ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮುಸ್ಲಿಂ’

7
ಸೆಪ್ಟೆಂ

ಫ್ರಾನ್ಸಿನ ಸೆಕ್ಯುಲರಿಸಂ ಮತ್ತು ಇಸ್ಲಾಮಿನ ಜಗಳದಲ್ಲಿ ಭಾರತಕ್ಕೇನು ಪಾಠ?

– ವಿನಾಯಕ ಹಂಪಿಹೊಳಿ

726567-burqaಸದ್ಯಕ್ಕೆ ಫ್ರಾನ್ಸಿನಲ್ಲಿ ಬುರ್ಕ ಬ್ಯಾನ್ ಕುರಿತು ಚರ್ಚೆ ನಡೆಯುತ್ತಿದೆ. ಬುರ್ಕಾ ಬ್ಯಾನ್ ತುಂಬಾ ಹಿಂದೆಯೇ ಆಗಿದೆ. ಈ ರೀತಿಯ ನಿಷೇಧಗಳಿಗೆ ಫ್ರಾನ್ಸ್ ಕೊಡುತ್ತಿರುವ ಕಾರಣ ರಿಲಿಜನ್ನುಗಳು ಪ್ರತಿಪಾದಿಸುವ ವಸ್ತ್ರಸಂಹಿತೆಯನ್ನು ಪಬ್ಲಿಕ್ ವಲಯದಲ್ಲಿ ಪಾಲಿಸುವುದು ಅಲ್ಲಿನ ಸೆಕ್ಯುಲರಿಸಂ ಐಡಿಯಾಲಜಿಯೊಂದಿಗೆ ಸರಿಹೊಂದದಿರುವದು. ಫ್ರಾನ್ಸಿನಲ್ಲಿ ಪ್ರಜಾಪ್ರಭುತ್ವದ ಆಡಳಿತವನ್ನು ಚರ್ಚಿನಿಂದ ಪ್ರತ್ಯೇಕಿಸುವ ಪ್ರಕ್ರಿಯೆ ತುಂಬ ಕಟ್ಟುನಿಟ್ಟಾಗಿತ್ತು. ಫ್ರಾನ್ಸಿನ ಸೆಕ್ಯುಲರಿಸಂ ರಿಲಿಜನ್ನನ್ನು ಕೇವಲ ರಾಜಕೀಯದಿಂದಷ್ಟೇ ಪ್ರತ್ಯೇಕಿಸುವದಷ್ಟೇ ಅಲ್ಲ, ಫ್ರಾನ್ಸ್ ದೇಶವು ಯಾವ ರಿಲಿಜನ್ನಿನೊಂದಿಗೂ ಗುರುತಿಸಿಕೊಳ್ಳಬಾರದು ಎನ್ನುವದು ಅದರ ಆಶಯ. ಆದ್ದರಿಂದ ಫ್ರಾನ್ಸ್ ದೇಶವು ತನ್ನನ್ನು ತಾನು ರಿಪಬ್ಲಿಕ್ ಮತ್ತು ಸೆಕ್ಯುಲರ್ ದೇಶವೆಂದು ಘೋಷಿಸಿಕೊಂಡಿತ್ತು. ಈ ರೀತಿಯ ಲಿಬರಲ್ ಸೆಕ್ಯುಲರಿಸಂ ಅನ್ನು ಬರೀ ಕ್ರಿಶ್ಚಿಯನ್ನರೇ ತುಂಬಿಕೊಂಡಿದ್ದ ದೇಶದಲ್ಲಿ ಈ ರೀತಿಯ ಸೆಕ್ಯುಲರಿಸಂ ಅನ್ನು ಜಾರಿಗೆ ತರುವದು ಅಷ್ಟು ಕಷ್ಟವಾಗಿರಲಿಲ್ಲ. ಮತ್ತಷ್ಟು ಓದು »

10
ಜೂನ್

ಪಂಚ ಭೂತಗಳಲ್ಲಿ ಲೀನವಾದ ವಿಚಾರವಾದ! (ಸುಳ್ಸುದ್ದಿ)

-ಪ್ರವೀಣ್ ಕುಮಾರ್, ಮಾವಿನಕಾಡು

sulsuddi (2)ಖ್ಯಾತ ವಿಚಾರವಾದಿ, ಸಾಹಿತಿ, ಬುದ್ಧಿಜೀವಿ, ಹಿಂದೇ ಎನ್ನುವ ಹೆಸರಿನಿಂದಲೇ ಪ್ರಖ್ಯಾತರಾಗಿದ್ದ ಹಿಂದೂಪುರ ದೇವಮೂರ್ತಿಯವರು ವಯೋಸಹಜ ಖಾಯಿಲೆಗಳ ಪರಿಣಾಮ ನಿನ್ನೆ ತಮ್ಮ ಸ್ವಗೃಹ ‘ದೇವಿ ಕೃಪಾ’ ದಲ್ಲಿ ಮೃತರಾದರು. ಅವರಿಗೆ ಎಪ್ಪತ್ಮೂರು ವರ್ಷ ವಯಸ್ಸಾಗಿತ್ತು. ಅವರು ಮುಜರಾಯಿ ಇಲಾಖೆಯ ಸಹಾಯಕ ನಿರ್ದೇಶಕರಾದ ಅರುಣ್ ಜೋಸೆಫ್ ಮತ್ತು ಮಗಳು ದೇವಿಶ್ರೀ, ಅಳಿಯ ಅಮೆರಿಕಾದಲ್ಲಿ ಖ್ಯಾತ ಪುರೋಹಿತರಾಗಿರುವ ಕ್ರಿಷ್ ಭಟ್ ಮತ್ತು ಐವರು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮತ್ತಷ್ಟು ಓದು »

