ವಿಷಯದ ವಿವರಗಳಿಗೆ ದಾಟಿರಿ

Posts tagged ‘ರಾಜಕೀಯ’

14
ಆಕ್ಟೋ

ಸೌಜನ್ಯ ಹಂತಕರು ನೇಣಿಗೇರುವುದೆಂತು?

– ರಾಕೇಶ್ ಶೆಟ್ಟಿ

Justice for Kumari Soujanya“ಬಹುಷಃ ಆಗಿನ ಕಾಲವೇ ಚೆನ್ನಾಗಿತ್ತೆನೋ.ಆಗಲಾದರೂ ಕುರು ಸಭೆಯಲ್ಲಿ ದ್ರೌಪದಿಯ ವಸ್ತ್ರಾಪಹರಣವಾಗುವಾಗ ಅವಳ ಸಹಾಯಕ್ಕೆ ಕರೆದೊಡನೆಯೇ ಶ್ರೀ ಕೃಷ್ಣ ಪರಮಾತ್ಮ ಬಂದಿದ್ದ.ಪಾಪ! ಈ ಕಾಲದ ಹೆಣ್ಣು ಮಕ್ಕಳ ಕೂಗು ಆ ಕಾಣದ ದೇವರಿಗೂ,ಕಾನೂನು ಪಾಲಕರಾದ ಮನುಷ್ಯ(?)ರಿಗೂ ಕೇಳುತ್ತಿಲ್ಲ.ಕುರುಕ್ಷೇತ್ರದ ಯುದ್ಧದ ಮುಗಿದರೂ ಕೌರವರು ಇನ್ನೂ ಸತ್ತಿಲ್ಲ.ದ್ರೌಪದಿಯರ ಗೋಳು ಮುಗಿಯೋಲ್ಲ…” ಅಂತ ’ನಿರ್ಭಯ’ ಅತ್ಯಾಚಾರದ ಪ್ರಕರಣದ ಸಮಯದಲ್ಲಿ ಬರೆದಿದ್ದೆ. ಮತ್ತೆ ಅದೇ ಸಾಲುಗಳನ್ನು ನಮ್ಮ ಧರ್ಮಸ್ಥಳದ ’ಸೌಜನ್ಯ’ ಅನ್ನುವ ಹೆಣ್ಣುಮಗಳ ಬಗ್ಗೆ ಬರೆಯುವಾಗಲೂ ಬಳಸಬೇಕಾಗಿ ಬಂದಿದೆ.ಆಗ ಕೃಷ್ಣನೇನೋ ಕರೆದಾಗ ಬಂದಿದ್ದ.ಆದರೆ ಇಲ್ಲಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ಯಾಕೋ ವರುಷ ಕಳೆದರೂ ಇನ್ನು ಕರುಣೆ ತೋರಲಿಲ್ಲ …! ನನಗೆ ಈ ದೇವರುಗಳ ಮೇಲೆ ಒಮ್ಮೊಮ್ಮೆ ಕೋಪಬರುವುದು ಇದೇ ಕಾರಣಕ್ಕಾಗಿ, ಏನೆಲ್ಲಾ ಪಾಪಗಳನ್ನು ಮಾಡಿ ಒಂದು ನೇಮ,ಒಂದು ಹರಕೆ,ಒಂದು ಹೋಮ,ಒಂದು ಹವನ,ತಪ್ಪು ಕಾಣಿಕೆ ಸಲ್ಲಿಸಿ ಸುಮ್ಮನಾಗಿಬಿಡಬಹುದೇ? ಹಾಗಿದ್ದರೆ ’ಧರ್ಮ’ವೆಲ್ಲಿದೆ?

ದಿಲ್ಲಿಯಲ್ಲಿ ಕಳೆದ ಡಿಸೆಂಬರಿನಲ್ಲಿ ನಡೆದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ’ನಿರ್ಭಯ’ ಅತ್ಯಾಚಾರ ಪ್ರಕರಣದಲ್ಲಿ ಹೋರಾಟದ ಕಿಡಿಯನ್ನು ದೆಹಲಿಯ ವಿದ್ಯಾರ್ಥಿ ಮಿತ್ರರು ಹಚ್ಚಿದ್ದರು.ಅದು ದೇಶವ್ಯಾಪಿಯೂ ಹಬ್ಬಿತ್ತು. ಖುದ್ದು ಕೇಂದ್ರ ಸರ್ಕಾರವನ್ನೇ ಮಂಡಿಯೂರುವಂತೆ ಮಾಡಿದ್ದು ಯುವಶಕ್ತಿಗೆ ಸಂದ ಜಯವಾಗಿತ್ತು.ಈಗ ನಿರ್ಭಯ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಿದೆ.ಆದರೆ ನಮ್ಮ ಸೌಜನ್ಯ ಪ್ರಕರಣದ ಆರೋಪಿಗಳೇ ಇನ್ನೂ ಸಿಕ್ಕಿಲ್ಲ…! ಅತ್ಯಾಚಾರದ ಆರೋಪಿಗಳನ್ನು ವರ್ಷವಾದರೂ ಬಂಧಿಸಲಾಗದಷ್ಟು ನಿಷ್ಕ್ರಿಯರಾಗಿದ್ದಾರೆಯೇ ನಮ್ಮ ಕರ್ನಾಟಕ ಪೋಲಿಸರು? ಅಥವಾ ಪೋಲಿಸರನ್ನು ನಿಷ್ಕ್ರಿಯಗೊಳಿಸುವಲ್ಲಿ ಕಾಣದ ’ಕೈ’ ಗಳು ಕೆಲಸ ಮಾಡುತ್ತಿವೆಯೇ? ಪ್ರಕರಣ ನಡೆದಾಗ ಇದ್ದಿದ್ದು ಬಿಜೆಪಿ ಸರ್ಕಾರ.ಈಗ ಇರುವುದು ಕಾಂಗ್ರೆಸ್ಸ್ ಸರ್ಕಾರ.ಹಾಗಿದ್ದರೆ ಆ ಕಾಣದ ಕೈಗಳು ಸರ್ಕಾರದ ಕೈಗಳನ್ನೇ ಕಟ್ಟಿಹಾಕಬಲ್ಲಷ್ಟು ಬಲಿಷ್ಟವಾಗಿವೆಯೇ?

