ವಿಷಯದ ವಿವರಗಳಿಗೆ ದಾಟಿರಿ

Posts tagged ‘ಯುವಕರು’

4
ಏಪ್ರಿಲ್

ಬದಲಾವಣೇ ತರಲು ಬೇಕಿರುವುದು “ಮನಸ್ಸು” ವಯಸ್ಸಲ್ಲ…!

-ರಾಕೇಶ್ ಶೆಟ್ಟಿ

ARONMN“ರಾಜಕಾರಣಕ್ಕೆ ಯುವಕರು ಬರಬೇಕು” ಹಾಗೂ “ರಾಜಕಾರಣಿಗಳಿಗೆ ನಿವೃತ್ತಿ ವಯೋಮಿತಿಯಿರಬೇಕು” ಅನ್ನುವ ಚರ್ಚೆಗಳು ಪದೇ ಪದೇ ನಡೆಯುತ್ತಲೇ ಇರುತ್ತವೆ.ನನ್ನ ಮಟ್ಟಿಗೆ ಯುವಕರು ರಾಜಕೀಯಕ್ಕೆ ಬಂದರೆ/ಯುವಕರ ಕೈಗೆ ಅಧಿಕಾರ ಸಿಕ್ಕರೆ ಎಲ್ಲವೂ ಬದಲಾಗುತ್ತದೆ ಅನ್ನುವುದು ಒಂದು ’ಮಿಥ್’ ಅಷ್ಟೇ.ನಿಜಕ್ಕೂ ಬದಲಾವಣೆ ಬಯಸಲು/ಮಾಡಲು ಬೇಕಾಗಿರುವುದು ವಯಸ್ಸೋ? ಮನಸ್ಸೋ?

ಭಾರತದ ಅತಿಕಿರಿಯ ಮುಖ್ಯಮಂತ್ರಿ ಅನ್ನುವ ಹೆಗ್ಗಳಿಕೆ ಉ.ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ (೩೯) ಅವರದ್ದು.ಅವರು ಗಾದಿಯ ಮೇಲೆ ಕುಳಿತು ಮೊನ್ನೆ ಮೊನ್ನೆಗೆ ಒಂದು ವರ್ಷ ಕಳೆದಿದೆ.ಈ ಒಂದು ವರ್ಷದಲ್ಲಿ ಈ ಬಿಸಿ ರಕ್ತದ ಯುವ ಮುಖ್ಯಮಂತ್ರಿ ಅಧಿಕಾರ ಚಲಾವಣೆಯಲ್ಲಿ ಯಾವುದಾದರೂ ಭರವಸೆಯುತ (’ಕ್ರಾಂತಿಕಾರಕ’ ಅನ್ನುವ ದೊಡ್ಡ ಪದವೂ ಬೇಡ) ರೀತಿಯಲ್ಲಿ ರಾಜ್ಯಭಾರ ಮಾಡಿದ್ದಾರೆಯೇ? ಕನಿಷ್ಟ ಮಂತ್ರಿಮಂಡಲ ರಚನೆ ಮಾಡುವಾಗಲಾದರೂ ಆರೋಪ ಮುಕ್ತರಿಗೆ ಸ್ಥಾನ ಕೊಟ್ಟರೇನು? ಇವರ ಮಂತ್ರಿಮಂಡಲದಲ್ಲಿ ಶೇ.೫೩ರಷ್ಟು ಮಂದಿ ಸಚಿವರ ಮೇಲೆ ಕ್ರಿಮಿನಲ್ ಆರೋಪಗಳಿವೆ.ವರ್ಷದಿಂದ ಉತ್ತರ ಪ್ರದೇಶ ಸುದ್ದಿಯಲ್ಲಿದ್ದರೆ ಅದು ಬರಿ ಕೆಟ್ಟ ಸುದ್ದಿಗಳ ಮೂಲಕವಷ್ಟೇ.ಇತ್ತೀಚೆಗೆ ತಾನೇ ಪ್ರತಾಪ್ ಗಢದಲ್ಲಿ ಡಿವೈಎಸ್ಪಿ ಜಿಯಾ-ಉಲ್-ಹಕ್ ರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದ್ದು ನೆನಪಿರಬೇಕಲ್ಲ.ಒಬ್ಬ ಯುವ (ಅನನುಭವಿ) ಮುಖ್ಯಮಂತ್ರಿಗೆ ಭರವಸೆಯ ಕಾರ್ಯಕ್ರಮ ರೂಪಿಸುವಲ್ಲಿ ಇನ್ನೊಂದಿಷ್ಟು ಸಮಯ ಬೇಕು ಅಂತ ಇಟ್ಟುಕೊಂಡರೂ, ಅಪರಾಧ,ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮೊದಲಿಗೆ ಬೇಕಿದಿದ್ದು ಗಟ್ಟಿ ಮನಸ್ಸು.ಬಹುಷಃ ಅದೇ ಈ ಯುವ ಮುಖ್ಯಮಂತ್ರಿಯಲ್ಲಿ ಕಾಣುತ್ತಿಲ್ಲ.ತನ್ನ ಸುತ್ತಲೂ ಕ್ರಿಮಿನಲ್ ಆರೋಪಿಗಳ ಸಂಪುಟವನ್ನಿಟ್ಟುಕೊಂಡು “ಗೂಂಡಾ ರಾಜ್ಯ”ವನ್ನು ಅಳಿಸಿ ಹಾಕುತ್ತೇವೆ ಅನ್ನುವುದೆಷ್ಟು ಸತ್ಯ? “ಬದಲಾವಣೆ ತರಲು ವಯಸ್ಸು ಮುಖ್ಯವೋ,ಮನಸ್ಸು ಮುಖ್ಯವೋ” ಅನ್ನುವ ಈ ಚರ್ಚೆಯ ಮೊದಲ ಉದಾಹರಣೆ ಅಖಿಲೇಶ್ ಯಾದವ್ ರನ್ನು ನೋಡಿದರೇ ಯುವಕರು ರಾಜಕೀಯಕ್ಕೆ/ಅಧಿಕಾರಕ್ಕೆ ಬಂದರೆ ಬದಲಾವಣೆಯಾಗುತ್ತದೆ ಅನ್ನುವುದು ಮಿಥ್ ಅನ್ನಿಸುತ್ತದೆ.ಬದಲಾಯಿಸಲೇಬೇಕು ಅನ್ನುವ ಮನಸಿದ್ದರೆ ವಯಸ್ಸು ಅಷ್ಟು ಅಡ್ಡಿಯಾಗಲಾರದು.

ಮತ್ತಷ್ಟು ಓದು »