ಸಾಹಿತ್ಯ ಮತ್ತು ವಿಮರ್ಶೆ
– ಮು ಅ ಶ್ರೀರಂಗ ಬೆಂಗಳೂರು
ನಾನು ಈ ಲೇಖನ ಬರೆಯುತ್ತಿರುವ ಇವತ್ತಿನ ತನಕ (೨೯ ಮೇ ೨೦೧೪) ಡಾ. ಶ್ರೀಪಾದ ಭಟ್ ಅವರ ‘ಸಾಹಿತ್ಯ ಕ್ಷೇತ್ರದ ಒಳ ಹೊರಗು’ ಎಂಬ ಶೀರ್ಷಿಕೆಯಡಿಯಲ್ಲಿ ಮೂರು ಲೇಖನಗಳು ‘ನಿಲುಮೆ”ಯಲ್ಲಿ ಪ್ರಕಟವಾಗಿದೆ. (೨೭/೩/೨೦೧೪, ೧೨/೪ ಮತ್ತು ೨೪/೪). ಅವರ ಈ ಲೇಖನಗಳ ಬಗ್ಗೆ ‘ನಿಲುಮೆ’ಯಲ್ಲಿ ಸಾಕಷ್ಟು ಚರ್ಚೆಗಳಾಗಿವೆ. ನಾನೂ ಸಹ ಆ ಚರ್ಚೆಗಳಲ್ಲಿ ಭಾಗವಹಿಸಿದ್ದೆ. ಅಲ್ಲಿ ನಾನು ವ್ಯಕ್ತಪಡಿಸಿದ ಅಭಿಪ್ರಾಯಗಳ ಮುಂದುವರಿದ ಭಾಗವಾಗಿ ಈ ಲೇಖನ ಬರೆದಿದ್ದೇನೆ. ಸಾಹಿತ್ಯ ಮತ್ತು ಸಾಹಿತ್ಯ ವಿಮರ್ಶೆ/ವಿಮರ್ಶಕರ ನಡುವೆ ಅಂತಹ ಸೌಹಾರ್ದಯುತ ಸಂಬಂಧವೇನೂ ಇಲ್ಲ. ಇವೆರಡರ ನಡುವೆ ಇರುವ ಅಷ್ಟಿಷ್ಟು ನಂಟನ್ನು ಆಗಾಗ ಕಗ್ಗಂಟಾಗಿಸುವ ಸನ್ನಿವೇಶವನ್ನು ‘ಶೀತಲ ಸಮರ’, ಮುಸುಕಿನೊಳಗಿನ ಗುದ್ದಾಟ’ ಅಥವಾ ‘ಬೂದಿ ಮುಚ್ಚಿದ ಕೆಂಡ’ ಇಂತಹ ವಿಶೇಷಣಗಳಿಂದ ವಿವರಿಸಬಹುದು. ಕಾಲಾನುಕಾಲಕ್ಕೆ ವಿಮರ್ಶೆಯ ಪರಿಭಾಷೆಗಳು (=ಲಕ್ಷಣ; ನಿರೂಪಣೆ) ಬದಲಾಗುತ್ತಾ ಬಂದಿವೆ. ವಿಮರ್ಶೆಯೆಂದರೆ ಏನು? ಎಂಬ ಮೂಲಭೂತ ಪ್ರಶ್ನೆಯಿಂದ ಹಿಡಿದು ,ವಿಮರ್ಶೆಯೆಂದರೆ (ಮತ್ತು ಆ ಮೂಲಕ ಪರೋಕ್ಷವಾಗಿ ಸಾಹಿತ್ಯವೆಂದರೆ) ‘ಹೀಗೆ ಇರತಕ್ಕದ್ದು’ ಎಂದು ವ್ಯಾಖ್ಯಾನಿಸುವ ಅತ್ಯುತ್ಸಾಹದ, ಆತುರದ ಮಾತುಗಳೂ ಬಂದು ಹೋಗಿವೆ.