14
ಜನ

ಬೊಳುವಾರರ “ಮುಸ್ಲಿಮನಾಗಿರುವುದೆಂದರೆ…” ಲೇಖನದ ಸುತ್ತ ಒಂದು ಚರ್ಚೆ- ಭಾಗ೨

ಬೊಳುವಾರರ “ಮುಸ್ಲಿಮನಾಗಿರುವುದೆಂದರೆ…” ಲೇಖನದ ಸುತ್ತ ಒಂದು ಚರ್ಚೆ ಭಾಗ೧

– ಪ್ರೇಮಶೇಖರ

ಶ್ರೀಯುತ ದಿನೇಶ್ ಅಮೀನ್,

ಮುಸ್ಲಿಮನಾಗಿರುವುದೆಂದರೆ.. ಬೊಳುವಾರುನಿಮ್ಮ ಉತ್ತರದ ಮೊದಲೆರಡು ಕಂತುಗಳನ್ನು ಓದಿ, ಅವುಗಳಲ್ಲಿನ ಕೊಂಕು ಮತ್ತಿತರ ನಕಾರಾತ್ಮಕ ಅಂಶಗಳನ್ನು ನಿರ್ಲಕ್ಷಿಸಿ, ಅವುಗಳಲ್ಲಿರುವ ವೈಚಾರಿಕತೆಯನ್ನಷ್ಟೇ ಗಮನಕ್ಕೆ ತೆಗೆದುಕೊಂಡೆ. ನಿಮ್ಮ ಮಾತುಗಳಿಗೆ ರೋಹಿತ್ ಚಕ್ರತೀರ್ಥರು ಸಮರ್ಪಕವಾಗಿಯೇ ಉತ್ತರಿಸಿದ್ದಾರೆ. ಆದಾಗ್ಯೂ, ನಿಮಗೆ ಉತ್ತರಿಸಬೇಕಾದ್ದು ನನ್ನ ಜವಾಬ್ಧಾರಿ ಎಂಬ ಅರಿವಿನಿಂದ ದೀರ್ಘ ವಿವರಣೆಗಳುಳ್ಳ ಪ್ರತಿಕ್ರಿಯೆಯನ್ನು ಸಿದ್ಧಪಡಿಸಿದ್ದೆ. ಇಸ್ಲಾಂ ಏಶಿಯಾ, ಯೂರೋಪ್ ಮತ್ತು ಆಫ್ರಿಕಾಗಳ ಬಹುಪಾಲು ನಾಡುಗಳಿಗೆ ಪ್ರಸರಿಸಿದ್ದು ಆಕ್ರಮಣದ ಮೂಲಕ ಎಂದು ಹೇಳಲು ಬಳಸಿದ ‘ಕತ್ತಿಯ ಮೂಲಕ’ ಎಂಬ ಮಾತನ್ನು ನೀವು ತಿಳಿದೋ ತಿಳಿಯದೆಯೋ ಅಪಾರ್ಥ ಮಾಡಿಕೊಂಡು ಕತ್ತಿಯ ಉಗಮದ ಬಗ್ಗೆ ಮಾತೆತ್ತಿ ಇಡೀ ಚರ್ಚೆಯನ್ನು ದಾರಿ ತಪ್ಪಿಸಲು ಹೋದ ನಿಮ್ಮ ವಾದಸರಣಿ; ಹಿಂದೂ-ಮುಸ್ಲಿಂ ಎಂದು ಧಾರ್ಮಿಕ ಸಂಘರ್ಷದ ಬಗ್ಗೆ ಹೇಳುತ್ತಲೇ ಹಠಾತ್ತಾಗಿ ಕಾಂಗ್ರೆಸ್-ಬಿಜೆಪಿ (ಗುಜರಾತ್ ೨೦೦೨-ದೆಹಲಿ ೧೯೮೪) ಎಂದು ರಾಜಕೀಯ ಆಯಾಮಕ್ಕೆ ಜಿಗಿಯುವ ನಿಮ್ಮ ಗೊಂದಲಮಯ ಚಿಂತನಾಧಾಟಿ; ರಕ್ತಪಾತಕ್ಕೆ ಸಂಬಂಧಿಸಿದಂತೆ ಹಿಂದೂಗಳ ವಿರುದ್ಧ ಆರೋಪಗಳನ್ನು ಮಾಡುತ್ತಲೇ ಅದೇ ವಿಷಯಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ಬಗ್ಗೆ ಪಕ್ಷಪಾತಿ ನಿಲುವು ತೋರುವ ನಿಮ್ಮ ವಿರೋಧಾಭಾಸಪೂರ್ಣ, ಅತಾರ್ಕಿಕ ನಡೆಗಳು- ಎಲ್ಲವುಗಳತ್ತ ಸೂಕ್ತ ಉದಾಹರಣೆಗಳ ಮೂಲಕ ನಿಮ್ಮ ಗಮನ ಸೆಳೆಯಲು ಪ್ರಯತ್ನಿಸಿದ್ದೆ. ಅದು ನಮ್ಮ ನಾಡಿನ ಇತಿಹಾಸದ ಬಗ್ಗೆ, ವರ್ತಮಾನದ ಬಗ್ಗೆ ಒಂದು ಆರೋಗ್ಯಕರ ಚರ್ಚೆಗೆ ಅವಕಾಶ ಮಾಡಿಕೊಡುತ್ತದೆಂದು ನಂಬಿದ್ದೆ. ಆದರೆ ನಿಮ್ಮ ನಾಲ್ಕನೆಯ ಕಂತನ್ನು ಓದಿದ ನಂತರ ನಿಮ್ಮೊಂದಿಗೆ ನಾಗರಿಕ ವಿಧಾನದಲ್ಲಿ ಸಂವಾದ ನಡೆಸುವುದು ಸಾಧ್ಯವಿಲ್ಲ ಎಂದರಿವಾಯಿತು. ಇಷ್ಟಾಗಿಯೂ, ಸುಮ್ಮನುಳಿದುಬಿಡುವುದೂ ಸರಿಯೆನಿಸಲಿಲ್ಲ. ಹೀಗಾಗಿ ಆ ದೀರ್ಘ, ವಿವರಣಾತ್ಮಕ ಉತ್ತರವನ್ನು ಬದಿಗಿರಿಸಿ ಒಂದೆರಡು ಮೂಲಭೂತ ಪ್ರಶ್ನೆಗಳನ್ನಷ್ಟೇ ಎತ್ತಿಕೊಂಡು ಆ ಬಗ್ಗೆ ಸಂಕ್ಷಿಪ್ತವಾಗಿ ನಿಮಗೆ ಕೆಲವು ಮಾತುಗಳನ್ನು ಹೇಳಲು ಇಲ್ಲಿ ಪ್ರಯತ್ನಿಸಿದ್ದೇನೆ. ಇವುಗಳಲ್ಲಿ ಹೆಚ್ಚಿನವು ನಾನು ಸ್ವಂತ ಅಧ್ಯಯನ, ಅವಲೋಕನ, ಚಿಂತನೆಯ ಮೂಲಕ ಗಳಿಸಿದವುಗಳಾದ್ದರಿಂದ ನಿಮಗೆ ಬೇರೆಲ್ಲೂ ಸಿಗಲಾರವು. “ನಾನು ಲೇಖಕನ ವ್ಯಕ್ತಿತ್ವವನ್ನು ಆತನ ಲೇಖನಗಳ ಮೂಲಕವೇ ಅರ್ಥಮಾಡಿಕೊಳ್ಳುತ್ತಾ ಬಂದವನು” ಎಂದು ವಾರದ ಹಿಂದೆ ಘೋಷಿಸಿದ ನೀವು ನಿಮ್ಮ ಮಾತಿಗೆ ಸತ್ಯವಾಗಿ ನಡೆದುಕೊಂಡಿದ್ದರೆ ಇದನ್ನೆಲ್ಲಾ ಹೇಳಬೇಕಾದ ಅಗತ್ಯ ನನಗೆ ಬರುತ್ತಲೇ ಇರಲಿಲ್ಲ.

ಮೊದಲಿಗೆ ಒಂದು ಸ್ಪಷ್ಟೀಕರಣ- ಮಾನವರೆಲ್ಲರೂ ಸಮಾನರು ಎಂಬ ಧೃಡನಂಬಿಕೆಯ ತಳಹದಿಯ ಮೇಲೆ ಗಟ್ಟಿಯಾಗಿ ನಿಂತು ಎಲ್ಲ ಬಗೆಯ ಹಿಂಸೆ, ಶೋಷಣೆ, ತಾರತಮ್ಯಗಳನ್ನು ತಿರಸ್ಕರಿಸುವುದು ನನ್ನ ಜೀವನಮೌಲ್ಯ. ವಿಮರ್ಶೆಯನ್ನು ಸ್ವಾಗತಿಸುವ ಧರ್ಮದ ವಿರುದ್ಧ ಪುಂಖಾನುಪುಂಖ ಹೇಳಿಕೆ ನೀಡುವ, ವಿಮರ್ಶೆಗೆ ಬದಲಾಗಿ ತಲೆದಂಡ ಕೇಳುವ ಧರ್ಮದ ಬಗ್ಗೆ ಜಾಣಮೌನ ವಹಿಸುವ ಚತುರಮತಿ ಬುದ್ಧಿಜೀವಿ ನಾನಲ್ಲ. ಅಲ್ಲದೇ, ಹಣ, ಪ್ರಶಸ್ತಿ, ಸ್ಥಾನಮಾನಗಳ ಹುಚ್ಚೂ ನನಗಿಲ್ಲ.

