ವಿಷಯದ ವಿವರಗಳಿಗೆ ದಾಟಿರಿ

Posts tagged ‘ವಿಮರ್ಶೆ’

10
ಆಕ್ಟೋ

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧

– ಮು.ಅ ಶ್ರೀರಂಗ, ಬೆಂಗಳೂರು

S L Byrappaಎಸ್. ಎಲ್. ಭೈರಪ್ಪನವರ” ಧರ್ಮಶ್ರೀ”ಯಿಂದ  “ಅನ್ವೇಷಣ”ದವರೆಗಿನ ಹನ್ನೆರೆಡು ಕಾದಂಬರಿಗಳನ್ನು ಕುರಿತಂತೆ ಒಟ್ಟು ಅರವತ್ತಾರು ವಿಮರ್ಶೆಗಳಿರುವ “ಸಹಸ್ಪಂದನ” ಎಂಬ ವಿಮರ್ಶಾ ಗ್ರಂಥ ೧೯೭೮ರಲ್ಲಿ ಪ್ರಕಟವಾಯ್ತು. (ಪ್ರಕಾಶಕರು :ಸಾಹಿತ್ಯ ಭಂಡಾರ ಬೆಂಗಳೂರು —೫೩) ಅದರ ಪ್ರಕಾಶಕರು ಹೇಳಿರುವ ಮಾತುಗಳಿಂದ ಈ ನನ್ನ ಮುನ್ನುಡಿಯನ್ನು ಪ್ರಾರಂಭಿಸುವುದು ಉತ್ತಮ.”ಇದು (ಸಹಸ್ಪಂದನ) ಭೈರಪ್ಪನವರ ಮೇಲಿನ ಕೇವಲ ಅಭಿಮಾನದಿಂದ ತಂದಿರುವ ಗ್ರಂಥವಲ್ಲ. ಮೆಚ್ಚಿಗೆ,ಹೊಗಳಿಕೆಗಳ ಬರವಣಿಗೆಯಿಂದ ಯಾವ ಲೇಖಕನ ಕೃತಿಗಳೂ ಬದುಕಲಾರವು. ಇಲ್ಲಿ ಬಂದಿರುವ ಲೇಖನಗಳು ಒಂದೇ ಬಗೆಯ ದೃಷ್ಟಿಕೋನದವೂ ಅಲ್ಲ. ಮೆಚ್ಚುಗೆ, ವಿರೋಧ,ಟೀಕೆ,ಘಾಟು, ಹೀಗೆ ……….. ”

ಈ ಮುಖಾಮುಖಿಯನ್ನು ಆ ಒಂದು ಎಚ್ಚರ,ಜವಾಬ್ದಾರಿಗಳ ಹಿನ್ನೆಲೆಯಲ್ಲಿ ನಡೆಸುವುದು ನನ್ನ ಕರ್ತವ್ಯವೆಂದು ಭಾವಿಸಿದ್ದೇನೆ.

ನಮ್ಮ ಅಕಾಡೆಮಿಕ್ ವಲಯದ ವಿಮರ್ಶಕರುಗಳು ಜತೆಗೆ ನಾನ್ ಅಕಾಡೆಮಿಕ್ ವಿಮರ್ಶಕರುಗಳ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಹೊಸ ಕನ್ನಡ ಸಾಹಿತ್ಯದಲ್ಲಿ ವಿಮರ್ಶೆಗೊಂದು ಮಹತ್ವವಿದೆ. ಕಾಲಾನುಕಾಲಕ್ಕೆ ಅದು ಓದುಗರ ವಿವೇಕವನ್ನು ಎಚ್ಚರಿಸುತ್ತಾ, ಸಾಹಿತಿಗಳನ್ನು ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ಪ್ರಭಾವಿಸುತ್ತಲಿದೆ. ಇಷ್ಟಲ್ಲದೆ ಸಾಹಿತಿಗಳು ಹೊಸಹೊಸ ತಂತ್ರಗಳತ್ತ, ವಿಷಯಗಳತ್ತ ಯೋಚಿಸುವಂತೆ ಹೊರಳುವಂತೆ ಮಾಡಿವೆ. ಭಾಷೆಯನ್ನು ಪರಿಣಾಮಕಾರಿಯಾಗಿ ಯಾವ ರೀತಿ ಉಪಯೋಗಿಸಬೇಕೆನ್ನುವ ಮಾರ್ಗದರ್ಶನ ಕೂಡ ವಿಮರ್ಶೆಯಿಂದ ನಡೆಯುತ್ತಿರುತ್ತದೆ.
ಮತ್ತಷ್ಟು ಓದು »

10
ಆಕ್ಟೋ

ಪರಮಾತ್ಮ

– ಇಂಚರ

ಈ ನಮ್ಮ ಪರಮಾತ್ಮನಿಗೆ ಹಣ ಮಾಡುವುದರಿಂದ ಆಧ್ಯಾತ್ಮದವರೆಗೂ ಎಲ್ಲವೂ ಸುಲಭ. ಆದರೆ ಎಮ್ ಎಸ್ ಸಿ ಪರೀಕ್ಷೆ ಮಾತ್ರ ಬಿಡಿಸಲಾರದಷ್ಟು ಕಗ್ಗಂಟು.  ಈತನ ತಂದೆ ಪ್ರಖ್ಯಾತ ಹೃದಯ ತಜ್ಞ. ವೈದ್ಯನಾಗಿ ಬೇಕಾದಷ್ಟು ಹಣ ಗಳಿಸಬಹುದಾದರೂ, ಆತ್ಮ ತೃಪ್ತಿಗೆ ಹಣವೇ ಮುಖ್ಯ ಅಲ್ಲವೆಂದು ಒಂದಷ್ಟು ಮಕ್ಕಳನ್ನು ಸಾಕಿಕೊಂಡು, ನೆಮ್ಮದಿಯಿಂದ ಬದುಕುತ್ತಿರುವ ಈತನಿಗೆ ಮಗನ ಹೃದಯದ ಬಗ್ಗೆ ಪರಮ ಹೆಮ್ಮೆ. ಈತ ಮಗ ಏನೂ ಮಾಡಿದರೂ ಪ್ರಶ್ನಿಸಲಾರ.  ಮಗನ ಮೇಲೆ ಅದಮ್ಯ ವಿಶ್ವಾಸ.  ಈಗಿನ ಅಪ್ಪಂದಿಗಿರುವ ಆತಂಕ, ನಿರೀಕ್ಷೆ ಈ ಅಪ್ಪನಿಗಿಲ್ಲ. ಹಾಗೆಯೇ ಅಪ್ಪ ನೀಡಿರುವ ಸ್ವಾತಂತ್ರದ ಇನಿತೂ ದುರುಪಯೋಗ ಪಡೆಯದ ಮಗ ಕಾಲೇಜಿನ ಪರೀಕ್ಷೆಯೊಂದನ್ನು ಬಿಟ್ಟು ಜೀವನದ ಎಲ್ಲಾ ಪರೀಕ್ಷೆಗಳಲ್ಲೂ ಫಸ್ಟ್ ಕ್ಲಾಸ್ ಪಾಸ್. ಮಗ ಪರೀಕ್ಷೆ  ಪಾಸಾಗಲಿಲ್ಲವೆಂಬ ಕೊರಗು ಅಥವಾ ಮಗ ತನ್ನಂತೆಯೇ ವೈದ್ಯನಾಗಬೇಕೆಂಬ ಹಂಬಲವೂ ಕೂಡ ಈ ಅಪ್ಪನಿಗಿಲ್ಲ. ಆತನಿಗಿರುವ ಕಾಳಜಿಯೊಂದೇ, ತನ್ನ ಮಗನ ಹೃದಯಕ್ಕೆ ನೋವಾಗಬಾರದು. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವೆಲ್ಲರೂ ಎದುರಿಸುತ್ತಿರುವ ಆತಂಕ, ಒತ್ತಡ, ಸೋಲು, ಕಿರಿಕಿರಿ, ನಿರಾಶೆ ಇವುಗಳೆಲ್ಲವನ್ನೂ ಬಿಟ್ಟು ನಿರಾಳವಾಗಿ ಬದುಕುವುದು ಹೇಗೆ ಎಂಬುದನ್ನು ತೋರಿಸುವ ಮಾದರಿ ಈ ಅಪ್ಪ, ಮಗ!

ಮತ್ತಷ್ಟು ಓದು »