ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮೀಡಿಯಾ’

4
ಏಪ್ರಿಲ್

ಸೇನೆ-ಸರ್ಕಾರದ ನಡುವೆ ಬಡವಾಗದಿರಲಿ ನನ್ನ ಭಾರತ

– ರಾಕೇಶ್ ಶೆಟ್ಟಿ

ಆವತ್ತು ಸಂಸತ್ತಿನಲ್ಲಿ ಭಾಷಣಕ್ಕೆ ನಿಂತ ನೆಹರೂ ದೇಶದ ಒಂದಿಂಚು ನೆಲವನ್ನು ಚೀನಿಗಳೀಗೆ ಬಿಟ್ಟುಕೊಡುವುದಿಲ್ಲ.ಎಂತಾ ಯುದ್ಧಕ್ಕಾದರೂ ಸೈನ್ಯ ತಯಾರಿದೆ ಅನ್ನುತ್ತಲೇ  ತಮ್ಮ ಕೋಟಿನಿಂದ ತೆಗೆದ ಕೆಂಪು ಗುಲಾಬಿಯನ್ನ ಜನರ ಕಿವಿಗಿಟ್ಟರು.ಅವರ ಭಾಷಣದ ನಂತರದ ಇತಿಹಾಸ ನಿಮಗೆ ಗೊತ್ತಿರಲೇಬಹುದು.ಆ ಕಹಿ ನೆನಪಿಗೆ ೫೦ ವರ್ಷ ಆಗೋ ಸಮಯದಲ್ಲಿ ಮತ್ತೊಮ್ಮೆ ಕಳೆದವಾರ ಸಂಸತ್ತಿನಲ್ಲಿ ರಕ್ಷಣಾ ಸಚಿವ ಆಂಟನಿಯವರೂ ಸಹ ಭಾರತದ ಸೈನ್ಯ ಬಲಿಷ್ಟವಾಗಿದೆ,ಯುದ್ಧ ಸನ್ನದ್ಧವಾಗಿದೆ ಅಂದಿದ್ದಾರೆ.ನೆಹರೂ ಅವರಿಗೂ-ಅವ್ರ ಕಾಲಕ್ಕೂ ತುಲನೆ ಮಾಡಿದರೆ ಆಂಟನಿ ಅವರನ್ನ ಸ್ವಲ್ಪ ನಂಬಬಹುದು ಅನ್ನಿಸುತ್ತದೇ.ಆದರೆ…

ಕಳೆದ ವಾರ ನಡೆದ ವಿದ್ಯಾಮಾನಗಳಿವೆಯಲ್ಲ ಅವೆಲ್ಲ ಗಾಬರಿ ಹುಟ್ಟಿಸುವಂತವು.ಇದಕ್ಕೆ ಮುನ್ನುಡಿ ಬರೆದಿದ್ದು ಜನರಲ್.ವಿ.ಕೆ ಸಿಂಗ್…! ಜನ್ಮ ದಿನಾಂಕದ ರಗಳೆಯ ನಂತರ ಸ್ವಲ್ಪ ದಿನ ಸುಮ್ಮನಾಗಿದ್ದವ್ರು, ಟಿವಿ ಚಾನೆಲ್ನೊಂದಿಗೆ ಮಾತನಾಡುತ್ತ ತಮಗೆ ೧೪ ಕೋಟಿ ಲಂಚ ನೀಡಲು ಬಂದ ಪ್ರಸಂಗದ ಬಗ್ಗೆ ಬಾಯಿಬಿಡುವ ಮೂಲಕ.ಮತ್ತೆ ಆ ವಿಷಯವನ್ನ ನಾನು ರಕ್ಷಣಾ ಮಂತ್ರಿ ಆಂಟನಿ ಅವರಿಗೂ ಹೇಳಿದ್ದೆ ಅನ್ನುವುದು ಬೆಂಕಿಗೆ ತುಪ್ಪ ಸುರಿದಂತಾಗಿ ಹೋಯಿತು.ಸಂಸತ್ತಿನಲ್ಲಿ ಆಂಟನಿ ’ಅವರು ಮೌಕಿಕವಾಗಿ ಹೇಳಿದ್ದರು ನಾನು ಏನು ತಾನೇ ಮಾಡಲಿ” ಅಂತೆಲ್ಲ ಗೋಳಾಡುವಾಗಲೇ, ಜನರಲ್ ಪ್ರಧಾನಿ ಅವ್ರಿಗೆ ಬರೆದ ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಅತ್ಯಂತ ರಹಸ್ಯವಾಗಿರಬೇಕಿದ್ದ ಪತ್ರ ಸೋರಿಕೆಯಾಗಿದ್ದು.!

ಮತ್ತಷ್ಟು ಓದು »

7
ನವೆಂ

ಹೈಟೆಕ್ ಬಹಿಷ್ಕಾರ…!

