ಬದಲಾವಣೇ ತರಲು ಬೇಕಿರುವುದು “ಮನಸ್ಸು” ವಯಸ್ಸಲ್ಲ…!
-ರಾಕೇಶ್ ಶೆಟ್ಟಿ
“ರಾಜಕಾರಣಕ್ಕೆ ಯುವಕರು ಬರಬೇಕು” ಹಾಗೂ “ರಾಜಕಾರಣಿಗಳಿಗೆ ನಿವೃತ್ತಿ ವಯೋಮಿತಿಯಿರಬೇಕು” ಅನ್ನುವ ಚರ್ಚೆಗಳು ಪದೇ ಪದೇ ನಡೆಯುತ್ತಲೇ ಇರುತ್ತವೆ.ನನ್ನ ಮಟ್ಟಿಗೆ ಯುವಕರು ರಾಜಕೀಯಕ್ಕೆ ಬಂದರೆ/ಯುವಕರ ಕೈಗೆ ಅಧಿಕಾರ ಸಿಕ್ಕರೆ ಎಲ್ಲವೂ ಬದಲಾಗುತ್ತದೆ ಅನ್ನುವುದು ಒಂದು ’ಮಿಥ್’ ಅಷ್ಟೇ.ನಿಜಕ್ಕೂ ಬದಲಾವಣೆ ಬಯಸಲು/ಮಾಡಲು ಬೇಕಾಗಿರುವುದು ವಯಸ್ಸೋ? ಮನಸ್ಸೋ?
ಭಾರತದ ಅತಿಕಿರಿಯ ಮುಖ್ಯಮಂತ್ರಿ ಅನ್ನುವ ಹೆಗ್ಗಳಿಕೆ ಉ.ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ (೩೯) ಅವರದ್ದು.ಅವರು ಗಾದಿಯ ಮೇಲೆ ಕುಳಿತು ಮೊನ್ನೆ ಮೊನ್ನೆಗೆ ಒಂದು ವರ್ಷ ಕಳೆದಿದೆ.ಈ ಒಂದು ವರ್ಷದಲ್ಲಿ ಈ ಬಿಸಿ ರಕ್ತದ ಯುವ ಮುಖ್ಯಮಂತ್ರಿ ಅಧಿಕಾರ ಚಲಾವಣೆಯಲ್ಲಿ ಯಾವುದಾದರೂ ಭರವಸೆಯುತ (’ಕ್ರಾಂತಿಕಾರಕ’ ಅನ್ನುವ ದೊಡ್ಡ ಪದವೂ ಬೇಡ) ರೀತಿಯಲ್ಲಿ ರಾಜ್ಯಭಾರ ಮಾಡಿದ್ದಾರೆಯೇ? ಕನಿಷ್ಟ ಮಂತ್ರಿಮಂಡಲ ರಚನೆ ಮಾಡುವಾಗಲಾದರೂ ಆರೋಪ ಮುಕ್ತರಿಗೆ ಸ್ಥಾನ ಕೊಟ್ಟರೇನು? ಇವರ ಮಂತ್ರಿಮಂಡಲದಲ್ಲಿ ಶೇ.೫೩ರಷ್ಟು ಮಂದಿ ಸಚಿವರ ಮೇಲೆ ಕ್ರಿಮಿನಲ್ ಆರೋಪಗಳಿವೆ.ವರ್ಷದಿಂದ ಉತ್ತರ ಪ್ರದೇಶ ಸುದ್ದಿಯಲ್ಲಿದ್ದರೆ ಅದು ಬರಿ ಕೆಟ್ಟ ಸುದ್ದಿಗಳ ಮೂಲಕವಷ್ಟೇ.ಇತ್ತೀಚೆಗೆ ತಾನೇ ಪ್ರತಾಪ್ ಗಢದಲ್ಲಿ ಡಿವೈಎಸ್ಪಿ ಜಿಯಾ-ಉಲ್-ಹಕ್ ರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದ್ದು ನೆನಪಿರಬೇಕಲ್ಲ.ಒಬ್ಬ ಯುವ (ಅನನುಭವಿ) ಮುಖ್ಯಮಂತ್ರಿಗೆ ಭರವಸೆಯ ಕಾರ್ಯಕ್ರಮ ರೂಪಿಸುವಲ್ಲಿ ಇನ್ನೊಂದಿಷ್ಟು ಸಮಯ ಬೇಕು ಅಂತ ಇಟ್ಟುಕೊಂಡರೂ, ಅಪರಾಧ,ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮೊದಲಿಗೆ ಬೇಕಿದಿದ್ದು ಗಟ್ಟಿ ಮನಸ್ಸು.ಬಹುಷಃ ಅದೇ ಈ ಯುವ ಮುಖ್ಯಮಂತ್ರಿಯಲ್ಲಿ ಕಾಣುತ್ತಿಲ್ಲ.ತನ್ನ ಸುತ್ತಲೂ ಕ್ರಿಮಿನಲ್ ಆರೋಪಿಗಳ ಸಂಪುಟವನ್ನಿಟ್ಟುಕೊಂಡು “ಗೂಂಡಾ ರಾಜ್ಯ”ವನ್ನು ಅಳಿಸಿ ಹಾಕುತ್ತೇವೆ ಅನ್ನುವುದೆಷ್ಟು ಸತ್ಯ? “ಬದಲಾವಣೆ ತರಲು ವಯಸ್ಸು ಮುಖ್ಯವೋ,ಮನಸ್ಸು ಮುಖ್ಯವೋ” ಅನ್ನುವ ಈ ಚರ್ಚೆಯ ಮೊದಲ ಉದಾಹರಣೆ ಅಖಿಲೇಶ್ ಯಾದವ್ ರನ್ನು ನೋಡಿದರೇ ಯುವಕರು ರಾಜಕೀಯಕ್ಕೆ/ಅಧಿಕಾರಕ್ಕೆ ಬಂದರೆ ಬದಲಾವಣೆಯಾಗುತ್ತದೆ ಅನ್ನುವುದು ಮಿಥ್ ಅನ್ನಿಸುತ್ತದೆ.ಬದಲಾಯಿಸಲೇಬೇಕು ಅನ್ನುವ ಮನಸಿದ್ದರೆ ವಯಸ್ಸು ಅಷ್ಟು ಅಡ್ಡಿಯಾಗಲಾರದು.
