ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮಾಧ್ಯಮ’

4
ಏಪ್ರಿಲ್

ಸೇನೆ-ಸರ್ಕಾರದ ನಡುವೆ ಬಡವಾಗದಿರಲಿ ನನ್ನ ಭಾರತ

– ರಾಕೇಶ್ ಶೆಟ್ಟಿ

ಆವತ್ತು ಸಂಸತ್ತಿನಲ್ಲಿ ಭಾಷಣಕ್ಕೆ ನಿಂತ ನೆಹರೂ ದೇಶದ ಒಂದಿಂಚು ನೆಲವನ್ನು ಚೀನಿಗಳೀಗೆ ಬಿಟ್ಟುಕೊಡುವುದಿಲ್ಲ.ಎಂತಾ ಯುದ್ಧಕ್ಕಾದರೂ ಸೈನ್ಯ ತಯಾರಿದೆ ಅನ್ನುತ್ತಲೇ  ತಮ್ಮ ಕೋಟಿನಿಂದ ತೆಗೆದ ಕೆಂಪು ಗುಲಾಬಿಯನ್ನ ಜನರ ಕಿವಿಗಿಟ್ಟರು.ಅವರ ಭಾಷಣದ ನಂತರದ ಇತಿಹಾಸ ನಿಮಗೆ ಗೊತ್ತಿರಲೇಬಹುದು.ಆ ಕಹಿ ನೆನಪಿಗೆ ೫೦ ವರ್ಷ ಆಗೋ ಸಮಯದಲ್ಲಿ ಮತ್ತೊಮ್ಮೆ ಕಳೆದವಾರ ಸಂಸತ್ತಿನಲ್ಲಿ ರಕ್ಷಣಾ ಸಚಿವ ಆಂಟನಿಯವರೂ ಸಹ ಭಾರತದ ಸೈನ್ಯ ಬಲಿಷ್ಟವಾಗಿದೆ,ಯುದ್ಧ ಸನ್ನದ್ಧವಾಗಿದೆ ಅಂದಿದ್ದಾರೆ.ನೆಹರೂ ಅವರಿಗೂ-ಅವ್ರ ಕಾಲಕ್ಕೂ ತುಲನೆ ಮಾಡಿದರೆ ಆಂಟನಿ ಅವರನ್ನ ಸ್ವಲ್ಪ ನಂಬಬಹುದು ಅನ್ನಿಸುತ್ತದೇ.ಆದರೆ…

ಕಳೆದ ವಾರ ನಡೆದ ವಿದ್ಯಾಮಾನಗಳಿವೆಯಲ್ಲ ಅವೆಲ್ಲ ಗಾಬರಿ ಹುಟ್ಟಿಸುವಂತವು.ಇದಕ್ಕೆ ಮುನ್ನುಡಿ ಬರೆದಿದ್ದು ಜನರಲ್.ವಿ.ಕೆ ಸಿಂಗ್…! ಜನ್ಮ ದಿನಾಂಕದ ರಗಳೆಯ ನಂತರ ಸ್ವಲ್ಪ ದಿನ ಸುಮ್ಮನಾಗಿದ್ದವ್ರು, ಟಿವಿ ಚಾನೆಲ್ನೊಂದಿಗೆ ಮಾತನಾಡುತ್ತ ತಮಗೆ ೧೪ ಕೋಟಿ ಲಂಚ ನೀಡಲು ಬಂದ ಪ್ರಸಂಗದ ಬಗ್ಗೆ ಬಾಯಿಬಿಡುವ ಮೂಲಕ.ಮತ್ತೆ ಆ ವಿಷಯವನ್ನ ನಾನು ರಕ್ಷಣಾ ಮಂತ್ರಿ ಆಂಟನಿ ಅವರಿಗೂ ಹೇಳಿದ್ದೆ ಅನ್ನುವುದು ಬೆಂಕಿಗೆ ತುಪ್ಪ ಸುರಿದಂತಾಗಿ ಹೋಯಿತು.ಸಂಸತ್ತಿನಲ್ಲಿ ಆಂಟನಿ ’ಅವರು ಮೌಕಿಕವಾಗಿ ಹೇಳಿದ್ದರು ನಾನು ಏನು ತಾನೇ ಮಾಡಲಿ” ಅಂತೆಲ್ಲ ಗೋಳಾಡುವಾಗಲೇ, ಜನರಲ್ ಪ್ರಧಾನಿ ಅವ್ರಿಗೆ ಬರೆದ ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಅತ್ಯಂತ ರಹಸ್ಯವಾಗಿರಬೇಕಿದ್ದ ಪತ್ರ ಸೋರಿಕೆಯಾಗಿದ್ದು.!

ಮತ್ತಷ್ಟು ಓದು »

28
ಜನ

ಮಾಧ್ಯಮಗಳೇಕೆ ಹೀಗೆ ?