ಮತ್ತಷ್ಟು ಓದು »

5
ಜನ

ಬೊಳುವಾರರ “ಮುಸ್ಲಿಮನಾಗಿರುವುದೆಂದರೆ…” ಲೇಖನದ ಸುತ್ತ ಒಂದು ಚರ್ಚೆ

ಇತ್ತೀಚೆಗೆ, ಲೇಖಕ ರೋಹಿತ್ ಚಕ್ರತೀರ್ಥ ಅವರ ಕಥಾಸಂಕಲನಕ್ಕೆ ಹಿರಿಯ ಲೇಖಕರಾದ ಬೊಳುವಾರ ಮಹಮ್ಮದ್ ಕುಂಞ್ ಯವರು ಮುನ್ನುಡಿ ಬರೆದಿರುವ ವಿಷಯವಾಗಿ ಫೇಸ್ಬುಕ್ಕಿನಲ್ಲಿ ವಾದ-ವಿವಾದಗಳು ನಡೆಯುತ್ತಿವೆ.ಅದಕ್ಕೆ ಪ್ರತಿಕ್ರಿಯಿಸಿದ ಬೊಳುವಾರರು, ಮೂವತ್ತು ವರ್ಷಗಳ ಹಿಂದೆ ಬರೆದಿದ್ದ “ಮುಸ್ಲಿಮನಾಗಿರುವುದೆಂದರೆ…” ಲೇಖನವನ್ನು ನೆನೆಸಿಕೊಂಡರು.ಆ ಲೇಖನದ ಕುರಿತಾಗಿ ಕಥೆಗಾರರು ಮತ್ತು ವಿಜಯವಾಣಿಯ ಅಂಕಣ ಬರಹಗಾರರಾದ ಪ್ರೇಮಶೇಖರ ಅವರು ತಮ್ಮ ವಾಲ್ನನಲ್ಲೊಂದು ಅಭಿಪ್ರಾಯ ಹಾಕಿದ್ದರು.ಆ ಅಭಿಪ್ರಾಯದ ಕುರಿತು ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಅವರು “ಪ್ರೇಮಶೇಖರ ಅವರೇ, ನಿಮ್ಮಲ್ಲಿ ಲೇಖನ ಇದ್ದರೆ ಮತ್ತೊಮ್ಮೆ ಓದಿ. ಯಾವುದು ಬದಲಾಗಿದೆ? ಮುಸ್ಲಿಮರನ್ನು ಹಿಂದುತ್ವವಾದಿಗಳು ನೋಡುವ ಯಾವ ದೃಷ್ಟಿ ಬದಲಾಗಿದೆ ಎಂದು ಒಂದೊಂದಾಗಿ ಹೇಳಿಬಿಡಿ” ಎಂದಿದ್ದರು.ಪ್ರೇಮಶೇಖರ ಅವರು ಅಮೀನರಿಗೆ ಕೊಟ್ಟ ಉತ್ತರ ಇಲ್ಲಿದೆ… ಜೊತೆಗೆ ಬೊಳುವಾರರ ಹಳೇ ಲೇಖನದ ಪ್ರತಿಯೂ ಇದೆ – ನಿಲುಮೆ

– ಪ್ರೇಮ ಶೇಖರ ಅವರ ಮೊದಲ ಅಭಿಪ್ರಾಯ 

ಮುಸ್ಲಿಮನಾಗಿರುವುದೆಂದರೆ.. ಬೊಳುವಾರುಬೊಳುವಾರರು “ಸುಧಾ” ಸಾಪ್ತಾಹಿಕದಲ್ಲಿ “ಮುಸ್ಲಿಮನಾಗಿರುವುದೆಂದರೆ…” ಎಂಬ ಲೇಖನ ಬರೆದು ಮೂವತ್ತನಾಲ್ಕೂವರೆ ವರ್ಷಗಳಾಗುತ್ತಾ ಬಂದಿವೆ. ಈ ಆವಧಿಯಲ್ಲಿ ನೇತ್ರಾವತಿಯಲ್ಲಿ ಅದೆಷ್ಟು ನೀರು ಹರಿದಿದೆ! ಹಾಗೆಯೇ ಬೊಳುವಾರರು ಬೆಳೆಯುತ್ತಾ ಹೋಗಿದ್ದಾರೆ, ಅದು ಅವರ ಹೆಗ್ಗಳಿಕೆ. ಆದರೆ ಅದಕ್ಕೆ ವಿರುದ್ಧವಾಗಿ, ಆ ಲೇಖನವನ್ನು ಅಂದು ಓದಿದವರು ಅಲ್ಲೇ ಉಳಿದುಬಿಟ್ಟಿದ್ದಾರೆ. ಹೀಗಾಗಿ ಕರ್ನಾಟಕದ ಸಾಂಸ್ಕೃತಿಕ ವಾತಾವರಣ ಅಧಃಪಾತಾಳಕ್ಕಿಳಿಯುತ್ತಿದೆ.

ಮೂವತ್ತೂ ದಾಟದ ಆ ದಿನಗಳಲ್ಲಿ ಬೊಳುವಾರರು ಬರೆದ, ವೈಚಾರಿಕತೆಗಿಂತಲೂ ಭಾವನಾತ್ಮಕತೆಗೆ ಒತ್ತುಕೊಟ್ಟಿದ್ದ, ಆ ಲೇಖನದಲ್ಲಿ ಒಳ್ಳೆಯ ಒಳನೋಟಗಳಿದ್ದಂತೇ ಉಪಖಂಡದ ಇತಿಹಾಸದ ಬಗ್ಗೆ, ದೇಶವಿಭಜನೆಯ ಬಗ್ಗೆ ಹಲವು ತಪ್ಪುಗ್ರಹಿಕೆಗಳೂ ಇದ್ದವು. ಭಾರತಕ್ಕೆ ಮುಸ್ಲಿಮರ, ನಂತರ ಬ್ರಿಟಿಷರ ಆಗಮನದ ಸ್ವರೂಪದ ಬಗ್ಗೆ, ದೇಶವಿಭಜನೆಯ ಬಗ್ಗೆ ಬೊಳುವಾರದ ತಿಳುವಳಿಕೆಗಳಲ್ಲಿ ಅಸ್ಪಷ್ಟತೆಯಿತ್ತು. ನನಗೆ ತಕ್ಷಣಕ್ಕೆ ನೆನಪಾಗುವುದು ಇದು- “ಪಾಕಿಸ್ತಾನ ಬೇಕೇ ಬೇಡವೇ ಎಂದು ಒಂದು ಜನಮತಗಣನೆ ನಡೆಯಿತಂತೆ, ಆದರೆ ಅಂಥದು ನಡೆದ ಬಗ್ಗೆ ನನ್ನ ತಂದೆಯವರಿಗೆ ಗೊತ್ತೇ ಇಲ್ಲ” ಎಂಬುದಾಗಿ ಬೊಳುವಾರರು ಬರೆದಿದ್ದರು. ವಾಸ್ತವವೆಂದರೆ ಬೊಳುವಾರರ ತಂದೆಯವರಿಗೆ ಆ ಜನಮತಗಣನೆಯ ಬಗ್ಗೆ ಗೊತ್ತಾಗಿ ಅವರದರಲ್ಲಿ ಭಾಗಿಯಾಗುವ ಸಾಧ್ಯತೆಯೇ ಇರಲಿಲ್ಲ. ಯಾಕೆಂದರೆ ಅಂಥದೊಂದು ಆಯ್ಕೆ ಎದುದಾದದ್ದು ಗಡಿನಾಡು ಪ್ರಾಂತ್ಯ ಮತ್ತು ಸಿಲ್ಹೆಟ್ (ಈಗ ಬಾಂಗ್ಲಾದೇಶದಲ್ಲಿದೆ) ಜಿಲ್ಲೆಯ ಜನತೆಗೆ ಮಾತ್ರ. ದೇಶವಿಭಜನೆಯ ನಿಜವಾದ ಆರೋಪಿಗಳಾದ ಮುಸ್ಲಿಂ ಲೀಗ್‍ ಮತ್ತು ಬ್ರಿಟಿಷರ ಪಾತ್ರವನ್ನು ಕಡೆಗಣಿಸಿ ಪರಿಸ್ಥಿತಿಯ ಕೈಗೊಂಬೆಯಾದ ಕಾಂಗ್ರೆಸ್‍ನ ಪಾತ್ರವನ್ನು ದೊಡ್ಡದಾಗಿ ತೋರಿಸುವ ಪ್ರಯತ್ನವೂ ಆ ಲೇಖನದಲ್ಲಿತ್ತು. ಕೋಮುವಾದದ ಉಗಮದ ಬಗೆಗೂ ಅಂಥದೇ ತಪ್ಪುತಿಳುವಳಿಕೆಯ ಭಾವನಾತ್ಮಕ ವಿವರಣೆಗಳಿದ್ದವು. ಅಂಥದೊಂದು ತಪ್ಪುಗ್ರಹಿಕೆಯನ್ನು ಎರಡುವಾರಗಳ ನಂತರ ಸಮುದ್ರಮಧನ ವಿಭಾಗದಲ್ಲಿ ಪ್ರಜ್ಞಾವಂತ ಓದುಗರೊಬ್ಬರು “ಮುಸ್ಲಿಂ ಲೀಗ್ ಯಾವಾಗ ಸ್ಥಾಪನೆಯಾಯಿತು, ಆರ್‌ಎಸ್‌ಎಸ್ ಯಾವಾಗ ಸ್ಥಾಪನೆಯಾಯಿತು ಎಂದು ನೋಡಿದರೆ ಯಾವುದು ಯಾವುದಕ್ಕೆ ಪ್ರತಿಕ್ರಿಯೆ ಎಂದು ತಿಳಿಯುತ್ತದೆ” ಎಂಬುದಾಗಿ ಹೇಳುವುದರ ಮೂಲಕ ಬೊಳುವಾರರಿಗೆ ಈ ದೇಶದ ಚರಿತ್ರೆಯ ಒಂದು ಸತ್ಯವನ್ನು ಮನಗಾಣಿಸಲು ಪ್ರಯತ್ನಿಸಿದ್ದರು. ನಂತರ ಬೊಳುವಾರದು ಬೆಳೆಯುತ್ತಾ ಹೋದರು. ಐದೇ ತಿಂಗಳಲ್ಲಿ “ದೇವರುಗಳ ರಾಜ್ಯದಲ್ಲಿ” ಎಂಬ ಅದ್ಭುತ ಕಥೆ ರಚಿಸಿದರು. ಅವರ ಬೆಳವಣಿಗೆಯ ಓಟ ಇನ್ನೂ ಸಾಗಿದೆ. ನನಗವರು ಅನುಕರಣೀಯವಾಗುವುದು, ಈ ನಾಡಿಗೆ ಅವರು ಮುಖ್ಯವಾಗುವುದು ಈ ಕಾರಣಕ್ಕಾಗಿ.