’ಟಿಪ್ಪು’ ಹೆಸರಿನಲ್ಲಿ ’ಕೈ’ ರಾಜಕೀಯ?
– ಅಶ್ವಿನ್ ಎಸ್. ಅಮೀನ್
ಬಹುಶಃ ಭಾರತದಲ್ಲಿ ಹಿಂದೂ ಧರ್ಮ ಬಿಟ್ಟು ಇತರ ಧರ್ಮೀಯರಿಗೆ ಕೊಡುವ ಸವಲತ್ತುಗಳು,ಸೌಕರ್ಯಗಳು ಇತರ ಯಾವ ದೇಶದಲ್ಲೂ ಇರಲಿಕ್ಕಿಲ್ಲ.. ನಮ್ಮ ರಾಜಕೀಯ ವ್ಯವಸ್ಥೆಯೇ ಅಂತಹುದು. ನಮ್ಮ ರಾಷ್ಟ್ರಪಿತರು ಬುನಾದಿ ಹಾಕಿದ ಈ ಸಂಸ್ಕೃತಿ ಇಂದಿನವರೆಗೂ ನಿಂತಿಲ್ಲ.. ಈಗ ಇಂತಹದೇ ಒಂದು ಕಾರಣಕ್ಕಾಗಿ ಸುದ್ದಿ ಮಾಡುತ್ತಿರುವುದು ಪ್ರತ್ಯೇಕ ಮುಸ್ಲಿಂ ವಿಶ್ವ ವಿದ್ಯಾಲಯ.
ಭಾರತದಲ್ಲಿರುವ ಒಂದು ಪ್ರತ್ಯೇಕ ಮುಸ್ಲಿಂ ವಿದ್ಯಾಲಯ ಅಲಿಘಡ. ಈಗ ಕೇಂದ್ರ ಸರ್ಕಾರ ಇನ್ನೊಂದು ಪ್ರತ್ಯೇಕ ಮುಸ್ಲಿಂ ವಿವಿ ಯನ್ನು ಕರ್ನಾಟಕದ ಶ್ರೀರಂಗಪಟ್ಟಣ ದಲ್ಲಿ ಸ್ಥಾಪಿಸಲು ಉದ್ದೇಶಿಸಿದೆ.ಈಗಾಗಲೇ ಒಂದು ಪ್ರತ್ಯೇಕ ವಿವಿ ಹೊಂದಿರುವ ಮುಸ್ಲಿಂ ಸಮುದಾಯಕ್ಕೆ ಮತ್ತೊಂದು ವಿವಿ ಯಾಕೆ? ಅದರಲ್ಲೂ ಧರ್ಮದ ಆಧಾರದ ಮೇಲೆ ವಿವಿ ವಿಂಗಡಣೆ ಸರಿಯೇ? ವಿಶ್ವವಿದ್ಯಾಲಯಗಳಿಗೆ ಧರ್ಮದ ಲೇಪ ಯಾಕೆ ಬೇಕು? ಭಾರತದಲ್ಲಿರುವ ಅಷ್ಟೂ ವಿವಿಗಳಲ್ಲಿ ಮುಸ್ಲಿಮರು ಓದಲಾರರೇ? ವಿವಿಗಳಲ್ಲಿ ಮುಸ್ಲಿಮರಿಗೆ ಅಂತಹ ತೊಂದರೆಗಳಿವೆಯೇ? ಹಾಗೆ ಹೀಗೆ ಎಂದು ಪ್ರಶ್ನೆಗಳನ್ನು ಕೇಳುತ್ತಾ ಹೋದರೆ ನಮಗೆ ಸಿಗುವ ಉತ್ತರ “ಹಾಗೇನೂ ಇಲ್ಲ, ಎಲ್ಲವೂ ಸರಿಯಾಗಿದೆ..” ಹಾಗಿದ್ದಲ್ಲಿ ಪ್ರತ್ಯೇಕ ಮುಸ್ಲಿಂ ವಿವಿ ಸ್ಥಾಪನೆಯ ಉದ್ಧೇಶ ರಾಜಕೀಯ ತಂತ್ರ ಅನ್ನುವುದು ಸ್ಪಷ್ಟವಾಗುತ್ತದೆ.