-ರೂಪ ರಾವ್
ನಟನೆಗೆ ಚೌಕಟ್ಟು ಇದೆಯೇ……..?
ಇಂತಾಹದೊಂದು ಪ್ರಶ್ನೆ ಕಾಡಿದ್ದು ನೆನ್ನೆ ವಿಜಯ ಕರ್ನಾಟಕದಲ್ಲಿ ಶರಣು ಹುಲ್ಲೂರುರವರ ಸುಮ್ನೇನಾ ಸುಮನ್ ಅನ್ನುವ ಲೇಖನ ಓದಿ.
ಸುಮನ್ ಹಾಗಿದ್ದರು, ಹೀಗಾದರು, ವಿವಾಹ ವಿಚ್ಗೇದನಕ್ಕೆ ಒಳಗಾದರು. “ಇಂತಹ” ಪಾತ್ರಕ್ಕೆ ಬ್ರಾಂಡ್ ಆದರು. ಬರೀ ಇಂತಹದೇ ಪದಗಳು.
ಸುಮನ್ ಅನ್ನು ಒಬ್ಬ ನಟಿಯಾಗಿ ನೋಡದೇ ಒಬ್ಬ  ಹೆಣ್ಣಾಗಿ  ನೋಡಿದಾಗ ಈ ರೀತಿಯ ಯೋಚನೆಗಳು ಬರುತ್ತವೆ.
ಅಷ್ಟಕ್ಕೂ ಪಾತ್ರ ಯಾವುದಾದರೇನು ಅದಕ್ಕೆ ನ್ಯಾಯ ಒದಗಿಸಬೇಕಾದ್ದು ನಟಿಯ ಧರ್ಮ, ಅವರು ಇಂತಹದ್ದೇ ಪಾತ್ರ ಮಾಡಬೇಕೆಂದು ನಿರ್ಧೇಶಿಸುವುದು ನಟಿಯ ಸ್ವಾತಂತ್ರಹರಣ ಎನ್ನುವುದು ನನ್ನ ಅಭಿಪ್ರಾಯ.
ಇಂತಹದೇ ಎನ್ನಲು ಅವರು ಮಾಡಿರುವ ಪಾತ್ರವಾದರೂ ಎಂತಹದ್ದು……
ಅವರ ಲುಕ್, ಅವರ ಗ್ಲಾಮರ್ ಅವರನ್ನು ಇಂತಹ ಪಾತ್ರಕ್ಕೆ ಒಗ್ಗಿಸಿದಲ್ಲಿ ಅದು ಅವರ ಹೆಚ್ಚುಗಾರಿಕೆ, ಅದರಿಂದ ನೋಡುಗರಿಗೆ  ತೊಂದರೆ ಏನು?
ಚಮೇಲಿಯಲ್ಲಿ ಕರೀನಾ , ಡರ್ಟಿ ಪಿಕ್ಚರ‍್ನಲ್ಲಿ  ವಿದ್ಯಾ ಬಾಲನ್,  ಅಷ್ಟೇ ಏಕೆ? ನಮ್ಮ ಚತುರ್ಭಾಷಾ ನಟಿ ಚತುರೆ ಲಕ್ಷ್ಮಿ ಮೇಡಮ್ ಹೂವು ಹಣ್ಮಿನಲ್ಲಿ ನಟಿಸಿದ ಪಾತ್ರಗಳಿಂದ ಅವರ ಅಭಿನಯಕ್ಕಾಗಿ ಹೊಗಳಿಸಿಕೊಂಡಿದ್ದಾರೆಯೇ ಹೊರತು ಇಂತಹ ಪಾತ್ರ ಬೇಕಿತ್ತೇ ಎಂದನಿಸಿಕೊಂಡಿಲ್ಲ. ಪತ್ರಿಕಾ ಮಾಧ್ಯಮದಲ್ಲಿ ತಮಗೆ ಸರಿ ಎನಿಸದ ನಟಿಯರ ಬಗ್ಗೆ ಈ ರೀತಿಯ ಕಾಮೆಂಟ್ಸ್ ಸಹಜವಾಗಿದೆ. ಒಮ್ಮೆಪ್ರಿಯಾ ಮಣಿಯ ಬಗ್ಗೆ ಬರೆಯುತ್ತಾ ರಾವಣ್ ಚಿತ್ರದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಂತಹ ಪಾತ್ರಗಳನ್ನು ಮಾಡಿ ಎಂಬ ತೆಗಳಿಗೆ ಮಾಡಿದ್ದರು. ಹಾಗೆ ಸೌಂದರ್ಯರವರು  ಯಾವುದೋ ವೇಳೆಯಲ್ಲಿ ಮಾಧ್ಯಮದವರ ಕೈಗೆ ಸಿಗಲಿಲ್ಲ  ಎಂಬ  ಕಾರಣಕ್ಕೆ ಅವರನ್ನು ಅತೀ ಪುರಾತನ ನಟಿ ಎಂಬ “ನಾಮಕರಣ” ಮಾಡಿದ್ದರು.
ಮತ್ತೊಮ್ಮೆ ಪವಿತ್ರ ಲೋಕೇಶ್‌ರವರು ಯಾವುದೋ ಚಿತ್ರದ ಪಾತ್ರವೊಂದಕ್ಕೆ ಒಪ್ಪಲಿಲ್ಲ ಎಂದು ಅವರು ಇಂತಹ ಚಿತ್ರದಲ್ಲಿ “ಅಂತಹ” ಪಾತ್ರ ಮಾಡಿದ್ದರು . ಇಲ್ಲಿ ಏಕೆ ಮಡಿವಂತಿಕೆ ಎಂಬ ಕಾಮೆಂಟ್. ಇಂತಹದೇ ಕಾಮೆಂಟ್ಸ್ ಗಳು ಅತಿಯಾಗಿ ನಟಿಯರ ಮೇಲೆ ಪತ್ರಿಕೆಗಳಲ್ಲಿ ಹಾಕಲ್ಪಟ್ಟಿವೆ, ಹಾಕಲಾಗುತ್ತಿವೆ. ಮತ್ತಷ್ಟು ಓದು »
7
ನವೆಂ

ಹೈಟೆಕ್ ಬಹಿಷ್ಕಾರ…!

– ರಾಕೇಶ್ ಶೆಟ್ಟಿ

‘ಬೇರೆ ಬೇರೆ ವಿಷಯಗಳಲ್ಲಿ ಒಟ್ಟಿಗೆ ಸೇರಿ ಕೆಲಸ ಮಾಡಿದ ಗೆಳೆಯರು ಈಗ ಜನಲೋಕಪಾಲ ವಿಷಯವಾಗಿ ತಾತ್ವಿಕ ಭಿನ್ನಭಿಪ್ರಾಯಗಳನ್ನು ಇಟ್ಟುಕೊಂಡು ವಿರುದ್ಧವಾಗಿ ಮಾತನಾಡುತ್ತಿರುವುದು ಬೇಸರತರಿಸಿದೆ ‘ ಅಂತ ಆ ಗೆಳೆಯ ಕಳೆದ ಆಗಸ್ಟಿನಲ್ಲಿ ಫೆಸ್ಬುಕ್ಕಿನಲ್ಲಿ ಬರೆದುಕೊಂಡಿದ್ದರು.ಅದಕ್ಕೆ ನಾನು ‘ಸಾಮಾಜಿಕ ಕಳಕಳಿಯಿರುವ ಎಲ್ಲ ಮನಸ್ಸುಗಳು ಅಂತಿಮವಾಗಿ ಬಯಸುವುದು ಒಳ್ಳೆಯ ಸಮಾಜವನ್ನಷ್ಟೇ,ತಾತ್ವಿಕ ಭಿನ್ನಭಿಪ್ರಾಯ್ಗಳನ್ನ ವೈಯುಕ್ತಿಕವಾಗಿ ನೋಡಬೇಡಿ’ ಅನ್ನುವಂತೆ ಬರೆದಿದ್ದೆ.ಅವರೂ ಅದನ್ನ ಇಷ್ಟ ಪಟ್ಟಿದ್ದರು.