– ರಾಕೇಶ್ ಶೆಟ್ಟಿ

‘ಬೇರೆ ಬೇರೆ ವಿಷಯಗಳಲ್ಲಿ ಒಟ್ಟಿಗೆ ಸೇರಿ ಕೆಲಸ ಮಾಡಿದ ಗೆಳೆಯರು ಈಗ ಜನಲೋಕಪಾಲ ವಿಷಯವಾಗಿ ತಾತ್ವಿಕ ಭಿನ್ನಭಿಪ್ರಾಯಗಳನ್ನು ಇಟ್ಟುಕೊಂಡು ವಿರುದ್ಧವಾಗಿ ಮಾತನಾಡುತ್ತಿರುವುದು ಬೇಸರತರಿಸಿದೆ ‘ ಅಂತ ಆ ಗೆಳೆಯ ಕಳೆದ ಆಗಸ್ಟಿನಲ್ಲಿ ಫೆಸ್ಬುಕ್ಕಿನಲ್ಲಿ ಬರೆದುಕೊಂಡಿದ್ದರು.ಅದಕ್ಕೆ ನಾನು ‘ಸಾಮಾಜಿಕ ಕಳಕಳಿಯಿರುವ ಎಲ್ಲ ಮನಸ್ಸುಗಳು ಅಂತಿಮವಾಗಿ ಬಯಸುವುದು ಒಳ್ಳೆಯ ಸಮಾಜವನ್ನಷ್ಟೇ,ತಾತ್ವಿಕ ಭಿನ್ನಭಿಪ್ರಾಯ್ಗಳನ್ನ ವೈಯುಕ್ತಿಕವಾಗಿ ನೋಡಬೇಡಿ’ ಅನ್ನುವಂತೆ ಬರೆದಿದ್ದೆ.ಅವರೂ ಅದನ್ನ ಇಷ್ಟ ಪಟ್ಟಿದ್ದರು.

ಅದಾಗಿ ಬಹುಷಃ ೩-೪ ದಿನಗಳು ನಾನು ಊರಿನಲ್ಲಿ ಇರಲಿಲ್ಲ,ವಾಪಸ್ಸು ಬಂದವನು ಫೇಸ್ಬುಕ್ ತೆಗೆದಾಗ ಗೊತ್ತಾಗಿದ್ದು , ತಾತ್ವಿಕ ಭಿನ್ನಾಭಿಪ್ರಾಯಗಳನ್ನ ವೈಯುಕ್ತಿಕ ಮಟ್ಟಕ್ಕೆ ಆ ಗೆಳೆಯ ಮಾತ್ರವಲ್ಲದೆ ಅವನ ‘ಬಳಗ’ವೂ ತೆಗೆದುಕೊಂಡು ನನಗೆ ಅವರ ಗೂಗಲ್ ಗುಂಪಿನಿಂದ,ಫೆಸ್ಬುಕ್ಕ್ ಗೆಳೆತನದಿಂದ ‘ಹೈಟೆಕ್ -ಬಹಿಷ್ಕಾರ’ ಹಾಕಿದೆ ಅಂತ…! ಈ ಹೈಟೆಕ್ ಬಹಿಷ್ಕಾರ ಹಾಕಿಸಿಕೊಳ್ಳುವಂತೆ ನಡೆದಿದ್ದಾರೂ ಏನು ಅಂತ ನೋಡ ಹೊರಟರೆ….

ಅಣ್ಣಾ ಹಜ಼ಾರೆ ಜನಲೋಕಪಾಲ ಮಸೂದೆಗಾಗಿ ಜಂತರ್ ಮಂಥರ್ನಲ್ಲಿ ಉಪವಾಸ ಕುಳಿತ ದಿನಗಳಿವೆಯಲ್ಲ ಅವು ಈ ದೇಶದಲ್ಲಿ ಇನ್ನೇನು ಬದಲಾವಣೆ ಸಾಧ್ಯವೇ ಇಲ್ಲ ಅನ್ನುವಂತಿದ್ದ ಜನರ ಮನಸ್ಸಿಗೆ ಆಶಾಭಾವನೆ ಮೂಡಿಸಿದ ದಿನಗಳು.ಆಗ ’ಈ ಹೋರಾಟ ಗೆಲ್ಲಲೇ ಬೇಕು’ ಅಂದವರು ಅದ್ಯಾಕೋ ಮತ್ತೆ ಅಣ್ಣಾ ’ರಾಮ ಲೀಲಾ ಮೈದಾನ’ಕ್ಕೆ ಬಂದು ನಿಂತಾಗ ’ಪ್ರಜಾಪ್ರಭುತ್ವದ ಬುಡಕ್ಕೆ ಬೆಂಕಿ ತಗುಲಿದೆ’ ಅನ್ನಲಾರಂಭಿಸಿದರು.ಆಗಲೇ ಅಣ್ಣಾ ಹೋರಾಟವನ್ನು ಬೆಂಬಲಿಸುತಿದ್ದವರು-ವಿರೋಧಿಸುವ ಗೆಳೆಯರ ನಡುವೆ ತಾತ್ವಿಕ ಭಿನ್ನಾಭಿಪ್ರಾಯಗಳ ಚರ್ಚೆ ಫ಼ೇಸ್ಬುಕ್ಕಿನಲ್ಲಿ ಶುರುವಾಗಿದ್ದು.ಈ ಹೋರಾಟ ಸರಿಯಿಲ್ಲ ಅನ್ನಲು ಅವರುಗಳು ಏನೇನು ಅಂಶ ಮುಂದಿಡುತಿದ್ದರೋ, ಹೋರಾಟ ಹೇಗೆ ಸರಿ ಅಂತ ನಾವುಗಳು ನಮ್ಮ ವಾದ ಮುಂದಿಟ್ಟಿದ್ದೆವು. ಮತ್ತಷ್ಟು ಓದು »

19
ಆಗಸ್ಟ್

ಜನಲೋಕಪಾಲ ಅನ್ನುವುದು ಮಾಯದಂಡವೇನಲ್ಲ…!

– ರಾಕೇಶ್ ಶೆಟ್ಟಿ

ಒಂದೆಡೆ ಅಣ್ಣಾರನ್ನ ಬೆಂಬಲಿಸಿ ಜನ ಬೀದಿಗಿಳಿದರೆ, ಇನ್ನೊಂದೆಡೆ ಅಣ್ಣಾ ಹೋರಾಟವನ್ನ ಪ್ರಶ್ನಿಸಿ ಹಲವಾರು ಪ್ರಶ್ನೆಗಳೆದ್ದಿವೆ.

