ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮೂಢನಂಬಿಕೆ ಆಚರಣೆಗಳ ಪ್ರತಿಬಂಧಕ ವಿಧೇಯಕ – ೨೦೧೩’

29
ನವೆಂ

ತೀರಾ ತುಘಲಕ್ ದರ್ಬಾರ್ ಬೇಡ್ರೀ ಸಿಧ್ಧರಾಮಣ್ಣ…

 – ಕೆ.ಎಸ್ ರಾಘವೇಂದ್ರ ನಾವಡ

Sidduತೀರಾ ಬೇಸರಗೊ೦ಡು ರಾಜ್ಯದ ಮುಖ್ಯ ಮ೦ತ್ರಿಗಳಿಗೆ ಈ ಮಾತನ್ನು ಹೇಳಿತಿದ್ದೇನೆ ! ಸಮಾಜವಾದಿ ಹಿನ್ನೆಲೆ.. ಹೋರಾಟದ ಹಿನ್ನೆಲೆ..  ಎಲ್ಲದ್ದಕ್ಕಿ೦ತಲೂ ಕರ್ನಾಟಕದ ಗ್ರಾಮೀಣ ಸೊಗಡಿನಿ೦ದ ಮೇಲೆದ್ದು ಬ೦ದವರು ಸಿಧ್ಧರಾಮಯ್ಯ. ಆದರೆ ಹಿ೦ದಿನ ಸಮಾಜವಾದಿ ಹಿನ್ನೆಲೆಗಳಿ೦ದ ಬ೦ದ ಮುಖ್ಯಮ೦ತ್ರಿಗಳಿಗೂ (ಮಾನ್ಯ ಹೆಗಡೇಜಿ, ಬ೦ಗಾರಪ್ಪನವರು, ಜೆ.ಹೆಚ್ ಪಟೇಲರು)ನಮ್ಮ ಸಿಧ್ಧರಾಮಯ್ಯನವರಿಗೂ ಅಜಗಜಾ೦ತರ ವ್ಯತ್ಯಾಸ…ಇವರು ಇದೇ ಥರ ಮು೦ದುವರಿದಲ್ಲಿ ಮು೦ಬರುವ ಲೋಕಸಭಾ ಚುನಾವಣೆಯಲ್ಲಿ ಕಾ೦ಗ್ರೆಸ್ ಕರ್ನಾಟಕದಲ್ಲಿ ನೆಲಕಚ್ಚುವುದ೦ತೂ ಖಚಿತ!

ಪಾಪ.. ಏನೂ ಮಾಡೋದಕ್ಕಾಗೋದಿಲ್ಲ.. ನಮಗೆ ಸಿಧ್ಧರಾಮಯ್ಯನವರ ಅಸಹಾಯಕತೆಯ ಅರಿವು ಇದೆ.ಆದರೆ ಕೈಯಲ್ಲಿ ಆಗದಿದ್ದವರ ಪರಿಸ್ಥಿತಿ ಏನೂ ಸಿಧ್ಧರಾಮಯ್ಯನವರದಲ್ಲ! ಹಾಗ೦ತ ತೀರಾ ಸಾರಾಸಗಟಾಗಿ ತಳ್ಳಿ ಹಾಕುವ೦ತಹ ವ್ಯಕ್ತಿತ್ವವೂ ಸಿಧ್ಧರಾಮಯ್ಯನವರದಲ್ಲ.ಆದರೆ ಒ೦ದ೦ತೂ ಖಚಿತ! ಏನೋ ಆಗಿದೆ… ಒ೦ದರ ಮೇಲೊ೦ದು ಎಡವಟ್ಟುಗಳನ್ನೇ ಸೃಷ್ಟಿಸಿಕೊಳ್ಳುತ್ತಿರುವ ಸಿಧ್ಧರಾಮಯ್ಯನವರು ಕೊನೇ ಪಕ್ಷ ತಮ್ಮ ನಿರ್ಧಾರಗಳಿಗೆ ಜೋತು ಬೀಳುವ೦ತಹ ಯಡಿಯೂರಪ್ಪನವರ ಛಾತಿಯನ್ನೂ ತೋರಿಸುತ್ತಿಲ್ಲ!