ಅದಾಗಿ ಬಹುಷಃ ೩-೪ ದಿನಗಳು ನಾನು ಊರಿನಲ್ಲಿ ಇರಲಿಲ್ಲ,ವಾಪಸ್ಸು ಬಂದವನು ಫೇಸ್ಬುಕ್ ತೆಗೆದಾಗ ಗೊತ್ತಾಗಿದ್ದು , ತಾತ್ವಿಕ ಭಿನ್ನಾಭಿಪ್ರಾಯಗಳನ್ನ ವೈಯುಕ್ತಿಕ ಮಟ್ಟಕ್ಕೆ ಆ ಗೆಳೆಯ ಮಾತ್ರವಲ್ಲದೆ ಅವನ ‘ಬಳಗ’ವೂ ತೆಗೆದುಕೊಂಡು ನನಗೆ ಅವರ ಗೂಗಲ್ ಗುಂಪಿನಿಂದ,ಫೆಸ್ಬುಕ್ಕ್ ಗೆಳೆತನದಿಂದ ‘ಹೈಟೆಕ್ -ಬಹಿಷ್ಕಾರ’ ಹಾಕಿದೆ ಅಂತ…! ಈ ಹೈಟೆಕ್ ಬಹಿಷ್ಕಾರ ಹಾಕಿಸಿಕೊಳ್ಳುವಂತೆ ನಡೆದಿದ್ದಾರೂ ಏನು ಅಂತ ನೋಡ ಹೊರಟರೆ….

ಅಣ್ಣಾ ಹಜ಼ಾರೆ ಜನಲೋಕಪಾಲ ಮಸೂದೆಗಾಗಿ ಜಂತರ್ ಮಂಥರ್ನಲ್ಲಿ ಉಪವಾಸ ಕುಳಿತ ದಿನಗಳಿವೆಯಲ್ಲ ಅವು ಈ ದೇಶದಲ್ಲಿ ಇನ್ನೇನು ಬದಲಾವಣೆ ಸಾಧ್ಯವೇ ಇಲ್ಲ ಅನ್ನುವಂತಿದ್ದ ಜನರ ಮನಸ್ಸಿಗೆ ಆಶಾಭಾವನೆ ಮೂಡಿಸಿದ ದಿನಗಳು.ಆಗ ’ಈ ಹೋರಾಟ ಗೆಲ್ಲಲೇ ಬೇಕು’ ಅಂದವರು ಅದ್ಯಾಕೋ ಮತ್ತೆ ಅಣ್ಣಾ ’ರಾಮ ಲೀಲಾ ಮೈದಾನ’ಕ್ಕೆ ಬಂದು ನಿಂತಾಗ ’ಪ್ರಜಾಪ್ರಭುತ್ವದ ಬುಡಕ್ಕೆ ಬೆಂಕಿ ತಗುಲಿದೆ’ ಅನ್ನಲಾರಂಭಿಸಿದರು.ಆಗಲೇ ಅಣ್ಣಾ ಹೋರಾಟವನ್ನು ಬೆಂಬಲಿಸುತಿದ್ದವರು-ವಿರೋಧಿಸುವ ಗೆಳೆಯರ ನಡುವೆ ತಾತ್ವಿಕ ಭಿನ್ನಾಭಿಪ್ರಾಯಗಳ ಚರ್ಚೆ ಫ಼ೇಸ್ಬುಕ್ಕಿನಲ್ಲಿ ಶುರುವಾಗಿದ್ದು.ಈ ಹೋರಾಟ ಸರಿಯಿಲ್ಲ ಅನ್ನಲು ಅವರುಗಳು ಏನೇನು ಅಂಶ ಮುಂದಿಡುತಿದ್ದರೋ, ಹೋರಾಟ ಹೇಗೆ ಸರಿ ಅಂತ ನಾವುಗಳು ನಮ್ಮ ವಾದ ಮುಂದಿಟ್ಟಿದ್ದೆವು. ಮತ್ತಷ್ಟು ಓದು »

24
ಆಕ್ಟೋ

ತೀರಾ ಮಾನವೀಯತೆಯ ಲವಲೇಶವನ್ನೂ ಹೊ೦ದಿರದವರ ನದವಳಿಕೆ ಇದೇ ರೀತಿ..!!

