ದಿನೇ ದಿನೇ ಹೆಚ್ಚುತ್ತಿರುವ ‘ಮೋದಿ ಜಪ’
– ನರೇಂದ್ರ ಕುಮಾರ ಎಸ್.ಎಸ್
ದಿನಗಳೆದಂತೆ, ೨೦೧೪ರ ಮಹಾ ಚುನಾವಣೆಯು ಹತ್ತಿರ ಬಂದಂತೆ ಭಾರತದಾದ್ಯಂತ ‘ಮೋದಿ ಜಪ’ ಹೆಚ್ಚುತ್ತಿದೆ. ಇದನ್ನು ಕೆಲವರು ‘ಮೋದಿ ಜ್ವರ’, ‘ಮೋದಿತ್ವ’ ಎಂದೂ ಬಣ್ಣಿಸುತ್ತಿರುವರು. ಯಾರು ಏನೇ ಹೇಳಲಿ, ಭಾರತದಾದ್ಯಂತ ನಿತ್ಯವೂ ಚರ್ಚಿಸಲ್ಪಡುತ್ತಿರುವ ಒಂದು ವಿಷಯವೆಂದರೆ “ನರೇಂದ್ರ ಮೋದಿ”. ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ, ಸಾಮಾಜಿಕ ತಾಣಗಳಾದ ಟ್ವಿಟ್ಟರ್ ಹಾಗೂ ಪೇಸ್^ಬುಕ್ ಗಳಲ್ಲಿ, ಯುವಕರು ನಡೆಸುವ ಚರ್ಚೆಗಳಲ್ಲಿ, ಕ್ಷೌರಿಕನ ಅಂಗಡಿಯಲ್ಲಿ ನಡೆಯುವ ವಾರ್ತಾಲಾಪಗಳಲ್ಲಿ, ಹಳ್ಳಿಗಳಲ್ಲಿ ನಡೆಯುವ ಸಂಭಾಷಣೆಗಳಲ್ಲಿ – ಎಲ್ಲರೂ ಮೋದಿಯ ಕುರಿತು ಮಾತನಾಡುತ್ತಿದ್ದಾರೆ! ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಜನರ ಚರ್ಚೆಗಳಲ್ಲಿ ಇಷ್ಟರಮಟ್ಟಿಗೆ ಹೊಕ್ಕಿರುವ ಮತ್ತೊಂದು ಹೆಸರಿಲ್ಲ.
ನಾನು ಕೆಲವು ದಿನಗಳ ಹಿಂದೆ, ಬೆಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದೆ. ರಸ್ತೆಗಳೆಲ್ಲ ಗುಂಡಿಗಳಿಂದ ಗಬ್ಬೆದ್ದು ಹೋಗಿದ್ದವು. ಈ ರೀತಿ ಸ್ವಲ್ಪ ಹೊತ್ತು ಪ್ರಯಾಣಿಸಿದ ನಂತರ, ನನಗೆ ನಾನೇ “ಯಾವಾಗ ಸರಿ ಹೋಗುತ್ತೋ ನಮ್ಮ ಬೆಂಗಳೂರು” ಎಂದು ಸ್ವಲ್ಪ ಗಟ್ಟಿಯಾಗಿ ಹೇಳಿಕೊಂಡೆ. ಕೂಡಲೇ, ಆಟೋ ರಿಕ್ಷಾದ ಚಾಲಕ, “ಸಾರ್, ನರೇಂದ್ರ ಮೋದಿಯವರಿಗೆ ಒಂದು ಚಾನ್ಸ್ ಕೊಟ್ಟು ನೋಡಿ, ಎಲ್ಲಾ ಸರಿ ಹೋಗುತ್ತೆ” ಎಂದು ಬಿಡೋದೇ!?
ಮೂರ್ತಿಗಳೇ,ಸೈನ್ಯ ಸಾಮ್ರಾಟ ಅಶೋಕನ ಬಳಿಯೂ ಇತ್ತು.ಆದರೆ,ಗೆದ್ದಿದ್ದು ಕಳಿಂಗ …!
– ರಾಕೇಶ್ ಶೆಟ್ಟಿ
ಭಾರತ ಬಿಡದಿರಲು ನಿರ್ಧರಿಸಿದ ಮೇಲೆ ನಮ್ಮ ಅನಂತ ಮೂರ್ತಿಯವರು, ಕಳೆದ ವಾರ ಸಿ.ಎಂ ಸಿದ್ದರಾಮಯ್ಯ ನವರಿಗೆ ಮೋದಿಯಂತೆ ಸೈಬರ್ ಸೈನ್ಯ ಕಟ್ಟಲು ಹೇಳಿ ಮತ್ತೊಮ್ಮೆ ಸುದ್ದಿಯಾದರು.
ಭಾರತದ ದೇಶ ಕಂಡ ಬೃಹತ್ ಸೈನ್ಯ ಸಾಮ್ರಾಟ ಅಶೋಕನ ಬಳಿಯೂ ಇತ್ತು ಮೂರ್ತಿಗಳೇ.ಆದರೆ ಅವನೆದುರು ಸೋತು ಗೆದ್ದಿದ್ದು ’ಕಳಿಂಗ’ …! ಸಾಮ್ರಾಟ ಅಶೋಕನ ಸೈನ್ಯದೆದುರಿಗೆ ಕಳಿಂಗ ಅನ್ನುವ ಪುಟ್ಟ ರಾಷ್ಟ್ರ ಏನೇಂದರೇ ಏನು ಆಗಿರಲಿಲ್ಲ.ಅವರಲ್ಲಿ ಅಶೋಕನ ಬಳಿಯಿದ್ದಷ್ಟು ಶಸ್ತ್ರ-ಅಸ್ತ್ರಗಳಿರಲಿಲ್ಲ,ಸೈನ್ಯವೂ ಇರಲಿಲ್ಲ.ಅವರಲ್ಲಿ ಇದ್ದಿದ್ದು ಸ್ವಾಭಿಮಾನ ಮತ್ತು ಧೈರ್ಯ. ಸಾಮ್ರಾಟ ಅಶೋಕನ ಸೈನ್ಯಕ್ಕೆ ಎದೆಯೊಡ್ಡಿ ಅವರು ಹೇಳಿದ್ದು “ನೀನು ಮಹಾನ್ ಸಾಮ್ರಾಟನಿರಬಹುದು,ನಿನ್ನ ಶಕ್ತಿ ಅಸಾಧಾರಣವಿರಬಹುದು.ಆದರೆ,ನಮಗೆ ಕನಿಷ್ಟ ಆತ್ಮಾಭಿಮಾನದಿಂದ ಸಾಯುವ ಅಧಿಕಾರವಾದರೂ ಇದೆ- ನೀನದನ್ನು ನಮ್ಮಿಂದ ಕಿತ್ತುಕೊಳ್ಳಲಾರೆ” ಅನ್ನುವುದೇ ಆಗಿತ್ತು.