ದುರಂತವೆಂದರೆ ಆ ಲೇಖನವನ್ನು ಅಂದು ಓದಿದವರು ಅದನ್ನೇ ಪವಿತ್ರಗ್ರಂಥವೆಂದು ಇಂದಿಗೂ ನಂಬಿಬಿಟ್ಟಿದ್ದಾರೆ. ಅದರಾಚೆಗೆ ಬೆಳೆಯುವ ಪ್ರಯತ್ನವನ್ನೇ ಅವರು ಮಾಡಿಲ್ಲ. ತಾವೂ ಬೆಳೆಯಲಿಲ್ಲ, ಕರ್ನಾಟಕವನ್ನೂ ಬೆಳೆಯಲು ಬಿಡುತ್ತಿಲ್ಲ. ಬೊಳುವಾರರನ್ನೂ ಅಂದಿನ ದಿನಗಳಿಗೇ ಕಟ್ಟಿಹಾಕಲು ನೋಡುತ್ತಿದ್ದಾರೆ. ನಮ್ಮ ಬೊಳುವಾರರನ್ನೂ, ನಮ್ಮ ನಾಡನ್ನೂ, ನಮ್ಮ ಸಾಂಸ್ಕೃತಿಕ ಚಿಂತನೆಯನ್ನೂ ಈ ಪ್ರತಿಗಾಮಿಗಳಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ.

ಮತ್ತಷ್ಟು ಓದು »

14
ಮೇ

ನಾಡು-ನುಡಿ : ಮರುಚಿಂತನೆ – ಮೂಲಭೂತವಾದದ ಒಂದು ಸೆಕ್ಯುಲರ್ ಅವತಾರ

– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ

ಮೂಲಭೂತವಾದಿ ಸೆಕ್ಯುಲರಿಸಂಪ್ರಗತಿಪರರು ಕ್ರೈಸ್ತ ಹಾಗೂ ಮುಸ್ಲಿಂ ಸಮಾಜಗಳನ್ನು ಟೀಕಿಸುವ ಕ್ರಮಕ್ಕೂ ಹಿಂದೂ ಸಮಾಜವನ್ನು ಟೀಕಿಸುವ ಕ್ರಮಕ್ಕೂ ಒಂದು ಮೂಲಭೂತ ವ್ಯತ್ಯಾಸವಿದೆ. ಆ ಸಮಾಜಗಳಲ್ಲಿ ಯಾವುದಾದರೂ ತಪ್ಪು ಆಚರಣೆಯ ಕುರಿತು ಚರ್ಚೆ ಎದ್ದರೆ ಅವನ್ನು ಅವರ ಪವಿತ್ರಗ್ರಂಥಗಳು ಸಮರ್ಥಿಸಲು ಸಾಧ್ಯವೇ ಇಲ್ಲ ಎಂಬುದು ಇವರ ಧೃಡ ನಂಬಿಕೆ. ಅವು ಏನಿದ್ದರೂ ಇಂದಿನ ಅನುಯಾಯಿಗಳ ಅಜ್ಞಾನಕ್ಕೆ ಸಂಬಂಧಿಸಿದ್ದು ಅಷ್ಟೆ. ಉದಾಹರಣೆಗೆ, ಇಂದು ಭಯೋತ್ಪಾದನೆಯ ಕುರಿತು ನಡೆಯುವ ಚರ್ಚೆಗಳನ್ನು ಗಮನಿಸಿ. ಪ್ರತಿಯೊಬ್ಬರೂ ಕೂಡ ಅವು ಇಸ್ಲಾಂನ ಪವಿತ್ರಗ್ರಂಥಗಳಿಗೆ ವಿರುದ್ಧವಾಗಿವೆ ಎಂಬ ತರ್ಕವನ್ನಿಟ್ಟೇ ಅವುಗಳನ್ನು ಖಂಡಿಸುತ್ತಾರೆ. ಅಂದರೆ ಅವರ ಕೃತ್ಯಗಳನ್ನು ಇಸ್ಲಾಂನ ನಿರ್ದೇಶನಗಳಲ್ಲ ಎಂಬುದಾಗಿ ನೋಡುವುದು ಅತ್ಯಂತ ನಿರ್ಣಾಯಕವಾಗಿದೆ. ಜಿಹಾದಿಗೆ ಸಂಬಂಧಿಸಿದಂತೆ, ಬುರ್ಖಾಕ್ಕೆ ಸಂಬಂಧಿಸಿದಂತೆ, ತಲಾಖ್‍ಗೆ ಸಂಬಂಧಿಸಿದಂತೆ, ಹೀಗೆ ಇದುವರೆಗೆ ಎಷ್ಟು ಚರ್ಚೆಗಳು ಎದ್ದಿವೆಯೋ ಅವುಗಳಲ್ಲೆಲ್ಲ ಎಲ್ಲೂ ಕೂಡ ಪವಿತ್ರ ಗ್ರಂಥದ ನಿಂದನೆ ಆಗದಂತೇ ಎಚ್ಚರವಹಿಸಿ ವಾದಗಳನ್ನು ಬೆಳೆಸಲಾಗುತ್ತದೆ. ಅಂದರೆ ಇಸ್ಲಾಂ ರಿಲಿಜನ್ನು ಮೂಲತಃ ಒಳ್ಳೆಯದು, ಇಂದಿನ ದುಷ್ಪರಿಣಾಮಕ್ಕೆ ಅದು ಹೊಣೆಯಲ್ಲ ಎಂಬುದು ಇವರ ವಾದ.

