ಬ್ಲಾಗು ಕದಿಯುವ ಪತ್ರಿಕೆಗಳಿವೆ ಎಚ್ಚರ…!
– ನಿಲುಮೆ
ಇಂತದ್ದೊಂದು ತಲೆಬರಹ ಕೊಡುವುದೇ ಅಷ್ಟು ಚಂದ ಕಾಣುತ್ತಿಲ್ಲ,ಆದರೇನು ಮಾಡುವುದು ನಡೆದ ವಿಷಯವನ್ನ ಹೇಳ ಹೊರಟಾಗ ಹೀಗೆ ಆಗುತ್ತದೆ. ಕಳೆದ ತಿಂಗಳ ೨೭ರಂದು ಅರೆಹೊಳೆ ಸದಾಶಿವ ರಾವ್ ಅವರ ’‘ಸತ್ಯ ಸಾಯಿ’ ಮತ್ತು ‘ಸತ್ಯ ಸಾಯಿಸುವ’ ಮಾಧ್ಯಮಗಳು’ ಲೇಖನ ಹಾಗೆ ೨೫ರಂದು ರಶ್ಮಿ ಕಾಸರಗೋಡು ಅವರ ’‘ಎಂಡೋ ನಿಷೇಧಿಸಿ’ – ಶರದ್ ಪವಾರ್ ಗೊಂದು ಬಹಿರಂಗ ಪತ್ರ’ ಅನ್ನುವ ಲೇಖನವನ್ನ ನಿಲುಮೆಯ ಓದುಗರೆಲ್ಲ ನೋಡಿಯೆ ಇರುತ್ತೀರಿ. ಕಳೆದ ೨೮ರಂದು ’ಕರಾವಳಿ’ಯ ಪತ್ರಿಕೆಯೊಂದು ಏಕಾಏಕಿ ಲೇಖಕ/ನಿಲುಮೆಯ ಅನುಮತಿಯಿಲ್ಲದೆ ಈ ಲೇಖನಗಳನ್ನ ಕದ್ದಿದ್ದು ಅಲ್ಲದೇ ಕಡೆ ಪಕ್ಷ ಕೃಪೆ ಅಂತಲೂ ಹಾಕದೇ ತನ್ನ ಪತ್ರಿಕೆಯಲ್ಲಿ ಪ್ರಕಟಿಸಿ ’ಕರಾವಳಿ’ಯ ಜನರಿಗೆ ಹಂಚಿದೆ.(ಆ ಪತ್ರಿಕೆಯ ಹೆಸರಿಗೆ ನಮ್ಮಿಂದ ಸ್ವಲ್ಪವು ಧಕ್ಕೆ ಬಾರದಿರಲಿ ಅನ್ನುವ ಏಕೈಕ ಉದ್ದೇಶದಿಂದ ಆ ಪತ್ರಿಕೆಯ ಹೆಸರನ್ನ ನೇರವಾಗಿ ಬರೆಯುತ್ತಿಲ್ಲ).
ಎಲ್ಲ ಬಲ್ಲವರಿಲ್ಲ, ಬಲ್ಲವರು ಬಹಳಿಲ್ಲ
– ಚಾಮರಾಜ ಸವಡಿ
’ಬ್ಲಾಗ್ನಲ್ಲಿ ಬರೆಯುವವರು ಬರಹಗಾರರೇನಲ್ಲ’ ಅಂದ ನನ್ನ ಪತ್ರಕರ್ತ ಮಿತ್ರನೊಬ್ಬ.
ಹಾಗಾದರೆ, ಬರಹಗಾರರೆಂದರೆ ಯಾರು? ಅಂದೆ.
ಅವನ ಉತ್ತರ ಕೇಳಿ ನನಗೆ ದಿಗ್ಭ್ರಮೆಯಾಯಿತು. ನಂತರ ಮರುಕ ಹುಟ್ಟಿತು. ಆತನ ಪ್ರಕಾರ, ಪತ್ರಿಕೆಗಳಲ್ಲಿ ಬರೆಯುವವರು ಮಾತ್ರ ಬರಹಗಾರರು. ಉಳಿದವರೆಲ್ಲ ತಮ್ಮ ತೆವಲಿಗೆ ಬರೆಯುತ್ತಾರೆ. ಅದನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ. ಅವಕ್ಕೆ ಮೌಲ್ಯವಿಲ್ಲ.
