ವಿಷಯದ ವಿವರಗಳಿಗೆ ದಾಟಿರಿ

Posts tagged ‘ರಾಕೇಶ್ ಶೆಟ್ಟಿ’

25
ಸೆಪ್ಟೆಂ

ಕನ್ನಡ ಸಾರಸ್ವತ ಲೋಕಕ್ಕೊಂದು ಹೊಸ ಓದು

ಶ್ರೀಪಾದ್ ಭಟ್

ಈಗ ಲೇಖಕರಾದ, ಬ್ಲಾಗರ್ ಆದ ಮಿತ್ರ ರಾಕೇಶ ಶೆಟ್ಟರು ಹೊಸ ಓದನ್ನು ಕೊಟ್ಟಿದ್ದಾರೆ. ಕೃತಿಯ ಹೆಸರು’ ಮುಚ್ಚಿಟ್ಟ ಕರ್ನಾಟಕದ ಚರಿತ್ರೆ’. ಯಾಕೆ ಇದು ಹೊಸ ಓದು ಅಂದರೆ – ಇದು ಇತಿಹಾಸದ ಹೊಸ ಓದು. ಇದುವರೆಗೆ ಶಾಲೆ ಕಲಿತ ನಾವು ಯಾರೂ ಕೇಳಿರದ ಇತಿಹಾಸದ ಸಂಗತಿಗಳು ಇರುವುದರಿಂದ.

ನಮ್ಮಲ್ಲಿನ ಅಂದರೆ ನಮ್ಮ ದೇಶದ ಸಮಸ್ಯೆ ಇರುವುದೇ ಇಲ್ಲಿ- ಇತಿಹಾಸದಲ್ಲಿ. ನಮ್ಮ ದೇಶಕ್ಕೆ ಆಧುನಿಕ ಇತಿಹಾಸ ಅಥವಾ ಚರಿತ್ರೆ ಕೊಟ್ಟವರು ಬ್ರಿಟಿಷರು. ಅದನ್ನು ಹೇಗೆ ನೋಡಬೇಕು, ಯಾವುದು ಇತಿಹಾಸ ಅನಿಸಿಕೊಳ್ಳುತ್ತದೆ. ಅದಕ್ಕೆ ಆಧಾರಗಳು ಯಾವುವು ಎಂಬುದನ್ನೂ ತಿಳಿಸಿದವರೂ ಅವರೇ. ಅದನ್ನೇ ನಾವು ಉರು ಹೊಡೆದು ಮುಂದುವರೆಸಿಕೊಂಡು ಶಿರಸಾವಹಿಸಿ ಪಾಲಿಸಿಕೊಂಡುಬರುತ್ತಿದ್ದೇವೆ. ಅದಕ್ಕೆ ವಿರುದ್ಧವಾದ ಅಥವಾ ಪ್ರತಿಯಾದ ಸಾಲುಗಳನ್ನು ನಾವು ಒಪ್ಪಲು ತಯಾರಿಲ್ಲ ಎಂಬಂತೆ ನಮ್ಮನ್ನು ನಮ್ಮ ಶಾಲಾ ವ್ಯವಸ್ಥೆ ಅಣಿಗೊಳಿಸಿ ಕೃತಾರ್ಥವಾಗಿದೆ.ಆದರೆ ಈಚೆಗೆ ಈ ದೃಷ್ಟಿಕೋನ ಬದಲಾಗುತ್ತಿದೆ. ವಿಜ್ಞಾನ ತಂತ್ರಜ್ಞಾನದ ಬೆಳವಣಿಗೆ ಕಾರಣದಿಂದ ಸಾಮಾಜಿಕ ಜಾಲ ತಾಣಗಳ ಪ್ರಾಚುರ್ಯದಿಂದ ಜನರ ವಿವಿಧ ಬಗೆಯ ಅಭಿಪ್ರಾಯಗಳಿಗೆ ವೇದಿಕೆಗಳು ಸಾರ್ವಜನಿಕವಾಗಿ ದೊರೆಯುತ್ತಿದೆ. ಈ ಮೊದಲು ಪರಿಸ್ಥಿತಿ ಹೀಗೆ ಇರಲಿಲ್ಲ. ಸಾರ್ವಜನಿಕ ವೇದಿಕೆಯ ಜೊತೆಗೆ ಅಲ್ಲಿ ಹೇಳಬೇಕಾದ ವಿಷಯಗಳಿಗೂ ನಿರ್ದಿಷ್ಟ ದಿಕ್ಕು ದೆಸೆ, ನಿಯಂತ್ರಣ ಇರುತ್ತಿತ್ತು. ಈ ನಿಯಂತ್ರಣವನ್ನು ಕೂಡ ಯಾರು ಹೇಗೆ ಎಂಬುದೂ ನಿರ್ಧಾರವಾಗಿರುತ್ತಿತ್ತು. ಅಭಿಪ್ರಾಯ ಸ್ವಾತಂತ್ರ್ಯ ಮುಕ್ತತೆಗಳು ಮಾತಲ್ಲಿ ಮಾತ್ರ ಇತ್ತು ಅಂದರೂ ತಪ್ಪಿಲ್ಲ. ಆದರೆ ಇಂದಿನ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ನಿಯಂತ್ರಿತ ಮಾಧ್ಯಮಗಳು ಮೂಲೆ ಸೇರಿವೆ. ಸಾಮಾಜಿಕ ಮಾಧ್ಯಮ ಮುಕ್ತತೆ ಕೊಟ್ಟಿದೆ. ಹೀಗಾಗಿ ಜನರ ಅಭಿಪ್ರಾಯಕ್ಕೆ ಒಂದಲ್ಲ ಒಂದು ವೇದಿಕೆ ಸಾರ್ವಜನಿಕವಾಗಿ ಲಭಿಸಿ ಮುಕ್ತ ಚರ್ಚೆ ಆಗುತ್ತದೆ. ಲೆಕ್ಕವಿಲ್ಲದಷ್ಟು ಜನ ತಮ್ಮ ಮಾತನ್ನು ಹೇಳಿಕೊಳ್ಳುತ್ತಾರೆ. ಇದರ ಪರಿಣಾಮವಾಗಿ ಹಿಂದೆ ಹತ್ತಿಕ್ಕಿದ್ದ ಮಾತು, ವಿಷಯಗಳೆಲ್ಲ ಎಲ್ಲ ಕ್ಷೇತ್ರಗಳಿಂದಲೂ ಹೊರಬರುತ್ತಿವೆ. ನಮ್ಮೆಲ್ಲರನ್ನೂ ಬೇಗ ಪ್ರಭಾವಿಸುವ ಹಾಗೂ ಕಾಡುವ ಇತಿಹಾಸ ಇಂಥ ವಿಷಯಗಳಲ್ಲಿ ಒಂದು. ಬೇರೆ ಬೇರೆ ಈ ಮೊದಲು ಚರಿತ್ರೆ ಅಥವಾ ಇತಿಹಾಸದ ಬಗ್ಗೆ ಅದರ ಪಂಡಿತರು ಅನಿಸಿಕೊಂಡವರು ಅದರಲ್ಲೂ ಎಲ್ಲವನ್ನೂ ತಮ್ಮ ನಿಲುವು, ಸಿದ್ಧಾಂತಗಳ ಮೂಲಕ ಪ್ರತಿಪಾದಿಸುತ್ತಿದ್ದ ರೋಮಿಲಾಥಾಪರ್ ಅವರಂಥವರು ಮಾತ್ರ ಮಾತನಾಡಬಹುದಿತ್ತು. ಆದರೆ ಇಂದು ಇತಿಹಾಸದ ಬಗ್ಗೆ ಸೂಕ್ತ ದಾಖಲೆಗಳಿದ್ದರೆ ಯಾರು ಬೇಕಾದರೂ ಮಾತನಾಡಬಹುದು. ಏಕೆಂದರೆ ಇಂದು ಯಾರು ಮಾತನಾಡುತ್ತಾರೆಂಬುದಕ್ಕಿಂತಲೂ ಏನು ಮಾತನಾಡುತ್ತಿದ್ದಾರೆಂಬುದು ಮುಖ್ಯವಾಗುತ್ತದೆ. ಆದ್ದರಿಂದಲೇ ಇತಿಹಾಸದಂಥ ವಿಷಯದ ಬಗ್ಗೆ ಇಂದು ಹೊಸ ತಲೆಮಾರಿನ ವಿಕ್ರಂ ಸಂಪತ್, ಅಭಿಜಿತ್ ಚಾವ್ಡಾರಂಥ ಹೊಸ ಯುವ ವಿದ್ವಾಂಸರು ಕಾಣಿಸಿಕೊಳ್ಳಲು ಸಾಧ್ಯವಾಗಿದೆ. ಜೊತೆಗೆ ನಮ್ಮ ಯಾವುದೇ ವಿಷಯದ ಬಗ್ಗೆ ಹತ್ತಾರು ಮೂಲಗಳಿಂದ ವಿಷಯ ಹೊರತೆಗೆದು ಚರ್ಚಿಸಬಹುದಾಗಿದೆ. ಇಲ್ಲಿ ರಾಕೇಶ್ ಶೆಟ್ಟರು ಕೂಡ ಇಂಥ ಯತ್ನವನ್ನು ಮಾಡಿದ್ದಾರೆ. ಅವರ ವೃತ್ತಿ ತಂತ್ರಜ್ಞಾನ, ಆಸಕ್ತಿ ಸಾಹಿತ್ಯ, ಇತಿಹಾಸ, ಸಂಸ್ಕೃತಿ ಇತ್ಯಾದಿ. ತಮ್ಮ ಆಸಕ್ತಿಯನ್ನು ಈ ಕೃತಿಯಲ್ಲಿ ಸಾಧಿಸಿಕೊಳ್ಳಲು ಏನೆಲ್ಲ ಶ್ರಮಪಡಬೇಕಾಯಿತು ಎಂಬುದನ್ನು ಲೇಖಕರು ಇದರಲ್ಲಿ ದಾಖಲಿಸಿದ್ದಾರೆ. ತಾವು ಯಾವ ಕಾರಣಕ್ಕೆ ಈ ಕೆಲಸಕ್ಕೆ ಕೈ ಹಾಕಬೇಕಾಯಿತು ಎಂಬುದನ್ನೂ ಹೇಳಿದ್ದಾರೆ. ಅಷ್ಟೇ ನಮ್ರವಾಗಿ ಇದು ತಮ್ಮ ಅಭಿಪ್ರಾಯ ಹಾಗೂ ಅನಿಸಿಕೆಯೇ ವಿನಾ ಇದೇ ಸಂಪೂರ್ಣ ಸತ್ಯ ಎಂದಲ್ಲವೆಂದು ಹೇಳಿದ್ದಾರೆ.

