ಕಮ್ಯುನಿಸಂ ಎಂಬ ಕಾಡಿನ ಬೆಂಕಿಗೆ ಅಂಬೇಡ್ಕರ್ ಸುಟ್ಟು ಹೋಗಬೇಕೆ?
– ಡಾ. ರೋಹಿಣಾಕ್ಷ ಶಿರ್ಲಾಲು,ಸಹಾಯಕ ಪ್ರಾಧ್ಯಾಪಕ
ಕನ್ನಡ ವಿಭಾಗ, ವಿವೇಕಾನಂದ ಕಾಲೇಜು,ಪುತ್ತೂರು.
ಒಂದೆಡೆ ರಕ್ತಕ್ರಾಂತಿಯನ್ನು ಆಹ್ವಾನಿಸುವ ಕಮ್ಯುನಿಸಂ, ಇನ್ನೊಂದಡೆ ರಕ್ತರಹಿತ ಬದಲಾವಣೆಯನ್ನು ನಿರೀಕ್ಷಿಸುವ ಬೌದ್ಧ ತತ್ವ. ಒಂದೆಡೆ ನೂರಾರು ವರ್ಷಗಳಿಂದ ಶೋಷಣೆ, ಅನ್ಯಾಯಗಳಿಗೆ ಒಳಗಾದ ದಲಿತ ಸಮಾಜ, ಇನ್ನೊಂದೆಡೆ ದಲಿತರೊಳಗೆ ಕಾಣಿಸಿಕೊಳ್ಳಲಾರಂಭಿಸಿದ ಎಚ್ಚರ , ಆವೇಶಗಳು ಸುಲಭದಲ್ಲಿ ಕಮ್ಯೂನಿಸಂನ ತೋಪಿಗೆ ಸಿಡಿಮದ್ದಾಗುವ ಅಪಾಯ, ಇದು ಅಂಬೇಡ್ಕರ್ ಮುಂದಿದ್ದ ಸನ್ನಿವೇಶದ ಕಿರು ಚಿತ್ರಣ. ಒಂದು ಬುದ್ಧನ ಮಾರ್ಗ , ಇನ್ನೊಂದು ಕಾರ್ಲ್ ಮಾರ್ಕ್ಸ್ ನ ಮಾರ್ಗ. ವಿಶ್ವ ತನ್ನ ಮಾರ್ಗವನ್ನು ಈಗ ಆಯ್ಕೆ ಮಾಡಿಕೊಳ್ಳಬೇಕು ಎನ್ನುತ್ತಲೇ ಬೌದ್ಧಧರ್ಮದ ಮಾರ್ಗದಲ್ಲೇ ಉನ್ನತಿಯನ್ನು ಸಾಧಿಸಲು ಸಾಧ್ಯವೆಂದು ಆತ್ಮವಿಶ್ವಾಸದಿಂದ ನುಡಿದ, ನಡೆದ ಅಂಬೇಡ್ಕರ್. ಇದು ಅಂಬೇಡ್ಕರ್ ಮುಂದಿದ್ದ ಕವಲು ದಾರಿ ಮಾತ್ರವಲ್ಲ, ವರ್ತಮಾನದಲ್ಲಿನ ದಲಿತ ಚಳವಳಿಗಳ, ವಿಚಾರವಾದಿಗಳ ಮುಂದಿನ ಕವಲು ದಾರಿಯೂ ಹೌದು. ಅಂಬೇಡ್ಕರ್ ಅವರ ಅಂತಿಮ ಆಯ್ಕೆ ಬುದ್ಧನೋ? ಕಾರ್ಲ್ಮಾಕ್ರ್ಸೋ? ಈ ಪ್ರಶ್ನೆ ಬಹಳ ಮುಖ್ಯವಾದುದು ಕೂಡ. ಒಂದೆಡೆ ಮಾರ್ಕ್ಸ್ ವಾದಿಗಳು ಮರೆಯಿಂದ ಅಂಬೇಡ್ಕರ್ ವಿಚಾರಗಳನ್ನು ಮಾತನಾಡುತ್ತಾ , ಕಾರ್ಲ್ ಮಾರ್ಕ್ಸ್ನ ವಿಚಾರಗಳೇ ಅಂಬೇಡ್ಕರ್ ವಿಚಾರವೂ ಆಗಿತ್ತು ಎಂಬಂತೆ ತೋರಿಸುತ್ತಿದ್ದಾರೆ. ಇನ್ನೊಂದೆಡೆ ಕರ್ನಾಟಕವೂ ಸೇರಿದಂತೆ ದೇಶದೆಲ್ಲೇಡೆ ದಲಿತ ಚಳವಳಿಗಳು ಹುಟ್ಟಿ , ಉತ್ಕರ್ಷಕ್ಕೆ ತಲುಪಿ , ಹತ್ತಾರು ಚೂರುಗಳಾಗಿ ಒಡೆದು ಈ ಚಳವಳಿಗಳ ಮುಖ ಅಂಬೇಡ್ಕರ್ ಬದಲು ಮಾರ್ಕ್ಸ್, ಲೆನಿನ್ಗಳಾಗಿ, ಕ್ರಾಂತಿ, ಬೆಂಕಿಯ ವಿಚಾರಕ್ಕೆ ಅಂಬೇಡ್ಕರ್ ಮುಖವಾಡವನ್ನು ತೊಡಿಸುತ್ತಿದ್ದಾರೆ. ಹಾಗಾದರೆ ಸ್ವತಃ ಅಂಬೇಡ್ಕರ್ ಕಾರ್ಲ್ ಮಾರ್ಕ್ಸ್, ಕಮ್ಯುನಿಸಂ ಬಗೆಗೆ ತಳೆದಿದ್ದ ನಿಲುವು ಏನು? ಎನ್ನುವುದನ್ನು ಪರಿಶೀಲಿಸುತ್ತಾ, ನಮ್ಮ ಬೌದ್ಧಿಕ ವಲಯ ಅಂಬೇಡ್ಕರ್ ಅವರನ್ನು ಅರ್ಥೈಸಿಕೊಂಡ ಬಗೆಯನ್ನು ಚರ್ಚಿಸುವುದೇ ಈ ಬರವಣಿಗೆಯ ಉದ್ದೇಶ.
ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೨
– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ
ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೧
ನವ ಸಾಮಾಜಿಕ ಚಳುವಳಿ ಸಿದ್ಧಾಂತಗಳು:
1960 ಹಾಗೂ 70ರ ದಶಕದಲ್ಲಿ ಪ್ರಾರಂಭವಾದ ನವ ಸಾಮಾಜಿಕ ಚಳುವಳಿ ಸಿದ್ಧಾಂತಗಳು ಮಾರ್ಕ್ಸ್ ವಾದಿ ನಿಲುವುಗಳಿಗಿಂತ ಭಿನ್ನವಾದ ನಿಲುವನ್ನು ಮುಂದಿಡಲು ಯಶಸ್ವಿಯಾದವು. ವರ್ಗಾದಾರಿತವಲ್ಲದ ಅಸ್ಮಿತೆಯ ರಾಜಕೀಯ ಕೇವಲ ಸಾಂಕೇತಿಕ ಎನ್ನುವ ಮಾರ್ಕ್ಸ್ ವಾದಿ ನಿಲುವನ್ನು ಇವು ಅಲ್ಲಗಳೆಯುತ್ತವೆ. ಈ ಸಿದ್ಧಾಂತವು ಅಸ್ಮಿತೆ ರಾಜಕೀಯವನ್ನು ಒಂದು ವಿಶಿಷ್ಟ ಬಗೆಯ ರಾಜಕೀಯ ಎಂದೇ ಪ್ರತಿಪಾದಿಸುತ್ತದೆ. ಅಸ್ಮಿತೆಯಾದಾರಿತ ಚಳುವಳಿಗಳನ್ನು ಆಧುನಿಕತೆಯ ಪರಿಣಾಮವಾಗಿ ಆರ್ಥಿಕ ಮತ್ತು ಸಾಮಾಜಿಕ ವಲಯದ ಉನ್ನತ ಸ್ಥರದಲ್ಲಿ ಆದ ರಾಚನಿಕ ಬದಲಾವಣೆ ಅಸ್ಮಿತೆ ರಾಜಕೀಯವನ್ನು ಹುಟ್ಟು ಹಾಕಿದೆ ಮತ್ತು ಇದೊಂದು ಐತಿಹಾಸಿಕವಾದ ಸಾಮೂಹಿಕ ಪ್ರತಿಕ್ರಿಯೆ ಎಂದು ಈ ಸಿದ್ಧಾಂತದ ಪ್ರತಿಪಾದನೆಯಾಗಿದೆ. ಕೆಲವು ವಿದ್ವಾಂಸರು ಹೇಳುವಂತೆ ಅಸ್ಮಿತೆ ರಾಜಕೀಯವು ಕೈಗಾರಿಕೋತ್ತರ ಸಮಾಜದಲ್ಲಾಗುತ್ತಿರುವ ಒಂದು ಬಗೆಯ ಸ್ಥಿತ್ಯಂತರ (ಟೌರಿನ್ 1981). ಹಬರ್ಮಾಸ್ರವರ ಅಭಿಪ್ರಾಯದಲ್ಲಿ ಅಸ್ಮಿತೆ ಚಳುವಳಿಗಳು ಪ್ರಭುತ್ವದ ನಿಯಂತ್ರಣ ಹಾಗೂ ಅದರ ನಿರ್ಣಯಗಳ ಒತ್ತಡಕ್ಕೆ ಹೆಚ್ಚು ಹೆಚ್ಚಾಗಿ ಒಳಗಾಗುತ್ತಿರುವ ಸಮುದಾಯಗಳು ಅಂತಹ ಹಿಡಿತದಿಂದ ತಪ್ಪಿಸಿಕೊಳ್ಳುವ ಪ್ರಯತ್ನದ ಫಲವಾಗಿವೆ (ಹಬರ್ಮಾಸ್ 1985).
ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೧
– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ
ರಾಜಕೀಯ ಸಿದ್ಧಾಂತದಲ್ಲಿ ಅಸ್ಮಿತೆ ರಾಜಕೀಯದ ಪರಿಕಲ್ಪನೆ ಪ್ರಬಲವಾಗಿದ್ದು 20ನೇ ಶತಮಾನದ ಉತ್ತರಾರ್ಧದಲ್ಲಿ. ತಮ್ಮ ಅಸ್ತಿತ್ವ ಸಂಪೂರ್ಣ ಅವಗಣನೆಗೆ ಒಳಗಾಗಿದೆ ಮತ್ತು ಆ ಕಾರಣದಿಂದ ತಮ್ಮನ್ನು ಪ್ರಾತಿನಿಧ್ಯದಿಂದ ವಂಚಿತರನ್ನಾಗಿಸಿ ರಾಜಕೀಯ ಮುಖ್ಯವಾಹಿನಿಯಿಂದ ದೂರವಿರಸಲಾಗಿದೆ ಎನ್ನುವ ಭಾವನೆ ಬೆಳೆಸಿಕೊಂಡ ಒಂದು (ಸಾಮಾಜಿಕ/ಸಾಂಸ್ಕೃತಿಕ) ಗುಂಪು ರಾಜಕೀಯ ಸಂಚಲನೆಗೆ ತೊಡಗುವ ಪ್ರಕ್ರಿಯೆಯನ್ನು ಅಸ್ಮಿತೆ ರಾಜಕೀಯ ಎಂದು ಕರೆಯಲಾಗುತ್ತದೆ. ಸಾರ್ವತ್ರಿಕ ಒಳಿತು ಅಸ್ಮಿತೆ ರಾಜಕೀಯದ ಗುರಿಯಾಗಿರುವುದಿಲ್ಲ ಮತ್ತು ಅಂತಹ ರಾಜಕೀಯ ಹೋರಾಟ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾಗಿರುವುದಿಲ್ಲ. ಮುಖ್ಯವಾಹಿನಿಯಿಂದ ಬದಿಗೆ ಸರಿಸಲ್ಪಟ್ಟ ತನ್ನನ್ನು ಮುಖ್ಯವಾಹಿನಿಯೊಂದಿಗೆ ಗುರುತಿಸಿಕೊಳ್ಳುವಂತೆ ಮಾಡುವುದು ಒಂದು ಗುಂಪಿನ ಅಸ್ಮಿತೆ ರಾಜಕೀಯದ ಮುಖ್ಯ ಉದ್ದೇಶವಾಗಿರುತ್ತದೆ.