ಕುವೆಂಪು ಅವರು ‘ಮಲೆಗಳಲ್ಲಿ ಮದುಮಗಳು’ಕಾದಂಬರಿಯಲ್ಲಿ ಒಂದೆರೆಡು ಲೈಂಗಿಕ ಪ್ರಸಂಗಗಳನ್ನು ವಿವರವಾಗಿ ವರ್ಣಿಸಿದಾಗ ‘ಪುಟ್ಟಪ್ಪನವರಿಗೆ ಈ ವಯಸ್ಸಿನಲ್ಲಿ ಈ ಚಪಲವೇಕೆ?’ ಎಂದು ಅಂದಿನ ನಮ್ಮ ಹಿರಿಯ ಸಾಹಿತಿಗಳು ಹೇಳಿದ್ದುಂಟು. ನವ್ಯಕಾವ್ಯ/ಸಾಹಿತ್ಯ ಬಂದಾಗ ಅದರಲ್ಲಿ ಕೆಲವೊಮ್ಮೆ ವಾಚ್ಯವಾಗಿ ಮತ್ತು ಕೆಲವುಬಾರಿ ಸೂಚ್ಯವಾಗಿ ಇರುತ್ತಿದ್ದ ಲೈಂಗಿಕ ಅಂಶಗಳು ಹಾಗು ಅದಕ್ಕೆ ಸಂಬಂಧಿಸಿದ ಪ್ರತಿಮೆ ಪ್ರತೀಕಗಳಿಂದ ಆ ಕಾಲದ ಹಿರಿಯರಿಗೆ ಇರುಸು ಮುರುಸು ಆಗಿದ್ದುಂಟು. ಗೋಪಾಲಕೃಷ್ಣ ಅಡಿಗರ ‘ಪ್ರಾರ್ಥನೆ’ ಕವನ ಪ್ರಕಟವಾದಾಗ (ಬಹುಶಃ ಪ್ರಜಾವಾಣಿ ಪತ್ರಿಕೆಯಲ್ಲಿರಬಹುದು) ಅದನ್ನು ಓದಿದ ಡಿ ವಿ ಜಿ ಅವರು ಬಹಳ ಸಿಟ್ಟಾಗಿ ಇಂತಹ ಬರವಣಿಗೆಯನ್ನು ಬ್ಯಾನ್ ಮಾಡಬೇಕು ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದರಂತೆ. ಆಗಿನ ಮುಖ್ಯ ಮಂತ್ರಿ ನಿಜಲಿಂಗಪ್ಪನವರು ಅಡಿಗರಿಗೆ ‘ನಿಮ್ಮ ಮೇಲೆ ಇಂಥದ್ದೊಂದು ದೂರು ಬಂದಿದೆ. ಇದಕ್ಕೇನು ಉತ್ತರ’ ಎಂದು ಕೇಳಿ ಪತ್ರ ಬರೆದಿದ್ದರಂತೆ. (ವಿವರಗಳಿಗೆ ನೋಡಿ ಯು ಆರ್ ಅನಂತಮೂರ್ತಿ ಅವರ ‘ಸುರಗಿ’ ಪುಟ ೧೨೪ ಪ್ರಥಮ ಮುದ್ರಣ ೨೦೧೨ ಪ್ರಕಾಶಕರು–ಅಕ್ಷರ ಪ್ರಕಾಶನ ಹೆಗ್ಗೋಡು ಸಾಗರ) ನಮ್ಮ ಸಮಾಜವನ್ನು ಕಾಡುತ್ತಿರುವ ಸಮಸ್ಯೆಗಳನ್ನು ಸಾಮಾನ್ಯ ಜನರಿಗೂ ತಿಳಿಸುವ ರೀತಿಯಲ್ಲಿ ಸಾಹಿತ್ಯ ರಚಿಸ ಬೇಕೆಂದು ಬಂದ ಪ್ರಗತಿಶೀಲ ಸಾಹಿತ್ಯದ ಬಗ್ಗೆ ಮಾತನಾಡುತ್ತಾ ಡಾ. ಎಚ್ ತಿಪ್ಪೇರುದ್ರಸ್ವಾಮಿ ಅವರು ತಮ್ಮ “ಕವಲುದಾರಿಯಲ್ಲಿ ಕನ್ನಡ ವಿಮರ್ಶೆ” (ಪ್ರಕಾಶಕರು: ಪ್ರಸಾರಾಂಗ ಬೆಂಗಳೂರು ವಿ ವಿ ಬೆಂಗಳೂರು ೫೬) ಎಂಬ ಕೃತಿಯಲ್ಲಿ ಹೇಳಿದ ಒಂದು ಮಾತು ಗಮನಾರ್ಹವಾಗಿದೆ. ‘ಅನಕೃ’ ಮತ್ತು ಇತರ ಪ್ರಗತಿಶೀಲ ಸಾಹಿತಿಗಳು ‘ವೇಶ್ಯಾ ಸಮಸ್ಯೆಯನ್ನು ಚಿತ್ರಿಸಲು ಹೊರಟು ವೇಶ್ಯಾವಾಟಿಕೆಗಳ ಚಿತ್ರಣಕ್ಕೆ ತಮ್ಮನ್ನು ಸೀಮಿತಗೊಳಿಸಿಕೊಂಡರು ‘. ಇಂತಹ ಸಾಹಿತ್ಯವನ್ನು ಓದಿದಾಗ ಆಗುವ “ಆ ಕ್ಷಣದ” ಆಕರ್ಷಣೆ ಬಿಟ್ಟು ಬೇರೆ ಆಯಾಮಗಳನ್ನು ಅವು ನೀಡಲಾಗಲಿಲ್ಲ. ಪ್ರಗತಿಶೀಲರು ಕೇವಲ ವೇಶ್ಯಾ ಸಮಸ್ಯೆಯನ್ನು ಮಾತ್ರ ಚಿತ್ರಿಸಿದರು ಎಂದು ಇದರ ಅರ್ಥವಲ್ಲ. ಅವರು ಯಾವುದೇ ಒಂದು ಸಮಸ್ಯೆಯನ್ನು ಪರಿಭಾವಿಸಿದ ರೀತಿಗೆ ಇದು ಒಂದು ಉದಾಹರಣೆ ಅಷ್ಟೇ. ಅಂತಹ ಸನ್ನಿವೇಶದಲ್ಲೂ ನಾಲ್ಕಾರು ಗಟ್ಟಿ ಕೃತಿಗಳು ಪ್ರಗತಿಶೀಲರಿಂದ ಬಂದಿತು. ಅದೇ ಸಮಾಧಾನಪಟ್ಟುಕೊಳ್ಳಬಹುದಾದ ವಿಷಯ.