’ಜನಲೋಕಪಾಲ್’ ಬಂದ ತಕ್ಷಣ ಎಲ್ಲ ಭ್ರಷ್ಟರು ಮಾಯವಾಗ್ತಾರೆ ಅಂತ ಖುದ್ದು ಅಣ್ಣಾ ಮತ್ತು ಸಿವಿಲ್ ಸೊಸೈಟಿಯವರ್ಯಾರು ಸಹ ಎಲ್ಲೂ ಹೇಳಿಲ್ಲ.ಹಾಗಾಗ್ಯೂ ಇಂತ ವಾದ ಹುಟ್ಟು ಹಾಕಿದ್ದು ಯಾರು? ಬಹುಷಃ ಕಪಿಲ್ ಸಿಬಲ್ ಇರಬೇಕು ಅದನ್ನೆ ಹಿಡಿದು ಕೆಲವರು ’ಜನಲೋಕಪಾಲ್’ ಬಂದ್ರೆ ಭ್ರಷ್ಟಚಾರ ಮಾಯವಾಗುತ್ತಾ!? ಅಂತ ಕೇಳ್ತಾ ಇದ್ದಾರೆ ಕೆಲವರು. ಅಂತವರಿಗೊಂದು ಪ್ರಶ್ನೆ ಪೋಲಿಸ್ ಇಲಾಖೆ ಅನ್ನುವುದು ಬಂದು ಎಷ್ಟು ವರ್ಷಗಳಾಯ್ತು? ಕಳ್ಳತನ-ಕೊಲೆ-ದರೋಡೆ ನಿಂತಿದೆಯಾ ಸ್ವಾಮಿ!? ಇಲ್ಲ ತಾನೆ..! ಆದರೆ ಜನ್ರಿಗೊಂದು ಹೆದರಿಕೆಯಂತೂ ಇರುತ್ತದೆ ತಪ್ಪು ಮಾಡೋಕೆ ಹಾಗೆ ತಪ್ಪು ಮಾಡಿದವರನ್ನ ಹಿಡಿದು ಜೈಲಿಗೆ ಅವರು ನೂಕುತಿದ್ದಾರಲ್ವಾ? ಹಾಗೆಯೇ ಜನಲೋಕಪಾಲ ಅನ್ನುವುದು ಸಹ.ಅದು ಬಂದ ತಕ್ಷಣ ಎಲ್ಲ ಸರಿ ಹೋಗದು.ಅದು ಸುಧಾರಣೆಯ ಒಂದು ಅಸ್ತ್ರವಷ್ಟೆ.

ಮತ್ತಷ್ಟು ಓದು »

19
ಆಗಸ್ಟ್

ಈ ಎಡವಟ್ಟುಗಳು ಯಾಕೆ ಹೀಗೆ ಅಂತ?

– ಸಚಿನ್ ಕೆ
ನಮಸ್ಕಾರ ಸಾ. ಎಂಗಿದೀರಾ.
ನೋಡಿ ಸಾ, ಪ್ರಪಂಚ ಹೆಂಗೈತೆ ಅಂದ್ರೆ ಹಿಂಗೂ ಜನ ಇರ್ತಾರ ಅಂತ ಗೊತ್ತಿರ್ಲಿಲ್ಲ.

ಗಾಂಧಿ ಮಆತ್ಮ್ ನ ತರ ನೀವು ಉಪ್ವಾಸ ಮಾಡಿದ್ರೆ ಜನ ಅದರಲ್ಲೂ ಹುಳುಕು ಕಂಡಿಡಿತಾರೆ ಅಂದ್ರೆ, ಈ ಜನ ಎಷ್ಟು ಗಬ್ಬೆದ್ದು ಹೋಗಿದ್ದಾರೆ ಅಂತ. ಆ ಬ್ರಹ್ಮ ಇವರ ತಲೆ ಒಳಗೆ ಮಿದುಳು ಇಟ್ಟಿಲ್ಲ ಅನ್ಸುತ್ತೆ, ಅದರೆ ಬದಲು ಸಗಣಿ ಮಡಗವ್ನೆ. ಈ ಬಡ್ಡೆತ್ತೇವು ಬರೀ ಉಲ್ಟಾ ಮಾತಾಡೋದೆ ಆಗ್ವಾಯ್ತು.

ಅವಯ್ಯ ದೇಸಾನ ಏನೋ ಬದಲಾವ್ಣೆ ಮಾಡ್ತೀನಿ ಅಂತ ಮಾತಾಡ್ತಿಲ್ಲ. ಲಂಚ ತಿನ್ನೋ ಎಲ್ಲ ಬೇವರ್ಸಿ ಮುಂಡೇವು ಗಳಿಗೆ ಸರ್ಯಾದ ಸಿಕ್ಸೆ ಆಗ್ಲಿ ಅಂತ ಗೋರ್ಮೆಂಟ್ ನೋರು ಸರಿಯಾದ ರೂಲ್ಸ್ ಮಾಡ್ಲಿ ಅಂತ. ಆದರೆ ಈ ಉಲ್ಟಾ ಮಾತಾಡ್ತ ಇರೋ ಈ ಹೈಕಳು ಕೇಳೋ ಪ್ರಸ್ನೆಗಳನ್ನು ನೋಡಿದ್ರೆ ನಗ ತಡ್ಯಾಕಾಗ್ತಿಲ್ಲ.