ಮತ್ತಷ್ಟು ಓದು »

8
ಆಕ್ಟೋ

ತುತ್ತನ್ನು ನಿರ್ಲಕ್ಷಿಸುವ ಮುನ್ನ

– ನವೀನ್ ನಾಯಕ್

Dont Waste Food      ಭಾರತ ಬದಲಾಗುತಿದೆ, ಇದನ್ನು ನಮ್ಮ ಮುಖ್ಯಮಂತ್ರಿಯಿಂದ ಹಿಡಿದು ಪ್ರಧಾನ ಮಂತ್ರಿಯವರೆಗೆ ಎಲ್ಲರೂ ದಿನಕೊಮ್ಮೆ ಮಂತ್ರದಂತೆ ಪಟಿಸುತಿದ್ದಾರೆ. ಇದರಿಂದ ನಮ್ಮ ಕಂಗಳು ಬದಲಾವಣೆಯ ಸಮಯ ಹತ್ತಿರ ಬರುತಿದೆ ಎಂದು ಹೊಸ ಕನಸು ಕಾಣತೊಡಗಿದೆ. ಇಂಥ ಸಮಯದಲ್ಲಿ ವಾಸ್ತವವನ್ನು ವಿಶ್ವಸಂಸ್ಥೆ ಬಯಲಿಗೆಳೆದು ನಮ್ಮ ಸರಕಾರ ನಡೆಸುತ್ತಿರುವವರ ಮುಖವಾಡವನ್ನು ಕಳಚಿದೆ. ವಿಶ್ವಸಂಸ್ಥೆ ನಡೆಸಿರುವ ಸಮೀಕ್ಷೆಯನ್ನು ಗಮನಿಸಿದರೆ ಭಾರತದ ಬದಲಾವಣೆಯು ಮುಂದುವರೆಯುವದು ಬಿಟ್ಟು ಹಿಮ್ಮುಖವಾಗಿ ನಡೆಯತೊಡಗಿದೆ.ಈ ಅನಿಸಿಕೆ ಏಕೆಂದರೆ ಅದರ ಸಮೀಕ್ಷೆಯ ವರದಿಯನ್ನು ನೋಡಿ.

ವಿಶ್ವಸಂಸ್ಥೆ;- ವಿಶ್ವದಲ್ಲಿ 120 ಕೋಟಿ ಜನ ಇನ್ನೂ ಕಿತ್ತು ತಿನ್ನುವ ಬಡತನದ ಬೇಗೆಯಲ್ಲಿ ದಿನವನ್ನು ಕಳೆಯುತಿದ್ದಾರೆ. ಅದರಲ್ಲಿ ಮೂರನೆಯ ಒಂದರಷ್ಟು ಅಂದರೆ 33% (39 ಕೋಟಿ 60 ಲಕ್ಷ ಜನ) ಭಾರತೀಯರಾಗಿದ್ದಾರೆ. ಇವರು ದಿನವೊಂದಕ್ಕೆ ಸುಮಾರು 65 ರುಪಾಯಿಗಳಿಗಿಂತಲೂ ಕಡಿಮೆ ಹಣದಲ್ಲಿ ಜೀವನ ದೂಡುತಿದ್ದಾರೆ. ಅವರದೇ ವರದಿ ಪ್ರಕಾರ 1981 ರಿಂದ 2010ರ ನಡುವೆ ವಿಶ್ವದ ಬಡತನದ ಪ್ರಮಾಣ ಸುಮಾರು ಅರ್ಧದಷ್ಟು ಇಳಿಕೆಯಾಗಿದೆ ಮತ್ತು ಇದಕ್ಕೆ ವಿರುದ್ಧವಾಗಿ ಅಭಿವೃದ್ಧಿಶೀಲ ಹಾಗು ಬಡರಾಷ್ಟ್ರಗಳಲ್ಲಿ

ಮತ್ತಷ್ಟು ಓದು »

20
ಆಗಸ್ಟ್

“ಕೈ”ಲಾಗದ ಸರ್ಕಾರ ಮತ್ತು ನಮ್ಮ ಕಾಶ್ಮೀರ

–     ರಾಕೇಶ್ ಶೆಟ್ಟಿ

Kashmiraಬಡ ಬೆಸ್ತನೊಬ್ಬನ ಕತ್ತನ್ನು ಸೀಳಿ ಅವನದೇ ಬೋಟನ್ನೇರಿ ೧೦ ಜನರ ಪಾಕಿಸ್ತಾನದ ಸೈತಾನರ ತಂಡ ಗೇಟ್ ವೇ ಆಫ್ ಇಂಡಿಯಾ ಮೂಲಕ ಮುಂಬೈಗೆ ವಕ್ಕರಿಸಿಕೊಳ್ಳುತ್ತದೆ.೧೦ ಜನರಿಂದ ಬೇರ್ಪಟ್ಟ ಇಬ್ಬರು ಮೊದಲಿಗೆ ದಾಳಿಯಿಡುವುದು ’ಲಿಯೋಫೋಲ್ಡ್ ಕೆಫೆ”ಗೆ ಅಲ್ಲಿ ಕಂಡ ಕಂಡಂತೆ ಗುಂಡಿನ ಮಳೆ ಸುರಿಸಿದ ಆ ಇಬ್ಬರು ಪಾಕಿ ಉಗ್ರರು ಅಲ್ಲಿಂದ ರಾಜಾರೋಷವಾಗಿ ಹೊರಡುತ್ತಾರೆ.ಉಗ್ರರ ಕಣ್ಣಿಗೆ ಬೀಳದೆ ಅವಿತು ಕುಳಿತಿದ್ದವನೊಬ್ಬ ಮೆಲ್ಲಗೆ ಬಾಗಿಲ ಸಂದಿಯಿಂದ ರಾಕ್ಷಸರು ಇದ್ದಾರೋ ಅನ್ನುವುದನ್ನು ಖಾತ್ರಿ ಮಾಡಿಕೊಳ್ಳಲು ಇಣುಕಿದಾಗ ಬಾಗಿಲಿಗೆ ಕಲ್ಲೊಂದು ಬಡಿಯುತ್ತದೆ.ಮತ್ತೆ ನೋಡುತ್ತಾನೆ ಊಹೂಂ “ಗುಂಡಲ್ಲ… ಕಲ್ಲು…!”

ಉಗ್ರರು ಅಮಾಯಕರ ರಕ್ತ ಹರಿಸಿ ಅಲ್ಲಿಂದ ರಾಜಾರೋಷವಾಗಿ ಹೊರಟ ಮೇಲೆ ಬೀಟ್ ನಲ್ಲಿದ್ದ ಪೋಲಿಸ್ ಕಾನ್ಸ್ಟೇಬಲ್ ಗಳು  ಒಂದು ಕೈಯಲ್ಲಿ ಲಾಠಿ ಹಿಡಿದು ಇನ್ನೊಂದು ಕೈಯಲ್ಲಿ ಕಲ್ಲು ಎಸೆದು ಒಳಗಿನಿಂದ “ಗುಂಡು” ಬರುತ್ತಿಲ್ಲ ಅನ್ನುವುದನ್ನು ಕನ್ಫರ್ಮ್ ಮಾಡಿಕೊಂಡು ಒಳಬರುತ್ತಾರೆ. ಹೇಗಿದೆ ನೋಡಿ ಉಗ್ರನ ಕೈಯಲ್ಲಿ “ಎ.ಕೆ ೪೭” ಅವನೆದುರಿಸಲು ಬಂದ ಪೋಲಿಸಣ್ಣನ ಕೈಯಲ್ಲಿ “ಕಲ್ಲು”…! ಇದು ನಮ್ಮ ಭಾರತದ ಆಂತರಿಕ ರಕ್ಷಣಾ ವ್ಯವಸ್ಥೆಯ ಸ್ಥಿತಿ.ಭಾರತದ ಬಂಡವಾಳವನ್ನು ಸರಿಯಾಗಿಯೇ ಅರಿತಿದ್ದ ಪಾಪಿ ಪಾಕಿಗಳು ಆ ೧೦ ಜನರ ತಂಡವನ್ನು ನುಗ್ಗಿಸಿ ಒಂದಿಡಿ ಭಾರತವನ್ನು ದಿನಗಳ ಮಟ್ಟಿಗೆ ಗಾಬರಿ ಬೀಳಿಸಿದ್ದರು. ಮುಂಬೈ ಮಾರಣ ಹೋಮದ ನಂತರ ಆಗಿದ್ದಾದರೂ ಏನು? ಭಾರತ-ಪಾಕಿಸ್ತಾನಗಳು ಸಮರದಂಚಿಗೆ ಬಂದು ನಿಂತವು.ನಮ್ಮ ಸರ್ಕಾರ “ಹೊಡಿಬೇಡಿ.ಹೊಡೆದ್ರೆ ನೋವಾಗುತ್ತೆ” ಅನ್ನುವಂತೆಯೇ ವರ್ತಿಸಿದ್ದಲ್ಲವೇ? ಅದಕ್ಕಿಂತ ಹೆಚ್ಚೆಂದರೆ “ಹೋಗಿ.ನಾವು ನಿಮ್ಮೊಂದಿಗೆ ನಾವು ಕ್ರಿಕೆಟ್ ಆಡುವುದಿಲ್ಲ” ಅಂದರು ಅಷ್ಟೇ…!