ಹೌದು. ನಿಸರ್ಗದಲ್ಲಿ ಎಲ್ಲವೂ ಬದಲಾಗುವಂತೆ ನಮ್ಮ ದೃಷ್ಟಿಯೂ ಬದಲಾಗುತ್ತದೆ. ಇತಿಹಾಸದ ಬಗ್ಗೆ ಇಂದು ಆಗಿರುವುದೂ ಅದೇ.ನಮಗೆ ಪಾಶ್ಚಾತ್ಯರು ಹೇಳಿಕೊಟ್ಟ ಇತಿಹಾಸ ಕಾಲಿಟ್ಟ ಕಡೆಯಲ್ಲೆಲ್ಲ ಘರ್ಷಣೆ ಆಗುತ್ತದೆ, ಶಾಂತಿ ನೆಲೆಸುವುದು ಕಷ್ಟವಾಗುತ್ತದೆ. ದಾಖಲೆಗಳು ದೊರೆತಂತೆ ಇತಿಹಾಸ ಮಾತಾಡುತ್ತಲೇ ಹೋಗುತ್ತದೆ. ಅಲ್ಲಿ ಮೌನ ಇರುವುದಿಲ್ಲ. ತಿಕ್ಕಾಟ ನಡೆಯುತ್ತಲೇ ಇರುತ್ತದೆ. ಬ್ರಿಟಿಷ್ ಪೂರ್ವದಲ್ಲಿ ನಮ್ಮ ಸಮಾಜದಲ್ಲಿ ಗತ ಇತ್ತು. ಅದು ಕಾಲಾತೀತವಾಗಿದ್ದು ಅದನ್ನು ನಾವು ಜೀವಿಸುತ್ತಿದ್ದೆವು. ಅದರಲ್ಲಿ ನಂಬಿಕೆ ಮತ್ತು ಶ್ರದ್ಧೆಗಳಿದ್ದವು, ಆಚರಣೆ, ಸಂಪ್ರದಾಯಗಳನ್ನು ಅದು ಬೆಳೆಸಿತ್ತು. ಆದರೆ ಪಾಶ್ಚಾತ್ಯ ಹಿಸ್ಟರಿಯ ಚಿಂತನೆ ಹಾಗೂ ದೃಷ್ಟಿಕೋನ ಬಂದಮೇಲೆ ಎಲ್ಲವನ್ನೂ ಪ್ರಶ್ನಿಸುವ, ಶ್ರದ್ಧೆಯನ್ನು ಅಲುಗಾಡಿಸುವ ಕೆಲಸ ವ್ಯವಸ್ಥಿತವಾಗಿ ನಡೆಯತೊಡಗಿತು. ಇದರಿಂದ ಸಾಮಾಜಿಕ ಶಾಂತಿ ಮತ್ತು ನೆಮ್ಮದಿಗಳು ಇಲ್ಲವಾದವು. ಪಾಶದಚಾತ್ಯ ಹಿಸ್ಟರಿಯ ದೃಷ್ಟಿ ನಮ್ಮಲ್ಲಿ ನುಸುಳುವವರೆಗೂ ರಾಮಾಯಣ ಮತ್ತು ಮಹಾಭಾರತಗಳಂಥ ಗ್ರಂಥಗಳ ಯಾವ ವಿವರಗೂ ವಿವಾದಕ್ಕೆ ಆಸ್ಪದ ಮಾಡಿರಲಿಲ್ಲ. ಆದರೆ ಇಂದು ಅವುಗಳ ಸಣ್ಣಪುಟ್ಟ ವಿಚಾರಗಳೂ ಗದ್ದಲಕ್ಕೆ ಕಾರಣವಾಗುತ್ತಿವೆ. ಅದು ರಾಮಸೇತು, ಮಹಾಭಾರತ ಯುದ್ಧ ನಡೆದಿದ್ದು ನಿಜವಾ ಇತ್ಯಾದಿ ಆಗಿರಬೇಕಿಲ್ಲ. ಗಾಂಧಾರ, ಥುರಾ ಇವೆಲ್ಲ ಇಂದು ಎಲ್ಲಿವೆ ಕುರುಕ್ಷೇತ್ರ ಯುದ್ಧದಲ್ಲಿ ಅಷ್ಟುಜನ ಹೊಡೆದಾಡುವಷ್ಟು ಜಾಗ ಎಲ್ಲಿತ್ತು ಇತ್ಯಾದಿ ಏನು ಬೇಕಾದರೂ ಆಗಬಹುದು. ಪಾಶ್ಚಾತ್ಯ ಹಿಸ್ಟರಿ ದೃಷ್ಟಿ ನಮ್ಮ ಶ್ರದ್ಧೆ ಮತ್ತು ನಂಬಿಕೆಗಳನ್ನು ಮತ್ತೆ ಮತ್ತೆ ಘಾಸಿಗೊಳಿಸುತ್ತಿದೆ.ಅದು ಅಯೋಧ್ಯೆ ಆಗಲಿ, ಆಗ್ರಾ ಆಗಲಿ, ಯಾವುದೇ ಜಾಗವಾಗಲಿ, ವ್ಯಕ್ತಿ ಆಗಲಿ ಇವೆಲ್ಲಕ್ಕೂ ಹಿಸ್ಟರಿಯಲ್ಲಿ ಎರಡೂ ಕಡೆ ಮಾತನಾಡಬಹುದಾದ ದಾಖಲೆಗಳು ದೊರೆಯುತ್ತವೆ.

ನಮ್ಮ ರಾಜ್ಯದಲ್ಲಿ ಈಚೆಗೆ ಇಂಥ ದೃಷ್ಟಿಯಿಂದ ಹೆಚ್ಚು ಚರ್ಚೆಗೆ ಒಳಗಾದ ವ್ಯಕ್ತಿ ಅಂದರೆ ಅದು ಟಿಪ್ಪು ಸುಲ್ತಾನ. ಒಂದಿಷ್ಟು ಜನ ಆ ಕಡೆ ನಿಂತರೆ ಮತ್ತಷ್ಟು ಜನ ಈ ಕಡೆ ನಿಂತು ಹೊಡೆದಾಡುತ್ತರೆ, ಇಬ್ಬರ ಬಳಿ ಇರುವ ಅಸ್ತ್ರ ಒಂದೇ. ಅದು ಹಿಸ್ಟರಿ ಕೇಳುವ ದಾಖಲೆ. ಸಾಲದ್ದಕ್ಕೆ ಆಧುನಿಕ ಹಿಸ್ಟರಿ ಒಂದು ನಿರ್ದಿಷ್ಟ ವಾದಕ್ಕೆ ಬದ್ಧವಾಗಿ ಹಿಸ್ಟರಿ ಅಂದರೆ ಇಷ್ಟೇ ಹೇಳಬೇಕು ಎಂಬುದನ್ನೂ ಕಲಿಸಿ ತಾನು ಪ್ರತಿಪಾದಿಸುವ ದಾಖಲೆ ಆಧಾರಿತ ಸತ್ಯದ ಮೇಲೆ ತಾನೇ ಕಲ್ಲು ಹಾಕಿಕೊಂಡಿದೆ. ರಾಕೇಶ್ ಶೆಟ್ಟರು ಈ ಕೃತಿಯಲ್ಲಿ ಆಧುನಿಕ ಹಿಸ್ಟರಿಯ ದೃಷ್ಟಿಯನ್ನೇ ಬಳಸಿಕೊಂಡು ಇದುವರೆಗೆ ಅದು ಏನೆಲ್ಲವನ್ನು ಹೇಳಿದೆ, ಅದರ ದೃಷ್ಟಿಯಲ್ಲಿ ಎಲ್ಲೆಲ್ಲಿ ಏನು ಇರಬೇಕಿತ್ತು ಎಂದು ಸಾಧಾರ ತೋರಿಸಿದ್ದಾರೆ. ನಿಜ. ಆಧುನಿಕ ಹಿಸ್ಟರಿ ಕೆಲವು ಸಂಗತಿಗಳನ್ನು ಉದ್ದೇಶಪೂರ್ವಕ ಪಕ್ಕಕ್ಕೆ ಸರಿಸುತ್ತದೆ. ಮೈಸೂರು ಅರಸು ಮನೆತನ ಹಾಗೂ ಟಿಪ್ಪೂ ಕುರಿತ ವಿಷಯಕ್ಕೆ ಮಾತ್ರ ಸೀಮಿತಗೊಳಿಸಿಕೊಂಡಂತೆ ರಾಕೇಶ್ ಶೆಟ್ಟರು ಅದೇ ಹಿಸ್ಟರಿಯ ಆಯುಧಗಳನ್ನು ಬಳಸಿ ಪ್ರತಿ ದಾಖಲೆ ಕೊಡುತ್ತಾರೆ, ಚರ್ಚೆ ಅಥವಾ ವಿವಾದವನ್ನು ಜೀವಂತ ಇಡುತ್ತಾರೆ. ಅಲ್ಲಿಗೆ ಆಧುನಿಕ ಹಿಸ್ಟರಿಯ ಒಂದು ದೃಷ್ಟಿ ಸಾಧಿತವಾಯಿತು.