ಇನ್ನು ಮುಸ್ಲಿಮರಿಗೆ ಪ್ರತ್ಯೇಕ ವಿಶ್ವ ವಿದ್ಯಾಲಯ ಕೊಟ್ಟರೆ ಏನಾಗುತ್ತದೆ ಅನ್ನುವುದು ಅಲಿಘಡ ವಿವಿಯಲ್ಲೇ ಗೊತ್ತಾಗಿದೆ. ಅಲ್ಲಿ ಹುಟ್ಟಿಕೊಂಡ ‘ಸಿಮಿ’ ಸಂಘಟನೆ ದೇಶವ್ಯಾಪಿ ಬೆಳೆದು ದೇಶ ವಿರೋಧಿ ಭಯೋತ್ಪಾದನಾ ಸಂಘಟನೆಯಾಗಿ ಮಾರ್ಪಟ್ಟು ದೇಶದಾದ್ಯಂತ ವಿದ್ವಂಸಕ ಹಾಗು ದೇಶ ದ್ರೋಹಿ ಕೃತ್ಯಗಳನ್ನು ನಡೆಸಿ ಇಂದು ಆ ಸಂಘಟನೆಯನ್ನು ನಿಷೇಧಿಸಿದ್ದಾರೆ ಅಂದರೆ ಅದರ ಭಯಂಕರತೆಯನ್ನು ನಾವು ಅರ್ಥೈಸಿಕೊಳ್ಳಬೇಕಾಗಿದೆ. ಆದರೆ ಕೇಂದ್ರ ಸರಕಾರ ಇದರ ಬಗ್ಗೆ ಜಾಣ ಕುರುಡು ಪ್ರದರ್ಶಿಸಿ ಮತ್ತೊಂದು ವಿವಿಗೆ ಕೈ ಹಾಕಿರುವುದು ನಮ್ಮ ದೇಶದ ದುರದೃಷ್ಟವೆನ್ನಬೇಕು.
ಹಿಂದುತ್ವವೇ ನಮ್ಮ ತತ್ವ ಎಂದು ಸಾರುತ್ತ ಮಾಡಿದ್ದೇನು?
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದಾಗ ಸಂಭ್ರಮ…ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಬಿಡಿಸಿಕೊಂಡು ಸಂತೋಷದಿಂದ ಬದುಕು ಸಾಗಿಸಬಹುದು ಎನ್ನುವ ಅಸೆಯ ಅಂಬಾರಿಯನ್ನು ಹೊಡೆದು ಉರುಳಿಸಿದರಲ್ಲಾ ಎನ್ನುವ ಭಾವನೆ ಮೂಡಿದರೆ ತಪ್ಪಲ್ಲ. ಕಾರಣ ರಾಜ್ಯದ ರಾಜಕೀಯದಲ್ಲಿನ ಪ್ರಸ್ತುತ ಬೆಳವಣಿಗೆ. 1950ರಲ್ಲಿ ಸಂವಿಧಾನ ರಚನೆಯಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದು ಶಾಸಕಾಂಗ,ನ್ಯಾಯಾಂಗ,ಕಾರ್ಯಾಂಗ ಹಾಗೂ ಮಾಧ್ಯಮರಂಗಗಳು ಸಮಾಜದ ಸ್ವಾಸ್ಥ್ಯ ಕಾಪಾಡುವ ಪ್ರಮುಖ ಪಾತ್ರಧಾರಿಗಳು ಎಂದು ಎದೆ ತಟ್ಟಿಕೊಂಡು ಹೇಳುತ್ತಿದ್ದ ಕಾಲ ಮರೆಯಾಗಿದೆ. ಆದರೆ ಯಾವುದೇ ರಂಗದಲ್ಲಿ ಲೋಪದೋಷಗಳಾದರೂ ಕಷ್ಟ ಅನುಭವಿಸುವವರು ಸಾಮಾನ್ಯ ಜನತೆ ಎನ್ನುವುದು ಸ್ಪಷ್ಟ.
ಯತ್ಖಲು ಖಲಮುಖಹುತವಹವಿನಿಹಿತಮಪಿ ಶುದ್ದಿಮೇವ ಪರಮೇತಿ
ತದನಲ ಶೌಚಮಿವಾಂಶುಕಮಿಹ ಲೋಕೇ ದುರ್ಲಭಂ ಪ್ರೇಮ||
ನೀಚರ ಬಾಯೆಂಬ ಬೆಂಕಿಯಲ್ಲಿ ಬಿದ್ದದ್ದೆಲ್ಲ ಶುದ್ದವಾಗುವುದೆಂಬ ಮಾತು ಸರ್ವಥಾ ಸರಿಯಲ್ಲ. ಏಕೆಂದರೆ ಬೆಂಕಿಯಲ್ಲಿ ಬಿದ್ದು ಶುದ್ದವಾಗಿ ಉಳಿದು ಬಂದ ಬಟ್ಟೆಯೆಷ್ಟು ದುರ್ಲಭವೋ ದುಷ್ಟರ ಬಾಯಿಗೆ ಸಿಲುಕಿ ಶುದ್ದವಾಗಿ ಹೊರಬಂದ ಸದ್ಗುಣಗಳು ಅಷ್ಟೇ ದುರ್ಲಭ.
ಜಾತಿ ರಾಜಕೀಯದ ನಡುವೆ ಜಾತಿ ಇಲ್ಲದವನ ಪಾಡು..!