– ಕೆ.ಎಸ್ ರಾಘವೇಂದ್ರ ನಾವಡ

“ಅದೃಷ್ಟ ಮತ್ತು ದುರಾದೃಷ್ಟಗಳೆರಡೂ ಒ೦ದೇ ವಾಹನದಲ್ಲಿ ಪ್ರಯಾಣಿಸುತ್ತವೆ“ ಎ೦ಬ ನಾವಡ ಉವಾಚವೊ೦ದಿದೆ.. ಇ೦ದು ಅದನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾದ ಪ್ರಮೇಯವೂ ಬ೦ದಿದೆ! ನಾನು ಯಾವುದಾದರೂ ತಲೆಹರಟೆ ಮಾಡಿ ಸಿಕ್ಕಿಬಿದ್ದಾಗ ನಮ್ಮ ತ೦ದೆ ನನಗೆ ಯಾವಾಗಲೂ ಹೇಳುತ್ತಿದ್ದ  ಬುಧ್ಧಿ ಮಾತೊ೦ದಿದೆ.. “ ಸ್ವಯ೦ಕೃತಾಪರಾಧಕ್ಕೆ ಮನ್ನಣೆಯಿಲ್ಲ ಕಣಯ್ಯ..“  ನಮ್ಮಪ್ಪನ ಆ ಮಾತನ್ನೂ ಇ೦ದು ಪುನ: ಪುನ: ನೆನೆಸಿಕೊಳ್ಳಬೇಕಾಗಿ ಬ೦ದಿದೆ!! ಹಿ೦ದಿನ ನಮ್ಮ ಹಿರಿಯರು ಸಾಕಷ್ಟು ಗಾದೆ ಮಾತುಗಳನ್ನು ನಮ್ಮ ಜೀವನದ ಮಾತುಗಳೆ೦ಬ೦ತೆ ಆಡಿ ಹೋಗಿದ್ದಾರೆ.. ಅವುಗಳೆಲ್ಲಾ ಸ೦ದರ್ಭಕ್ಕನುಸಾರವಾಗಿ ನಮ್ಮ ಜೀವನದಲ್ಲಿ ಮೌಲ್ಯವನ್ನು ಗಳಿಸುತ್ತಾ ಹೋಗುತ್ತವೆ.. ನಮಗೆ ಅಚ್ಚರಿಯನ್ನು ಮೂಡಿಸುತ್ತವೆ!! “ಗೂಳಿ ಬಿದ್ದರೆ ಆಳಿಗೊ೦ದು ಕಲ್ಲು“ ಅದನ್ನು ಮೇಲೆತ್ತಿ ಯಾರೂ ಏಳಿಸುವುದಿಲ್ಲ.. ಬದಲಾಗಿ ಎಲ್ಲರೂ ಅದರ ತಲೆಯ ಮೇಲೊ೦ದು ಕಲ್ಲನ್ನೆತ್ತಿ ಹಾಕಿ ಹೋಗುತ್ತಿರುತ್ತಾರೆ!! ಆ ಗಾದೆಯು ಇ೦ದಿನ ಕರ್ನಾಟಕ ರಾಜಕೀಯದಲ್ಲಿ ನಿಜವಾಗಿರುವಾಗ ಅದನ್ನೂ ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾಗಿ ಬ೦ದಿದೆ..

ಅದು ೧೯೮೩ ರ ಚುನಾವಣೆಯ ಕಾಲ.. ಕರ್ನಾಟಕ ರಾಜಕೀಯದಲ್ಲಿ ಭಾ.ಜ.ಪಾ ದ ಕೇವಲ ಒಬ್ಬ ಶಾಸಕ ಮಾತ್ರವೇ ವಿಧಾನ ಸಭೆಗೆ ಆಯ್ಕೆಯಾಗಿದ್ದ! ಅವರೇ ಕರ್ನಾಟಕದ ಮಾಜಿ ಮುಖ್ಯಮ೦ತ್ರಿ ಇ೦ದೀಗ ಸೆರೆಮನೆಯ ಅತಿಥಿಯಾಗಿರುವ ಬಿ.ಎಸ್.ಯಡಿಯೂರಪ್ಪ! ಕೇವಲ ಒಬ್ಬ ಶಾಸಕನಿ೦ದ ಆರ೦ಭವಾದ ಕರ್ನಾಟಕ ಭಾ.ಜ.ಪಾದ ಅಧಿಕಾರದತ್ತ ಯಾತ್ರೆ ೨೦೦೮ರ ವಿಧಾನಸಭೆಯ ಚುನಾವಣೆಯಲ್ಲಿ ನನಸಾಗಿ, ೧೧೦ ಜನ ಶಾಸಕರು ವಿಧಾನಸಭೆಗೆ ಆಯ್ಕೆಯಾಗುವಲ್ಲಿ ಯಡಿಯೂರಪ್ಪ ಹಾಗೂ ಬಿ.ಬಿ. ಶಿವಪ್ಪರ ಪರಿಶ್ರಮವನ್ನು ಮರೆಯುವ೦ತಿಲ್ಲ.. ನಿಜ.. ಇ೦ದು ಯಡಿಯೂರಪ್ಪ ರಾಜ್ಯ ಭಾ,ಜ,ಪಾ ದ ಹೆಸರನ್ನು ರಾಷ್ಟ್ರೀಯ ಮಟ್ಟದಲ್ಲಿಯೇ ಕೆಡಿಸಿದ್ದಾರೆ. ರಾಜ್ಯ ಭಾ.ಜ.ಪಾ. ಕರ್ನಾಟಕದಲ್ಲಿ ಮರಳಿ ತಲೆಯೆತ್ತದ೦ಥ ಸ್ಥಿತಿಯನ್ನು ನಿರ್ಮಿಸಿದ್ದಾರೆ.. ಎಲ್ಲವೂ ಸರಿ.. ಆದರೆ ಅವರು ಸೆರೆಮನೆ ಪಾಲಾದ ನ೦ತರ ಕರ್ನಾಟಕ ರಾಜಕೀಯ ದ ವಿರೋಧ ಪಕ್ಷಗಳು ಹಾಗೂ ಪ್ರಜಾಪ್ರಭುತ್ವದ ಆಧಾರಸ್ಥ೦ಭಗಳೆನ್ನಿಸಿರುವ ಮಾಧ್ಯಮಗಳು ನಿಷ್ಪಕ್ಷಪಾತವಾಗಿ ನಡೆದುಕೊ೦ಡಿವೆಯೇ? ಎ೦ಬ ಪ್ರಶ್ನೆ ಮನಸ್ಸಿನಲ್ಲಿ ಏಳುವುದಿಲ್ಲವೇ? ಏಳುತ್ತದೆ! ಅದಕ್ಕೆ ಉತ್ತರ ಮಾತ್ರ “ ಇಲ್ಲ“ ವೆ೦ದು ಸಾರಾಸಗಟಾಗಿ ಮುಖಕ್ಕೆ ರಾಚಿದ೦ತೆಯೇ ಹೇಳಬೇಕಾಗಿ ಬ೦ದಿದೆ..

ಮತ್ತಷ್ಟು ಓದು »

9
ಸೆಪ್ಟೆಂ

ಯಾರು ಅಪಾಯಕಾರಿ!?

