ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮಾನವ ಹಕ್ಕುಗಳ ಉಲ್ಲಂಘನೆ’

18
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೩

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨

ಭಾಗ ೧ ಮತ್ತು ೨ ರಲ್ಲಿ ‘370ನೇ ವಿಧಿಯ ಸಾಂವಿಧಾನಿಕ ಸಿಂಧುತ್ವ’ ಮತ್ತು ‘370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ’ಯ ಬಗ್ಗೆ ಮಾತನಾಡಿದೆವು. ಭಾಗ ೩ ರಲ್ಲಿ ಮುಂದಿನ ಹಾದಿಯ ಬಗ್ಗೆ ಚಿಂತಿಸೋಣ

ಮುಂದಿನ ಹಾದಿ

ಮೇಲೆ ನೀಡಿದ ಎಲ್ಲ ಉದಾಹರಣೆಗಳು ಸಾಬೀತುಪಡಿಸುವುದಿಷ್ಟೇ, ಸಂವಿಧಾನದ 370ನೇ ವಿಧಿ ಪ್ರಜಾಪ್ರಭುತ್ವದ ಆದರ್ಶಗಳು ಮತ್ತು ನಾಗರಿಕತೆ, ಮಾನವ ಹಕ್ಕುಗಳ ಕುರಿತ ಅಂತರಾಷ್ಟ್ರೀಯ ಕಾನೂನುಗಳ ಕಲ್ಪನೆಗಳ ಮೇಲೆ ನಡೆಯತ್ತಿರುವ ಅತಿಯಾದ ಅಣಕ. ಇದು ಭಾರತದ ಜನಸಂಖ್ಯೆ ಗಣನೀಯ ಪ್ರಮಾಣದ ಭಾಗವೊಂದನ್ನು ದ್ವತೀಯ ದರ್ಜೆಯ ಮತ್ತು ನಾಗರಿಕರೇ ಅಲ್ಲದ ಸ್ಥಿತಿಗೆ ಇಳಿಸುತ್ತದೆ. ವಿಪುಲ್ ಕೌಲನ ಪ್ರಕರಣವನ್ನು ಮತ್ತೆ ನೋಡುವುದಾದರೆ, ಅಂದಿನ ಮುಖ್ಯಮಂತ್ರಿ ಗುಲಾಮ್ ನಬೀ ಆಜಾದ್ರ ಕಾರ್ಯದರ್ಶಿ ನೀಡಿದ “ರಾಜ್ಯಕ್ಕೆ ವಿಶೇಷಾಧಿಕಾರ ನೀಡುವ 370ನೇ ವಿಧಿಯ ಅಡಿಯಲ್ಲಿ ಭಾರತ ಸರ್ಕಾರದ ಗೃಹ ಇಲಾಖೆ ನೀಡುವ ಯಾವುದೇ ಸೂಚನೆಯನ್ನು ಪಾಲಿಸಲು ಜಮ್ಮು ಕಾಶ್ಮೀರ ರಾಜ್ಯ ಸರ್ಕಾರ ಬಾಧ್ಯವಲ್ಲ. ಆದ್ದರಿಂದ ನಿಮ್ಮ ಮಗುವಿನ ವೈದ್ಯಕೀಯ ವೆಚ್ಚವನ್ನು ಪಾವತಿಸಲು ಸಾಧ್ಯವಿಲ್ಲ” ಎನ್ನುವ ನಿರ್ದಯ ಉತ್ತರ ಕೌಲ್ ಕುಟುಂಬದಲ್ಲಿ ಅಣುಮಾತ್ರವಷ್ಟಾದರೂ ಜೀವಂತವಾಗಿದ್ದ ಭರವಸೆಯನ್ನು ತುಂಡರಿಸಿ ಅಡಗಿಸಿತು. ಜಮ್ಮು ಕಾಶ್ಮೀರ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ ಹದಿಮೂರು ವರ್ಷದ ಅದೃಷ್ಟಹೀನ ಬಾಲಕನ ಬವಿಷ್ಯವನ್ನು ಅಂಧಕಾರಕ್ಕೆ ನೂಕಿತು.