ನೀವು ದುಡ್ಡು ಕೊಟ್ಟು,ಏನು ಮಾಡಬೇಕು ಅಂತ ಹೇಳಿಕೊಟ್ಟು ಕಟ್ಟಬಹುದಾದ ಸೈಬರ್ ಸೈನ್ಯ ಸಾಮ್ರಾಟ ಅಶೋಕನ ಸೈನ್ಯದಂತೆಯೇ ಅಗಾಧವಾಗಿರಬಹುದು.ಆದರೆ ಅದಕ್ಕೆದುರಾಗಿ ನಿಂತಿರುವುದು ಸ್ವಾಭಿಮಾನಿ ’ಕಳಿಂಗ’ದಂತಹ ಸೈನ್ಯ. ಈ ಸೈನಿಕರು ದುಡ್ಡಿಗಾಗಿ,ಅಧಿಕಾರಕ್ಕಾಗಿ,ಆಯ್ಕೆ ಸಮಿತಿಗಳ ಸ್ಥಾನಗಳಿಗಾಗಿ,ವಿವಿಗಳ ನಾಮಫಲಕಗಳಲ್ಲಷ್ಟೇ ರಾರಾಜಿಸುವ, ವಿವಿಗಳ ಕುರ್ಚಿ ಬಿಸಿ ಮಾಡುವ ಹುದ್ದೆಗಳಿಗಾಗಿಯೋ ಇಲ್ಲ ಪ್ರಶಸ್ತಿಗಳಿಗಾಗಿಯೋ ಕಾದು ಕುಳಿತಿರುವ ಅವಕಾಶವಾದಿಗಳಲ್ಲ.ಇವರೆಲ್ಲ ಕೇಂದ್ರ ಸರ್ಕಾರದ ಭ್ರಷ್ಟಚಾರದ ವಿರುದ್ಧ ಜೊತೆಯಾದವರು. ನಿಮ್ಮ ಸೆಕ್ಯುಲರ್ ಬ್ರಿಗೇಡ್ ಕಳೆದ ೧೧ ವರ್ಷಗಳಲ್ಲಿ ಮೋದಿ ಅನ್ನುವವನ ಮೇಲೆ ಏಕಪಕ್ಷೀಯವಾಗಿ ಕಟ್ಟುತ್ತ ಬಂದ ಸುಳ್ಳಿನ ಕೋಟೆಯನ್ನು ಕಂಡು ರೋಸಿ ಹೋಗಿ, ಆ ಸುಳ್ಳಿನ ಕೋಟೆಯ ಭೇಧಿಸಲು ತಾನಾಗೇ ಹುಟ್ಟಿಕೊಂಡ ಸೈನ್ಯ. ನಿಮ್ಮ ಸೆಕ್ಯುಲರ್ ಬ್ರಿಗೇಡಿನ ಸುಳ್ಳುಗಳಿಗೆ ಸಾಕ್ಷಿ ಬೇಕಾದರೇ, ನಿಮ್ಮದೇ ಹೇಳಿಕೆಯ ಸುತ್ತ ತಿರುಗೋಣ ಬನ್ನಿ ಮೂರ್ತಿಗಳೇ,
ಮೋದಿ ಅಭಿಮಾನ ಮತ್ತು ಅಭಿಮಾನಿಗಳ ಸುತ್ತ
– ಮಹೇಶ್ ಪ್ರಸಾದ್ ನೀರ್ಕಜೆ
ಎಲ್ಲೆಡೆ ಮೋದಿ ಜಪ (ಪರ ವಿರೋಧ) ಆಗುತ್ತಿರುವಾಗ ಮೋದಿ ಬೆಂಬಲಿಗನಾಗಿದ್ದುಕೊಂಡೆ ನನ್ನದೊಂದು ಕ್ರಿಟಿಕ್ ಬರಹ ಇರಲಿ ಅನಿಸಿ ಬರೆಯುತ್ತಿದ್ದೇನೆ.
ಮೊದಲನೆಯದಾಗಿ ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದ ಗಾದೆ ನಮಗೆ ಗೊತ್ತೇ ಇದೆ. ಮೇಲ್ನೋಟಕ್ಕೆ ಇದು ತೀರಾ ಸರಳ ವಿಚಾರ ಎನಿಸಿದರೂ ಆಚರಣೆಗೆ ಕಷ್ಟ ಅಂತ ಮೋದಿ ಮತ್ತು ಅವರ ಬೆಂಬಲಿಗರು ತುಳಿಯುತ್ತಿರುವ ಹಾದಿ ನೋಡಿದಾಗ ಅನಿಸುತ್ತಿದೆ. ಮೊನ್ನೆ ಮೊನ್ನೆ ಮೋದಿ ಪ್ರಧಾನ ಮಂತ್ರಿ ಅಭ್ಯರ್ಥಿ ಅಂತ ಆಯ್ಕೆ ಆದಾಗ ರಾಜನಾಥ್ ಸಿಂಗ್ ಜೊತೆ ಮೋದಿ ಪರಸ್ಪರ ಸಿಹಿ ಹಂಚಿಕೊಂಡಿದ್ದನ್ನು ನೋಡಿದಾಗ ಮೊದಲ ಬಾರಿಗೆ ನನಗೆ ಎಲ್ಲೋ ಎಡವಟ್ಟಾಗುತ್ತಿದೆ ಅನಿಸಿತು. ಟಿವಿ ಯಲ್ಲಿ ಇದನ್ನು ನೋಡುತ್ತಿದ್ದ ನನ್ನಂಥವರಿಗೆ ಆಗ ಈ ಗಾದೆ ನೆನಪಾದದ್ದು ಸುಳ್ಳಲ್ಲ. ಈಗ ಮೋದಿ ಬೆಂಬಲಿಗರ ವಿಚಾರದಲ್ಲೂ ನನಗೆ ಈ ಗಾದೆ ನೆನಪಾಗುತ್ತಿದೆ.
ಮತ್ತೊಮ್ಮೆ ಹೇಳುವುದಾದರೆ ನಾನು ಮೋದಿ ಪ್ರಧಾನ ಮಂತ್ರಿ ಆಗಬೇಕೆಂದು ಬಯಸುವವನು ಆದರೆ ಅದರ ಜೊತೆ ಜೊತೆಗೇ ನಾಳೆ ಭ್ರಮನಿರಸ ಗೊಳ್ಳಲು ಸಿಧ್ಧವಿಲ್ಲದಿರುವವನು. ಯಡ್ಯೂರಪ್ಪ ವಿಚಾರದಲ್ಲಿ ಈಗಾಗಲೇ ಒಮ್ಮೆ ಭ್ರಮನಿರಸ ಆಗಿದ್ದೇವೆ. ಹಾಗೆ ನೋಡಿದರೆ ಯಡ್ಯೂರಪ್ಪ ಕೂಡ ಪರಿಸ್ಥಿತಿ ಒತ್ತಡದಿಂದ ಭ್ರಷ್ಟರಾದರು ಹೊರತಾಗಿ ಸ್ವತಹ ಅವರೇ ಭ್ರಷ್ಟರಲ್ಲ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಅವರಿಗೆ ಸ್ಪಷ್ಟ ಬಹುಮತ ಸಿಕ್ಕಿದ್ದಿದ್ದರೆ ಅವರು ರೆಡ್ಡಿಗಳ ಕಾಲು ಹಿಡಿಯಬೇಕಾಗಿರಲಿಲ್ಲ ಮತ್ತು ಕೊನೆಗೆ ಸಿಬಿಐ ಬಲೆಗೆ ಬಿದ್ದು ಜೈಲಿಗೂ ಹೋಗುತ್ತಿರಲಿಲ್ಲ. ಮೋದಿ ಕೂಡ ಹಾಗೆ ಮಾಡ್ತಾರೆ ಅಂತ ಹೇಳ್ತಿಲ್ಲ, ಆದರೆ ಮೋದಿ ಪ್ರಚಾರ ಅನ್ನುವುದು ಒಂದು ಮುಟ್ಟಬೇಕಾದ ಗುರಿ ಹೊರತು ಸಂಭ್ರಮಿಸಬೇಕಾದ ಮತ್ತು ಸಂಭ್ರಮದಲ್ಲಿ ಮೈಮರೆಯುವ ವಿಚಾರ ಅಲ್ಲ ಅನ್ನುವುದನ್ನು ಅವರ ಅಭಿಮಾನಿಗಳು ಅರ್ಥಮಾಡಿಕೊಂಡರೆ ಸಾಕು.