– ಸಚಿನ್

ನಮ್ಮ ನಿಮ್ಮ ಮಧ್ಯೆಯಿರುವ ಕೆಲ ಎಡಬಿಡಂಗಿ ಗಳು ನಿನ್ನೆ ದೆಹಲಿ ಹೈಕೋರ್ಟ್ ನಲ್ಲಿ ನಡೆದ ಬಾಂಬ್ ಸ್ಪೋಟದ ಕುರಿತು ಒಂದು ಹೇಳಿಕೆ ಕೊಟ್ಟರು. ” ಬಿಜೆಪಿಗೆ ಅವಮಾನ ಆಗುವ ಸಂಧರ್ಭ ಗಳಲ್ಲಿ ಬಾಂಬ್ ಸ್ಪೋಟ ನಡೆಯುತ್ತಿದೆ ಹಾಗಾಗಿ ರೆಡ್ಡಿಯ ಬಂಧನದ ಸಂಧರ್ಭ ದಲ್ಲಿ ಈ ಸ್ಪೋಟ ನಡೆದಿರುವುದು ಹಲವಾರು ಉಹಾಪೋಹಗಳಿಗೆ ಎಡೆ ಮಾಡಿಕೊಡುತ್ತಿದೆ. ಕರ್ನಲ್ ಪುರೋಹಿತ್ ಮತ್ತು ಸಾಧ್ವಿ ಪ್ರಜ್ಯಾ ಸಿಂಗ್ ನಡೆಸಿದ ಬಾಂಬ್ ಸ್ಪೋಟಗಳೇ ಇದಕ್ಕೆ ಸಾಕ್ಷಿ. ಅಣ್ಣಾ ಹಜಾರೆ ಮತ್ತು ರೆಡ್ಡಿ ಬಂಧನದ ಅಬ್ಬರ ಗಳಿಗಿಂತ ಹೆಚ್ಚಿನರೀತಿಯಲ್ಲಿ ಬಿಜೆಪಿ ದೇಶ ಭಕ್ತರು ಕಿರುಚಾಟಗಳನ್ನು ಶುರುಮಾಡ್ತಾರೆ ನೋಡ್ತಾಯಿರಿ” ಎಂದು ಎರಡು ಲೈನ್ ಬರೆದು ತಮ್ಮ ಮನಸ್ಸಿನಲ್ಲಿರುವ ಅಸಹ್ಯವನ್ನು ಹೊರಹಾಕಿದರು.

ಸ್ನೇಹಿತರೇ ನಾವು ಗಮನಿಸ ಬೇಕಾದ ಮುಖ್ಯವಾದ ಅಂಶವೆಂದರೆ ಈಗ ನಡೆಯುತ್ತಿರುವುದು ಭಯೋತ್ಪಾದಕರು ಮತ್ತು ಭಾರತ ದೇಶದ ಮಧ್ಯೆ ಯುದ್ದ, ಈ ಯುದ್ದ ದಲ್ಲಿ  ಭಯೋತ್ಪಾದಕರು ವಿಜಯಿಯಾಗುತಿದ್ದಾರೆ. ಈ ಭಯೋತ್ಪಾದನೆ ಕೃತ್ಯಗಳನ್ನ ಯಾವುದೇ ದೇಶ ಸುಮ್ಮನೆ ಸಹಿಸಿ ಕೊಳ್ಳುವುದಿಲ್ಲ. ಹಾಗು ಕೃತ್ಯ ನಡೆಸಿದವರಿಗೆ ಸರಿಯಾದ ಶಿಕ್ಷೆ ಕೊಡುವ ವ್ಯವಸ್ಥೆ ಬೇರೆ ದೇಶಗಳಲ್ಲಿದೆ. ಒಂದು ಸಣ್ಣ ಪ್ರಮಾದ ದಿಂದ ಬೆಂಗಳೂರಿನ ವೈದ್ಯ ಹನೀಫ್ ಆಸ್ಟ್ರೇಲಿಯಾದಲ್ಲಿ ಹೇಗೆ ನರಳಿದ ಎಂದು ನಮಗೆ ಗೊತ್ತಿಲ್ಲವೆ.

ಪಕ್ಷಗಳನ್ನು ಸಮರ್ಥಿಸಿಕೊಂಡು ಜಗಳವಾಡುವ ಸಮಯ ಇದಲ್ಲ. ಸುಮ್ಮನೆ ವಿತಂಡವಾದ ಮಾಡಿ ಎಲ್ಲದಕ್ಕು ಒಂದೊಂದು ಸಂಭಂದ ಕಲ್ಪಿಸಿ ನಿಮ್ಮ ಹೊಲಸನ್ನು ಕಾರಬೇಡಿ. ನಿಮ್ಮ ಭಂಡತನದ ನಿಲುವುಗಳು ಏನೆಂದು ಅಣ್ಣಾ ಹಜಾರೆ ಹೋರಾಟದ ಸಂಧರ್ಭದಲ್ಲಿ ನಮ್ಮ ಭಾರತದ ಎಲ್ಲ ಸತ್ಪ್ರಜೆಗಳಿಗೆ ಗೊತ್ತಾಗಿವೆ.

 

ಮತ್ತಷ್ಟು ಓದು »

7
ಸೆಪ್ಟೆಂ

ಅಣ್ಣಾ ಹಜಾರೆ – ಶ್ರೀ ಸಾಮಾನ್ಯನ ಮನೆ – ಮನಗಳ ದೀಪ.