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೭
— ಮು. ಅ. ಶ್ರೀರಂಗ ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೫
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೬
ಆವರಣ’ ಎಂಬ ವಿ-ಕೃತಿ ಸಂಗ್ರಹ: ಗೌರಿ ಲಂಕೇಶ್
ಸಾಹಿತ್ಯ ಕ್ಷೇತ್ರದ ಒಳಹೊರಗು – ಭಾಗ ೩
-ಡಾ.ಶ್ರೀಪಾದ ಭಟ್, ತುಮಕೂರು
ಸಾಹಿತ್ಯ ಕ್ಷೇತ್ರದ ಒಳಹೊರಗು – ಭಾಗ ೧
ಸಾಹಿತ್ಯ ಕ್ಷೇತ್ರದ ಒಳಹೊರಗು – ಭಾಗ ೨
ಸಾಹಿತ್ಯದ ಮಾರ್ಕೆಟಿಂಗ್!
ಇಂದು ಎಲ್ಲ ಕ್ಷೇತ್ರಕ್ಕೂ ಅನಿವಾರ್ಯವಾದ ಮಾರ್ಕೆಟಿಂಗ್ ಸಾಹಿತ್ಯವನ್ನು ಬಿಡುತ್ತದೆಯೇ? ಹೇಳಿಕೇಳಿ ಸಾಹಿತ್ಯ ಎಂಬುದು ಪುಸ್ತಕೋದ್ಯಮದ ಭಾಗವಾಗಿ ಹೋಗಿದೆ. ಉದ್ಯಮ ಎಂದ ಮೇಲೆ ಮುಗೀತು. ಆದರ್ಶಗಳು ಏನಿದ್ದರೂ ಅದನ್ನು ಹಿಂಬಾಲಿಸಬೇಕಷ್ಟೆ. ಸಾಹಿತಿಗಳೆನಿಸಿಕೊಂಡವರು ಈ ಉದ್ಯಮವನ್ನು ಹಿಂಬಾಲಿಸುತ್ತಿದ್ದಾರೆ. ಕೆಲವೊಮ್ಮೆ ಇದು ಉಲ್ಟಾ ಆಗಿ ತಮಾಷೆಗಳೂ ಆಗುವುದುಂಟು. ಕನ್ನಡದಲ್ಲಿ ಎಲ್ಲೂ ಹೆಸರೇ ಕೇಳಿರದ ಸಂಪತ್ತೈಯ್ಯಂಗಾರ್ ಎಂಬ ಎಪ್ಪತ್ತು ದಾಟಿದ ವೃದ್ಧರೊಬ್ಬರಿಗೆ ತಮ್ಮ ಅರುವತ್ತು ವರ್ಷದ ಪಾಕಶಾಸ್ತ್ರದ ಪ್ರಾವೀಣ್ಯವನ್ನು ಕನ್ನಡದಲ್ಲಿ ದಾಖಲಿಸಬೇಕೆಂಬ ಹಂಬಲ ಹುಟ್ಟಿತು. ಅನುಭವವನ್ನು ಬರೆದರು. ಒಂದಿಷ್ಟು ಪುಟಗಳಾದವು. ಆಸಕ್ತರಿಗೆ ಓದಲು ನೀಡಿ ಸಲಹೆ ಕೇಳಿದರು. ಅದರಂತೆ ತಿದ್ದಿ ತೀಡಿ ಮತ್ತೆ ಬರೆದು ಒಂದು ಪುಸ್ತಕವಾಗುವಷ್ಟು ಬರೆದರು. ಅಚ್ಚುಮಾಡಿಸಲು ಹೆಸರಾಂತ ಪ್ರಕಾಶಕರ ಅಂಗಡಿ ಮುಂದೆ ದಿನಗಟ್ಟಲೆ ನಿಂತರು. ಅವರು ಕಾಣದ ಪ್ರಕಾಶಕರಿಲ್ಲ. ಆದರೆ ಎಲ್ಲರದೂ ಒಂದೇ ಉತ್ತರ-ಆಗಲ್ಲ ಹೋಗಿ. ಪುಟ ತೆರೆದು ನೋಡುವ ವ್ಯವಧಾನವೂ ಪ್ರಕಾಶಕರಿಗಿಲ್ಲ. ಯಾಕೆಂದರೆ ಈ ಅಯ್ಯಂಗಾರರು ಹೆಸರಾಂತ ಸಾಹಿತಿಗಳ ಶಿಫಾರಸು ಇಟ್ಟುಕೊಂಡವರಲ್ಲ, ಈಗಾಗಲೇ ಪಾಕಶಾಸ್ತ್ರದಲ್ಲಿ ಮಾಧ್ಯಮಗಳಲ್ಲಿ ಹೆಸರು ಮಾಡಿದವರೂ ಅಲ್ಲ. ಬೇರೆ ದಾರಿ ಕಾಣದೇ ಅಯ್ಯಂಗಾರರು ಸ್ವತಃ ಅಚ್ಚು ಹಾಕಿಸಲು ಮುಂದಾದರು. ಸ್ವಂತ ಹಣವಿಲ್ಲ. ಯಾವುದೋ ಡಿಟಿಪಿ ಸೆಂಟರಿಗೆ ಹಸ್ತಪ್ರತಿ ಕೊಟ್ಟರು. ಮೂರ್ನಾಲ್ಕು ತಿಂಗಳು ಅಲೆಸಿದ ಅಂಗಡಿಯಾತ ಟೈಪು ಮಾಡುವುದಿರಲಿ, ಮೂಲ ಹಸ್ತಪ್ರತಿಯನ್ನೇ ಕಳೆದು ಕೈಝಾಡಿಸಿದ!