ಮತ್ತಷ್ಟು ಓದು »

12
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370Artilce 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ

370ನೇ ವಿಧಿಯ ನಿಂದನೆ ಮತ್ತು ಪ್ರಜ್ಞಾಪೂರ್ವಕ ದುರುಪಯೋಗಗಳ ಮೇಲೆ ಗಮನಹರಿಸಿದರೆ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸಂಭಂಧಿಸಿದಂತೆ ಸಂಘಾತ್ಮಕ ವಿಷಯಗಳ ಯಾದಿಯಲ್ಲಿ 99ರಲ್ಲಿ 6  ಮತ್ತು ಸಹವರ್ತಿ ಪಟ್ಟಿಯ 52ರಲ್ಲಿ 21 ವಿಷಯಗಳು ಇನ್ನೂ ಹೊರಪಟ್ಟಿರುವುದು ಗೋಚರವಾಗುತ್ತದೆ. ಜಮ್ಮು ಕಾಶ್ಮೀರದ ಪ್ರಮಾಣ ವಚನದ ಪಠ್ಯ ಉಳಿದವುಗಿಳಿಗಿಂತ ಭಿನ್ನವಾಗಿದೆ. ರಾಜ್ಯದ ಶಾಸನಸಭೆಯ ಕಾಲಾವಧಿ ಅರು ವರ್ಷ. ಜಮ್ಮು ಕಾಶ್ಮೀರ ರಾಜ್ಯದ ಸಂವಿಧಾನದ ಪ್ರಸ್ತಾವನೆಯಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಶಬ್ದಗಳಿಗೆ ಜಾಗವಿಲ್ಲ. ಬ್ರಷ್ಟಾಚಾರ ನಿಯಂತ್ರಣ ಕಾಯಿದೆ (Prevention of Corruption) 1988,  ಭಾರತೀಯ ದಂಡಸಂಹಿತೆ (Indian Penal Code), ಗೃಹೀಯ ಹಿಂಸಾ ಕಾಯಿದೆ(Domestic Violence Act), ಧಾರ್ಮಿಕ ಸಂಸ್ಥೆ (ದುರುಪಯೋಗ ನಿಯಂತ್ರಣ) ಕಾಯಿದೆ 1988, ಅರಣ್ಯ ಹಕ್ಕು ಕಾಯಿದೆ,ವನ್ಯಜೀವಿ ಸಂರಕ್ಷಣಾ ಕಾನೂನು, ನಗರ ಭೂ ಮಿತಿ ಕಾನೂನು ಇತ್ಯಾದಿಗಳು ಜಮ್ಮು ಕಾಶ್ಮೀರ ರಾಜ್ಯಕ್ಕೆ ಅನ್ವಯವಾಗುವುದಿಲ್ಲ. ಜಮ್ಮು ಕಾಶ್ಮೀರದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐನ ಅಧಿಕಾರ ಸೀಮಿತವಾಗಿದೆ, ಅಂದರೆ ಜಮ್ಮು ಕಾಶ್ಮೀರ ರಾಜ್ಯದಲ್ಲಿ ದಾಖಲಾದ ದೂರಿನ ಮೇಲೆ ತನಿಖೆ ನಡೆಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿಯನ್ನು ಪಡೆಯಬೇಕಾಗುತ್ತದೆ. ರಾಜ್ಯಕ್ಕೆ ಸಂಭಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಕಾನೂನು ವ್ಯಾಪ್ತಿ ಅಪೀಲಿಗೆ ಮಾತ್ರ ಸೀಮಿತವಾಗಿದೆ ಮತ್ತು ಫೆಡರಲ್ ಕೋರ್ಟ ಆಗಿ ಕಾರ್ಯನಿರ್ವಹಿಸುವ ಅಧಿಕಾರ ಮೊಟಕುಗೊಂಡಿದೆ.