ಆತನ ಜೊತೆ ವಾದಿಸುವುದು ವ್ಯರ್ಥ ಅನಿಸಿ ಸುಮ್ಮನಾದೆ. ಆದರೆ, ಈ ವಿಷಯ ಪ್ರಸ್ತಾಪಿಸುವುದು ಉತ್ತಮ ಅನಿಸಿ ಇಲ್ಲಿ ಬರೆಯುತ್ತಿದ್ದೇನೆ.
ಹಿಂದೊಮ್ಮೆ ಇಂಥದೇ ವಿಷಯದ ಬಗ್ಗೆ ಓದಿದ್ದು ನೆನಪಾಯಿತು. ಟಿವಿ ದಾಂಗುಡಿಯಿಡುತ್ತಿದ್ದ ದಿನಗಳವು. ಟಿವಿ ತಾರೆಯರು ಸಿನಿಮಾ ತಾರೆಯರಂತೆ ಜನಪ್ರಿಯತೆ ಗಳಿಸುತ್ತಿದ್ದರು. ಆಗ ಕೆಲ ನಟ, ನಟಿಯರು ಮೇಲಿನ ಅಭಿಪ್ರಾಯವನ್ನೇ ಬಿಂಬಿಸುವಂಥ ಮಾತು ಹೇಳಿದ್ದರು: ಸಿನಿಮಾ ನಟನೆಯೇ ನಿಜವಾದ ನಟನೆ. ಟಿವಿ ನಟನೆಗೆ ಮೌಲ್ಯವಿಲ್ಲ.
ಜೀ ಕನ್ನಡ ವಾಹಿನಿ ಮುಖ್ಯಸ್ಥರಿಗೊಂದು ಬಹಿರಂಗ ಆಗ್ರಹ ಪತ್ರ…
– ಸಂಪಾದಕೀಯ
“ಮಾನ್ಯರೆ,
ಈ ಪತ್ರವನ್ನು ಅತ್ಯಂತ ನೋವು, ವಿಷಾದ, ಕಳವಳದಿಂದ ನಿಮಗೆ ಬರೆಯುತ್ತಿದ್ದೇವೆ. ಪತ್ರ ಓದಿದ ನಂತರವಾದರೂ ನೀವು ನಮ್ಮ ಭಾವನೆಗಳಿಗೆ ಸ್ಪಂದಿಸುತ್ತೀರೆಂಬ ನಂಬಿಕೆ ಇದೆ. ಲಕ್ಷ-ಕೋಟಿ ಜನರನ್ನು ತಲುಪುವ ಮೀಡಿಯಾಗಳು ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸಬೇಕು. ಇದು ಕಾನೂನಿನ ಪರಿಭಾಷೆಗಳಿಗೆ ಮಾತ್ರ ಒಳಪಡುವ ವಿಷಯ ಎಂದು ಯಾರೂ ಭಾವಿಸಬೇಕಾಗಿಲ್ಲ, ಕಾನೂನನ್ನೂ ಮೀರಿದ ನೈತಿಕತೆ, ಮಾನವೀಯತೆಯ ಹೊಣೆಗಾರಿಕೆಯನ್ನೂ ಒಪ್ಪಿ ಅನುಸರಿಸಬೇಕಾಗುತ್ತದೆ. ತಾವು ಇಡೀ ಪತ್ರವನ್ನು ಓದಿ, ಸೂಕ್ತ, ಅತ್ಯಗತ್ಯ, ಸಕಾಲಿಕ ನಿರ್ಧಾರಕ್ಕೆ ಬರುವಿರೆಂಬ ನಂಬುಗೆ ನಮಗಿದೆ.
