ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮೋದಿ’

4
ಸೆಪ್ಟೆಂ

ಮಹದಾಯಿ : ಜನರ ದಾರಿ ತಪ್ಪಿಸುವುದು ಕಾಂಗ್ರೆಸ್‌ಗೆ ಶೋಭೆಯೇ?

– ವೃಷಾಂಕ್ ಭಟ್,ದೆಹಲಿ

ಮಹದಾಯಿಕಳಸಾ-ಬಂಡೂರ ಕಾಲುವೆಗೆ ಮಹದಾಯಿ ನೀರು ಹರಿಸಲು ಪ್ರಧಾನಿಯೊಬ್ಬರೇ ಶಕ್ತರು ಎಂಬ ರಾಜಕೀಯ ಸುಳ್ಳನ್ನು ಕಾಂಗ್ರೆಸ್ ಪ್ರಚಾರ ಮಾಡುತ್ತಿದೆ. ತಿಳಿದೋ ತಿಳಿಯದೆಯೋ ಮಾಧ್ಯಮಗಳು ಕೂಡ ಹೆಚ್ಚು ಕಡಿಮೆ ಇದೇ ಸುಳ್ಳನ್ನು ಪ್ರಸಾರ ಮಾಡುತ್ತಿದೆ. ಮಹದಾಯಿ ಸಮಸ್ಯೆ ದೇಶದ ಸಮಸ್ಯೆಯಾಗಿ ಉಳಿದಿಲ್ಲ. ಕಾಂಗ್ರೆಸ್ ಪಾಲಿಗಿದು ರಾಜಕೀಯ ಅವಕಾಶ. ಮಹದಾಯಿ ಸಮಸ್ಯೆ ಜೀವಂತವಾಗಿದ್ದಷ್ಟು ದಿನವೂ ರಾಜ್ಯದ ಜನರ ಮನಸ್ಸಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೆಚ್ಚುತ್ತದೆ ಎಂಬುವುದು ಸಿದ್ಧರಾಮಯ್ಯ ಮತ್ತವರ ಹೈಕಮಾಂಡ್‌ಗೆ ತಿಳಿಯದ ವಿಷಯವಲ್ಲ. ಹಾಗಾಗಿ ಮಹದಾಯಿ ಸಮಸ್ಯೆ ಬಹೆಗರಿಯುವುದು ರಾಜ್ಯ ಸರ್ಕಾರಕ್ಕೇ ಬೇಕಿಲ್ಲ. ಸಮಸ್ಯೆ ಬಗೆಹರಿಸಲು ನಿಜಕ್ಕೂ ಸಾಧ್ಯವಿದೆಯೆಂದಾದರೆ ಅದು ಕಾಂಗ್ರೆಸ್‌ಗೆ ಮಾತ್ರ. ಮಹದಾಯಿ ಪ್ರಕರಣ ಸಂಬಂಧ ನ್ಯಾಯಾಧಿಕರಣ ರಚನೆಯಾದ ಬಗೆ ಮತ್ತು ಅದರಲ್ಲಿ ಕಾಂಗ್ರೆಸ್ ಪಾತ್ರ ಎಷ್ಟಿದೆ ಎಂಬುದನ್ನು ನೋಡೋಣ.

1) ಜುಲೈ 2002 : ಅಂತಾರಾಜ್ಯ ನದಿ ನೀರು ವ್ಯಾಜ್ಯ-1956 ಅಡಿಯಲ್ಲಿ ಮಹದಾಯಿ ನ್ಯಾಯಾಧಿಕರಣ ರಚಿಸುವಂತೆ ಗೋವಾ ಸರ್ಕಾರ ಕೇಂದ್ರಕ್ಕೆ ಮನವಿ ನೀಡಿತ್ತು. ಆದರೆ ಕೇಂದ್ರವು ಆ ಕೂಡಲೇ ನ್ಯಾಯಾಧಿಕರಣ ರಚಿಸಲಿಲ್ಲ.ಆಗಿದ್ದದ್ದು ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರ.
2) ಏ.4-2006: ಕೇಂದ್ರ ಜಲಸಂಪನ್ಮೂಲ ಸಚಿವಾಲಯವು ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳ ಸಭೆ ಕರೆದು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ತಿಳಿಸುತ್ತಾರೆ. ಆದರೆ ಅಂದು ಗೋವಾ ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್‌ನ ಪ್ರತಾಪ್ ಸಿಂಗ್ ರಾಣೆ ನ್ಯಾಯಾಧಿಕರಣ ರಚನೆಯಾಗಲೇ ಬೇಕು ಎಂದು ಹಠ ಹಿಡಿಯುತ್ತಾರೆ. ಆ ಮೂಲಕ ಮಾತು ಕತೆಯ ಉದ್ದೇಶ ವಿಫಲ.
ಮತ್ತಷ್ಟು ಓದು »

9
ಜೂನ್

ಯೋಗದಿನಕ್ಕಾಗಿ ಮೋದಿ ಸರಕಾರದ ವಿಶೇಷ ಶವಾಸನ

– ರೋಹಿತ್ ಚಕ್ರತೀರ್ಥ

Yoga Dayನಮ್ಮ ದೇಶ ಜಾತ್ಯತೀತ ದೇಶ. ಆದರೆ ಹೆಜ್ಜೆಹೆಜ್ಜೆಗೂ ನಿಮಗಿಲ್ಲಿ ನಿಮ್ಮ ಜಾತಿಯ ನೆನಪು ಅಳಿಯದಂತೆ ನೋಡಿಕೊಳ್ಳಲಾಗುತ್ತದೆ. ಶಾಲೆಗೆ ಸೇರುವ ಮೊದಲ ದಿನ ಅಡ್ಮಿಷನ್ ಮಾಡಿಕೊಳ್ಳುವ ಮುಖ್ಯೋಪಾಧ್ಯಾಯರು ಹೆಸರು, ಅಪ್ಪನ ಹೆಸರು, ಜಾತಿ ಎಂದು ಬರೆದ ಅಪ್ಲಿಕೇಶನ್ನನ್ನು ಕಣ್ಣಮುಂದೆ ಹಿಡಿಯುತ್ತಾರೆ. ಪರೀಕ್ಷೆ ಬರೆಯಲು ಅರ್ಜಿ ತುಂಬುವಾಗ ಯಾವ ಜಾತಿ ಎಂದು ಕೆದಕಿ ವಿಚಾರಿಸಿಕೊಂಡು ನೀವು ಕಟ್ಟಬೇಕಾದ ಫೀಸು ನಿರ್ಧರಿಸುತ್ತಾರೆ. ಕೆಲಸಕ್ಕೆ ಹೋಗುವಾಗ ನಿಮ್ಮ ಪದವಿ ಸರ್ಟಿಫಿಕೇಟು ಯಾರಿಗೆ ಬೇಕು ಸ್ವಾಮಿ! ನಾಯಿಯೂ ಮೂಸುವುದಿಲ್ಲ ಅದನ್ನು! ನೀವು ಯಾವ ಜಾತಿ ಹೇಳಿ, ಅದರ ಆಧಾರದ ಮೇಲೆ ನಿಮಗೆ ಕೆಲಸ ಸಿಗುತ್ತದೋ ಇಲ್ಲವೋ ಎನ್ನುವುದು ನಿರ್ಧಾರಿತವಾಗುತ್ತದೆ. ಈ ದೇಶದಲ್ಲಿ ಶಿಕ್ಷಣ, ಉದ್ಯೋಗ, ಮದುವೆ, ಮುಂಜಿ, ಸಾವು, ತಿಥಿಗಳೆಲ್ಲ ನಿರ್ಧಾರವಾಗುವುದು ನಿಮ್ಮ ಜಾತಿಯ ಮೇಲೆ. ಯಾಕೆಂದರೆ ನಾವು ಬದುಕುತ್ತಿರುವುದು ಜಾತ್ಯತೀತ ದೇಶದಲ್ಲಿ ನೋಡಿ!

ಜೂನ್ 21ರಂದು ವಿಶ್ವ ಯೋಗದಿನ ಆಚರಿಸಬೇಕು ಎಂದು ನಮ್ಮ ದೇಶದ ಪ್ರಧಾನಿ ಕರೆಕೊಟ್ಟರು. ಅವರು ಅಲ್ಲಿ ಅದನ್ನು ಹೇಳಿ ಮುಗಿಸಿದ್ದರೋ ಇಲ್ಲವೋ ಇತ್ತ ಜಾತ್ಯತೀತ ಕೋಮುಸೌಹಾರ್ದ ಬಳಗದ ಬುಜೀಗಳಿಗೆ ಕಡಿತ ಶುರುವಾಯಿತು. ಈ ಮೋದಿ ಮಹಾ ಜಾತೀವಾದಿ. ಹಿಂದೂಗಳ ಯೋಗವನ್ನು ಸನಾತನಿಗಳಂತೆಯೇ ಜಾತಿಧರ್ಮಗಳಿಗೆ ಅತೀತರಾದ ಪ್ರಗತಿಪರ ಅಲ್ಪಸಂಖ್ಯಾಕ ಪಂಗಡಗಳಿಗೂ ವಿಸ್ತರಿಸುವ ಯೋಜನೆ ಹಾಕಿದ್ದಾರೆ ಎಂದು ಅವರಿಗೆ ಗುಮಾನಿ ಬಂತು. ಅಷ್ಟಲ್ಲದೆ ಜೂನ್ ಇಪ್ಪತ್ತೊಂದು – ಮುಸ್ಲಿಮರ ಹಬ್ಬ ಬೇರೆ. ಹೋಗಿಹೋಗಿ ಆ ದಿನ ಯೋಗ ಮಾಡುವುದೇ? ಸಾಧ್ಯವೇ ಇಲ್ಲ ಎಂದು ಈ ಅಲ್ಪಸಂಖ್ಯಾತ ಮತದ ನಾಯಕ ಓವೈಸಿ ಕೂಗಿದ. ಅವನ ಹಿಂದೆ ಅವನ ಇಡೀ ಗಾಂಪರ ಗುಂಪೇ ಎದ್ದುನಿಲ್ಲುವ ಸೂಚನೆ ಸಿಕ್ಕಿತು. ಕೇಂದ್ರ ಸರಕಾರ ಈಗ ನಿಜವಾಗಿಯೂ ಇಲ್ಲದ ಇಕ್ಕಳದಲ್ಲಿ ತಲೆ ಸಿಕ್ಕಿಸಿಕೊಂಡಿದ್ದೇನೆಂದು ಸುಳ್ಳೇ ಭಾವಿಸಿ ನಡುಗಿತು. ಯೋಗದಿನ ಮಾಡೋಣ, ಆದರೆ ಸೂರ್ಯನಮಸ್ಕಾರ ಕೈಬಿಡೋಣ ಎಂದು ಠರಾವು ಮಂಡಿಸಿತು. ಮೋದಿ ಹೇಳಿಕೊಟ್ಟಂತೆ ಅವರ ಸರಕಾರದ ಎಲ್ಲ ಮಂತ್ರಿಗಳೂ “ಸೂರ್ಯನಮಸ್ಕಾರ ಕಠಿಣ ಆಸನ. ಹಾಗಾಗಿ, ಅದನ್ನು ಬಿಟ್ಟು ಮಿಕ್ಕಿದ್ದನ್ನು ಮಾಡಲು ಚಿಂತನೆ ನಡೆಸಿದ್ದೇವೆ” ಎಂದು ತಿಪ್ಪೆ ಸಾರಿಸಿದರು.
ಮತ್ತಷ್ಟು ಓದು »

26
ನವೆಂ

ಭಾರತವನ್ನು “ಕಾಂಗ್ರೆಸ್ಸ್ ಮುಕ್ತ”ವಾಗಿಸಲು,ಕರ್ನಾಟಕದಲ್ಲಿ “ಬಿಜೆಪಿಯೇ ಇಲ್ಲ”!

– ರಾಕೇಶ್ ಶೆಟ್ಟಿ

Modi Karnataka BJPಕುರುಕ್ಷೇತ್ರದ ಯುದ್ದಕ್ಕೆ ಬೆಂಬಲ ಕೋರಿ ಬಂದ ಅರ್ಜುನನಿಗೆ,”ನಾರಾಯಣ ಬೇಕೋ?”,”ನಾರಾಯಣಿ ಸೈನ್ಯ ಬೇಕೋ?” ಎಂದು ಕೇಳುತ್ತಾನೆ ಶ್ರೀಕೃಷ್ಣ.’ಸಂಖ್ಯೆ’ ಗಿಂತ ‘ವ್ಯಕ್ತಿ’ ಮತ್ತು ‘ವ್ಯಕ್ತಿ’ಗಿಂತ ‘ವ್ಯಕ್ತಿತ್ವ’ದ ಮಹತ್ವ ಅರಿತಿದ್ದ ಅರ್ಜುನ “ನಾರಾಯಣ” ಎನ್ನುತ್ತಾನೆ. ಅರ್ಜುನನೆಡೆಗೆ ಕನಿಕರ ತೋರಿದ ದುರ್ಯೋಧನ “ನಾರಾಯಣಿ ಸೈನ್ಯ”  ಪಡೆದು ಹೋಗುತ್ತಾನೆ.ಕಡೆಗೆ ಯುದ್ಧದಲ್ಲಿ ಗೆದ್ದಿದ್ದು ಯಾರು ಎನ್ನುವುದು ಎಲ್ಲರಿಗೂ ತಿಳಿದ ವಿಷಯವೇ. ಇಲ್ಲಿ ನನ್ನ ಗಮನವಿರುವುದು ಯುದ್ಧದ ಮೇಲಲ್ಲ.ಯುದ್ಧಕ್ಕೆ ಹೊರಟು ನಿಂತವನು ಮಾಡಿಕೊಳ್ಳುವ ತಯಾರಿಯ ಮೇಲೆ.ಕುರುಕ್ಷೇತ್ರದ ಯುದ್ಧಕ್ಕೆ ಕಾರಣನಾದ ದುರ್ಯೋಧನ,ಯುದ್ಧಕ್ಕೆ ಬೇಕಾದ ಜನರನ್ನು (ಸಂಖ್ಯೆ) ಒಟ್ಟುಗೂಡಿಸಿಕೊಂಡು ಹೊರಟು ನಿಂತನೇ ಹೊರತು,ಯುದ್ದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಿಲ್ಲ.

ಬಹುಷಃ, ತನ್ನ ಜೊತೆಗೆ ಭೀಷ್ಮ,ದ್ರೋಣಾಚರ್ಯರಂತ ಅಸಾಧಾರಣ ಸಾಮರ್ಥ್ಯದ “ವ್ಯಕ್ತಿ”ಗಳಿದ್ದಾರೆ ಎನ್ನುವ ಅಹಂ ದುರ್ಯೋಧನನಿಗಿದ್ದೀತು.ವ್ಯಕ್ತಿಗಳಿದ್ದರೇನಂತೆ “ವ್ಯಕ್ತಿತ್ವ” ಇರಲಿಲ್ಲವಲ್ಲ!

ಏನಿದು,ಭೀಷ್ಮನಂತ ಭೀಷ್ಮ,ದ್ರೋಣಾಚಾರ್ಯರಿಗೆ ವ್ಯಕ್ತಿತ್ವವಿರಲಿಲ್ಲ ಎನ್ನುತ್ತಿದ್ದೇನೆ ಎನ್ನಿಸಬಹುದು.ಧರ್ಮ-ಅಧರ್ಮದ ಪ್ರಶ್ನೆ ಬಂದಾಗ ಅದಿನ್ನೇನೋ ಸಬೂಬು ಕೊಟ್ಟು ಅಧರ್ಮದ ಪರ ನಿಲ್ಲುವ ವ್ಯಕ್ತಿಯ “ವ್ಯಕ್ತಿತ್ವ”ಕ್ಕೆ ಬೆಲೆ ಉಳಿಯುತ್ತದೆಯೇ? ಕಡೆಗೂ ಮಹಾಭಾರತದ ಯುದ್ಧದಲ್ಲಿ ಗೆದ್ದಿದ್ದು ಧರ್ಮದ ಪರನಿಂತ ವ್ಯಕ್ತಿಗಳೇ.

ಮತ್ತಷ್ಟು ಓದು »

6
ಜೂನ್

ಬುದ್ಧಿಜೀವಿಗಳೇ, ಕಾದು ನೋಡುವುದಲ್ಲದೆ ನಿಮಗೆ ಅನ್ಯ ಮಾರ್ಗವಿಲ್ಲ!

– ಸಹನಾ ವಿಜಯ್ ಕುಮಾರ್

ಪ್ರಗತಿಪರರು ಹಾಗೂ ಬುದ್ಧಿಜೀವಿಗಳುAction and reaction are equal and opposite. ಕ್ರಿಯೆ ಮತ್ತು ಪ್ರತಿಕ್ರಿಯೆಗಳು ವಿರುದ್ಧ ದಿಕ್ಕಿನಲ್ಲಿದ್ದರೂ ಸಮಬಲದಿಂದಿರುತ್ತವೆ. ಇದು ನ್ಯೂಟನ್ನ ಮೂರನೆಯ ನಿಯಮ. ಸುಮಾರು ಮೂರು ಶತಕಗಳಿಗೂ ಹಿಂದೆ, ಅಂದರೆ ಕ್ರಿ.ಶ. 1687ರಲ್ಲಿ ನ್ಯೂಟನ್ ಜಗತ್ತಿಗೆ ಸಾಬೀತುಪಡಿಸಿದ್ದು. ಈಗ 2014ರಲ್ಲಿ ನಾವು ಭಾರತೀಯರು ಈ ನಿಯಮದ ಸತ್ಯಾಸತ್ಯತೆಯನ್ನು ಮತ್ತೆ ಸಾಬೀತುಪಡಿಸಿದ್ದೇವೆ! ಇಲ್ಲಿ ಕ್ರಿಯೆ – ಚುನಾವಣಾ ಪೂರ್ವದಲ್ಲಿ ಇಡೀ ದೇಶದಲ್ಲಿ ಒಂದು ವ್ಯವಸ್ಥಿತ ಜಾಲವು ಮೋದಿಯವರ ಕುರಿತ ಭಯವನ್ನು ಹುಟ್ಟುಹಾಕಿದ್ದು. ಪ್ರತಿಕ್ರಿಯೆ – ಜನಸಾಮಾನ್ಯರು ಆ ಭಯದ ಹುಟ್ಟಡಗಿಸಿ ಮೋದಿಯವರಿಗೆ ಐತಿಹಾಸಿಕ ವಿಜಯ ದೊರಕಿಸಿಕೊಟ್ಟಿದ್ದು. ಒಂದು ವಿಶೇಷವೆಂದರೆ ಪ್ರತಿಕ್ರಿಯೆಯು ಕ್ರಿಯೆಗಿಂತ ಬಹಳ ಪಟ್ಟು ಹೆಚ್ಚಿದೆ, ತೀಕ್ಷ್ಣವಾಗಿದೆ ಹಾಗೂ ಮುಟ್ಟಿ ನೋಡಿಕೊಳ್ಳುವ ಹಾಗಿದೆ! ಈಗ ನ್ಯೂಟನ್ ಬದುಕಿದ್ದರೆ ಬಹಳ ಖುಷಿಪಡುತ್ತಿದ್ದ!

ಹೀಗೆ ಮಾಡುವ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಿತ್ತು. ಏಕೆಂದರೆ ಈ ಕ್ರಿಯೆಯನ್ನು ಹುಟ್ಟುಹಾಕಿದವರು ಅಂತಿಂಥವರಲ್ಲ, ಮೂರು ವರ್ಗಗಳಾಗಿ ವಿಂಗಡಿಸಬಹುದಾದ ಘಟಾನುಘಟಿಗಳು. ಒಂದು ವರ್ಗ ರಾಜಕಾರಣಿಗಳದ್ದಾದರೆ ಮತ್ತೊಂದು ಸುದ್ದಿ ಮಾಧ್ಯಮಗಳದ್ದು. ಮೂರನೆಯ ಹಾಗೂ ಅತ್ಯಂತ ಕುಲೀನ(?) ವರ್ಗ ಪ್ರಗತಿಪರರು ಹಾಗೂ ಬುದ್ಧಿಜೀವಿಗಳದ್ದು. ರಾಜಕಾರಣಿಗಳು ಸಿದ್ಧಾಂತ ಭೇದ ಮರೆತು ಒಂದಾದರು. ಮೋದಿಯವರನ್ನು ರಾಕ್ಷಸನೆಂದು ಬಿಂಬಿಸಿ ತಮ್ಮ ಕ್ರಿಯೆಗೆ ಮೊದಲಿಟ್ಟುಕೊಂಡರು. ಇನ್ನು ಸುದ್ದಿ ಮಾಧ್ಯಮದವರು ಹಿಂದೆ ಬೀಳುತ್ತಾರೆಯೇ? ಅಪಸ್ಮಾರ ಇರುವವರಿಗಿಂತ ಹೆಚ್ಚಾಗಿ ದೇಹ ಮನಸಿನ ಸ್ಥಿಮಿತ ಕಳೆದುಕೊಂಡು ಆ ಕ್ರಿಯೆಗೆ ಶಕ್ತಿ ಹಾಗೂ ವೇಗ ತುಂಬಿದರು. ಯಾವ ರಾಷ್ಟ್ರೀಯ ಚಾನೆಲ್ ನೋಡಿದರೂ ಮೋದಿ ಎಂಬ ನರಹಂತಕನ ಗೋಧ್ರಾ ಕಥೆಯೇ. ಇನ್ನುಳಿದವರು ಪ್ರಗತಿಪರರು ಹಾಗೂ ಬುದ್ಧಿಜೀವಿಗಳು. ಇದೊಂಥರಾ ವಿಚಿತ್ರ ತಳಿ. ತಮಗೆ ತಲೆಯಿಂದ ಕಾಲಿನವರೆಗೂ ರಕ್ತ ಮಾಂಸಗಳ ಬದಲು ಬುದ್ಧಿಯೇ ತುಂಬಿಕೊಂಡಿದೆಯೆಂಬ ಭ್ರಾಂತಿಯ ಜನ. ಉಳಿದವರು ಕೇವಲವೆಂಬ ಉದ್ಧಟತನ. ಜೊತೆಗೆ ಇವರ ಆವುಟವನ್ನು ಎಲ್ಲರೂ ಸಹಿಸ ಲೇಬೇಕೆಂಬ ತಿಕ್ಕಲುತನ. ಇವರೂ ಗುಂಪುಕಟ್ಟಿಕೊಂಡು ತಮ್ಮ ಕೈಲಾದಷ್ಟು ‘ಭಯೋತ್ಪಾದನೆ'(ಭಯ+ಉತ್ಪಾದನೆ) ಮಾಡಿದರು.

ಈಗ ಇವರೆಲ್ಲರಿಗೂ ತಕ್ಕ ಪ್ರತಿಕ್ರಿಯೆ ನೀಡಿದ್ದೇವೆ ನೋಡಿ, ಬಾಲ ಮುದುರಿಕೊಂಡು ಸುಮ್ಮನಾಗಿದ್ದಾರೆ. ರಾಜಕಾರಣಿಗಳು ಪರಸ್ಪರ ದೋಷಾರೋಪಣೆಯ ಕೆಸರೆರಚಾಟದಲ್ಲಿ ನಿರತರಾಗಿದ್ದಾರೆ. ರಾಜ್‍ದೀಪ್ ಸರ್‍ದೇಸಾಯಿ, ಬರ್ಖಾ ದತ್ ಹಾಗೂ ಅರ್ಣಬ್ ಗೋಸ್ವಾಮಿಯರು ಇಂಗು ತಿಂದ ಮಂಗನ ಮುಖ ಮಾಡಿಕೊಂಡು ವಿಧಿಯಿಲ್ಲದೆ ಮೋದಿ ಸರ್ಕಾರದ ಮೊದಲ ದಿಟ್ಟ ಹೆಜ್ಜೆಗಳ ಸಮಾಚಾರ ಬಿತ್ತರಿಸುತ್ತಿದ್ದಾರೆ. ಕಡೇಪಕ್ಷ ಇವರು ಜನರಿಂದ ಓಡಿಹೋಗುತ್ತಿಲ್ಲ. ತಮ್ಮ ಲೆಕ್ಕಾಚಾರ ತಪ್ಪಾದುದನ್ನು ಮುಕ್ತವಾಗಿ ಒಪ್ಪಿಕೊಳ್ಳುತ್ತಿದ್ದಾರೆ. ಆದರೆ ಈ ಬುದ್ಧಿಜೀವಿಗಳು ಹಾಗೂ ಪ್ರಗತಿಪರರ ದಂಡಿದೆಯಲ್ಲ, ಇವರ ಪಾಡು ಯಾರಿಗೂ ಬೇಡ. ಅತ್ತ ತಪ್ಪನ್ನು ಒಪ್ಪಿಕೊಳ್ಳಲಾಗದೆ, ಇತ್ತ ಸತ್ಯವನ್ನು ಅಲ್ಲಗಳೆಯಲೂ ಆಗದೆ ಕಾದ ಹೆಂಚಿನ ಮೇಲೆ ಕುಳಿತಂತೆ ಚಡಪಡಿಸುತ್ತಿದ್ದಾರೆ.

ಮತ್ತಷ್ಟು ಓದು »

17
ಏಪ್ರಿಲ್

ಕಾಂಗ್ರೆಸ್ ರಹಿತ ಭಾರತ ಸಾಧ್ಯವೇ?

– ಡಾ.ಅಶೋಕ್. ಕೆ. ಆರ್

indian-politician1‘ಯಥಾಸ್ಥಿತಿಗೋ ಬದಲಾವಣೆಗೋ ಸ್ಥಿರತೆಗೋ ಅಭಿವೃದ್ಧಿಗೋ ಸ್ಥಳೀಯ ಅನಿವಾರ್ಯತೆಗೋ ಮತ್ತೊಂದಕ್ಕೋ ಮಗದೊಂದಕ್ಕೋ ಒಟ್ಟಿನಲ್ಲಿ ಹೋಗಿ ವೋಟ್ ಮಾಡಿ!’

ಮೋದಿ ಜಪದ ಭಾಜಪ ಕಾಂಗ್ರೆಸ್ಸನ್ನು ಭಾರತದಿಂದ ಸಂಪೂರ್ಣ ನಿರ್ನಾಮವಾಗಿಸುವುದೇ ನಮ್ಮ ಗುರಿ ಎಂದು ಬಹಳಷ್ಟು ಪ್ರಚರಿಸುತ್ತಿದೆ. ಅನೇಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಏಳಿಗೆಯಿಂದ ರಾಷ್ಟ್ರೀಯ ಪಕ್ಷಗಳೆನ್ನಿಸಿಕೊಂಡ ಕಾಂಗ್ರೆಸ್ ಮತ್ತು ಭಾಜಪ ತಮ್ಮ ಅಸ್ತಿತ್ವವನ್ನು ಕಂಡುಕೊಳ್ಳಲೂ ಎಣಗುತ್ತಿರುವ ಪರಿಸ್ಥಿತಿಯಿದೆ. ಒಂದಷ್ಟು ರಾಜ್ಯಗಳಲ್ಲಿ ಭಾಜಪ ಪ್ರಭಾವಶಾಲಿಯಾಗಿ ಮಗದೊಂದಷ್ಟು ಕಡೆ ಕಾಂಗ್ರೆಸ್ ಪ್ರಭಾವಶಾಲಿಯಾಗಿ ಮತ್ತೊಂದು ಪಕ್ಷದ ಏಳಿಗೆಗೆ ಅಡ್ಡಿಯಾಗಿದ್ದರೆ ಇನ್ನುಳಿದವುಗಳಲ್ಲಿ ಮತದಾರ ಒಮ್ಮೆ ಕಾಂಗ್ರೆಸ್ಸಿಗೆ ಮತ್ತೊಮ್ಮೆ ಭಾಜಪಕ್ಕೆ ಅವಕಾಶ ನೀಡುವ ಮನಸ್ಸು ಮಾಡಿದ್ದಾನೆ.
ಕಾಂಗ್ರೆಸ್ಸಿಗರು ಮಾಡುವ ಭ್ರಷ್ಟಾಚಾರದಿಂದ ರೋಸಿ ಹೋಗಿ ಬೇರೊಂದು ಪಕ್ಷಕ್ಕೆ ಮತ ಹಾಕುವ ಜನರ ತೀರ್ಮಾನ ಬಹಳಷ್ಟು ಸಲ ಬೆಂಕಿಯಿಂದ ಬಾಣಲೆಗೆ ಹಾಕಿಸಿಕೊಂಡಂತೆ ಆಗುತ್ತಿದೆ. ಮತ್ತಷ್ಟು ಓದು »

15
ಏಪ್ರಿಲ್

ಪ್ರತ್ಯಕ್ಷ ಕಂಡು ಪರಾಂಬರಿಸಿ ನೋಡಿದ ಮೇಲೂ ನಮೋ ಎನ್ನದಿದ್ದರೆ…

– ರಾಜೇಶ್ ರಾವ್

ಮೋದಿಯಾವ ಘಟನೆ ಸಹನೆಯ ಕಟ್ಟೆಯೊಡೆದು ಸ್ವಾಭಿಮಾನ ಸಿಡಿದೆದ್ದು ನಡೆದಿತ್ತೋ ಆ ಘಟನೆ ಆತನನ್ನು ಜಗತ್ತಿಗೇ ಪರಿಚಯಿಸಿತು. ಜಗತ್ತಿಗೆ ಜಗತ್ತೇ ಆತನನ್ನು ಖಳನಾಯಕನನ್ನಾಗಿ, ರಾಕ್ಷಸನನ್ನಾಗಿ ಕಂಡು ದೂಷಿಸಿತು. ಜೊತೆಯಲ್ಲಿದ್ದವರೂ ದೂರವಾದರು. ಮಾಧ್ಯಮಗಳಿಂದ ನಿತ್ಯ ದೂಷಣೆಗಳ ಸಹಸ್ರನಾಮ. ರಾಷ್ಟ್ರವಿರೋಧಿ ಶಕ್ತಿಗಳಂತೂ ಹಬ್ಬದೂಟವೆಂಬಂತೆ ಈ ಸನ್ನಿವೇಶವನ್ನು ತಮಗೆ ತಕ್ಕಂತೆ ಮಾರ್ಪಡಿಸಿಕೊಂಡು ಕಣ್ಣಿಗೆ ರಾಚುವ ಸತ್ಯವನ್ನು ಕಾಲಗರ್ಭದಲ್ಲಿ ಅಡಗುವಂತೆ ಮಾಡಿದರು. ಮಾಧ್ಯಮಗಳು ಮುಚ್ಚಿಟ್ಟ ಕಾರಣ ಸಾಮಾನ್ಯ ಜನರಿಗೂ ಸತ್ಯ ತಿಳಿಯದೆ ಅವರೂ ದ್ವೇಷಿಸತೊಡಗಿದರು. ಅವನದೆಲ್ಲವನ್ನೂ ಮೌನವಾಗಿ ಸಹಿಸಿದ. ಮೌನವಾಗಿಯೇ ಕೆಲಸವನ್ನು ಮಾಡುತ್ತಾ ತನ್ನ ಜವಾಬ್ದಾರಿಯನ್ನು ಚ್ಯುತಿಯಿಲ್ಲದಂತೆ ಪೂರೈಸಿದ. ಯಾಕೆಂದರೆ ಅವನಲ್ಲೊಬ್ಬ ನಾಯಕನಿದ್ದ, ಸಂಘಟನಕಾರನಿದ್ದ, ಸಂಘದ ಶಿಸ್ತು, ಸಂಯಮ, ಸೇವಾಗುಣದ ಮೂರ್ತರೂಪವಿತ್ತು!

ಅದು 2013ರ ಜೂನ್ ತಿಂಗಳು. ಶಾಂತವಾಗಿದ್ದ ಗಂಗೆ ಉಕ್ಕಿ ಹರಿದಿದ್ದಳು. ಉತ್ತರ ಭಾರತ ಜಲ ಪ್ರಳಯದಿಂದ ತತ್ತರಿಸಿತ್ತು. ಚಾರ್ ಧಾಮಗಳಲ್ಲಿ ಯಾತ್ರಿಕರು ನಾಲ್ಕೂ ಕಡೆ ದಿಕ್ಕಾಪಾಲಾಗಿದ್ದರು. ಉತ್ತರಾಖಂಡದ ಜನರ ಬವಣೆಗೆ ಉತ್ತರ ಹೇಳುವವರಿರಲಿಲ್ಲ. ಕೇಂದ್ರ, ರಾಜ್ಯ ಸರಕಾರಗಳೆರಡೂ ನಿಷ್ಕ್ರಿಯವಾಗಿದ್ದ ಅಂತಹ ಕ್ಲಿಷ್ಟಕರ ಸಮಯದಲ್ಲಿ ಸಹಾಯಕ್ಕಾಗಿ ಪರಿತಪಿಸುತ್ತಿದ್ದ ಸಾವಿರಾರು ಸಂತ್ರಸ್ಥರಲ್ಲಿ ಸುಮಾರು 15,000 ಮಂದಿ ಸಂತ್ರಸ್ಥರನ್ನು ಹುಡುಕಾಡಿ ಅವರ ನೆರವಿಗೆ ಧಾವಿಸಿದ ಆತನ ಪಡೆ, ಸುಮಾರು 80 ಟೊಯೊಟಾ ಇನ್ನೋವಾ ಕಾರುಗಳಲ್ಲಿ ಅವರನ್ನು ಡೆಹ್ರಾಡೂನಿನ ಸುರಕ್ಷಿತ ಸ್ಥಳಕ್ಕೆ ಸಾಗಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದರಲ್ಲದೆ, ಅಲ್ಲಿಂದ 25 ಐಷಾರಾಮಿ ಬಸ್ಸುಗಳ ಸಹಾಯದಿಂದ ನವದೆಹಲಿಗೆ ಪ್ರಯಾಣ ವ್ಯವಸ್ಥೆ ಕಲ್ಪಿಸಿದರು. ಇದು ಒಬ್ಬ ನಾಯಕನಾದವ ಮಾಡುವ ಕಾರ್ಯ.ಪಾಕಿಸ್ತಾನದ ಪ್ರಧಾನಿ ನಮ್ಮ ದೇಶದ ಪ್ರಧಾನಿಯನ್ನು ಹಳ್ಳಿ ಹೆಂಗಸು ಎಂದು ಜರೆದಾಗ ಬೇರೆ ನಾಯಕರಿರಲಿ ಪ್ರಧಾನಿಯ ಪಕ್ಷದ ನಾಯಕರೇ ತುಟಿಪಿಟಿಕ್ಕೆನ್ನದಿದ್ದಾಗ ನಮ್ಮ ದೇಶದ ಪ್ರಧಾನಿಯನ್ನು ಹೀಯಾಳಿಸುವ ಅಧಿಕಾರ ತಮಗಿಲ್ಲವೆಂದು ಹೇಳುವ ಮೂಲಕ ಯುಧಿಷ್ಟಿರನ “ಮೂರನೆಯವ ಎದುರಾದಾಗ ನಾವು ನೂರೈವರು” ಎಂಬ ಮಾತನ್ನು ಅಕ್ಷರಷಃ ಪಾಲಿಸಿದ ನಾಯಕ ಪ್ರಸಕ್ತ ಸನ್ನಿವೇಶದಲ್ಲಿ ಆತನೊಬ್ಬನೇ!

ಮುನ್ನುಗ್ಗುತ್ತಿದ್ದ ವಿಸ್ತರಣಾ ಮನೋಭಾವದ ಚೀನಾಕ್ಕೆ ಖಡಕ್ಕಾಗಿ ಉತ್ತರ ನೀಡಿದ ನಾಯಕ ಆತನಲ್ಲದೆ ಮತ್ಯಾರು? ವೀಸಾಕ್ಕಾಗಿ ಅಂಗಲಾಚದೇ ಅಮೇರಿಕಾದವರನ್ನೇ ಭಾರತದ ವೀಸಾಕ್ಕಾಗಿ ಸರತಿಯಲ್ಲಿ ನಿಲ್ಲುವಂತೆ ಮಾಡುತ್ತೇನೆಂದು ಘೋಷಿಸುವ ಧೈರ್ಯ ಮತ್ಯಾರಿಗಿದೆ? ಹೌದು, ಯಾವ ದೊಣ್ಣೆನಾಯಕನ ಅಪ್ಪಣೆಗೆ ಕಾಯದೇ ಸಂಧಿಗ್ಧ ಪರಿಸ್ಥಿತಿಯಲ್ಲಿ ಸ್ವಯಂ ಖಚಿತ ನಿರ್ಧಾರದೊಂದಿಗೆ ಮುನ್ನುಗ್ಗುವುದು ಮಾತ್ರವಲ್ಲ ಅದನ್ನು ಯಶಸ್ವಿಯಾಗಿ ಪೂರೈಸುವುದನ್ನು ಹಾಗೂ ದೇಶದ ಘನತೆ, ಸ್ವಾಭಿಮಾನ, ಗೌರವಕ್ಕೆ ಚ್ಯುತಿ ಬರದಂತೆ ನಡೆದುಕೊಳ್ಳುವ ಧೈರ್ಯ-ಸ್ಥೈರ್ಯ ಪ್ರದರ್ಶಿಸುವುದನ್ನು ಸರ್ದಾರ ಪಟೇಲ್ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿಯವರ ನಂತರದ ರಾಜಕೀಯ ನಾಯಕರಲ್ಲಿ ನೋಡಬಹುದಾದ ಏಕೈಕ ವ್ಯಕ್ತಿ ನರೇಂದ್ರ ಮೋದಿ!

ಮತ್ತಷ್ಟು ಓದು »

23
ಜನ

ಬೇಕಾಗಿರುವುದು ರಾಜಕೀಯ ಅಸ್ತಿತ್ವವೇ ವಿನಃ ಕೇವಲ ಭ್ರಷ್ಟಚಾರ ನಿಗ್ರಹವಲ್ಲ

– ನವೀನ್ ನಾಯಕ್          

AAPಅಣ್ಣಾ ನೇತೃತ್ವದ ಜನಲೋಕಪಾಲ ಹೋರಾಟದಿಂದ ಪ್ರಸಿದ್ದರಾದ ಅರವಿಂದ್ ಕೇಜ್ರಿವಾಲ್ ದೆಹಲಿ ಗದ್ದುಗೆಗೇರಿ ಬದಲಾವಣೆಯ ಪರ್ವ ತರಲು ಹೊರಟಿದ್ದಾರೆ. ಸರಕಾರ ರಚಿಸಲು ಜನರ ಅಭಿಪ್ರಾಯ ಸಂಗ್ರಹಿಸಿದ ಕಾರಣಕ್ಕೆ ಹಗಲು ರಾತ್ರಿ ಮಾಧ್ಯಮಗಳು ತಲೆದೂಗಿದ್ದೇ ತೂಗಿದ್ದು. ಎಲ್ಲಾ ಮಾಧ್ಯಮಗಳಲ್ಲಿ ಒಂದೇ ಕೂಗು. ಇದೇ ನೈಜ ಪ್ರಜಾಪ್ರಭುತ್ವ!. ಈ ಮಾಧ್ಯಮಗಳ ಕಣ್ಣಿಗೆ ಮೂರು ರಾಜ್ಯಗಳಲ್ಲಿ ಭರ್ಜರಿ ಜಯಗಳಿಸಿದ ಮತ್ತು ದೆಹಲಿಯಲ್ಲಿ ಮೊದಲ ಸ್ಥಾನ ಪಡೆದ ಬಿಜೆಪಿ ನೈಜ ಪ್ರಜಾಪ್ರಭುತ್ವದಲ್ಲಿ ಗೆದ್ದಿದ್ದಲ್ಲ ! ಪಕ್ಷ ಕಟ್ಟಿ ಒಂದು ವರ್ಷದಲ್ಲೇ ಎರಡನೆಯ ಸ್ಥಾನಕ್ಕೆ ಬರುವುದು ಅಚ್ಚರಿಯೇ, ಅವರ ಪ್ರಯತ್ನಕ್ಕೆ ನಾವು ಶಹಭಾಸ್ ಹೇಳಲೇ ಬೇಕು. ದೇಶದ ಭವಿಷ್ಯಕ್ಕೆ ಉತ್ತಮ ಆಡಳಿತ ನೀಡಲು ಆಪ್ ಪಕ್ಷವೇ ಮುಂಚೂಣಿಗೆ ಬರಬೇಕೆಂಬ ನಿರ್ಧಾರವನ್ನು ಕೇಜ್ರಿವಾಲ್ ಯಶಸ್ವಿಯಾಗಿ ಯುವಕರ ಮನಸ್ಸಲ್ಲಿ ತುಂಬಿದ್ದರು. ರಾಜಕೀಯ ಮಾಡುವುದು ಹೇಗೆ ಅಂತ ನಾವು ಕಲಿಸುತ್ತೇವೆ, ನಮಗೆ ಕೆಂಪು ಗೂಟದ ಕಾರು ಬೇಕಿಲ್ಲ, ನಮಗೆ ಭದ್ರತೆ ಬೇಕಿಲ್ಲ, ಸರಕಾರಿ ಭವ್ಯ ಮನೆಯೂ ಬೇಕಿಲ್ಲ ಹೀಗೆ ಒಂದರ ಮೇಲೊಂದಂತೆ ಘೋಷಿಸತೊಡಗಿದರು. ಯುವಕರ ಉತ್ಸಾಹ ಇಮ್ಮಡಿಯಾಗಿತ್ತು. ತಮ್ಮ ನಾಯಕನಿಗೆ ಈ ಜಗದಲ್ಲಿ ಬೇರಾರು ಸರಿಸಾಟಿ ಇಲ್ಲವೆಂಬತೆ ವರ್ತಿಸತೊಡಗಿದರು. ಅಣ್ಣಾ ಹಜಾರೆಯವರು ಯಾವಾಗ ತನ್ನ ಹೆಸರನ್ನು ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಳ್ಳಬೇಡಿ ಎಂದರೋ ಕೇಜ್ರಿವಾಲ್ ಅಭಿಮಾನಿಗಳು ಬುಸುಗುಡತೊಡಗಿದರು. ಸಾಲದೇ ಐಎಸಿ ಚಳುವಳಿಯ ಹಣದ ಲೆಕ್ಕ ಕೇಳಿದರೋ ಎಲ್ಲ ಅಭಿಮಾನಿಗಳು ಸಿಡಿದೆದ್ದರು. ಅಣ್ಣಾ ಮುದುಕರಾಗಿದ್ದಾರೆ ಹುಚ್ಚರಂತೆ ವರ್ತಿಸುತಿದ್ದಾರೆ ಎಂಬ ಕ್ಷುಲ್ಲಕ ಮಾತುಗಳನ್ನು ಸಾಮಾಜಿಕ ತಾಣದ ತುಂಬ ಪಸರಿಸತೊಡಗಿದರು. ಯಾರ ಏಳಿಗೆಗೆ ಯಾರು ಕಾರಣರಾಗಿದ್ದರೋ ಅವರು ಮದುಕರಾಗಿದ್ದರು ಹುಚ್ಚರಾಗಿದ್ದರು.

ಮತ್ತಷ್ಟು ಓದು »

30
ಡಿಸೆ

ಕೇಜ್ರಿವಾಲ್ ಮತ್ತು ಮೋದಿ – ಹೀಗೊಂದು ಮುನ್ನೋಟ

– ಗಣೇಶ್ ಕೆ. ದಾವಣಗೆರೆ

ಮೋದಿ Vs ಕೇಜ್ರಿವಾಲ್ರಾಹುಲ ಗಾಂಧೀ ಮತ್ತು ಅರವಿಂದ ಕೇಜ್ರಿವಾಲ್ ಒಂದೇ ವಯಸ್ಸಿನವರು. ಇಬ್ಬರಿಗೂ ಎಷ್ಟು ವ್ಯತ್ಯಾಸಗಳಿವೆ. ಒಬ್ಬವ ತೀರಾ ಎಳಸು. ಇನ್ನೊಬ್ಬವ ಜನರ ಗಮನವನ್ನ ತನ್ನ ಮಾತುಗಳತ್ತ ಸೆಳೆದ ಯುವಕ. ಹೊಸ ಹೊಸ ಚಿಂತನೆಗಳನ್ನ ಹರಿಯಬಿಟ್ಟವ. ಆಡಳಿತದಲ್ಲಿ ಪಳಗಿದ ಮೋದಿಗೆ ರಾಹುಲ ಯಾವ ರೀತಿಯಲ್ಲೂ ಸರಿಸಮನಲ್ಲ. ಜೊತೆಗೆ, ಪ್ರತಿಸ್ಪರ್ಧಿಯೂ ಅಲ್ಲ. ರಾಹುಲಗಾಂಧೀ ವಯಸ್ಸಿನವನೇ ಆದ ಕೇಜ್ರಿವಾಲ್ ಯಾವ ರಾಜಕೀಯ ಅನುಭವವೂ ಇಲ್ಲದೇ ಪಕ್ಷವೊಂದನ್ನ ಕಟ್ಟಿ ಆರು ತಿಂಗಳಲ್ಲಿ ಆಧಿಕಾರದ ಹೊಸ್ತಿಲತ್ತ ತಂದು ನಿಲ್ಲಿಸುವುದು ಸಾಮಾನ್ಯ ಸಂಗತಿಯಲ್ಲ.

ನಮ್ಮೆಲ್ಲ ಪೂರ್ವಾಗ್ರಹಗಳನ್ನ ಬದಿಗಿಟ್ಟು ಈ ಯಶಸ್ಸನ್ನ ಗಮನಿಸಬೇಕಾದ ಅಗತ್ಯವಿದೆ. ಕೆಲವರಿಗೆ ಕೇಜ್ರಿವಾಲನನ್ನ ಹೊಗಳಿದರೆ, ಮೆಚ್ಚಿಕೊಂಡರೆ, ಮೋದಿ ಗತಿಯೇನು ಅನ್ನುವ ಚಿಂತೆ. ದೆಹಲಿಯಲ್ಲಿ ಕಾಂಗ್ರೇಸ್ ವಿರೋಧಿ ಅಲೆ ಇತ್ತು ಅನ್ನೋದು ಸರ್ವವಿದಿತವಾದ ಸಂಗತಿ. ಆದರೆ, ಆ ಅಧಿಕಾರ ವಿರೋಧಿ ಅಲೆಯ ಸಂಪೂರ್ಣ ಲಾಭ ಪಡೆಯಲಿಕ್ಕೆ ಬಿಜೆಪಿಗೆ ಏಕೆ ಸಾಧ್ಯವಾಗಲಿಲ್ಲ? ಮೋದಿಯೂ ಕೂಡಾ ಬಂದು ಹೋಗಿದ್ದರಲ್ಲ? ಕಾಂಗ್ರೇಸ್ ಆಡಳಿತ ವಿರೋಧಿ ಅಲೆಯಿರುವಾಗ ಮೋದಿಯವರ ಭಾಷಣಕ್ಕೆ ಸರಳ ಬಹುಮತ ಕೊಡಿಸುವಷ್ಟೂ ಶಕ್ತಿ ಸಾಮರ್ಥ್ಯಗಳಿಲ್ಲವೇ? ಹಾಗಾದರೆ, ಬಿಜೆಪಿ ಎಡವಿದ್ದೆಲ್ಲಿ?
ಮತ್ತಷ್ಟು ಓದು »

29
ಡಿಸೆ

ಸರ್ವಾಧಿಕಾರಿ ಧೋರಣೆಯ ಪ್ರಗತಿಪರರು ಮತ್ತು ಮೋದಿ

– ಪ್ರಸನ್ನ,ಬೆಂಗಳೂರು

Modiಅಹಮದಾಬಾದಿನ ಮೆಟ್ರೊಪಾಲಿಟನ್ ನ್ಯಾಯಾಲಯ ಪ್ರಗತಿಪರರಿಗೆ ಒಂದು ತಡೆಯಲಾರದ ಆಘಾತ ನೀಡಿದೆ. ಈ ಆಘಾತವನ್ನು ಸಹಿಸಿಕೊಂಡು ಈಗಲಾದರೂ ಈ ಬುದ್ದಿಗೇಡಿಗಳು ತಮ್ಮ ಮಾರ್ಗ ಸರಿ ಪಡಿಸಿಕೊಳ್ಳುತ್ತರೇನೋ ಎಂಬ ನಮ್ಮ ನಿರೀಕ್ಷೆ ಹುಸಿಯಾಗುವಂತಿದೆ, ಯಥಾ ಪ್ರಕಾರ ಅವರು ತಮ್ಮ ಪ್ರಜಾಪ್ರಭುತ್ವ ವಿರೋಧಿ ಧೋರಣೆಯಲ್ಲೇ ಇನ್ನೂ ಬಿದ್ದು ಒದ್ದಾಡುತ್ತಿದ್ದಾರೆ. ನಾನಂತೂ ಇವರನ್ನು ಪ್ರಜಾಪ್ರಭುತ್ವ ನ್ಯಾಯಾಂಗ ವ್ಯವಸ್ಥೆ ಮತ್ತು ಭಾರತದ ಕಾನೂನಗಳನ್ನು ಗೌರವಿಸದ ದೇಶದ್ರೋಹಿಗಳೆಂದೆ ಪರಿಗಣಿಸುತ್ತೇನೆ. ಹೇಗೆಂದಿರಾ?

ನೀವೆ ಗಮನಿಸಿ ೨೦೦೨ದಿಂದೀಚೆಗೆ ಇವರು ಹಾಡುತ್ತಿದ್ದುದು ಒಂದೇ ರಾಗ ಅದು ಮೋದಿ ನರಹಂತಕ ಎಂಬುದು, ಇವರ ಅಧಿನಾಯಕಿಯಂತೂ ಆತನನ್ನು ಸಾವಿನ ವ್ಯಾಪಾರಿಯೆಂದು ಜರೆದು ನಾಲಿಗೆ ಕುಲ ಹೇಳುತ್ತದೆಂಬುವುದನ್ನು ತೋರಿಸಿಕೊಟ್ಟುಬಿಟ್ಟಿದ್ದಲ್ಲದೇ ತನ್ನ ನಾಲಿಗೆಯನ್ನು ತಾನೆ ಕಚ್ಚಿ ಕೊಳ್ಳುವಂತಾಯ್ತು. ಗುಜರಾತಿನ ಜನರು ಸತತ ೩ ಬಾರಿ ಇವರ ತಲೆಯ ಮೇಲೆ ಕಲ್ಲು ಹಾಕಿದ್ದೂ ಆಯ್ತು. ಆದರೂ ನಮ್ಮ ಕರ್ನಾಟಕದ ಪ್ರಗತಿಪ್ರರು ಮಾತ್ರ ಇನ್ನೂ ಆ ರೋಗದಿಂದ ಹೊರಬರಲೇ ಇಲ್ಲ.

ಮತ್ತಷ್ಟು ಓದು »

11
ಡಿಸೆ

ಎಎಪಿ ಗೆಲುವಿನ ಗುಂಗಿನಲ್ಲಿ ‘ಪೊರಕೆ’ ಹಿಡಿಯಲು ಹೊರಟವರು

ರಾಕೇಶ್ ಶೆಟ್ಟಿ

AAPಮಿನಿ ಲೋಕಸಭಾ ಚುನಾವಣೆ ಎಂದೇ ಪರಿಗಣಿತವಾಗಿದ್ದ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಸಮೀಕ್ಷೆಯಂತೆಯೇ ೪ ರಾಜ್ಯಗಳಲ್ಲಿ ಬಿಜೆಪಿ ಮತ್ತು ೧ ರಾಜ್ಯದಲ್ಲಿ ಕಾಂಗ್ರೆಸ್ಸ್ ತನ್ನ ಮುದ್ರೆಯೊತ್ತಿದೆ.ಆದರೆ,ಆಮ್ ಆದ್ಮಿ ಪಕ್ಷಕ್ಕೆ ೨೮ ಸ್ಥಾನಗಳನ್ನು ನೀಡುವ ಮೂಲಕ ಅಚ್ಚರಿಯ ಫಲಿತಾಂಶ ನೀಡಿದ್ದು ದೆಹಲಿಯ ಮತದಾರರು.

ಎಲ್ಲಾ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಎಎಪಿ ಪಕ್ಷ ೧೦-೧೫ ಸೀಟು ಪಡೆಯಬಹುದು ಮತ್ತು ಆ ಮೂಲಕ ಸರ್ಕಾರ ರಚಿಸುವಲ್ಲಿ ನಿರ್ಣಾಯಕ ಪಾತ್ರವಹಿಸಬಹುದು ಅನ್ನುವ ಅಭಿಪ್ರಾಯಗಳೇ ಬಂದಿತ್ತು.ಆದರೆ ಮತದಾರಪ್ರಭು ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷದೆಡೆಗೆ ಹೆಚ್ಚು ಉದಾರಿಯಾಗಿದ್ದಾನೆ.’ರಾಜಕಾರಣಿಗಳೆಲ್ಲ ಭ್ರಷ್ಟರು’ ಅನ್ನುತಿದ್ದ ಕೇಜ್ರಿವಾಲ್ ತಾವೇ ಒಂದು ರಾಜಕೀಯ ಪಕ್ಷ ಸ್ಥಾಪಿಸುತ್ತೇವೆ ಅಂತ ಹೊರಟು ನಿಂತು ಪ್ರಸಕ್ತ ರಾಜಕೀಯ ಪಕ್ಷಗಳಿಗಿಂತ ವಿಭಿನ್ನವಾಗಿ ಅದನ್ನು ಕಟ್ಟಿಕೊಳ್ಳುತ್ತ ಹೊರಟಾಗ ಯಾವ ರಾಜಕಾರಣಿಗಳು ಅದನ್ನು ಲೆಕ್ಕಕ್ಕೇ ತೆಗೆದುಕೊಳ್ಳಲಿಲ್ಲ. ದೆಹಲಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಸ್ ನಡುವೆ ನೇರಾನೇರ ಹಣಾಹಣಿ ನಡೆಯಲಿದೆ ಅನ್ನುವಷ್ಟು ನಿರ್ಲಕ್ಷ್ಯದಲ್ಲಿದ್ದ ಶೀಲಾ ದಿಕ್ಷೀತ್ ಕೂಡ,ಕೇಜ್ರಿವಾಲ್ ಮುಂದೆ ಸೋತು ಸುಣ್ಣವಾಗಿದ್ದಾರೆ.

ಮತ್ತಷ್ಟು ಓದು »