-ಶ್ರೀಧರ್ ಜಿ ಬನವಾಸಿ
ಮೊನ್ನೆ ರಾಜ್ಯ ಒಕ್ಕಲಿಗರ ಸಮಾವೇಷ ಅದ್ದೂರಿಯಾಗಿ ನೇರವೇರಿತು. ಜಗದ್ಗುರು ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಗುರುವಂದನೆ ಸಲ್ಲಿಸಲಾಯಿತು. ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಒಕ್ಕಲಿಗರ ಘಟಾನಘಟಿ ನಾಯಕರುಗಳನ್ನೆಲ್ಲಾ ಒಂದೇ ವೇದಿಕೆಯಲ್ಲಿ ಕೂರಿಸಲಾಗಿತ್ತು. ಒಕ್ಕಲಿಗರ ಬೇರೆ ಬೇರೆ ಮಠದ ಸ್ವಾಮೀಜಿಗಳು ಕೂಡ ಒಂದೇ ವೇದಿಕೆಯಲ್ಲಿ ಸೇರಿಕೊಂಡಿದ್ದು ಆ ದಿನದ ವಿಶೇಷವಾಗಿತ್ತು. ಒಕ್ಕಲಿಗರಲ್ಲಿ ಮೂರ್ನಾಲ್ಕು ಪಂಗಡಗಳಿದ್ದರೂ ನಾವೆಲ್ಲಾ ಒಂದೇ ಅಂತ ತೋರಿಸುವ ಪ್ರಯತ್ನ ಹಾಗೂ ರಾಜಕೀಯ ಪಕ್ಷಗಳ ನಡುವೆಯೂ ಒಕ್ಕಲಿಗರು ಒಂದು ತೋರಿಸವ ಪ್ರಯತ್ನ ಕೂಡ ಮಾಡಲಾಯಿತು. ಮುಖ್ಯಮಂತ್ರಿ ಸದಾನಂದ ಗೌಡರು ತಮಗೆ ಮುಖ್ಯಮಂತ್ರಿ ಪಟ್ಟ ಸಿಕ್ಕಿದ್ದೇ ತಾವು ಒಕ್ಕಲಿಗ ಅನ್ನುವ ಕಾರಣ ಅಂತ ಸಭೆಯಲ್ಲಿ ಉದ್ಗೋಷಿಸಿದರು.
ಧರ್ಮವೆಂಬ ಅಫೀಮು ಮತ್ತು ಜಾತಿಯೆಂಬ ಮರಿಜುವಾನ….
– ಡಾ. ಅಶೋಕ್ ಕೆ.ಆರ್
ಮಾರ್ಕ್ಸ್ ವಾದ ಮತ್ತದರ ವಿವಿಧ ಸರಣಿವಾದಗಳು ಪದೇ ಪದೇ ವಿಫಲವಾದ ನಂತರೂ ಮತ್ತೆ ಮತ್ತೆ ಪ್ರಸ್ತುತವೆನ್ನಿಸುತ್ತಲೇ ಸಾಗುವುದಕ್ಕೆ ಕಾರಣಗಳೇನು? ಕರ್ನಾಟಕದ ರಾಜಕೀಯ ಪರಿಸ್ಥಿತಿಯನ್ನು ಗಮನಿಸಿದಾಗ “Religion is opium” ಎಂದು ದಶಕಗಳ ಹಿಂದೆ ಯಾವಗಲೋ ಮಾರ್ಕ್ಸ್ ಹೇಳಿದ್ದ ಮಾತುಗಳು ನೆನಪಾಗದೇ ಇರದು. ‘ಭಿನ್ನ’ ಪಕ್ಷವೆಂದು ತನ್ನ ಬೆನ್ನು ತಾನೇ ತಟ್ಟಿಕೊಳ್ಳುವ ಭಾ.ಜ.ಪದ ಭಿನ್ನತೆ ಇಷ್ಟೊಂದು ಅಸಹ್ಯಕರವಾಗಿರಬಲ್ಲದು ಎಂದು ಸ್ವತಃ ಅದರ ಕಾರ್ಯಕರ್ತರೇ ನಿರೀಕ್ಷಿಸಿರಲಿಲ್ಲವೇನೋ?!
ಯಾವ್ ಜಾತಿಯ ಮುಖ್ಯಮಂತ್ರಿ ಬೇಕು!?
– ರಾಕೇಶ್ ಶೆಟ್ಟಿ
ಯಡ್ಡಿ ಕೆಳಗಿಳಿದಾಗ ಬರೆದಿದ್ದು.. ಈಗ ಸದಾ ಇಳಿಯುವಾಗಲೂ ಅಪ್ಪ್ಲೈ ಆಗುತ್ತೆ…! ಅತಿ ಕೆಟ್ಟ ರಾಜಕಾರಣಕ್ಕೆ ನಮ್ಮ ರಾಜ್ಯ ಸಾಕ್ಷಿಯಾಗಿರುವುದು ದೌರ್ಭಾಗ್ಯ…!
———————————————————————————————————————————————-
ಅಂತು ಬಿಜೆಪಿ ಹೈಕಮಾಂಡ್ ಧೈರ್ಯ ಮಾಡಿದೆ…! ಯಡ್ಯೂರಪ್ಪನವ್ರಿಗೆ ಕುರ್ಚಿ ಬಿಡಿ ಅನ್ನುವ ಸಂದೇಶವನ್ನ ರವಾನಿಸಿದೆ.ಸಂದೇಶ ಮಾಧ್ಯಮದ ಮೂಲಕ ಬಂದಿದ್ದು ನಿನ್ನೆ ಬೆಳಿಗ್ಗೆಯೇ.ಆದ್ರೆ ಇನ್ನ ಯಡ್ಯೂರಪ್ಪ ಮಾತ್ರ ಜಪ್ಪಯ್ಯ ಅನ್ನುತ್ತಿಲ್ಲ..!