ಆರ೦ಭದಲ್ಲೇನೋ ಶೂರತನ ಮೆರೆದ ಅಶ್ವವೀರ.. ಕುದುರೆಗೆ ಸುಸ್ತಾದ೦ತೆ ತಾನೂ ನಡೆಯುತ್ತ ಸಾಗಿದ.. ಎನ್ನುವ ಹಳೇ ಮಾತೀಗ ಸಿಧ್ಧರಾಮಯ್ಯನವರ ವಿಚಾರದಲ್ಲಿ ಖಚಿತವಾಗುತ್ತಿದೆ! ಚುನಾವಣಾ ಪ್ರಣಾಳಿಕೆಯ ಅರ್ಧದಷ್ಟು ಅ೦ಶಗಳನ್ನು ಅನುಷ್ಠಾನಕ್ಕೆ ತರುವುದು ಹೆಚ್ಚುಗಾರಿಕೆಯೇ ಆದರೂ ಕೊಟ್ಟ ಮಾತುಗಳಾದರೂ ಎ೦ಥಾದ್ದಾಗಿದ್ದವು ಎನ್ನುವುದು ಬಹಳ ಮುಖ್ಯ!

ಮತ್ತಷ್ಟು ಓದು »

27
ನವೆಂ

ಯಾವುದು ನಂಬಿಕೆ?ಯಾವುದು ಮೂಢನಂಬಿಕೆ?

-ಡಾ.ಕಿರಣ್ ಎಂ ಗಾಜನೂರು

Karnataka Anti Superstition Billಕರ್ನಾಟಕ ಸರ್ಕಾರ ಮೂಢನಂಬಿಕೆಗಳ ಕುರಿತು ವಿಧೇಯಕ ಮಂಡಿಸಲು ಮುಂದಾಗಿರುವುದು ನಿಜಕ್ಕೂ ಸ್ವಾಗತಾರ್ಹ ಕ್ರಮ. ಏಕೆಂದರೆ ಭಾರತ ಸಮಾಜದಲ್ಲಿ ಬಹಳ ಹಿಂದಿನಿಂದಲೂ ಸೋ-ಕಾಲ್ಡ್ ನಂಬಿಕೆಗಳ ಹೆಸರಿನಲ್ಲಿ ಶೋಷಣೆ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ.ಅದರಲ್ಲಿಯೂ ಯಾವುದೇ ಜನ-ಚಳುವಳಿಯಿಲ್ಲದೆ,ನಮ್ಮ ಘನಸರ್ಕಾರ ಸ್ವತಃ ಈ ನಿರ್ಧಾರಕ್ಕೆ ಮುಂದಾಗಿರುವುದು ಪ್ರಶಂಸನೀಯ.ಪಕ್ಕದ ಮಹಾರಾಷ್ಟ್ರದಲ್ಲಿ ಈ ಮಾದರಿಯ ಕ್ರಮವನ್ನು ಅಲ್ಲಿನ ಸರ್ಕಾರ ತೆಗೆದುಕೊಳ್ಳಬೇಕಾದರೆ,ಒಂದು ದೊಡ್ಡ ಜನಚಳುವಳಿಯೆ ನಡೆಯಬೇಕಾಯಿತು ಮತ್ತು ಈ ಕುರಿತು ಹೋರಾಟ ಮಾಡುತ್ತಿದ್ದ ವ್ಯಕ್ತಿಯ ಹತ್ಯೆಯು ಆಯಿತು.ಈ ನೆಲೆಯಲ್ಲಿ ಕರ್ನಾಟಕ ಸರ್ಕಾರ ಜನಪರವಾಗಿದೆ ಎಂಬುದನ್ನು ನಾವು ಒಪ್ಪಬಹುದು.