ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮಾನವೀಯತೆ’

18
ಫೆಬ್ರ

ಸಮಾನತೆ, ವಿಶ್ವಭ್ರಾತೃತ್ವ ಮತ್ತು ನಾವು

-ಕ.ವೆಂ.ನಾಗರಾಜ್

Sodarate     “ನನಗೆ ಒಂದು ಕನಸು ಇದೆ. ಅದೆಂದರೆ ನನ್ನ ನಾಲ್ಕು ಮಕ್ಕಳು ಒಂದು ದಿನ ಅವರ ಬಣ್ಣಗಳಿಂದಲ್ಲದೆ ಅವರ ಗುಣಗಳಿಂದ ಗುರುತಿಸಲ್ಪಡುವ ದೇಶದಲ್ಲಿ ಬಾಳುತ್ತಾರೆ ಅನ್ನುವುದು” – ಇದು ಅಮೆರಿಕಾದ ದಿ. ಮಾರ್ಟಿನ್ ಲೂಥರ್ ಕಿಂಗ್ ರವರ ಉದ್ಗಾರ. ಇದು ಸಮಾನತೆಯನ್ನು ಬಯಸಿದ, ಅಲ್ಲಿ ಪ್ರಚಲಿತವಿದ್ದ ಕಪ್ಪು-ಬಿಳಿ ಜನಾಂಗ ದ್ವೇಷದ ವಿರುದ್ಧ ಹೋರಾಡಿದ್ದ ವ್ಯಕ್ತಿಯ ಕನಸು. ಸಮಾನತೆ ಅನ್ನುವ ಕಲ್ಪನೆ ಯಾವುದೇ ಆದರ್ಶಮಾನವನ ಗುರಿ. ಸಮಾನತೆ ಅಂದರೇನು ಅನ್ನುವುದಕ್ಕೆ ವಿವರಣೆ ನೀಡುವುದು ಕಷ್ಟವೇ ಸರಿ. ಸರಿಸಮ ಎಂಬುದು ನಿಘಂಟಿನ ಅರ್ಥ. ವ್ಯಾವಹಾರಿಕ ಜಗತ್ತಿನಲ್ಲಿ ಸಮಾನತೆಯ ಕಲ್ಪನೆಯ ಸಾಕಾರ ಹೇಗೆ ಎಂಬುದರ ಕುರಿತು ಚಿಂತಿಸಬೇಕಿದೆ. ಭಾರತದ ಸಂವಿಧಾನದಲ್ಲಿ ದೇಶದ ನಾಗರಿಕರಲ್ಲಿ ಜಾತಿ, ಮತ, ಲಿಂಗ, ಭಾಷೆ – ಇಂತಹ ಯಾವುದೇ ಕಾರಣದಿಂದ ಭೇದ ಕೂಡದು, ಎಲ್ಲರಿಗೂ ಸಮಾನವಾದ ಹಕ್ಕು ಇದೆ ಎಂದಿದೆ. ಆದರೆ ಇಲ್ಲಿ ಜಾತಿಯ ಹೆಸರಿನಲ್ಲಿ, ಮತದ ಹೆಸರಿನಲ್ಲಿ, ಲಿಂಗದ ಹೆಸರಿನಲ್ಲಿ, ಭಾಷೆಯ ಹೆಸರಿನಲ್ಲಿ ಭೇದ ಭಾವ ತಾಂಡವವಾಡುತ್ತಿರುವುದು ದುರ್ದೈವ. ಯಾರು ಈ ಸಮಾನತೆಯನ್ನು ಸಾಧಿಸಬೇಕಿದೆಯೋ ಆ ಆಳುವ ಸ್ಥಾನದಲ್ಲಿರುವ ಜನಪ್ರತಿನಿಧಿಗಳೇ ಇಂತಹ ಭೇದ ಭಾವಗಳನ್ನು ಉಳಿಸಿ, ಪೋಷಿಸಿಕೊಂಡು ಬರುತ್ತಿರುವುದು ಘೋರ ಸತ್ಯ.