ಸಾಹಿತ್ಯ ಕ್ಷೇತ್ರದ ಒಳಹೊರಗು – ಭಾಗ ೨
-ಡಾ.ಶ್ರೀಪಾದ ಭಟ್, ತುಮಕೂರು
ಸಾಹಿತ್ಯ ಕ್ಷೇತ್ರದ ಒಳಹೊರಗು – ಭಾಗ ೧
ಕವಿಕಾಣದ್ದನ್ನು ವಿಮರ್ಶಕ ಕಂಡ!
ಕಾವ್ಯದಲ್ಲಿ ಕವಿ ಊಹಿಸದೇ ಇರುವ ಸಂಗತಿಯನ್ನು ಕೂಡ ವಿಮರ್ಶಕ ಖಚಿತವಾಗಿ ಹೇಳಬಲ್ಲ ಎಂಬ ಕಾರಣಕ್ಕೆ ಈ ಮಾತು. ಕುವೆಂಪು ಅವರು ಹೇಳಿದ್ದು: ರವಿ ಕಾಣದ್ದನ್ನು ಕವಿ ಕಂಡ. ಇದನ್ನು ಮುಂದುವರೆಸಿದ ಹಿರಣ್ಣಯ್ಯ ಕವಿ ಕಾಣದ್ದನ್ನು ಕುಡುಕ ಕಂಡ ಎಂದಿದ್ದರು. ಕನ್ನಡ ವಿಮರ್ಶೆಗಳನ್ನು ಅವಲೋಕಿಸಿದವರು ಆರಂಭದ ನನ್ನ ಮಾತನ್ನು ಒಪ್ಪಬಹುದು. ಇದಕ್ಕೆ ನಿದರ್ಶನವೊಂದಿದೆ. ಮೈಸೂರಿನಲ್ಲಿ ಕೆ.ಎಸ್ ನರಸಿಂಹಸ್ವಾಮಿಯವರ ಕಾವ್ಯ ಕುರಿತ ವಿಚಾರಗೋಷ್ಠಿ ನಡೆದಿತ್ತು. ಖ್ಯಾತರಾದ ಸ್ಥಾಪಿತ ವಿಮರ್ಶಕರೊಬ್ಬರು ಕೆಎಸ್ನ ಕಾವ್ಯದ ಜನಪ್ರಿಯ ಗೀತೆಯ ’ಪದುಮಳು ಒಳಗಿಲ್ಲ’ ಎಂಬ ಸಾಲನ್ನು ವಿಮರ್ಶಿಸುತ್ತ ಪದುಮ ಹೆಣ್ಣು ಕುಲದ ಪ್ರತೀಕ. ಗಂಡಸರು ಹೆಣ್ಣನ್ನು ಎಂದೂ ಒಳಗೆ ಬಿಟ್ಟುಕೊಂಡೇ ಇಲ್ಲ. ಆದ್ದರಿಂದ ಪದುಮಳು ಒಳಗಿಲ್ಲ ಎಂದರೆ ಹೆಣ್ಣನ್ನು ಗಂಡಸರು ತಮ್ಮ ವ್ಯಾವಹಾರಿಕ ಪ್ರಪಂಚದಿಂದ ಯಾವಾಗಲೂ ಹೊರಗೇ ಇಟ್ಟಿದ್ದಾರೆ ಎಂದರ್ಥ! ಎನ್ನುತ್ತ ವಿಶೇಷ ವ್ಯಾಖ್ಯಾನ ಮಾಡಿದರು. ಕೆಎಸ್ನ ಅವರನ್ನು ಒಮ್ಮೆ ಭೇಟಿಯಾದಾಗ ಪದ್ಯದ ಅರ್ಥ ಹಿಂಗಂತಲ್ಲಾ ಸಾರ್? ಅಂದೆ. ಅದೇನೋಪ್ಪ, ನಾನಂತೂ ಪದ್ಯ ಬರೆಯುವಾಗ ಅದನ್ನೆಲ್ಲ ಖಂಡಿತ ಯೋಚಿಸಿರಲಿಲ್ಲ. ಅದೇನಿದ್ದರೂ ಮುಟ್ಟು-ಮೈಲಿಗೆ ಅರ್ಥದಲ್ಲಿ ಹೊಳೆದ ಸಹಜ ಸಾಲು ಎಂದಿದ್ದರು. ಹೀಗಾಗಿಯೇ ಹೇಳಿದ್ದು: ಕವಿ ಕಾಣದ್ದನ್ನು ವಿಮರ್ಶಕ ಕಂಡ ಎಂದು. ಇರಬಹುದು. ಅನೇಕಾರ್ಥಗಳನ್ನು ಹೊಳೆಸಿದಾಗಲೇ ನಿಜವಾದ ಕಾವ್ಯವಾಗುವುದು. ಅಲ್ಲವೇ?
