ಕುರುಕ್ಷೇತ್ರದ ಯುದ್ಧಕ್ಕೆ ಕೃಷ್ಣನೇ ಸರಿ ಅಣ್ಣಾ !
– ರಾಕೇಶ್ ಶೆಟ್ಟಿ
ಕುಂಭಕರ್ಣ ನಿದ್ದೆಯಿಂದ ಎದ್ದ ಭಾರತವನ್ನ ಮತ್ತೆ ನಿದ್ದೆಗೆ ದೂಡಲಾಗುತ್ತಿದೆಯಾ? ಇಂತದ್ದೊಂದು ಪ್ರಶ್ನೆ ಕಾಡಲಾರಂಭಿಸಿದೆ.ಕೆಲವೆ ದಿನದ ಹಿಂದೆ ಅಣ್ಣಾ ಹಜ಼ಾರೆಯವರ ಉಪವಾಸ ಸತ್ಯಾಗ್ರಹದಿಂದ ನಿದ್ದೆಯಲ್ಲಿದ್ದ ಜನ (ಎಲ್ಲ ಜನ ಅಂತೇಳಲು ಸಾಧ್ಯವಿಲ್ಲ) ಎದ್ದು ಬಂದು, ಕಡೆಗೆ ಸೋನಿಯಾ ಮೇಡಂ ಅವರ ಯುಪಿಎ ಸರ್ಕಾರ ಅಣ್ಣನ ಮುಂದೆ ಮಂಡಿಯೂರಿ ಕುಳಿತಾಗಲೇ, ‘ಪಿಕ್ಚರ್ ಅಭಿ ಬಾಕಿ ಹೈ ಮೇರಿ ದೋಸ್ತ್’ ಅಂತ ಬಹುಷಃ ಬಹುತೇಕರಿಗೆ ಅನ್ನಿಸಿತ್ತು.ಅದನ್ನ ನಿಜ ಮಾಡಲೆಂಬಂತೆ ಜನಲೋಕಪಾಲ ಸಮಿತಿ ರಚನೆಯಾದ ಮರುದಿನವೇ ಕೇಂದ್ರ ಮಂತ್ರಿ ಕಪಿಲ್ ಸಿಬಲ್, ಖುದ್ದು ಸಮಿತಿಯ ಸದಸ್ಯರಾಗಿದ್ದೂ, ಸಮಿತಿಯ ಬಗ್ಗೆ ಕೊಂಕು ನುಡಿದು,ಕಡೆಗೆ ನಂಬಿಕೆಯಿಲ್ಲದಿದ್ದರೆ ತೊಲಗಿ ಅಂತ ಅಣ್ಣಾ ಗದರಿದ್ಮೇಲೆ ಯಥಾಪ್ರಕಾರ ರಾಜಕಾರಣಿಗಳ ಹೇಳಿಕೆಯಂತೆ ’ತಪ್ಪಾಗಿ ಅರ್ಥೈಸಲಾಗಿದೆ; ಅಂತೇಳಿ ತೇಪೆ ಹಾಕಿದ್ರು.ಮೊಯ್ಲಿ,ಮನೀಶ್ ತಿವಾರಿಯವ್ರು ಕೊಂಕಿಸಿದ್ದಾಯ್ತು.
ಬಹುಷಃ ಗಾಂಧೀಜಿ,ಜೆಪಿ ನಂತರ ಈ ಮಟ್ಟಕ್ಕೆ ಜನರನ್ನ ಸೆಳೆದಿದ್ದು ಅಣ್ಣಾ ಹಜ಼ಾರೆಯವರೇ ಇರಬೇಕು.ಅವರ ಈ ಪರಿಯ ಜನಪ್ರಿಯತೆ ಪುಡಿವೋಟಿಗಾಗಿ ದೇಶವನ್ನೆ ಬೇಕಾದರು ಮಾರಬಲ್ಲ (ಪುರುಲಿಯಾ ಶಸ್ತ್ರಾಸ್ತ್ರ ಕರ್ಮಕಾಂಡಕ್ಕಿಂತ ದೇಶವನ್ನ ಅಡ ಇಡುವ ಉದಾಹರಣೆ ಬೇಕಾ?) ಹಗಲು ವೇಷದ ರಾಜಕಾರಣಿಗಳ ಕಣ್ಣು ಕೆಂಪಗಾಗುವಂತೆ ಮಾಡಿದ್ದು ಸುಳ್ಳಲ್ಲ.ಸಾಲಾಗಿ ಎಲ್ಲ ಅಣ್ಣನ ವಿರುದ್ಧ ಸದ್ದಿಲ್ಲದೆ ಕೆಲಸ ಶುರು ಹಚ್ಚಿಕೊಂಡರು…!