ಮತ್ತಷ್ಟು ಓದು »

5
ಆಗಸ್ಟ್

ಭಯೋತ್ಪಾದನೆ, ರಾಜಕೀಯ ನೇತಾರರು ಮತ್ತು ಮಾಧ್ಯಮಗಳು

– ಪ್ರೇಮಶೇಖರ
Terrorismತೀರಾ ಇತ್ತೀಚಿನವರೆಗೂ ಭಯೋತ್ಪಾದನಾ ಧಾಳಿಗಳಿಗೆ ಸಂಬಂಧಿಸಿದಂತೆ ಇರಾಕ್ ಮತ್ತು ಪಾಕಿಸ್ತಾನಗಳ ನಂತರ ಭಾರತ ವಿಶ್ವದಲ್ಲಿ ಮೂರನೆಯ ಸ್ಥಾನದಲ್ಲಿತ್ತು.  ಈಗಲೂ ಈ ದೇಶದಲ್ಲಿ ಭಯೋತ್ಪಾದನಾ ಕೃತ್ಯಗಳೇನೂ ಗಮನಾರ್ಹವಾಗಿ ತಗ್ಗಿಲ್ಲ.  ಆಂತರ್ಯುದ್ಧದ ದಳ್ಳುರಿಗೆ ಸಿಲುಕಿರುವ ಸಿರಿಯಾ, ಲಿಬಿಯಾಗಳು ಭಾರತವನ್ನು ಕೆಳಕ್ಕೆ ತಳ್ಳಿವೆ ಅಷ್ಟೆ.  ಅಂಕಿಅಂಶಗಳ ಪ್ರಕಾರ ೧೯೮೧ರಲ್ಲಿ ಖಲಿಸ್ತಾನ್ ಚಳುವಳಿ ಆರಂಭವಾದಂದಿನಿಂದ ಈ ದೇಶದಲ್ಲಿ ನಾಲ್ಕುಸಾವಿರ್ವಕ್ಕೂ ಅಧಿಕ ಭಯೊತ್ಪಾದನಾ ಧಾಳಿಗಳಾಗಿವೆ ಮತ್ತು ಈ ಪಿಡುಗಿಗೆ ದಿನಕ್ಕೆ ಸರಾಸರಿ ನಾಲ್ವರು ಭಾರತೀಯರು ಬಲಿಯಾಗುತ್ತಿದ್ದಾರೆ.
ಭಯೋತ್ಪಾದನೆ ಹೀಗೆ ಅವ್ಯಾಹತವಾಗಿ ಘಟಿಸುತ್ತಲೇ ಇರುವುದಕ್ಕೆ ಭಯೋತ್ಪಾದಕರ ರಕ್ತದಾಹದಷ್ಟೇ ನಮ್ಮ ರಾಜಕೀಯ ನೇತಾರರ ಹಾಗೂ ಮಾಧ್ಯಮಗಳ ಸ್ವಾರ್ಥಪರ ಬೇಜವಾದ್ದಾರಿಯುತ ವರ್ತನೆಯೂ ಕಾರಣ.  ಈ ಬಗೆಗಿನ ವಿಶ್ಲೇಷಣೆಯನ್ನು, ಪುಣೆ ಸ್ಫೋಟಗಳಿಗೆ ಸಂಬಂಧಿಸಿದಂತೆ ಅಪಾದಿತನಾಗಿರುವ ಸೈಯದ್ ಮಖ್ಬೂಲ್ ದೆಹಲಿ ಪೊಲೀಸರಿಗೆ ನೀಡಿದ ಈ ಹೇಳಿಕೆಯಿಂದ ಪ್ರಾರಂಭಿಸೋಣ:
ಪ್ರತಿಯೊಂದು ಧಾಳಿಯ ನಂತರವೂ ರಾಜಕೀಯ ಹೇಳಿಕೆಗಳು ಹೊರಬರುತ್ತವೆ ಮತ್ತು ಇವು ಆ ರಾಜಕೀಯ ನೇತಾರರ ಒತ್ತಡಕ್ಕೆ ಸಿಲುಕುವ ತನಿಖಾದಿಕಾರಿಗಳನ್ನು ಅಂತಿಮವಾಗಿ ಗೊಂದಲಕ್ಕೀಡುಮಾಡುತ್ತವೆ.  ಪ್ರತಿಕ್ರಿಯಿಸಲು ಇವರಿಗೆ ಸ್ವಲ್ಪ ಸಮಯ ಹಿಡಿಯುತ್ತದೆ ಮತ್ತು ನಮಗೆ ಸಿಗುವ ಈ ಹೆಚ್ಚುವರಿ ಸಮಯ ತಪ್ಪಿಸಿಕೊಳ್ಳಲು ನಮಗೆ ಅವಕಾಶ ಮಾಡಿಕೊಡುತ್ತದೆ.
22
ಜುಲೈ

ಕಾಂಗ್ರೆಸ್ಸಿನ ‘ನಮೋ’ನಿಯಾ ಮತ್ತು ಸೆಕ್ಯುಲರ್ ‘ನಾಯಿಮರಿ’

–  ರಾಕೇಶ್ ಶೆಟ್ಟಿ

NaModiಭಾರತದಲ್ಲಿ ಭಾವುಕತೆಗೇನಾದರೂ ಬರವುಂಟೇ? ಹಾಗೇನಾದರೂ ಇದ್ದಿದ್ದರೆ ನಮ್ಮ ಸ್ಥಿತಿ ಸ್ವಲ್ಪಮಟ್ಟಿಗಾದರೂ ಸುಧಾರಿಸುತ್ತಿತ್ತೋ ಏನೋ? ಆದರೆ,ಭಾವುಕತೆ ಅನ್ನುವುದು ನಮ್ಮ ಅಸ್ಮಿತೆಯ ಭಾಗವಾಗಿರುವುದರಿಂದಲೇ ನಮ್ಮ ರಾಜಕಾರಣಿಗಳು,ರಾಜಕೀಯ ಪಕ್ಷಗಳು ಪದೇ ಪದೇ ಭಾವುಕತೆಯ ಬಿರುಗಾಳಿಯೆಬ್ಬಿಸಿ ತಮ್ಮ ಹಗರಣ,ವೈಫಲ್ಯಗಳನ್ನು ಮುಚ್ಚಿಕೊಳ್ಳುವುದು.ಅದರಲ್ಲೂ ಇಂತ ವಿಷಯದಲ್ಲಿ ಕಾಂಗ್ರೆಸ್ಸ್ ಪಕ್ಷದ್ದು ಉಳಿದೆಲ್ಲರಿಗಿಂತ ಒಂದು ‘ಕೈ’ ಮೇಲೆಯೇ ಹೌದು.