ಮೋದಿ ಫ್ಯಾಕ್ಟರ್ : ಒಮರ್ ಅಬ್ದುಲ್ಲಾರ ಮಾತುಗಳು ಯುಪಿಎ ದಿಗಿಲಿನ ಕನ್ನಡಿಯೇ?
ಮೂಲ : ಸಂಜಯ್ ಸಿಂಗ್
ಅನುವಾದ : ಪ್ರಶಾಂತ್ .ಕೆ
“ನನಗನ್ನಿಸುತ್ತೆ, ನಾವೇನಾದರೂ( ಯು.ಪಿ.ಎ. ಅಂಗಪಕ್ಷಗಳು) ‘ಮೋದಿ ಫ಼್ಯಾಕ್ಟರ್’ ನ್ನು ನಿರ್ಲಕ್ಷಿಸಿದರೆ ಅದು ಮೂರ್ಖತನವಾಗುತ್ತೆ; ಅಲ್ಲದೆ ಅದೊಂದು ಅಪಾಯಕಾರಿ ತಪ್ಪು ಕೂಡ..”
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ‘ಒಮರ್ ಅಬ್ದುಲ್ಲಾ’, ‘ಹಿಂದುಸ್ತಾನ್ ಟೈಮ್ಸ್’ ಗೆ ನೀಡಿದ ಸಂದರ್ಶನದಲ್ಲಿ ಆಡಿದ ಮಾತುಗಳಿವು. ದೇಶದ ಅತ್ಯಂತ ಸಮಸ್ಯಾತ್ಮಕ ರಾಜ್ಯದ, ಅದರಲ್ಲೂ ಆ ರಾಜ್ಯದ ಆಗು- ಹೋಗುಗಳು ಇಡೀ ದೇಶವನ್ನ ತಲ್ಲಣಗೊಳಿಸುತ್ತಿರುವ ಸಂದರ್ಭದಲ್ಲಿ, ಆ ರಾಜ್ಯದ ಮುಖ್ಯಮಂತ್ರಿಯ ಮಾತುಗಳನ್ನು ಹಗುರವಾಗಿ ಕಾಣುವ ಹಾಗಿಲ್ಲ. ‘ಒಮರ್’ ‘ರಾಹುಲ್ ಗಾಂಧಿ’ಯವರ ಆಪ್ತ ಮಿತ್ರ, ಅಲ್ಲದೆ ಅವರ ತಂದೆ ‘ಫ಼ರೂಕ್ ಅಬ್ದುಲ್ಲ’ ಯು.ಪಿ.ಎ. ಸರಕಾರದಲ್ಲಿ ಮಂತ್ರಿ ಕೂಡ ಹೌದು; ಈ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಇನ್ನೂ ಮಹತ್ವ ಪಡೆದುಕೊಳ್ಳುತ್ತವೆ, ‘ರಾಹುಲ್ ಗಾಂಧಿ’ ಉತ್ತರ ಪ್ರದೇಶ, ರಾಮ್ ಪುರದಲ್ಲಿ ಹೇಳಿದ ” ೨೦೧೪ ರಲ್ಲಿ ಕೇಂದ್ರದಲ್ಲಿ ಯುವಶಕ್ತಿಯ ಸರಕಾರ ಅಧಿಕಾರಕ್ಕೆ ಬರುತ್ತದೆ, ಅದು ದೇಶವನ್ನೇ ಬದಲಾಯಿಸಬಲ್ಲುದು” ಎಂಬ ಮಾತುಗಳನ್ನು ಒಮರ್ ಪೂರ್ತಿ ಒಪ್ಪಿದಂತೆ ಕಾಣುವುದಿಲ್ಲ; ನಿಮಗೆ ಗೊತ್ತಿರಲಿ, ರಾಹುಲ್ ಮತ್ತು ಒಮರ್ ಇಬ್ಬರೂ ಒಂದೇ ವರ್ಷದಲ್ಲಿ ಜನಿಸಿದವರು ಮತ್ತು ಇಬ್ಬರಿಗೂ ಏಗ ೪೩ ವರ್ಷ ವಯಸ್ಸು. ಅನೇಕ ಕಾಂಗ್ರೆಸ್ ನಾಯಕರಂತೆ, ರಾಹುಲ್ ಗಾಂಧಿಯ ಈ ಭಾಷಣದ ಬಳಿಕ ಮುಂದಿನ ಸರಕಾರ ನಡೆಸಲು ಆತನೇ ಸೂಕ್ತ ವ್ಯಕ್ತಿ ಎಂದು ಅಭಿಪ್ರಾಯ ವ್ಯಕ್ತಪಡಿಸದ ಕಾರಣ , ನ್ಯಾಷನಲ್ ಕಾನ್ಫ಼ರೆನ್ಸ್ ನ ನಾಯಕನ ಮಾತುಗಳನ್ನು ವಿಶೇಷವಾಗಿ ಪರಿಗಣಿಸಬೇಕು.
ಅನ೦ತಮೂರ್ತಿಯವರಿಗೆ ಅಭಿಮಾನಿಯೊಬ್ಬನ ಪತ್ರ
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
ಸನ್ಮಾನ್ಯ ಶ್ರೀ ಅನ೦ತಮೂರ್ತಿಗಳಿಗೆ,
ನಮಸ್ಕಾರಗಳು,
ಈಗ ಸದ್ಯದ ಪರಿಸ್ಥಿತಿಯಲ್ಲಿ ’ಹೇಗಿದ್ದೀರಿ..’? ಎ೦ದು ಕೇಳುವುದೇ ತಪ್ಪೇನೋ.ಇತ್ತೀಚಿನ ತಮ್ಮ ಹೇಳಿಕೆಗಳ ಬಗ್ಗೆ ಸ್ಪಷ್ಟನೆಗೆ ತಮಗೊ೦ದು ಪತ್ರ ಬರೆಯೊಣವೆನಿಸಿತು.ಪತ್ರವನ್ನು ನೇರವಾಗಿ ತಮಗೆ ಕಳುಹಿಸೊಣವೆ೦ದುಕೊ೦ಡೆ.ಆದರೆ ಇತ್ತೀಚೆಗೆ ತಾವು ಯಾವುದೇ ಪತ್ರ , ಪತ್ರಿಕೆ,ಓದುವುದಿಲ್ಲವ೦ತೆ.ಮೊನ್ನೆಯೊ೦ದು ಟಿವಿ ಸ೦ದರ್ಶನದಲ್ಲಿ ತಾವೇ ಹೇಳಿದ್ದೀರಿ.ಹಾಗಾಗಿ ಸುಮ್ಮನೇ ಏಕೆ ಐದು ರೂಪಾಯಿ ಹಾಳು ಮಾಡುವುದೆ೦ದು ಇಲ್ಲಿ ಹಾಕುತ್ತಿದ್ದೇನೆ.ಸಾಧ್ಯವಾದರೇ ಓದಿ,ಓದದಿದ್ದರೂ ಚಿ೦ತೆಯಿಲ್ಲ.