ಸೀಟ್ ಬೇಕು ಆದ್ರೆ ರಾಜ್ಯ ಬೇಡಾ….
– ಚೇತನ್ ಜೀರಾಳ್
ಡಾ. ಬಿ. ಆರ್. ಅಂಬೇಡ್ಕರ್ ಅವರ ಜನುಮ ದಿನದಂದು ಒಂದು ಸೋಜಿಗದ ವಿಷಯ ಹೊರಬಿದ್ದಿದೆ. ಪತ್ರಿಕೆಗಳಲ್ಲಿ ಇದರ ಬಗ್ಗೆ ವರದಿಯಾದರು ಸಹ, ಇದನ್ನ ಪತ್ರಿಕೆಗಳು ಗಂಭೀರವಾಗಿ ಪರಿಗಣಿಸಿದಂತೆ ಕಾಣಲಿಲ್ಲ. ವಿಷಯ ಏನಪ್ಪ ಅಂದರೆ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ ಸಿಂಗ್ ಅವರು, ಸದ್ಯಕ್ಕೆ ಅಸ್ಸಾಂ ರಾಜ್ಯದಲ್ಲಿ ನೆಲೆಸುತ್ತಿದ್ದಾರೆ ಅನ್ನೋದನ್ನ ದಾಖಲೆಗಳು ಹೇಳುತ್ತಿವೆ. ಮನಮೋಹನ್ ಸಿಂಗ್ ಹಾಗೂ ಅವರ ಪತ್ನಿ ದಿಸ್ಪುರ್ ಕ್ಷೇತ್ರದ ಮತದಾರರಾಗಿದ್ದು, ಈ ಸಾರಿಯ ಚುನಾವಣೆಯಲ್ಲಿ ಮತದಾನ ಮಾಡಿಲ್ಲ ಅಂತ ಪತ್ರಿಕೆಗಳಲ್ಲಿ ವರದಿಯಾಗಿದೆ ಹಾಗೂ ಇದನ್ನ ಆ ಕ್ಷೇತ್ರದ ಉಸ್ತುವಾರಿ ವಹಿಸಿದ್ದ ಚುನಾವಣಾ ಅಧಿಕಾರಿ ಸಹ ನಿಜವೆಂದು ಹೇಳಿದ್ದಾರೆ.
ಮುಖ್ಯವಾದ ವಿಷ್ಯ ಏನಪ್ಪಾ ಅಂದ್ರೆ ಡಾ. ಮನಮೋಹನ್ ಸಿಂಗ್, ಅಸ್ಸಾಂನಿಂದ ರಾಜ್ಯ ಸಭೆಗೆ ಆಯ್ಕೆಯಾಗಿ ಬಂದಿದ್ದಾರೆ ಹಾಗೂ ಹಿಂದೆಯೂ ಆಯ್ಕೆಯಾಗಿದ್ದರು. ಮತದಾನ ಪ್ರತಿಯೊಬ್ಬ ನಾಗರೀಕನ ಮೂಲ ಕರ್ತವ್ಯ ಎಂದು ನಮ್ಮ ಸಂವಿಧಾನದಲ್ಲಿ ಹೇಳಲಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಒಂದು ಜನಪ್ರಿಯ ಸರ್ಕಾರವನ್ನು ಆರಿಸಲು ಪ್ರತಿಯೊಬ್ಬ ಪ್ರಜೆಗೂ ನೀಡಲಾಗಿರುವ ಪವಿತ್ರ ಹಕ್ಕು ಅನ್ನೋದನ್ನ ನಮ್ಮ ದೇಶದ ಪ್ರಧಾನ ಮಂತ್ರಿಗಳು ಮರೆತು ಬಿಟ್ಟಿದ್ದಾರೆಯೇ?? ಪ್ರಜ್ಞಾವಂತ ಜನರು ಚುನಾವಣೆಯಿಂದ ವಿಮುಖರಾಗುತ್ತಿದ್ದಾರೆ ಎಂದು ಹೇಳುತ್ತಿರವ ಈ ಸಮಯದಲ್ಲಿ ಒಬ್ಬ ರಾಜಕಾರಣಿ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿರುವ ಮನಮೋಹನ್ ಸಿಂಗ್ ಅವರಿಂದ ಇಂತಹ ನಡೆ ಸರಿಯಾದುದಲ್ಲ.
ಕನ್ನಡ ಆಡಳಿತ ಭಾಷೆ ಯಾಕಾಗಿಲ್ಲ ಗೊತ್ತೆ!?
– ವಸಂತ್ ಶೆಟ್ಟಿ
ಕನ್ನಡ ನಾಡು ಏಕೀಕರಣಗೊಂಡು ದಶಕಗಳೇ ಕಳೆದರೂ ಕನ್ನಡ ಎಲ್ಲ ಹಂತದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಂಡಿಲ್ಲ ಅನ್ನುವ ಕೂಗು ನಾವೆಲ್ಲರೂ ಕೇಳಿಯೇ ಇರುತ್ತೇವೆ. ಇದಕ್ಕೆ ಸರ್ಕಾರದ ಇಚ್ಛಾಶಕ್ತಿಯ ಕೊರತೆಯೇ ಕಾರಣ ಎಂದೂ ಕೇಳಿರುತ್ತೇವೆ. ಭಾಷಾ ವಿಜ್ಞಾನಿ ಕೆ.ವಿ.ನಾರಾಯಣ ಅವರ ಕನ್ನಡ ಜಗತ್ತು: ಅರ್ಧ ಶತಮಾನ ಅನ್ನುವ ಹೊತ್ತಗೆ ಓದುತ್ತಾ ಇದ್ದೆ. ಅಲ್ಲಿ ಈ ಬಗ್ಗೆ ಅವರು ಕೊಡುವ ವಿವರಣೆ ಒಂದು ರೀತಿಯಲ್ಲಿ ಬೇರೆಯಾಗಿದೆ ಅನ್ನಬಹುದು. ಸರ್ಕಾರದ ಹೆಚ್ಚಿನ ಪ್ರಯತ್ನ (ಬಾಯಿ ಮಾತಲ್ಲಿ ಅಂತ ಬೇಕಾದ್ರೂ ಅಂದುಕೊಳ್ಳೊಣ 🙂 )ದ ನಂತರವೂ ಆಡಳಿತದಲ್ಲಿ ಕನ್ನಡ ಬಳಕೆ ಒಂದು ರೀತಿಯಲ್ಲಿ ಪಿರಮಿಡ್ ನಂತೆ ನಮಗೆ ಗೋಚರಿಸುತ್ತೆ. ಕೆಳ ಹಂತದಲ್ಲಿ ಕನ್ನಡ ವ್ಯಾಪಕವಾಗಿ ಬಳಕೆಯಾದರೆ, ಮೇಲೆ ಮೇಲೆ ಹೋದಂತೆ ಅದರ ಪ್ರಮಾಣ ಕಡಿಮೆಯಾಗುತ್ತ ಹೋಗುತ್ತದೆ. ಹಾಗಿದ್ದರೆ ಆಡಳಿತದಲ್ಲಿ ಕನ್ನಡದ ಬಳಕೆ ಅಂದುಕೊಂಡ ಮಟ್ಟದಲ್ಲಿ ಗೆಲುವು ಪಡೆಯದಿರಲು ಕಾರಣವೇನು ಎಂದು ಅವರು ಕೊಟ್ಟ ವಿವರಣೆಯನ್ನು ಈ ಕೆಳಗೆ ಕೊಟ್ಟಿರುವೆ.