ಆಧುನಿಕ ಶಾಲೆ ಅಥವಾ ಉನ್ನತ ಶಿಕ್ಷಣ ಪಡೆದ ನಮಗೆ ಯಾರಿಗೂ ಮೈಸೂರು ರಾಜಮನೆತನ ಹಾಗೂ ಟಿಪ್ಪು ಕುರಿತು ಮಾತನಾಡುವಾಗ ಅಥವಾ ಓದುವಾಗ ಸೀತಾದಂಡು ಎಂಬ ಹೆಸರು ಕೇಳಿದ ಅಥವಾ ಓದಿದ ನೆನಪೇ ಇರುವುದಿಲ್ಲ. ಹೌದು, ಟಿಪ್ಪು ಬಗ್ಗೆ ನಮ್ಮ ನಡುವೆ ಪ್ರತಿವರ್ಷ ಸಾಕಷ್ಟು ಚರ್ಚೆ ಆಗುತ್ತದೆ. ಆದರೆ ಇಲ್ಲಿ ಇದೇ ಮೊದಲ ಬಾರಿಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ಸೀತಾದಂಡಿನ ಪ್ರಸ್ತಾಪ ಬರುತ್ತದೆ. ಟಿಪ್ಪು ಕುರಿತು ಜನಪದರಲ್ಲಿ ಸಾಕಷ್ಟು ಸಂಗತಿಗಳು ಇವೆಯಾದರೂ ಆಧುನಿಕ ಹಿಸ್ಟರಿ ಅವನ್ನೆಲ್ಲ ಮಾನ್ಯ ಮಾಡುವುದಿಲ್ಲ. ನಮ್ಮ ಮೌಖಿಕ ಪರಂಪರೆಯಲ್ಲಿ ಅದಕ್ಕೆ ಸಾಕಷ್ಟು ಬೆಲೆ ಇದೆ. ಏಕೆಂದರೆ ಅದು ನಮ್ಮ ಗತ. ಬ್ರಿಟಿಷ್ ಪೂರ್ವದ ನಮ್ಮ ಚರಿತ್ರೆ. ಇದನ್ನು ಆಧಾರವಾಗಿಟ್ಟುಕೊಂಡು ಜನಪದ ತಜ್ಞ ಹನೂರು ಕೃಷ್ಣ ಮೂರ್ತಿಯವರ ಅಜ್ಞಾತನೊಬ್ಬನ ಆತ್ಮ ಚರಿತ್ರೆ ಎಂಬ ಕಾದಂಬರಿಯನ್ನೂ ರಚಿಸಿದ್ದಾರೆ. ಅದು ಆಧುನಿಕ ಹಿಸ್ಟರಿ ಆಧರಿಸಿದ್ದಲ್ಲ. ಮೌಖಿಕ ಪರಂಪರೆ ಆಧರಿಸಿದ್ದು. ಜನಸಾಮಾನ್ಯರಿಗೆ ಇದು ಹಿಡಿಸುತ್ತದೆ, ಆಪ್ತವಾಗುತ್ತದೆ, ಹಿಸ್ಟರಿಗೆ ಅಲ್ಲ. ಈ ಕೃತಿಯಲ್ಲಿ ರಾಕೇಶರು ದಾಖಲಿಸುವ ಬಹುತೇಕ ಸಂಗತಿಗಳು ಹಾಗೂ ತಿರುಮಲರಾವ್  ಮತ್ತು ನಾರಾಯಣರಾವ್, ಉರಿಗೌಡ, ಹುಲಿಗೌಡರಂಥ ಹೆಸರುಗಳು ನಮಗೆ ತೀರಾ ಅಪರಿಚಿತವಾದವು. ಇದುವರೆಗೆ ಒಂದೇ ಒಂದು ರಸ್ತೆಗೂ ಅವರ ಹೆಸರು ಇಡದಂತೆ ಆಧುನಿಕ ಹಿಸ್ಟರಿ ನೋಡಿಕೊಂಡಿದೆ.

ಪ್ರಾಥಮಿಕ ಶಾಲಾ ಪಠ್ಯದಿಂದ ಹಿಡಿದು ಉನ್ನತ ಶಿಕ್ಷಣ ಪಠ್ಯದವರೆಗೆ ಯಾರದು ಯಾವುದನ್ನು ಬೋಧಿಸಬೇಕು ಎಂಬುದನ್ನು ತೀರ್ಮಾನಿಸುವ ಶಕ್ತಿಗಳು ಲಾಬಿಗಳು ಪಾಶ್ಚಾತ್ಯ ಚಿಂತನೆಯ ಪ್ರಭಾವದಲ್ಲಿ ಮುಳುಗಿಹೋಗಿವೆ. ಯಾವುದೇ ವಿಷಯದ ಪಠ್ಯ ಸಿದ್ಧಾಂತ ಬೋಧೊಸುತ್ತದೆಯೇ ವಿನಾ ಸಾಹಿತ್ಯ ಪಠ್ಯ ಸಾಹಿತ್ಯವನ್ನಾಗಲಿ, ಇತಿಹಾಸದ ಪಠ್ಯ ಚರಿತ್ರೆಯನ್ನಾಗಲೀ ಮಕ್ಕಳಿಗೆ ಕಲಿಸುವ ಬದಲು ಒಂದು ನಿರ್ದಿಷ್ಟ ಚಿಂತನೆಗೆ ಸದಸ್ಯರನ್ನು ಸೃಷ್ಟಿಸಿಕೊಡುತ್ತದೆ. ಭಾಷೆಯ ಪಠ್ಯ ಭಾಷೆಯನ್ನು ಎಲ್ಲಿಂದ ಹೇಗೆ ಕಲಿಯಬೇಕು ಅನ್ನುವುದಕ್ಕಿಂತಲೂ ಭಾಷಿಕ ರಾಜಕಾರಣ ಹಾಗೂ ಅನ್ಯ ಭಾಷೆಗಳ ವಿರುದ್ಧ ಎತ್ತಿಕಟ್ಟುತ್ತದೆ. ಹಾಗಾಗಿ ನಮ್ಮ ಸಂಪೂರ್ಣ ಶಿಕ್ಷಣ ವ್ಯವಸ್ಥೆ ಮಕ್ಕಳಿಗೆ ಏನನ್ನು ಕಲಿಸಬೇಕಿತ್ತೋ ಅದನ್ನು ಬಿಟ್ಟು ಬೇರೆಲ್ಲವನ್ನೂ ಮಾಡಲು ಕಲಿಸುತ್ತದೆ. ಹೊರತಾಗಿ ಯಾವುದಾದರೂ ವಿಷಯದ ಜ್ಞಾನ ಬೇಕು ಅನಿಸಿದರೆ ಸ್ವಂತ ಪರಿಶ್ರಮ ಅಗತ್ಯವಾಗುತ್ತದೆ. ಅಂಥ ಅಗತ್ಯವನ್ನು ಈ ಕೃತಿ ಪೂರೈಸಲು ಶ್ರಮಿಸುತ್ತದೆ.

ಹಾಗೆ ನೋಡಿದರೆ, ಮೈಸೂರನ್ನು ನೆಪವಾಗಿಟ್ಟುಕೊಂಡು ರಾಕೇಶರು ಮಾಡಿದ ಇತಿಹಾಸದ ಈ ಕೆಲಸ ನಮ್ಮ ದೇಶದ ಹಳ್ಳಿಯ ಇತಿಹಾಸದ ವಿಷಯದಲ್ಲೂ ನಡೆದು ಹೊಸದಾಗಿ ಗ್ರಾಮ ಚರಿತ್ರೆಗಳನ್ನು ರೂಪಿಸುವ ದಂಡು ಸಿದ್ಧವಾಗಬೇಕಿದೆ. ಆಗ ಮಾತ್ರ ಪಾಶ್ಚಾತ್ಯ ರೂಪಿತ ಇತಿಹಾಸದ ಬದಲಾಗಿ ನಮಗೆ ನಮ್ಮ ಗತದ ಚಿತ್ರಣ ಲಭಿಸಲು ಸಾಧ್ಯ. ಇಂಥ ಕೆಲಸ ಎಲ್ಲ ಕಡೆ ಶುರುವಾಗಲಿ.

ಇದು ನೇರ ಮಾರಾಟದಲ್ಲಿ ಮಾತ್ರವಲ್ಲದೇ ಆನ್ ಲೈನ್ ನಲ್ಲೂ ಲಭ್ಯ ಅನ್ನುವುದು ಖುಷಿಯ ಸಂಗತಿ. ಬಹುತೇಕ ಪುಸ್ತಕಗಳಂತೆ ಇದನ್ನು ಸಾಧ್ಯವಾದಷ್ಟು ಶಕ್ತಿ ಬಳಸಿ ಆದಷ್ಟು ದೂರ ಎಸೆಯುವಂಥದ್ದಲ್ಲ, ಎತ್ತಿಟ್ಟುಕೊಂಡು ಮತ್ತೆ ಮತ್ತೆ ಗಮನಿಸಬೇಕಾದ್ದು. ಇದರಿಂದ ನಮ್ಮ ಸಾಂಪ್ರದಾಯಿಕ ಜ್ಞಾನಭಂಡಾರಕ್ಕೆ ಮಾನ್ಯತೆ ದೊರೆಯುತ್ತದೆ.

ಕೃತಿ ವಿವರ: ಮುಚ್ಚಿಟ್ಟ ಕರ್ನಾಟಕ ಚರಿತ್ರೆ,

ಲೇ: ರಾಕೇಶ್ ಶೆಟ್ಟಿ,

ಪ್ರಕಾಶಕರು – ನಿಲುಮೆ ಪ್ರಕಾಶನ, ಬೆಂಗಳೂರು,

ಬೆಲೆ – ರೂ 350.

