ವಿಷಯದ ವಿವರಗಳಿಗೆ ದಾಟಿರಿ

Posts tagged ‘ಲಾಲ್ ಕೃಷ್ಣ ಅಡ್ವಾಣಿ’

21
ಫೆಬ್ರ

ರಾಜಿನಾಮೆ ಕೊಡಲು ಸಿದ್ಧ !

– ನವೀನ್ ನಾಯಕ್

ಅಟಲ್,ಅಡ್ವಾಣಿ,ಮೋದಿರಾಜಿನಾಮೆ ಕೊಡಲು ಸಿದ್ಧ !
ಯಾರು ಗೊತ್ತೇ ಹೀಗೆ ಹೇಳಿದ್ದು ? ನರೇಂದ್ರ ಮೋದಿಯವರು !

ಅಡ್ವಾಣಿ ಮತ್ತು ಅಟಲ್ ಜೀಯರ ನಡುವೆ ಎದ್ದ ಭಿನ್ನಾಭಿಪ್ರಾಯಗಳಲ್ಲಿ ಮಹತ್ವದ ಎರಡು ಘಟನೆಗಳು ಒಂದು ಅಯೋಧ್ಯಾ ವಿಚಾರ ಇನ್ನೊಂದು ಮೋದಿಯವರ ರಾಜಿನಾಮೆ ವಿಚಾರ. ಮೋದಿಯವರ ವಿಚಾರದಲ್ಲಿ ಅಡ್ವಾಣಿಯವರು  ತಮ್ಮ ದೃಷ್ಟಿಕೋನವನ್ನು ಬೇರೆ ರೀತಿಯಾಗಿಸಿಕೊಂಡರು. ದಂಗೆಯ ಸಮಯದಲ್ಲಿ ಗುಜರಾತಿಗೆ ತೆರಳಿ ಅಲ್ಲಿಯ ಸಮಾಜದ ವಿವಿಧ ವರ್ಗಕ್ಕೆ ಸೇರಿದ ಅಪಾರ ಜನದೊಂದಿಗೆ ಮಾತನಾಡಿ ಸರಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಅರಿತುಕೊಂಡರು. ಕ್ರಮಗಳ ಕುರಿತು ಅಲ್ಲಿಯ ಜನತೆ ತೃಪ್ತಿಯನ್ನು ಹೊಂದಿತ್ತು. ಇದರಿಂಧ ಮೋದಿಯವರು ಅಪರಾಧಿಯಾಗಿರಲಿಲ್ಲ ಬದಲಾಗಿ ಅವರು ಸ್ವಯಂ ರಾಜಕೀಯ ಬಲಿಪಶುವಾಗಿದ್ದಾರೆಂಬುದು ತಿಳಿದುಕೊಂಡರು. ಆದ್ದರಿಂದ ಮುಖ್ಯಮಂತ್ರಿಯಾಗಿ ಒಂದು ವರ್ಷವೂ ಕಳೆಯದ ಮೋದಿಯವರನ್ನು ಸಂಕೀರ್ಣ ಕೋಮು ಸನ್ನಿವೇಶಕ್ಕೆ ರಾಜಿನಾಮೆ ಪಡೆಯುವುದು ಅನ್ಯಾಯವಾಗುತ್ತದೆ. ಅದಲ್ಲದೇ ರಾಜಿನಾಮೆ ಪಡೆಯುವುದರಿಂದ ಗುಜರಾತಿನ ಸಾಮಾಜಿಕ ಸ್ಥಿತಿಗತಿಯನ್ನು ಧೀರ್ಘಕಾಲೀನವಾಗಿ ಹದಗೆಡಬಹುದೆಂದು ಅಡ್ವಾಣಿಯವರು ಅರಿತುಕೊಂಡರು.

ಮತ್ತಷ್ಟು ಓದು »