ಏನಾಗಿದೆ ಸರ್ ನಿಮಗೆ..? ಮತಿಭ್ರಮಣೆಯಾ ..? ಹೊಸದೊ೦ದು ಪ್ರಶಸ್ತಿ ಪಡೆಯುವ ಉಮ್ಮೇದಿಯಾ…?ಅಥವಾ ಸುದ್ದಿಯಲ್ಲಿರುವ ರೋಗವಾ..? ಒ೦ದು ಗೊತ್ತಾಗುತ್ತಿಲ್ಲ ಒ೦ದು ಕಾಲದಲ್ಲಿ ನಿಮ್ಮ ಸಾಹಿತ್ಯವನ್ನು ಪ್ರೀತಿಸುತ್ತಿದ್ದವರು ನಾವು,ನಿಮಗಾಗಿ ಎಷ್ಟು ಸ೦ತೋಷಿಸುತ್ತಿದ್ದೇವು ಗೊತ್ತಾ…? ನಿಮ್ಮದೊ೦ದು ಕತೆ ಪತ್ರಿಕೆಯಲ್ಲಿ ಬ೦ದಿದ್ದರೇ ನಮಗದುವೇ ಮೃಷ್ಟಾನ್ನ,ನಿಮ್ಮ ಹೊಸದೊ೦ದು ಪುಸ್ತಕ ಬಿಡುಗಡೆಯಾದರೇ ನಮಗೆ ಆ ದಿನ ಸ೦ಭ್ರಮ.ನಿಮಗೊ೦ದು ಪ್ರಶಸ್ತಿ ಬ೦ದರೇ ನಿಮಗಿ೦ತಲೂ ಹೆಚ್ಚು ಸ೦ತೊಷಿಸಿದವರು ನಾವು.ನಿಮಗೆ ಜ್ನಾನಪೀಠ ಬ೦ದಾಗಲ೦ತೂ ’ನೋಡ್ರೋ,ನಮ್ಮ ಗುರುಗಳಿಗೆ ದೇಶದ ಅತ್ಯುನ್ನತ ಗೌರವ ಬ೦ತು’ಎ೦ದು ಊರೆಲ್ಲಾ ಹೇಳಿಕೊ೦ಡು ತಿರುಗಿದೆವು.ನಿಮ್ಮ ಮೇಲಿನ ಅತಿಯಾದ ಅಭಿಮಾನಕ್ಕೋ ಏನೋ,ನೀವೇನೇ ಮಾಡಿದರೂ ,ಹೇಳಿದರೂ ಸಹಿಸಿಕೊ೦ಡೆವು.ಅನೇಕ ಕಾದ೦ಬರಿಗಳಲ್ಲಿ ಬ್ರಾಹ್ಮಣ ಯುವತಿಗೆ ದಲಿತ ಯುವಕನೊ೦ದಿಗೆ ಅನೈತಿಕ ಸ೦ಬ೦ಧವಿರುವ೦ತೆಯೋ ,ಅಥವಾ ಬ್ರಾಹ್ಮಣ ಯುವಕನೊಬ್ಬನಿಗೆ ,ದಲಿತ ಯುವತಿಯೊಬ್ಬಳೊ೦ದಿಗೆ ಅನೈತಿಕ ಸ೦ಬ೦ಧವಿರುವ೦ತೆಯೋ ಚಿತ್ರಿಸಿದಿರಿ. ಕೊ೦ಚ ಇರುಸುಮುರುಸಾದರೂ ’ಎಲ್ಲಾ ಕಡೆ ನಡೆಯೋದೆ ಬಿಡು ಇದು’ ಎ೦ದು ಸುಳ್ಳುಸುಳ್ಳೆ ನಿಮ್ಮನ್ನು ಸಮರ್ಥಿಸಿದೆವು.’ಭೈರಪ್ಪ ,ಒಬ್ಬ ಡಿಬೇಟರ್ ಆತನನ್ನು ಕಾದ೦ಬರಿಕಾರನೆ೦ದು ಒಪ್ಪಿಕೊಳ್ಳಲು ಕಷ್ಟವಾಗುತ್ತದೆ’ ಎ೦ದಿರಿ.’ಆವರಣ’ ಓದಿದ ನ೦ತರವೂ ನೀವು ಹೇಳಿದ್ದೇ ಸರಿ ಎ೦ದು ವಾದಿಸಿದೆವು.’ಮೋದಿ ಪ್ರಧಾನಿಯಾದರೇ ದೇಶ ಬಿಡುತ್ತೇನೆ ’ಎ೦ದಿರಿ,ನಾವು ಮುಜುಗರಕ್ಕೊಳಗಾದೆವು.ಆದರೆ ಈಗ ಇದೇನಿದು ನಿಮ್ಮ ಹೊಸರಾಗ..? ಆರ್.ಎಸ್.ಎಸ್. ಎ೦ದರೇ ’ಹುಚ್ಚು ನಾಯಿ ರೋಗ’ಎ೦ದುಬಿಟ್ಟೀರಿಲ್ಲ ಈಗ.. ಹೇಗೆ ಸಮರ್ಥಿಸುವುದು ನಿಮ್ಮ ಇ೦ಥ ನೀಚ ತಪ್ಪನ್ನು ಗುರುಗಳೇ.ದಯವಿಟ್ಟು ಕ್ಷಮಿಸಿ,ನಮ್ಮಿ೦ದ ಸಾಧ್ಯವಿಲ್ಲ.