ಮತ್ತಷ್ಟು ಓದು »

18
ಆಗಸ್ಟ್

ಭ್ರಷ್ಟಾಚಾರ ಎಂದರೆ ಅನುಕೂಲ ಸಿಂಧು

– ಪವನ್ ಪರುಪತ್ತೆದಾರ   

ನನಗೊಬ್ಬ ಸ್ನೇಹಿತ ಇದ್ದಾನೆ ಪ್ರವೀಣ್ ಅಂತ, ನನ್ನ ಜೊತೆ ಓದಿಲ್ಲವಾದರೂ ನನ್ನ ಸಹಪಾಠಿ ಅವನು, ಒಂದೇ ತರಗತಿ ಆದರೆ ಬೇರೆ ಶಾಲೆ. ಅವನ ಕೆಲಸ ತಾಲ್ಲೂಕು ಕಚೇರಿಯಲ್ಲಿ. ಸರ್ಕಾರದಿಂದ ಕೊಟ್ಟ ಕೆಲಸ ಅಲ್ಲ, ಅವನೇ ಹುಡುಕಿ ಕೊಂಡಿರುವ ವೃತ್ತಿ. ನಿಜ ಹೇಳಬೇಕೆಂದರೆ ನಮ್ಮೂರಿನ ತಾಲ್ಲೂಕು ಕಚೇರಿಯೋಳಗಿರುವರಿಗಿಂತ ಇವನು ಹೆಚ್ಚು ಕೆಲಸ ಮಾಡುತ್ತಾನೆ. ಪಹಣಿ, registration, ಖಾತೆ ಬದಲಾವಣೆ, encumberance ಸರ್ಟಿಫಿಕೇಟ್, survey sketch ಕಾಪಿ, ನಿಮಗೇನು ಬೇಕು?? ತಾಲ್ಲೂಕು ಕಚೇರಿಯ ಗೇಟ್ ನ ಪ್ಯೂನ್ ಇಂದ ಹಿಡಿದು ತಹಶೀಲ್ದಾರ್ ತನಕ, ಏನು ಕೆಲಸ ಬೇಕಾದರುಮಾಡಿಕೊಡುತ್ತಾನೆ(ಮಾಡಿಸಿಕೊಡುತ್ತಾನೆ).

ಇತ್ತೀಚಿಗೆ ನನಗೆ ಬಹಳ ಜರೂರಾಗಿ ನಮ್ಮ ಜಮೀನಿನ ಪಹಣಿ ಬೇಕಾಗಿತ್ತು. ನಮ್ಮ ಊರಿನ ಪಹಣಿ ಕೇಂದ್ರ ಬಹಳ ದಿನಗಳಿಂದ ದುರಸ್ಥಿಯಲ್ಲಿತ್ತು. ಆಗಷ್ಟೇ ಕೊಡಲು ಶುರು ಮಾಡಿದ್ದರು. ಅದ್ದರಿಂದ ತಾಲ್ಲೂಕು ಕಚೇರಿ ಬಳಿ ಹೋಗಿ ಸಾಲು ನೋಡಿದೊಡನೆ ಭಯವಾಯ್ತು. ಅದರಲ್ಲೂ ನಮ್ಮ ಸರ್ಕಾರೀ ಕಛೇರಿಯೋಳಗಿನ ಗಣಕ ಯಂತ್ರಗಳು ಯಾವಾಗ ಕೆಡುತ್ತವೋ ಗೊತ್ತಿಲ್ಲ. ಇವತ್ತು ಕೆಟ್ಟರೆ ಇನ್ನು ರಿಪೇರಿ ಆಗುವುದು ಯಾವಾಗಲೋ??? ಅಲ್ಲಿವರೆಗೂ ನನಗೂ ಕಾಯುವ ಅವಕಾಶವಿರಲಿಲ್ಲ. ಮತ್ತಷ್ಟು ಓದು »

18
ಆಗಸ್ಟ್

ಕಲಾವಿದರು ಕಸಿದುಕೊಳ್ಳುತ್ತಿರುವ ಕನ್ನಡ ಗ್ರಾಹಕನ ಸ್ವಾತಂತ್ರ್ಯ.!

– ಮಹೇಶ್ ರುದ್ರಗೌಡರ್

ಜೀ ಟಿವಿಯಲ್ಲಿ ಜಾನ್ಸಿ ರಾಣಿ ಅನ್ನೊ ಹಿಂದಿ ದಾರಾವಾಹಿಯನ್ನು ಕನ್ನಡಕ್ಕೆ ಡಬ್ ಮಾಡಿ ಪ್ರಸಾರ ಮಾಡಿದ್ರು ಅಂತ ನಮ್ಮ ಕಿರುತೆರೆ ಕಲಾವಿದರು ಆ ವಾಹಿನಿಯ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದರು. ಕಲಾವಿದರ ಪ್ರಕಾರ ಇದರಿಂದ ಕಿರುತೆರೆಯನ್ನೇ ನಂಬಿ ಜೀವನ ನಡೆಸುತ್ತಿರುವ ಅನೇಕ ಕುಟುಂಬಗಳು ಬೀದಿಗೆ ಬರುತ್ತವಂತೆ. ಇದರ ಜೊತೆಗೆ ಜೀ ಟಿವಿಯ ಈ ನಡೆ ಕನ್ನಡ ವಿರೋದಿಯಂತೆ. ಇವರ ವಾದವನ್ನು ಮತ್ತು ಕನ್ನಡತನವನ್ನು ಸ್ವಲ್ಪ ಆಳವಾಗಿ ನೋಡಿ ಬರೋಣ ಬನ್ನಿ.

 ಹುರುಳಿಲ್ಲದ ವಾದ.!