ಪುಟಗಳು-372

#ಮುಚ್ಚಿಟ್ಟಕರ್ನಾಟಕಚರಿತ್ರೆ #ರಾಕೇಶ್ ಶೆಟ್ಟಿ



– ಪುಸ್ತಕ, ಈ ಅಂಗಡಿಗಳಲ್ಲಿ ಲಭ್ಯವಿದೆ. (ದೂರದ ಊರಿನವರು ಪೋಸ್ಟ್ ಮೂಲಕ ತರಿಸಬಹುದು. ವಿವರ ಕೆಳಗಿನ ಚಿತ್ರದಲ್ಲಿದೆ)

ಬೆಂಗಳೂರು :

ರಾಷ್ಟ್ರೋತ್ಥಾನ
ನವಕರ್ನಾಟಕ
ಅಯೋಧ್ಯಾ

ದಾವಣಗೆರೆ :
ಜ್ಞಾನ ವಿಕಾಸ ಸಾಹಿತ್ಯ

6
ಫೆಬ್ರ

ನಿಲುಮೆಯ ಮೇಲಿನ ದಾಳಿಯ ಕುರಿತು ಸುವರ್ಣವಾಹಿನಿಯಲ್ಲಿ ನಡೆದ ಚರ್ಚೆ

ಭಾಗ ೦೧

ಮತ್ತಷ್ಟು ಓದು »

5
ಫೆಬ್ರ

ಬೌದ್ದಿಕ ಚರ್ಚೆ ಮತ್ತು ಪ್ರಗತಿಪರರ ಅಸಹನೆ

– ಎಂ. ಎಸ್. ಚೈತ್ರ

ನಿರ್ದೇಶಕರು, “ಆರೋಹಿ” ಸಂಶೋಧನಾ ಸಂಸ್ಥೆ, ಬೆಂಗಳೂರು

freedomofspeechಸಾಮಾಜಿಕ ಜಾಲತಾಣ ಮತ್ತು ಮಟ್ಟು ಪ್ರಕರಣ

ಕರ್ನಾಟಕದ ಮಾನ್ಯ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟುರವರು, ಸಾಮಾಜಿಕ ಜಾಲತಾಣವೊಂದರಲ್ಲಿ ತಮ್ಮನ್ನು ಟೀಕಿಸಿದ ಕೆಲವರ ಮೇಲೆ ಪೊಲೀಸರಿಗೆ ದೂರು ನೀಡಿದ್ದು, ವಿಶೇಷವಾಗಿ ನಿಲುಮೆ ಗುಂಪಿನ ನಿರ್ವಾಹಕರಾದ ರಾಕೇಶ್ ಶೆಟ್ಟರನ್ನು ಅದಕ್ಕೆ ಜವಾಬ್ದಾರರೆಂದು ದೂರಿನಲ್ಲಿ ಸೇರಿಸಿದ್ದಾರೆ. ಈ ಕುರಿತು ಇತ್ತೀಚೆಗೆ ನಮ್ಮ ರಾಜ್ಯದಾದ್ಯಂತ ಬಿಸಿ ಚರ್ಚೆ ನಡೆಯುತ್ತಿದೆ. ಇದರ ಪರ ಮತ್ತು ವಿರೋಧವಾಗಿ ಅನೇಕರು ತಮ್ಮ ವಾದಗಳನ್ನು ಮಂಡಿಸುತ್ತಿದ್ದಾರೆ. ಈ ಕುರಿತ ವಿಷ್ಲೇಷಣೆಯಲ್ಲಿ ತೊಡಗಿರುವವರು ತಮಗರಿವಿಲ್ಲದೆಯೆ ಅನೇಕ ದ್ವಂದಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಉದಾಹರಣೆಗೆ ಪ್ರಜಾವಾಣಿಯಲ್ಲಿ “ಅಭಿವ್ಯಕ್ತಿಯ ಪಾವಿತ್ರ್ಯಕ್ಕೆ ಹಿಂಸಾರಸಿಕತೆಯ ಮಸಿ” ಎಂಬ ಲೇಖನವನ್ನು ನಾವು ಗಮನಿಸೋಣ. (ದಿನಾಂಕ 2 ಫೆಬ್ರವರಿ 2015 ಇಸ್ಮಾಯಿಲ್ ಅವರ ಅಂಕಣ ಬರಹ; ಇದು ಪ್ರಜಾವಾಣಿಯ ವೆಬ್ ತಾಣದಲ್ಲೂ ಲಭ್ಯ). ತಮ್ಮ ಲೇಖನದ ಪ್ರಾರಂಭದಲ್ಲಿ ಲೇಖಕರು ಇಂಟರ್‍ನೆಟ್ ಜಗತ್ತು ಮತ್ತು ಇತರ ಪತ್ರಿಕಾ ಮಾಧ್ಯಮಗಳ ಕುರಿತು ಈ ರೀತಿ ಹೇಳುತ್ತಾರೆ:

“`ಸಮೂಹ ಮಾಧ್ಯಮ’ ಎಂಬುದರ ವ್ಯಾಖ್ಯೆಯನ್ನೇ ಇಂಟರ್‍ನೆಟ್ ಬದಲಾಯಿಸಿಬಿಟ್ಟಿದೆ. ನಿರ್ದಿಷ್ಟ ಸಂಪಾದಕ, ಪ್ರಕಾಶಕ, ಮುದ್ರಕ ಅಥವಾ ಪ್ರಸಾರಕನಿರುವ ಹಳೆಯ ಮಾಧ್ಯಮಗಳ ಸ್ವರೂಪಕ್ಕೂ ಇಂಟರ್‍ನೆಟ್ ಸಾಧ್ಯಮಾಡಿರುವ ಸಮೂಹ ಮಾಧ್ಯಮದ ಸ್ವರೂಪಕ್ಕೂ ಪರಸ್ಪರ ಹೋಲಿಕೆ ಸಾಧ್ಯವಿಲ್ಲ.”

ಅಂದರೆ ಯಾವ ಮಾನದಂಡಗಳಿಂದ ನಾವು ಪ್ರಿಂಟ್ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮಗಳನ್ನು ಅಳೆಯುತ್ತೇವೆಯೊ ಅದೇ ಮಾನದಂಡಗಳಿಂದ ಇಂಟರ್‍ನೆಟ್‍ನಿಂದ ಹುಟ್ಟಿದ ಸಾಮಾಜಿಕ ಜಾಲತಾಣಗಳನ್ನು ನೋಡಲು ಸಾಧ್ಯವಿಲ್ಲ ಎಂಬ ಸ್ಪಷ್ಟವಾದ ತೀರ್ಮಾನಕ್ಕೆ ಲೇಖಕರು ಬರುತ್ತಾರೆ. ಇದನ್ನು ಎಲ್ಲರೂ ಒಪ್ಪುತ್ತಾರೆನ್ನಬಹುದು. ಸ್ವಲ್ಪ ಮುಂದುವರೆದ ಅವರು ಹೀಗೆ ಹೇಳುತ್ತಾರೆ:

“ಈ ಗುಂಪಿನ ಗೋಡೆಯ (Wall) ಮೇಲೆ ಪ್ರಕಟವಾಗುವ ಬರಹಗಳಿಗೆ ಈ ನಿರ್ವಾಹಕರು ಜವಾಬ್ದಾರರೇ? ತಾಂತ್ರಿಕವಾಗಿ ಹಾಗೂ ತಾತ್ವಿಕವಾಗಿ ಅವರ ಮೇಲೆ ಜವಾಬ್ದಾರಿ ಇದೆ. ಕೇವಲ ಆಸಕ್ತಿಯ ಕಾರಣಕ್ಕಾಗಿ ಸಾರ್ವಜನಿಕ ಗುಂಪೊಂದನ್ನು ರೂಪಿಸುವಾತ ಅದರಲ್ಲಿರುವ ಸಾವಿರಾರು ಸಂಖ್ಯೆಯ ಸದಸ್ಯರ ಚಟುವಟಿಕೆಗಳ ಮೇಲೆ ಕಣ್ಣಿಡಲು ಸಾಧ್ಯವೇ ಎಂಬ ಪ್ರಶ್ನೆಯನ್ನು ಹಲವರು ಕೇಳುತ್ತಾರೆ. ಹಾಗೆ ನೋಡಿದರೆ ನೂರಾರು ಸಂಖ್ಯೆಯ ವರದಿಗಾರರು, ಅಷ್ಟೇ ಸಂಖ್ಯೆಯ ಉಪ ಸಂಪಾದಕರು ಇತ್ಯಾದಿಗಳನ್ನು ಹೊಂದಿರುವ ಪತ್ರಿಕಾ ಸಂಸ್ಥೆಯೊಂದರ ಸಮಸ್ಯೆಯೂ ಇದುವೇ ತಾನೆ. ಓದುಗರ ಪತ್ರ ವಿಭಾಗದಲ್ಲಿ ನಿಂದನಾತ್ಮಕ ಪತ್ರವೊಂದು ಪ್ರಕಟವಾದರೆ ಅದಕ್ಕೂ ಸಂಪಾದಕ, ಪ್ರಕಾಶಕ, ಮುದ್ರಕ ಎಲ್ಲರೂ ಜವಾಬ್ದಾರರಾಗುತ್ತಾರಲ್ಲವೇ? ಇದೇ ತರ್ಕವನ್ನು ಸಾಮಾಜಿಕ ಜಾಲತಾಣಕ್ಕೂ ಅನ್ವಯಿಸಬೇಕಲ್ಲವೇ ಎಂಬ ಪ್ರಶ್ನೆಯೂ ಇಲ್ಲಿದೆ.”