೨೪ ಗಂಟೆಯ ಮೀಡಿಯಾ ಯುಗದಲ್ಲಿ ದೊಡ್ಡ ದೊಡ್ಡ ಹಗರಣಗಳು ಸುದ್ದಿಯಾದಗಾಲೆಲ್ಲ ಕಾಂಗ್ರೆಸ್ಸ್ ಅದರಿಂದ ಹೊರಬರಲು ಒಂದು ಸಣ್ಣ ಎಳೆಯೇನಾದರೂ ಸಿಗುತ್ತದೆಯಾ ಅಂತ ನೋಡುತ್ತಿರುತ್ತದೆ.ಈ ಬಾರಿ ರೂಪಾಯಿ ಮೌಲ್ಯ ಕುಸಿದು,ಆಡಳಿತ ವ್ಯವಸ್ಥೆಯೇ ಹಳ್ಳ ಹಿಡಿದು ಕುಳಿತಿರುವಾಗ ಅದಕ್ಕೆ ಕಾಣಿಸಿದ ಬೆಳಕಿನ ಹಾದಿ “ನಾಯಿ ಮರಿ”…!

ಹೌದು. ಗುಜರಾತ್ ಮುಖ್ಯಮಂತ್ರಿ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಬಳಸಿದ ನಾಯಿ ಮರಿ ಪದ.ರಾಯಿಟರ್ಸ್ ನೀಡಿದ ಸಂದರ್ಶನದಲ್ಲಿ ನಾಯಿ ಮರಿ ಬಂದಿದ್ದು ಹೇಗೆ ಅಂತ ನೋಡಿದರೆ,

ಸಂದರ್ಶಕ: “ಏನು (೨೦೦೨ ರ ಗಲಭೆ) ನಡೆಯಿತೋ ಆ ಬಗ್ಗೆ ನೀವು ಪಶ್ಚಾತ್ತಾಪ ಪಡುತ್ತಿರಾ?”

ಮತ್ತಷ್ಟು ಓದು »

18
ಜುಲೈ

ಮುಸ್ಲಿಂ ಸಮುದಾಯದ ಉತ್ಪ್ರೇಕ್ಷಿತ ಕೊರಗುಗಳು

– ಪ್ರೇಮ ಶೇಖರ

Bharatiya Muslimaru“ಇಂದು ಈ ದೇಶದಲ್ಲಿ ಹಿಂಸೆ, ಹತ್ಯಾಕಾಂಡಗಳು ನಡೆದಿರುವುದು ಜಾತಿ ಸಮಾವೇಶ, ರ‍್ಯಾಲಿಗಳಿಂದಲ್ಲ. ಪ್ರವೀಣ್ ತೊಗಾಡಿಯಾರಂತಹ ಮಂದಿಗಳು ದೇಶಾದ್ಯಂತ ಏರ್ಪಡಿಸಿಕೊಂಡು ಬಂದ ಹಿಂದೂ ಸಮಾಜೋತ್ಸವದಂತಹ ಸಮಾವೇಶಗಳು, ರ‍್ಯಾಲಿಗಳು ದೇಶವನ್ನು ಕಂಗೆಡಿಸಿದ್ದವು.  ಹಲವು ಕೋಮುಗಲಭೆಗಳಿಗೆ, ಹಿಂಸೆಗಳಿಗೆ ಬಿಜೆಪಿ ಮತ್ತು ಆರೆಸ್ಸೆಸ್‌ನ ರ‍್ಯಾಲಿಗಳು ಕಾರಣವಾಗಿವೆ.  ಅವು ಸಮಾಜವನ್ನು, ದೇಶವನ್ನು ಒಡೆದಿವೆ.”

ಉತ್ತರ ಪ್ರದೇಶದಲ್ಲಿ ಜಾತಿಯಾಧಾರಿತ ರ‍್ಯಾಲಿಗಳನ್ನು ನಿರ್ಬಂಧಿಸಿ ಕಳೆದ ಗುರುವಾರ ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಮರುದಿನವೇ ಅಂದರೆ ಶುಕ್ರವಾರ ಪ್ರಕಟವಾದ ಕನ್ನಡ ದೈನಿಕವೊಂದರ ಸಂಪಾದಕೀಯದಲ್ಲಿ ಕಂಡುಬಂದ ಸಾಲುಗಳಿವು.  ಪ್ರವೀಣ್ ತೊಗಾಡಿಯಾರಂತಹ ಮಂದಿಗಳು ದೇಶಾದ್ಯಂತ ನಡೆಸಿಕೊಂಡು ಬಂದ ರ‍್ಯಾಲಿಗಳು ದೇಶವನ್ನು ಕಂಗೆಡಿಸಿದ ಬಗ್ಗೆ ಹೇಳುವ ಈ ಸಂಪಾದಕೀಯ ಅಕ್ಬರುದ್ದೀನ್ ಒವೈಸಿಯಂತಹ ಮಂದಿಗಳು ಹದಿನೈದು ನಿಮಿಷಗಳಲ್ಲಿ ಹಿಂದೂಗಳನ್ನು ಮಟ್ಟಹಾಕುತ್ತೇವೆಂದು ಘೋಷಿಸುವ ರ‍್ಯಾಲಿಗಳು ದೇಶವನ್ನು ಕಂಗೆಡಿಸಿದ ಬಗ್ಗೆ ಮೌನವಾಗಿದೆ.