ಕಳೆದ ೧೦-೧೫ ದಿನಗಳಿಂದ ಕರ್ನಾಟಕ ಸರ್ಕಾರ ಜನರ ಸಮಸ್ಯೆಯನ್ನ ನೋಡೋದು ಬಿಟ್ಟು ತನ್ನ ಬುಡ ಭದ್ರ ಮಾಡಿಕೊಳ್ಳುವ ಬಗ್ಗೆಯೇ ತಲೆಕೆಡಿಸಿಕೊಂಡು ಕೂತಿದೆ.ಕಳೆದ ಹತ್ತು ದಿನ ಬಿಡಿ, ಉತ್ತರ ಕರ್ನಾಟಕದಲ್ಲಿ ನೆರೆ ಬಂದು ಜನ ತುತ್ತು ಅನ್ನಕ್ಕೆ ಸೂರಿಗೆ ಪರದಾಡುತ್ತಿರುವಾಗಲೇ ರೆಡ್ಡಿಗಳು ಬಂಡಾಯದ ಬಾವುಟ ಹಾರಿಸಿದಾಗಲೂ ಜನ ಸತ್ತರೆ ಸಾಯಲಿ ಕುರ್ಚಿ ಉಳಿದರೆ ಸಾಕು ಅಂತ ಬಿಜೆಪಿ ಸರ್ಕಾರವೇ ದೆಹಲಿಗೆ ಓಡಿ ಹೋಗಿತ್ತು…! ಹಾಗೇನಾದರೂ ಯಡ್ಯೂರಪ್ಪ ಬಂಡಾಯಕ್ಕೆ ಬಗ್ಗದೇ ರಾಜೀನಾಮೆ ಕೊಟ್ಟಿದ್ದರೆ ಜನ ಮತ್ತೆ ಗೆಲ್ಲಿಸಿ ಕಳಿಸುತಿದ್ದರೇನೋ.ಆದರೆ ಯಡ್ಯೂರಪ್ಪ ಶರಣಾಗಿ ಕುರ್ಚಿಯ ಮುಂದೆ ಬೋರಲು ಬಿದ್ದಿದ್ದರು..!
ಹಾಗೇ ನೋಡಿದರೆ ಈ ಸರ್ಕಾರ ರೆಡ್ಡಿಗಳ ಬಂಡಾಯದ ಸಮಯದಲ್ಲಿ ಉತ್ತರ ಕರ್ನಾಟಕ ಪ್ರವಾಹಕ್ಕೆ ಸಿಕ್ಕಿ ತತ್ತರಿಸುತ್ತಿದ್ದರೂ ಹಾಳು ಬಿದ್ದು ಹೋಗಿ ಅನ್ನುವಂತೆ ಸುಮ್ಮನಿದ್ದಿದ್ದೇ ಕಡೆ ಬಾರಿಯೇನಲ್ಲ,ಅದಾದ ಮೇಲೆ ರೆಸಾರ್ಟ್ನಲ್ಲಿ ಕತ್ತೆ ವ್ಯಾಪರಕ್ಕಿಳಿದಾಗಲೂ ತಿಂಗಳುಗಟ್ಟಲೇ ರಾಜ್ಯ ಅನಾಥವಾಗಿತ್ತು.ಸರ್ಕಾರಿ ಯಂತ್ರಕ್ಕೆ ತುಕ್ಕು ಹಿಡಿದಿತ್ತು.
ಮತ್ತೆ ಮುಖ್ಯಮಂತ್ರಿಯ ವಿರುದ್ಧ ಪ್ರಾಸಿಕ್ಯೂಶನ್ಗೆ ರಾಜ್ಯಪಾಲರು ಅನುಮತಿ ನೀಡಿದಾಗ ಖುದ್ದು ಆಡಳಿತ ಪಕ್ಷವೇ ಬಂದ್ ಕರೆ ಕೊಟ್ಟೂ ವೋಟ್ ಹಾಕಿ ಕಳುಹಿಸಿದ ಜನಸಾಮಾನ್ಯರಿಗೆ ತೊಂದರೆ ಕೊಟ್ಟಿದ್ದು ಮಹಾನ್ ಸಾಧನೆಯೇ (?) ಸರಿ.ಅದೆಲ್ಲಾ ಆಗಿ ಮತ್ತೆ ಸುಪ್ರಿಂ ಕೋರ್ಟ್ ತೀರ್ಪು ಬಂದ ಮೇಲೂ ಮತ್ತೆ ದೆಹಲಿಯಲ್ಲಿ ಕುರ್ಚಿ ಸವಾರಿ ಮಾಡಿ ಬಂದಾಗಲೂ ಕರ್ನಾಟಕ ಅನಾಥವಾಗಿತ್ತು.
ಮುಖ್ಯವಾಹಿನಿಯ ಜಾಣಗುರುಡು
– ಡಾ.ಅಶೋಕ್ ಕೆ.ಆರ್
ಹೆಂಡತಿ ಗಂಡನಿಗೆ ಹೊಡೆದರೆ ‘ಬ್ರೇಕಿಂಗ್ ನ್ಯೂಸ್’, ಗಂಡ ಹೆಂಡತಿಗೆ ಹೊಡೆದರೆ ‘ಬ್ರೇಕಿಂಗ್ ನ್ಯೂಸ್’, ಪೂನಂ ಪಾಂಡೆ ಬೆತ್ತಲಾದದ್ದು, ಐಶ್ವರ್ಯ ರೈ ದಪ್ಪಗಾಗಿದ್ದು ಮುಖಪುಟ ಸುದ್ದಿ! ಅಧಿಕಾರಿ, ರಾಜಕಾರಣಿ, ಸನ್ಯಾಸಿ ಮಾಡಿದ ತಪ್ಪುಗಳು ‘ಬ್ರೇಕಿಂಗ್ ನ್ಯೂಸ್’ [ofcourse ಯಾವ ವಾಹಿನಿ ವೀಕ್ಷಿಸುತ್ತಿದ್ದೀರೆಂಬುದರ ಮೇಲೆ ಈ ಕೊನೆಯ ಬ್ರೇಕಿಂಗ್ ನ್ಯೂಸ್ ಬದಲಾಗುತ್ತಿರುತ್ತದೆ!]. ಪತ್ರಕರ್ತನೊಬ್ಬ ನೆಲದ ಕಾನೂನಿಗೆ ಗೌರವ ಕೊಡದೆ ನಡೆದುಕೊಂಡಾಗ? ಅದು ಸುದ್ದಿಯೂ ಅಲ್ಲ, ರದ್ದಿಗೆ ಹಾಕುವಂಥ ವಿಷಯ ಎಂಬುದು ನಮ್ಮ ಮುಖ್ಯವಾಹಿನಿ ಮಾಧ್ಯಮಗಳ ನಿಲುವು!