ಈ ಹೇಳಿಕೆಯನ್ನೊಮ್ಮೆ ಗಂಭೀರವಾಗಿ ಪರಿಶೀಲಿಸಲು ಪ್ರಯತ್ನಿಸೋಣ. ತಮ್ಮ ಗೋಡೆಗಳ ಮೇಲೆ ಬರೆದದ್ದಕ್ಕೆ ನಿರ್ವಾಹಕರೇ ತಾಂತ್ರಿಕ ಮತ್ತು ತಾತ್ವಿಕವಾಗಿ ಜವಾಬ್ದಾರರಾಗುತ್ತಾರೆ ಎಂಬುದು ಲೇಖಕರ ಸ್ಪಷ್ಟ ಅಭಿಪ್ರಾಯ. ಮೊದಲಿಗೆ ಈ ತಾಂತ್ರಿಕ ಜವಾಬ್ದಾರಿ ಏನೆಂದು ಗುರುತಿಸಲು ಪ್ರಯತ್ನಿಸೋಣ. ಉದಾಹರಣೆಗೆ ತಮ್ಮ ಗೋಡೆಯ ಮೇಲೆ ಬರೆಯುವವರಿಗೆ ಎಚ್ಚರಿಕೆ ಕೊಡುವುದು ಮತ್ತು ಅದನ್ನು ತೆಗೆದು ಹಾಕುವ ಅಥವಾ ಬ್ಲಾಕ್ ಮಾಡುವ ಅಧಿಕಾರ ನಿರ್ವಾಹಕರಿಗೆ ಇರುವುದನ್ನು ತಾಂತ್ರಿಕ ಜವಾಬ್ದಾರಿ ಎಂದು ಒಪ್ಪಿಕೊಳ್ಳಬಹುದು. ಈಗ ಮಟ್ಟು ಮತ್ತು ರಾಕೇಶ್ ಶೆಟ್ಟರ ವಿವಾದವನ್ನು ತೆಗೆದುಕೊಳ್ಳೋಣ. ನಿಲುಮೆಯ ಗುಂಪಿನಲ್ಲಿ ಮಟ್ಟು ಅವರ ವಿರುದ್ಧ ಬರೆದ ಹೇಳಿಕೆಯನ್ನು ರಾಕೇಶ್ ಶೆಟ್ಟರು ಬರೆದದ್ದಲ್ಲ. ಎರಡನೆಯದಾಗಿ ಆ ಗುಂಪಿನ ಮುಖಪುಟದಲ್ಲೇ ಆ ಗುಂಪಿನ ಸದಸ್ಯರುಗಳು ಹೇಗೆ ವ್ಯವಹರಿಸಬೇಕು ಎಂಬುದನ್ನು ವಿವರಿಸಲಾಗಿದೆ ಜೊತೆಗೆ ಮಟ್ಟುರವರ ಪ್ರಕರಣವಲ್ಲದೆ, ಯಾವಾಗಲಾದರೂ ನಿರ್ವಾಹಕರಿಗೆ ನಿಲುಮೆ ಗುಂಪಿನಲ್ಲಿ ಬಂದ ಹೇಳಿಕೆಗಳು ಅಷ್ಟು ಸಮಂಜಸವಾದವುಗಳಲ್ಲ ಎಂಬುದನ್ನು ಗಮನಕ್ಕೆ ತಂದ ತಕ್ಷಣ ಅವುಗಳನ್ನು ತೆಗೆದು ಹಾಕಲಾಗುತ್ತದೆ ಇಲ್ಲವೆ ಸಂಬಂಧಿಸಿದವರಿಗೆ ಅದನ್ನು ಸರಿಪಡಿಸಿಕೊಳ್ಳಲು ಎಚ್ಚರಿಕೆ ನೀಡಲಾಗುತ್ತದೆ. ಮೇಲೆ ತಿಳಿಸಿದ್ದು ತಾಂತ್ರಿಕ ಜವಾಬ್ದಾರಿ ಎಂದು ಹೇಳಿದಲ್ಲಿ ಅದನ್ನು ನಿಲುಮೆಯ ನಿರ್ವಾಹಕರು ನಿರ್ವಹಿಸಿದ್ದಾರೆ.

ಮತ್ತಷ್ಟು ಓದು »

4
ಫೆಬ್ರ

ಅಭಿವ್ಯಕ್ತಿ ಸ್ವಾತ೦ತ್ರ್ಯವೆನ್ನುವುದು ಕೇವಲ ಅಧಿಕಾರಿಶಾಹಿಯ ಸ್ವತ್ತಲ್ಲ…

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

freedomofspeechಕೆಲವು ದಿನಗಳ ಹಿ೦ದೆ ಸಾಮಾಜಿಕ ಅ೦ತರ್ಜಾಲ ತಾಣವಾದ ಫೇಸ್ ಬುಕ್ ಇನ್ನೊಮ್ಮೆ ವಿವಾದವೊ೦ದಕ್ಕೆ ಮುನ್ನುಡಿಯಾಯಿತು.ತಾವು ಬರೆದ ಲೇಖನವೊ೦ದಕ್ಕೆ ’ನಿಲುಮೆ’ ಎನ್ನುವ ಫೇಸ್ ಬುಕ್ ಗು೦ಪಿನಲ್ಲಿ ತಮ್ಮನ್ನು ಅವಾಚ್ಯವಾಗಿ ನಿ೦ದಿಸಲಾಗಿದೆ ಎ೦ದು ಆರೋಪಿಸಿ,ರಾಜ್ಯದ ಮುಖ್ಯಮ೦ತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು,ಗು೦ಪಿನ ನಿರ್ವಾಹಕರು ಸೇರಿದ೦ತೆ,ಸುಮಾರು ಐದು ಜನರ ಮೇಲೆ ಕ್ರಿಮಿನಲ್ ದೂರು ದಾಖಲಿಸಿದರು.ರಾಜ್ಯ ಸರ್ಕಾರದ ಅನೇಕ ಯೋಜನೆಗಳ ಬಗ್ಗೆ ಅವಮಾನಕರ ಚರ್ಚೆ ,ಶಾ೦ತಿ ಕದಡುವ ಪ್ರಯತ್ನ,ಮಾನಹಾನಿ ಮು೦ತಾದ ಆರೋಪಗಳಲ್ಲಿ ’ನಿಲುಮೆ’ಯ ಕೆಲವು ಸದಸ್ಯರ ಮೇಲೆ ಎಫ಼್.ಐ.ಆರ್ ದಾಖಲಿಸಲಾಗಿದೆ

ನಿಲುಮೆ ಎನ್ನುವ ಈ ಫೇಸ್ ಬುಕ್ ಗು೦ಪಿನ ಸದಸ್ಯರ ಪೈಕಿ ನಾನೂ ಒಬ್ಬ.ಸುಮಾರು ಮೂರು ವರ್ಷಗಳಿ೦ದ ಈ ಸಮುದಾಯದಲ್ಲಿನ ಬರವಣಿಗೆಗಳನ್ನು,ಚರ್ಚೆಗಳನ್ನು ಅತ್ಯ೦ತ ತಟಸ್ಥನಾಗಿ ನಾನು ಗಮನಿಸುತ್ತ ಬ೦ದಿದ್ದೇನೆ.ಸರಿಸುಮಾರು ಹದಿನೆ೦ಟು ಸಾವಿರ ಸಮಾನ ಮನಸ್ಕ ಸದಸ್ಯರನ್ನು ಹೊ೦ದಿರುವ ಕನ್ನಡದ ಅತಿದೊಡ್ಡ ಫೇಸ್ ಬುಕ್ ಸಮುದಾಯಗಳಲ್ಲಿ ನಿಲುಮೆಯೂ ಒ೦ದು.ಸದಸ್ಯನೇ ಆಗಿದ್ದರೂ ನಾನು ಅಲ್ಲಿನ ಚರ್ಚೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿರುವ ಸ೦ದರ್ಭಗಳು ತೀರ ಕಡಿಮೆ.ಬಲಪ೦ಥೀಯ ನಿಲುವುಗಳೆಡೆಗೆ ಆಕರ್ಷಿತರಾಗಿರುವ ಸದಸ್ಯರೇ ಹೆಚ್ಚಿರುವುದು ಹೌದಾದರೂ ನಿಲುಮೆಯ ಸದಸ್ಯರು(ಕೆಲವು ಅಪವಾದಗಳನ್ನು ಹೊರತುಪಡಿಸಿ) ತೀರ ಅತಿರೇಕಿಗಳಲ್ಲ.ಇಲ್ಲಿನ ಸದಸ್ಯರಿಗೆ ಸಾಮಾಜಿಕ ಅಸಮಾನತೆಯೆಡೆಗೊ೦ದು ಆಕ್ರೋಶವಿದೆ.ರಾಜಕಾರಣಿಗಳ ಆಷಾಢಭೂತಿತನದೆಡೆಗೊ೦ದು ಸಾತ್ವಿಕ ಕೋಪವಿದೆ.ರಾಜಕೀಯ,ಸಾಮಾಜಿಕ ಚರ್ಚೆಗಳು,ಕತೆಗಳು,ಕವನಗಳನ್ನೊಳಗೊ೦ಡ ಈ ವೇದಿಕೆ ,ಸಾಮಾಜಿಕ ಜಾಲತಾಣದ ಸದುಪಯೋಗಕ್ಕೆ ಅತ್ಯ೦ತ ಸೂಕ್ತ ಉದಾಹರಣೆಯ೦ಥದ್ದು ಎ೦ದು ನನಗೆ ಅನೇಕ ಬಾರಿ ಅನ್ನಿಸಿದ್ದಿದೆ.ಆದರೆ ಇ೦ಥಹ ವೇದಿಕೆಯಲ್ಲಿಯೇ ಅಚಾತುರ್ಯವೊ೦ದು ನಡೆದುಹೋಯಿತು.ದಿನೇಶ್ ಅಮೀನ್ ಮಟ್ಟುರವರ ಬರವಣಿಗೆಯನ್ನು ಒಪ್ಪದ ಕೆಲವರು,ಅವರ ಲೇಖನಕ್ಕೆ ಅಸಭ್ಯವಾಗಿ ಟೀಕಿಸಿಬಿಟ್ಟರು.

