡೀ ಹಳ್ಳಿಯ ಮಹಿಳೆಯರು ಒಂದಾಗಿ ಸಾರಾಯಿ ನಿಷೇಧ ಮಾಡಿದ್ದಾರೆ.

ಆ ಹಳ್ಳಿಯೇ ಹಾಗೆಯೇ. ಬುಡಕಟ್ಟು  ಬದುಕುಗಳ ಸಂಗಮ. ನೂರಕ್ಕೂ ಹೆಚ್ಚು ಬುಡಕಟ್ಟು ಕುಟುಂಬಗಳನ್ನು ಹೊಂದಿರುವ ಆ  ಹಳ್ಳಿಯಲ್ಲಿ ಹೊತ್ತಿನ ಊಟಕ್ಕೂ ಕಷ್ಟ. ಪತಿ-ಪತ್ನಿಯರು ಎಲ್ಲಾರೂ ಕೂಲಿಗಾಗಿ ಅರಸುವವರು. ವಿದ್ಯೆ, ಶಿಕ್ಷಣ ಎಂಬುವುದು ಅವರ ಪಾಲಿಗೆ ಮರೀಚಿಕೆ. ಸಾಂಪ್ರದಾಯಿಕ ಬದುಕಿನ ಚೌಕಟ್ಟಿನಲ್ಲಿಯೇ ಇಂದಿಗೂ ಬದುಕು ಸವೆಸುವ ಅಲ್ಲಿನ ಕುಟುಂಬಗಳಲ್ಲಿ  ಆಧುನಿಕತೆಯ ಥಳುಕಿಲ್ಲ. ಸಿನಿಮಾ, ಫ್ಯಾಷನ್ ಯಾವುದೂ  ಗೊತ್ತಿಲ್ಲ. ದುಡಿಯುವುದು, ದಿನದ ಮೂರು ಹೊತ್ತಿನ ಅನ್ನ ತುಂಬಿಸಿಕೊಳ್ಳುವುದಷ್ಟೇ ಅವರಿಗೆ ಗೊತ್ತು.

ಅದು ಮಧ್ಯಪ್ರದೇಶದ ತಲನ್‌ಪುರ್ ಎಂಬ ಹಳ್ಳಿ
. ಇಲ್ಲಿನ  ಜನಸಂಖ್ಯೆ ಸುಮಾರು ೩೦೦೦. ಇಂದೋರ್‌ನಿಂದ ಇಲ್ಲಿಗೆ ಸುಮಾರು ೧೮೦ ಕಿ.ಮೀ. ದೂರವಿದೆ.

ಮತ್ತಷ್ಟು ಓದು »