ಈ ಅಪಯಶಸ್ಸನ್ನು ಎರಡು ದಿಕ್ಕಿನಿಂದ ವಿಶ್ಲೇಷಿಸಬೇಕಾದ ಅಗತ್ಯವಿದೆ. ಕಾರ್ಯಕ್ರಮ ಯಶಸ್ಸು ಪಡೆಯದಿರಲು ಅದರ ಹಿಂದಿನ ಯೋಜನಾ ತಂತ್ರಗಳಲ್ಲಿ ಕೊರತೆ ಇರುತ್ತದೆ. ಅಥವಾ ಅನುಷ್ಠಾನದ ಹಂತದಲ್ಲಿ ಹಲವು ಎಡರು ತೊಡರುಗಳಿರಬೇಕು. ಈ ದಿಕ್ಕಿನಿಂದ ನೋಡಿದಾಗ ಕನ್ನಡ ಅನುಷ್ಠಾನಕ್ಕೆ ಬೇಕಾದ ಭಾಷಾನೀತಿ ಮತ್ತು ಯೋಜನೆಗಳು ರಾಜ್ಯ ಸರ್ಕಾರಕ್ಕೆ ಇಲ್ಲವೆಂಬ ನಿರ್ಣಯಕ್ಕೆ ಬರುವುದು ಸಾಧ್ಯ. ಆದರೆ ಇದನ್ನು ಇನ್ನೊಂದು ದಿಕ್ಕಿನಲ್ಲಿ ನೋಡಿದಾಗ ಬೇರೆಯ ಸಾಧ್ಯತೆ ಗೋಚರಿಸುತ್ತದೆ.
ವೋಟ್ ಬ್ಯಾಂಕ್ ಭಾಷೆಯಾಗಲಿ ಕನ್ನಡ
– ರಾಕೇಶ್ ಶೆಟ್ಟಿ
ಪತ್ರಿಕೆಗಳಲ್ಲಿ ಆಗೀಗ ‘ಅನ್ನ ಕೊಡುವ ಭಾಷೆಯಾಗಲಿ ಕನ್ನಡ’ ಅನ್ನೋ ಕಳಕಳಿಯ ಲೇಖನಗಳು ಬರುತ್ತಲೇ ಇರುತ್ತವೆ.ಒಂದೆಡೆ ‘ಸರ್ವಂ ಇಂಗ್ಲೀಶ್ ಮಯಂ’ ಮತ್ತೊಂದೆಡೆ ‘ಏಕಮ್ ಭಾರತಂ ಹಿಂದಿಮಯಂ’ (ಈ ಮಂತ್ರ ಸರಿ ಇಲ್ಲ ಅಂತೆಲ್ಲ ಹೇಳ್ಬೆಡಿ 😉 ) ಅನ್ನೋ ಕೇಂದ್ರದ ನೀತಿಯ ನಡುವೆ ಕನ್ನಡ ‘ಅನ್ನ’ ಕೊಡುವ ಭಾಷೆಯಾಗುವುದು ಹೇಗೆ? ನನಗನ್ನಿಸುವ ಹಾಗೆ, ಈಗಿನ ಪರಿಸ್ಥಿತಿಯಲ್ಲಿ ಅನ್ನ ಕೊಡುವ ಭಾಷೆಯಾಗುವ ಶಕ್ತಿ ಬರಬೇಕೆಂದರೆ ಮೊದಲು ‘ವೋಟ್ ಕೊಡುವ ಭಾಷೆಯಾಗಬೇಕು ಕನ್ನಡ’.ಎಲ್ಲ ಪಕ್ಷಗಳು ಕುಣಿಯುವುದು ವೋಟಿಗಾಗಿ,ಪುಡಿ ವೋಟಿಗಾಗಿ ಅನ್ನೋ ಕಾಲವಿದು.ವೋಟಿಗಿರುವಷ್ಟು ಶಕ್ತಿ ಸದ್ಯಕ್ಕೆ ಯಾವುದಕ್ಕಿದೆ ನೀವೇ ಹೇಳಿ?
ಕೆಲವರು ನನ್ನ ಮಾತನ್ನು ಒಪ್ಪಬಹುದು ಇನ್ನ ಕೆಲವರು ಇದನ್ನ ನಿರಾಕರಿಸಬಹುದು. ನಿರಾಕರಿಸುವವರು ಭಾರತದ ರಾಜಕೀಯ ಇತಿಹಾಸವನ್ನೊಮ್ಮೆ ನೋಡುತ್ತಾ ಬನ್ನಿ.ಗಾಂಧೀಜಿ ಕಾಲದಿಂದ ಇಂದಿನವರೆಗೂ ನಮ್ಮಲ್ಲಿ ನಡೆಯುತ್ತಿರುವುದೇ ಓಲೈಕೆಯ ವೋಟ್ ಬ್ಯಾಂಕ್ ರಾಜಕಾರಣ ಅಲ್ವಾ?