ಮತ್ತಷ್ಟು ಓದು 
ವಿರೋಧಿಗಳೆಸೆದ ಕಲ್ಲನ್ನೇ ತನ್ನ ಏಳಿಗೆಯ ಮೆಟ್ಟಿಲಾಗಿಸಿಕೊಂಡ ಮೋದಿ
– ಪ್ರಸನ್ನ ಬೆಂಗಳೂರು
ಭಾರತದ ರಾಜಕೀಯ ಇತಿಹಾಸದಲ್ಲಿ ೧೦ ವರ್ಷಗಳಿಗೂ ಹೆಚ್ಚು ಕಾಲ ವಿರೋಧ ಪಕ್ಷಗಳು,ಮಾಧ್ಯಮಗಳು,ಪ್ರಗತಿಪರರು ಟಾರ್ಗೆಟ್ ಮಾಡಿರುವುದು ನರೇಂದ್ರ ಮೋದಿಯವರನ್ನು . ಮೋದಿಯವನರನ್ನು ಬಿಜೆಪಿ ತನ್ನ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಮೇಲೆ ಅವರ ಮೇಲಿನ ಹಿಂದಿನ ಆರೋಪಗಳ ಜೊತೆ ಜೊತೆಗೆ ಅವರ ಅಭಿವೃದ್ಧಿ ಕಾರ್ಯಗಳನ್ನು ವಿಶ್ಲೇಷಣೆಗೊಳಪಡಿಸಲಾಗುತ್ತಿದೆ. ಈ ಹಿಂದೆ ಪ್ರಧಾನಿಯಾದವರ ಬಗ್ಗೆ ಇಷ್ಟೊಂದು ವಿಶ್ಲೇಷಣೆ ವಿಮರ್ಶೆ ಪರೀಕ್ಷೆ ನಡೆದಿತ್ತೆ? ನಡೆದು ಅಂತಹ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಬಂದಿದ್ದರೆ ಬಹುಶಃ ಭಾರತವಿಂದು ಇಂತಹ ಪರಿಸ್ಥಿತಿಯಲ್ಲಿರುತ್ತಿರಲಿಲ್ಲ ಅಲ್ಲವೆ? ಮೋದಿ ಈ ಪರಿ ಬೆಳೆದಿದ್ದಕ್ಕೆ ಕಾರಣ ಹುಡುಕುತ್ತಾ ಹೊರಟವನಿಗೆ ಕಂಡದ್ದು ಈ ವಿಭಿನ್ನವಾದ ಆದರೆ ತೆರೆಮರೆಯ ಕಾರಣ.
ಅದು ತನ್ನ ಕುಕೃತ್ಯಕ್ಕೆ ತಾನೆ ಬಲಿಯಾದ ಆತನ ದ್ವೇಷ ವರ್ಗ.ಇವರ ದ್ವೇಷ,’ತನ್ನೊಡಲ ಬೆಂಕಿ ತನ್ನನ್ನಲ್ಲದೆ ಅನ್ಯರನ್ನು ಸುಡದು‘ ಎಂಬ ಜನಪ್ರಿಯ ವಚನದಂತೆ ದ್ವೇಷಿಗಳೇ ನಾಲಿಗೆ ಕಚ್ಚಿಕೊಳ್ಳುವಂತಾಗಿರುವುದು ಸುಳ್ಳಲ್ಲ. ತಾನು ವೈಭವೀಕರಿಸಿದ ಸುಳ್ಳು ತನಗೇ ತಿರುಗುಬಾಣವಾಗಿರುವುದು ಅವರ ಈಗಿನ ಬಡಬಡಿಕೆಗೆ ಕಾರಣವಾಗಿದೆ. ಈ ವರ್ಗ ಮೋದಿಯ ವಿರುದ್ದ ಮಾಡಿದ ಅಪಪ್ರಚಾರಗಳೇ ಅಪಚಾರಗಳೇ ಅವರಿಗೆ ಇಂದು ಮುಳುವಾಗಲು ಮೂಲ ಕಾರಣವೆಂದು ಅವರು ಒಪ್ಪಿಕೊಳ್ಳಲು ಸಿದ್ದರಿಲ್ಲದಿದ್ದರೂ ಅದು ಸತ್ಯವಲ್ಲವೆಂದು ತಳ್ಳಿ ಹಾಕಲು ಅವರಿಗೆ ಸಾಧ್ಯವಾಗುವುದಿಲ್ಲ.
ಮೋದಿ ಮಾಡದ ತಪ್ಪಿಗೆ ಅವನನ್ನು ಹೊಣೆಗಾರನನ್ನಾಗಿಸುವ ಮೂಲಕ ಆತನ ಬೆಳವಣಿಗೆ ದಾರಿ ಮಾಡಿಕೊಟ್ಟದ್ದು ಹೇಗೆ?
ಅಭಿವ್ಯಕ್ತಿ ಸ್ವಾತಂತ್ರ್ಯ ಅನ್ನುವುದು ಯಾರ ಸ್ವತ್ತು ಅನಂತ ಮೂರ್ತಿಗಳೇ?
– ನವೀನ್ ನಾಯಕ್
ಮೊನ್ನೆ ಮೊನ್ನೆ ನಡೆದ ಒಂದು ಕಾರ್ಯಕ್ರಮದಲ್ಲಿ ಅನಂತ ಮೂರ್ತಿಯವರು ” ನರೇಂದ್ರ ಮೋದಿ ಪ್ರಧಾನಿಯಾಗುವ ದೇಶದಲ್ಲಿ ನಾನು ಬದುಕಿರಲು ಇಷ್ಟಪಡುವುದಿಲ್ಲ ” ಎಂಬ ಹೇಳಿಕೆ ನೀಡಿ ಮೋದಿ ಅಭಿಮಾನಿಗಳ ವಿರೋಧಕ್ಕೆ ಗುರಿಯಾಗಿದ್ದರು.ತದನಂತರ ನಡೆದ ಸಂದರ್ಶನದಲ್ಲಿ ಅನಂತ ಮೂರ್ತಿಯವರು ” ಮೋದಿ ಪ್ರಧಾನಿಯಾಗಬಾರದೆಂದು ” ಎಂಬ ಉದ್ದೇಶದಿಂದ ಹಾಗೆ ಹೇಳಿದೆ. ಯೌವನದಲ್ಲಿಯಾಗಿದ್ದರೆ ಮೋದಿ ಪ್ರಧಾನಿಯಾಗಗೊಡವುದಿಲ್ಲ ಅಂತ ಹೇಳುತ್ತಿದ್ದೆ ಈಗ ವಯಸ್ಸಾಗಿದೆ ಅದಕ್ಕೆ ಹಾಗೆ ಹೇಳಿದೆ,ನನ್ನ ನಿಲುವೊಂದೆ ಮೋದಿ ಈ ದೇಶದ ಪ್ರಧಾನಿಯಾಗಬಾರದು. ಇದರರ್ಥ ಮೋದಿ ಪ್ರಧಾನಿಯಾದರೆ ನಾನು ದೇಶ ಬಿಟ್ಟು ಹೋಗುತ್ತೇನೆಂದು ಅರ್ಥವಲ್ಲ ವೆಂದು ಸಮಜಾಯಿಸಿ ನೀಡಿದರು.
ಹಾಗೆ ಮೋದಿ ಅಭಿಮಾನಿಗಳು ನೀಡುತ್ತಿರುವ ಉತ್ತರ ಮತ್ತು ಅವರು ಪ್ರತಿಕ್ರಿಯಿಸುತ್ತಿರುವ ರೀತಿ ನೋಡಿದರೆ ಅಧಿಕಾರವಿಲ್ಲದೇನೇ ಹೀಗೆ ಇನ್ನು ಮೋದಿ ಅಧಿಕಾರವಹಿಸಿಕೊಂಡ ಮೇಲೆ ಅಭಿವ್ಯಕ್ತಿ ಸ್ವಾತಂತ್ರ್ಯಇರೋದೇ ಇಲ್ಲ, ಇದು ನಿಜವಾದ ಅಪಾಯವೆಂದಿದ್ದಾರೆ. ಅದೇ ಸಂದರ್ಶನದಲ್ಲಿ ಪ್ರಜಾಪ್ರಭುತ್ವವಾದಿಗೆ ಪ್ರಜಾಪ್ರಭುತ್ವವನ್ನು ಸಂಶಯದಿಂದ ನೋಡುವ ಶಕ್ತಿಯಿರಬೇಕು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳನ್ನು ಮರುಳು ಮಾಡುವ ವಿಧಾನದಿಂದ ಆಯ್ಕೆಯಾಗಿ ಬರುವವರನ್ನು ವಿರೋಧಿಸುವ ಗುಣವನ್ನು ಬೆಳೆಸಿಕೊಳ್ಳಬೇಕು.