ಗುಂಡು ಬಿಡದ ಬಂದೂಕುಗಳ ನಡುವೆ!
– ಸಂತೋಷ್ ಆಚಾರ್ಯ
೧೯೫೯ರಲ್ಲಿ ಜನರಲ್ ತಿಮ್ಮಯ್ಯ ಭಾರತ ಚೀನಾ ಯುದ್ಧದ ಸಾಧ್ಯತೆ ಮತ್ತು ಅದಕ್ಕೆ ಬೇಕಾದ ತಯಾರಿಯನ್ನು ಮಾಡಲು ಒಪ್ಪಿಗೆ ಕೇಳಿದಾಗ ಆಗಿನ ರಕ್ಷಣಾ ಮಂತ್ರಿಯಾಗಿದ್ದ ಕೃಷ್ಣ ಮೆನನ್ ಅದನ್ನು ನಿರಾಕರಿಸಿದ್ದರು. ಇದರಿಂದ ಕುಪಿತಗೊಂಡ ಜನರಲ್ ರಾಜೀನಾಮೆಯನ್ನು ಎಸೆದಿದ್ದರು. ಜನರಿಂದ ಸರ್ಕಾರ ಎನ್ನುವ ಅರ್ಥದ ಪ್ರಜಾಪ್ರಭುತ್ವ ಶುರುವಾದ ಹೊತ್ತಲ್ಲೇ ಜನರು ಬದಲಿಸಬಯಸುವ ಸರ್ಕಾರದ ನೀತಿಗಳನ್ನು ಬದಲಿಸುವ ಅನುಮತಿ ಆಗಲೇ ಇರಲಿಲ್ಲ. ನೆಹರೂ ರಾಜೀನಾಮೆಗೆ ಒಪ್ಪದೇ ಅವರನ್ನು ಅವರ ಅವಧಿ ಮುಗಿಯುವ ತನಕ(೧೯೬೧) ಇಟ್ಟುಕೊಂಡಿದ್ದು ಮತ್ತು ಭಾರತ ಯುದ್ಧದಲ್ಲಿ(೧೯೬೨) ಹೀನಾಯವಾಗಿ ಸೋತದ್ದು ಈಗ ಕೇವಲ ಇತಿಹಾಸ! ನೆಹರೂ ಚಾಣಾಕ್ಷತನದಿಂದ ವರ್ತಿಸಿದ್ದರೆ ಯುದ್ಧವನ್ನು ತಪ್ಪಿಸಬಹುದಿತ್ತು ಎಂದು ಈಗಲೂ ಎಷ್ಟೋ ಜನ ಹೇಳುತ್ತಾರೆ. ತನ್ನ ತಂತ್ರವನ್ನು ಒಪ್ಪಲಿಲ್ಲವೆಂದು ರಾಜೀನಾಮೆ ಎಸೆದು ಸರ್ಕಾರದಿಂದ ದೂರ ಸರಿಯುವುದಕ್ಕೂ ತಾನು ಮಾಡಿದ್ದು ಸರಿ ಎಂದು ಅದಕ್ಕಾಗಿ ಸರ್ಕಾರಕ್ಕೆ ಕೇರೇ ಎನ್ನದೆ ಅದನ್ನು ಕೋರ್ಟಿಗೆಳೆಯುವುದಕ್ಕೂ ಎಷ್ಟು ವ್ಯತ್ಯಾಸಗಳನ್ನು ನಾವು ಗುರುತಿಸಬಹುದು?
ತನ್ನ ಕಾರ್ಯಾವಧಿಯ ಕೊನೆಯ ವರ್ಷದಲ್ಲಿ ಇಂತಹಾ ಅಗ್ನಿಪರೀಕ್ಷೆ ಜನರಲ್ ವಿ.ಕೆ ಸಿಂಗ್ಗೆ ಬೇಕಿತ್ತೇ ಎಂದು ಸಾಮಾನ್ಯವಾಗಿ ಅನಿಸುವುದು ಸಹಜ. ಆದರೆ ಸ್ವಲ್ಪವೂ ಕ್ರಮಬದ್ಧತೆಯಿಂದ ನಿರ್ವಹಿಸದ ಸರ್ಕಾರಿ ಕಚೇರಿಗಳಿಗೆ ಇದು ಮುಖದ ಮೇಲೆ ಹೊಡೆದ ಕಪಾಳಮೋಕ್ಷ. ರಕ್ಷಣಾ ಮಂತ್ರಾಲಯದ ಮುಂದೆ ಭೂ ಸೇನೆಯ ಸಮಸ್ಯೆಗಳು ಗುಡ್ಡಗಟ್ಟುತ್ತಿವೆ. ಜನರಲ್ ವಯಸ್ಸಿನ ಸಮಸ್ಯೆಯಿಂದ ಶುರುವಾಗಿ ಲಂಚದ ಕೇಸು, ಟ್ರಕ್ಕುಗಳಲ್ಲಿ ನಡೆದ ಭ್ರಷ್ಟಾಚಾರ, ಲೀಕಾದ ಪತ್ರ ಹೀಗೆ ವಿ.ಕೆ ಸಿಂಗ್ ಪತ್ರಿಕೆಗಳ ಮುಖಪುಟದಲ್ಲಿ ರಾರಾಜಿಸುತ್ತಿದ್ದಾರೆ. ಈ ನಡುವೆ ತಮ್ಮ ಸ್ವಾರ್ಥಕ್ಕಾಗಿ ತಾವೇ ಪತ್ರವನ್ನು ಲೀಕ್ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಇಳಿ ವಯಸ್ಸಿನ ಮಾನಸಿಕ ಸ್ಥಿತಿಗಳನ್ನು ನೋಡುವುದಾದರೆ ಅಲ್ಲಗಳೆಯಬಹುದಾದ ವಿಚಾರವೇನೂ ಅಲ್ಲ. ಆದರೂ ಮೊದಲು ಕಮಾಂಡೋ ಆಗಿದ್ದ ಜನರಲ್ ಹೀಗೆ ಮಾಡಬಹುದೇ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ವಿ.ಕೆ ಸಿಂಗ್ ಒಬ್ಬ ಹೋರಾಟಗಾರ. ನೇರವಾಗಿ ವಿಷಯಗಳನ್ನು ನಿಭಾಯಿಸುವ ನಿಷ್ಠುರ ವ್ಯಕ್ತಿ. ಅವರ ಮೇಲೆ ಆಪಾದನೆ ಹೊರಿಸುವ ಮೊದಲು ಮನಸ್ಸು ಕೂಡ ಎಲ್ಲೋ ಒಪ್ಪಲು ನಿರಾಕರಿಸುತ್ತದೆ.