ನಮ್ಮ ತಕರಾರು, ಸಿಟ್ಟು, ಆತಂಕ ಇರುವುದು ನಿಮ್ಮ ವಾಹಿನಿಯಲ್ಲಿ ಪ್ರತಿನಿತ್ಯ ಬೆಳಿಗ್ಗೆ ೯ ಗಂಟೆಗೆ ಪ್ರಸಾರವಾಗುವ ಬೃಹತ್ ಬ್ರಹ್ಮಾಂಡ ಎಂಬ ಜ್ಯೋತಿಷ್ಯ ಸಂಬಂಧಿ ಕಾರ್ಯಕ್ರಮದ ಕುರಿತು. ಈ ಕಾರ್ಯಕ್ರಮವನ್ನು ನಡೆಸಿಕೊಡುವವರು ಶ್ರೀ ನರೇಂದ್ರ ಬಾಬು ಶರ್ಮ ಎಂಬುವವರು. ಇವರು ನಿಮ್ಮ ಚಾನಲ್ನಲ್ಲಿ ಕಾರ್ಯಕ್ರಮ ನಡೆಸಿಕೊಡುವುದಕ್ಕೆ ಮುನ್ನ ಸುವರ್ಣ ವಾಹಿನಿಯಲ್ಲಿ ಭವ್ಯ ಬ್ರಹ್ಮಾಂಡ ಎಂಬ ಹೆಸರಿನಲ್ಲಿ, ಅದಕ್ಕೂ ಮುನ್ನ ಕಸ್ತೂರಿ ವಾಹಿನಿಯಲ್ಲಿ ಬ್ರಹ್ಮಾಂಡ ಎಂಬ ಹೆಸರಿನಲ್ಲಿ ಇದೇ ಸ್ವರೂಪದ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದರು. ಬಹಳಷ್ಟು ಜನರಿಗೆ ಗೊತ್ತಿರುವ ಪ್ರಕಾರ ತೀರಾ ಇತ್ತೀಚಿನವರೆಗೆ ನರೇಂದ್ರ ಶರ್ಮ ಅವರು ಕನ್ನಡ ಸಿನಿಮಾಗಳಲ್ಲಿ ಜೂನಿಯರ್ ಆರ್ಟಿಸ್ಟ್ ಆಗಿದ್ದವರು.
ನರೇಂದ್ರ ಶರ್ಮ ಅವರು ಕಸ್ತೂರಿ ವಾಹಿನಿ ಹಾಗು ಸುವರ್ಣ ವಾಹಿನಿಗಳಲ್ಲಿ ಬ್ರಹ್ಮಾಂಡ ನಡೆಸುತ್ತಿದ್ದಾಗಲೇ ಅವರು ಬಳಸುವ ಭಾಷೆ, ಹೇಳುವ ಹಸಿಹಸಿ ಸುಳ್ಳುಗಳು ಮಾನವಂತರ, ಪ್ರಜ್ಞಾವಂತರ ಆಕ್ರೋಶಕ್ಕೆ ಕಾರಣವಾಗಿತ್ತು. ಮಹಿಳೆಯರನ್ನು ವಿನಾಕಾರಣ ನಿಂದಿಸುವುದು-ಅವಹೇಳನ ಮಾಡುವುದು, ಕೆಳಜಾತಿಯ ಜನರನ್ನು ಗುರಿಪಡಿಸಿ ತಿರಸ್ಕಾರದಿಂದ ಮಾತನಾಡಿ ಅಪಮಾನಿಸುವುದು, ಜ್ಯೋತಿಷ್ಯದ ಹೆಸರಿನಲ್ಲಿ ಸುಳ್ಳುಗಳ ಕಂತೆ ಕಟ್ಟಿ ಜನರನ್ನು ಬೆದರಿಸುವುದು ಇವರು ಹಿಂದಿನಿಂದ ಮಾಡಿಕೊಂಡು ಬಂದಿರುವ ಕೆಲಸ. ಅದನ್ನು ಅವರು ನಿಮ್ಮ ಜೀ ವಾಹಿನಿಯಲ್ಲೂ ಮಾಡುತ್ತಿದ್ದಾರೆ ಹಾಗು ಅದು ಈಗ ಅತಿರೇಕಕ್ಕೆ ತಲುಪಿದೆ.
ನಿಮ್ಮ ಜೀ ವಾಹಿನಿಯ ವೇದಿಕೆಯನ್ನು ಬಳಸಿಕೊಂಡು ನರೇಂದ್ರ ಶರ್ಮ ಏನೇನು ಮಾತನಾಡಿದ್ದಾರೆ ಎಂಬುದಕ್ಕೆ ಕೆಲವು ಸ್ಯಾಂಪಲ್ಗಳನ್ನು ಇಲ್ಲಿ ಒದಗಿಸುತ್ತಿದ್ದೇವೆ. ದಯವಿಟ್ಟು ಗಮನವಿಟ್ಟು ಓದಬೇಕಾಗಿ ವಿನಂತಿ. ಮತ್ತಷ್ಟು ಓದು 
ಅಗೋಚರ….!