ಈ ದಾರಾವಾಹಿ ಈಗಾಗಾಲೇ ತೆಲುಗು, ತಮಿಳು ಬಾಶೆಗೆ ಡಬ್ ಆಗಿ ಅಲ್ಲಿ ಪ್ರಸಾರವಾಗುತ್ತಿದೆ. ಹಾಗಾದರೆ ಆಂದ್ರ ತಮಿಳುನಾಡಿನಲ್ಲಿ ಕಲಾವಿದರೇ ಇಲ್ಲವೇ.? ಅಲ್ಲಿಯೂ ಕಲಾವಿದರಿದ್ದಾರೆ, ಅವರಲ್ಲಿಯೂ ಅನೇಕರಿಗೆ ಕಿರುತೆರೆಯಿಂದಲೇ ಹೊಟ್ಟೆ ತುಂಬುತ್ತದೆ. ಅಲ್ಲಿ ಅವರಿಗೆ ಇಲ್ಲದ ಸಮಸ್ಯೆ ದಿಡೀರನೇ ಕರ್ನಾಟಕಕ್ಕೆ ಬಂದ ಕೂಡಲೇ ಹೇಗೆ ಹುಟ್ಟುತ್ತದೆ. ಇದಕ್ಕೆ ಯಾರು ಕಾರಣ. ಯಾಕೆ ಈ ಮನಸ್ಥಿತಿ.! ಇದೇ ಸಂದರ್ಬದಲ್ಲಿ ಒಬ್ಬ ಕಲಾವಿದರು ಹೇಳಿದ್ರು, ಒಂದು ದಾರಾವಾಹಿ ಕನ್ನಡಕ್ಕೆ ಡಬ್ ಮಾಡಲು ಬಿಟ್ಟರೆ, ಅದರ ಜೊತೆಗೆ ನೂರಾರು ದಾರಾವಾಹಿಗಳು ಬಂದು ನಿಲ್ಲುತ್ತವೆ ಅಂತ.! ಇದು ಯಾವ ಮನಸ್ಥಿತಿಯನ್ನು ತೋರಿಸುತ್ತದೆ. ಸ್ಪರ್ದೆ ಎದುರಿಸುವ ಹಿಂಜರಿಕೆಯನ್ನು ತೋರಿಸುತ್ತದೆ ಅಲ್ಲವೇ.! ಸ್ಪರ್ದೆ ಎಂದ ತಕ್ಷಣ ಬೀದಿಗೆ ಬರುವ ಮಾತು ಇತರ ಬಾಶೆಯ ಕಲಾವಿದರ ಬಾಯಲ್ಲಿ ಬರದೇ ಬರೀ ನಮ್ಮ ಕಲಾವಿದರ ಬಾಯಲ್ಲಿ ಮಾತ್ರ ಏಕೆ ಬರುತ್ತದೆ.? ಒಂದು ಹಿಂದಿ ಬಾಶೆಯಲ್ಲಿರುವ ದಾರಾವಾಹಿಯನ್ನು ಕನ್ನಡ ಚಾನಲ್ಲಿನಲ್ಲಿ ಕನ್ನಡದಲ್ಲಿ ತೋರಿಸಿದರೇ ಅದು ಕನ್ನಡ ವಿರೋದಿ ಎನ್ನುವ ಇವರ ಕನ್ನಡತನಕ್ಕೆ ಏನನ್ನಬೇಕು. ಡಬ್ ಮಾಡದೇನೇ ಹಿಂದಿಯಲ್ಲೇ ತೋರಿಸಿದರೆ ಅದು ಕನ್ನಡಪರವಾಗುವುದೋ.! ಮತ್ತಷ್ಟು ಓದು »

28
ಜುಲೈ

ಯಡ್ಯೂರಪ್ಪಂಗೆ ನೊಬೇಲ್ ಅವಾರ್ಡು…!

– ವಿಜಯ್ ಹೆರಗು

ಎಂದಿನಂತೆ ನಮ್-ವಿಜಯ್ ಹೆರಗುಮ ಕೆಂಚ, ಸೀನ, ಸಿದ್ದ, ನಾಣಿ ಎಲ್ಲಾರೂ ಬಂದು ಅವರ ಮಾಮೂಲಿ ‘ಅಡ್ಡಾ’ ರಾಮಣ್ಣನ ಟೀ ಅಂಗಡಿ ಮುಂದೆ ಕೂತ್ಕೊಂಡು ಹರಟೆ ಹೊಡೀತಾ ಇದ್ರು. ನಮ್ ಸಿದ್ದ ಅಲ್ಲಿ ಇದ್ದ ಅಂದ್ಮೇಲೆ ರಾಜಕೀಯದ ಮಾತು ಬರ್ಲೇಬೇಕು.

ಸಿದ್ದ : ಲೇ ಕೆಂಚ ಇವತ್ತು ಪೇಪರ್ ನೋಡ್ದೆನ್ಲಾ ?

ಕೆಂಚ : ಹೂ ಕನ್ಲಾ ನೋಡ್ದೆ, ಪಾಪ ನಮ್ ಯಡ್ಯೂರಪ್ನೋರಿಗೆ ಶ್ಯಾನೆ ಕಾಟ ಕೊಡ್ತಾವ್ರೆ. ಈ ಸಂತೋಷ್ ಹೆಗ್ಡೆ ಲೋಕಾಯುಕ್ತ ಆದಾಗಿಂದ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಸಂತೋಷಾನೇ ಕಾಣಾಕಿಲ್ಲ………ಸದ್ಯ ಇನ್ನೊಂದು ವಾರಕ್ಕೆ ಆವಯ್ಯ ರಿಟೈರ್ ಆಯ್ತಾರೆ ಇನ್ನಾರಾ ನಮ್ ಸಿಎಮ್ಮು ಸುಖವಾಗಿ ಇರ್ಬೌದು ಅಂದ್ಕೊಂಡ್ರೆ ಅದೇನೋ “ಗಣಿ ಬಾಂಬ್” ಹಾಕ್ಬಿಟ್ರಲ್ಲ ಅವ್ರು.