ಮತ್ತಷ್ಟು ಓದು »

15
ಮೇ

ಸಕಲ ಬೈಗುಳಕ್ಕೂ ಅರ್ಹರಿವರು, ಸರ್ವರಿಂದಲೂ ಧೂಷಿತರು

– ಭಾಸ್ಕರ್ ಎಸ್.ಎನ್

ನೀವು ಎಂದಾದರೂ, ಯಾರ ಮೇಲಾದರೂ ನಿಮ್ಮ ನಾಲಿಗೆಯನ್ನು ಹರಿಬಿಟ್ಟಿದ್ದೀರಾ? ಅದೂ ಸಹಾ ವಾಚಾಮಗೋಚರ..!

Interesting question..!

ಒಬ್ಬ ವ್ಯಕ್ತಿಯನ್ನು ಮನಸೋ ಇಚ್ಚೆ ಬೈಯಲು ಬೇಕಾದ ಅರ್ಹತೆಗಳೇನು? ಬೈಯಲಿರುವ ವ್ಯಕ್ತಿ ಬೈಸಿಕೊಳ್ಳುವ ವ್ಯಕ್ತಿಗಿಂದ ಅಧಿಕಾರದಲ್ಲಾಗಲೀ, ಅರ್ಹತೆಯಲ್ಲಾಗಲೀ, ಹುದ್ದೆಯಲ್ಲಾಗಲಿ..ಮೇಲ್ಮಟ್ಟದಲ್ಲಿದ್ದಾನೆಂಬ ಏಕ ಮಾತ್ರ ಕಾರಣಕ್ಕೆ ಆತ ಈ ಅರ್ಹತೆ ಗಳಿಸಿರುತ್ತಾನೆ ಎಂಬುದು ಎಷ್ಟರ ಮಟ್ಟಿಗೆ ಒಪ್ಪಿಗೆಗೆ ಅರ್ಹ. ಉನ್ನತ ಮಟ್ಟದಲ್ಲಿದ್ದ ಮಾತ್ರಕ್ಕೇ ಯಾರನ್ನಾದರೂ ಹೇಗಾದರೂ ಧೂಷಿಸುವ ಅರ್ಹತೆಯನ್ನು  ಒಬ್ಬ ವ್ಯಕ್ತಿ ಗಳಿಸಿಕೊಳ್ಳುತ್ತಾನೆಯೇ? ಅಥವಾ ಹೀಗೆ ವರ್ತಿಸಿದರೆ ಮಾತ್ರ ಆ ಹುದ್ದೆಗೆ, ಅಧಿಕಾರಕ್ಕೆ ಆತ ಅರ್ಹನೇ?

ಖಂಡಿತ ಇಲ್ಲ. ಕಾನೂನಿನ ಚೌಕಟ್ಟಿಗೆ ಬಂದು ಹೇಳುವುದಾದರೆ, ಯಾವುದೇ ಹುದ್ದೆ, ಅಥವಾ ಯಾವುದೇ ಅಧಿಕಾರ ಹೊಂದಿರುವ ಒಬ್ಬ ವ್ಯಕ್ತಿ ತನ್ನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುವುದಕ್ಕೆ ಮಾತ್ರ ಅರ್ಹ. ಆತ ಯಾವುದೇ ಹುದ್ದೆಯಲ್ಲಿರಲಿ ಅಥವಾ ಎಷ್ಟೇ ಅಧಿಕಾರವನ್ನು ಹೊಂದಿರಲಿ  ಮತ್ತೊಬ್ಬ ವ್ಯಕ್ತಿಯನ್ನು ಮಾತಿನ ಮೂಲಕ ಧೂಷಿಸಿವ, ನಿಂದಿಸುವ ಅಥವಾ ಅವಾಛ್ಯ ಶಬ್ದಗಳಿಂದ ತೆಗಳುವುದು ಅಪರಾಧ. ಇದು ಕಾನೂನಿನ ವಿಷಯವಾಯಿತು.  ಎಲ್ಲಾ ಕಾಲದಲ್ಲೂ ಎಲ್ಲಾ ಸಂಧರ್ಭಗಳಲ್ಲೂ ಕಾನೂನಿನ ಅನಿವಾರ್ಯತೆ ಅಥವಾ ಅವಶ್ಯಕತೆ ಬರುವುದಿಲ್ಲ ಅಲ್ಲವೇ?

ಮತ್ತಷ್ಟು ಓದು »