ಮತ್ತಷ್ಟು ಓದು 
ಸೇನೆ-ಸರ್ಕಾರದ ನಡುವೆ ಬಡವಾಗದಿರಲಿ ನನ್ನ ಭಾರತ
– ರಾಕೇಶ್ ಶೆಟ್ಟಿ
ಆವತ್ತು ಸಂಸತ್ತಿನಲ್ಲಿ ಭಾಷಣಕ್ಕೆ ನಿಂತ ನೆಹರೂ ದೇಶದ ಒಂದಿಂಚು ನೆಲವನ್ನು ಚೀನಿಗಳೀಗೆ ಬಿಟ್ಟುಕೊಡುವುದಿಲ್ಲ.ಎಂತಾ ಯುದ್ಧಕ್ಕಾದರೂ ಸೈನ್ಯ ತಯಾರಿದೆ ಅನ್ನುತ್ತಲೇ ತಮ್ಮ ಕೋಟಿನಿಂದ ತೆಗೆದ ಕೆಂಪು ಗುಲಾಬಿಯನ್ನ ಜನರ ಕಿವಿಗಿಟ್ಟರು.ಅವರ ಭಾಷಣದ ನಂತರದ ಇತಿಹಾಸ ನಿಮಗೆ ಗೊತ್ತಿರಲೇಬಹುದು.ಆ ಕಹಿ ನೆನಪಿಗೆ ೫೦ ವರ್ಷ ಆಗೋ ಸಮಯದಲ್ಲಿ ಮತ್ತೊಮ್ಮೆ ಕಳೆದವಾರ ಸಂಸತ್ತಿನಲ್ಲಿ ರಕ್ಷಣಾ ಸಚಿವ ಆಂಟನಿಯವರೂ ಸಹ ಭಾರತದ ಸೈನ್ಯ ಬಲಿಷ್ಟವಾಗಿದೆ,ಯುದ್ಧ ಸನ್ನದ್ಧವಾಗಿದೆ ಅಂದಿದ್ದಾರೆ.ನೆಹರೂ ಅವರಿಗೂ-ಅವ್ರ ಕಾಲಕ್ಕೂ ತುಲನೆ ಮಾಡಿದರೆ ಆಂಟನಿ ಅವರನ್ನ ಸ್ವಲ್ಪ ನಂಬಬಹುದು ಅನ್ನಿಸುತ್ತದೇ.ಆದರೆ…
ಕಳೆದ ವಾರ ನಡೆದ ವಿದ್ಯಾಮಾನಗಳಿವೆಯಲ್ಲ ಅವೆಲ್ಲ ಗಾಬರಿ ಹುಟ್ಟಿಸುವಂತವು.ಇದಕ್ಕೆ ಮುನ್ನುಡಿ ಬರೆದಿದ್ದು ಜನರಲ್.ವಿ.ಕೆ ಸಿಂಗ್…! ಜನ್ಮ ದಿನಾಂಕದ ರಗಳೆಯ ನಂತರ ಸ್ವಲ್ಪ ದಿನ ಸುಮ್ಮನಾಗಿದ್ದವ್ರು, ಟಿವಿ ಚಾನೆಲ್ನೊಂದಿಗೆ ಮಾತನಾಡುತ್ತ ತಮಗೆ ೧೪ ಕೋಟಿ ಲಂಚ ನೀಡಲು ಬಂದ ಪ್ರಸಂಗದ ಬಗ್ಗೆ ಬಾಯಿಬಿಡುವ ಮೂಲಕ.ಮತ್ತೆ ಆ ವಿಷಯವನ್ನ ನಾನು ರಕ್ಷಣಾ ಮಂತ್ರಿ ಆಂಟನಿ ಅವರಿಗೂ ಹೇಳಿದ್ದೆ ಅನ್ನುವುದು ಬೆಂಕಿಗೆ ತುಪ್ಪ ಸುರಿದಂತಾಗಿ ಹೋಯಿತು.ಸಂಸತ್ತಿನಲ್ಲಿ ಆಂಟನಿ ’ಅವರು ಮೌಕಿಕವಾಗಿ ಹೇಳಿದ್ದರು ನಾನು ಏನು ತಾನೇ ಮಾಡಲಿ” ಅಂತೆಲ್ಲ ಗೋಳಾಡುವಾಗಲೇ, ಜನರಲ್ ಪ್ರಧಾನಿ ಅವ್ರಿಗೆ ಬರೆದ ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಅತ್ಯಂತ ರಹಸ್ಯವಾಗಿರಬೇಕಿದ್ದ ಪತ್ರ ಸೋರಿಕೆಯಾಗಿದ್ದು.!
