– ರಾಜೇಶ್ ನರಿಂಗಾನ

ಶ್ರಾವಣ ಹುಣ್ಣಿಮೆ ಮತ್ತೆ ಬಂದಿದೆ. ಶ್ರಾವಣ ಹುಣ್ಣಿಮೆಯಂದು ಆಚರಿಸುವ ರಕ್ಷಾಬಂಧನ ಹಬ್ಬಕ್ಕೆ ಅದರದೇ ಆದ ಪೌರಾಣಿಕ, ಐತಿಹಾಸಿಕ ಹಿನ್ನೆಲೆಯಿದೆ. ಓರ್ವ ಜವಾಬ್ದಾರಿಯುತ ಸಹೋದರ ತನ್ನ ಸಹೋದರಿಯನ್ನು ರಕ್ಷಣೆ ಮಾಡಬೇಕು ಎನ್ನುವ ಆಶಯದಿಂದ ಹಿಡಿದು ಸ್ವಯಂಸೇವಕರು ಪರಸ್ಪರ ರಕ್ಷೆಯನ್ನು ಕಟ್ಟಿಕೊಂಡು ರಾಷ್ಟ್ರ ರಕ್ಷಣೆಗೈಯುವ ಸಂಕಲ್ಪದ ಉದಾತ್ತ ಧ್ಯೇಯ ಆಶಯದವರೆಗೆ ರಕ್ಷಾಬಂಧನವನ್ನು ವಿವಿಧ ರೀತಿಯಲ್ಲಿ ವಿಶ್ವದಾದ್ಯಂತ ಆಚರಿಸುತ್ತೇವೆ. ಇಂತಿಪ್ಪ ರಕ್ಷಾಬಂಧನ ಮತ್ತೆ ಬಂದಿದೆ. ಕಟ್ಟಲು ಬಗೆಬಗೆಯ ರಕ್ಷೆಗಳು ಮಾರುಕಟ್ಟೆಗೆ ಮಿತವಾಗಿ ಬಂದಿದೆ.
ಸಹೋದರ ಸಹೋದರಿಯರ ನಡುವೆ ನಂಬಿಕೆ, ಭರವಸೆಯನ್ನು ಉದ್ದೀಪನಗೊಳಿಸುವ, ಸಹೋದರನಿಗೆ ಸಹೋದರಿಯ ಮೇಲೆ ಇರುವ ಕಾಳಜಿ, ಸಹೋದರಿಗೆ ಸಹೋದರನ ಮೇಲೆ ಇರುವ ಅಕ್ಕರೆ, ನವಿರಾದ ಬಾಂಧವ್ಯವನ್ನು ಉಜ್ವಲಗೊಳಿಸುವ ಹಬ್ಬವೇ ರಕ್ಷಾಬಂಧನ. ಸಹೋದರನ ಶ್ರೇಯಸ್ಸಿಗಾಗಿ ಪ್ರಾರ್ಥಿಸಿ, ನಿನ್ನ ಸುಖ-ದುಃಖಗಳಲ್ಲಿ ಸಮಾನ ಭಾಗಿಯಾಗುತ್ತೇನೆ; ನನ್ನ ಯೋಗಕ್ಷೇಮ, ರಕ್ಷಣೆಯ ಭಾರ ನಿನ್ನ ಹೆಗಲಿಗೆ ಎಂದು ದೇವರ ಮುಂದೆ ಪ್ರಾರ್ಥಿಸಿ ರಕ್ಷೆಯನ್ನು ಕಟ್ಟುವುದು ತಲೆತಲಾಂತರದಿಂದ ಬಂದಿರುವ ಪದ್ಧತಿ, ಸಂಪ್ರದಾಯ.
ಮತ್ತಷ್ಟು ಓದು 