ಹೆಚ್ಚಾಗಿ ಪವಾಡಗಳು… ಪುರುಷರು… ಮಾಯಾ-ಮಂತ್ರ, ಭವಿಷ್ಯ ಮನುಷ್ಯರಿಗೆ ಇಷ್ಟ. ಯಾವ ಭಾಷೆಯಲ್ಲಿ ನೋಡಿದರು ಇಂತಹ ವಿಷಯಗಳಿಗೆ ಸಂಬಂಧಿಸಿದ ಕಥೆಗಳು , ಧಾರಾವಾಹಿಗಳು ಇದ್ದೆ ಇರುತ್ತದೆ. ಅದೊಂತರ ಸೀರಿಯಸ್ ವಿಷಯದ ಚರ್ಚೆ ಮಧ್ಯೆ ಸಣ್ಣ ಜಾಹಿರಾತು ಇದ್ದಂತೆ. ಬೇಕಾದವರು ನೋಡಬಹುದು ಬೇಡದೆ ಇದ್ದವರು ಬಿಸಾಡ ಬಹುದು.
ಹೆಚ್ಚು ಜನಪ್ರಿಯ ವ್ಯಕ್ತಿಗಳಲ್ಲಿ ಸಾಧು ಸಂತರು, ಬಾಬಗಳು ಸೇರುತ್ತಾರೆ. ಕಳೆದವಾರ ಅಣ್ಣ ಹಜಾರೆ ಅವರ ವಿಷಯದ ಜೊತೆಗೆ ಹೆಚ್ಚು ಚಾಲ್ತಿಯಲ್ಲಿ ಕಂಡ ಸಂಗತಿ ಪುಟ್ಟಪರ್ತಿ ಸಾಯಿ ಬಾಬ. ಅತ್ಯಂತ ಜನಪ್ರಿಯ ಬಾಬ ಅವರು, ಜೊತೆಗೆ ಅತ್ಯಂತ ವಿವಾದಿತ ಬಾಬ.
ಬಹುಸಂಖ್ಯಾತ ಉತ್ತರ ಭಾರತೀಯರು ಅವರ ಮನೆಯಲ್ಲಿ ಇರುವ ಒಂದು ಚಂಬು ಪಕ್ಕದ ಮನೆಗೆ ಕೊಡಬೇಕಾದ್ರೂ ಸಾಯಿ ಬಾಬ ಅನುಮತಿ ಕೇಳ್ತಾರೆ ,ತಮಾಷೆ ಅಲ್ಲ ಕಣ್ರೀ ಅಷ್ಟೊಂದು ನಂಬಿಕೆ .ಏನೇ ಸಂಗತಿಗಳು ಇರಲಿ ಅವರು ಅತ್ಯಂತ ಹೆಚ್ಚು ಗಮನ ಸೆಳೆಯುವುದು ಸಮಾಜಮುಖಿ ಕೆಲಸಗಳಿಂದ.ಭಜನ್ ಮಾಡುವಾಗ ಸದಾ ಶಾಂತ ಸ್ಥಿತಿಯಲ್ಲಿರುವ ವದನ, ಆ ಮೌನ ಎಲ್ಲವೂ ಹೆಚ್ಚು ಆಕರ್ಷಣೆಯ ಅಂಶ. ಅವರ ಭಜನ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿದವರು ಸಂತೋಷದಿಂದ ಹೊರ ಬರುತ್ತಾರೆ.
ಸುದ್ದಿ ‘ಮೋಹ’ದ ಪತ್ರಿಕೆಗಳ ಬಗ್ಗೆ…..