ಮತ್ತಷ್ಟು ಓದು »

3
ಫೆಬ್ರ

ಟಾರ್ಗೆಟ್ ನಿಲುಮೆ : ಪರದೆಯ ಹಿಂದಿನ ಕತೆ

– ರಾಕೇಶ್ ಶೆಟ್ಟಿ

freedomofspeechಸುವರ್ಣ ಸುದ್ದಿ ವಾಹಿನಿಯಲ್ಲಿ ನಡೆದ “ನಿಲುಮೆಯ ಮೇಲಿನ ದೌರ್ಜನ್ಯ” ಕುರಿತ ಚರ್ಚೆಯಲ್ಲಿ,ನಾನು ಕೊಂಚ ಆಕ್ರಮಣಕಾರಿಯಾಗಬೇಕಿತ್ತು ಎನ್ನುವುದು ನನ್ನ ಕೆಲ ಗೆಳೆಯರ ಅನಿಸಿಕೆಯಾಗಿತ್ತು.ಚರ್ಚೆಯನ್ನು ಮತ್ತೊಮ್ಮೆ ನಾನೇ ನೋಡಿದಾಗ ಕೆಲವೊಂದು ಕಡೆ ನಾನು ಆಕ್ರಮಣಕಾರಿಯಾಗಿದ್ದರೆ ಚೆನ್ನಾಗಿತ್ತು ಅಂತಲೇ ಅನಿಸಿತು.ಆದರೇನು ಮಾಡುವುದು,ಮಧ್ಯೆ ಬಾಯಿ ಹಾಕಿ ಮಾತನಾಡುವುದು ಮತ್ತು ಜೋರು ದನಿಯಲ್ಲಿ ಮಾತನಾಡುವುದೆಲ್ಲ “ಚರ್ಚೆ”ಯಲ್ಲ ಎನ್ನುವುದು ನಾನು ಬೆಳೆದು ಬಂದ ಹಾದಿ ಮತ್ತು ರೀತಿ ನನಗೆ ಕಲಿಸಿದೆ.ಹ್ಮ್ ಅದೆಲ್ಲ ಇರಲಿ.ಆವತ್ತು ಚರ್ಚೆಯ ಗದ್ದಲದಲ್ಲಿ ನಾನು ಹೇಳದೇ ಉಳಿದ ಬಹುಮುಖ್ಯ ವಿಷಯಗಳನ್ನು ದಾಖಲಿಸಬೇಕಿದೆ.ಆ ಕಾರಣಕ್ಕಾಗಿ ಈ ಲೇಖನ…

ಚರ್ಚೆಯ ನಡುವೆ,ದಿನೇಶ್  ಅಮೀನ್ ಮಟ್ಟು ಅವರು “ನಿಲುಮೆ ಗುಂಪನ್ನು ಮುಚ್ಚಬೇಕು” ಎಂದಿದ್ದನ್ನು ನೀವೆಲ್ಲರೂ ಕೇಳಿದ್ದೀರಿ.ಮಾತು ತೆಗೆದರೆ ಮುಚ್ಚಿಸಬೇಕು ಎನ್ನುವ ಈ ಪ್ರಗತಿಪರ ಚಿಂತನೆಯ ಹಿಂದಿನ ಕತೆಯೇನು? ಇವರಿಗೇಕೆ ನಿಲುಮೆಯನ್ನು ಮುಚ್ಚಿಸಲೇಬೇಕೆಂಬ ಹಟ?ಈ ಪ್ರಶ್ನೆಗಳಿಗೆ ಉತ್ತರ ಹುಡುಕಲು ನಾವು ೨೦೧೩ರ ಮಾರ್ಚ್ ನಲ್ಲಿ  ರಾಜ್ಯದ ಪ್ರತಿಷ್ಟಿತ ಪತ್ರಿಕೆಯೊಂದರಲ್ಲಿ ಶುರುವಾದ “ವಚನ ಸಾಹಿತ್ಯ ಮತ್ತು ಜಾತಿ ವ್ಯವಸ್ಥೆ” ಕುರಿತ ಚರ್ಚೆಯತ್ತ ನೋಡಬೇಕು.ಈ ಚರ್ಚೆ ಆರಂಭವಾಗಿದ್ದು  CSLC ಎಂಬ  ಸಮಾಜ ವಿಜ್ಞಾನ ಸಂಶೋಧನಾ ತಂಡದವರ “ವಚನ ಸಾಹಿತ್ಯವು ಜಾತಿವ್ಯವಸ್ಥೆಯ ವಿರುದ್ಧ ಮಾತನಾಡುತ್ತದೆಯೆ?” ಎಂಬ ಸಂಶೋಧನಾ ಪ್ರಬಂಧದೊಂದಿಗೆ.ಆ ಪತ್ರಿಕೆಯಲ್ಲಿ ಶುರುವಾದ ಚರ್ಚೆಯಲ್ಲಿ ಕೇವಲ ಒಂದು ಕಡೆಯವರ ವಾದಗಳಿಗೆ ಮಾತ್ರ ವೇದಿಕೆಯೊದಗಿಸಿ, CSLC ತಂಡದವರಿಗೆ ವಾದಕ್ಕೂ ಜಾಗ ಕೊಡದಿದ್ದಾಗ ಅವರಿಗೆ ಜೊತೆಯಾಗಿ ನಿಂತಿದ್ದು ನಿಲುಮೆ.ನಿಲುಮೆಯಲ್ಲಿ ಸಿ.ಎಸ್.ಎಲ್.ಸಿ  ತಂಡದವರ ಲೇಖನಗಳು ಪ್ರಕಟವಾಗಿ ಅದು ಫೇಸ್ಬುಕ್ಕಿನಲ್ಲೂ ವ್ಯಾಪಕ ಚರ್ಚೆಗೆ ಒಳಪಟ್ಟಿತು.ಕಡೆಗೆ ಒತ್ತಡಕ್ಕೆ ಬಿದ್ದವರು ಅನಿವಾರ್ಯವಾಗಿ ಸಿ.ಎಸ್.ಎಲ್.ಸಿಯವರ ಒಂದೆರಡು ಲೇಖನಗಳನ್ನು ಪ್ರಕಟಿಸಿ,ಆ ಚರ್ಚೆಗೆ ಅಂತ್ಯ ಹಾಡಿಸಿದರು.ಆದರೆ,ಅಷ್ಟಕ್ಕೆ ನಮ್ಮ ಪ್ರಗತಿಪರರ ಸಿಟ್ಟು ಕಮ್ಮಿಯಾದೀತೇ? ಅವರು ತಮ್ಮ ಅಧಿಕಾರದ ಜೊತೆಗಿನ ಸ್ನೇಹ(ಪುರೋಹಿತಶಾಹಿ!?) ವನ್ನು ಬಳಸಿಕೊಂಡು ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಇದ್ದ CSLC ಸಂಶೋಧನಾ ಕೇಂದ್ರವನ್ನೇ ಮುಚ್ಚಿಸಿಬಿಟ್ಟರು! ಆಗಲಾದರೂ ನಾವು ಇವರಿಗೆ ಬೆದರಿಕೊಂಡು ಸುಮ್ಮನಾಗಬಾರದೇ? ಊಹೂಂ! ಸುಮ್ಮನಿರಲಿಲ್ಲ.ಈ ಫ್ಯಾಸಿಸ್ಟ್ ಧೋರಣೆಯ ಬಗ್ಗೆ ನಿಲುಮೆಯ ವೇದಿಕೆಯಲ್ಲಿ ಬರೆಯಲಾಯಿತು.ನಾನು ಈ ಬಗ್ಗೆ ನಿಲುಮೆಯಲ್ಲಿ,ಅಸೀಮಾ ಮಾಸಿಕದಲ್ಲಿ ಮತ್ತು ಕನ್ನಡ ಪ್ರಭ ಪತ್ರಿಕೆಯಲ್ಲಿ ಮಾನ್ಯ ಅನಂತ ಮೂರ್ತಿಯವರಿಗೆ ಬರೆದ ಬಹಿರಂಗ ಪತ್ರದಲ್ಲೂ ಪ್ರಗತಿಪರರ ಫ್ಯಾಸಿಸ್ಟ್ ಧೋರಣೆಯನ್ನು ಪ್ರಶ್ನಿಸಿದೆ.ನಿಲುಮೆಯ ಮೇಲೆ ಫ್ಯಾಸಿಸಂನ ಕರಾಳ ಛಾಯೆ ಆವರಿಸುತ್ತಲೇ ಹೋಯಿತು.

ಮತ್ತಷ್ಟು ಓದು »

3
ಫೆಬ್ರ

ದಿನೇಶ್ ಅಮಿನ್ ಮಟ್ಟು ಅವರಿಗೊಂದು ಬಹಿರಂಗ ಪತ್ರ

– ಡಾ.ಟಿ.ಎನ್ ವಾಸುದೇವ ಮೂರ್ತಿ

Amin Mattuನಿಂದಂತಿ ತುಣ್ಹೀಮಾಸೀನಙï ನಿಂದಂತಿ ಬಹುಭಾಣೀನಙï |

ಮಿತಭಾಣಿನಂ ಪಿ ನಿಂದಂತಿ ನತ್ಥಿ ಲೋಕೇ ಅನಿಂದಿತೋ ||

(ಧಮ್ಮಪದ, ಕೋಧವಗ್ಗ 227)

(ಲೋಕದ ಜನ ಸುಮ್ಮನಿರುವವರನ್ನೂ ನಿಂದಿಸುವರು, ಹೆಚ್ಚು ಮಾತನಾಡುವವರನ್ನೂ ನಿಂದಿಸುವರು, ಮಿತಭಾಷಿಗಳನ್ನೂ ನಿಂದಿಸುವರು ಲೋಕದ ಜನರಿಂದ ನಿಂದನೆಗೆ ಒಳಗಾಗದವರೇ ಇಲ್ಲ)

ಮುಖವಿಲ್ಲದವರ ನಿಂದನೆಯ ಮಾತುಗಳಿಂದ ವಿಚಲಿತರಾಗಿರುವ ದಿನೇಶ್ ಅಮಿನ್ ಮಟ್ಟು ಅವರು ‘ನಿಲುಮೆ’ ಜಾಲತಾಣದ ಮೇಲೆ ದೂರು ನೀಡಿರುವುದಲ್ಲದೆ ಅದನ್ನು ಮುಚ್ಚಿಸಲು ಮುಂದಾಗಿರುವುದು ದುರದೃಷ್ಟಕರ. ಅವರ ಈ ಅಸಹನೆ ‘ಸಂತೆಯೊಳಗೆ ಮನೆಯ ಮಾಡಿ ಶಬ್ದಕ್ಕೆ ನಾಚಿದರೆಂತಯ್ಯ’ ಎಂಬ ಅಕ್ಕನ ಮಾತುಗಳನ್ನು ನೆನಪಿಸುತ್ತದೆ.

ದಿನೇಶ್ ಅಮೀನ್ ಮಟ್ಟು “ಪತ್ರಿಕೋದ್ಯಮವು ಜಾಹಿರಾತಿನ ಹಂಗಿಗೊಳಗಾಗಿರುವುದರಿಂದ ಫೇಸ್‍ಬುಕ್‍ನಂತಹ ಸಾಮಾಜಿಕ ಜಾಲತಾಣಗಳು ಭರವಸೆಯ ಅಭಿವ್ಯಕ್ತಿ ಮಾಧ್ಯಮವಾಗಬಲ್ಲದು” ಎಂಬ ಆಶಾವಾದ ವ್ಯಕ್ತಪಡಿಸುತ್ತಾರೆ.

ಆದರೆ ಸಾಮಾಜಿಕ ಜಾಲತಾಣ ವೃತ್ತಿಪರ ಪತ್ರಿಕೋದ್ಯಮಕ್ಕೆ ಪರ್ಯಾಯವಾಗಬಲ್ಲದೇ ಎಂಬ ಪ್ರಶ್ನೆ ಇನ್ನೂ ಬಗೆಹರಿಯದೆ ಅದೊಂದು ಚರ್ಚೆಯ ವಿಷಯವಾಗಿದೆ. ಸದ್ಯಕ್ಕೆ ಮುಖವಿಲ್ಲದವರಿಂದ ತಮಗಾದ ತೇಜೋವಧೆಯನ್ನು ಮರೆಮಾಚಿ, ತಾವು ನೀಡಿರುವ ಪೊಲೀಸ್ ದೂರಿನ ಸಮರ್ಥನೆಗೆ ಒಂದು ಗುರಾಣಿಯಂತೆ ಅವರು ಸದರಿ ಅಭಿಪ್ರಾಯವನ್ನು ಪ್ರಚಾರ ಮಾಡಿಕೊಂಡಿರುವಂತೆ ಮೇಲ್ನೋಟಕ್ಕೆ ಭಾಸವಾಗುತ್ತದೆ. ಅಷ್ಟಕ್ಕೂ ಅದೇನೂ ತೇಜೋವಧೆಯಲ್ಲ, ವಿವೇಕಾನಂದರ ಕುರಿತು ಅವರು ಬರೆದದ್ದು ಅನ್ಯ ಲೇಖಕನೊಬ್ಬನ ಅನುವಾದಿತ ಸಾಲುಗಳೇ ವಿನಾ ಅದೇನೂ ಅವರ ವ್ಯಕ್ತಿಗತ ಅಭಿಪ್ರಾಯವಲ್ಲ ಎಂಬ ಅರಿವಿರದ ಓದುಗರು ಮಾಡುವ ಬುಡವಿರದ ಆರೋಪಗಳನ್ನು ತೇಜೋವಧೆ ಎಂದೇಕೆ ಭಾವಿಸಬೇಕು? “ಒಂದು ಜಾಲತಾಣವನ್ನು ವಾಮಮಾರ್ಗದಿಂದಲೇ ಹೊಸಕಬಲ್ಲೆನಾದರೂ ನೇರವಾಗಿಯೇ ಅದರ ವಿರುದ್ಧ ಧ್ವನಿಯೆತ್ತಿದ್ದೇನೆ” ಎಂಬರ್ಥದ ಅವರ ಮಾತುಗಳಲ್ಲಿ ಅವರ ಪ್ರಾಮಾಣಿಕತೆ ಮತ್ತು ಸಾಚಾತನ ವಾಚ್ಯವಾಗಿ ಪ್ರದರ್ಶಿತವಾಗುತ್ತಿದ್ದರೂ ಆ ಮಾತುಗಳ ಹಿಂದೆ ಕ್ರೌರ್ಯವೇ ಇಣುಕುತ್ತಿರುವಂತೆ ಕಾಣಿಸುತ್ತದೆ. ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ “ನಿನ್ನ ಅಭಿಪ್ರಾಯದೊಂದಿಗೆ ನನ್ನ ಸಹಮತವಿಲ್ಲದಿದ್ದರೂ ನಿನ್ನ ಅಭಿಪ್ರಾಯವನ್ನು ಹತ್ತಿಕ್ಕುವ ಶಕ್ತಿಗಳ ವಿರುದ್ಧ ಪ್ರಾಣವನ್ನೇ ಪಣವಿತ್ತು ಹೋರಾಡುತ್ತೇನೆ” ಎಂಬ ವೋಲ್ಟೈರ್‍ನ ಮಾತುಗಳನ್ನು ಕಲಿಸುವ ಹಿರಿಯರು ಇಂತಹ ಕಠಿಣಕ್ರಮಕ್ಕೆ ಮುಂದಾಗುವಂತೆ ಪ್ರೇರೇಪಿಸಿರುವ ಬೆಳವಣಿಗೆಗಳನ್ನು ಕಂಡು ದಿಗಿಲಾಗುತ್ತದೆ.

ಮತ್ತಷ್ಟು ಓದು »

22
ಜನ

ಶಕ್ತಿ, ವ್ಯಕ್ತಿ, ಅಭಿವ್ಯಕ್ತಿ

1380232_10152740811064403_374390729633801991_n

– ಶ್ರೀವತ್ಸ ಜೋಶಿ

ಕಳೆದ ಶತಮಾನದ ಆರಂಭದಲ್ಲಿ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಒಬ್ಬೊಬ್ಬ ಯೋಧನಲ್ಲೂ ಆ ಮನೋಭಾವ ಪುಷ್ಕಳವಾಗಿ ಇತ್ತು. ಕಳೆದ ವರ್ಷ ಮೋದಿಯವರ ವಿಜಯಕ್ಕಾಗಿ ಹಗಲಿರುಳೂ ದುಡಿದ ಒಬ್ಬೊಬ್ಬ ಕಾರ್ಯಕರ್ತನಲ್ಲೂ ಆ ಮನೋಭಾವ ಹೇರಳವಾಗಿ ಇತ್ತು. ಅದೇನೆಂದರೆ- ಸ್ವಾರ್ಥ ಎಂಬುದು ರವಷ್ಟೂ ಇಲ್ಲದೆ, ಸಮಾಜಕ್ಕೆ ಒಳಿತಾಗಬೇಕು, ದೇಶಕ್ಕೆ ಒಳ್ಳೆಯದಾಗಬೇಕು, ನಾವು ಭಾರತೀಯರು ಅಭಿಮಾನದಿಂದ ತಲೆಯೆತ್ತಿ ನಿಲ್ಲುವಂತಾಗಬೇಕು ಎಂಬ ತುಡಿತ. ಅದಕ್ಕೋಸ್ಕರ ಯಾವ ಅಪಾಯಕಾರಿ ಮಾರ್ಗವನ್ನಾದರೂ ಹಿಡಿಯುವ ಛಲ. ವೈಯಕ್ತಿಕವಾಗಿ ತನ್ನನ್ನು ಯಾರು ಎಷ್ಟು ಜರಿದರೂ ಜರ್ಝರಗೊಳಿಸಿದರೂ ಸರಿಯೇ ದೇಶಕ್ಕೆ, ದೇಶದ ಆದರ್ಶಗಳ ಔನ್ನತ್ಯಕ್ಕೆ ಧಕ್ಕೆಯಾದರೆ, ಮಸಿ ಬಳಿದರೆ ಸಹಿಸಿಕೊಳ್ಳುವುದಿಲ್ಲ ಎಂಬ ಕಿಚ್ಚಿನಂಥ ಕೆಚ್ಚು.