ಅನಂತ ಮೂರ್ತಿಯವರಿಗೆ ಮಾತ್ರವೇ ಅಥವಾ ಅವರನ್ನು ಬೆಂಬಲಿಸುವವರಿಗೆ ಮಾತ್ರವೇ ಇರುವುದಾ ಆಭಿವ್ಯಕ್ತಿ ಸ್ವಾತಂತ್ರ್ಯ? ಇಲ್ಲಿ ಒಬ್ಬರ ಉದ್ದೇಶ ಮಾತ್ರ ಸ್ಪಷ್ಟಪಡಿಸಿಕೊಂಡರೆ ಅದು ಫ್ಯಾಸಿಸ್ಷ್ ಧೋರಣೆಯಾಗುತ್ತದೆ. ಕೇವಲ ಅನಂತಮೂರ್ತಿಯವರ ಹೇಳಿಕೆಗೆ ಅಥವ ಅವರನ್ನು ಸಮರ್ಥಿಸುವ ಹಿಂಬಾಲಕರಿಗೆ ಮಾತ್ರವಾ ಹಿಂದೆ ಉದ್ದೇಶವಿರುವುದು. ಆ ಹೇಳಿಕೆಯನ್ನು ಟೀಕಿಸುವವರಿಗೆ ಉದ್ದೇಶವಿಲ್ಲವೇ. ಅನಂತಮೂರ್ತಿಯವರು ನಾನು ಮೋದಿ ಪ್ರಧಾನಿಯಾದರೆ ಬದುಕಿರಲು ಇಷ್ಟಪಡುವುದಿಲ್ಲ ಎಂಬ ಹೇಳಿಕೆಗೆ ಅದಕ್ಕೆ ವಿರೋಧವಾಗಿ ನೀವು ಸಾಯಿರಿ ಎಂಬ ಹೇಳಿಕೆಯನ್ನು ಮೋದಿ ಅಭಿಮಾನಿಗಳು ಕೊಟ್ಟಿದ್ದಾರೆ. ಇಲ್ಲಿ ಮೋದಿ ಅಭಿಮಾನಿಗಳು ಕತ್ತಿ ಕುಡಾರಿ ಹಿಡಿದುಕೊಂಡು ಅನಂತಮೂರ್ತಿಯವರ ಹಿಂದೆ ಬಿದ್ದಿದ್ದಾರಾ, ಇಲ್ಲವಲ್ಲ. ಅವರ ಹೇಳಿಕೆಗೆ ಇದು ವಿರೋಧವಾಗುತ್ತೆ ವಿನಃ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವುದಿಲ್ಲ. ಹೇಳಿಕೆಯ ಹಿಂದಿರುವ ಉದ್ದೇಶ ಎರಡೂ ಕಡೆ ಗಮನಿಸುವುದು ಉತ್ತಮ.
ಅನ೦ತಮೂರ್ತಿ ,ಮೋದಿ ಮತ್ತು ಅಭಿವ್ಯಕ್ತಿ ಸ್ವಾತ೦ತ್ರ್ಯ
– ಗುರುರಾಜ ಕೊಡ್ಕಣಿ,ಯಲ್ಲಾಪುರ
ಅನುಚಿತ ಕಾರಣಗಳಿಗೆ ಯು.ಆರ್. ಅನ೦ತಮೂರ್ತಿ ಸುದ್ದಿಯಾಗುವುದು ಹೊಸದೇನಲ್ಲ.ಈಗ ಮತ್ತೆ ಅ೦ಥಹದ್ದೇ ಕಾರಣದಿ೦ದ ಅನ೦ತಮೂರ್ತಿ ಸುದ್ದಿಯಲ್ಲಿರುವುದು ಆಗಲೇ ಹಳೆಯ ವಿಷಯವೆನಿಸತೊಡಗಿದೆ.’ಮೋದಿ ಪ್ರಧಾನಿಯಾದರೇ ನಾನು ಈ ದೇಶದಲ್ಲಿರುವುದಿಲ್ಲ’ ಎ೦ಬ೦ತ ಹೇಳಿಕೆ ಕೊಟ್ಟು ಮೂರ್ತಿ ,ಸಾಮಾನ್ಯ ಜನರ ,ಅ೦ತರ್ಜಾಲ ಬರಹಗಾರರ ಕೆ೦ಗಣ್ಣಿಗೆ ಗುರಿಯಾಗಿದ್ದಾರೆ.ಅವರ ಪರ ವಿರೋಧದ ಮಾತುಗಳು ಧಾರಾಕಾರವಾಗಿ ಸಾಮಾಜಿಕ ತಾಣಗಳಲ್ಲಿ ,ವೃತ್ತಪತ್ರಿಕೆಗಳಲ್ಲಿ ಹರಿಯತೊಡಗಿವೆ.ಅವರು ದೇಶವನ್ನ ಬಿಟ್ಟು ಪಾಕಿಸ್ತಾನಕ್ಕೋ,ಅಫಘಾನಿಸ್ತಾನಕ್ಕೋ ಹೋಗಲಿ ಎ೦ದು ಕೆಲವರೆ೦ದರೇ, ಹಾಗೆಲ್ಲ ಅವರ ಬಗ್ಗೆ ಮಾತನಾಡಬಾರದು ,ಅವರು ಹಿ೦ದೆಲ್ಲ ಕನ್ನಡ ಸಾಹಿತ್ಯಕ್ಕೆ ಕೊಟ್ಟ ಕೊಡುಗೆಯನ್ನು ಮರೆತು ಮಾತನಾಡುವುದು ತಪ್ಪು ಎ೦ದು ವಾದಿಸುತ್ತಾರೆ ಕೆಲವರು.ಬಿಡಿ ಅದು ಅವರವರ ಭಾವಕ್ಕೆ,ಅವರವರ ಭಕುತಿಗೆ.
