ವಿಷಯದ ವಿವರಗಳಿಗೆ ದಾಟಿರಿ

Posts tagged ‘ರಾಜಕೀಯ’

21
ಜುಲೈ

ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ…!?

– ಕುಮಾರ ರೈತ

ಶೀರ್ಷಿಕೆ ಓದಿದಾಗ ಆಶ್ವರ್ಯ-ಪ್ರಶ್ನಾರ್ಥಕ ಭಾವಗಳು ಮೂಡುವುದು ಸಹಜ. ಆದರೆ ‘ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ ಎನ್ನುವುದು ಅಕ್ಷರಶಃ ಸತ್ಯ. ಗಡಿ ಅಂಚಿನ ಕಾಸರಗೋಡಿನಿಂದ ಕನ್ನಡಕ್ಕೆ ಸ್ಥಾನವೇ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಆ ಸರಕಾರ ನಾನಾ ಬಗೆಯ ತಂತ್ರಗಾರಿಕೆಯನ್ನು ಮಾಡುತ್ತಲೇ ಬಂದಿದೆ. ಭಾಷಾವಾರು ಪ್ರಾಂತ್ಯ ರಚನೆಯಾಗಿ 54 ವರ್ಷ ಸಂದರೂ ಕಾಸರಗೋಡಿನಲ್ಲಿ ಕನ್ನಡ ಉಳಿದಿರುವುದನ್ನು ಕಂಡು ಈ ಬಾರಿ ಪ್ರಬಲ ಅಸ್ತ್ತ ಪ್ರಯೋಗಿಸಿದೆ. ಇದಕ್ಕೆ ತಕ್ಕ ಪ್ರತ್ಯಸ್ತ್ರ ಹೂಡದೇ ಇದ್ದರೆ ಸಂಭವಿಸುವ ಅಪಾಯಗಳು ಅನೇಕ. ಅವುಗಳೇನು…..?

2011ರ ಜುಲೈ 8 ರಿಂದ 17ರವರೆಗೆ ಕೇರಳದಲ್ಲಿನ ಕನ್ನಡ ಪ್ರಾಂತ್ಯಗಳಾದ ಕಾಸರಗೋಡು-ಹೊಸದುರ್ಗಗಳಲ್ಲಿ ಕ್ಷೇತ್ರ ಪ್ರವಾಸದಲ್ಲಿದ್ದೆ. ಎಂದಿನಂತೆ ಕನ್ನಡ ಭಾಷಾ ಚಳವಳಿಗಾರನ್ನು ಭೇಟಿಯಾದೆ. ‘ಕನ್ನಡಕ್ಕೆ ಭಾರಿ ಅಪಾಯ ತಂದೊಡ್ಡುವ ಕ್ರಮವನ್ನು ಕೇರಳ ಸರಕಾರ ಜರುಗಿಸಿದೆ. ಇದರಿಂದ ಕಾಸರಗೋಡಿನ ಕನ್ನಡದ ಕತ್ತು ಹಿಚುಕಿದಂತಾಗುತ್ತದೆ. ಕೆಲವೇ ವರ್ಷಗಳಲ್ಲಿ ಇಲ್ಲಿನ ಕನ್ನಡ ಸಂಸ್ಕೃತಿ ಕಣ್ಮರೆಯಾಗಲಿದೆ ಎಂಬ ಆತಂಕವನ್ನು ಮುಳ್ಳೇರಿಯಾದ ಆಯುರ್ವೇದ ವೈದ್ಯ ನರೇಶ್ ಮತ್ತು ಕಾಸರಗೋಡಿನ ಸರಕಾರಿ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ರತ್ನಕರ ಮಲ್ಲಮೂಲೆ ಅವರು ವ್ಯಕ್ತಪಡಿಸಿದರು.
5
ಜುಲೈ

ಅಷ್ಟಕ್ಕೂ,ಈ ಪ್ರಜಾಪ್ರಭುತ್ವ ಅಂದರೇನು!?

– ರಾಕೇಶ್ ಶೆಟ್ಟಿ

ಮನಮೋಹನರಿಗಿಂತ ಅಡಾಲ್ಫ್ ಹಿಟ್ಲರ್ ಮೇಲು…!

ದೇಶಕ್ಕಾದ ಅವಮಾನಕ್ಕೆ ಪ್ರತಿಯಾಗಿ ನಂಜು ಕಾರುತಿದ್ದ ಅಡಾಲ್ಫ್ ಹಿಟ್ಲರ್ ಅನ್ನುವ ರಕ್ತ ಪಿಪಾಸು ಸರ್ವಾಧಿಕಾರಿಯನ್ನ, ದೇಶ ಭ್ರಷ್ಟಚಾರದಲ್ಲಿ ಮುಳುಗೇಳುತಿದ್ದರೂ ಸಂಬಂಧವೇ ಇಲ್ಲದಂತಿರುವ,ಕಣ್ಣೆದುರೇ ಅನಾಚಾರ ನಡೆಯುತಿದ್ದರು ಕಣ್ಮುಚ್ಚಿ ಕುಳಿತಿರುವ ಪ್ರಾಮಾಣಿಕ ಪ್ರಧಾನಿ ಮನಮೋಹನರಿಗೆ ಹೋಲಿಸಿದ್ದು ಅತಿಯಾಯ್ತು ಅನ್ನಿಸುತ್ತೆ ಅಲ್ವಾ?

ಹಾಗಿದ್ರೆ, ಅಣ್ಣಾ ಸತ್ಯಾಗ್ರಹ ಮಾಡಿ ಮೊಂಡ ಸರ್ಕಾರವನ್ನ ಮಂಡಿಯೂರಿಸಿದಾಗ ’ಓ! ಸರ್ಕಾರ ಈ ತರ ಬಗ್ಗಿದರೆ, ಎಲ್ಲರೂ ಸತ್ಯಾಗ್ರಹ ಮಾಡಿ ಸರ್ಕಾರವನ್ನ ಬ್ಲಾಕ್ ಮೇಲ್ ಮಾಡಲು ಶುರು ಮಾಡುತ್ತಾರೆ!’ ಅಂತ ಆತಂಕ ಪಡುವವರನ್ನ ಕಂಡಾಗ; ’ಪ್ರಜಾಪ್ರಭುತ್ವವಲ್ಲದ ಭ್ರಷ್ಟಚಾರ ಮುಕ್ತ ಸರ್ಕಾರಕ್ಕಿಂತ, ಭ್ರಷ್ಟಚಾರವಿರುವ ಪ್ರಜಾಪ್ರಭುತ್ವ ಸರ್ಕಾರವೇ ಮೇಲು’ ಅನ್ನುವಂತ ಲೇಖನವನ್ನ ಓದಿದಾಗ; ಪ್ರಬಲ ಜನಲೋಕಪಾಲ ಮಸೂದೆಗಾಗಿ ನಡೆಯುತ್ತಿರುವ ಹೋರಾಟ ’ಪ್ರಜಾಪ್ರಭುತ್ವದ ಬುಡವನ್ನೇ ಅಲುಗಾಡಿಸುತ್ತಿದೆ’ ಅಂತ ಕೆಲ ಮಂದಿ ಗುಲ್ಲೆಬ್ಬಿಸುತ್ತಿರುವುದನ್ನ ನೋಡಿದಾಗ ಇದೂ ಅತಿಯಾಯ್ತು ಅನ್ನಿಸುವುದಿಲ್ವಾ?

ಅಷ್ಟಕ್ಕೂ,ಜನರಿಂದ ಆರಿಸಿ ಬಂದ ಸರ್ಕಾರ ತನ್ನ ಪಾಲಿನ ಕೆಲಸವನ್ನ ತಾನು ಸರಿಯಾಗಿ ಮಾಡುತಿದ್ದರೆ ಅಣ್ಣಾ ಹಜ಼ಾರೆ ಯಾಕೆ ಬರಬೇಕಿತ್ತು? ಕಫ್ಫು ಹಣದ ಕಳ್ಳರ ಹೆಸರನ್ನ ಬಾಯ್ಬಿಡಿ ಅಂದಾಗ ’ಅವೆಲ್ಲ ಆಗಲಿಕ್ಕಿಲ್ಲ’ ಅಂತ ವಿತ್ತ ಸಚಿವ ಅಂದ ಮೇಲೆ ತಾನೇ ಜನರ ಪಿತ್ತ ನೆತ್ತಿಗೇರಿದ್ದು? ಸುಪ್ರೀಂ ಕೋರ್ಟ್ ತಪರಾಕಿ ಹಾಕಿದ ಮೇಲೆಯೆ ತೆರಿಗೆ ಕಳ್ಳ ಹಸನ್ ಅಲಿಯನ್ನ ಬಂಧಿಸಿದ್ದೇಕೆ? ಕಳೆದ ಚುನಾವಣೆಗಿಂತಲೂ ಮೊದಲೇ 2G ಹಗರಣ ಬಾಯ್ತೆರೆದು ನಂತರವೂ ಅದೇ ರಾಜನನ್ನ ಮತ್ತೆ ಕರೆದು ಮತ್ತದೇ ಖಾತೆಯನ್ನ ವಹಿಸಿದ ಸರ್ಕಾರಕ್ಕೆ ನೈತಿಕತೆಯಿದಯೇ? ಈಗ ಆತಂಕ ಪಡುತ್ತಿರುವ ಪ್ರಜಾಪ್ರಭುತ್ವದ ಕಾವಲು ಭಟರೆಲ್ಲ ಆಗ ಏನು ಮಾಡುತಿದ್ದರು?ಎಲ್ಲಿದ್ದರು?

ಮತ್ತಷ್ಟು ಓದು »

4
ಜುಲೈ

ಜನರೆಂದರೆ ಯಾರ್ ಯಾರು ಕಾಗೇರಿಯವರೇ?

– ಬನವಾಸಿ ಬಳಗ

ಇವತ್ತಿನ (೦೩.೦೭.೨೦೧೧ರ) ಕನ್ನಡಪ್ರಭ ದಿನಪತ್ರಿಕೆಯ ಒಂಬತ್ತನೇ ಪುಟದಲ್ಲಿ ಮಾನ್ಯ ಶಿಕ್ಷಣಮಂತ್ರಿಗಳಾದ ಶ್ರೀ ವಿಶ್ವೇಶ್ವರಹೆಗ್ಡೆ ಕಾಗೇರಿಯವರ “ಬುಲೆಟ್ ಸಂದರ್ಶನ“ವೊಂದು ಪ್ರಕಟವಾಗಿದೆ. ಸರ್ಕಾರ ಇಂಗ್ಲೀಶ್ ಮಾಧ್ಯಮ ಶಾಲೆಗಳನ್ನು ತೆರೆಯುವ ಬಗ್ಗೆ ಚರ್ಚೆ ಆರಂಭಿಸಿರುವ ಹಿನ್ನೆಲೆಯಲ್ಲಿ ಇದು ಕುತೂಹಲಕರವಾಗಿದ್ದು, ಒಂದು ಥರ ಸರ್ಕಾರದ ಮುಂದಿನ ನಡೆಯ ದಿಕ್ಸೂಚಿಯೂ ಆಗಿದೆ. ಇಡೀ ಸಂದರ್ಶನದ ಪ್ರಮುಖ ಮಾತುಗಳು ಇಂತಿವೆ.

ಸಾಹಿತಿಗಳಷ್ಟೇ… ಜನತೆಯಲ್ಲ!

ತಮ್ಮ ಸರ್ಕಾರದ ನಿಲುವನ್ನು ಸಮರ್ಥಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಇಳಿಯಲು ತಾವು ಸಿದ್ಧ ಎಂಬುದನ್ನು ಮಂತ್ರಿಗಳು ಸಾಬೀತು ಮಾಡುತ್ತಿರುವಂತೆ ಇವರ ಮಾತುಗಳಿವೆ. ಇಂಗ್ಲೀಶ್ ಮಾಧ್ಯಮ ಶಾಲೆಗಳಿಗೆ ಸಾಹಿತಿಗಳು ಮಾತ್ರಾ ವಿರೋಧ ತೋರಿಸಿದ್ದಾರೆ, ಇವರಷ್ಟೇ ನಾಡಿನ ಜನತೆಯಲ್ಲ… ಹಳ್ಳಿಗಾಡಿನ ಜನರೂ ಕೂಡಾ ಅವರ ಅಭಿಪ್ರಾಯ ಹೇಳಲಿ… ಇತ್ಯಾದಿಯಾಗಿ ಮಂತ್ರಿಗಳು ಮಾತಾಡಿದ್ದಾರೆ. ಇದಲ್ಲದೆ ಮಾಧ್ಯಮಗಳಿಗೆ ಜನರ ಅಭಿಪ್ರಾಯ ನಿರೂಪಿಸುವ ಹೊಣೆಗಾರಿಕೆಯನ್ನೂ ವಹಿಸಿದ್ದಾರೆ. ಈ ಪ್ರಯತ್ನವು ಸಾಹಿತಿಗಳ ಬಾಯಿ ಮುಚ್ಚಿಸುವ “ನಿಮ್ಮ ಮಕ್ಕಳು ಇಂಗ್ಲೀಶ್ ಮಾಧ್ಯಮದಲ್ಲಿ ಓದಬಹುದು, ಬಡವರ ಮಕ್ಕಳು ಓದಬಾರದಾ?” ಎಂಬಂತಹ ಮತ್ತೊಂದು ಅಸ್ತ್ರವಾಗಿದೆ. ಇರಲಿ… ಕಾಗೇರಿಯವರು ಆಡಿರುವ ಮಾತುಗಳತ್ತ ನೋಡೋಣ.

ಮತ್ತಷ್ಟು ಓದು »

11
ಜೂನ್

ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ ಏನೋ..!!

– ಕೆ.ಎಸ್ ರಾಘವೇಂದ್ರ ನಾವಡ

ನೀವು ಏನಾದ್ರೂ ಹೇಳಿ… ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ.. ಅ೦ಥ ಮತ್ತೊಮ್ರ್ ಪ್ರೂವ್ ಆಗಿ ಹೋಗಿದೆ. ನಮ್ಮ ದೇಶದಲ್ಲಿ ಕೆಲವರ ಹಣೆಬರಹವನ್ನು ಸುಲಭವಾಗಿ ನಿರ್ಧರಿಸಬಹುದು.. ಹಿ೦ದೆ ಹಾವೇರಿಯಲ್ಲಿ ರೈತರ ಮುಷ್ಕರಕ್ಕೆ ಯಡಿಯೂರಪ್ಪ ಗೋಲಿಬಾರ್ ಗೆ ಆದೇಶ ನೀಡುವುದರ ಮೂಲಕ ಅದಕ್ಕೊ೦ದು ಗತಿ ಕಾಣಿಸಿದರು! ಇ೦ದು ರಾಮ್ ದೇವ್ ಹಣೆಬರಹವನ್ನು ಕೇ೦ದ್ರ ಸರ್ಕಾರ ಈ ರೀತಿ ಬರೆಯಿತು!! ಒಟ್ಟಾರೆ ನಾವು ಬ್ರಿಟೀಶ್ ಸತ್ತೆಯ ಕಾಲಕ್ಕೆ ಹೋಗುತ್ತಿದ್ದೇವೇನೋ ಎ೦ಬುದು ನನ್ನ ಸ೦ಶಯ!!

ಭರತ ಭೂಮಿಯಲ್ಲಿ  ಬ್ರಿಟೀಶ್ ಆಡಳಿತದಿ೦ದ ಮುಕ್ತರಾಗ ಬಯಸಿ ಸ್ವಾತ೦ತ್ರ್ಯದ ಕನಸು ಕ೦ಡು ಅದಕ್ಕಾಗಿ ಹೋರಾಡಿದವರು- ಶೋಷಿತ ವರ್ಗ – ತಮ್ಮ ಬೇಡಿಕೆಯನ್ನು ನ್ಯಾಯಬಧ್ಧವಾಗಿ ಕೇಳುವವರು- ಜನ ಕಲ್ಯಾಣಕ್ಕಾಗಿ ಹಾತೊರೆದು ಮುನ್ನುಗ್ಗುವವರು – ರಾಜಕೀಯ ವ್ಯವಸ್ಥೆಯನ್ನು ಸುಧಾರಿಸ ಬಯಸುವವರು ಮು೦ತಾದವರ ಹೋರಾಟದ ಅ೦ತ್ಯ ಹೀಗೇ!! ಸರಿ ಸುಮಾರು ಬ್ರಿಟೀಷರಿ೦ದ ಆರ೦ಭವಾದ ಈ ಪ್ರಜೆಗಳ ಧ್ವನಿಯನ್ನು  ಅವರುಗಳ ಗ೦ಟಲನ್ನೇ ಹಿಸುಕುವ ಮೂಲಕ ,ಅವರ ಹೋರಾಟಕ್ಕೊ೦ದು ಅನೈತಿಕ ಅ೦ತ್ಯ ನೀಡುವ ಈ ಕ್ರಮ ದುರದೃಷ್ಟವಶಾತ್ ಇಲ್ಲಿಯವರೆವಿಗೂ ಮು೦ದುವರೆದಿದೆ!! ಹಾಗ೦ತ ಎಲ್ಲ ಹೋರಾಟಗಳೂ ಇದೇ ಅ೦ತ್ಯವನ್ನು ಕ೦ಡವೇ ಎ೦ದರೆ ಖಚಿತವಾದ ಉತ್ತರ ನೀಡಲಿಕ್ಕಾಗುವುದಿಲ್ಲ.. “ಕೆಲವು ಸಮಸ್ಯೆಗಳು ತಾವಾಗೇ ಸೃಷ್ಟಿಯಾದರೆ ಕೆಲವನ್ನು ನಾವೇ ಸೃಷ್ಟಿಸಿಕೊಳ್ಳುತ್ತೇವೆ“ ಎ೦ಬ ನಾವಡ ಉವಾಚವೊ೦ದಿದೆ.. ಅದರ ಪ್ರಕಾರ ಪ್ರಸಕ್ತ ಭರತಭೂಮಿಯಲ್ಲಿಯೂ ಏಕೆ ಸಮಸ್ತ ಜಗತ್ತಿನಲ್ಲಿಯೂ  ಸರ್ಕಾರ ಗಳು ಹಾಗೂ ಜನತೆಗಳ ವಿಚಾರದಲ್ಲಿ ನಡೆಯುತ್ತಿರುವುದು ಇದೇ!!

ಮತ್ತಷ್ಟು ಓದು »

7
ಜೂನ್

ನಾವಿನ್ನೂ ಬ್ರಿಟಿಷರ ಆಳ್ವಿಕೆಯಲ್ಲಿದ್ದೇವೆಯೇ?

– ಸಂಪತ್ ಕುಮಾರ್

ಸ್ವತಂತ್ರ, ಸಂವಿಧಾನಾತ್ಮಕವಾಗಿ ಕಾರ್ಯ ನಿರ್ವಹಿಸುವ  ದೇಶದಲ್ಲಿ ಇಂತಹ ಘಟನೆಗಳು ನಡೆಯಲು ಸಾಧ್ಯವೇ!? ಜೂನ್ ೪ ರ ಘಟನೆ ನಾವೆಲ್ಲರೂ ತಲೆತಗ್ಗಿಸುವಂತೆ ಮಾಡಿದೆ.ಪ್ರಜೆಗಳ ಮೂಲಭೂತ ಹಕ್ಕುಗಳ ಕಗ್ಗೊಲೆಯಾಗಿದೆ. ಗಾಂಧಿಜಿ ಹೇಳಿಕೊಟ್ಟ ಸತ್ಯಾಗ್ರಹದಂತಹ ಅಸ್ತ್ರ ಬೆಲೆ ಕಳೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಗೆ ಪ್ರಚೋದನೆ ನೀಡಿದಂತಾಗಿದೆ.
ಪ್ರಜೆಗಳ ದನಿಯನ್ನು ಹತ್ತಿಕ್ಕಲು ಹೊಸ ವಿಧಾನವನ್ನು ಸರಕಾರ ಹೇಳಿಕೊಟ್ಟಿದೆ. ಬಾಬಾ ರಾಮದೇವ್ ಅವರ ಅಹಿಸಾತ್ಮಕ ಪ್ರತಿಭಟನೆಗೆ ಹಿಂಸಾತ್ಮಕ ಉತ್ತರ ನೀಡಿ ಸರ್ಕಾರ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ಏಪ್ರಿಲ್ ೧೨ ರಂದು ನಾನು ನಿಲುಮೆಯಲ್ಲಿ ಬರೆದ ಲೇಖನ “ಇನ್ನೊಂದು ಸಮರಕ್ಕೆ ಸಿದ್ದರಾಗಿ” ಸದಾಶಯದಂತೆ ಬಾಬಾ ರಾಮದೇವ್ ಅವರು ಸತ್ಯಾಗ್ರಹಕ್ಕೆ ಕುಳಿತದ್ದು ಸಂತೋಷದ ವಿಚಾರವಾಗಿರುತ್ತದೆ. ಲೋಕಪಾಲದಂತಹ ಬಹು ಆಯಾಮದ ಸಮಸ್ಯೆಯನ್ನು ಎದುರಿಸುವ ಬದಲು, “ಕಪ್ಪು ಹಣ” ದಂತಹ ಒಂದೇ ಸಮಸ್ಯೆಯನ್ನು ಎದುರಿಸಿ ಬಾಬಾ ಯಶಸ್ಸನ್ನು ಪಡೆಯುವ ಹಂತದಲ್ಲಿರುವಾಗಲೇ ಹೀಗೆ ಸತ್ಯಾಗ್ರಹವನ್ನು ಹತ್ತಿಕ್ಕಿದ್ದು ಸಮಸ್ಯೆಯನ್ನು ಉಲ್ಬಣಗೊಳಿಸಿದೆ. ಸರಕಾರದ ಸರ್ವಾಧೀಕಾರದ ಧೋರಣೆ ಎಂದಿಗೂ ಸಲ್ಲ.

ಮತ್ತಷ್ಟು ಓದು »

5
ಜೂನ್

ಗಾಂಧಿ ಪಕ್ಷದೊಳಗಿನ ಬ್ರಿಟಿಷರು…!

– ರಾಕೇಶ್ ಶೆಟ್ಟಿ

ತಲೆಬರಹವನ್ನ ನಕಲಿ ಗಾಂಧಿಗಳ ಪಕ್ಷದೊಳಗಿನ ಬ್ರಿಟಿಷರು ಅಂತ ಓದಿಕೊಳ್ಳಿ.ಮಹಾತ್ಮರ ಹೆಸರನ್ನ ಬೇಡ ಬೇಡವೆಂದರೂ ಅನಿವಾರ್ಯವಾಗಿ ಅವರ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುತ್ತಿರುವ ಪಕ್ಷದ/ಸರ್ಕಾರದ ದೌರ್ಜನ್ಯದ ವಿರುದ್ಧ ಮಾತನಾಡುವಾಗ ಬಳಸಿಕೊಳ್ಳಲೇಬೇಕಿದೆ.

ಪ್ರಾಮಾಣಿಕ ಪ್ರಧಾನಿಯ ಸರ್ಕಾರ ಅನೈತಿಕ ಕೆಲಸಕ್ಕೆ ಕಡೆಗೂ ಕೈ ಇಟ್ಟಿದೆ.ಮಧ್ಯರಾತ್ರಿ ಕಳ್ಳರಂತೆ-ದರೋಡೆಕೋರರಂತೆ ರಾಮ್ ಲೀಲಾ ಮೈದಾನಕ್ಕೆ ನುಗ್ಗಿ ಹೆಂಗಸರು-ಮಕ್ಕಳು ಅಂತ ನೋಡದೆಯೆ ರಾಕ್ಷಸರಂತೆ ವರ್ತಿಸಿದ ರೀತಿ ನೋಡಿದರೆ, ಮನಮೋಹನ್ ಸಿಂಗ್ ಅನ್ನುವ ಸೋ-ಕಾಲ್ಡ್ ಪ್ರಧಾನಿಯ ಪ್ರಾಮಾಣಿಕತೆ ಉಪ್ಪಿನಕಾಯಿ ಹಾಕಲಿಕ್ಕಾ ಅಂತ ಕೇಳಲೆಬೇಕಾಗುತ್ತದೆ.

ಹುಚ್ಚು ನಾಯಿ ಕಡಿತಕ್ಕೆ ಚುಚ್ಚು ಮದ್ದು ತೆಗೆದುಕೊಳ್ಳದಿದ್ದರೆ ಏನಾಗುತ್ತೆ ಅನ್ನೋದಕ್ಕೆ ದಿಗ್ವಿಜಯ್ ಸಿಂಗ್ ಆಗಾಗ ನೀಡೋ ಹೇಳಿಕೆಗಳೇ ಉದಾಹರಣೆ.ಇಂತ ದಿಗ್ಗಿ ನಿನ್ನೆ ಹೇಳಿದ ಮಾತು ನೆನಪಿದೆಯಾ? ‘ಸರ್ಕಾರ ರಾಮ್ದೇವ್ ಅವರಿಗೆ ಹೆದರಿಲ್ಲ, ಒಂದು ವೇಳೆ ಹೆದರಿದ್ದರೆ ರಾಮ್ ದೇವ್ ಅವರನ್ನ ಬಂಧಿಸುತಿತ್ತು!’.ಹಾಗೇ ಹೇಳಿದ ಮಧ್ಯರಾತ್ರಿಯೇ ಬ್ರಿಟಿಷರು ಜಲಿಯನ್ ವಾಲಾಬಾಗ್ಗೆ ನುಗ್ಗಿದ ರೀತಿಯಲ್ಲೆ ನುಗ್ಗಿ ಅದೇ ರಾಮ್ ದೇವ್ರನ್ನ ಬಂಧಿಸಿದ್ದಾರೆ.ಅಂದರೆ ಕಾಂಗ್ರೆಸ್ಸ್ ಸರ್ಕಾರದ ಬೆದರಿದೆ ಅಂತಲೇ ಅರ್ಥವಲ್ಲವಾ?

ಮತ್ತಷ್ಟು ಓದು »

5
ಜೂನ್

ಹನುಮಪ್ಪನೆ ಆಗಿರಲಿ ಇಮಾಂ ಸಾಬಿಯೇ ಆಗಿರಲಿ…!

– ಪವನ್‍ ಪಾರುಪತ್ತೇದಾರ‍್, ಬೆಂಗಳೂರು

ಜನ ಲೋಕಪಾಲ್ ಜಾರಿಗಾಗಿ ಅಣ್ಣಾ ಹಜಾರೆ ಹೋರಾಟ ಮಾಡಿದ್ರು , ಮೇಧಾ ಪಾಟ್ಕರ್ ಹೋರಾಟಗಳನ್ನ ಮಾಡುತ್ತಲೇ ಇರ್ತಾರೆ. ಎರಡು ಗ್ರೇಟ್‍  ಹಗರಣ ಇಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸುಬ್ರಮಣ್ಯನ್ ಸ್ವಾಮಿ ಅವರ ಹೋರಾಟವೇ ಕಾರಣ. ಈಗ ತಾನೆ ಮಿಲಿಂದ್ ಸೋಮನ್ ಹಸಿರು ಕ್ರಾಂತಿ ಮಾಡಲು 531 ಕಿ.ಮೀ. ಓಟ ಮುಗಿಸಿದ್ದಾರೆ.ಇನ್ನು ಎಷ್ಟೋ ಹೋರಾಟಗಳು ನಡಿತನೆ ಇರುತ್ತವೆ. ಆದರೆ ,ಈಗ ಬಾಬಾ ರಾಮದೇವ್ ಹೋರಾಟ ಮಾಡಲು ಪ್ರಾರಂಭ ಮಾಡಿದ ತಕ್ಷಣ ಈ  ಮಾಧ್ಯಮಗಳು ಏಕೆ ಅದಕ್ಕೆ ಕೋಮುವಾದದ ಬಣ್ಣ ಹಚ್ಹುತ್ತಿವೆಯೋ ಅ ದೇವರೇ ಬಲ್ಲ ” ಟೈಮ್ಸ್ ನೌ” ಅರ್ನಬ್ ಗೋಸ್ವಾಮಿ ಇರಬಹುದು ಅಥವಾ “ಸಿಎನ್‍ಎನ್‍”  ನ ರಾಜ್ದೀಪ್ ಸರ್ದೇಸಾಯಿ ಇರಬಹುದು, ಶಾರುಕ್ ಖಾನ್, ಸಲ್ಮಾನ್ ಖಾನ್ ,ಶೋಭಾ ಡೆ ಮುಂತಾದ ಸೆಲೆಬ್ರಿಟಿಗಳು ಆಗಿರಬಹುದು, ಬಾಬಾ ರಾಮದೇವ್ ಮಾಡುತ್ತಿರುವುದು ನಾಟಕ ಅವರಿಗೆ ಯೋಗ ಹೇಳಿಕೊಡುವುದು ಬಿಟ್ಟು ಈ ಕೆಲಸ ಯಾಕೆ ಅಂತ ಕೇಳುತಿದ್ದಾರೆ .ಕಾಂಗ್ರೆಸ್ಸ್ ನ ದಿಗ್ವಿಜಯ್ ಸಿಂಗ್ ಅಂತು ಗಂಟೆಗೊಂದು ಹೇಳಿಕೆ ರಾಮದೇವ್ ವಿರುದ್ದ ನೀಡುತಿದ್ದಾರೆ  ಆದರೆ ಅತ್ತ ಅವರ ಪಕ್ಷದ ಹಿರಿಯ ಸಚಿವರೆಲ್ಲ ಬಾಬ ಅವರನ್ನ ಮೀಟ್ ಮಡಿ ಕಾಂಪ್ರಮೈಸ್‍ ಅಗೋ ತಂತ್ರ ಹೆಣೆಯುತಿದ್ದಾರೆ .

ಇಷ್ಟಕ್ಕೂ ಮಾಧ್ಯಮದವರು ಕೋಮುವಾದದ ಬಣ್ಣ ಕಟ್ಟುತ್ತಿರುವುದು ಯಾಕೆ ರಾಮದೇವ್ ಅವರು ಕಾವಿ ವಸ್ತ್ರ ಧರಿಸಿ ಮರದ ಪಾದರಕ್ಷೆ ಧರಿಸಿದ್ದಾರೆ ಅಂತಲೇನು?? ಭ್ರಷ್ಟಾಚಾರದ ವಿರುದ್ದ ಹೋರಾಡಲು ಕಾವಿಯದರೇನು ಕಪ್ಪು ವಸ್ತ್ರವಾದರೇನು ? ಮರದ ಚಪ್ಪಲಿ ಅದರೇನು ADIDAS ಶೂ ಅದರೇನು? ಭಾರತದ ಪ್ರತಿಯೊಬ್ಬ ಪ್ರಜೆಗೂ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಹಕ್ಕಿದೆ, ಎಲ್ಲ ಡಾಕುಮೆಂಟ್ ಸರಿ ಇದ್ದರು ಪೋಲಿಸ್ ಗಾಡಿ ಅಡ್ಡ ಹಾಕಿದ ಮೇಲೆ 50 ರೂಪಾಯಿ ಲಂಚ ಕೊಟ್ಟ ಪ್ರತಿಯೊಬ್ಬ ನಾಗರಿಕನಿಗೂ ಅವಾಜ್ ಹಾಕುವ ತಾಕತ್ತಿದೆ. ಈ ಎಲ್ಲ ಭಾರತದ ಪ್ರಜೆಗಳಲ್ಲಿ ಬಾಬಾ ರಾಮದೇವ್ ಸಹ ಒಬ್ಬರು ಎಂದು ಏಕೆ ಮಾಧ್ಯಮದವರು ಬಿಂಬಿಸಬಾರದು? ಮಾಧ್ಯಮಗಳಲ್ಲಿ ಅಪ ಪ್ರಚಾರ ಮಾಡಿ ಹೋರಾಟಕ್ಕೆ ತೊಡಕು ಮಾಡಲು ಕಾಂಗ್ರೆಸ್ ಗೆ ಸಹಾಯ ಮಾಡುವ ತಂತ್ರವಾ? ರಾಜಕೀಯ ವ್ಯಕ್ತಿಗಳಿಗೆ ಹೋರಾಟದಲ್ಲಿ ನಿಷೇಧ ಇದೆ ಆದ್ದರಿಂದ ಈ ಹೋರಾಟದಲ್ಲಿ ಯಾವುದೇ ಪಕ್ಷಗಳಿಗೆ ಲಾಭವಂತು ಇಲ್ಲ.ಈ ಹೋರಾಟದ ಯೆಶಸ್ಸಿನಿಂದ ಲಾಭವಗೋದು ನಾಗರಿಕರಿಗೆ. ಆದರೆ ವಿರೋಧ ಪಕ್ಷದಲ್ಲಿರುವ ಬಿಜೆಪಿ ತನ್ನ ಚುನಾವಣೆಯ ಪ್ರಣಾಳಿಕೆಯಲ್ಲೇ ಕಪ್ಪು ಹಣವನ್ನು ತರುವ ಪ್ರಸ್ತಾವನೆ ಮಾಡಿತ್ತು. ಈಗ ಬೆಂಬಲ ಸೂಚಿಸಿದೆ. ಅದಕ್ಕೆ ಮಾಧ್ಯಮಗಳ ಕಣ್ಣಿಗೆ ಬಾಬಾ ರಾಮದೇವ್ ಬಿಜೆಪಿ ಏಜೆಂಟ್ ಆಗಿದ್ದಾರೆ.

ಮತ್ತಷ್ಟು ಓದು »

18
ಮೇ

ನೈತಿಕತೆಯ ದ್ರಷ್ಟಾರರ ನೈತಿಕತೆಯ ಸಿಧ್ಧಾ೦ತ!!

– ರಾಘವೇಂದ್ರ ನಾವಡ

ಮೂರು ವರ್ಷಗಳ ಹಿ೦ದೆ ಕನ್ನಡಿಗರು ಭಾ.ಜ.ಪಾವನ್ನು ಕಾ೦ಗ್ರೆಸ್ ಹಾಗೂ ಜೆ.ಡಿ,.ಎಸ್. ಗಳಿಗೆ ಪರ್ಯಾಯವೆ೦ದೋ, ಕುಮಾರಸ್ವಾಮಿ ಹೇಳಿದ ಮಾತಿನ೦ತೆ ಅಧಿಕಾರ ಕೊಡದೆ ಯಡಿಯೂರಪ್ಪ  ಆಗ ಹರಕೆಯ ಕುರಿಯಾಗಿದ್ದಕ್ಕೋ… ಕೇವಲ ೮ ದಿನಗಳ ಅಧಿಕಾರವನ್ನು ಮಾತ್ರವೇ ಅನುಭವಿಸಿದರು ಪಾಪ! ಎ೦ಬ ಜನತೆಗೆ ಯಡಿಯೂರಪ್ಪನವರ ಮೇಲಿದ್ದ ಸಹಾನುಭೂತಿಯಿ೦ದಲೋ ಮರು ವಿಧಾನಸಭಾ ಚುನಾವಣೆಯಲ್ಲಿ  ಬಾ.ಜ.ಪಾ. ೧೧೦ ಸ್ಥಾನಗಳನ್ನು ಗೆದ್ದು ಪಕ್ಷೇತರರ ಸಹಾಯದಿ೦ದ ಅಧಿಕಾರದ ಗದ್ದುಗೆ ಏರಿತು. ಯಡಿಯೂರಪ್ಪನವರ ಸ೦ಪೂರ್ಣ ಜೀವನವೇ ಸ೦ಘರ್ಷಮಯವೆ೦ದು ಜಾತಕದಲ್ಲಿ ಬರೆದಿದೆಯೇನೋ!! ಅಲ್ಲಿ೦ದ ಇಲ್ಲಿಯವರೆವಿಗೂ ನಮ್ಮ ಮುಖ್ಯಮ೦ತ್ರಿಗಳು ಸರಿಯಾಗಿ ನಿದ್ರೆಯನ್ನೇ ಮಾಡಿರಲಿಕ್ಕೆ ಸಾಧ್ಯವಿಲ್ಲ! ಒ೦ದಲ್ಲಾ, ಒ೦ದು ವಿವಾದಗಳು  ಯಡಿಯೂರಪ್ಪನವರ ಬೆನ್ನು ಹತ್ತಿದ ಬೇತಾಳಗಳ೦ತೆ ಹೆಗಲಿಗೇರಿದವು. ಆದರೂ ಅದೃಷ್ಟ ಗಟ್ಟಿಯಿದ್ದುದ್ದಕ್ಕೋ ಏನೋ.. ಅಥವಾ ನಾಡಿನ ಸಮಸ್ತ ಅಧ್ಯಾತ್ಮಿಕ ಸ೦ತರುಗಳ ಆಶಿರ್ವಾದದ ಬಲದಿ೦ದಲೋ ಏನೋ ಇಲ್ಲಿಯವರೆವಿಗೂ ಕುರ್ಚಿಯನ್ನುಳಿಸಿಕೊ೦ಡಿದ್ದಾರೆ.. ಇನ್ನು ಮು೦ದೆ ಅದ್ಯಾವ ದಿವ್ಯ ಹಸ್ತವೂ ಯಡಿಯೂರಪ್ಪನವರ ನೆತ್ತಿಯನ್ನು ನೇವರಿಸಲಾರದು ಎ೦ಬ ಸತ್ಯ ಅರಿವಾಗಿದೆ!

ಈ ಯಡಿಯೂರಪ್ಪನವರು ಹುಟ್ಟಾ “ಮು೦ಗೋಪಿ“ ಎ೦ಬುದು ಸರ್ವವೇದ್ಯ! ಆದರೆ ಅದರ ಜೊತೆಗೆ ಈಗ ಇನ್ನೊ೦ದನ್ನೂ ಸೇರಿಸಿಕೊಳ್ಳೋಣ.. ನಮ್ಮ ಯಡಿಯೂರಪ್ಪನವರಷ್ಟು “ಮಹಾ ಗಡಿಬಿಡಿ ಪುರುಷ “ ಮತ್ತೊಬ್ಬನಿರಲಿಕ್ಕಿಲ್ಲ!! ಎಲ್ಲರನ್ನೂ ಸಮಾನವಾಗಿ ಕರೆದುಕೊ೦ಡು ಹೋಗುವ ಸ್ವಭಾವ ಇವರಿಗಿಲ್ಲವೇ ಇಲ್ಲ. ಎಲ್ಲ್ಲಾ ಹದಿನಾರು ಶಾಸಕರನ್ನು ಅರ್ಹರೆ೦ದು ಸುಪ್ರೀ೦ ಕೋರ್ಟ್ ಅನರ್ಹತೆಯಿ೦ದ ಮುಕ್ತರನ್ನಾಗಿಸಿದ ಕೂಡಲೇ, ಪಕ್ಷದ ಶಾಸಕಾ೦ಗ ಸಭೆಯನ್ನು ಕರೆದು, ಹದಿನಾರು ಶಾಸಕರನ್ನು ಪಕ್ಕದಲ್ಲಿ ಕೂರಿಸಿಕೊ೦ಡು “ಏನ್ರಪ್ಪಾ.. ಏನು ನಿಮ್ಮ ನಿರ್ಧಾರ?“ ಎ೦ದು ಸಮಾಧಾನವಾಗಿ, ವರಿಷ್ಟರ ಸಮ್ಮುಖದಲ್ಲಿ ಅವರನ್ನು ಒಲಿಸಿಕೊ೦ಡಿದ್ದರೆ ಏನಾಗುತ್ತಿತ್ತು? ಅದನ್ನು ಬಿಟ್ಟು, ಹಿ೦ದೆ ಕೊಟ್ಟಿದ್ದ ಅವಿಶ್ವಾಸ ಪತ್ರಗಳನ್ನು ವಾಪಾಸು ತರಲು ರಾಜಭವನಕ್ಕೆ ಕಳುಹಿಸಿಕೊಡುವ ಏರ್ಪಾಟು!ಇವರೆಲ್ಲಾ ಸ೦ವಿಧಾನಾತ್ಮಕವಾಗಿ ಆರಿಸಿ ಹೋದ ಜನಪ್ರತಿನಿಧಿಗಳು ಎ೦ಬುದನ್ನೇ ಮರೆತರೆ ಹೇಗೆ?
ಮತ್ತಷ್ಟು ಓದು »

17
ಮೇ

ಅ”ರಾಜಕೀಯ”