20ನೇ ಶತಮಾನದ ಉತ್ತರಾರ್ಧದಲ್ಲಿ ಅಮೇರಿಕಾ ದೇಶದಲ್ಲಿ ಪ್ರಾರಂಭವಾದ (ದ್ವಿತೀಯ ಹಂತದ) ಸ್ತ್ರೀವಾದೀ ಚಳುವಳಿ, ಕರಿಯರ ನಾಗರೀಕ ಹಕ್ಕುಗಳ ಹೋರಾಟ, ಸಲಿಂಗಿಗಳು ತಮ್ಮ ಹಕ್ಕಿಗಳಿಗಾಗಿ ಮಾಡಿದ ಹೋರಾಟ ಮೊದಲಾದವುಗಳನ್ನು ಅಸ್ಮಿತೆ ರಾಜಕೀಯ ಎಂದು ಮೊತ್ತ ಮೊದಲ ಬಾರಿಗೆ ಗುರುತಿಸಲಾಯಿತು. ಈ ಎಲ್ಲಾ ಗುಂಪುಗಳು ತಮ್ಮ ವಿಶಿಷ್ಟ ಅಸ್ಮಿತೆಯನ್ನು ಗುರುತಿಸಿ ಗೌರವಿಸದೆ ಆ ಕಾರಣಕ್ಕಾಗಿ ತಾವು ಮುಖ್ಯವಾಹಿನಿಯಿಂದ ಬದಿಗೆ ಸರಿಸಲ್ಪಟ್ಟ ಪ್ರಕ್ರಿಯೆಯ ವಿರುದ್ಧ ಹೋರಾಟ ಪ್ರಾರಂಬಿಸಿದವು. ತಾವು ಸಾಮಾಜಿಕವಾಗಿ ರಾಜಕೀಯವಾಗಿ ತುಳಿತಕ್ಕೊಳಗಾಗಿದ್ದೇವೆ ಎನ್ನುವ ಭಾವನೆಯನ್ನು ಆಧರಿಸಿ ಅಸ್ಮಿತೆ ರಾಜಕೀಯದ ಸಂಘಟನೆಯು ತನ್ನ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ಅಸ್ಮಿತೆ ರಾಜಕೀಯ ಎಂದು ಕರೆಯಲ್ಪಡುವ ರಾಜಕೀಯ/ಸಾಮಾಜಿಕ ಚಳುವಳಿಗಳ ವ್ಯಾಪ್ತಿ ವಿಶಾಲವಾದುದಾಗಿದೆ. ರಾಜಕೀಯ ಶಾಸ್ತ್ರದ ಅಧಯಯನಗಳಲ್ಲಿ ಅಸ್ಮಿತೆ ರಾಜಕೀಯಕ್ಕೆ ಸಂಬಂದಿಸಿದ ಬರವಣೆಗೆಗಳು ಪಾಶ್ಚಾತ್ಯ ಬಂಡವಾಳಿಶಾಹಿ ಪ್ರಜಾಪ್ರಭುತ್ವಗಳಿಗೆ ಸಂಬಂದಿಸಿರುತ್ತವೆ. ಬಂಡವಾಳಶಾಹಿ ವ್ಯವಸ್ಥೆಯ ಹಿಡಿತ ಪ್ರಬಲವಾಗುತ್ತಾ ಹೋದ ಹಾಗೆ ಪರಂಪರಾನುಗತವಾಗಿ ಬಂದ ಸಮುದಾಯಗಳು ತಮ್ಮ ಅಸ್ಮಿತೆಗಳನ್ನು ಕಳೆದುಕೊಳ್ಳುತ್ತಾ ಹೋಗಿ ಅಂತಹ ಸಮುದಾಯಗಳ ಸದಸ್ಯರಲ್ಲಿ ಪರಕೀಯತೆಯ ಭಾವನೆ ಹೆಚ್ಚಗುತ್ತಾ ಹೋದದ್ದರ ಪರಿಣಾಮದಿಂದಾಗಿ ಅಸ್ಮಿತೆ ರಾಜಕೀಯ ಹುಟ್ಟಿಕೊಂಡಿದೆ ಎಂದು ಕೆಲವರು ಭಾವಿಸುತ್ತಾರೆ.
ಮತ್ತಷ್ಟು ಓದು 