ಇದರಲ್ಲೇನು ಸ್ವಾರಸ್ಯ? ಎಂದು ನೀವು ಹುಬ್ಬೇರಿಸಬಹುದು. ಪ್ರತಿಯೊಂದು ಮತಾನುಯಾಯಿಗಳಿಗೂ ತಮ್ಮ ಮತದ ಕುರಿತು ನಂಬಿಕೆ ಇರುವುದು ಸ್ವಾಭಾವಿಕ. ಆದರೆ ನಾನು ಹೇಳುತ್ತಿರುವುದು ಶ್ರದ್ಧಾವಂತ ಮುಸ್ಲಿಮರ ಕಥೆಯಲ್ಲ, ಬದಲಾಗಿ ತಾವು ಪ್ರಗತಿಪರರೆಂದು, ಸೆಕ್ಯುಲರ್‍ವಾದಿಗಳು ಅಥವಾ ಬುದ್ಧಿಜೀವಿಗಳೆಂದು ಕರೆದುಕೊಂಡ ಮುಸ್ಲಿಮರ ಕಥೆ. ಇದು ಮುಸ್ಲಿಂ ಬುದ್ಧಿಜೀವಿಗಳದೊಂದೇ ಕಥೆಯಲ್ಲ, ಸೆಕ್ಯುಲರ್ ಎಂದು ಕರೆದುಕೊಂಡ ಹಿಂದೂ ಬುದ್ಧಿಜೀವಿಗಳ ಕಥೆ ಕೂಡಾ ಹೌದು.  ಅಂದರೆ ಯಾವ ರಿಲಿಜನ್ನುಗಳಿಗೂ ಸೇರದೇ ತಟಸ್ಥವಾಗಿ ಚಿಂತನೆ ನಡೆಸಬೇಕೆಂದು ಪ್ರತಿಪಾದಿಸುವವರು. ಇದುವರೆಗೆ ಮುಸ್ಲಿಮರ ಪವಿತ್ರಗ್ರಂಥವೇ ಸರಿಯಿಲ್ಲ ಎಂದು ಯಾವ ಮುಸ್ಲಿಂ ಅಥವಾ ಹಿಂದೂ ಸೆಕ್ಯುಲರ್ ಬುದ್ಧಿಜೀವಿ ಕೂಡ ಹೇಳಿದ್ದು ನಾನು ಕೇಳಿಲ್ಲ. ಹಾಗಂತ ಅವರು ಹಾಗೆ ಹೇಳಬೇಕಿತ್ತು ಅಂತಾಗಲೀ, ಯಾರದಾದರೂ ಪವಿತ್ರಗ್ರಂಥವನ್ನು ನಿಂದಿಸುವುದು ಸರಿಯೆಂದಾಗಲೀ ನಾನಿಲ್ಲಿ ಸೂಚಿಸುತ್ತಿಲ್ಲ ಎಂಬುದನ್ನು ಸ್ಪಷ್ಟೀಕರಿಸುತ್ತೇನೆ. ನಾನು ನಿಮ್ಮ ಗಮನ ಸೆಳೆಯಲೆತ್ನಿಸುವುದು ನಮ್ಮ ಬುದ್ಧಿಜೀವಿಗಳ ಈ ಧೋರಣೆಯ ಕುರಿತು. ಅವರು ಅಪ್ರಾಮಾಣಿಕರು ಅಂತ ನನ್ನ ಹೇಳಿಕೆಯಲ್ಲ. ಅವರಿಗೆ ನಿಜವಾಗಿಯೂ ಹಾಗೇ ಅನಿಸುತ್ತದೆ ಅಂತಲೇ ಇಟ್ಟುಕೊಳ್ಳೋಣ.
ಮತ್ತಷ್ಟು ಓದು »

6
ಡಿಸೆ

ರಾಮ ಜನ್ಮಭೂಮಿ/ಬಾಬರಿ ವಿವಾದ : ಭೂತಕಾಲದ ತಪ್ಪುಗಳು ಭವಿಷ್ಯಕ್ಕೆ ಭಾರವಾಗಬಾರದು

– ರಾಕೇಶ್ ಶೆಟ್ಟಿ

Ayodhya Issue and Unityಮುಂಬೈನಿಂದ ನಾನು ಬೆಂಗಳೂರಿಗೆ ಹೊರಟಿದ್ದ ಸೆಪ್ಟಂಬರ್ ೩೦,೨೦೧೦ರ ಗುರುವಾರದ ಆ ದಿನ ಉಳಿದ ದಿನಗಳಂತೆ ಇರಲಿಲ್ಲ.ಒಂದು ಬಗೆಯ ಕುತೂಹಲ,ಕಾತರ,ಆತಂಕಗಳು ಭಾರತದ ಬಹುತೇಕರಲ್ಲಿ ಮನೆ ಮಾಡಿದ್ದ ದಿನವದು.ಅಲಹಬಾದ್ ಉಚ್ಚ ನ್ಯಾಯಾಲಯ ಅಯೋಧ್ಯೆಯ “ರಾಮ ಜನ್ಮ ಭೂಮಿ/ಬಾಬರಿ ಮಸೀದಿ” ವಿವಾದದ ಕುರಿತು ತೀರ್ಪು ನೀಡುವ ದಿನವಾಗಿತ್ತದು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಹಳಷ್ಟು ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿದ್ದವು,ಸೂಕ್ಷ್ಮ,ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಖಾಕಿ ಪಡೆಯ ಕಣ್ಗಾವಲಿತ್ತು.ಜನರ ಜೊತೆಗೆ ವಿಶೇಷವಾಗಿ ಟಿ.ಆರ್.ಪಿ ಮಾಧ್ಯಮಗಳು ಕೂಡ ಸಂಯಮದಿಂದ ವರ್ತಿಸಬೇಕು ಎನ್ನುವ ಮನವಿಗಳು ಸರ್ಕಾರದಿಂದಲೇ ಬರುತಿತ್ತು.ಮಧ್ಯಾಹ್ನ ೩.೩೦ರ ಸುಮಾರಿಗೆ ತೀರ್ಪು ಹೊರಬರಲಿದೆ ಎನ್ನುವ ಸುದ್ದಿಗಳು ಹರಿದಾಡುತಿದ್ದವು.ನನ್ನ ವಿಮಾನವಿದ್ದಿದ್ದು ಸಂಜೆಯ ವೇಳೆಗೆ.ಆದರೆ,ಬಾಬರಿ ಮಸೀದಿ ಧರಾಶಾಹಿಯಾದ ಮೇಲೆ ಭೀಕರ ದಂಗೆಗೆ ಸಾಕ್ಷಿಯಾಗಿದ್ದ ಮುಂಬೈನಲ್ಲಿ ತೀರ್ಪು ಹೊರಬಂದ ಮೇಲೆ ಏನಾದರೂ ಆಗಬಾರದ್ದು ಶುರುವಾದರೇ,ಅದಕ್ಕೂ ಮುಖ್ಯವಾಗಿ ನಾನು ಹೋಗಬೇಕಾದ ದಾರಿಯಲ್ಲೇ “ಅತಿ ಸೂಕ್ಷ್ಮ ಪ್ರದೇಶ”ಗಳು ಇದ್ದವಾದ್ದರಿಂದ,ಸೇಫರ್ ಸೈಡ್ ಎಂಬಂತೆ ತುಸು ಬೇಗವೇ ನಾನು ಮತ್ತು ನನ್ನ ಸಹುದ್ಯೋಗಿ ಕ್ಯಾಬ್ ಹತ್ತಿಕೊಂಡೆವು.