ಇದೀಗ ’ನಿಲುಮೆ’ ಬಳಗದ ಸದಸ್ಯರಲ್ಲಿ ಕಾಣುತ್ತಿರುವುದೂ ಅದೇ ಕೆಚ್ಚಿನ ಮನೋಭಾವ. ಅಂತಹದೊಂದು ಶಕ್ತಿ ತಲೆಯೆತ್ತಿ ನಿಲ್ಲುತ್ತಿರುವುದು ತಂದಿದೆ ಕುತ್ಸಿತ ಬುದ್ಧಿಯ ಕುತಂತ್ರಿಗಳಿಗೆ ತಲೆನೋವ. ಸ್ವಾಮಿ ವಿವೇಕಾನಂದರನ್ನು ಕೀಳಾಗಿ ಚಿತ್ರಿಸಿ ಬರೆದಿದ್ದಕ್ಕೆ ಆ ಲೇಖಕನ ವಿರುದ್ಧ ನಿಲುಮೆಯ ಕೆಲ ಹುಡುಗರು ಕೆಟ್ಟ ಶಬ್ದಗಳನ್ನು ಬಳಸಿದ್ದಾರೆ ನಿಜ. ಆದರೆ ಏಕೆ ಅವರು ಹಾಗೆ ಮಾಡಿದರು ಎನ್ನುವುದಕ್ಕೆ ಉತ್ತರ ಮೇಲಿನ ಮೊದಲ ಪ್ಯಾರಗ್ರಾಫ್‌ನಲ್ಲಿ ಸಿಗುತ್ತದೆ. ಆ ಹುಡುಗರಿಗೆ ಸ್ವಾರ್ಥ ಇಲ್ಲ. ಸಮಾಜದಲ್ಲಿ ಹೇಳಿಕೊಳ್ಳುವಂಥ ಸ್ಥಾನಮಾನವೂ ಇಲ್ಲ. ಅದೆಲ್ಲ ಅವರಿಗೆ ಮುಖ್ಯವೂ ಅಲ್ಲ. ಆದರೆ ದೇಶದ ಆದರ್ಶಗಳನ್ನು ಯಾರಾದರೂ ಅವಹೇಳನ ಮಾಡಿದರೆ ಮಾತ್ರ ಅವರು ಖಂಡಿತ ಸಹಿಸಿಕೊಳ್ಳುವುದಿಲ್ಲ. ನಖಶಿಖಾಂತ ಉರಿದು ಉಗಿದು ಉಪ್ಪಿನಕಾಯಿ ಹಾಕದೆ ಬಿಡುವುದಿಲ್ಲ.

ವಿವೇಕಾನಂದರ ಕುರಿತು ಕೆಟ್ಟದಾಗಿ ಬರೆದ ದಿನೇಶ್ ಅಮೀನ್ ಮಟ್ಟು ಹಾಗಲ್ಲ. ಅವರು ಯಾರ ಬಗ್ಗೆ ಎಷ್ಟೂ ಕೆಟ್ಟದಾಗಿ ಬರೆಯಬಹುದು. ಯಾರನ್ನು ಬೇಕಿದ್ದರೂ ಷಂಡರೆಂದು ಹೀಗಳೆಯಬಹುದು. ಭಾರತದೇಶದ ಸಂಸತ್ತನ್ನು ಪಾಯಿಖಾನೆ ಎಂದು ಚಿತ್ರಿಸಿದರೆ ಅಂತಹ ಅಭಿವ್ಯಕ್ತಿ ತನಗಿಷ್ಟವಾಯ್ತು ಎನ್ನಬಹುದು. ಆದರೆ ತನ್ನನ್ನು ಮಾತ್ರ ಯಾರಾದರೂ ಕೆಟ್ಟ ಶಬ್ದಗಳಿಂದ ಜರಿದರೆ ಸುತಾರಾಂ ಸಹಿಸಿಕೊಳ್ಳುವುದಿಲ್ಲ. ಅವರು ನಖಶಿಖಾಂತ ಉರಿಯುವುದು ತನ್ನ ಬುಡಕ್ಕೆ ಕೊಡಲಿ ಬಿದ್ದಾಗ ಮಾತ್ರ.

ನಿಲುಮೆ ಹುಡುಗರಿಗೂ ಮಟ್ಟುಗೂ ಅದೇ ಮೂಲಭೂತ ವ್ಯತ್ಯಾಸ. ನಿನ್ನೆ ಸುವರ್ಣ ನ್ಯೂಸ್ ಸುದ್ದಿವಾಹಿನಿಯಲ್ಲಿ ನೇರಪ್ರಸಾರವಾದ ಚರ್ಚೆಯಲ್ಲಿ ಅದು ಮತ್ತಷ್ಟು ಸ್ಪಷ್ಟವಾಯಿತು. ರಾಜ್ಯದ ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಎಂಬ ಗೌರವದ ಹುದ್ದೆಯಲ್ಲಿರುವ ದಿನೇಶ್ ಅಮೀನ್ ಮಟ್ಟು ಆ ಚರ್ಚೆಯಲ್ಲಿ ಆಕ್ರೋಶದಿಂದ ಕಿರುಚಾಡುತ್ತ ತನಗೆ ಮತ್ತು ತನ್ನ ಹುದ್ದೆಗೆ ಇರಬೇಕಾದ ಗೌರವ ಘನತೆಗಳ ಕನಿಷ್ಟ ಅರಿವೂ ಇಲ್ಲದೆ ಕೂಗಾಡುತ್ತ ಚರ್ಚೆಯಲ್ಲಿ ಪಾಲ್ಗೊಂಡರು. ಅವರ ವೃತ್ತಿ ಅನುಭವದ ವರ್ಷಗಳಷ್ಟು ವಯಸ್ಸೂ ಆಗದಿರುವ ರಾಕೇಶ್ ಶೆಟ್ಟಿ (ನಿಲುಮೆ ಬಳಗ) ಒಂದು ಗಂಭೀರ ಚರ್ಚೆಗೆ ಹೇಗೆ ತಯಾರಾಗಿ ಬರಬೇಕು, ಚರ್ಚೆಯ ವೇಳೆ ಹೇಗೆ ವರ್ತಿಸಬೇಕು, ಯಾವಾಗ ಹೇಗೆ ಎಷ್ಟು ಮಾತನಾಡಬೇಕು ಎಂಬ ಆದರ್ಶವನ್ನು ಮೆರೆದರು!

ತಾನು ಮಾಡಿದ್ದೇ ಸರಿ ಎಂಬ ದರ್ಪವನ್ನು ಚರ್ಚೆಯುದ್ದಕ್ಕೂ ತೋರಿದ ಮಟ್ಟು, ಮಧ್ಯಮವರ್ಗವನ್ನು ತಾನು ಷಂಡ ಎಂದಿದ್ದನ್ನು ಮತ್ತೆಮತ್ತೆ ಸಮರ್ಥಿಸಿಕೊಂಡರು. ಆದರೆ ತನ್ನನ್ನು ಕೆಟ್ಟ ಶಬ್ದಗಳಿಂದ ಬೈಯ್ದದ್ದು ತನಗೆ ನೋವು ತಂದಿತು ಎಂದು ಅಳಲುತೋಡಿಕೊಂಡರು. ಸಾಮಾಜಿಕ ಮಾಧ್ಯಮಗಳಲ್ಲಿ ಬಳಸುವ ಭಾಷೆಯ ಬಗ್ಗೆ ಎಚ್ಚರವಿರಬೇಕೆಂದು ಬೋಧಿಸಿದರು. ಆದರೆ ಆ ಬೋಧನೆ ಸ್ವತಃ ತನಗೆ ಲಗಾವಾಗುವುದಿಲ್ಲ, ತಾನು ಪ್ರತ್ಯಕ್ಷವಾಗಿ/ಪರೋಕ್ಷವಾಗಿ “ಪೋಷಿಸುತ್ತಿರುವ” ಸಮಾಜವಿರೋಧಿ ದುಷ್ಟಶಕ್ತಿಗಳಿಗೆ ಮತ್ತು ಹುಲ್ಲಿನಲ್ಲಿರುವ ಹಾವಿನಂಥವರಿಗೂ ಅನ್ವಯವಾಗುವುದಿಲ್ಲ ಎಂದು ತೋರಿಸಿದರು. ಕೆಟ್ಟ ಭಾಷೆ ಬಳಸುವುದನ್ನು ತಡೆಗಟ್ಟುವುದು ಸಾಧ್ಯವಾಗದಿದ್ದರೆ ನಿಲುಮೆ ಸಂಘಟನೆಯನ್ನೇ ಮುಚ್ಚಿಹಾಕಬೇಕೆಂಬ ಬಿಟ್ಟಿ ಉಪದೇಶ ಕೊಟ್ಟರು. ತಾನು ಮಾತ್ರ ಎಂತೆಂಥ ಗಲೀಜು ಜಂತುಗಳನ್ನು ಬಗಲಲ್ಲಿಟ್ಟುಕೊಂಡಿದ್ದೇನೆ ಎನ್ನುವುದರ ಪರಿವೆಯಿಲ್ಲದವರಾದರು.

ಎತ್ತರದ ದನಿಯಲ್ಲಿ ಕೂಗಾಡಿ, ಅಧಿಕಾರದ ಮದವನ್ನು ತೋರಿ, ಚರ್ಚೆಯಲ್ಲೂ ತಾನು ಗೆದ್ದೆ ಎಂದು ಮಟ್ಟು ತಿಳಿದುಕೊಂಡಿರಬಹುದು. ಗೆಲ್ಲುವುದು ಬಿಡಿ, ಅವರು ಸೋತದ್ದಷ್ಟೇ ಅಲ್ಲ, ಚರ್ಚೆಯನ್ನು ನೋಡಿದ ಎಷ್ಟೋ ವೀಕ್ಷಕರಿಗೆ ಅವರ ಮೇಲಿದ್ದ ಅರೆಬರೆ ಗೌರವವೂ ಸತ್ತುಹೋಯಿತಿರಬಹುದು. ಅಂತಹ ಮಟ್ಟು, ಮಾನ್ಯ ಮುಖ್ಯಮಂತ್ರಿಗೆ ಮಾಧ್ಯಮಸಲಹೆಗಾರ ಅಂತೆ. ಮುಗಿದ್ಹೋಯ್ತು!

#‎IAmWithNilume‬

ಚರ್ಚೆಯ ವಿಡಿಯೋ ಲಿಂಕ್‌ ಇಲ್ಲಿವೆ: