ವಿಷಯದ ವಿವರಗಳಿಗೆ ದಾಟಿರಿ

Posts tagged ‘ರಾಜಕೀಯ’

18
ಆಗಸ್ಟ್

ಭ್ರಷ್ಟಾಚಾರ ಎಂದರೆ ಅನುಕೂಲ ಸಿಂಧು

– ಪವನ್ ಪರುಪತ್ತೆದಾರ   

ನನಗೊಬ್ಬ ಸ್ನೇಹಿತ ಇದ್ದಾನೆ ಪ್ರವೀಣ್ ಅಂತ, ನನ್ನ ಜೊತೆ ಓದಿಲ್ಲವಾದರೂ ನನ್ನ ಸಹಪಾಠಿ ಅವನು, ಒಂದೇ ತರಗತಿ ಆದರೆ ಬೇರೆ ಶಾಲೆ. ಅವನ ಕೆಲಸ ತಾಲ್ಲೂಕು ಕಚೇರಿಯಲ್ಲಿ. ಸರ್ಕಾರದಿಂದ ಕೊಟ್ಟ ಕೆಲಸ ಅಲ್ಲ, ಅವನೇ ಹುಡುಕಿ ಕೊಂಡಿರುವ ವೃತ್ತಿ. ನಿಜ ಹೇಳಬೇಕೆಂದರೆ ನಮ್ಮೂರಿನ ತಾಲ್ಲೂಕು ಕಚೇರಿಯೋಳಗಿರುವರಿಗಿಂತ ಇವನು ಹೆಚ್ಚು ಕೆಲಸ ಮಾಡುತ್ತಾನೆ. ಪಹಣಿ, registration, ಖಾತೆ ಬದಲಾವಣೆ, encumberance ಸರ್ಟಿಫಿಕೇಟ್, survey sketch ಕಾಪಿ, ನಿಮಗೇನು ಬೇಕು?? ತಾಲ್ಲೂಕು ಕಚೇರಿಯ ಗೇಟ್ ನ ಪ್ಯೂನ್ ಇಂದ ಹಿಡಿದು ತಹಶೀಲ್ದಾರ್ ತನಕ, ಏನು ಕೆಲಸ ಬೇಕಾದರುಮಾಡಿಕೊಡುತ್ತಾನೆ(ಮಾಡಿಸಿಕೊಡುತ್ತಾನೆ).

ಇತ್ತೀಚಿಗೆ ನನಗೆ ಬಹಳ ಜರೂರಾಗಿ ನಮ್ಮ ಜಮೀನಿನ ಪಹಣಿ ಬೇಕಾಗಿತ್ತು. ನಮ್ಮ ಊರಿನ ಪಹಣಿ ಕೇಂದ್ರ ಬಹಳ ದಿನಗಳಿಂದ ದುರಸ್ಥಿಯಲ್ಲಿತ್ತು. ಆಗಷ್ಟೇ ಕೊಡಲು ಶುರು ಮಾಡಿದ್ದರು. ಅದ್ದರಿಂದ ತಾಲ್ಲೂಕು ಕಚೇರಿ ಬಳಿ ಹೋಗಿ ಸಾಲು ನೋಡಿದೊಡನೆ ಭಯವಾಯ್ತು. ಅದರಲ್ಲೂ ನಮ್ಮ ಸರ್ಕಾರೀ ಕಛೇರಿಯೋಳಗಿನ ಗಣಕ ಯಂತ್ರಗಳು ಯಾವಾಗ ಕೆಡುತ್ತವೋ ಗೊತ್ತಿಲ್ಲ. ಇವತ್ತು ಕೆಟ್ಟರೆ ಇನ್ನು ರಿಪೇರಿ ಆಗುವುದು ಯಾವಾಗಲೋ??? ಅಲ್ಲಿವರೆಗೂ ನನಗೂ ಕಾಯುವ ಅವಕಾಶವಿರಲಿಲ್ಲ. ಮತ್ತಷ್ಟು ಓದು »

16
ಆಗಸ್ಟ್

ಹೋರಾಟದ ಸಾಗರಕೆ ಸಾವಿರಾರು ನದಿಗಳು.ನೀವು!?

15
ಆಗಸ್ಟ್

ಸುಮ್ಮನೆ ಬರಲಿಲ್ಲ ಸ್ವಾತಂತ್ರ್ಯ…!

– ರಾಕೇಶ್ ಶೆಟ್ಟಿ

ಇವತ್ತು ೬೫ನೇ ಸ್ವಾತಂತ್ರ್ಯ ಸಂಭ್ರಮ,ದೆಹಲಿಯ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ಮಾಡಿ ಭಾಷಣ ಮಾಡಲಿದ್ದಾರೆ ನಮ್ಮ ಪ್ರಾಮಾಣಿಕ ಪ್ರಧಾನಿ.ಮತ್ತೆ ನಾಳೆ ಇದೇ ಪ್ರಾಮಾಣಿಕ ಪ್ರಧಾನಿಯ ಸರ್ಕಾರದ ಅನೈತಿಕತೆಯ ವಿರುದ್ಧ ಅಣ್ಣಾ ಹಜ಼ಾರೆ ಮತ್ತೆ ಉಪವಾಸ ಕೂರುತಿದ್ದಾರೆ.ಅಣ್ಣಾ ಇದನ್ನ ಎರಡನೇ ಸ್ವಾತಂತ್ರ್ಯ ಹೋರಾಟ ಅನ್ನುತಿದ್ದಾರೆ.ಆದರೆ ಮೊದಲ ಸ್ವಾತಂತ್ರ್ಯ ಹೋರಾಟದ ಆಳ-ಅಗಲಗಳನ್ನ ಸರಿಯಾಗಿ ತಿಳಿಯಲಾಗದೇಯೆ ಶಾಲೆ-ಕಾಲೇಜು ಪಾಸಾಗಿ ಬಂದ ನಮ್ಮಲ್ಲಿ ಅದಿನ್ನೆಷ್ಟು ಜನಕ್ಕೆ ಈ ಎರಡನೇ ಹೋರಾಟ ಕಿಚ್ಚು ಹಚ್ಚಬಹುದು,ಅದನ್ನ ಕಾಲವೇ ಉತ್ತರಿಸಲಿದೆ.

ಅಣ್ಣಾ ಉಪವಾಸ ಹೋರಾಟಕ್ಕೆ ಜಯವಾಗಲಿ ಅಂತ ಹಾರೈಸುತ್ತ,ಅಣ್ಣಾ ಉಪವಾಸ ಸತ್ಯಾಗ್ರಹಕ್ಕೆ ಆರಂಭದಲ್ಲೆ ಕಲ್ಲು ಹಾಕಿ ತಲೆಕೆಟ್ಟವರಂತೆ ಮಾತನಾಡುತ್ತಿರುವ ಕಾಂಗ್ರೆಸ್ಸಿನ ಮಂದಿಗೂ ಮತ್ತು ಕೇಂದ್ರ ಗೃಹ ಸಚಿವರಿಗೂ ಮತ್ತು ಕನಿಷ್ಠ ದೆಹಲಿ ಪೋಲಿಸ್ ಪರ್ಮಿಷನ್ ಸಹ ಕೊಡಿಸಲಾಗದ ಅಸಾಹಯಕ ಆದರೆ At the same time ಪ್ರಾಮಾಣಿಕ ಪ್ರಧಾನಿಯ ಶೋಚನೀಯ ಸ್ಥಿತಿಗೆ ಕಂಬನಿ ಮಿಡಿಯುತ್ತ, ಉಪವಾಸ ಸತ್ಯಾಗ್ರಹದಂತ ಹೋರಾಟದ ಅಸ್ತ್ರ ಹಿಡಿದು ನಿಲ್ಲುವವರ ಮನಸ್ಥಿತಿಯ ಕುರಿತಾಗಿ ಮಹಮ್ಮದ್ ಅಲಿ ಜಿನ್ನಾ ಹೇಳಿರುವ ಮಾತುಗಳು ನೆನಪಿಸಿಕೊಳ್ಳುತಿದ್ದೇನೆ.

“ಯಾವ ಮನುಷ್ಯ ಉಪವಾಸ ಸತ್ಯಾಗ್ರಹಕ್ಕೆ ಇಳಿಯುತ್ತಾನೋ ಅಂತವನು ಅವನ ಮನಸಿನ ಮಾತಿನಂತೆ ನಡೆಯುತ್ತಾನೆ ಮತ್ತು ಅವನಿಗೆ ಅವನೇನು ಮಾಡುತ್ತಿದ್ದಾನೆ ಎಂಬುದರ ಸಂಪೂರ್ಣ ಅರಿವಿರುತ್ತದೆ.ಅವರನ್ನು ಹಾದಿ ತಪ್ಪಿದವರು ಅನ್ನುವ ಮೊದಲು ಅವರನ್ನು ಹಾದಿ ತಪ್ಪಿಸಿರುವುದು ಈ ವ್ಯವಸ್ತೆ ಅನ್ನುವುದನ್ನ ಮರೆಯಬಾರದು,ಮತ್ತು ಈ ವ್ಯವಸ್ತೆಯ ವಿರುದ್ಧ ಯುವಕರು ಸಿಡಿದಿದ್ದಾರೆ” . ಅವರು ಹಾಗೇ ಹೇಳಿದ್ದು ಕ್ರಾಂತಿಕಾರಿ ಭಗತ್ ಸಿಂಗ್ ಮತ್ತು ಸಂಗಡಿಗರು ಬ್ರಿಟಿಶ್ ಕೈದಿಗಳಂತೆ ಭಾರತೀಯ ಕೈದಿಗಳಿಗೂ ಜೈಲಿನಲ್ಲಿ ಸಮಾನ ಹಕ್ಕು ನೀಡುವಂತೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟವನ್ನ ಬಹಿರಂಗವಾಗಿ ಬೆಂಬಲಿಸಿ.ಆಗಲೂ ಸಹ ಕಾಂಗ್ರೆಸ್ಸ್ ಭಗತ್ ಸಿಂಗ್ ಅವರ ಉಪವಾಸದ ಹೋರಾಟದ ಬಗ್ಗೆ ಈಗ ಅಣ್ಣಾ ಅವರ ಹೋರಾಟದ ವಿರುದ್ಧ ಇರುವಂತೆಯೆ ಇತ್ತು. ಅದಿರಲಿ, ಈ ಹೋರಾಟ ನಡೆದಿದ್ದು ಬರೋಬ್ಬರಿ ೬೩ ದಿನಗಳ ಕಾಲ! ಕಡೆಗೂ ಭಗತ್ ಸಿಂಗ್ ಮತ್ತವರ ಗೆಳೆಯರ ಎದುರು ಬ್ರಿಟಿಷ್ ಸರ್ಕಾರ ಮಂಡಿಯೂರಲೇ ಬೇಕಾಯಿತು,ಆದರೆ ಅಷ್ಟರೊಳಗಾಗಲೇ ನಾವು ’ಜತೀನ್ ದಾ’ ಅವರನ್ನ ಕಳೆದುಕೊಂಡಾಗಿತ್ತು 😦

ಮತ್ತಷ್ಟು ಓದು »

11
ಆಗಸ್ಟ್

ಕಾಂಗ್ರೆಸ್ಸಿನ ದೇವರು ಮತ್ತು ಪೂಜಾರಿಗಳು..!

ಸಚಿನ್.ಕೆ

ಯುಪಿಎ ಒಕ್ಕೂಟದ ಅಧ್ಯಕ್ಷರು ಮತ್ತು ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಆದ ಶ್ರೀಮತಿ ಸೋನಿಯ ಗಾಂಧಿ ಸರ್ವೈಕಲ್ ಕ್ಯಾನ್ಸರ್ ನಿಂದ ಬಳಲುತಿದ್ದು ಅಮೆರಿಕದ ಪ್ರಖ್ಯಾತ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಷಯ ಎಲ್ಲರಿಗೂ ಗೊತ್ತಿರುವಂತಹದ್ದು. ಅವರು ಬೇಗ ಗುಣಮುಖರಾಗಲಿ ಎಂದು ದೇಶದ ಬಹುತೇಕ ಜನರು ದೇವರಲ್ಲಿ ಪ್ರಾರ್ಥಿಸುತಿದ್ದಾರೆ. ನಾವು ಸಹ ಅವರು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇವೆ.
ಇಂದು ಮತ್ತು ಮೊನ್ನೆಯ ಕೆಲ ಮುಖ್ಯ ಘಟನೆಗಳನ್ನು ನಾನು ಇಲ್ಲಿ ಪ್ರಸ್ತಾಪಿಸಬೇಕೆಂದಿದ್ದೇನೆ.

ಬಳ್ಳಾರಿಯಲ್ಲಿ ಪ್ರತಿಪಕ್ಷದ ಮುಖಂಡರಾದ ಶ್ರೀ ಸಿದ್ದರಾಮಯ್ಯ ನವರು ಶ್ರೀ ದುರ್ಗಮ್ಮ ದೇವಸ್ಥಾನದಲ್ಲಿ ೧೦೧ ತೆಂಗಿನಕಾಯಿ ಹೊಡೆದು ಮೇಡಂ ಬೇಗ ಗುಣಮುಖರಾಗಲಿಎಂದು ಪೂಜೆ ಸಲ್ಲಿಸಿದರು 

ಮತ್ತಷ್ಟು ಓದು »

9
ಆಗಸ್ಟ್

ಕಾರ್ಯಕರ್ತ

– ಪವನ್ ಪರುಪತ್ತೆದಾರ

ಊರಲೆಲ್ಲ ತಲೆಯ ಮೇಲೆ ಹಾರ್ನ್ ಹೊತ್ತ ಆಟೋ ಒಂದೇ ಡೈಲಾಗ್ ಅನ್ನು ಹೇಳುತ್ತಾ ತಿರುಗಾಡುತಿತ್ತು,ಮರಯದಿರಿ ಮತ ಬಾಂಧವರೆ ಮರೆತು ನಿರಾಶರಾಗದಿರಿ, ಈಗ ಮರೆತು ಮುಂದೆ ಯಾಕಾದರೂ ಇಂತಹ ತಪ್ಪು ಮಾಡಿದೆನೋ ಎಂದು ಮರುಗದಿರಿ, ನಿಮ್ಮ ಮತವನ್ನು ನಮ್ಮ ಕಮಲಣ್ಣನ ಪಾರ್ಟಿಯ ಅಭ್ಯರ್ಥಿಯಾದಂಥ ಬಡವರ ಬಂಧು ಧಿಮಂತ ನಾಯಕ ಶ್ರೀಮಾನ್ ಸಿದ್ದಣ್ಣ ನವರಿಗೆ ನೀಡಿ, ಸಿದ್ದಣ್ಣ ನವರಿಗೆ ಮತ ನಮ್ಮೂರಿನ ಜನತೆಗೆ ಹಿತ  ಇದನ್ನೇ ಮತ್ತೆ ಮತ್ತೆ ಅರಚುತ್ತ ಸಾಗುತಿದ್ದ ಆಟೋ ಒಳಗಿಂದ ಸುರೇಶ ಸಿದ್ದಣ್ಣನ ಹೆಸರಿನಲ್ಲಿರುವಂತಹ ಒಂದು pamplet ಅನ್ನು ಹಂಚುತಿದ್ದ, ಅದಕ್ಕಾಗಿ ಮಕ್ಕಳು ಆ ಆಟೋ ಹಿಂದೆಯೇ ಓಡುತ್ತಾ ಇದ್ದರು………

ಅಂಗಡಿ ಬೀದಿಯಲ್ಲಿ ಅಬ್ಧುಲ್ಲ ತನ್ನ ಒಂದು ಸಣ್ಣ ಗುಂಪನ್ನು ಕಟ್ಟಿಕೊಂಡು ಅಲ್ಲಿರುವ ಕರೆಂಟ್ ಕಂಬಗಳನೆಲ್ಲ ನೋಡುತ್ತಾ, ಅರೆ ಇಸ್ಕಿ ಕ್ಯಾ ರೆ ಕಮಲಣ್ಣನ ಪಾರ್ಟಿ ಅವ್ರು ಆಗಲೇ banner ಗೆ ಕಟ್ಬಿಟ್ಟಿ ಅವ್ರೆ. ನಮ್ದುಕೆ ಇನ್ನು ಎಲ್ಡು ಅಡಿ ಮೇಲಕ್ಕೆ ಕಟ್ಟೋಣ ಅಂತ ತನ್ನ ಶಿಷ್ಯನ್ನ ಕರೆದ, ಹೇ ಪಟ್ಟೆ ಅರೆ ಇದರ್ ಅಂತ ಕಂಬ ಹತ್ತಿಸಿ ಹಸ್ತಣ್ಣನ ಪಾರ್ಟಿ ಕಡೆ ಇಂದ ನಿಂತಿದ್ದ ಸನಾಉಲ್ಲ ನ ಫೋಟೋ ಸಮೇತ ಇರೋ ಹಸ್ತಣ್ಣನ ಪಾರ್ಟಿಗೆ ಮತ ನಮ್ಮೂರಿನ ಜನಕ್ಕೆ ಹಿತ. ಅಂತ ಇರೋ banner ಗಳನ್ನ ಕಟ್ಟಿಸ್ತ ಇದ್ದ. ಅಷ್ಟರಲ್ಲೇ ಅಲ್ಲಿದ್ದ ಕೆಲವರು ಗುಂಪು ಸೇರಿ ಇವರು ಮಾಡುತ್ತಾ ಇದ್ದ ಕೆಲಸವನ್ನು ಗಮನಿಸ್ತ ಇದ್ರು, ಅವರನ್ನ ನೋಡಿದ ಅಬ್ದುಲ್ಲ ಹೇ ಅಣ್ಣ ನಮಸ್ಕಾರ ನಮ್ಮ ನೆಚ್ಚಿನ ನಾಯಕ, ಬಡವರ್ಗೆ ಸಹಾಯ ಮಾಡೋದ್ರಾಗ ಎತ್ತಿದ ಕೈ ನಮ್ ಸನಾಉಲ್ಲಾದು. ನಿಮ್ಮದು ಎಲ್ಲರ್ದುಗೆ ಓಟು ನಮ್ದು ಹಸ್ತಣ್ಣ ಪಾರ್ಟಿ ಗೆ ಹಾಕಿ ಅಂತ ಭಾಷಣ ಮಾಡಿದ. ಅದೇ ಬೀದಿಲಿ ಹಾದು ಹೋಗುತ್ತಿದ್ದ ಕಮಲಣ್ಣನ ಪಾರ್ಟಿಯ ಒಬ್ಬ ವ್ಯಕ್ತಿ ಇದನ್ನ ನೋಡಿ ಮಖ ಕೆಂಪಗ ಮಾಡಿಕೊಂಡು ಹೋದ……. ಮತ್ತಷ್ಟು ಓದು »

8
ಆಗಸ್ಟ್

ಈ ಕಥೆ ಮುಂದಿನ ರಾಜಕಾರಣಿಗಳಿಗೆ ಒಂದು ಪಾಠವಾಗಲಿ

– ರಾಕೇಶ್ ಎನ್ ಎಸ್

ಅದು ೧೯೬೦ನೇ ದಶಕದ ಕೊನೆಯ ಭಾಗ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರವೆಂಬ ಪುಟ್ಟ ಪಟ್ಟಣದಲ್ಲಿ ಬೂಕನೆಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ ಎಂಬ ವ್ಯಕ್ತಿ ಒಂದು ಅಕ್ಕಿ ಮಿಲ್‌ನಲ್ಲಿ ಸಾಮಾನ್ಯ ಗುಮಾಸ್ತನಾಗಿ ತಿಂಗಳಿಗೆ ಕೇವಲ ೧೩೦ ರೂ ಸಂಬಳ ಪಡೆದುಕೊಂಡು ದಿನ ಸಾಗಿಸುತ್ತಿದ್ದ. ಅಷ್ಟರಲ್ಲೇ ಆ ವ್ಯಕ್ತಿ ಒಂಚೂರು ರಾಜಕೀಯ, ಸಾಮಾಜಿಕ ವಿಷಯಗಳ ಬಗ್ಗೆ ಆಸಕ್ತನಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕನಾಗಿ, ಜನಸಂಘದ ಮುಖಂಡನಾಗಿ, ಆ ಬಳಿಕ ಶಿಕಾರಿಪುರ ಪುರ ಸಭೆಯ ಸದಸ್ಯನಾಗಿ, ತುರ್ತು ಪರಿಸ್ಥಿತಿ ಘೋಷಿಸಿದ ಅದಕ್ಕೆ ಸಡ್ಡು ಹೊಡೆದ ಹೋರಾಟಗಾರನಾಗಿ, ರಾಜ್ಯದಲ್ಲಿ ಬಿಜೆಪಿಯ ಮುಖವಾಣಿಯಾಗಿ, ರೈತಾಪಿ ಜನರ ದನಿಯಾಗಿ, ರಾಜ್ಯದ ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತ ಕತೆ ಈ ದೇಶದ ಪ್ರಜಾಪ್ರಭುತ್ವದ ಸೌಂದರ್ಯಕ್ಕೆ ಮುಕುಟ ಪ್ರಾಯವಾದದ್ದಾಗಿರಬೇಕಾಗಿತ್ತು. ಆದರೆ ಈ ನಾಡಿನ ದುರದೃಷ್ಟವೆಂದರೆ ಆ ವ್ಯಕ್ತಿ ಇಂದು ಈ ನಾಡು ಕಂಡು ಕೇಳರಿಯದ ರಾಕ್ಷಸ ರಾಜಕಾರಣದ ವಾರಸುದಾರನಾಗಿ ಬಿಟ್ಟಿದ್ದಾರೆ. ಪ್ರಜಾಪ್ರಭುತ್ವದ ಚೆಲುವನ್ನು ಹೀರಿದ ಬಂದಣಿಕೆಯಾಗಿ ಇತಿಹಾಸದ ಪುಟ ಸೇರಿದ್ದಾರೆ.

ಅಪನಂಬಿಕೆ, ಸ್ವಜನಪಕ್ಷಪಾತ, ಅಧಿಕಾರದ ಮೋಹ, ಇನ್ನೊಬ್ಬರ ಕಾಲೆಳೆಯುವ ಚಾಳಿ, ಭಟ್ಟಂಗಿಗಳ ಪಟಾಲಂ ಈ ಪಂಚ ಅನಿಷ್ಠ ಗುಣಗಳಲ್ಲಿ ಒಂದು ಗುಣವಿದ್ದರು ಕೂಡ ಒಬ್ಬ ವ್ಯಕ್ತಿಯ ಬದುಕು ಪಾತಳ ಮುಖಿ ಅಗುವುದರಲ್ಲಿ ಅನುಮಾನವಿಲ್ಲ. ಅಂತಹದ್ದರಲ್ಲಿ ಈ ಪಂಚ ಗುಣಗಳನ್ನೆ ತಮ್ಮ ನಡತೆಯಾಗಿಸಿಕೊಂಡಿವವರು ನಾಯಕರಾಗಿ ಬಿಟ್ಟರೆ ಅಥವಾ ನಾಯಕರೆಂದು ಕರೆಸಿಕೊಂಡರೆ ಅವರು ಮಾತ್ರವಲ್ಲ ಅವರಿರುವ ಸಮಾಜ ಅಥವಾ ಪರಿಸರ ಗಬ್ಬೆದ್ದು ಹೋಗುತ್ತದೆ ಎಂಬುದಕ್ಕೆ ಬಿ ಎಸ್ ಯಡಿಯೂರಪ್ಪ ಮತ್ತು ಕರ್ನಾಟಕದ ರಾಜ್ಯ ರಾಜಕೀಯವೇ ಸಾಕ್ಷಿ. ಮತ್ತಷ್ಟು ಓದು »
8
ಆಗಸ್ಟ್

ಪೌರ ಕಾರ್ಮಿಕರ ಬದುಕು ಹಸನಾಗುವುದು ಯಾವಾಗ?

– ಪವನ್ ಯಂ.ಟಿ

ನಾಳೆ ಬೆಳಗ್ಗೆ ೫ ಗಂಟೆಗೆ ಅಲಾರಾಮ್ ಇಡು ಮಗಳೆ ೫:೩೦ ರ ಬಸ್ಸು ಮಿಸ್ ಆಗೋದ್ರೆ ಕಸವೆಲ್ಲ ಅಲ್ಲೇ ಉಳಿದು ಬಿಡುತ್ತೆ, ನಿನ್ನೆ ದಿನ ಸಂತೆ ಬೇರೆ ಇತ್ತು. ಕಸದ ರಾಶಿಯೇ ಬಿದ್ದಿರ ಬಹುದು. ಬೇಗ ಹೋಗಿ ಕ್ಲೀನ್ ಮಾಡಬೇಕು…! ಎಂದು ಪೌರಕಾರ್ಮಿಕೆ ಮಲ್ಲಮ್ಮ ತನ್ನ ಮಗಳಿಗೆ ಹೇಳಿ ಮಲಗಿಕೊಂಡಳು. ಮಲ್ಲಮ್ಮನಿಗಿರುವ ಒಂದೇ ಆಲೋಚನೆ ತನಗೆ ವಹಿಸಿದ ವಾರ್ಡನಂಬರ್ ೭ರಲ್ಲಿ ಬಿದ್ದಿರುವ ಕಸವನ್ನು ತೆಗೆದು ಶುಚಿಗೊಳಿಸುವುದು. ಎಲ್ಲಿ ಬೆಳಗ್ಗೆ ಬಸ್ಸು ಮಿಸ್ಸಾದರೆ ಕಸದ ರಾಶಿ ಅಲ್ಲಿಯೇ ಉಳಿದು ಮೇಲಾಧಿಕಾರಿಗಳು, ಗುತ್ತಿಗೆದಾರರು ನನ್ನನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆಯೋ ಅನ್ನುವ ಭಯ ಮಲ್ಲಮ್ಮನಿಗೆ. ಇದು ಕೇವಲ ಒಬ್ಬ ಪೌರಕಾರ್ಮಿಳ/ನ  ಚಡಪಡಿಕೆಯಲ್ಲ. ನಮ್ಮ ದೇಶದಲ್ಲಿ ಅಥವಾ ರಾಜ್ಯದಲ್ಲಿ ದುಡಿಯುತ್ತಿರುವ ಎಲ್ಲಾ ಪೌರ ಕಾರ್ಮಿಕರ ಚಡಪಡಿಕೆಯಾಗಿದೆ. ಪೌರ ಕಾರ್ಮಿಕರಿಗೆ ದಿನಬೆಳಗಾದರೆ ಸ್ವಚ್ಚತೆಯದ್ದೇ ಚಿಂತೆ. ಅವರು ಈ ಕೆಲಸವನ್ನು ತಮ್ಮ ಒಟ್ಟೆ ಪಾಡಿಗಾಗಿ ಮಾಡಿದರೂ ಸಹ  ಅದರ ಹಿಂದೆ ಪ್ರತಿಯೊಬ್ಬ ನಾಗರೀಕನ ಆರೋಗ್ಯದ ಕುರಿತ ಕಾಳಜಿ ಅವರಲ್ಲಿ ಮನೆ ಮಾಡಿರುತ್ತದೆ.

ನಾವು ಬೆಳಗ್ಗೆ ಎದ್ದು ಸುಮಾರು ೭ ಗಂಟೆಯ ಸಮಯಕ್ಕೆ ಪಟ್ಟಣಕ್ಕೆ ಒಂದು ಸುತ್ತು ಬಂದರೆ ಸಾಕು ಪೌರ ಕಾರ್ಮಿಕರು ಪಡುವ ಕಷ್ಟ, ಅವರು ಮಾಡುವ ಕೆಲಸ, ನಮ್ಮ ಕಣ್ಣಿಗೆ ಕಾಣುತ್ತದೆ. ನಮಗೆ ಅಸಯ್ಯ ಎನ್ನಿಸುವ ಕೆಲಸವನ್ನು ಅವರು ಮಾಡಿದಂತೆ ಕಂಡರೂ ಅವರೆಲ್ಲ ನಮ್ಮ ಪಾಲಿನ ದೇವರಿದ್ದಂತೆ, ಇಂದು ನಾವೆಲ್ಲ ಒಳ್ಳೆಯ, ಕೈತುಂಬಾ, ಹಣ ಬರುವ ಕೆಲಸವನ್ನು ಮಾತ್ರ ಹುಡುಕುತ್ತೇವೆ. ಒಂದು ವೇಳೆ ಪೌರ ಕಾರ್ಮಿಕರೇ ಇಲ್ಲವೆಂದಿದ್ದರೇ ಇಂದು ನಮ್ಮ ಆರೋಗ್ಯದ ಪರಿಸ್ಥಿತಿ ಏನಾಗುತ್ತಿತ್ತು ಎನ್ನುವುದನ್ನು ನೀವೇ ಯೋಚಿಸಿ.

ಮತ್ತಷ್ಟು ಓದು »

29
ಜುಲೈ

ಹೈಕಮಾಂಡ್!!! ಹೈಕಮಾಂಡ್!!!

– ಚೇತನ್ ಜೀರಾಳ್

ಕರ್ನಾಟದಲ್ಲಿ ಕಳೆದೆರೆಡು ವಾರಗಳಿಂದ ನಡೆಯುತ್ತಿರುವ ಈ ರಾಜಕೀಯ ದೊಂಬರಾಟ ದೇಶದ ಗಮನವನ್ನ ತನ್ನತ ಸೆಳೆದಿದೆ. ಅಕ್ರಮ ಗಣಿಗಾರಿಕೆಯ ಬಗ್ಗೆ ಲೋಕಾಯುಕ್ತರು ನೀಡಿರುವ ವರದಿ ರಾಜಕೀಯ ಪಕ್ಷಗಳು ಹಾಗೂ ಅವರ ನಾಯಕರುಗಳಲ್ಲಿ ಆತಂಕ ಹುಟ್ಟಿಸಿದೆ. ಮುಂದೆ ಈ ರಾಜಕೀಯ ದೊಂಬರಾಟ ಹೇಗೆ ತಿರುವುಗಳನ್ನು ಪಡೆಯುತ್ತದೋ ಕಾದು ನೋಡೋಣ.

ಆದರೆ ಈ ಪ್ರಕರಣ ಹೊರಬಿದ್ದಾಗಿನಿಂದ ಹೈಕಮಾಂಡಿನ ಹೆಸರು ಎಂದಿಗಿಂತ ಹೆಚ್ಚು ಪದೇ ಪದೇ ಕಿವಿಯ ಮೇಲೆ ಬೀಳುತ್ತಲೇ ಇದೆ. ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷಗಳ ನಾಯಕರು ಎದ್ದರೂ ಹೈಕಮಾಂಡ್, ಬಿದ್ದರೂ ಹೈಕಮಾಂಡ್, ಕನಸಿನಲ್ಲೂ ಹೈಕಮಾಂಡ್ ಎಂದು ಕನವರಿಸುತ್ತಾ ಇರುತ್ತಾರೆ. ಕಾಂಗ್ರೆಸ್, ಬಿಜೆಪಿ ಎಂದು ಪಕ್ಷ ಭೇದ ಮರೆತು ನಮ್ಮ ರಾಜ್ಯದ ನಾಯಕರುಗಳು ಹೈಕಮಾಂಡಿನ ದಾಸ್ಯಕ್ಕೆ ಒಗ್ಗಿಹೋಗಿದ್ದಾರೆ ಎಂದೆನಿಸುತ್ತದೆ. ಹೈಕಮಾಂಡಿನ ಕರೆ ಬಂದ ಕೂಡಲೇ ಉಟ್ಟ ಬಟ್ಟೆಯಲ್ಲಿ ದೆಹಲಿಗೆ ಓಡಿ ಹೋಗುವ ಚಾಳಿ ನಮ್ಮ ರಾಜ್ಯದ ನಾಯಕರುಗಳಿಗೆ ಅಭ್ಯಾಸ ಆಗಿ ಹೋಗಿದೆ. ನಮ್ಮ ರಾಜ್ಯದ ಯಾವುದೇ ಪ್ರಮುಖ ವಿಷಯಗಳಲ್ಲಿ ತೀರ್ಮಾನವಾಗಬೇಕಾದರೂ ದೆಹಲಿಯಲ್ಲಿ ಗಂಟೆಗಟ್ಟಲೆ ಕೈಕಟ್ಟಿಕೊಂಡು ನಿಲ್ಲಬೇಕಾದ ಪರಿಸ್ಥಿತಿ ನಮ್ಮ ಜನಪ್ರತಿನಿಧಿಗಳದು. ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರನ್ನು ಭೇಟಿ ಮಾಡಲು ಹಲವಾರೂ ದಿನಗಳು ಕಳೆದರೂ ಭೇಟಿ ಮಾಡಲು ಸಾಧ್ಯವಾಗದೆ ವಾಪಸ್ ಬಂದಿರುವ ಅನೇಕ ಸುದ್ದಿಗಳನ್ನು ಪತ್ರಿಕೆಗಳಲ್ಲಿ ನೋಡಿರುತ್ತೇವೆ…

ಮತ್ತಷ್ಟು ಓದು »

28
ಜುಲೈ

ಯಡ್ಯೂರಪ್ಪಂಗೆ ನೊಬೇಲ್ ಅವಾರ್ಡು…!

– ವಿಜಯ್ ಹೆರಗು

ಎಂದಿನಂತೆ ನಮ್-ವಿಜಯ್ ಹೆರಗುಮ ಕೆಂಚ, ಸೀನ, ಸಿದ್ದ, ನಾಣಿ ಎಲ್ಲಾರೂ ಬಂದು ಅವರ ಮಾಮೂಲಿ ‘ಅಡ್ಡಾ’ ರಾಮಣ್ಣನ ಟೀ ಅಂಗಡಿ ಮುಂದೆ ಕೂತ್ಕೊಂಡು ಹರಟೆ ಹೊಡೀತಾ ಇದ್ರು. ನಮ್ ಸಿದ್ದ ಅಲ್ಲಿ ಇದ್ದ ಅಂದ್ಮೇಲೆ ರಾಜಕೀಯದ ಮಾತು ಬರ್ಲೇಬೇಕು.

ಸಿದ್ದ : ಲೇ ಕೆಂಚ ಇವತ್ತು ಪೇಪರ್ ನೋಡ್ದೆನ್ಲಾ ?

ಕೆಂಚ : ಹೂ ಕನ್ಲಾ ನೋಡ್ದೆ, ಪಾಪ ನಮ್ ಯಡ್ಯೂರಪ್ನೋರಿಗೆ ಶ್ಯಾನೆ ಕಾಟ ಕೊಡ್ತಾವ್ರೆ. ಈ ಸಂತೋಷ್ ಹೆಗ್ಡೆ ಲೋಕಾಯುಕ್ತ ಆದಾಗಿಂದ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಸಂತೋಷಾನೇ ಕಾಣಾಕಿಲ್ಲ………ಸದ್ಯ ಇನ್ನೊಂದು ವಾರಕ್ಕೆ ಆವಯ್ಯ ರಿಟೈರ್ ಆಯ್ತಾರೆ ಇನ್ನಾರಾ ನಮ್ ಸಿಎಮ್ಮು ಸುಖವಾಗಿ ಇರ್ಬೌದು ಅಂದ್ಕೊಂಡ್ರೆ ಅದೇನೋ “ಗಣಿ ಬಾಂಬ್” ಹಾಕ್ಬಿಟ್ರಲ್ಲ ಅವ್ರು.

ಸೀನ : ಅಲ್ಲಲೇ ಕೆಂಚ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಯಾವಾಗ್ಲಾ ಸಂತೋಷ ನೋಡಿದ್ದೇ ನೀನು!? ಆವಯ್ಯ ಯಾವಾಗಲೂ ಮುಖ ಗಂಟ್ ಹಾಕ್ಕಂಡೆ ಇರ್ತಾರೆ…….

ಸಿದ್ದ : ನಿಜ ಕಣ್ಲಾ ಸೀನ……ಆವಯ್ಯ ನಗೋದೇ ಕಷ್ಟ ಕಣ್ಲಾ ಅದ್ಕೆ ಅವ್ರು ಸದಾನಂದ ಗೌಡ್ರುನ್ನ ಪಕ್ಕಕ್ಕೆ ಇಟ್ಕಂಡಿದ್ರು…..ಸದಾನಂದ ಗೌಡ್ರು ಯಾವಾಗ್ಲೂ ನಗ್ತಾ ಇರ್ತಾರೆ, ಆದ್ರೆ ಈಶ್ವರಪ್ಪ ಬಂದು ಸದಾನಂದ ಗೌಡ್ರುನ್ನ ಎಬ್ಬಿಸಿ ಅವ್ರ ಸೀಟ್ನಾಗೆ ಇವ್ರು ಕುಂತ್ಕಂಬುಟ್ರು.

 

ಮತ್ತಷ್ಟು ಓದು »

22
ಜುಲೈ

ಕಣ್ಣೀರ ಭಾಷೆ ಅರ್ಥವಾಗದವರಿಗೆ…

– ಚಿತ್ರಾ ಸಂತೋಷ್

“ಒಬ್ಬ ವ್ಯಕ್ತಿಯ ಕಣ್ಣೀರು, ದುಃಖ, ವಿಷಾದಗಳು ಅರ್ಥವಾಗದವನಿಗೆ ಅಧಿಕಾರವೂ ಅರ್ಥವಾಗಲು ಸಾಧ್ಯವಿಲ್ಲ. ಈ ಮೂರು ಅರ್ಥವಾಗದವನು ಅಧಿಕಾರ ಎಂದರೆ ಮೋಜು ಎಂದು ಅರ್ಥಮಾಡಿಕೊಳ್ಳುವ ಅಪಾಯವಿದೆ” ಬ್ರಿಟನ್ ಮಾಜಿ ಪ್ರಧಾನಿ ವಿನ್ ಸ್ಟನ್ ಚರ್ಚಿಲ್ ತನ್ನ ಆತ್ಮಕಥೆಯಲ್ಲಿ ಹೇಳಿದ್ದು ಹೀಗೆ. ಜನರ ಕಣ್ಣೀರು, ಕಣ್ಣೀರ ಭಾಷೆ ಅರ್ಥವಾದವನಿಗೆ ಮಾತ್ರ ಅಧಿಕಾರ ಎಂದರೆ ಏನೂಂತ ಅರ್ಥವಾಗಬಹುದು ಎನ್ನುವುದು ಚರ್ಚಿಲ್ ಮಾತು.

ಹೌದು, ನನಗೂ ನೆನಪಾಯಿತು. ನಮ್ಮಲ್ಲೂ ಜನಪ್ರಿಯ ರಾಜಕಾರಣಿಗಳಿದ್ದಾರೆ.  ಜನರ ಕಣ್ಣೀರ ಜೊತೆ ತಾವೂ ಕಣ್ಣೀರಧಾರೆಯಾಗುವ ಜನಪ್ರತಿನಿಧಿಗಳಿದ್ದಾರೆ. ಕೆಲತಿಂಗಳ ಹಿಂದೆ ರಾಜ್ಯದಲ್ಲಿ ನೆರೆ ಬಂದಾಗ, ಜನರು ಕಷ್ಟಗಳನ್ನು ತೋಡಿಕೊಂಡು ಅತ್ತಾಗ ತಾವೂ ಅತ್ತು ನೀರಾದವರು ಇದ್ದಾರೆ!  ಗೋಲಿಬಾರ್‌ನಲ್ಲಿ ರೈತ ಗುಂಡೇಟಿಗೆ ಬಲಿಯಾದಾಗ ರೈತನ ಶವದೆದುರು ಗಳಗಳನೆ ಅತ್ತು ಮಾಧ್ಯಮದಲ್ಲಿ ದೊಡ್ಡ ಫೋಟೋವಾಗಿ ರಾರಾಜಿಸಿದ ರಾಜಕಾರಣಿಗಳಿಗೇನು ನಮ್ಮಲ್ಲಿ ಬರಗಾಲವಿಲ್ಲ.

ಮತ್ತಷ್ಟು ಓದು »