ನನ್ನ ಅರಿವಿನ ಪ್ರಕಾರ ಈ ದೇಶ “ಒಡೆದದ್ದು” ೧೯೪೭ರಲ್ಲಿ ಮತ್ತು ಅದಕ್ಕೆ ಆರೆಸ್ಸೆಸ್ ಆಗಲೀ, ಬಿಜೆಪಿಯಾಗಲೀ ಏರ್ಪಡಿಸಿದ ರ‍್ಯಾಲಿಗಳು ಕಾರಣವಾಗಿರಲಿಲ್ಲ.  ಬ್ರಿಟಿಷ್ ವಸಾಹತುಶಾಹಿ ಆಳರಸರ ಕೈಗೊಂಬೆಯಾಗಿ, ಅವರ ಸಕ್ರಿಯ ಸಹಕಾರದಿಂದ ಮುಸ್ಲಿಂ ಲೀಗ್ ನಡೆಸಿದ ರ‍್ಯಾಲಿಗಳು ಸಮಾಜವನ್ನು ಒಡೆದವು ಮತ್ತು ಬಂಗಾಳದಲ್ಲಿ ಅಧಿಕಾರದಲ್ಲಿದ್ದ ಮುಸ್ಲಿಂ ಲೀಗ್ ಆಗಸ್ಟ್ ೧೬, ೧೯೪೬ರಂದು ಕಲ್ಕತ್ತಾ ನಗರದಲ್ಲಿ ಆಯೋಜಿಸಿದ “ಡೈರೆಕ್ಟ್ ಆಕ್ಷನ್ ಡೇ” ಎಂಬ ಕೋಮುವಾದಿ ರ‍್ಯಾಲಿ ಮತ್ತದು ಬಲಿತೆಗೆದುಕೊಂಡ ಸುಮಾರು ನಾಲ್ಕುಸಾವಿರ ಜೀವಗಳು ದೇಶದ ಐಕ್ಯತೆಗೆ ಅಂತಿಮ ಹೊಡೆತ ನೀಡಿ ಭಾರತ ಇಬ್ಬಾಗವಾಗಲು ಕಾರಣವಾದವು.  ಭಾರತವಷ್ಟೇ ಇಬ್ಬಾಗವಾಗಲಿಲ್ಲ, ಮುಸ್ಲಿಂ ಲೀಗ್‌ನ ಮೂರ್ಖತನದಿಂದಾಗಿ ಉಪಖಂಡದ ಬಲಿಷ್ಟ ಮುಸ್ಲಿಂ ಸಮುದಾಯವೂ ಇಬ್ಬಾಗವಾಯಿತು. ೧೯೭೧ರಲ್ಲಿ ಅದು ಮೂರು ಭಾಗಗಳಾಗಿ ಹೋಳಾಗಿ ಮತ್ತಷ್ಟು ಕೃಶವಾಯಿತು.  ಈ ಒಡೆಯುವಿಕೆಗೂ ಬಿಜೆಪಿಯಾಗಲೀ, ಆರೆಸ್ಸೆಸ್ ಆಗಲೀ ಕಾರಣವಾಗಿರಲಿಲ್ಲ.
ಮತ್ತಷ್ಟು ಓದು »

13
ಜೂನ್

೨೦೦೪ ರಲ್ಲಿಯೇ ಅಡ್ವಾಣಿ ಯುಗಾ೦ತ್ಯ ಆಗಿ ಹೋಗಿತ್ತು!

-ರಾಘವೇಂದ್ರ ನಾವಡ

LK-NaMoಭಾ.ಜ.ಪಾ. ದ ಪ್ರಾಥಮಿಕ ಸದಸ್ಯತ್ವನ್ನೊ೦ದು ಬಿಟ್ಟು ಪಕ್ಷದಲ್ಲಿ ತನಗಿದ್ದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ ಅಡ್ವಾಣಿಯ ಹತಾಶ ನಡೆ ಆಶ್ಚರ್ಯವನ್ನೇನೂ ತರಲಿಲ್ಲ! ಬದಲಿಗೆ ಬೇಸರವನ್ನು೦ಟು ಮಾಡಿತು. ಗೋವಾದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿಗೆ ಗೈರು ಹಾಜರಾದಾಗಲೇ ಏನೋ ಮಹತ್ತರವಾದುದು  ನಡೆಯುತ್ತದೆ ಎ೦ಬುದನ್ನು ಊಹೆಯಿತ್ತು! ಆದರೆ ಅಡ್ವಾಣಿಯ ಈ ನಡೆಯನ್ನಲ್ಲ!  ಮೋದಿಯ ಮೇಲಿನ ಅಡ್ವಾಣಿಯವರ ವಿರೋಧದ ಅ೦ತ್ಯ ಹೇಗಾಗಬಹುದೆ೦ದು ಯೋಚಿಸುತ್ತಿದ್ದೆ.. ಮೋದಿಯ ಪದೋನ್ನತಿಯನ್ನು ಊಹಿಸಿಯಾಗಿತ್ತು! ಅದಕ್ಕಿದ್ದ ಅಡ್ವಾಣಿಯವರ ವಿರೋಧವನ್ನೂ ಅರ್ಥೈಸಿಕೊ೦ಡಿತ್ತು! ಆದರೆ ಅಡ್ವಾಣಿಯವರ ಈ ನಡೆ ಪಕ್ಷವನ್ನಷ್ಟೇ ಅಲ್ಲ! ಸಮಸ್ತ ಭಾ.ಜ.ಪಾ ಕಾರ್ಯಕರ್ತರಲ್ಲದೆ ಅದರ ಲಕ್ಷಾ೦ತರ ಅಭಿಮಾನಿಗಳಿಗೂ ಕ್ಷಣ ನಿಟ್ಟುಸಿರು ಬಿಡ್ಶುವ೦ತೆ ಮಾಡಿದೆ! ಕೇವಲ “ ಕೃಷ್ಣ “ ನ ಕೈಯಲ್ಲಿ ಆಯುಧ ಹಿಡಿಸಲೆ೦ದೇ  ಕುರುಕ್ಷೇತ್ರದಲ್ಲಿ ಪಾ೦ಡವರೊ೦ದಿಗೆ ಹಿಗ್ಗಾಮುಗ್ಗ ಹೋರಾಡಿದ ಭೀಷ್ಮರು ತನ್ನ ಗುರಿ ಈಡೇರಿದ ನ೦ತರ ಶರಶಯ್ಯೆಯಲ್ಲಿ ಮಲಗಿದ೦ತೆ.. ಭಾಜಪಾದ “ ಲಾಲಕೃಷ್ಣ“ ಶಸ್ತ್ರ ತ್ಯಾಗ ಮಾಡಿರುವುದು ಬೇಸರವನ್ನು೦ಟು ಮಾಡಿದುದರ ಜೊತೆಗೆ… ಹೆ೦ಡತಿಯ ಒತ್ತಾಯಕ್ಕೋ… ವಯಸ್ಸಿನ ಪ್ರಭಾವವೋ… ಶಕ್ತಿಯ ಕೊರತೆಯೋ  ಎ೦ಬುದರ ಗೊ೦ದಲದಲ್ಲಿ  ತನ್ನ ಅಪ್ರಸ್ತುತತೆಯನ್ನು ಮನಗ೦ಡ ತ೦ದೆಯೊಬ್ಬ ಏಕದ೦ ಕುಟು೦ಬದ  ಜವಾಬ್ದಾರಿಯನ್ನು  ಮಕ್ಕಳಿಗೆ ತಲ್ಲಣದಿ೦ದಲೇ  ನೀಡಿ, ಹೊರಬರುವುದನ್ನು ಕಲ್ಪಿಸಿಕೊಳ್ಳುವ೦ತೆ ಮಾಡುತ್ತದೆ!