ಸೀನ : ಅಲ್ಲಲೇ ಕೆಂಚ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಯಾವಾಗ್ಲಾ ಸಂತೋಷ ನೋಡಿದ್ದೇ ನೀನು!? ಆವಯ್ಯ ಯಾವಾಗಲೂ ಮುಖ ಗಂಟ್ ಹಾಕ್ಕಂಡೆ ಇರ್ತಾರೆ…….

ಸಿದ್ದ : ನಿಜ ಕಣ್ಲಾ ಸೀನ……ಆವಯ್ಯ ನಗೋದೇ ಕಷ್ಟ ಕಣ್ಲಾ ಅದ್ಕೆ ಅವ್ರು ಸದಾನಂದ ಗೌಡ್ರುನ್ನ ಪಕ್ಕಕ್ಕೆ ಇಟ್ಕಂಡಿದ್ರು…..ಸದಾನಂದ ಗೌಡ್ರು ಯಾವಾಗ್ಲೂ ನಗ್ತಾ ಇರ್ತಾರೆ, ಆದ್ರೆ ಈಶ್ವರಪ್ಪ ಬಂದು ಸದಾನಂದ ಗೌಡ್ರುನ್ನ ಎಬ್ಬಿಸಿ ಅವ್ರ ಸೀಟ್ನಾಗೆ ಇವ್ರು ಕುಂತ್ಕಂಬುಟ್ರು.

 

ಮತ್ತಷ್ಟು ಓದು »

5
ಜುಲೈ

ಅಷ್ಟಕ್ಕೂ,ಈ ಪ್ರಜಾಪ್ರಭುತ್ವ ಅಂದರೇನು!?

– ರಾಕೇಶ್ ಶೆಟ್ಟಿ

ಮನಮೋಹನರಿಗಿಂತ ಅಡಾಲ್ಫ್ ಹಿಟ್ಲರ್ ಮೇಲು…!

ದೇಶಕ್ಕಾದ ಅವಮಾನಕ್ಕೆ ಪ್ರತಿಯಾಗಿ ನಂಜು ಕಾರುತಿದ್ದ ಅಡಾಲ್ಫ್ ಹಿಟ್ಲರ್ ಅನ್ನುವ ರಕ್ತ ಪಿಪಾಸು ಸರ್ವಾಧಿಕಾರಿಯನ್ನ, ದೇಶ ಭ್ರಷ್ಟಚಾರದಲ್ಲಿ ಮುಳುಗೇಳುತಿದ್ದರೂ ಸಂಬಂಧವೇ ಇಲ್ಲದಂತಿರುವ,ಕಣ್ಣೆದುರೇ ಅನಾಚಾರ ನಡೆಯುತಿದ್ದರು ಕಣ್ಮುಚ್ಚಿ ಕುಳಿತಿರುವ ಪ್ರಾಮಾಣಿಕ ಪ್ರಧಾನಿ ಮನಮೋಹನರಿಗೆ ಹೋಲಿಸಿದ್ದು ಅತಿಯಾಯ್ತು ಅನ್ನಿಸುತ್ತೆ ಅಲ್ವಾ?

ಹಾಗಿದ್ರೆ, ಅಣ್ಣಾ ಸತ್ಯಾಗ್ರಹ ಮಾಡಿ ಮೊಂಡ ಸರ್ಕಾರವನ್ನ ಮಂಡಿಯೂರಿಸಿದಾಗ ’ಓ! ಸರ್ಕಾರ ಈ ತರ ಬಗ್ಗಿದರೆ, ಎಲ್ಲರೂ ಸತ್ಯಾಗ್ರಹ ಮಾಡಿ ಸರ್ಕಾರವನ್ನ ಬ್ಲಾಕ್ ಮೇಲ್ ಮಾಡಲು ಶುರು ಮಾಡುತ್ತಾರೆ!’ ಅಂತ ಆತಂಕ ಪಡುವವರನ್ನ ಕಂಡಾಗ; ’ಪ್ರಜಾಪ್ರಭುತ್ವವಲ್ಲದ ಭ್ರಷ್ಟಚಾರ ಮುಕ್ತ ಸರ್ಕಾರಕ್ಕಿಂತ, ಭ್ರಷ್ಟಚಾರವಿರುವ ಪ್ರಜಾಪ್ರಭುತ್ವ ಸರ್ಕಾರವೇ ಮೇಲು’ ಅನ್ನುವಂತ ಲೇಖನವನ್ನ ಓದಿದಾಗ; ಪ್ರಬಲ ಜನಲೋಕಪಾಲ ಮಸೂದೆಗಾಗಿ ನಡೆಯುತ್ತಿರುವ ಹೋರಾಟ ’ಪ್ರಜಾಪ್ರಭುತ್ವದ ಬುಡವನ್ನೇ ಅಲುಗಾಡಿಸುತ್ತಿದೆ’ ಅಂತ ಕೆಲ ಮಂದಿ ಗುಲ್ಲೆಬ್ಬಿಸುತ್ತಿರುವುದನ್ನ ನೋಡಿದಾಗ ಇದೂ ಅತಿಯಾಯ್ತು ಅನ್ನಿಸುವುದಿಲ್ವಾ?