– ವಿಜಯ ಹೆರಗು

     ರ್ನಾಟಕದ ಮಹಾಜನತೆಯ ದೌರ್ಭಾಗ್ಯಕ್ಕೆ ಅಂತ್ಯವೇ ಇಲ್ಲವೇನೋ ಎನ್ನಿಸುತ್ತಿದೆ. ಕರ್ನಾಟಕದ ರಾಜಕೀಯ ವಿದ್ಯಮಾನ ದಿನಕ್ಕೊಂದು, ಕ್ಷಣಕ್ಕೊಂದು ಬಣ್ಣ ಬದಲಾಯಿಸುತ್ತಿದೆ. ರಾಜಕೀಯ ರಂಗದ ಅನಿಶ್ಚಿತತೆ, ಅರಾಜಕತೆ ಮತ್ತೊಮ್ಮೆ ತನ್ನ ವಿರಾಟ್ ರೂಪದ ಪ್ರದರ್ಶನ ನೀಡಿದೆ. ಹದಿನಾರು ಶಾಸಕರ ಅನರ್ಹತೆಯ ಆದೇಶವನ್ನು ಸುಪ್ರೀಂ ಕೋರ್ಟ್ ಅನೂರ್ಜಿತಗೊಳಿಸಿದ ಬೆನ್ನಲ್ಲೇ ಆಡಳಿತ ಪಕ್ಷ, ವಿರೋಧ ಪಕ್ಷಗಳು ತಮ್ಮ ಬಲಾಬಲ ಪ್ರದರ್ಶನಕ್ಕೆ ಸಜ್ಜಾಗಿವೆ.

 ಅತ್ತ ಬಿಜೆಪಿ ಹೈಕಮಾಂಡಿನ ಹಿರಿತಲೆಗಳು ಹನ್ನೊಂದು ಮಂದಿ ಬಂಡಾಯ ಶಾಸಕರಲ್ಲಿ ಹತ್ತು ಮಂದಿಯನ್ನು ಕರೆದು ಓಲೈಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾವ ಯಡಿಯೂರಪ್ಪನವರ ನಾಯಕತ್ವವನ್ನು ಪ್ರಶ್ನಿಸಿ ಬಂಡೆದಿದ್ದರೋ ಅದೇ ಯಡಿಯೂರಪ್ಪನ ಮುಂದೆ ಮಂಡಿಯೂರಿ ಶರಣಾಗಿ ನೀವೇ ನಮ್ಮ ನಾಯಕ ಎನ್ನುತ್ತಾ ತಲೆಬಾಗಿ ನಿಂತ ಇವರ ಭಂಗಿ ಅಸಹ್ಯವನ್ನುಂಟು ಮಾಡುತ್ತದೆ. ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುವಲ್ಲ-ಶಾಶ್ವತ ಮಿತ್ರರಲ್ಲ ಎಂಬ ಮಾತು ಮತ್ತೊಮ್ಮೆ ನಿಜವಾಗಿದೆ.
                            ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ಖುರ್ಚಿ ಉಳಿಸಿಕೊಳ್ಳುವ ಸಲುವಾಗಿ ಹೊರಾದುವುದನ್ನೇ ಆಡಳಿತ ಎಂದು ತಿಳಿದಂತಿದೆ. ಅಧಿಕಾರಕ್ಕೆ ಬಂದ ದಿನದಿಂದ ಇಂದಿನವರೆಗೂ ತಮ್ಮದೇ ಪಕ್ಷದ ನಾಯಕರಿಂದ, ಹೊರಗಿನವರಿಂದ ಪ್ರಬಲ ಪ್ರತಿರೋಧ ಎದುರಿಸುತ್ತಿದ್ದರೂ ಮುಖ್ಯಮಂತ್ರಿ ಪಟ್ಟ ಉಳಿಸಿಕೊಳ್ಳುವ ಸಲುವಾಗಿ ದಿನಕ್ಕೊಂದು ಪಟ್ಟು ಹಾಕುತ್ತಿದ್ದಾರೆ. 
16
ಮೇ

ಒಸಾಮ ಸತ್ತ… ಭಾರತ ಬದುಕಿದೆಯಾ!?

– ರಾಕೇಶ್ ಶೆಟ್ಟಿ

ತನ್ನ ಮಕ್ಕಳಿಗೆ ಮಾತ್ರ ’ಜಿಹಾದ್’ನೆಡೆಗೆ ಬರಬೇಡಿ ನನ್ನಾಣೆ ಅಂತೇಳಿ, ಕಂಡೋರ ಮಕ್ಕಳ ಬೆನ್ನ ಹಿಂದೆ ಅವಿತು ಕುಳಿತು ಮನುಶ್ಯರನ್ನ ಹುಳಗಳಿಗಿಂತ ಕಡೆಯದಾಗಿ ಸಾಯಿಸಿದ ಒಸಾಮ ಅನ್ನುವ ಸೈತಾನನೊಬ್ಬ ಸತ್ತರೆ ನಾವ್ಯಾಕೆ ಕುಣಿಯಬಾರದು!? ಕುಣಿದರೇನು ತಪ್ಪು?ಇನ್ನೇನು ಅಳಬೇಕಿತ್ತಾ?

ಒಸಾಮ ಸತ್ತರೆ ನಾವ್ಯಕೆ ಕುಣಿಯಬೇಕು? ಅನ್ನುವ ಬರಹವನ್ನೋದಿದೆ.ಅದರಲ್ಲಿ ’ದೇಶ ಪ್ರೇಮ’ ಅನ್ನುವ ಪದದ ಬಗ್ಗೆಯೂ ಉಡಾಫ಼ೆಯಿದೆ.ದೇಶಪ್ರೇಮ ಅನ್ನುವುದನ್ನ ತಾವು ವಿರೋಧಿಸುವ ಪಕ್ಷ/ಸಂಘಟನೆಯ ಗುತ್ತಿಗೆ ಕೊಡಲಾಗಿದೆಯೆಂಬಂತೆ,ಅವರು ಮಾತ್ರವೇ ದೇಶ ಪ್ರೇಮಿಗಳು ಅಂದುಕೊಂಡು,ಅವರ ಮೇಲಿನ ಅಸಹನೆಯನ್ನ ’ದೇಶ ಪ್ರೇಮಿ’ಗಳು ಅನ್ನುವ ಪದಕ್ಕೆ ಜೋಡಿಸಿ ಮಾತನಾಡಿದ್ದಾರೆ ಲೇಖಕರು.

ಮತ್ತಷ್ಟು ಓದು »