ಅದು ೧೯೮೦ ರ ಕಾಲ..  ಜನಸ೦ಘದಿ೦ದ ಬೇರ್ಪಟ್ಟು ಭಾ.ಜ.ಪಾದ ಹುಟ್ಟಿಗೆ ಕಾರಣಕರ್ತರಾದವರಿಬ್ಬರಲ್ಲಿ ವಾಜಪೇಯಿಯ ಜೊತೆಗೆ ಅಡ್ವಾಣಿಯೂ ಒಬ್ಬರು.   ೧೯೮೬ ರಲ್ಲಿ ಆ ಪಕ್ಷದ ರಾಷ್ತ್ರೀಯ ಅಧ್ಯಕ್ಷರಾಗುವವರೆಗೂ  ಚುನಾವಣೆಗಳಲ್ಲಿ ಭಾಜಪಾದ ಸಾಧನೆಯೇನೂ ಹೇಳಿಕೊಳ್ಳುವ೦ತಹದ್ದಾಗಿರಲಿಲ್ಲ!  ಆದರೆ   ನ೦ತರದ್ದು ಇತಿಹಾಸ.. ಚುನಾವಣೆಯಿ೦ದ ಚುನಾವಣೆಗೆ ಸುಧಾರಿಸುತ್ತಲೇ ಹೋದ ಭಾಜಪಾ.. ಅಡ್ವಾಣಿಯವರು ಆರ೦ಭಿಸಿದ “ಶ್ರೀರಾಮ ರಥಯಾತ್ರೆಯ“ ಲಾಭವನ್ನು ಭರಪೂರವಾಗಿ ಪಡೆದುಕೊ೦ಡಿತು! ಕಾ೦ಗ್ರೆಸ್ಸಿಗೆ ಸಮಾನವಾಗಿ ಸೆಡ್ದುಹೊಡೆದು ನಿಲ್ಲಲು ಭಾಜಪಾಕ್ಕೆ ಶಕ್ತಿ ತು೦ಬಿದವರೆ೦ದರೆ ಇಬ್ಬರೇ.. ವಾಜಪೇಯಿ ಹಾಗೂ ಅಡ್ವಾಣಿ! ಲಕ್ಷಾ೦ತರ ಕಾರ್ಯಕರ್ತರ ಅಮಿತೋತ್ಸಾಹವೂ ಇವರೊ೦ದಿಗಿತ್ತು! ಬೆನ್ನಿಗೆ ಉಗ್ರ ಹಿ೦ದುತ್ವದ ಅಜೆ೦ಡಾ… ಬೆನ್ನು ಬೆನ್ನಿಗೆ ರಥಯಾತ್ರೆಗಳು..  ಭಾರತ ರಾಜಕೀಯದಲ್ಲಿ “ ರಾಮ-ಲಕ್ಷ್ಮಣ“ರೆ೦ದೇ ಖ್ಯಾತವಾದ ಈ ಜೋಡಿ  ಕಾ೦ಗ್ರೆಸ್ ಗೆ ಪರ್ಯಾಯವಾಗಿ ಭಾ.ಜ.ಪಾವನ್ನು ಬೆಳೆಸಿದ್ದಲ್ಲದೆ, ದೇಶದ ರಾಜಕೀಯದಲ್ಲಿ ಕಾ೦ಗ್ರೆಸ್ಸಿಗೆ ಬಹುದೊಡ್ಡ ಪರ್ಯಾರವಾಗಿ ಬೆಳೆದು ನಿ೦ತಿತು. ೧೯೯೬ ರ ಚುನಾವಣೆಯಲ್ಲಿ ಏಕೈಕ ಬಲು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಾ.ಜ.ಪಾಕ್ಕೆ ವಾಜಪೇಯಿ ನೇತಾರರಾದರು. ಚುನಾವಣೆಗೂ ಮುನ್ನ ಅಡ್ವಾಣಿ ವಾಜಪೇಯಿಯವರನ್ನು ಬಾ.ಜ.ಪಾ ದ ಪ್ರಧಾನ ಮ೦ತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದು ಫಲ ನೀಡಿತು! “ ಬದಲಾವಣೆಗಾಗಿ  ಭಾ.ಜ.ಪಾ.ವನ್ನು ತನ್ನಿ“ , “ ಈ ಬಾರಿ ಬಿ.ಜೆ.ಪಿ“ ಎ೦ಬ ಕಾರ್ಯಕರ್ತರ ಚುನಾವಣಾ ಘೋಷಣೆಗಳು ಫಲ ನೀಡಿದವು. ವಾಜಪೇಯಿಯವರ ಅಕಳ೦ಕಿತ ವ್ಯಕ್ತಿತ್ವ, ರಾಜಕೀಯ ಅನುಭವ ಹಾಗೂ ಅಡ್ವಾಣಿಯವರ ಪ್ರಖರ ಹಿ೦ದುತ್ವವಾದಕ್ಕೆ ಮತದಾರರು ಮಣೆ ಹಾಕಿದರು!

ಮತ್ತಷ್ಟು ಓದು »

10
ಜೂನ್

CSLC ಯ ಸಂಶೋಧನೆ ಮತ್ತು ಪ್ರಗತಿಪರರ ಫ್ಯಾಸಿಸ್ಟ್ ಧೋರಣೆ

CSLC– ರಾಕೇಶ್ ಶೆಟ್ಟಿ

ಅಲ್ಲಿಯವರೆಗೂ ಸುಖಾ ಸುಮ್ಮನೆ ಭೂಮಿಯ ಸುತ್ತ ಗಿರಕಿ ಹೊಡೆಯುತಿದ್ದ ಸೂರ್ಯನಿಗೆ ಸುತ್ತುವುದರಿಂದ ಮುಕ್ತಿ ಕೊಡಿಸಿ,’ಭೂಮಿಯೇ ಸೂರ್ಯನ ಸುತ್ತ ಸುತ್ತುತ್ತಿದೆ’ ಅಂದವನು ಕೋಪರ್ನಿಕಸ್. ಅವನ ಕೆಲಸವನ್ನ ಮುಂದುವರಿಸಿದವರು ಗೆಲಿಲಿಯೋ ಮತ್ತು ಬ್ರುನೋ.ಈ ಮೂವರು ಬರುವವರೆಗೂ ಸೂರ್ಯನೇ ಭೂಮಿಯ ಸುತ್ತ ಸುತ್ತುತ್ತಾನೆ ಅಂತಲೇ ಜನರು ನಂಬಿದ್ದರು.ಅದೇ ಜನರ ಮಧ್ಯದಿಂದ ಎದ್ದು ಬಂದು,’ಇಲ್ಲ ಸ್ವಾಮಿ ಭೂಮಿಯೇ ಸುತ್ತೋದು’ ಅಂದಿದ್ದ ಕೋಪರ್ನಿಕಸ್ ಅದೇ ಜನರಿಂದ ಹುಚ್ಚ ಅನ್ನಿಸಿಕೊಂಡಿದ್ದ.ಅವನ ನಂತರ ಬಂದ ಗೆಲಿಲಿಯೋ ಮತ್ತು ಬ್ರುನೋ ಸಹ ಕೋಪರ್ನಿಕಸ್ ವಾದಕ್ಕೆ ಸೈ ಅಂದರು.