ಕ್ಯಾಬ್ ಹೊರಟಂತೇ,ಡ್ರೈವರ್ ಅನ್ನು ಮಾತಿಗೆಳೆದೆ.”ಇವತ್ತು ತೀರ್ಪು ಬರಲಿಕ್ಕಿದೆಯಲ್ಲ.ನಿಮಗೇನನ್ನಿಸುತ್ತದೆ,ಆ ಜಾಗ ಯಾರಿಗೆ ಸೇರಿಬೇಕು ನಿಮ್ಮ ಪ್ರಕಾರ?”.ಅವರು ನನ್ನತ್ತ ತಿರುಗಿ “ತಪ್ಪು ತಿಳಿಯಬೇಡಿ ಸರ್.ನಿಮ್ಮ ಪ್ರಶ್ನೆಯೇ ಸರಿಯಿಲ್ಲ.ಜಾಗ ಯಾರಿಗೆ ಸೇರಬೇಕು ಎನ್ನುವುದು ‘ಅಹಂ’ನ ಪ್ರಶ್ನೆಯಾಗುತ್ತದೆ.ಆ ಅಹಂ ಮುಂದೇ ಪ್ರತಿಷ್ಟೆ, ದ್ವೇಷವನ್ನಷ್ಟೇ ಹೊರಡಿಸುತ್ತದೆ.ಅಸಲಿಗೆ ಇದು “ನಂಬಿಕೆ”ಯ ಪ್ರಶ್ನೆ.ಈ ಸಮಸ್ಯೆಯ ಪರಿಹಾರವಾಗಬೇಕಿರುವುದು ಪರಸ್ಪರ ಸಂವಾದ,ಸಾಮರಸ್ಯ,ಶಾಂತಿಯ ಅನುಸಂಧಾನದಿಂದಲೇ ಹೊರತು, ಇದು ಸರ್ಕಾರ,ನ್ಯಾಯಾಲಯದಲ್ಲಿ ಇತ್ಯರ್ಥವಾಗುವ ವಿಷಯವಲ್ಲ.ಆ ಜಾಗ ರಾಮ ಜನ್ಮಭೂಮಿಯೆಂಬುದು ಹಿಂದೂಗಳ ನಂಬಿಕೆಯಾಗಿದೆ.ಮೊಘಲ ಬಾಬರ್ ಆದೇಶಂತೆ ಅಲ್ಲಿದ್ದ ಮಂದಿರವೊಂದನ್ನು ಕೆಡವಿ ಅದರ ಮೇಲೆ ಮಸೀದಿಯನ್ನು ನಿರ್ಮಿಸಲಾಗಿರುವ ವಾದವಿದೆಯಲ್ಲ ಸರ್ ಅದು ನಿಜವೇ ಆದರೆ,ಅಲ್ಲಿ ಮಂದಿರವೇ ನಿರ್ಮಾಣವಾಗಬೇಕು.ಯಾಕೆಂದರೆ ರಾಮ,ರಾಮಾಯಣ,ಕೃಷ್ಣ,ಮಹಾಭಾರತವೆಲ್ಲ ಈ ದೇಶದ ಜನರಿಗೆ ಕೇವಲ ಪುರಾಣಗಳಲ್ಲ.ಅವು ಜನರ ಜೀವನದ ಭಾಗಗಳು.ಹೀಗಿರುವಾಗ ಅಲ್ಲಿನ ಜನರ ನಂಬಿಕೆಗಳಿಗೆ ಬೆಲೆ ಕೊಟ್ಟು ಬಾಬರಿನಿಂದ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದ.

ಮತ್ತಷ್ಟು ಓದು »

18
ಆಕ್ಟೋ

ಶಾದಿ ಭಾಗ್ಯ ಮತ್ತು ಮುಸ್ಲಿಂ ಅವಶ್ಯಕತೆ

– ನವೀನ್ ನಾಯಕ್

Shaadi Bhagyaಅಲ್ಪ ಸಂಖ್ಯಾತರ ತುಷ್ಟೀಕರಣ ಲೋಕಸಭಾ ಚುನಾವಣ ಬರುತಿದ್ದಂತೆ ಹೆಮ್ಮರವಾಗಿ ಬೆಳೆಯುತ್ತಿದೆ. ಈ ಸಮುದಾಯದ ಜನರಿಗೆ ಇರುವ ಕೊರತೆ, ಅವಶ್ಯಕತೆಯ ಬಗ್ಗೆ  ಸರಕಾರ ಕ್ರಮ ಕೈಗೊಳ್ಳುವುದರ ಬದಲು ಮತ ಬ್ಯಾಂಕ್ ಭದ್ರತೆಗೆ ಸರ್ವ ಪ್ರಯತ್ನವನ್ನೂ ಮಾಡುತ್ತಿದೆ.

ಮುಸ್ಲಿಂ ಸಮುದಾಯದ ಸಮಸ್ಯೆ ಅತಿಯಾದ ಧರ್ಮ ಶ್ರದ್ದೆ.  ಒಂದು ದಂಪತಿಗೆ ಈಗಿನ ಸಮಯದಲ್ಲಿ ಒಂದು ಮಗುವನ್ನು ಸಾಕುವುದೇ ಕಷ್ಟ. ಅಂತದರಲ್ಲಿ ಈ ಸಮುದಾಯದಲ್ಲಿ ಹೆಗಲಿಗೊಂದು ಸೊಂಟಕ್ಕೊಂದು ತಲೆ ಮೇಲೊಂದು ಮಕ್ಕಳನ್ನು ಹೊತ್ತುಕೊಂಡು ಬರುವ ದಂಪತಿಗಳೇ ಹೆಚ್ಚು. ಇದು ಕುಹಕವಲ್ಲ ವಾಸ್ತವ.  ಈ ಸಮುದಾಯದ ಮುಖಂಡರು ತಮ್ಮ ಸಮುದಾಯದ ನ್ಯೂನತೆ ಬಗ್ಗೆ ಯೋಚಿಸಬೇಕಿತ್ತು ಆದರೆ ಈ ಸಮಾಜದ ಮುಖಂಡರುಗಳು, ಜವಬ್ದಾರಿಯುತ ಕೆಲವು ವ್ಯಕ್ತಿಗಳು, ಬುದ್ದಿಜೀವಿಗಳೆಂದುಕೊಳ್ಳುವ ವ್ಯಕ್ತಿಗಳು ಇತರ ಧರ್ಮದ ನ್ಯೂನತೆಗಳನ್ನು ಎತ್ತಿ ತೋರಿಸುವುದಕ್ಕೆ ಹಲವು ಸಮಯವನ್ನು ಕಳೆಯುತಿದ್ದಾರೆ. ಹಾಗಂತ ಇತರ ಧರ್ಮದ ಬಗ್ಗೆ ಮಾತನಾಡಬಾರದೆಂಬುದು ಕೂಡ ತಪ್ಪಾಗುತ್ತದೆ. ಆದರೆ ಇನ್ನೊಬ್ಬನ ಶ್ರಧ್ಧೆಗಳ ಬಗ್ಗೆ ಮಾತನಾಡುವ ಮುಂಚೆ ತಾನು ಎಂತಹ ಅಡಿಪಾಯದಲ್ಲಿ (ಬಂಡೆಯಂತಹುದೋ ಅಥವ ಉಸುಗಿನಂತಹುದೋ) ನಿಂತಿದ್ದೇನೆ ಎಂಬುದನ್ನೂ ಯೋಚಿಸಬೇಕಾಗುತ್ತದೆ. ಇದನ್ನು ಬಿಟ್ಟು ಯೋಚಿಸುವಂತಹ ವ್ಯಕ್ತಿಗಳನ್ನೇ ಸೆಕ್ಯುಲರ್ ಎಂದು ಹೇಳಿಕೊಳ್ಳುವ ರಾಜಕೀಯ ಪಕ್ಷಗಳು ವ್ಯವಸ್ತಿತವಾಗಿ ಬಳಸಿಕೊಳ್ಳುತಿದ್ದಾರೆ.

ಮತ್ತಷ್ಟು ಓದು »

28
ಆಗಸ್ಟ್

ನಮೋ ಅಭಿವೃದ್ಧಿ ಮಂತ್ರಕ್ಕೆ ಅನುಸರಿಸಬೇಕಾದ ಪ್ರಚಾರತಂತ್ರ ಯಾವುದು?

– ನವೀನ್ ನಾಯಕ್

NaModi       ನರೇಂದ್ರ ಮೋದಿ ಇತ್ತೀಚೆಗೆ ಅತಿ ಹೆಚ್ಚಾಗಿ ಚರ್ಚೆಗೆ ತುತ್ತಾಗುತಿದ್ದಾರೆ. ಮೋದಿಯವರೇ ಮುಂದಿನ ಪ್ರಧಾನಿಯಾಗಬೇಕೆಂದು ಹಲವಾರು ರೀತಿಯಲ್ಲಿ ಉತ್ಸಾಹಿ ಯುವಕರು ಸ್ವಯಂಪ್ರೇರಣೆಯಿಂದ ಕೆಲಸ ನಿರ್ವಹಿಸುತಿದ್ದಾರೆ. ಅಭಿಮಾನಿಗಳ ಗುಂಪುಗಳಿರಬಹುದು, ಸಾಮಾಜಿಕ ತಾಣದಲ್ಲಿರುವ ಪೇಜ್, ಗ್ರೂಪ್ ಯಾವುದೇ ಆಗಬಹುದು. ರಾಜಕೀಯ ವಿಷಯದಲ್ಲಿ ಮಲಗಿದ್ದ ಯುವಪಡೆ ಎದ್ದು ನಿಂತಿರುವುದು ಸ್ವಾಗತಾರ್ಹ. ಪ್ರಸಕ್ತ ರಾಜಕೀಯ ದೊಂಬರಾಟದಲ್ಲಿ ಕಡಿವಾಣ ಹಾಕಬೇಕೆಂದರೆ ಯುವಕರ ಪಾತ್ರ ಬೇಕೆಬೇಕು. ಇತಿಹಾಸವೂ ಅದನ್ನೇ ಸಾರಿ ಸಾರಿ ಹೇಳಿದೆ. ನಮೋ ವಿಷಯದಲ್ಲಿ ಗಂಭೀರವಾದ ವಿಚಾರವೆಂದರೆ ಈ ಯುವಕರ ಕೆಲಸ ನೀರಿಕ್ಷಿತ ಮಟ್ಟವನ್ನು ತಲುಪುತ್ತದೆಯಾ. ಇವರ ಉತ್ಸಾಹಕ್ಕೆ 2014 ತಣ್ಣೀರೆರಚಬಹುದೇ ಎಂಬ ಅನುಮಾನ ನನಗೆ. ನನ್ನ ಅನುಮಾನಕ್ಕೆ ಕಾರಣವಿಲ್ಲದೆಯಿಲ್ಲ.