ಅಷ್ಟಕ್ಕೂ,ಜನರಿಂದ ಆರಿಸಿ ಬಂದ ಸರ್ಕಾರ ತನ್ನ ಪಾಲಿನ ಕೆಲಸವನ್ನ ತಾನು ಸರಿಯಾಗಿ ಮಾಡುತಿದ್ದರೆ ಅಣ್ಣಾ ಹಜ಼ಾರೆ ಯಾಕೆ ಬರಬೇಕಿತ್ತು? ಕಫ್ಫು ಹಣದ ಕಳ್ಳರ ಹೆಸರನ್ನ ಬಾಯ್ಬಿಡಿ ಅಂದಾಗ ’ಅವೆಲ್ಲ ಆಗಲಿಕ್ಕಿಲ್ಲ’ ಅಂತ ವಿತ್ತ ಸಚಿವ ಅಂದ ಮೇಲೆ ತಾನೇ ಜನರ ಪಿತ್ತ ನೆತ್ತಿಗೇರಿದ್ದು? ಸುಪ್ರೀಂ ಕೋರ್ಟ್ ತಪರಾಕಿ ಹಾಕಿದ ಮೇಲೆಯೆ ತೆರಿಗೆ ಕಳ್ಳ ಹಸನ್ ಅಲಿಯನ್ನ ಬಂಧಿಸಿದ್ದೇಕೆ? ಕಳೆದ ಚುನಾವಣೆಗಿಂತಲೂ ಮೊದಲೇ 2G ಹಗರಣ ಬಾಯ್ತೆರೆದು ನಂತರವೂ ಅದೇ ರಾಜನನ್ನ ಮತ್ತೆ ಕರೆದು ಮತ್ತದೇ ಖಾತೆಯನ್ನ ವಹಿಸಿದ ಸರ್ಕಾರಕ್ಕೆ ನೈತಿಕತೆಯಿದಯೇ? ಈಗ ಆತಂಕ ಪಡುತ್ತಿರುವ ಪ್ರಜಾಪ್ರಭುತ್ವದ ಕಾವಲು ಭಟರೆಲ್ಲ ಆಗ ಏನು ಮಾಡುತಿದ್ದರು?ಎಲ್ಲಿದ್ದರು?

ಮತ್ತಷ್ಟು ಓದು »

4
ಜುಲೈ

ಜನರೆಂದರೆ ಯಾರ್ ಯಾರು ಕಾಗೇರಿಯವರೇ?

– ಬನವಾಸಿ ಬಳಗ

ಇವತ್ತಿನ (೦೩.೦೭.೨೦೧೧ರ) ಕನ್ನಡಪ್ರಭ ದಿನಪತ್ರಿಕೆಯ ಒಂಬತ್ತನೇ ಪುಟದಲ್ಲಿ ಮಾನ್ಯ ಶಿಕ್ಷಣಮಂತ್ರಿಗಳಾದ ಶ್ರೀ ವಿಶ್ವೇಶ್ವರಹೆಗ್ಡೆ ಕಾಗೇರಿಯವರ “ಬುಲೆಟ್ ಸಂದರ್ಶನ“ವೊಂದು ಪ್ರಕಟವಾಗಿದೆ. ಸರ್ಕಾರ ಇಂಗ್ಲೀಶ್ ಮಾಧ್ಯಮ ಶಾಲೆಗಳನ್ನು ತೆರೆಯುವ ಬಗ್ಗೆ ಚರ್ಚೆ ಆರಂಭಿಸಿರುವ ಹಿನ್ನೆಲೆಯಲ್ಲಿ ಇದು ಕುತೂಹಲಕರವಾಗಿದ್ದು, ಒಂದು ಥರ ಸರ್ಕಾರದ ಮುಂದಿನ ನಡೆಯ ದಿಕ್ಸೂಚಿಯೂ ಆಗಿದೆ. ಇಡೀ ಸಂದರ್ಶನದ ಪ್ರಮುಖ ಮಾತುಗಳು ಇಂತಿವೆ.

ಸಾಹಿತಿಗಳಷ್ಟೇ… ಜನತೆಯಲ್ಲ!

ತಮ್ಮ ಸರ್ಕಾರದ ನಿಲುವನ್ನು ಸಮರ್ಥಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಇಳಿಯಲು ತಾವು ಸಿದ್ಧ ಎಂಬುದನ್ನು ಮಂತ್ರಿಗಳು ಸಾಬೀತು ಮಾಡುತ್ತಿರುವಂತೆ ಇವರ ಮಾತುಗಳಿವೆ. ಇಂಗ್ಲೀಶ್ ಮಾಧ್ಯಮ ಶಾಲೆಗಳಿಗೆ ಸಾಹಿತಿಗಳು ಮಾತ್ರಾ ವಿರೋಧ ತೋರಿಸಿದ್ದಾರೆ, ಇವರಷ್ಟೇ ನಾಡಿನ ಜನತೆಯಲ್ಲ… ಹಳ್ಳಿಗಾಡಿನ ಜನರೂ ಕೂಡಾ ಅವರ ಅಭಿಪ್ರಾಯ ಹೇಳಲಿ… ಇತ್ಯಾದಿಯಾಗಿ ಮಂತ್ರಿಗಳು ಮಾತಾಡಿದ್ದಾರೆ. ಇದಲ್ಲದೆ ಮಾಧ್ಯಮಗಳಿಗೆ ಜನರ ಅಭಿಪ್ರಾಯ ನಿರೂಪಿಸುವ ಹೊಣೆಗಾರಿಕೆಯನ್ನೂ ವಹಿಸಿದ್ದಾರೆ. ಈ ಪ್ರಯತ್ನವು ಸಾಹಿತಿಗಳ ಬಾಯಿ ಮುಚ್ಚಿಸುವ “ನಿಮ್ಮ ಮಕ್ಕಳು ಇಂಗ್ಲೀಶ್ ಮಾಧ್ಯಮದಲ್ಲಿ ಓದಬಹುದು, ಬಡವರ ಮಕ್ಕಳು ಓದಬಾರದಾ?” ಎಂಬಂತಹ ಮತ್ತೊಂದು ಅಸ್ತ್ರವಾಗಿದೆ. ಇರಲಿ… ಕಾಗೇರಿಯವರು ಆಡಿರುವ ಮಾತುಗಳತ್ತ ನೋಡೋಣ.