ಆದರೆ,  ಭಾರತದಂತಹ ಬಹುಸಂಸ್ಕೃತಿಯ ದೇಶದಲ್ಲಿ ಈ ಕ್ರಮ ಕೇವಲ ಪ್ರಗತಿಪರ ಮತ್ತು ಕಾನೂನಾತ್ಮಕ ಅಂಶವಾಗಿರದೆ ಸಮುದಾಯ ಸತ್ವದ ಪ್ರಶ್ನೆಯು ಆಗಿರುತ್ತದೆ ಎಂಬುದನ್ನು ನಾವು ಅರಿತುಕೊಳ್ಳಬೇಕು.ಅದೂ ಅಲ್ಲದೆ ಸದರಿ ವಿಧೇಯಕದ ಕುರಿತು ನಡೆಯುತ್ತಿರುವ ಚರ್ಚೆ ಪರ-ವಿರೋಧವೆಂಬ ಸಂಕುಚಿತ ಅರ್ಥದಲ್ಲಿ ನಡೆಯುತ್ತಿದೆ.ಒಂದು ಸಂಶೋಧನೆ ಅಥವಾ ಚರ್ಚೆಯಲ್ಲಿ ಸಂಶೋಧನೆ/ಚರ್ಚೆಗೆ ಒಳಪಡಿಸಬೇಕಾದ ವಿದ್ಯಾಮಾನದ ಕುರಿತು ಸಂಶೋಧಕನಿಗೆ ಪರ ಅಥವಾ ವಿರೋಧ ಅಭಿಪ್ರಾಯಗಳು ಇರಬೇಕು ಎಂದು ನೀರಿಕ್ಷಿಸುವುದೇ ಸಂಶೋಧನೆ/ಚರ್ಚೆಯ ಲಕ್ಷಣವಲ್ಲ. ಉದಾಹರಣೆಗೆ : ಕರ್ನಾಟಕದ ಮೂಢನಂಬಿಕೆ ವಿರೋಧಿ ವಿಧೇಯಕ ಕುರಿತು ನೀವು ಇದರ ಪರವೂ ವಿರೋಧವೂ ಎಂದು ಕೇಳಿದರೆ ನಾನು ನನಗೆ ಗೊತ್ತಿಲ್ಲ ಎಂದಷ್ಟೆ ಉತ್ತರಿಸಬಲ್ಲೆ. ಏಕೆಂದರೆ ನಿಜಕ್ಕೂ ನನಗೆ ಅದು ಸರಿಯೋ/ತಪ್ಪೋ ಗೊತ್ತಿಲ್ಲ ಅಥವಾ ಪ್ರಸ್ತುತ ಚರ್ಚೆ ಮತ್ತು ಮಾಹಿತಿಯ ಆಧಾರದಲ್ಲಿ ಒಂದು ನಿರ್ಣಯಕ್ಕೆ ಬರಲೂ ಸಾಧ್ಯವಾಗುತ್ತಿಲ್ಲ. ಆದರೆ,ಒಬ್ಬ ಸಮಾಜ ಸಂಶೋಧಕನಾಗಿ ನನ್ನ ಸಮಸ್ಯೆ ಇರುವುದು ಪರವಾಗಿ ಮತ್ತು ವಿರೋಧವಾಗಿ ಮಾತನಾಡುತ್ತಿರುವ ಎರಡೂ ಗುಂಪಿನ ವಾದ ಆ ವಿದ್ಯಮಾನವನ್ನು ಸಮರ್ಥಿಸಲು ಅಥವಾ ವಿರೋಧಿಸಲು ಶಕ್ತವಾಗಿಲ್ಲ ಮತ್ತು ಆದನ್ನು ಆಚರಿಸುತ್ತಿರುವ ಜನರಿಗೆ ಅರ್ಥವಾಗುತ್ತಿಲ್ಲ ಎಂಬುದು.