ಸಮಾಜದ ನಂಬಿಕೆಯ ಬುಡವನ್ನು ಅಲುಗಾಡಿಸುವ ಯಾವುದೇ ಪ್ರಯತ್ನಕ್ಕೆ ದೊಡ್ಡ ಮಟ್ಟದಲ್ಲೇ ಅಡೆ-ತಡೆಗಳು ಎದುರಾಗಬೇಕಲ್ಲವೇ? ಗೆಲಿಲಿಯೋ,ಬ್ರೂನೋಗು ಅದೇ ಆಯಿತು. ಇವರ ಸಂಶೋಧನೆಯಿಂದ ಕನಲಿ ಕೆಂಡವಾದ ಪೋಪ್ ಎಂಟನೇ ಅರ್ಬನ್,“Heliocentric System” ಅನ್ನುವುದೇ ಸುಳ್ಳು ಎಂದು ಸಾರ್ವಜನಿಕವಾಗಿ ಗೆಲಿಲಿಯೋ ಮತ್ತು ಬ್ರೂನೋನನ್ನು ಖಂಡಿಸಿ, ಅವರಿಬ್ಬರ ಸಂಶೋಧನೆಗೂ ನಿರ್ಬಂಧವನ್ನೂ ಹೇರಿದರು.

ಗೆಲಿಲಿಯೋನನ್ನು ಜೈಲಿಗೂ ತಳ್ಳಲಾಯಿತು, ಸಾಯುವವರೆಗೂ ಗೃಹ ಬಂಧನದಲ್ಲಿರಿಸಲಾಯಿತು.1642ರಲ್ಲಿ ಗೆಲಿಲಿಯೋ ಮರಣವನ್ನಪ್ಪಿದಾಗ ಆತನನ್ನು ಕ್ರೈಸ್ತರ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡುವುದಕ್ಕೂ ಬಿಡಲಿಲ್ಲ.ಇನ್ನು ಬಾಹ್ಯಾಕಾಶವೆಂಬುದು Finite ಅಲ್ಲ, Infinite. ಅದಕ್ಕೆ ಕೊನೆಯೇ ಇಲ್ಲ ಎಂದು ವಾದಿಸುವ ಧೈರ್ಯ ತೋರಿದ ಬ್ರೂನೋನನ್ನಂತೂ,೧೫೯೨ರಲ್ಲಿ ಬಂಧಿಸಿ ರೋಮನ್ ಕ್ಯಾಥೋಲಿಕ್ ಚರ್ಚ್‌ನ ನ್ಯಾಯಾಲಯದ(The Inquisition) ಮುಂದೆ 7 ವರ್ಷಗಳ ಕಾಲ ವಿಚಾರಣೆ ಗೊಳಪಡಿಸಿ, ಕೊನೆಗೆ ಉರಿವ ಜ್ವಾಲೆಯಲ್ಲಿ ಸುಡುವ ಮರಣದಂಡನೆಯನ್ನು ವಿಧಿಸಿದರು.

ಮತ್ತಷ್ಟು ಓದು »

30
ಮೇ

ಸಾವರ್ಕರ್ ಮತ್ತು ನೆಹರೂ : ಹೋಲಿಸಬಾರದ ವ್ಯಕ್ತಿಗಳು

– ಚಕ್ರವರ್ತಿ ಸೂಲಿಬೆಲೆ

NS(ಮೇ ೨೮) ಸಾವರ್ಕರ್ ಜನ್ಮ ದಿನ. ಈ ಸಂಧರ್ಭದಲ್ಲಿ ಭಾರತದ ದಿಕ್ಕು ಬದಲಿಸಿದ ಇಬ್ಬರು ವ್ಯಕ್ತಿಗಳ ತುಲನಾತ್ಮಕ ಬರಹ ಇಲ್ಲಿದೆ. ಯಾರು ಯಾವ ಬಗೆಯಲ್ಲಿ ದಿಕ್ಕು ಬದಲಿಸಿದರು ಅಥವಾ ತಪ್ಪಿಸಿದರು ಎನ್ನುವುದು ಓದುಗರ ವಿವೇಚನೆಗೆ ಬಿಟ್ಟಿದ್ದು…

ಇತಿಹಾಸದ ಪುಟಗಳು ಅದೆಷ್ಟು ಬೇಗ ಹಿಂದೆ ಹಿಂದೆ ಹೋಗಿಬಿಡುತ್ತವಲ್ಲ! ಒಂದು ಪುಟವನ್ನು ತಿರುವಿಹಾಕಿದಂತೆ ಆ ಪುಟದಲ್ಲಿರುವ ಸಂಗತಿಗಳನ್ನೆಲ್ಲಾ ಮರೆತುಬಿಟ್ಟರೆ ಮುಗಿದೇಹೋಯಿತು. ನೆನಪಿಟ್ಟುಕೊಂಡು ಮುಂದಡಿ ಇಡುವವ ಮಾತ್ರ ವಿಜಯಿಯಾದಾನು. ನಮ್ಮ ಇತಿಹಾಸ ಒಂಥರಾ ಸೆಮಿಸ್ಟರ್ ಪದ್ಧತಿಯ ಶಿಕ್ಷಣದಂತಾಗಿಬಿಟ್ಟಿದೆ. ಈ ಸೆಮಿಸ್ಟರ್ ನಲ್ಲಿ ಕಲಿತದ್ದು ಮುಂದಿನ ಬಾರಿಗೆ ಬೇಕಾಗಲಾರದು. ಸದ್ಯಕ್ಕೆ ಸಾವರ್ಕರ್ ಭಾರತೀಯರ ಪಾಲಿಗೆ ಹಾಗೆಯೇ ಆಗಿಬಿಟ್ಟಿದ್ದಾರೆ. ಅವರು ಹುಟ್ಟಿ125 ವರ್ಷ ಕಳೆಯುವುದರೊಳಗಾಗಿ ಅವರು ಸಮಾಜದ ಕಣ್ಣಿಂದ ದೂರವೇ ಆಗಿಬಿಟ್ಟಿದ್ದಾರೆ. ಯಾವ ರಾಷ್ಟ್ರದ ಏಕತೆ- ಅಖಂಡತೆಗಾಗಿ; ಯಾವ ಪರಿಪೂರ್ಣ ಸಮಾಜದ ಪರಿಪೂರ್ಣ ಉನ್ನತಿಗಾಗಿ ತಮ್ಮ ಜೀವನವನ್ನೇ ತೇಯ್ದುಬಿಟ್ಟರೋ ಆ ವ್ಯಕ್ತಿ ಅದೇ ದೇಶದ ಸ್ಮೃತಿಯಿಂದ ದೂರವಾಗೋದು ದುರಂತವೇ ಸರಿ.