ಮತ್ತಷ್ಟು ಓದು »

12
ಜೂನ್

ಕನ್ನಡಿಗರು ಬಿಟ್ಟಿ ಬಿದ್ದಿಲ್ಲ ಅನ್ನುವುದು ನೆನಪಿರಲಿ…!

– ರಾಕೇಶ್ ಶೆಟ್ಟಿ

ಹೊಟ್ಟೆ ಪಾಡಿಗೆ ಅಂತ ಹುಟ್ಟಿದ ಊರು ಬಿಟ್ಟು ನಮ್ಮ ಬೆಂಗಳೂರಿಗೆ ಬಂದು, ಇಲ್ಲಿನ ಅನ್ನ,ನೀರು ಕುಡಿದು ’ಕನ್ನಡ ಕಲಿಯಿರಿ’ ಅಂದರೆ ನಮ್ಮ ವಿರುದ್ಧವೇ ತಿರುಗಿ ಬಿದ್ದು ಕನ್ನಡ/ಬೆಂಗಳೂರಿನ ಬಗ್ಗೆ ದ್ವೇಷಕಾರುವುದು ಒಂದು ರೀತಿಯ ಸುಲಭದ ತುತ್ತಾಗಿದೆ.

ಮೊನ್ನೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ “ಐಟಿ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಪ್ರವಾಹದಲ್ಲಿ ಕರ್ನಾಟಕ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವವರು ಇನ್ನು ಮುಂದೆ ಪ್ರಾಥಮಿಕ ಕನ್ನಡ ಭಾಷೆ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಲಿದೆ” ಅನ್ನುವ ಪ್ರಸ್ತಾವನೆಯೊಂದನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿತ್ತು.ಇದೇ ವಿಷಯವನ್ನ ಬೆಂಗಳೂರು ಮಿರರ್ ಅನ್ನುವ ಇಂಗ್ಲೀಷ್ ಪತ್ರಿಕೆ ಅನ್ಯ ಭಾಷಿಗರನ್ನ ಉದ್ರೇಕಿಸುವ ರೀತಿಯಲ್ಲಿ ಬರೆದಿದೆ.ಅಲ್ಲಿನ ಪ್ರತಿಕ್ರಿಯೆಗಳನ್ನ ನೋಡಿದರೆ ಬರೆದವರನ್ನ ಅಟ್ಟಾಡಿಸಿ ಬಡಿಯಬೇಕು ಅನ್ನಿಸುತ್ತದೆ.

ಈ ನೆಲದಲ್ಲಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾದರೆ, ಈ ನೆಲದ ಭಾಷೆ,ಸಂಸ್ಕೃತಿ,ಆಚಾರಗಳಿಗೆ ಬೆಲೆ ಕೊಡಬೇಕು ಅನ್ನುವ ಕಾಮನ್ ಸೆನ್ಸ್ ಇವರಲ್ಲಿ ಇಲ್ಲ ಅನ್ನುವುದಕ್ಕಿಂತ, ಯಾವುದಕ್ಕೂ ಪ್ರತಿಕ್ರಿಯಿಸಿದ ಕನ್ನಡಿಗರ ಧೋರಣೆಯನ್ನೆ ಇಂತ ಜನಗಳು ನಮ್ಮ ದೌರ್ಬಲ್ಯ ಅಂದುಕೊಂಡಿದ್ದಾರೆ.ಇಲ್ಲದಿದ್ದರೆ ಫ಼ೇಸ್ಬುಕ್ಕಿನಲ್ಲಿ ಹಾಲಿಡೇಐಕ್ಯು ಕಂಪೆನಿಯ ಉದ್ಯೋಗಿ ರಾಬಿನ್ ಚುಗ್ ಅನ್ನುವ ಪರದೇಶಿ ಕನ್ನಡಿಗರಿಗೆ ಫ಼ಕ್ ಆಫ಼್ ಅನ್ನುತ್ತಿರಲಿಲ್ಲ ಅಲ್ಲವಾ? ಆ ಕಿಡಿಗೇಡಿ ಕೆಲಸ ಮಾಡುವ ಕಂಪೆನಿಯ ವಿಳಾಸವಿಲ್ಲಿದೆ. ಅವರಿಗೊಂದು ಮಿಂಚೆ ಬರೆದು (ಭಾಷೆ ವಿಷಯ ಮುಟ್ಟಿಸುವಂತಿರಲಿ,ಬೈಗುಳ ದಯವಿಟ್ಟು ಬೇಡ) ಈ ಮಣ್ಣಿನ ಭಾಷೆಯ ಬಗ್ಗೆ ಗೌರವ ಇಲ್ಲದ ಇಂತವರನ್ನ ನಿಮ್ಮ ಕಂಪೆನಿಯಲ್ಲಿ ಇಟ್ಟುಕೊಳ್ಳುವಿರಾ ಅಂತಲೇ ಕೇಳಬೇಕು.ಮೊದಲೆ ಅವನಿಗೆ ಇಲ್ಲಿನ ರೀತಿ ರಿವಾಜುಗಳ ಬಗ್ಗೆ ತಕರಾರುಗಳಿವೆ.ಇಂತ ಹುಡುಗನನ್ನ ವಾಪಸ್ ಅವನ ಮನೆಗೆ ಕಳಿಸೋದು ನಮ್ಮ ಕರ್ತವ್ಯವಲ್ಲವೇ ಗೆಳೆಯರೇ?

ಮತ್ತಷ್ಟು ಓದು »