– ಹೊಳೆನರಸೀಪುರ ಮಂಜುನಾಥ್

ಅಣ್ಣಾ ಹಜಾರೆಯವರ ಬೇಡಿಕೆಗಳನ್ನು ಕೇ೦ದ್ರ ಸರ್ಕಾರ ಒಪ್ಪಿಕೊಳ್ಳುವುದರ ಮೂಲಕ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ. ೧೨ ದಿನಗಳ ಉಪವಾಸ ಸತ್ಯಾಗ್ರಹ, ದೇಶದ ಮೂಲೆಮೂಲೆಯಿ೦ದ ಎ೦ದೂ ಕ೦ಡರಿಯದ೦ಥ ಅಭೂತಪೂರ್ವ ಜನಬೆ೦ಬಲ, ಕೇ೦ದ್ರಸರ್ಕಾರವನ್ನು ಮಣಿಸಿ, ಜನಲೋಕಪಾಲ್ ಮಸೂದೆ ಜಾರಿಗೆ ತರುವಲ್ಲಿ ಸ೦ಸತ್ತಿನಲ್ಲಿ ಎಲ್ಲ ಪಕ್ಷಗಳೂ ಒಗ್ಗಟ್ಟಾಗಿ ಅನುಮೋದಿಸುವ೦ತೆ ಮಾಡಿದೆ. ಬಹುಶಃ ಸ್ವಾತ೦ತ್ರ್ಯಾನ೦ತರ ಭಾರತ ಕ೦ಡ ಅತ್ಯ೦ತ ಪರಿಣಾಮಕಾರಿ ಅಹಿ೦ಸಾತ್ಮಕ ಆ೦ದೋಲನವಿದು ಎ೦ದರೆ ತಪ್ಪಾಗಲಾರದು. ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧಿ ಹೋರಾಟಕ್ಕೆ ಸಿಕ್ಕಿರುವ ಜಯ, ಯಾವುದೇ ಒ೦ದು ಪಕ್ಷಕ್ಕೆ, ಸ೦ಘಟನೆಗೆ ಅಥವಾ ವ್ಯಕ್ತಿಗೆ ಸಿಕ್ಕಿರುವ ಜಯವಲ್ಲ. ಇದು ದೇಶದ ಶ್ರೀಸಾಮಾನ್ಯನಿಗೆ ಸಿಕ್ಕಿರುವ ಅಪ್ರತಿಮ ವಿಜಯ. ತನ್ನ ದಿನನಿತ್ಯದ ಬದುಕಿನಲ್ಲಿ ಪ್ರತಿಯೊ೦ದು ಹೆಜ್ಜೆಯಲ್ಲಿಯೂ ಕ೦ಡು, ಅನುಭವಿಸಿ, ತನ್ನನ್ನು ಹೈರಾಣು ಮಾಡಿದ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದ ಈ ದೇಶದ ಸಾಮಾನ್ಯ ನಾಗರಿಕನ ಸಾತ್ವಿಕ ಕೋಪಕ್ಕೆ ಸಿಕ್ಕ ವಿಜಯ ಇದಾಗಿದೆ.
ಮತ್ತಷ್ಟು ಓದು »

19
ಆಗಸ್ಟ್

ಜನಲೋಕಪಾಲ ಅನ್ನುವುದು ಮಾಯದಂಡವೇನಲ್ಲ…!

– ರಾಕೇಶ್ ಶೆಟ್ಟಿ

ಒಂದೆಡೆ ಅಣ್ಣಾರನ್ನ ಬೆಂಬಲಿಸಿ ಜನ ಬೀದಿಗಿಳಿದರೆ, ಇನ್ನೊಂದೆಡೆ ಅಣ್ಣಾ ಹೋರಾಟವನ್ನ ಪ್ರಶ್ನಿಸಿ ಹಲವಾರು ಪ್ರಶ್ನೆಗಳೆದ್ದಿವೆ.

’ಜನಲೋಕಪಾಲ್’ ಬಂದ ತಕ್ಷಣ ಎಲ್ಲ ಭ್ರಷ್ಟರು ಮಾಯವಾಗ್ತಾರೆ ಅಂತ ಖುದ್ದು ಅಣ್ಣಾ ಮತ್ತು ಸಿವಿಲ್ ಸೊಸೈಟಿಯವರ್ಯಾರು ಸಹ ಎಲ್ಲೂ ಹೇಳಿಲ್ಲ.ಹಾಗಾಗ್ಯೂ ಇಂತ ವಾದ ಹುಟ್ಟು ಹಾಕಿದ್ದು ಯಾರು? ಬಹುಷಃ ಕಪಿಲ್ ಸಿಬಲ್ ಇರಬೇಕು ಅದನ್ನೆ ಹಿಡಿದು ಕೆಲವರು ’ಜನಲೋಕಪಾಲ್’ ಬಂದ್ರೆ ಭ್ರಷ್ಟಚಾರ ಮಾಯವಾಗುತ್ತಾ!? ಅಂತ ಕೇಳ್ತಾ ಇದ್ದಾರೆ ಕೆಲವರು. ಅಂತವರಿಗೊಂದು ಪ್ರಶ್ನೆ ಪೋಲಿಸ್ ಇಲಾಖೆ ಅನ್ನುವುದು ಬಂದು ಎಷ್ಟು ವರ್ಷಗಳಾಯ್ತು? ಕಳ್ಳತನ-ಕೊಲೆ-ದರೋಡೆ ನಿಂತಿದೆಯಾ ಸ್ವಾಮಿ!? ಇಲ್ಲ ತಾನೆ..! ಆದರೆ ಜನ್ರಿಗೊಂದು ಹೆದರಿಕೆಯಂತೂ ಇರುತ್ತದೆ ತಪ್ಪು ಮಾಡೋಕೆ ಹಾಗೆ ತಪ್ಪು ಮಾಡಿದವರನ್ನ ಹಿಡಿದು ಜೈಲಿಗೆ ಅವರು ನೂಕುತಿದ್ದಾರಲ್ವಾ? ಹಾಗೆಯೇ ಜನಲೋಕಪಾಲ ಅನ್ನುವುದು ಸಹ.ಅದು ಬಂದ ತಕ್ಷಣ ಎಲ್ಲ ಸರಿ ಹೋಗದು.ಅದು ಸುಧಾರಣೆಯ ಒಂದು ಅಸ್ತ್ರವಷ್ಟೆ.

ಮತ್ತಷ್ಟು ಓದು »

18
ಆಗಸ್ಟ್

ಭ್ರಷ್ಟಾಚಾರ ಎಂದರೆ ಅನುಕೂಲ ಸಿಂಧು

– ಪವನ್ ಪರುಪತ್ತೆದಾರ   

ನನಗೊಬ್ಬ ಸ್ನೇಹಿತ ಇದ್ದಾನೆ ಪ್ರವೀಣ್ ಅಂತ, ನನ್ನ ಜೊತೆ ಓದಿಲ್ಲವಾದರೂ ನನ್ನ ಸಹಪಾಠಿ ಅವನು, ಒಂದೇ ತರಗತಿ ಆದರೆ ಬೇರೆ ಶಾಲೆ. ಅವನ ಕೆಲಸ ತಾಲ್ಲೂಕು ಕಚೇರಿಯಲ್ಲಿ. ಸರ್ಕಾರದಿಂದ ಕೊಟ್ಟ ಕೆಲಸ ಅಲ್ಲ, ಅವನೇ ಹುಡುಕಿ ಕೊಂಡಿರುವ ವೃತ್ತಿ. ನಿಜ ಹೇಳಬೇಕೆಂದರೆ ನಮ್ಮೂರಿನ ತಾಲ್ಲೂಕು ಕಚೇರಿಯೋಳಗಿರುವರಿಗಿಂತ ಇವನು ಹೆಚ್ಚು ಕೆಲಸ ಮಾಡುತ್ತಾನೆ. ಪಹಣಿ, registration, ಖಾತೆ ಬದಲಾವಣೆ, encumberance ಸರ್ಟಿಫಿಕೇಟ್, survey sketch ಕಾಪಿ, ನಿಮಗೇನು ಬೇಕು?? ತಾಲ್ಲೂಕು ಕಚೇರಿಯ ಗೇಟ್ ನ ಪ್ಯೂನ್ ಇಂದ ಹಿಡಿದು ತಹಶೀಲ್ದಾರ್ ತನಕ, ಏನು ಕೆಲಸ ಬೇಕಾದರುಮಾಡಿಕೊಡುತ್ತಾನೆ(ಮಾಡಿಸಿಕೊಡುತ್ತಾನೆ).

ಇತ್ತೀಚಿಗೆ ನನಗೆ ಬಹಳ ಜರೂರಾಗಿ ನಮ್ಮ ಜಮೀನಿನ ಪಹಣಿ ಬೇಕಾಗಿತ್ತು. ನಮ್ಮ ಊರಿನ ಪಹಣಿ ಕೇಂದ್ರ ಬಹಳ ದಿನಗಳಿಂದ ದುರಸ್ಥಿಯಲ್ಲಿತ್ತು. ಆಗಷ್ಟೇ ಕೊಡಲು ಶುರು ಮಾಡಿದ್ದರು. ಅದ್ದರಿಂದ ತಾಲ್ಲೂಕು ಕಚೇರಿ ಬಳಿ ಹೋಗಿ ಸಾಲು ನೋಡಿದೊಡನೆ ಭಯವಾಯ್ತು. ಅದರಲ್ಲೂ ನಮ್ಮ ಸರ್ಕಾರೀ ಕಛೇರಿಯೋಳಗಿನ ಗಣಕ ಯಂತ್ರಗಳು ಯಾವಾಗ ಕೆಡುತ್ತವೋ ಗೊತ್ತಿಲ್ಲ. ಇವತ್ತು ಕೆಟ್ಟರೆ ಇನ್ನು ರಿಪೇರಿ ಆಗುವುದು ಯಾವಾಗಲೋ??? ಅಲ್ಲಿವರೆಗೂ ನನಗೂ ಕಾಯುವ ಅವಕಾಶವಿರಲಿಲ್ಲ. ಮತ್ತಷ್ಟು ಓದು »

18
ಆಗಸ್ಟ್

ಕಲಾವಿದರು ಕಸಿದುಕೊಳ್ಳುತ್ತಿರುವ ಕನ್ನಡ ಗ್ರಾಹಕನ ಸ್ವಾತಂತ್ರ್ಯ.!

– ಮಹೇಶ್ ರುದ್ರಗೌಡರ್

ಜೀ ಟಿವಿಯಲ್ಲಿ ಜಾನ್ಸಿ ರಾಣಿ ಅನ್ನೊ ಹಿಂದಿ ದಾರಾವಾಹಿಯನ್ನು ಕನ್ನಡಕ್ಕೆ ಡಬ್ ಮಾಡಿ ಪ್ರಸಾರ ಮಾಡಿದ್ರು ಅಂತ ನಮ್ಮ ಕಿರುತೆರೆ ಕಲಾವಿದರು ಆ ವಾಹಿನಿಯ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದರು. ಕಲಾವಿದರ ಪ್ರಕಾರ ಇದರಿಂದ ಕಿರುತೆರೆಯನ್ನೇ ನಂಬಿ ಜೀವನ ನಡೆಸುತ್ತಿರುವ ಅನೇಕ ಕುಟುಂಬಗಳು ಬೀದಿಗೆ ಬರುತ್ತವಂತೆ. ಇದರ ಜೊತೆಗೆ ಜೀ ಟಿವಿಯ ಈ ನಡೆ ಕನ್ನಡ ವಿರೋದಿಯಂತೆ. ಇವರ ವಾದವನ್ನು ಮತ್ತು ಕನ್ನಡತನವನ್ನು ಸ್ವಲ್ಪ ಆಳವಾಗಿ ನೋಡಿ ಬರೋಣ ಬನ್ನಿ.

 ಹುರುಳಿಲ್ಲದ ವಾದ.!