ಮತ್ತಷ್ಟು ಓದು »

26
ನವೆಂ

ಆಚರಣೆ, ಸಂಪ್ರದಾಯ,ನಂಬಿಕೆ ಮತ್ತು ಕಾಕತಾಳಿಯಗಳು

-ಮು.ಅ ಶ್ರೀರಂಗ,ಬೆಂಗಳೂರು

Indian Tradition N Heritageಒಬ್ಬ ಬ್ರಾಹ್ಮಣನ  ಮನೆಯಲ್ಲಿ ಬೆಕ್ಕೊಂದು ಓಡಾಡಿಕೊಂಡಿತ್ತು. ಹಳೆಯ ಕಾಲದ ಆ ಮನೆಯಲ್ಲಿದ್ದ ಇಲಿ,ಹೆಗ್ಗಣಗಳನ್ನು ತಿಂದುಕೊಂಡು ಅವುಗಳ ಕಾಟ ತಪ್ಪಿಸ್ಸಿದ್ದರಿಂದ ಸಹಜವಾಗಿ ಆ ಬೆಕ್ಕನ್ನು ಕಂಡರೆ ಮನೆಮಂದಿಗೆಲ್ಲಾ ಅಕ್ಕರೆಯಿತ್ತು.ಆ ಕುಟುಂಬದ  ಯಜಮಾನನ ತಂದೆಯದೋ ತಾಯಿಯದೋ  ತಿತಿ ಮಾಡಬೇಕಾದ ದಿನ ಬೆಕ್ಕು ಮನೆಯೊಳಗೆಲ್ಲಾ ಓಡಾಡಿ ಮೈಲಿಗೆ ಮಾಡುವುದು ಸರಿಯಲ್ಲ ಎಂದು ಅದನ್ನು ಮನೆಯ ಕಂಬವೊಂದಕ್ಕೆ ಕಟ್ಟಿಹಾಕಿದರು. ಆ ದಿನದ ಕೆಲಸ, ಊಟ ಎಲ್ಲಾ ಮುಗಿದ ನಂತರ ಆ ಬೆಕ್ಕಿಗೆ ಬಂಧನದಿಂದ ಬಿಡುಗಡೆಯಾಯ್ತು. ಕಾಲ ಕಳೆದಂತೆ ಆ ಮನೆಯ ಯಜಮಾನ ತೀರಿಕೊಂಡ. ಅವನ ಮಕ್ಕಳು ಅಪ್ಪನ ತಿತಿ ಮಾಡುವ ಸಮಯ ಬಂತು. ಆಗ ಮನೆಯಲ್ಲಿ  ಬೆಕ್ಕು ಇರಲಿಲ್ಲ. ಹೀಗಾಗಿ ಅಕ್ಕ ಪಕ್ಕದ ಮನೆಯವರಿಂದ ಕಾಡಿ ಬೇಡಿ ಬೆಕ್ಕೊಂದನ್ನು ತಂದು ಕಂಬಕ್ಕೆ ಕಟ್ಟಿದರು. ಅಂದಿನ ಕೆಲಸ ಮುಗಿದ ನಂತರ ವಾಪಸ್ಸು ಕೊಟ್ಟರು. ಇದು ಹೀಗೆ ಪ್ರತಿ ಸಾರಿ ತಿತಿ ಮಾಡುವಾಗಲೂ ಮುಂದುವರಿಯಿತು.  ಇದೊಂದು ಕಾಲ್ಪನಿಕ ಕಥೆ ಎಂಬುದರಲ್ಲಿ ಸಂದೇಹವಿಲ್ಲ. ಹಾಗೆ ನೋಡಿದರೆ ಐತಿಹಾಸಿಕವಾದುದನ್ನು ಬಿಟ್ಟರೆ ನಾವು ಓದುವ ಕತೆ ಕಾದಂಬರಿಗಳೆಲ್ಲ ಕಾಲ್ಪನಿಕವಾದವುಗಳೇ. ಅದರ  ಬಗ್ಗೆ ಚರ್ಚೆ ಈಗ ಬೇಡ. ಏಕೆಂದರೆ ಈ ಬರಹ ಸಾಹಿತ್ಯಕ್ಕೆ ಸಂಬಧಿಸಿದ್ದಲ್ಲ. ಈ ಬೆಕ್ಕಿನ ಕತೆಯಲ್ಲಿ ನಾವು ತಿಳಿದುಕೊಳ್ಳಬೇಕಾದ ಅಂಶ ಒಂದಿದೆ. ನಾವುಗಳು ಕೆಲವೊಂದು ಆಚರಣೆಗಳಿಗೆ ಇದು ಏಕೆ? ಎಂಬ ಪ್ರಶ್ನೆಯನ್ನು ಕೇಳಿಕೊಳ್ಳುವುದಿಲ್ಲ. ಮಕ್ಕಳೇನಾದರು ಕೇಳಿದರೆ “ನೀನೊಬ್ಬ ಅಧಿಕ ಪ್ರಸಂಗಿ, ತಲೆಹರಟೆ”ಎಂದು ಬೈದು ಅವರನ್ನು ಸುಮ್ಮನಾಗಿಸುತ್ತೇವೆ. ತಂದೆ ತಾಯಿಗೆ  ಅಜ್ಜಿ, ತಾತನಿಗೆ ಹೆದರಿದ ಆ ಮಕ್ಕಳು ಸುಮ್ಮನಾಗುತ್ತವೆ. ಅವರು ದೊಡ್ಡವರಾದ ಮೇಲೆ ಹಿಂದಿನವರು ತಮಗೆ  ಮಾಡಿದ್ದನ್ನೇ ತಮ್ಮ ಮಕ್ಕಳಿಗೂ ಮಾಡುತ್ತಾರೆ. ಈ ಕೊಂಡಿಗಳು ಒಂದಕ್ಕೊಂದು ಸೇರಿಕೊಳ್ಳುತ್ತಾಹೋಗಿ ಆಚರಣೆಗಳಾಗಿ,ಸಂಪ್ರದಾಯಗಳಾಗಿ ಮುಂದುವರಿಯುತ್ತವೆ.
ಮತ್ತಷ್ಟು ಓದು »

20
ನವೆಂ

ವಿಜ್ನಾನವೂ ಒಂದು ನಂಬಿಕೆಯೇ ಅಲ್ಲವೇ?