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೬
– ಮು. ಅ. ಶ್ರೀರಂಗ ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೫
‘ಆವರಣ ‘ ಎಂಬ ವಿ-ಕೃತಿ – ಸಂಗ್ರಹ : ಗೌರಿ ಲಂಕೇಶ್
ಗೌರಿ ಲಂಕೇಶ್ ಅವರು ಸಂಗ್ರಹಿಸಿರುವ ‘ಆವರಣ’ ಎಂಬ ವಿಕೃತಿ’ (ಲಂಕೇಶ್ ಪ್ರಕಾಶನ ಬೆಂಗಳೂರು–೪, ೨೦೦೭) ವಿಮರ್ಶಾ ಸಂಕಲನದಲ್ಲಿ ಯು ಅರ್ ಅನಂತಮೂರ್ತಿ, ಕೆ ಮರುಳಸಿದ್ದಪ್ಪ, ರಹಮತ್ ತರೀಕೆರೆ, ಜಿ ರಾಜಶೇಖರ್, ಜಿ ಕೆ ಗೋವಿಂದರಾವ್, ಕೆ. ಫಣಿರಾಜ್ ಮುಂತಾದ ಪ್ರಸಿದ್ಧ ಲೇಖಕರು,ವಿಮರ್ಶಕರು ಹಾಗು ಚಿಂತಕರ ಲೇಖನಗಳಿವೆ. ‘ಆವರಣ’ದಲ್ಲಿ ಚಿತ್ರಿತಗೊಂಡಿರುವ ಚರಿತ್ರೆಯ ಅಂಶಗಳು ಎಷ್ಟರಮಟ್ಟಿಗೆ ನಂಬಲರ್ಹ/ಅದಷ್ಟೇ ನಿಜವೇ ಬೇರೆ ಮುಖಗಳು ಇಲ್ಲವೇ ಎಂಬುದರ ಜತೆಗೆ ಕಾದಂಬರಿಯ ತಾತ್ವಿಕತೆ, ರೂಪ,ವಿನ್ಯಾಸಗಳ ಬಗ್ಗೆ ಇಲ್ಲಿನ ಲೇಖನಗಳಲ್ಲಿ ಒತ್ತು ಜಾಸ್ತಿ. ಹಿಂದೆ ಏನೇನೋ ನಡೆದುಹೋಗಿದೆ;ಅದನ್ನೆಲ್ಲಾ ಮತ್ತೆ ಕೆದಕುವುದ್ಯಾಕೆ ಎಂಬ ಮಾತೂ ಆಗೀಗ ಬರುತ್ತದೆ. ಹೀಗಾಗಿ ಈ ವಿಮರ್ಶಾ ಸಂಕಲನದ ಲೇಖನಗಳನ್ನು ಸ್ವಲ್ಪ ವಿವರವಾಗಿ ಚರ್ಚಿಸಬೇಕಾಗಿದೆ.
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೫
– ಮು. ಅ. ಶ್ರೀರಂಗ ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧ 
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪
ಆವರಣ —- ಅನಾವರಣ
ಹೊಸ ಕನ್ನಡ ಸಾಹಿತ್ಯದ ಇತ್ತೀಚಿನ ಮೂವತ್ತು ನಲವತ್ತು ವರ್ಷಗಳಲ್ಲಿ ಎಸ್ ಎಲ್ ಭೈರಪ್ಪನವರ “ಆವರಣ” ಕಾದಂಬರಿಯಷ್ಟು ವಿವಾದಿತ ಕೃತಿ ಬಹುಶಃ ಬೇರೊಂದು ಇರಲಾರದೆನಿಸುತ್ತದೆ. “ಧರ್ಮ ಕಾರಣ” ಮತ್ತು”ಅನುದೇವ ಹೊರಗಣವನು” ಎಂಬ ಎರಡು ಕೃತಿಗಳ ಬಗ್ಗೆ ವಿವಾದವಾಗಿತ್ತು. ಆದರೆ ಇಷ್ಟೊಂದು ವ್ಯಾಪಕವಾಗಿರಲಿಲ್ಲ. ನಂತರದಲ್ಲಿ “ಧರ್ಮಕಾರಣ”ವನ್ನು ಬ್ಯಾನ್ ಮಾಡಲಾಯಿತು. “ಆವರಣದ ವಾದ-ವಿವಾದಗಳಲ್ಲಿ”ಸಾಹಿತ್ಯ ಮತ್ತು ಸಾಹಿತ್ಯೇತರ ಕಾರಣಗಳು ಸೇರಕೊಂಡಿದ್ದವು. ಕನ್ನಡದ ನಾಲ್ಕೈದು ಪ್ರಮುಖ ದಿನ ಪತ್ರಿಕೆಗಳಲ್ಲಿ ಈ ಚರ್ಚೆ ಸುಮಾರು ಆರು ತಿಂಗಳುಗಳ ಕಾಲ ನಡೆಯಿತು. Front line ಮತ್ತು The pioneer ಎಂಬ ಇಂಗ್ಲಿಷ್ ಪತ್ರಿಕೆಗಳಲ್ಲಿ ಆವರಣ ಕುರಿತಂತೆ ವಿಮರ್ಶೆ ಪ್ರಕಟವಾಯ್ತು . ಜತೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ನಾಲ್ಕೈದು ಪ್ರಮುಖ ನಗರಗಳಲ್ಲಿ ಆವರಣದ ಬಗ್ಗೆ ಸಭೆಗಳು,ವಿಚಾರಗೋಷ್ಠಿಗಳು ನಡೆದವು.
ಸಂಸ್ಕಾರ ಮತ್ತು ದಾಟು ಕಾದಂಬರಿಗಳಲ್ಲಿ ಜಾತಿ ಸಮಸ್ಯೆಗಳು
– ಮು ಅ ಶ್ರೀರಂಗ ಬೆಂಗಳೂರು
ಈ ಲೇಖನವನ್ನು ನಾನು ಭೈರಪ್ಪನವರ ಕಾದಂಬರಿಗಳನ್ನು ಕುರಿತ ವಿಮರ್ಶೆಗಳ ಲೇಖನಮಾಲೆ ಮುಗಿದ ನಂತರ ಬರೆಯೋಣವೆಂದುಕೊಂಡಿದ್ದೆ. ಆದರೆ ಆ ಲೇಖನಗಳ ಸರಣಿಯಲ್ಲಿ ಇನ್ನು ಚರ್ಚಿಸಬೇಕಾದ ಕಾದಂಬರಿಗಳು “ಆವರಣ” ಮತ್ತು “ಕವಲು” ಮಾತ್ರ. ಇವುಗಳಲ್ಲಿ ಜಾತಿಯ ಸಮಸ್ಯೆಗಳ ಪ್ರಸ್ತಾಪವಿಲ್ಲದಿರುವುದರಿಂದ ಈಗಲೇ ಬರೆಯುವುದು ಸೂಕ್ತವೆನಿಸಿದೆ.
ಸಂಸ್ಕಾರ ಮತ್ತು ದಾಟು ಕಾದಂಬರಿಗಳನ್ನು ಕುರಿತಂತೆ ನಡೆದ ಚರ್ಚೆಗಳು ಪ್ರಾರಂಭದಲ್ಲಿ ವಿಚಾರಗಳ ವಿನಿಮಯದಂತೆ ಕಂಡರೂ ನಂತರದಲ್ಲಿ ಕವಲು ದಾರಿ ಹಿಡಿದವು. ಇದಕ್ಕೆ ನನಗನಿಸುವಂತೆ ಬಹುಶಃ ಜಾತಿ ಸಮಸ್ಯೆಯನ್ನು ಸಾಹಿತ್ಯವು ಅರಿಯಲು ನಡೆಸುವ ಪ್ರಯತ್ನಕ್ಕೂ ಅದೇ ಸಮಸ್ಯೆಯನ್ನು ಆಧಾರ,ಸಿದ್ಧಾಂತ,ಊಹೆ,ತರ್ಕ ಇತ್ಯಾದಿಗಳ ಮೂಲಕ ಬಿಡಿಸಲು ಪ್ರಯತ್ನಿಸುವ ಮಾನವಿಕ ಶಾಸ್ತ್ರಗಳಿಗೂ ಇರುವ ಮೂಲಭೂತ ವ್ಯತ್ಯಾಸವನ್ನು ಮನಗಾಣಿಸುವುದರಲ್ಲಿ ಆ ಚರ್ಚೆಗಳು ನಡೆಯದೇ ಹೋದದ್ದು. ಇದುವರೆಗೆ ಮಾನವಿಕ ಶಾಸ್ತ್ರಗಳು ತಮ್ಮ ಅಧ್ಯಯನದ ಮೂಲಕ ಕಂಡುಕೊಂಡಿರುವ ನಮ್ಮ ಸಮಾಜದ ಬಗೆಗಿನ ತಿಳುವಳಿಕೆಗಳನ್ನು ಆಧರಿಸಿ ಆ ಚೌಕಟ್ಟಿಗೆ ಈ ಸಾಹಿತ್ಯ ಕೃತಿಗಳು ಹೊಂದುವುದಿಲ್ಲ ಎಂದು ಒಂದೇ ಏಟಿಗೆ ಪಕ್ಕಕ್ಕೆ ಸರಿಸುವುದನ್ನು ಸಾಹಿತ್ಯದ ಒಬ್ಬ ಓದುಗನಾಗಿ ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ.