ಕಡೆಯಪಕ್ಷ ರಾಜ್ಯದ ಜನತೆಗೆ 370ನೇ ವಿಧಿಯು ನಿಜವಾಗಿ ಹಿತಕಾರಿಯಾಗಿದೆಯೇ? ಎನ್ನುವುದನ್ನು ವಿಶ್ಲೇಷಿಸಿದರೆ, ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಜನ ಪ್ರತಿನಿಧಿ ಕಾಯಿದೆ (People representation act 1950) ರಾಜ್ಯಕ್ಕೆ ಅನ್ವಯವಾಗದೇ ಇರುವುದರಿಂದ ಚುನಾವಣಾ ಕ್ಷೇತ್ರಗಳ ಮರುವಿಂಗಡನೆಯನ್ನು ಜಾರಿಗೆ ತರುವ ಯಾವುದೇ ಅಧಿಕಾರ ಕೇಂದ್ರಕ್ಕೆ ಇರುವುದಿಲ್ಲ. 2002ರಲ್ಲಿ ಜಮ್ಮು ಕಾಶ್ಮೀರವನ್ನು ಹೊರತುಪಡಿಸಿ ಇಡೀ ದೇಶದಲ್ಲಿ ಕ್ಷೇತ್ರ ಪುನರ್ವಿಂಗಡನೆಯನ್ನು ಕೈಗೊಳ್ಳಲಾಯಿತು. ಕೆಲವು ಆಯ್ದ ಪ್ರದೇಶಗಳ ಹಿತಾಸಕ್ತಿಗನುಗುಣವಾಗಿ 370ನೇ ವಿಧಿಯ ದುರುಪಯೋಗ ನಡೆದಿದೆ.

ಮತ್ತಷ್ಟು ಓದು »

4
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370ಹದಿಮೂರು ವರ್ಷದ ವಿಪುಲ್ ಕೌಲ್ ಜಮ್ಮು ಕಾಶ್ಮೀರ ರಾಜ್ಯದ ಲೋಕೋಪಯೋಗಿ ಇಲಾಖೆಯ ನಾಲ್ಕನೇ ವರ್ಗದ ನೌಕರರೊಬ್ಬರ ಮಗ. ಹಲವು ವ್ಯಾಧಿಗಳಿಂದ ಬಳಲುತ್ತಿರುವ ವಿಪುಲ ಅವನ ಕುಟುಂಬ ತನ್ನ ಭವಿಷ್ಯವನ್ನೇ ಬಲಿಕೊಟ್ಟು ಕೊಡಿಸುತ್ತಿರುವ ಚಿಕಿತ್ಸೆಯ ಕಾರಣದಿಂದಾಗಿ ಇಂದು ಬದುಕಿದ್ದಾನೆ. 2001ರಲ್ಲಿ ಆತನ ಕುಟುಂಬದವರು ಸಹಾಯಕ್ಕಾಗಿ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು, ಅಂತೆಯೇ ಅವರಿಗೆ 20ಲಕ್ಷ ರೂ ಸಹಾಯ ಧನದ ಭರವಸೆಯನ್ನು ನೀಡಲಾಗಿತ್ತು. ಆದರೆ ಸರ್ಕಾರ ಬದಲಾದ ನಂತರ ಸಹಾಯ ನಿಂತುಹೋಯಿತು. ತತ್ಕಾಲಕ್ಕೆ ಗೃಹ ಮಂತ್ರಾಲಯ ಮಧ್ಯಪ್ರವೇಶಿಸಿ ನೆರವನ್ನು ಮುಂದುವರಿಸುವಂತೆ ಸೂಚಿಸಿತು. ಇಷ್ಟಾದ ಮೇಲೂ ಅವರಿಗೆ ದೊರಕಿದ್ದು ದಿ 24 ಜುಲೈ 2007ರ ಒಂದು ಪತ್ರ, ಪತ್ರದ ಒಕ್ಕಣೆಯಲ್ಲಿ “ಸಂವಿಧಾನದ ವಿಧಿ 370ರ ಅನ್ವಯ ಜಮ್ಮು ಕಾಶ್ಮೀರ ಸರ್ಕಾರ ಗೃಹ ಮಂತ್ರಾಲಯದ ಸೂಚನೆಯನ್ನು ಪಾಲಿಸುವ ಬಾಧ್ಯತೆಯನ್ನು ಹೊಂದಿರುವುದಿಲ್ಲ.” ಎಂದು ಉಲ್ಲೇಖಿಸಲಾಗಿತ್ತು !