– ಬಾಲಚಂದ್ರ ಭಟ್

Vijnana mattu Nambikeಈ ತಲೆಬರಹವನ್ನು ನೋಡಿದ ಬಹಳಷ್ಟು ಜನ ಇದೊಂದು ಮೂರ್ಖತನದ ಮಾತು ಎಂದುಕೊಳ್ಳುವದರಲ್ಲಿ ಸಂಶಯವಿಲ್ಲ. ಇಷ್ಟೆಲ್ಲ ನಾನು ಯಾಕೆ ಬರೆಯಲು ಪ್ರಾರಂಭಿಸಬೇಕಾಯಿತೆಂದರೆ ಇವತ್ತು ರಾಜಕೀಯ, ಸಾಮಜಿಕ ಹಾಗೂ ಇತ್ಯಾದಿ ವಲಯಗಳಲ್ಲಿ ನಂಬಿಕೆ, ಮೂಢನಂಬಿಕೆ ಹಾಗೂ ವಿಜ್ನಾನಗಳು ಬಹುಮಟ್ಟದಲ್ಲಿ ಚರ್ಚೆಯಾಗುತ್ತಿರುವದು. ಹೀಗೆ ಚರ್ಚೆಯಾದಾಗಲೆಲ್ಲ ನಂಬಿಕೆಯ ಬಗ್ಗೆ ಬೇರೆ ಬೇರೆ ಹಿನ್ನೆಲೆಯಲ್ಲಿ ಪರ/ವಿರೋಧ ವ್ಯಾಖ್ಯಾನಗಳನ್ನು ನೀಡಿದರೂ
ವಿಜ್ನಾನಕ್ಕೆ ಅವಿರೊಧ ಅನುಮೋದನೆ ಇರಬೇಕೆಂಬ ಇಂಗಿತ ಚರ್ಚೆಯ ಮೂಲ ತತ್ವವೇ ಆಗಿರುತ್ತದೆ.

ವೈಜ್ನಾನಿಕ ಚಿಂತಕರು ಜಡ್ಜ್ ಸ್ಥಾನದಲ್ಲಿಯೂ, ನಂಬಿಕೆ/ಮೂಢನಂಬಿಕೆಗಳ ಪರ/ವಿರೋಧಿಗಳು ಕಟೆಕಟೆಯಲ್ಲಿ ನಿಂತಿರುವಂತೆ ಅನಿಸುತ್ತದೆ. ಅಂತೆಯೆ ವಿಜ್ನಾನ ಇವತ್ತು ಜಡ್ಜ್ ಸ್ಥಾನವನ್ನು ಆಕ್ರಮಿಸಿದೆಯೆಂದರೆ ಮನುಕುಲದ ಬೌದ್ಧಿಕತೆ ಒಂದೇ ತಳಪಾಯದಡಿ ನಿರ್ಮಾಣವಾಗುತ್ತಿದೆ ಎನ್ನುವದರ ಅರ್ಥವೇನೊ! ಹಾಗೆಂದ ಮಾತ್ರಕ್ಕೆ ಎಲ್ಲರೂ ವಿಜ್ನಾನದ ಅಧ್ಯಯನದ ಬಗ್ಗೆ ಆಸ್ಥೆಯನ್ನು ತೋರಿಸುತ್ತಿದ್ದಾರೆಂದು ಅರ್ಥವಲ್ಲ. ಬದಲಿಗೆ ವಿಜ್ನಾನ ಇವತ್ತು ಜಡ್ಜ್ ಆಗಿರುವ ಕಾರಣ ಜನರು ತಮ್ಮ ತಮ್ಮ ಬದುಕಿನ ದೃಷ್ಟಿಕೋನಗಳನ್ನು ವಿಜ್ನಾನದ ಮೂಲಕ ಸಮರ್ಥಿಸಿಕೊಳ್ಳುತ್ತಿದ್ದಾರಷ್ಟೆ.

ಮತ್ತಷ್ಟು ಓದು »

11
ನವೆಂ

“ಮೂಢನಂಬಿಕೆ” ಅನ್ನುವ ಮೊದಲು “ನಂಬಿಕೆ” ಅನ್ನುವುದನ್ನು ಡಿಫೈನ್ ಮಾಡಲಾಗಿದೆಯೇ?