ಅರೆಹೊಳೆ ಸದಾಶಿವರಾಯರು
ಕಟೀಲು ದೇವಳಕ್ಕೆ ಶಿಲ್ಪಾ ಶೆಟ್ಟಿ ಬಂದರು!. ಇದು ನಮ್ಮ ಪತ್ರಿಕೆಗಳ ಮಟ್ಟಿಗೆ ಬಹು ಮುಖ್ಯ ಸುದ್ದಿಯಾಯಿತು! ಆಶ್ಚರ್ಯವೆಂದರೆ, ನಮ್ಮ ಪತ್ರಿಕೆಗಳು ಇದನ್ನು ಮುಖ ಪುಟದಲ್ಲಿ ಪ್ರಕಟಿಸಿ ಕೃತಾರ್ಥವಾದುವು. ಆಕೆ ತನ್ನದೇ ಹುಟ್ಟೂರಿಗೆ ಬಂದದ್ದು, ತನ್ನ ಅಜ್ಜಿಮನೆಯಲ್ಲಿ ಓಡಾಡಿದ್ದು, ಕೋಳಿ ಸುಕ್ಕಾ ತಿಂದದ್ದು…..ಎಲ್ಲವು ಸುದ್ದಿಯಾಯಿತು. ಮತ್ತೂ ಒಂದು ವಿಶೇಷ ಸುದ್ದಿ ಎಂದರೆ ಕಟೀಲು ಕ್ಷೇತ್ರವೇ ಈಕೆಯ ಭೇಟಿಯಿಂದ ಪವಿತ್ರವಾಯಿತೇನೋ ಎಂಬಷ್ಟೂ ಸುದ್ದಿಯನ್ನು ಆಕೆ ವಿಮಾನದಲ್ಲಿ ಬಂದಿಳಿದಿದ್ದರಿಂದ, ಮರಳಿ ವಿಮಾನವೇರುವ ತನಕ ಬರೆಯಲಾಯಿತು. ಎಲ್ಲಾ ಪತ್ರಿಕೆಗಳ ಒಬ್ಬೊಬ್ಬ ಪತ್ರಕರ್ತನೂ ಅಷ್ಟು ಹೊತ್ತಿನ ಮಟ್ಟಿಗೆ ಆಕೆಯ ಸಂಸಾರದ ಹಿಂದಿದ್ದ.!
ಈ ಕ್ಷಣದಲ್ಲಿ ನನಗೊಂದು ವಿಷಯ ನೆನಪಿಗೆ ಬರುತ್ತದೆ. ಇತ್ತೀಚೆಗೆ ನಾವು ಒಂದು ಸಮ್ಮೇಳನವನ್ನು ಆಯೋಜಿಸಿದ್ದೆವು. ಅದರ ಉದ್ಘಾಟನಾ ಸಮಾರಂಭದ ವರದಿ ಸವಿಸ್ತಾರವಾಗಿ ಪ್ರಕಟವಾಯಿತು. ಉದ್ಘಾಟನೆ ಮುಗಿಯುತ್ತಲೇ, ಒಂದು ಮಗು ವಾಮಾಚಾರಕ್ಕೆ ಬಲಿಯಾದ ಘಟನೆ ಬಹಿರಂಗ ಗೊಂಡಿತು. ಅದೇ ಸಂಜೆ ನಮ್ಮ ಸಮ್ಮೇಳನದ ಸಮಾರೋಪವೂ ನಡೆಯುತ್ತಿತ್ತು. ಆದರೆ ಸಂಜೆ ಒಬ್ಬನೇ ಒಬ್ಬ ಪತ್ರಕರ್ತನೂ ಅಲ್ಲಿರಲಿಲ್ಲ. ಅಲ್ಲಿನ ಯಾವ ವರದಿಯೂ ದಾಖಲಾಗಲಿಲ್ಲ. ಸಮ್ಮೇಳನದಲ್ಲಿಯೇ ತಲ್ಲೀನರಾಗಿದ್ದ ನಮಗೆ ಇದೇಕೆ ಎಂದು ಆಶ್ಚರ್ಯವಾಯಿತು. ನಂತರ, ನಮಗೆ ಆ ವಾಮಾಚಾರದ ಘಟನೆಯಿಂದ ಸಂಭ್ರಮದ ಘಟನೆಯನ್ನೂ ಮರೆಯುವಷ್ಟು ಘಾಸಿಯಾಯಿತು-ಖೇದವಾಯಿತು. ಮತ್ತಷ್ಟು ಓದು 




