ವಿಷಯದ ವಿವರಗಳಿಗೆ ದಾಟಿರಿ

Posts tagged ‘ವಿಡಂಬನೆ’

18
ಸೆಪ್ಟೆಂ

ಅನಂತ ಮುಖದ ಮೂರ್ತಿಯವರ ಕಾಲ್ಪನಿಕ ಸಂದರ್ಶನ

– ಮು ಅ ಶ್ರೀರಂಗ ಬೆಂಗಳೂರು

anantamurthyಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ನಮ್ಮ ಹೆಮ್ಮೆಯ ಯು ಆರ್ ಅನಂತಮೂರ್ತಿಯವರು ಮತ್ತೆ ಸುದ್ದಿಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರ ಬಗ್ಗೆ ಲೇಖನವೊಂದನ್ನು ಬರೆಯುವುದಕ್ಕಿಂತ ಒಂದು ಕಾಲ್ಪನಿಕ ಸಂದರ್ಶನದ ಮೂಲಕ ಅವರ ನಡೆ-ನುಡಿಗಳನ್ನು ತಿಳಿದುಕೊಳ್ಳಬಹುದು ಎಂದು ಅನಿಸಿತು. ಅನಂತಮೂರ್ತಿಯವರದ್ದು ಸಮ್ಮೋಹಕವಾದ  ರೂಪ;ಅವರ ಭಾಷಣದ ಶೈಲಿ ಅನನ್ಯ. ಆ ಮಾತಿನ ಶೈಲಿಯನ್ನು ಜ್ಞಾಪಿಸಿಕೊಂಡು ಈ ಕಾಲ್ಪನಿಕ ಸಂದರ್ಶನವನ್ನು ಓದಿದರೆ ನಿಮಗೆ ಆಪ್ತವೆನಿಸಬಹುದು. ಒಮ್ಮೆ ಪ್ರಯತ್ನಿಸಿ.

ಪ್ರಶ್ನೆ: ನಿಮ್ಮನ್ನು ಗುಲ್ಬರ್ಗ ಕೇಂದ್ರಿಯ ವಿ. ವಿ. ಕುಲಪತಿಗಳನ್ನಾಗಿ ಈಗಾಗಲೇ ಕೆಂದ್ರ ಸರ್ಕಾರ ನೇಮಿಸಿದೆ. ಇದಕ್ಕೂ ಮತ್ತು ಹಿಂದೆ ನಡೆದ ಅಸ್ಸಾಂ ಹಾಗು ಮುಂಬೈ ಗಲಭೆಗಳ ಬಗ್ಗೆ ತಾವು ಇದುವರೆಗೂ ಏನೂ ಹೇಳಿಕೆ ನೀಡದೆ ಇರುವುದಕ್ಕೂ ಏನಾದರು ಸಂಬಂಧ,ಹಿಡನ್ ಅಜೆಂಡಾ ಉಂಟೆ? ಜತೆಗೆ ಇತ್ತೀಚಿನ ಉತ್ತರ ಪ್ರದೇಶದ ಗಲಭೆಗಳ ಬಗ್ಗೆಯೂ ತಾವು ಪ್ರತಿಕ್ರಿಯಿಸಿಲ್ಲ ಏಕೆ?

ಅನಂತಮೂರ್ತಿ: ನೋಡಿ ಇದಕ್ಕೆ ಹಿಡನ್ ಅಜೆಂಡಾ ಎಂಬ ಪದದ ಪ್ರಯೋಗ ಸರಿಯಲ್ಲ. ಈ ಪ್ರಶ್ನೆಗೆ ನಾನು ಎರಡು ಆಯಾಮಗಳ ಮೂಲಕ ಉತ್ತರಿಸಲು ಪ್ರಯತ್ನಿಸುತ್ತೇನೆ. ಮೊದಲನೆಯದಾಗಿ ನಾನು ಮತ್ತು ನನ್ನ ವಿಚಾರವಾದಿ ಗೆಳೆಯರು ನಂಬಿರುವ ಸೆಕ್ಯುಲರಿಸಂ ಪ್ರಕಾರ ನಾವು ಅಂದರೆ ಬಹುಸಂಖ್ಯಾತರು ಯಾವಾಗಲು ಅಲ್ಪಸಂಖ್ಯಾತರ ಭಾವನೆಗಳಿಗೆ ಬೆಲೆ ಕೊಡಬೇಕು. ಗಾಂಧೀಜಿಯವರು ಹೇಳಿದ್ದೂ ಇದನ್ನೇ. ನಮ್ಮ ಪ್ರಜಾತಂತ್ರದ ತಳಪಾಯ ನಿಂತಿರುವುದು ನಮ್ಮ ಹಿರಿಯರ ಈ ಆಶಯಕ್ಕೆ ನಾವು ಧಕ್ಕೆ ಬಾರದಂತೆ ನಡೆದುಕೊಳ್ಳುವುದರಲ್ಲಿ ಮಾತ್ರ. ಈ ಕಾರಣದಿಂದ ನಾನು ಮತ್ತು ನನ್ನ ವಿಚಾರವಾದಿ ಗೆಳೆಯರು ತಾವು ಹೇಳಿದ ಆ ಎರಡೂ ಘಟನೆಗಳ ಬಗ್ಗೆ (ಅದು ಗಲಭೆಯಲ್ಲ) ಮೌನವಹಿಸಿದ್ದು. ಇನ್ನು ಎರಡನೇ ಆಯಾಮವೆಂದರೆ ನಾನು ಈ ನನ್ನ ೮೦ರ ವಯಸ್ಸಿನಲ್ಲಿ ಕುಲಪತಿಯಾಗಲು ಒಪ್ಪಿಕೊಂಡಿರುವುದಕ್ಕೆ ನನಗೆ “ಕುರ್ಚಿ”ಯ ವ್ಯಾಮೋಹ ಕಾರಣವೆಂದು ಅಲ್ಲಲ್ಲಿ ಕೆಲವರು ಅಂದು ಕೊಂಡಿರಬಹುದು. ಆದರೆ ಅವರು ಮರೆತಿರಬಹುದಾದ ಒಂದು ಸಂಗತಿಯೆಂದರೆ ನಾನು ಕುಲಪತಿಯಾಗಿರುವುದು ನಮ್ಮ ಸುವರ್ಣ ಕರ್ನಾಟಕದ ಒಂದು ಕೇಂದ್ರಿಯ ವಿ ವಿ ಗೆ. ಕುಲಪತಿಯಾಗಿ ಅಲ್ಲಿ ನನಗೆ ದೊರಕಬಹುದಾದಂತಹ ಅಧಿಕಾರ ಏನಿದೆ ಅದರಿಂದ ಆ ಪ್ರದೇಶದಲ್ಲಿ ಶೈಕ್ಷಣಿಕವಾಗಿ ಬದಲಾವಣೆಯ ಒಂದು ವಾತಾವರಣ ನಿರ್ಮಿಸಲು ಪ್ರಯತ್ನಿಸುವ ಆಸೆ ಇದೆ. ಅದರ ರೂಪ-ರೇಷೆಗಳ ಬಗ್ಗೆ ನಾನು ಗಾಢವಾಗಿ ಯೋಚಿಸುತ್ತಿದ್ದೆ. ನಾನು “ಮೌನಿ”ಯಾಗಿರಲು ಇದೂ ಒಂದು ಕಾರಣವಾಗಿರಬಹುದು. ಇನ್ನು ಉತ್ತರ ಪ್ರದೇಶದ ಘಟನೆಗಳ ಬಗ್ಗೆ “ಸದ್ಯದ”ಪರಿಸ್ಥಿತಿಯಲ್ಲಿ ಯಾವ ರೀತಿ ಪ್ರತಿಕ್ರಿಯಿಸಿದರೆ ಅದು ಸೆಕ್ಯುಲರ್ ಅನಿಸಿಕೊಳ್ಳಬಹುದುದೆಂದು ಯೋಚಿಸುತ್ತಿದ್ದೇನೆ.