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪
– ಮು. ಅ. ಶ್ರೀರಂಗ ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
ದಾಟು ಮತ್ತು ಭಾರತೀಪುರ
—————————–
ಯು ಆರ್ ಅನಂತಮೂರ್ತಿ ಅವರ “ಭಾರತೀಪುರ” ಕಾದಂಬರಿಯ ನಾಯಕ ಜಗನ್ನಾಥನ ‘fickle minded personality’ ನಮ್ಮ ನವ್ಯ ಸಾಹಿತ್ಯದ ಆಧುನಿಕ ಪ್ರಜ್ಞೆಗೆ ತುಂಬ ಹತ್ತಿರವಾಗಿದೆ. ಇದು ಮೊದಲು ಪ್ರಕಟವಾಗಿದ್ದು ೧೯೭೩ರಲ್ಲಿ. ಸುಮ್ಮನೆ “ಇದೂ ಒಂದು ಮಾಮೂಲಿ ಕಾದಂಬರಿ” ಎಂದು ಓದಿಕೊಂಡು ಹೋಗುವ ಹಾಗಿದ್ದರೆ ಯಾವ ಜಿಜ್ಞಾಸೆಯೂ ಬೇಕಾಗುವುದಿಲ್ಲ. ಆದರೆ ಜಗನ್ನಾಥ ತನ್ನ ಊರಾದ ಭಾರತೀಪುರದಲ್ಲಿ ತಾನು ತರಬೇಕೆಂದುಕೊಳ್ಳುವ ಬದಲಾವಣೆಗೆ ತಕ್ಕ ತಯಾರಿ ನಡೆಸಿದ್ದನೆ? ನಡೆಸಿದ್ದರೆ ಅದು ಯಾವ ಮಾದರಿಯದ್ದು ಎಂದು ಯೋಚಿಸಲು ಹೊರಟಾಗ ನಿರಾಸೆಯಾಗುತ್ತದೆ. ಜತೆಗೆ ಈ ಕಾದಂಬರಿಯಲ್ಲಿ ಈತನಿಗಿಂತ ಶಕ್ತಿಶಾಲಿಯಾದ, ಗಟ್ಟಿ ಮನಸ್ಸಿನ ಸಾಕಷ್ಟು ವ್ಯಕ್ತಿಗಳಿದ್ದಾರೆ.
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
– ಮು.ಅ ಶ್ರೀರಂಗ, ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧ 
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ದಾಟು ಕಾದಂಬರಿಯ ಬಗ್ಗೆ :
ಮುಖಾಮುಖಿ-೨ರಲ್ಲಿ ವಂಶವೃಕ್ಷ ಮತ್ತು ಸಂಸ್ಕಾರ ಕಾದಂಬರಿಗಳ ಬಗ್ಗೆ ನಾನು ಬರೆದ ಲೇಖನಕ್ಕೆ (ನಿಲುಮೆ–೧೫-೧೧-೧೩) ಓದುಗರು ಪ್ರತಿಕ್ರಿಯಿಸುವಾಗ”ದಾಟು” ಕಾದಂಬರಿಯ ಕೆಲವು ಅಂಶಗಳನ್ನು ತಿಳಿಸಿದ್ದರು. ಅವುಗಳ ಬಗ್ಗೆ ಸಂಕ್ಷಿಪ್ತವಾಗಿ ಪ್ರಸ್ತಾಪಿಸಿ ಮುಂದುವರಿಯುವುದು ಉತ್ತಮ ಎಂದು ಭಾವಿಸಿದ್ದೇನೆ. ಭೈರಪ್ಪ ಮತ್ತು ಅನಂತಮೂರ್ತಿಯವರ ವಂಶವೃಕ್ಷ -ಸಂಸ್ಕಾರ ಹಾಗು ದಾಟು-ಭಾರತೀಪುರ ಕಾದಂಬರಿಗಳ ವಸ್ತುವಿನಲ್ಲಿ ಕೆಲವು ಸಾಮ್ಯತೆಗಳಿವೆ. ಇವುಗಳ ತೌಲನಿಕ ಓದಿನಿಂದ ಕನ್ನಡದ ಈ ಇಬ್ಬರು ಮಹತ್ವದ ಸಾಹಿತಿಗಳಲ್ಲಿ ಸಾಮಾನ್ಯವಾದ (common ಎಂಬ ಅರ್ಥದಲ್ಲಿ ) ಒಳನೋಟಗಳು ಏನಾದರೂ ಇವೆಯೇ ಎಂಬುದನ್ನು ತಿಳಿಯಬಹುದು . ಇದನ್ನು ನಿಲುಮೆಯ ಓದುಗರು ಸ್ಪಷ್ಟವಾಗಿ ಹೇಳಿದ್ದಾರೆ. ಇದರ ಜತೆಗೆ ಧರ್ಮ,ರಿಲಿಜನ್,ಒರಿಯಂಟಲಿಸಂನ ಪುನರುತ್ಪಾದನೆ,ಬ್ರಾಹ್ಮಣ ಪುರೋಹಿತಶಾಹಿ,ಸೆಕ್ಯುಲರಿಸಂ ……. ಈ ಮಾತುಗಳೂ ಬಂದಿವೆ. ಕಾದಂಬರಿಯೊಂದನ್ನು ಈ ರೀತಿಯ ಸಮಾಜಶಾಸ್ತ್ರೀಯ ಪರಿಭಾಷೆಯಲ್ಲಿ ವಿಮರ್ಶಿಸುವುದು ಅನಿವಾರ್ಯವೇ?ಅವಶ್ಯವೇ?ಎಂಬುದು ಮುಖ್ಯವಾದ ಪ್ರಶ್ನೆ. ಕಾದಂಬರಿಯೊಂದನ್ನು ಸಾಹಿತ್ಯ ವಿಮರ್ಶೆಯ ಪರಿಧಿಯೊಳಗೆ ಚರ್ಚಿಸುವುವುದು ಉತ್ತಮ ಎಂದು ನನ್ನ ಅಭಿಪ್ರಾಯ. ಜತೆಗೆ ಉತ್ತಮ ಸಾಹಿತ್ಯ ಕೃತಿಯ ವಿಮರ್ಶೆಯ ಪರಿಕರಗಳು ಆ ಕೃತಿಯ ಒಳಗೇ ಅಡಕವಾಗಿರುತ್ತದೆ ಎಂಬ ಒಂದು ಮಾತಿದೆ. ಹೀಗಾಗಿ ಸಾಹಿತ್ಯೇತರ ಪರಿಕರಗಳಿಂದ ಒಂದು ಕಾದಂಬರಿಯ ಗುಣ-ದೋಷಗಳನ್ನು ಪಟ್ಟಿಮಾಡುವ ಮುನ್ನ ಇನ್ನೊಮ್ಮೆ ಯೋಚಿಸಬೇಕಾಗಿದೆ. ಈ ಎಲ್ಲಾ ಅಂಶಗಳನ್ನು ವಿವರವಾಗಿ ಬರೆಯಲು ಸದ್ಯದ ಮುಖಾಮುಖಿಗೆ ನಾನು ಹಾಕಿಕೊಂಡಿರುವ ಮಿತಿ ಅಡ್ಡ ಬಂದಿದೆ. ಸಾಧ್ಯವಾದರೆ ಮುಖಾಮುಖಿ ಲೇಖನಮಾಲೆಯ ಕೊನೆಯಲ್ಲಿ ಬರೆಯಲು ಪ್ರಯತ್ನಿಸುತ್ತೇನೆ.