ಇದೊಂದು 370ನೇ ವಿಧಿಯ ದುರುಪಯೋಗದ ಪ್ರತ್ಯೇಕ ಪ್ರಕರಣವಲ್ಲ. 1950ರಲ್ಲಿ ಸಂವಿಧಾನ ಜಾರಿಗೆ ಬಂದಾಗಿನಿಂದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ವ್ಯತಿರಿಕ್ತವಾದ ಸ್ವಾರ್ಥ ಉದ್ಧೇಶಗಳ ಪೂರ್ತಿಗಾಗಿ 370ನೇ ವಿಧಿಯ ನಿಂದನೆ ಮತ್ತು ದುರುಪಯೋಗ ಮತ್ತೆ ಮತ್ತೆ ನಡೆಯಲ್ಪಟ್ಟಿದೆ.

ಆಗಿನ ತುರ್ತು ಸನ್ನಿವೇಶಕ್ಕೆ ಹಂಗಾಮಿ ಏರ್ಪಾಡಾಗಿ 370ನೇ ವಿಧಿಯನ್ನು ಸಂವಿಧಾನದಲ್ಲಿ ಸೇರಿಸಲಾಗಿತ್ತು. ಜಮ್ಮು ಕಾಶ್ಮೀರದ ಮೇಲೆ ಆಕ್ರಮಣವೆಸಗಿದ್ದ ಪಾಕಿಸ್ತಾನ ರಾಜ್ಯದ ಭೂಭಾಗವನ್ನು ನ್ಯಾಯಬಾಹಿರವಾಗಿ ತನ್ನ ವಶಕ್ಕೆ ತೆಗೆದುಕೊಂಡಿತ್ತು. ವಿಷಯವನ್ನು ವಿಶ್ವಸಂಸ್ಥೆಗೆ ಒಯ್ಯಲಾಗಿ ವಿಶ್ವಸಂಸ್ಥೆಯ ಭದ್ರತಾ ಮಂಢಳಿಯು ಕೆಲವು ಪೂರ್ವಾನ್ವಯ ಷರತ್ತುಗಳೊಂದಿಗೆ ಜನಮತಗಣನೆಯನ್ನು ನಡೆಸುವ ಗೊತ್ತುವಳಿಯನ್ನು ಅಂಗೀಕರಿಸಿತು. ಆ ಷರತ್ತುಗಳೆಂದರೆ ಪಾಕಿಸ್ತಾನ ಆಕ್ರಮಿತ ಪ್ರದೇಶದಿಂದ ತನ್ನ ಸೈನ್ಯವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು ಮತ್ತು ತಾನು ಸ್ಥಾಪಿಸಿದ ಆಡಳಿತ ವ್ಯವಸ್ಥೆಯನ್ನು ತಗೆದುಹಾಕಬೇಕು. ಹಾಗೆಯೇ ಭಾರತದ ಸಂವಿಧಾನವನ್ನು ಜಾರಿಗೊಳಿಸುವ ಯಾವುದೇ ಪ್ರಯತ್ನವು ಸಂಪೂರ್ಣವಾಗಿ ನಿರಾಕರಿಸಲ್ಪಡುವುದು.

ಮತ್ತಷ್ಟು ಓದು »