– ರಾಕೇಶ್ ಶೆಟ್ಟಿ

Anti Superstition Bill Karntakaಸೋ-ಕಾಲ್ಡ್ ಪ್ರಗತಿಪರರು,ಬುದ್ಧಿಜೀವಿಗಳು,ಚಿಂತಕರು ಮತ್ತು ಸರ್ಕಾರಿ ಸಾಹಿತಿಗಳು ಸೇರಿಕೊಂಡು ಹೊರತಂದಿರುವ “ಮೂಢನಂಬಿಕೆ ಆಚರಣೆಗಳ ಪ್ರತಿಬಂಧಕ ವಿಧೇಯಕ – ೨೦೧೩” ಅನ್ನು ಓದಿದ ಮೇಲೆ ಮತ್ತದಕ್ಕೆ ಸಿಎಂ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನದಲ್ಲಿ ಇದನ್ನು ವಿದಾಯಕವಾಗಿ ಮಂಡಿಸುತ್ತೇನೆ ಅಂತೇಳಿ ಮತ್ತೆ ಯು-ಟರ್ನ್ ತೆಗೆದುಕೊಂಡಾಗ,ನನಗೆ ನೆನಪಾಗಿದ್ದು “ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿತ್ತಂತೆ…!” ಅನ್ನೋ ಗಾದೆ.

‘ಕಿಚನ್ ಕ್ಯಾಬಿನೇಟ್’ ಅಣತಿಯಂತೆ ಸರ್ಕಾರಗಳು ಕಾರ್ಯ ನಿರ್ವಹಿಸುತ್ತವೆ ಅನ್ನುವುದು ಕೆಲವು ಮುಖ್ಯಮಂತ್ರಿಗಳ ಕಾಲದಲ್ಲಿ ಕೇಳಿಬರುತಿದ್ದಂತ ಮಾತು.ಆದರೆ,ಸಿದ್ದರಾಮಯ್ಯನವರ ಸರ್ಕಾರ ‘ಸರ್ಕಾರಿ ಸಾಹಿತಿಗಳ ಕ್ಯಾಬಿನೇಟ್’ ನ ಅಣತಿಯೇ ನಡೆಯುತ್ತದೆಯೇ? ಹಾಗೆಯೇ ಅನ್ನಿಸುತ್ತಿದೆ.ಸಮಾಜ ವಿಜ್ನಾವನ್ನು ಅಕಾಡೆಮಿಕ್ ಆಗಿ ಕಲಿಸುತಿದ್ದ ಸಂಶೋಧನಾ ಕೇಂದ್ರದ ಮೇಲೆ ವಕ್ರ ದೃಷ್ಟಿ ಬೀರಿದ ಸರ್ಕಾರವೇ ಈಗ ಸಾಮಾಜಿಕ ಸಮಸ್ಯೆಗಳ ಬಗ್ಗೆ ಕರಡು ಸಿದ್ದ ಮಾಡಿ ಅಂತ ಕೇಳಿಕೊಂಡು ಅದನ್ನು ಜಾರಿಗೆ ತರಲು ಹೊರಟಿರುವುದು ಹಾಸ್ಯಾಸ್ಪದವಾಗಿದೆ.

ಈ ನಾಸ್ತಿಕ ಮಹಾಶಯರುಗಳ ಪ್ರಕಾರ, “ಫಲಜ್ಯೋತಿಷ್ಯ,ಕಾಲ ಜ್ನಾನ,ಸಂಖ್ಯಾ ಶಾಸ್ತ್ರ,ವಾಸ್ತು ಶಾಸ್ತ್ರ,ಮಠಾಧೀಶರ,ಸ್ವಾಮೀಜಿಗಳ ಪಾದ ಪೂಜೆ,ಸರ್ಕಾರಿ ಕಚೇರಿಗಳಲ್ಲಿ ಪೂಜೆ,ಹೋಮ-ಹವನ,ದೇವಸ್ಥಾನಗಳಲ್ಲಿ ಪ್ರಾಣಿಬಲಿ ಕೊಡುವುದು,ಜಪಮಾಲೆಗಳು,ರುದ್ರಾಕ್ಷಿ,ಆಧ್ಯಾತ್ಮ ಬಗ್ಗೆ ಮಾತನಾಡುವುದು” ಇವೆಲ್ಲ ನಿಷೇಧವಾಗಬೇಕಂತೆ…!
ಮತ್ತಷ್ಟು ಓದು »