ಹಾಗೆ ನೋಡಿದರೆ ಕಳೆದ ಶತಕದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬೌದ್ಧಿಕವಾಗಿ ಹಾಗೆಯೇ ಪ್ರತ್ಯಕ್ಷವಾಗಿ ಪಾಲ್ಗೊಂಡ ಅಪರೂಪದ ಸಾಹಸಿ ಸಾವರ್ಕರರೇ ಎಂಬುದರಲ್ಲಿ ಅನುಮಾನವಿಲ್ಲ. ಸಿಕ್ಕಸಿಕ್ಕಲ್ಲಿ ಗುಂಡು ಹೊಡೆದು ಅದನ್ನೇ ಕ್ರಾಂತಿ ಎನ್ನುತ್ತಿರಲಿಲ್ಲ ಸಾವರ್ಕರ್. ಅವರ ಪ್ರತಿಯೊಂದು ಕೆಲಸದ ಹಿಂದೆ ಬೆಟ್ಟದಷ್ಟು ಚಿಂತನೆ, ಫಲಿತಾಂಶದ ನಂತರದ ಪರಿಸ್ಥಿತಿಯ ಕುರಿತು ಮುಂದಾಲೋಚನೆ- ಎಲ್ಲವೂ ಇರುತ್ತಿತ್ತು. ಅವರು ಲೇಖನಿ ಹಿಡಿದರೆ ಆ ಕಾಲಘಟ್ಟದ ಮಹಾಮಹಿಮ ಲೆಖಕರನ್ನೂ ಮೀರಿಸುವಷ್ಟು ಪ್ರತಿಭಾವಂತ. ಪಿಸ್ತೂಲು ಹಿಡಿದರೆ, ಎದುರಾಳಿಗಳ ರಕ್ತವೇ ತಣ್ಣಗಾಗುವಷ್ಟು ಕೆಚ್ಚೆದೆ. ಮಾತಿಗೆ ನಿಂತರೆ ಮೈಯೆಲ್ಲ ಕಿವಿಯಾಗಿ ಕೇಳಬೇಕೆನ್ನಿಸುವ ಮಧುರ ದನಿ, ಅಸ್ಖಲಿತ ವಿಚಾರಗಳ ಧಾರಾಪ್ರವಾಹ. ಬಿಡಿ. ಅಂತಹ ವ್ಯಕ್ತಿ ಯುಗಕ್ಕೊಬ್ಬರೇ!

ಮತ್ತಷ್ಟು ಓದು »

23
ಮೇ

ಕಸಾಯಿಖಾನೆಗಳನ್ನು ಮುಚ್ಚುವ ಅವಕಾಶವಿದ್ದೂ ಯಾಕೆ ಮೌನ ವಹಿಸಿದಿರಿ,ಹೇಳಿ?

– ಎ.ಕೆ ಕುಕ್ಕಿಲ

govuಗೋಹತ್ಯೆಗೆ ಸಂಬಂಧಿಸಿ 1959 ಮತ್ತು 1961ರ ಮಧ್ಯೆ ಸುಪ್ರೀಮ್ ಕೋರ್ಟ್‍ ನ  ಮುಂದೆ ಮೂರು ಪ್ರಕರಣಗಳು ದಾಖಲಾಗಿದ್ದುವು. ಮುಹಮ್ಮದ್ ಹನೀಫ್ ಖುರೇಷಿ ಮತ್ತು ಬಿಹಾರ ಸರಕಾರ; ಹಶ್ಮತುಲ್ಲಾ ಮತ್ತು ಮಧ್ಯಪ್ರದೇಶ ಸರಕಾರ; ಅಬ್ದುಲ್ ಹಕೀಮ್ ಮತ್ತು ಬಿಹಾರ ಸರಕಾರಗಳ ನಡುವಿನ ವ್ಯಾಜ್ಯವನ್ನು ವಿಚಾರಣೆಗೆ ಒಳಪಡಿಸುತ್ತಾ ಸುಪ್ರೀಮ್ ಕೋರ್ಟ್ ಅಂತಿಮವಾಗಿ ತೀರ್ಪು ಕೊಟ್ಟದ್ದು ಹೀಗೆ:
A total ban (on Cattle Slaughter) was not permisseble if, Under economic conditions, keeping useless bull or bullock be a burden on the society and therefore not in the public interest –  ಸಮಾಜದ ಮೇಲೆ ಹೊರೆಯಾಗಬಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನೂ ಪ್ರತಿನಿಧಿಸದ ನಿರುಪಯುಕ್ತ ಜಾನುವಾರುಗಳಿರುವಲ್ಲಿ, ಜಾನುವಾರು ಹತ್ಯೆಗೆ ಸಂಪೂರ್ಣ ನಿಷೇಧ ವಿಧಿಸುವುದು ಅನುವದನೀಯವಲ್ಲ.’ (ವಿಕಿಪೀಡಿಯಾ)

ನಿಜವಾಗಿ, ಕರ್ನಾಟಕದಲ್ಲಿ ಈ ಮೊದಲೇ ಜಾರಿಯಲ್ಲಿದ್ದ ‘ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964’ರ ಬದಲು ರಾಜ್ಯ ಬಿಜೆಪಿ ಸರಕಾರವು ಜಾರಿಗೆ ತರಲು ಹೊರಟಿದ್ದ, ‘ಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2010’ರಲ್ಲಿ ಇದ್ದದ್ದು ಈ ಗೊಂದಲಗಳೇ. ಒಂದು ಹಸು ಗರಿಷ್ಠ ಅಂದರೆ 14 ವರ್ಷಗಳ ವರೆಗೆ ಹಾಲು ಕೊಡುತ್ತದೆ. ಹಸು ಎಂದಲ್ಲ, ಎಮ್ಮೆ, ಕೋಣ, ಎತ್ತು, ಗೂಳಿಗಳೆಲ್ಲ ಉಪಯೋಗಕ್ಕೆ ಬರುವುದು 14-15 ವರ್ಷಗಳ ವರೆಗೆ ಮಾತ್ರ. ಹಾಗಂತ, ಆ ಬಳಿಕ ಅವು ತಕ್ಷಣ ಸಾಯುತ್ತವೆ ಎಂದಲ್ಲ. ಇನ್ನೂ 10 ವರ್ಷಗಳ ವರೆಗೆ ಬದುಕುವ ಸಾಮರ್ಥ್ಯ  ಅವುಗಳಲ್ಲಿರುತ್ತವೆ. ಆದರೆ ಹಾಲು ಕೊಡದ, ಉಳುಮೆಗೆ ಬಾರದ ಈ ಅಯೋಗ್ಯ ಜಾನುವಾರುಗಳನ್ನು ಸಾಕುವ ಸಾಮರ್ಥ್ಯ  ಎಷ್ಟು ರೈತರಲ್ಲಿದೆ? ಅವುಗಳಿಗೆ ಮೇವು, ಹಿಂಡಿಗಳನ್ನು ಒದಗಿಸುವುದಕ್ಕೆ ವರಮಾನ ಬೇಕಲ್ಲವೇ? ಉಳುಮೆಗೆ ಯೋಗ್ಯವಲ್ಲದ ಎತ್ತು ಕನಿಷ್ಠವೆಂದರೆ, 20ರಿಂದ 30 ಸಾವಿರದಷ್ಟು ಬೆಲೆ ಬಾಳುತ್ತದೆ. ಈ ಎತ್ತನ್ನು ಮಾರದೇ ಓರ್ವ ರೈತ ಉಳುಮೆಗೆ ಯೋಗ್ಯವಾದ ಬೇರೆ ಎತ್ತನ್ನು ಖರೀದಿಸುವುದಾದರೂ ಹೇಗೆ? ಖರೀದಿಸದಿದ್ದರೆ ಉಳುಮೆಗೆ ಏನು ಮಾಡಬೇಕು?
ಮತ್ತಷ್ಟು ಓದು »