ಆದರೆ ಇಲ್ಲೊ೦ದು ವಿಷಯವನ್ನು ಗಮನಿಸಲೇಬೇಕು. ಅನ೦ತಮೂರ್ತಿ ಜಾತ್ಯಾತೀತವಾದಿಗಳೆ೦ದು ಹಾಗಾಗಿ ಅವರು ಏನೇ ಹೇಳಿದರೂ ಹಿ೦ದೂಗಳು ಅವರನ್ನು ಹೀಗೆಳೆಯುತ್ತಾರೆ೦ದೂ ಕೆಲವರು ವಾದಿಸುತ್ತಾರೆ.ಅಲ್ಲದೇ ಎಸ್.ಎಲ್ ಭೈರಪ್ಪ ಹಿ೦ದುತ್ವವಾದಿಯಾಗಿರುವುದರಿ೦ದ ಅವರು ಏನೇ ಬರೆದರೂ ಅವರನ್ನು ಹೊಗಳಿ ಅಟ್ಟಕ್ಕೇರಿಸುತ್ತಾರೆ೦ಬುದೂ ಇವರ ವಾದ.ಇದು ಶುದ್ಧ ಮೂರ್ಖತನವೆನ್ನದೇ ಬೇರೆ ವಿಧಿಯಿಲ್ಲ.’ವ೦ಶವೃಕ್ಷ’ ದಲ್ಲಿನ ಸಾ೦ಪ್ರದಾಯಿಕ ಬ್ರಾಹ್ಮಣ ಮನೆಯಲ್ಲಿ ’ನಿಯೋಗ’( ಮಕ್ಕಳನ್ನು ಪಡೆಯುವುದಕ್ಕೋಸ್ಕರ ಗ೦ಡನನ್ನು ಹೊರತುಪಡಿಸಿ ಬೇರೊಬ್ಬನೊ೦ದಿಗೆ ಸ೦ಬ೦ಧ ಹೊ೦ದುವುದು) ಪದ್ದತಿಯಿ೦ದ ಜನಿಸುವ ಶ್ರೀನಿವಾಸ ಶ್ರೋತ್ರಿಯ ಪಾತ್ರವನ್ನು ಸೃಷ್ಟಿಸಿದವರು ಭೈರಪ್ಪನವರಲ್ಲವೇ…? ಸ೦ಗೀತದ ಕಥಾವಸ್ತುವಿದ್ದರೂ , ಒಬ್ಬ ಶಾಸ್ತ್ರೀಯ ಸ೦ಗೀತದ ಗುರುವೊಬ್ಬನೊ೦ದಿಗೆ ,ಅವನ ಶಿಷ್ಯೆಗಿರಬಹುದಾದ ಅನೈತಿಕ ಸ೦ಬ೦ಧ,ನಾಟ್ಯ ಪ್ರವೀಣೆಯೊಬ್ಬಳಿಗೆ ಅವಳ ಶಿಷ್ಯನೊ೦ದಿಗಿರಬಹುದಾದ ಸ೦ಬ೦ಧಗಳ ಬಗ್ಗೆ ಎಳೆ ಎಳೆಯಾಗಿ ಬಿಡಿಸಿಡುವ ’ಮ೦ದ್ರ’ ಯಾರ ಕಾದ೦ಬರಿ..?
ನಮೋ ಅಭಿವೃದ್ಧಿ ಮಂತ್ರಕ್ಕೆ ಅನುಸರಿಸಬೇಕಾದ ಪ್ರಚಾರತಂತ್ರ ಯಾವುದು?
– ನವೀನ್ ನಾಯಕ್
ನರೇಂದ್ರ ಮೋದಿ ಇತ್ತೀಚೆಗೆ ಅತಿ ಹೆಚ್ಚಾಗಿ ಚರ್ಚೆಗೆ ತುತ್ತಾಗುತಿದ್ದಾರೆ. ಮೋದಿಯವರೇ ಮುಂದಿನ ಪ್ರಧಾನಿಯಾಗಬೇಕೆಂದು ಹಲವಾರು ರೀತಿಯಲ್ಲಿ ಉತ್ಸಾಹಿ ಯುವಕರು ಸ್ವಯಂಪ್ರೇರಣೆಯಿಂದ ಕೆಲಸ ನಿರ್ವಹಿಸುತಿದ್ದಾರೆ. ಅಭಿಮಾನಿಗಳ ಗುಂಪುಗಳಿರಬಹುದು, ಸಾಮಾಜಿಕ ತಾಣದಲ್ಲಿರುವ ಪೇಜ್, ಗ್ರೂಪ್ ಯಾವುದೇ ಆಗಬಹುದು. ರಾಜಕೀಯ ವಿಷಯದಲ್ಲಿ ಮಲಗಿದ್ದ ಯುವಪಡೆ ಎದ್ದು ನಿಂತಿರುವುದು ಸ್ವಾಗತಾರ್ಹ. ಪ್ರಸಕ್ತ ರಾಜಕೀಯ ದೊಂಬರಾಟದಲ್ಲಿ ಕಡಿವಾಣ ಹಾಕಬೇಕೆಂದರೆ ಯುವಕರ ಪಾತ್ರ ಬೇಕೆಬೇಕು. ಇತಿಹಾಸವೂ ಅದನ್ನೇ ಸಾರಿ ಸಾರಿ ಹೇಳಿದೆ. ನಮೋ ವಿಷಯದಲ್ಲಿ ಗಂಭೀರವಾದ ವಿಚಾರವೆಂದರೆ ಈ ಯುವಕರ ಕೆಲಸ ನೀರಿಕ್ಷಿತ ಮಟ್ಟವನ್ನು ತಲುಪುತ್ತದೆಯಾ. ಇವರ ಉತ್ಸಾಹಕ್ಕೆ 2014 ತಣ್ಣೀರೆರಚಬಹುದೇ ಎಂಬ ಅನುಮಾನ ನನಗೆ. ನನ್ನ ಅನುಮಾನಕ್ಕೆ ಕಾರಣವಿಲ್ಲದೆಯಿಲ್ಲ.
ಮೋದಿಯವರನ್ನು ಪ್ರಚಾರ ಮಾಡುತ್ತಿರುವ ಶೈಲಿ ಸ್ವತಃ ನಮೋ ಅಭಿವೃದ್ದಿ ಕನಸ್ಸಿನ ವಿರೋಧವಾಗಿದೆ. ಮುನ್ನುಗುತ್ತಿರುವ ವೇಗದಲ್ಲಿ ಗುರಿಯನ್ನೇ ಮರೆಯಲಾಗಿದೆ. ಮೋದಿ ನಾಯಕತ್ವದಲ್ಲಿ ಸರಕಾರ ರಚಿಸಬೇಕಾದರೆ ಆ ಸರಕಾರ ನಮ್ಮ ಕನಸ್ಸಿನ ಭಾರತ ಕಟ್ಟಬೇಕಾದರೆ ಮೋದಿ ಹೆಸರಲ್ಲಿ ಅಥವಾ ಬಿಜೆಪಿ ಹೆಸರಲ್ಲಿ ಗೆಲ್ಲುವ ಅಭ್ಯರ್ಥಿ ಹೇಗಿರಬೇಕು, ಅವನ ಕನಸುಗಳೇನಾಗಿರಬೇಕು, ಸಮಾಜ ಪರಿವರ್ತನೆಯಲ್ಲಿ ಆತನ ಸ್ಪಷ್ಟ ನಿರ್ಧಾರವೇನು. ಈ ಅಂಶಗಳು ಮುಖ್ಯವಾಗುವುದಿಲ್ಲವೇ? ಈ ಮಹತ್ತರ ಅಂಶಗಳನ್ನು ಮರೆತು ಅವರ ಹೆಸರಲ್ಲಿ ಅಯೋಗ್ಯರನ್ನು ಗೆಲ್ಲಿಸಿಬಿಟ್ಟರೆ. ಕಂಡ ಕನಸು ತಿರುಗಿ ಬೆಂಕಿ ಕೆಂಡವಾಗುತ್ತದೆಯಲ್ವಾ? ಕರ್ನಾಟಕದಲ್ಲಿ ಬದಲಾವಣೆ ಭರದಲ್ಲಿ ಬಿಜೆಪಿ ಬೆಂಬಲಿಸಿದಾಗ ಯಡವಟ್ಟಾಗಿದ್ದು ಈ ಅಂಶಗಳೇ. ಅಪಾತ್ರರೆಲ್ಲ ಗೆದ್ದು ಉಂಡಾಡಿ ಗುಂಡನ ಹಾಗೆ ಆಡಿದ್ದ ಉದಹಾರಣೆ ಕಣ್ಣ ಮುಂದಿರುವಾಗ ಮತ್ತದೇ ಹೆಜ್ಜೆಯನ್ನಿಟ್ಟರೆ ಏನು ಪ್ರಯೋಜನ ?.. ಬದಲಾವಣೆ ಎಲ್ಲರಿಗೂ ಬೇಕು ಅದೇ ಭರದಲ್ಲಿ ಯೋಗ್ಯರು ಮತ್ತು ಅಯೋಗ್ಯರ ನಡುವಿನ ವ್ಯತ್ಯಾಸ ಮರೆಯಬಾರದು.