ಈ ದಾರಾವಾಹಿ ಈಗಾಗಾಲೇ ತೆಲುಗು, ತಮಿಳು ಬಾಶೆಗೆ ಡಬ್ ಆಗಿ ಅಲ್ಲಿ ಪ್ರಸಾರವಾಗುತ್ತಿದೆ. ಹಾಗಾದರೆ ಆಂದ್ರ ತಮಿಳುನಾಡಿನಲ್ಲಿ ಕಲಾವಿದರೇ ಇಲ್ಲವೇ.? ಅಲ್ಲಿಯೂ ಕಲಾವಿದರಿದ್ದಾರೆ, ಅವರಲ್ಲಿಯೂ ಅನೇಕರಿಗೆ ಕಿರುತೆರೆಯಿಂದಲೇ ಹೊಟ್ಟೆ ತುಂಬುತ್ತದೆ. ಅಲ್ಲಿ ಅವರಿಗೆ ಇಲ್ಲದ ಸಮಸ್ಯೆ ದಿಡೀರನೇ ಕರ್ನಾಟಕಕ್ಕೆ ಬಂದ ಕೂಡಲೇ ಹೇಗೆ ಹುಟ್ಟುತ್ತದೆ. ಇದಕ್ಕೆ ಯಾರು ಕಾರಣ. ಯಾಕೆ ಈ ಮನಸ್ಥಿತಿ.! ಇದೇ ಸಂದರ್ಬದಲ್ಲಿ ಒಬ್ಬ ಕಲಾವಿದರು ಹೇಳಿದ್ರು, ಒಂದು ದಾರಾವಾಹಿ ಕನ್ನಡಕ್ಕೆ ಡಬ್ ಮಾಡಲು ಬಿಟ್ಟರೆ, ಅದರ ಜೊತೆಗೆ ನೂರಾರು ದಾರಾವಾಹಿಗಳು ಬಂದು ನಿಲ್ಲುತ್ತವೆ ಅಂತ.! ಇದು ಯಾವ ಮನಸ್ಥಿತಿಯನ್ನು ತೋರಿಸುತ್ತದೆ. ಸ್ಪರ್ದೆ ಎದುರಿಸುವ ಹಿಂಜರಿಕೆಯನ್ನು ತೋರಿಸುತ್ತದೆ ಅಲ್ಲವೇ.! ಸ್ಪರ್ದೆ ಎಂದ ತಕ್ಷಣ ಬೀದಿಗೆ ಬರುವ ಮಾತು ಇತರ ಬಾಶೆಯ ಕಲಾವಿದರ ಬಾಯಲ್ಲಿ ಬರದೇ ಬರೀ ನಮ್ಮ ಕಲಾವಿದರ ಬಾಯಲ್ಲಿ ಮಾತ್ರ ಏಕೆ ಬರುತ್ತದೆ.? ಒಂದು ಹಿಂದಿ ಬಾಶೆಯಲ್ಲಿರುವ ದಾರಾವಾಹಿಯನ್ನು ಕನ್ನಡ ಚಾನಲ್ಲಿನಲ್ಲಿ ಕನ್ನಡದಲ್ಲಿ ತೋರಿಸಿದರೇ ಅದು ಕನ್ನಡ ವಿರೋದಿ ಎನ್ನುವ ಇವರ ಕನ್ನಡತನಕ್ಕೆ ಏನನ್ನಬೇಕು. ಡಬ್ ಮಾಡದೇನೇ ಹಿಂದಿಯಲ್ಲೇ ತೋರಿಸಿದರೆ ಅದು ಕನ್ನಡಪರವಾಗುವುದೋ.! ಮತ್ತಷ್ಟು ಓದು »

28
ಜುಲೈ

ಯಡ್ಯೂರಪ್ಪಂಗೆ ನೊಬೇಲ್ ಅವಾರ್ಡು…!

– ವಿಜಯ್ ಹೆರಗು

ಎಂದಿನಂತೆ ನಮ್-ವಿಜಯ್ ಹೆರಗುಮ ಕೆಂಚ, ಸೀನ, ಸಿದ್ದ, ನಾಣಿ ಎಲ್ಲಾರೂ ಬಂದು ಅವರ ಮಾಮೂಲಿ ‘ಅಡ್ಡಾ’ ರಾಮಣ್ಣನ ಟೀ ಅಂಗಡಿ ಮುಂದೆ ಕೂತ್ಕೊಂಡು ಹರಟೆ ಹೊಡೀತಾ ಇದ್ರು. ನಮ್ ಸಿದ್ದ ಅಲ್ಲಿ ಇದ್ದ ಅಂದ್ಮೇಲೆ ರಾಜಕೀಯದ ಮಾತು ಬರ್ಲೇಬೇಕು.

ಸಿದ್ದ : ಲೇ ಕೆಂಚ ಇವತ್ತು ಪೇಪರ್ ನೋಡ್ದೆನ್ಲಾ ?

ಕೆಂಚ : ಹೂ ಕನ್ಲಾ ನೋಡ್ದೆ, ಪಾಪ ನಮ್ ಯಡ್ಯೂರಪ್ನೋರಿಗೆ ಶ್ಯಾನೆ ಕಾಟ ಕೊಡ್ತಾವ್ರೆ. ಈ ಸಂತೋಷ್ ಹೆಗ್ಡೆ ಲೋಕಾಯುಕ್ತ ಆದಾಗಿಂದ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಸಂತೋಷಾನೇ ಕಾಣಾಕಿಲ್ಲ………ಸದ್ಯ ಇನ್ನೊಂದು ವಾರಕ್ಕೆ ಆವಯ್ಯ ರಿಟೈರ್ ಆಯ್ತಾರೆ ಇನ್ನಾರಾ ನಮ್ ಸಿಎಮ್ಮು ಸುಖವಾಗಿ ಇರ್ಬೌದು ಅಂದ್ಕೊಂಡ್ರೆ ಅದೇನೋ “ಗಣಿ ಬಾಂಬ್” ಹಾಕ್ಬಿಟ್ರಲ್ಲ ಅವ್ರು.

ಸೀನ : ಅಲ್ಲಲೇ ಕೆಂಚ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಯಾವಾಗ್ಲಾ ಸಂತೋಷ ನೋಡಿದ್ದೇ ನೀನು!? ಆವಯ್ಯ ಯಾವಾಗಲೂ ಮುಖ ಗಂಟ್ ಹಾಕ್ಕಂಡೆ ಇರ್ತಾರೆ…….

ಸಿದ್ದ : ನಿಜ ಕಣ್ಲಾ ಸೀನ……ಆವಯ್ಯ ನಗೋದೇ ಕಷ್ಟ ಕಣ್ಲಾ ಅದ್ಕೆ ಅವ್ರು ಸದಾನಂದ ಗೌಡ್ರುನ್ನ ಪಕ್ಕಕ್ಕೆ ಇಟ್ಕಂಡಿದ್ರು…..ಸದಾನಂದ ಗೌಡ್ರು ಯಾವಾಗ್ಲೂ ನಗ್ತಾ ಇರ್ತಾರೆ, ಆದ್ರೆ ಈಶ್ವರಪ್ಪ ಬಂದು ಸದಾನಂದ ಗೌಡ್ರುನ್ನ ಎಬ್ಬಿಸಿ ಅವ್ರ ಸೀಟ್ನಾಗೆ ಇವ್ರು ಕುಂತ್ಕಂಬುಟ್ರು.

 

ಮತ್ತಷ್ಟು ಓದು »