ಮೋದಿಯವರನ್ನು ಪ್ರಚಾರ ಮಾಡುತ್ತಿರುವ ಶೈಲಿ ಸ್ವತಃ ನಮೋ ಅಭಿವೃದ್ದಿ ಕನಸ್ಸಿನ ವಿರೋಧವಾಗಿದೆ. ಮುನ್ನುಗುತ್ತಿರುವ ವೇಗದಲ್ಲಿ ಗುರಿಯನ್ನೇ ಮರೆಯಲಾಗಿದೆ. ಮೋದಿ ನಾಯಕತ್ವದಲ್ಲಿ ಸರಕಾರ ರಚಿಸಬೇಕಾದರೆ ಆ ಸರಕಾರ ನಮ್ಮ ಕನಸ್ಸಿನ ಭಾರತ ಕಟ್ಟಬೇಕಾದರೆ ಮೋದಿ ಹೆಸರಲ್ಲಿ ಅಥವಾ ಬಿಜೆಪಿ ಹೆಸರಲ್ಲಿ ಗೆಲ್ಲುವ ಅಭ್ಯರ್ಥಿ ಹೇಗಿರಬೇಕು, ಅವನ ಕನಸುಗಳೇನಾಗಿರಬೇಕು, ಸಮಾಜ ಪರಿವರ್ತನೆಯಲ್ಲಿ ಆತನ ಸ್ಪಷ್ಟ ನಿರ್ಧಾರವೇನು. ಈ ಅಂಶಗಳು ಮುಖ್ಯವಾಗುವುದಿಲ್ಲವೇ? ಈ ಮಹತ್ತರ ಅಂಶಗಳನ್ನು ಮರೆತು ಅವರ ಹೆಸರಲ್ಲಿ ಅಯೋಗ್ಯರನ್ನು ಗೆಲ್ಲಿಸಿಬಿಟ್ಟರೆ. ಕಂಡ ಕನಸು ತಿರುಗಿ ಬೆಂಕಿ ಕೆಂಡವಾಗುತ್ತದೆಯಲ್ವಾ? ಕರ್ನಾಟಕದಲ್ಲಿ ಬದಲಾವಣೆ ಭರದಲ್ಲಿ ಬಿಜೆಪಿ ಬೆಂಬಲಿಸಿದಾಗ ಯಡವಟ್ಟಾಗಿದ್ದು ಈ ಅಂಶಗಳೇ. ಅಪಾತ್ರರೆಲ್ಲ ಗೆದ್ದು ಉಂಡಾಡಿ ಗುಂಡನ ಹಾಗೆ ಆಡಿದ್ದ ಉದಹಾರಣೆ ಕಣ್ಣ ಮುಂದಿರುವಾಗ ಮತ್ತದೇ ಹೆಜ್ಜೆಯನ್ನಿಟ್ಟರೆ ಏನು ಪ್ರಯೋಜನ ?.. ಬದಲಾವಣೆ ಎಲ್ಲರಿಗೂ ಬೇಕು ಅದೇ ಭರದಲ್ಲಿ ಯೋಗ್ಯರು ಮತ್ತು ಅಯೋಗ್ಯರ ನಡುವಿನ ವ್ಯತ್ಯಾಸ ಮರೆಯಬಾರದು.
ಮತ್ತಷ್ಟು ಓದು »

18
ಜುಲೈ

ಮುಸ್ಲಿಂ ಸಮುದಾಯದ ಉತ್ಪ್ರೇಕ್ಷಿತ ಕೊರಗುಗಳು

– ಪ್ರೇಮ ಶೇಖರ

Bharatiya Muslimaru“ಇಂದು ಈ ದೇಶದಲ್ಲಿ ಹಿಂಸೆ, ಹತ್ಯಾಕಾಂಡಗಳು ನಡೆದಿರುವುದು ಜಾತಿ ಸಮಾವೇಶ, ರ‍್ಯಾಲಿಗಳಿಂದಲ್ಲ. ಪ್ರವೀಣ್ ತೊಗಾಡಿಯಾರಂತಹ ಮಂದಿಗಳು ದೇಶಾದ್ಯಂತ ಏರ್ಪಡಿಸಿಕೊಂಡು ಬಂದ ಹಿಂದೂ ಸಮಾಜೋತ್ಸವದಂತಹ ಸಮಾವೇಶಗಳು, ರ‍್ಯಾಲಿಗಳು ದೇಶವನ್ನು ಕಂಗೆಡಿಸಿದ್ದವು.  ಹಲವು ಕೋಮುಗಲಭೆಗಳಿಗೆ, ಹಿಂಸೆಗಳಿಗೆ ಬಿಜೆಪಿ ಮತ್ತು ಆರೆಸ್ಸೆಸ್‌ನ ರ‍್ಯಾಲಿಗಳು ಕಾರಣವಾಗಿವೆ.  ಅವು ಸಮಾಜವನ್ನು, ದೇಶವನ್ನು ಒಡೆದಿವೆ.”

ಉತ್ತರ ಪ್ರದೇಶದಲ್ಲಿ ಜಾತಿಯಾಧಾರಿತ ರ‍್ಯಾಲಿಗಳನ್ನು ನಿರ್ಬಂಧಿಸಿ ಕಳೆದ ಗುರುವಾರ ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಮರುದಿನವೇ ಅಂದರೆ ಶುಕ್ರವಾರ ಪ್ರಕಟವಾದ ಕನ್ನಡ ದೈನಿಕವೊಂದರ ಸಂಪಾದಕೀಯದಲ್ಲಿ ಕಂಡುಬಂದ ಸಾಲುಗಳಿವು.  ಪ್ರವೀಣ್ ತೊಗಾಡಿಯಾರಂತಹ ಮಂದಿಗಳು ದೇಶಾದ್ಯಂತ ನಡೆಸಿಕೊಂಡು ಬಂದ ರ‍್ಯಾಲಿಗಳು ದೇಶವನ್ನು ಕಂಗೆಡಿಸಿದ ಬಗ್ಗೆ ಹೇಳುವ ಈ ಸಂಪಾದಕೀಯ ಅಕ್ಬರುದ್ದೀನ್ ಒವೈಸಿಯಂತಹ ಮಂದಿಗಳು ಹದಿನೈದು ನಿಮಿಷಗಳಲ್ಲಿ ಹಿಂದೂಗಳನ್ನು ಮಟ್ಟಹಾಕುತ್ತೇವೆಂದು ಘೋಷಿಸುವ ರ‍್ಯಾಲಿಗಳು ದೇಶವನ್ನು ಕಂಗೆಡಿಸಿದ ಬಗ್ಗೆ ಮೌನವಾಗಿದೆ.