ಮತ್ತಷ್ಟು ಓದು 
ಮೋದಿ ಸ್ವಲ್ಪ ಸಿಹಿ , ಸ್ವಲ್ಪ ಕಹಿ
– ಕೆ.ಎಂ.ವಿಶ್ವನಾಥ (ಮಂಕವಿ) ಮರತೂರ
ನಮ್ಮ ಭಾರತ ಬಹು ಭವ್ಯವನ್ನು ಮೆರೆಯುವ ದೇಶ, ಪ್ರಪಂಚದಲ್ಲೆ ಉತ್ತಮವಾದ ಇತಿಹಾಸ ಹೊಂದಿರುವ ದೇಶ ಅನೇಕ ಅದ್ಭುತಗಳಿಗೆ ಹೆಸರಾದ ದೇಶ , ರಾಜಕೀಯದಲ್ಲಿ ಈಡಿ ಪ್ರಪಂಚವೆ ಕಣ್ಣರಳಿಸಿ ನೋಡುವಂತೆ ಇರುವ ದೇಶ , ಇಂದಿನ ರಾಜಕೀಯ ಏಕೊ ಬೇಸರ ಮೂಡಿಸುತ್ತಿದೆ. ಏಕೆಂದರೆ ಎಲ್ಲವು ಗಿಮಿಕ್ ಬರಿ ಜಾಹಿರಾತು ಜೀವನ ಜಾಹಿರಾತಿನಲ್ಲಿ ರಾಜಕೀಯ ನೈಜವಾಗಿ ಜನರ ಮುಟ್ಟು ಕೆಲಸಗಳು ಆಗುತ್ತಿಲ್ಲ ಎಂಬುವುದು ಭಾರತೀಯರ ಪಾಲಿಗೆ ಕಹಿಸತ್ಯ.
ಇತ್ತಿಚಿಗೆ ನಮ್ಮ ಅಂತರಜಾಲ ತಾಣಗಳಲ್ಲಿ ಮಾನ್ಯ ಮೋದಿಯವರ ವಿಚಿತ್ರ ಜಾಹಿರಾತುಗಳನ್ನು ನೋಡಿ ಗಾಬರಿ ಹುಟ್ಟಿಸುತ್ತವೆ. ಇನ್ನೇನು ತಾನು ಈ ದೇಶದ ಪ್ರಧಾನಿಯಾಗಿರುವೇನು ಎಂಬ ಕಲ್ಪನೆ ಅವು ನೊಡುಗರಿಗೆ ಮೂಡಿಸುತ್ತವೆ. ಮುಗ್ದ ಜನರನ್ನು ಇನ್ನಷ್ಟು ಮಂದರನ್ನಾಗಿ ಮಾಡುವ ಈ ಜಾಹಿರಾತುಗಳು ಅವರಿಂದ ಅದೆಷ್ಟು ಹಣ ವಸೂಲಿ ಮಾಡಬಹುದು ಲೆಕ್ಕಹಾಕಿ ನಾಳೆ ಇವರು ನಮ್ಮ ದೇಶದ ಪ್ರಧಾನಿಯಾದರೆ ಈಡಿ ನಮ್ಮ ದೇಶವನ್ನು ಜಾಹಿರಾತಿನಲ್ಲಿ ಮುಳಗಿಸುವುದರಲ್ಲಿ ಸಂದೇಹವೆ ಇಲ್ಲಾ.
ಮೊನ್ನೆ ಪ್ರತಾಪ ರವರು ಬರೆದ ಮೋದಿ ಯಾರು ತುಳಿಯದ ಹಾದಿ ಪುಸ್ತಕ ಓದಿದೆ ಅಲ್ಲಿ ಪುಸ್ತಕ ದುದ್ದಕ್ಕು ಅವರ ವ್ಯಕ್ತಿತ್ವ ಬಹಳ ಮಾರ್ಮಿಕವಾಗಿ ಬರೆದಿದ್ದಾರೆ. ಅವರು ಅತಿ ಚಿಕ್ಕ ವಯಸ್ಸಿನಲ್ಲಿಯೆ ಈ ರಾಜಕೀಯ ಹಾದಿ ಹಿಡಿದು ಆರ್ ಎಸ್ ಎಸ್ ನ ಪಕ್ಕ ಕಾರ್ಯಕರ್ತನಾಗಿ ಮತ್ತೆ ಅದೆ ಗರಡಿಯಲ್ಲಿ ಪಳಗಿದ ಹುಲಿ ಎಂಬ ಮಾತು ಒಂದಡೆ ಕೇಳಿ ಬರುತ್ತದೆ. ಅವರ ಛಲ ಸಾಧನೆ ಎಲ್ಲವು ಮೆಚ್ಚಲೇಬೇಕು ಒಬ್ಬ ವ್ಯಕ್ತಿ ಯಾರ ಸಹಾಯವಿಲ್ಲದೆ ರಾಜಕೀಯ ರಂಗದಲ್ಲಿ ಅಷ್ಟು ಮೇಲೆತ್ತರಕ್ಕೆ ಬೆಳಿಯುವವುದು ಸಾಮಾನ್ಯವಾದ ಮಾತಲ್ಲಾ, ಆದರೆ ತಾನು ಈ ದೇಶದ ಪ್ರಧಾನಿಯಾಗಬೇಕು ಎನ್ನುವುದು ಸಾಮಾನ್ಯ ಜನ ಮಾತಾಡಿ ಅವರಿಗೆ ಗೌರವದಿಂದ ಸೂಚಿಸಬೇಕು, ಆದರೆ ಅದೇಕೊ ಮೋದಿಯವರು ಈ ಜಾಹಿರಾತಿನ ಸಹಾಯ ಪಡೆದು ತಾವು ಮುಂದಿನ ಪ್ರಧಾನಿಯೆಂದು ಬಿಂಬಿಸುತ್ತಿರುವರು ತಿಳಿಯದು, ಇದು ಹುಲಿಗೆ ಹೋಲಿಸುವ ರೀತಿ ಸರಿಯೆ ನೀವೆ ಯೋಚಿಸಿ.
ಮತ್ತಷ್ಟು ಓದು 




