ವಿಷಯದ ವಿವರಗಳಿಗೆ ದಾಟಿರಿ

Posts tagged ‘ವೈವಿಧ್ಯತೆ’

8
ಜುಲೈ

ಸಂಸ್ಕೃತಿ ಸಂಕಥನ – ೧

– ರಮಾನಂದ ಐನಕೈ

ಭಾರತೀಯ ಸಂಸ್ಕೃತಿಯ ವಿಷಯದಲ್ಲಿ ಇಂದಿಗೂ ಕೂಡಾ ಗೊಂದಲವಿದೆ. ನಮ್ಮ ಆಚರಣೆಗಳು ಅರ್ಥವಿಲ್ಲದ್ದು. ಮೌಢ್ಯದಿಂದ ಕೂಡಿದ್ದು…. ಇತ್ಯಾದಿ. ನಮ್ಮ ಸುಶೀಕ್ಷಿತ ಜನರೂ ಕೂಡ ಇದನ್ನೇ ಪುನರುಚ್ಚರಿಸುತ್ತಿದ್ದಾರೆ. ಆದರೆ ಇದು ನಿಜ ಅಲ್ಲ. ಇವು ಕೇವಲ ಪಾಶ್ಚಾತ್ಯರಿಗೆ ನಮ್ಮ ಸಂಸ್ಕೃತಿಯ ಕುರಿತಾದ ಅನುಭವಗಳು. ಅವರ ಅನುಭವಗಳೇ ನಮಗೆ ಆದರ್ಶವಾಗಿದೆ.ಬೆಲ್ಜಿಯಂನ ಗೆರಿಟ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಬಾಲಗಂಗಾಧರ ಅವರು ಈ ಕುರಿತು ದೀರ್ಘ ಸಂಶೋಧನೆ ಮಾಡಿದ್ದಾರೆ. ಇವರ ಸಂಶೋಧನೆ ಭಾರತೀಯ ಸಂಸ್ಕೃತಿಯ ಮೇಲೆ ಹೊಸ ಬೆಳಕು ಚೆಲ್ಲಲಿದೆ.

ಭಾರತೀಯ ಸಂಸ್ಕೃತಿಯ ಕುರಿತಾದ ನಮ್ಮ ತಪ್ಪು ತಿಳುವಳಿಕೆ ಹೇಗೆ ಜೀವನದ ಬೇರೆ ಬೇರೆ ರಂಗದ ಮೇಲೆ ಅಡ್ಡ ಪರಿಣಾಮ ಮಾಡಿದೆ ಎಂಬ ಬಾಲಗಂಗಾಧರರ ವಾದವನ್ನು ಸರಳವಾಗಿ ಅನುಭವಕ್ಕೆ ದಕ್ಕುವಂತೆ ನಿರೂಪಿಸಲಿದ್ದಾರೆ ರಮಾನಂದ ಐನಕೈ. ಹೊಸ ಅಂಕಣ ‘ಸಂಸ್ಕೃತಿ ಸಂಕಥನ’ ಆರಂಭವಾಗಲಿದೆ.

ಇದು ಹೇಳುವಷ್ಟು ಸುಲಭವಲ್ಲ. ಆದರೂ ಒಂದು ಕ್ಷಣ ವರ್ತಮಾನದ ನಮ್ಮ ಸಿದ್ಧ ನಂಬಿಕೆಗಳನ್ನು ಪೂರ್ವಾಗ್ರಹಗಳನ್ನು ಬದಿಗಿಟ್ಟು ಮುಂದುವರಿಯೋಣ.

ಕಳೆದ ೬೦ ವರ್ಷಗಳ ನಮ್ಮ ಸ್ವತಂತ್ರ ಭಾರತದಲ್ಲಿ ನೂರಾರು ರೀತಿಯ ಮನಸ್ಸುಗಳು ಬೆಳೆಯುತ್ತ ಬಂದಿವೆ. ಪ್ರತಿಯೊಂದು ಮನಸ್ಸೂ ತನ್ನದೇ ರೀತಿಯ ವೈಚಾರಿಕ ಹಾಗೂ ಮಾನಸಿಕ ಸಾಮ್ರಾಜ್ಯವನ್ನು ಕಟ್ಟಿಕೊಂಡಿದೆ ಹಾಗೂ ಅದೇ ಅಂತಿಮ ಸತ್ಯ ಎಂದು ಪ್ರತಿಪಾದಿಸುತ್ತಲಿದೆ.ಈ ಕಾರಣಕ್ಕಾಗೇ ದೇಶದಲ್ಲಿ ಅಸಂಖ್ಯಾತ ವೈವಿಧ್ಯಮಯ ಸಮಸ್ಯೆಗಳು ಇನ್ನೂ ಜೀವಂತವಾಗಿವೆ. ಇವುಗಳನ್ನೆಲ್ಲ ಸೇರಿಸಿ ನಾವು ಮುಖ್ಯವಾಗಿ ಎರಡು ರೀತಿಯ ಮನಸ್ಸುಗಳನ್ನು ಗುರುತಿಸೋಣ.

ಮತ್ತಷ್ಟು ಓದು »