ನನ್ನ ಅರಿವಿನ ಪ್ರಕಾರ ಈ ದೇಶ “ಒಡೆದದ್ದು” ೧೯೪೭ರಲ್ಲಿ ಮತ್ತು ಅದಕ್ಕೆ ಆರೆಸ್ಸೆಸ್ ಆಗಲೀ, ಬಿಜೆಪಿಯಾಗಲೀ ಏರ್ಪಡಿಸಿದ ರ‍್ಯಾಲಿಗಳು ಕಾರಣವಾಗಿರಲಿಲ್ಲ.  ಬ್ರಿಟಿಷ್ ವಸಾಹತುಶಾಹಿ ಆಳರಸರ ಕೈಗೊಂಬೆಯಾಗಿ, ಅವರ ಸಕ್ರಿಯ ಸಹಕಾರದಿಂದ ಮುಸ್ಲಿಂ ಲೀಗ್ ನಡೆಸಿದ ರ‍್ಯಾಲಿಗಳು ಸಮಾಜವನ್ನು ಒಡೆದವು ಮತ್ತು ಬಂಗಾಳದಲ್ಲಿ ಅಧಿಕಾರದಲ್ಲಿದ್ದ ಮುಸ್ಲಿಂ ಲೀಗ್ ಆಗಸ್ಟ್ ೧೬, ೧೯೪೬ರಂದು ಕಲ್ಕತ್ತಾ ನಗರದಲ್ಲಿ ಆಯೋಜಿಸಿದ “ಡೈರೆಕ್ಟ್ ಆಕ್ಷನ್ ಡೇ” ಎಂಬ ಕೋಮುವಾದಿ ರ‍್ಯಾಲಿ ಮತ್ತದು ಬಲಿತೆಗೆದುಕೊಂಡ ಸುಮಾರು ನಾಲ್ಕುಸಾವಿರ ಜೀವಗಳು ದೇಶದ ಐಕ್ಯತೆಗೆ ಅಂತಿಮ ಹೊಡೆತ ನೀಡಿ ಭಾರತ ಇಬ್ಬಾಗವಾಗಲು ಕಾರಣವಾದವು.  ಭಾರತವಷ್ಟೇ ಇಬ್ಬಾಗವಾಗಲಿಲ್ಲ, ಮುಸ್ಲಿಂ ಲೀಗ್‌ನ ಮೂರ್ಖತನದಿಂದಾಗಿ ಉಪಖಂಡದ ಬಲಿಷ್ಟ ಮುಸ್ಲಿಂ ಸಮುದಾಯವೂ ಇಬ್ಬಾಗವಾಯಿತು. ೧೯೭೧ರಲ್ಲಿ ಅದು ಮೂರು ಭಾಗಗಳಾಗಿ ಹೋಳಾಗಿ ಮತ್ತಷ್ಟು ಕೃಶವಾಯಿತು.  ಈ ಒಡೆಯುವಿಕೆಗೂ ಬಿಜೆಪಿಯಾಗಲೀ, ಆರೆಸ್ಸೆಸ್ ಆಗಲೀ ಕಾರಣವಾಗಿರಲಿಲ್ಲ.
ಮತ್ತಷ್ಟು ಓದು »

29
ಜುಲೈ

ಮುಸ್ಲಿಮರ ವಿರುದ್ಧ ಕೆಂಡಕಾರುವುದಕ್ಕಷ್ಟೇ ಹಿಂದೂ ಜಾಗೃತಿ ಸೀಮಿತವಾಗಬೇಕಾ?

– ಡಾ. ಅಶೋಕ್ ಕೆ.ಆರ್

          ಅನಾಗರೀಕ, ಹಿಂದುಳಿದ ರಾಜ್ಯಗಳೆಂಬ ಹಣೆಪಟ್ಟಿ ಹೊತ್ತ ದೂರದ ಬಿಹಾರ, ಉತ್ತರಪ್ರದೇಶದಲ್ಲಿ ನಡೆಯುತ್ತದೆಂದು ಕೇಳುತ್ತಿದ್ದ ಅಮಾನವೀಯ ಘಟನೆಯೊಂದು ನಮ್ಮ ಕರ್ನಾಟಕದ ಮಂಡ್ಯಜಿಲ್ಲೆಯಲ್ಲಿ ನಡೆದುಹೋಗಿದೆ. ನಾಲ್ವರು ಯುವಕರು ಯಶವಂತಪುರ – ಮೈಸೂರು ರೈಲಿನಲ್ಲಿ ಮಹಿಳೆಯೊಬ್ಬಳನ್ನು ಚುಡಾಯಿಸಿದ್ದಾರೆ. ಬೇಸತ್ತ ಯುವತಿ ಬಾಗಿಲಿನ ಬಳಿ ಬಂದು ನಿಂತಿದ್ದಾಳೆ. ಅಲ್ಲಿಗೂ ಬಂದು ರೇಗಿಸಲಾರಂಭಿಸಿದವರಿಗೆ ಪೋಲೀಸರಿಗೆ ದೂರು ನೀಡುವುದಾಗಿ ಹೇಳಿದ್ದಾಳೆ. ಕೋಪಗೊಂಡ ಆ ನಾಲ್ಕು ಮನುಷ್ಯರೂಪಿ ರಾಕ್ಷಸರು ಚಲಿಸುವ ರೈಲಿನಿಂದ ಆಕೆಯನ್ನು ಹೊರತಳ್ಳಿಬಿಟ್ಟಿದ್ದಾರೆ. ರೈಲಾಗ ಮದ್ದೂರಿನ ಶಿಂಷಾ ನದಿಯ ಸೇತುವೆಯ ಮೇಲೆ ಚಲಿಸುತ್ತಿತ್ತು. ಅದೃಷ್ಟವಶಾತ್ ಬದುಕುಳಿದಿದ್ದಾಳೆ. ಬೆನ್ನುಹುರಿಗೆ ಬಿದ್ದ ಏಟು, ಮೂಳೆಮುರಿತದಿಂದ ಎಷ್ಟರ ಮಟ್ಟಿಗೆ ಆ ಯುವತಿ ಚೇತರಿಸಿಕೊಳ್ಳುತ್ತಾಳೆ ಎಂಬುದನ್ನು ಕಾದುನೋಡಬೇಕಷ್ಟೇ.

ಆ ನಾಲ್ಕೂ ಯುವಕರನ್ನು ಪೋಲೀಸರು ಬಂಧಿಸಿದ್ದಾರೆ. ಮಾರನೇ ದಿನ ನ್ಯಾಯಾಲಯಕ್ಕೆ ಅವರನ್ನು ಕರೆದೊಯ್ಯುವಾಗ ಹಿಂದೂ ಜಾಗರಣ ವೇದಿಕೆಯ ಸದಸ್ಯರು ಮುತ್ತಿಗೆ ಹಾಕಿ ಅಪರಾಧಿಗಳನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಊರಿನ ಹೆಣ್ಣುಮಗಳ ಜೀವಕ್ಕೆ ಅಪಾಯತಂದ ಯುವಕರ ಮೇಲಿನ ಕೋಪ ಸಹಜವಾದುದು. ಆದರೆ? ಹಿಂದೂ ಜಾಗರಣ ವೇದಿಕೆ ಜಾಗೃತಗೊಂಡು ಆ ನಾಲ್ವರನ್ನು ಥಳಿಸಿದ್ದು ಯುವತಿಯ ಮೇಲೆ ಹಲ್ಲೆಯಾದ ಕಾರಣಕ್ಕೆ ಮಾತ್ರವಲ್ಲ! ಹಲ್ಲೆ ಮಾಡಿದ ನಾಲ್ವರು ಮುಸ್ಲಿಮರೆಂಬುದೇ ಇವರು ಜಾಗೃತಿಯಾಗಲು ಕಾರಣ! ಹಲ್ಲೆ ಮಾಡಿದವರು ಮುಸ್ಲಿಮರಾಗದೇ ಹಿಂದೂಗಳಾಗಿದ್ದಲ್ಲಿ ಅದರಲ್ಲೂ ಯಾವುದೋ ‘ಮೇಲುಜಾತಿಗೆ’[?] ಸೇರಿದವರಾಗಿದ್ದಲ್ಲಿ ಖಂಡಿತವಾಗ್ಯೂ ಹಿಂದೂ ಜಾಗರಣ ವೇದಿಕೆ ಜಾಗೃತವಾಗುತ್ತಿರಲಿಲ್ಲ ಎಂಬುದೇ ಇಂಥ ಸಂಘಟನೆಗಳ – ಹಿಂದೂ ಧರ್ಮದ ವೈಫಲ್ಯ.

ಮತ್ತಷ್ಟು ಓದು »