ಮತ್ತಷ್ಟು ಓದು 
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
– ಮು.ಅ ಶ್ರೀರಂಗ,ಬೆಂಗಳೂರು
(“ನಿಲುಮೆ”ಯಲ್ಲಿ ೧೦-೧೦-೨೦೧೩ರಂದು ಪ್ರಕಟವಾದ ‘ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧‘ ಲೇಖನದ ಎರಡನೇ ಭಾಗ)
ವಂಶವೃಕ್ಷ ಮತ್ತು ಸಂಸ್ಕಾರ
—————————-
ಭೈರಪ್ಪನವರ ಮುಖ್ಯ ಕಾದಂಬರಿಗಳಲ್ಲಿ ಒಂದಾದ “ವಂಶವೃಕ್ಷ”ದ ವಸ್ತು,ಪಾತ್ರಗಳು,ಕಾದಂಬರಿಯ ವಿನ್ಯಾಸ ಇತ್ಯಾದಿಗಳ ಬಗ್ಗೆ ನಮ್ಮ ವಿಮರ್ಶಕರು ಈಗಾಗಲೇ ಸಾಕಷ್ಟು ವಿವರವಾಗಿ ಚರ್ಚಿಸಿದ್ದಾರೆ; ವಿವೇಚನೆ ನಡೆಸಿದ್ದಾರೆ. ಹೀಗಾಗಿ ಮತ್ತೊಮ್ಮೆ ಆ ಕಾದಂಬರಿಯ ಪೂರ್ಣ ವಿಮರ್ಶೆ ನನ್ನ ಉದ್ದೇಶವಲ್ಲ.
“ವಂಶವೃಕ್ಷ”ದ ವಿಮರ್ಶೆಗಳಲ್ಲಿ ಸಹಜವಾಗಿ ಶ್ರೀನಿವಾಸ ಶ್ರೋತ್ರಿ ಮತ್ತು ಅವರ ಸೊಸೆ ಕಾತ್ಯಾಯನಿಯ ಜೀವನದಲ್ಲಿ ಅವರುಗಳು ಎದುರಿಸಬೇಕಾಗಿ ಬಂದಂತಹ ಸನ್ನಿವೇಶಗಳು ಮತ್ತು ಸಂಘರ್ಷಗಳು ವಿಶೇಷವಾಗಿ ಚರ್ಚೆಗೆ ಒಳಪಟ್ಟಿರುವ ಅಂಶಗಳು. ಶ್ರೋತ್ರಿಯವರು ತಮ್ಮ ಜೀವನಕ್ಕೆ ಸನಾತನ ಧರ್ಮವನ್ನು ಅಧಾರವನ್ನಾಗಿಟ್ಟುಕೊಂಡವರು. ಅದರಲ್ಲಿ ನಂಬಿಕೆಯಿಟ್ಟವರು. ಆದರೆ ಕರ್ಮಠರಲ್ಲ. ಧರ್ಮದ ಪದಶಃ,ವಾಕ್ಯಶಃ ಅರ್ಥಗಳಿಗೆಗಷ್ಟೇ ಅಂಟಿಕೊಂಡವರಲ್ಲ.ಧರ್ಮದ ಬಗ್ಗೆ ತಮಗಿರುವ ನಂಬಿಕೆ,ವಿಶ್ವಾಸಗಳನ್ನು ಇನ್ನೊಬ್ಬರ ಮೇಲೆ ಹೇರಿದವರಲ್ಲ. ಅವರ ಮಗ ಅಕಾಲ ಮರಣಕ್ಕೆ ತುತ್ತಾದಾಗ ವಿಧವೆಯಾದ ಸೊಸೆ ಕಾತ್ಯಾಯನಿ ಆ ಕಾಲದ(೧೯೨೪ರ ಆಸುಪಾಸಿನದು)ಪದ್ಧತಿಯಂತೆ ಮಡಿ ಹೆಂಗಸು” (ತಲೆಗೂದಲು ತೆಗೆಸುವುದು, ಕೆಂಪು ಸೀರೆ ಉಡುವುದು ಇತ್ಯಾದಿ)ಆಗಲಿಲ್ಲ.