ಮತ್ತಷ್ಟು ಓದು »

19
ಜೂನ್

ಕೃಷ್ಣ ಗಾರುಡಿ ವರ್ಸಸ್ ನರೀಂದ್ರ ಮೋಡಿ!

– ತುರುವೇಕೆರೆ ಪ್ರಸಾದ್

Modi cartoonಮೋದಿ: ಗುರುಗಳೇ, ಕಮಲ ಸೈನ್ಯದ ಮುಂದಿನ ಮಹಾಸಮರ ದಳಪತಿಯಾಗಿ  ನೇಮಿಸಲ್ಪಟ್ಟಿರುವೆ. ಕೃಪೆ ಮಾಡಿ ಆಶೀರ್ವದಿಸಿ

ಅಡ್ವಾನಿ: ಛೀ! ಗುರುದ್ರೋಹಿ, ತೊಲಗಿಲ್ಲಿಂದ! ನಿನ್ನ ಮುಖ ತೋರಿಸಬೇಡ ನನಗೆ..!

ಮೋದಿ: ಈ ದುರಾಗ್ರಹವೇಕೆ ಗುರುವೇ! ಇದು ನೀವೇ ಕಲಸಿಕೊಟ್ಟ ಪಟ್ಟು.. ಏಕೀ ವಿರೋಧ? ಗುರು ಮಿಂಚಿನ ಶಿಷ್ಯಡು ಎಂದು ಎದೆ ತಟ್ಟಿ ಹೇಳುವುದು ಬಿಟ್ಟು! ನಿಮ್ಮ ಮುಖವಾಣಿಯಾಗಿದ್ದ ನನಗೇ ನೀವು ಅಡ್ಡವಾಣಿಯಾಗುವುದೇ?

ಅಡ್ವಾನಿ: ರಥ ಹತ್ತಿ ಅತಳ ಸುತಳ ಪಾತಾಳ ಸುತ್ತಿದ  ಈ ಅತಿರಥ ಮಹಾರಥನ ಮುಂದೆ ನೀನ್ಯಾವ ಲೆಕ್ಕ?

ಮೋದಿ: ಯಾರು ತಿಳಿಯರು ನಿಮ್ಮ ರಥಬಲದ ಪರಾಕ್ರಮ

ಸಂದಿಗೊಂದಿಗಳೊಳ್  ಸಂಚರಿಸಿದ ನಿಮ್ಮ ರಥಯಾತ್ರೆಗಳ ಕರ್ಮ

ಎಲ್ಲದಕೂ ಕಾರಣವು ಶ್ರೀ ರಾಮ ನಾಮ

ಕಲ್ಯಾಣಸಿಂಗ್ ಇಲ್ಲದಿದ್ದರೆ ಮೂರು ನಾಮ

ಕಡಾಣಿ ಮುರಿದ ರಥದೊಡೆಯ ನೀವು ತೃಣಕ್ಕೆ ಸಮಾನ..!

ಅಡ್ವಾನಿ: ಜನಸಂಘ ಶೂರ ನಾ ಶ್ರೀರಾಮ ಬಲನೋ, ಸಂಘದೊಡನೆ ಹೋರಾಡಿ ಅಧ್ಯಕ್ಷ ಗಾದಿಯಂ ಪಡೆದವನೋ,ಗಡ್ಕರಿಯ ಉತ್ಸವಕೆ ಸಂಚಕಾರ ತಂದವನೋ? ಪ್ರಧಾನಿ ಪಟ್ಟಕ್ಕೆ ಎದುರಾಗೋ ಕುರಿಗಳಂ ನೀವಾಳಿಸೋ ವ್ಯಾಘ್ರನಿವನೋ..ಉಗ್ರ ಪ್ರತಾಪಿ..

ಮತ್ತಷ್ಟು ಓದು »