”ಇಂದು’ ಆಕೆ ಬದುಕಿದ್ದರೆ!?’
– ರಾಕೇಶ್ ಶೆಟ್ಟಿ
(ವಾಜಪೇಯಿಯವರ ಬಗ್ಗೆ ನರೇಂದ್ರ ಅವರು ಬರೆದ ಲೇಖನದಲ್ಲಿ ’ಆಪರೇಶನ್ ಬ್ಲೂ ಸ್ಟಾರ್ ಅನ್ನು ಎಳೆದು ತಂದಿದ್ದು ನೋಡಿ ಈ ಹಿಂದೆ ನಾನು ದೇಶ ಕಂಡ ಖಡಕ್ ಪ್ರಧಾನಿಯವರ ಬಗ್ಗೆ ಬರೆದ ಲೇಖನ ನೆನಪಾಯಿತು.ವಾಜಪೇಯಿಯಂತವರನ್ನ ಹೊಗಳಲು ಬೇರೆ ಇನ್ಯಾರನ್ನು ತೆಗಳಬೇಕಾದ ಅವಶ್ಯಕತೆಯೇನಿಲ್ಲ)
ಅದು ೧೯೭೭ – ೭೮ರ ಇಸವಿಯಿದ್ದಿರಬೇಕು, ಬಿಹಾರದ ಬೆಲ್ಚಿ ಎಂಬ ಗ್ರಾಮದಲ್ಲಿ ಮೇಲ್ಜಾತಿಯವರ ಕ್ರೌರ್ಯಕ್ಕೆ ಸಿಕ್ಕಿ ದಲಿತರ ಮಾರಣ ಹೋಮವಾಗಿತ್ತು. ಘಟನೆಯಲ್ಲಿ ನೊಂದವರಿಗೆ ಸಾಂತ್ವಾನ ಹೇಳಲು (ರಾಜಕೀಯ ಉದ್ದೇಶವು ಇತ್ತು, ಅದು ಬೇರೆ ಮಾತು ಬಿಡಿ) ಅದೇ ದಿನ ನಡು ರಾತ್ರಿಯಲ್ಲಿ ಏಕಾಂಗಿಯಾಗಿ ದಿಲ್ಲಿಯಿಂದ ಹೊರಟು,ಜೀಪಿನಿಂದ ಪ್ರಯಾಣ ಶುರು ಮಾಡಿ,ನಂತರ ಜೀಪು ಮುಂದೆ ಸಾಗದಿದ್ದಾಗ ರೈತನ ಟ್ರಾಕ್ಟರ್ ನಲ್ಲಿ ಮುಂದೆ ಸಾಗಿ, ನಡುವಲ್ಲಿ ನದಿ ಬಂದಾಗ ಆನೆಯೇರಿ ಘಟನೆ ನಡೆದ ಸ್ಥಳಕ್ಕೆ ಒಬ್ಬಂಟಿಯಾಗಿ ಬಂದ ಅವರನ್ನು ನೋಡಿದಾಗ ನೊಂದವರಿಗೆ ಸಾಕ್ಷಾತ್ ‘ತಾಯಿ’ಯನ್ನು ನೋಡಿದಂತೆ ಆಯ್ತು. ಆ ತಾಯಿ ‘ಇಂದಿರಾ ಗಾಂಧೀ’ ಅವರ ಕಣ್ಣೀರು ಒರೆಸಿದ್ದಳು.
೧೯೭೧ರ ಸಮಯದಲ್ಲಿ ಪಾಕಿಗಳು ಅವರ ಸಹೋದರರು ಎಂದೆ ಹೇಳಿಕೊಳ್ಳುವ ಬಾಂಗ್ಲಾದೇಶದವರ ಮೇಲೆ ದೌರ್ಜನ್ಯ ಮಾಡುತಿದ್ದಾಗ,ಸೈನ್ಯವನ್ನು ನುಗ್ಗಿಸಿ ಪಾಕಿಗಳಿಗೆ ಮರೆಯಲಾಗದ ಪಾಠವನ್ನೇ ಕಲಿಸಿದ್ದರು, ಆಗಿನ ವಿರೋಧ ಪಕ್ಷದ ನಾಯಕರಾಗಿದ್ದಂತಹ ‘ವಾಜಪೇಯಿ’ ಅವರೇ ಅವರನ್ನು ‘ದುರ್ಗಾ’ ಅಂತ ಕರೆದಿದ್ದರು.ಆ ಯುದ್ಧದಲ್ಲಿ ಇಂದಿರಾ ಗಾಂಧಿಯವರು ನಡೆದು ಕೊಂಡ ರೀತಿಯತ್ತಲ್ಲ, ಆ ಯುದ್ಧದಲ್ಲಿ ಅವರು ತೋರಿದ ಗಟ್ಟಿತನವನ್ನ ಮತ್ಯಾವ ಭಾರತದ ಪ್ರಧಾನಿಯೂ ತೋರಿಸಿಲ್ಲ ಬಿಡಿ.ಖುದ್ದು ಅವರಪ್ಪನನ್ನೇ ಈ ವಿಷಯದಲ್ಲಿ ಅವರು ಮೀರಿಸಿದ್ದರು.
ಮತ್ತಷ್ಟು ಓದು 




