ಶಾದಿ ಭಾಗ್ಯ ಮತ್ತು ಮುಸ್ಲಿಂ ಅವಶ್ಯಕತೆ
– ನವೀನ್ ನಾಯಕ್
ಅಲ್ಪ ಸಂಖ್ಯಾತರ ತುಷ್ಟೀಕರಣ ಲೋಕಸಭಾ ಚುನಾವಣ ಬರುತಿದ್ದಂತೆ ಹೆಮ್ಮರವಾಗಿ ಬೆಳೆಯುತ್ತಿದೆ. ಈ ಸಮುದಾಯದ ಜನರಿಗೆ ಇರುವ ಕೊರತೆ, ಅವಶ್ಯಕತೆಯ ಬಗ್ಗೆ ಸರಕಾರ ಕ್ರಮ ಕೈಗೊಳ್ಳುವುದರ ಬದಲು ಮತ ಬ್ಯಾಂಕ್ ಭದ್ರತೆಗೆ ಸರ್ವ ಪ್ರಯತ್ನವನ್ನೂ ಮಾಡುತ್ತಿದೆ.
ಮುಸ್ಲಿಂ ಸಮುದಾಯದ ಸಮಸ್ಯೆ ಅತಿಯಾದ ಧರ್ಮ ಶ್ರದ್ದೆ. ಒಂದು ದಂಪತಿಗೆ ಈಗಿನ ಸಮಯದಲ್ಲಿ ಒಂದು ಮಗುವನ್ನು ಸಾಕುವುದೇ ಕಷ್ಟ. ಅಂತದರಲ್ಲಿ ಈ ಸಮುದಾಯದಲ್ಲಿ ಹೆಗಲಿಗೊಂದು ಸೊಂಟಕ್ಕೊಂದು ತಲೆ ಮೇಲೊಂದು ಮಕ್ಕಳನ್ನು ಹೊತ್ತುಕೊಂಡು ಬರುವ ದಂಪತಿಗಳೇ ಹೆಚ್ಚು. ಇದು ಕುಹಕವಲ್ಲ ವಾಸ್ತವ. ಈ ಸಮುದಾಯದ ಮುಖಂಡರು ತಮ್ಮ ಸಮುದಾಯದ ನ್ಯೂನತೆ ಬಗ್ಗೆ ಯೋಚಿಸಬೇಕಿತ್ತು ಆದರೆ ಈ ಸಮಾಜದ ಮುಖಂಡರುಗಳು, ಜವಬ್ದಾರಿಯುತ ಕೆಲವು ವ್ಯಕ್ತಿಗಳು, ಬುದ್ದಿಜೀವಿಗಳೆಂದುಕೊಳ್ಳುವ ವ್ಯಕ್ತಿಗಳು ಇತರ ಧರ್ಮದ ನ್ಯೂನತೆಗಳನ್ನು ಎತ್ತಿ ತೋರಿಸುವುದಕ್ಕೆ ಹಲವು ಸಮಯವನ್ನು ಕಳೆಯುತಿದ್ದಾರೆ. ಹಾಗಂತ ಇತರ ಧರ್ಮದ ಬಗ್ಗೆ ಮಾತನಾಡಬಾರದೆಂಬುದು ಕೂಡ ತಪ್ಪಾಗುತ್ತದೆ. ಆದರೆ ಇನ್ನೊಬ್ಬನ ಶ್ರಧ್ಧೆಗಳ ಬಗ್ಗೆ ಮಾತನಾಡುವ ಮುಂಚೆ ತಾನು ಎಂತಹ ಅಡಿಪಾಯದಲ್ಲಿ (ಬಂಡೆಯಂತಹುದೋ ಅಥವ ಉಸುಗಿನಂತಹುದೋ) ನಿಂತಿದ್ದೇನೆ ಎಂಬುದನ್ನೂ ಯೋಚಿಸಬೇಕಾಗುತ್ತದೆ. ಇದನ್ನು ಬಿಟ್ಟು ಯೋಚಿಸುವಂತಹ ವ್ಯಕ್ತಿಗಳನ್ನೇ ಸೆಕ್ಯುಲರ್ ಎಂದು ಹೇಳಿಕೊಳ್ಳುವ ರಾಜಕೀಯ ಪಕ್ಷಗಳು ವ್ಯವಸ್ತಿತವಾಗಿ ಬಳಸಿಕೊಳ್ಳುತಿದ್ದಾರೆ.
ಈ ಸ್ವಾತಂತ್ರ್ಯಕ್ಕೆ ಅಸ್ಸಾಮಿನ ಉರಿಯ ಅರಿವುಂಟೇ?
– ಸಂತೋಶ್ ತಮ್ಮಯ್ಯ
ನೇಪಾಳದ ಹಿಂದೂ ರಾಜನನ್ನು ಪದಚ್ಯುತಗೊಳಿಸಿದಾಗ ಭಾರತದಲ್ಲಿ ಯಾವ ಕಮ್ಯುನಿಷ್ಟ್ ಕಾಮ್ರೆಡನಿಗೂ ಪೆಟ್ಟು ಬಿದ್ದಿರಲಿಲ್ಲ. ಪಾಕಿಸ್ಥಾನದ ರಿಂಕಲ್ ಕುಮಾರಿಯನ್ನು ಮತಾಂಧರು ಮತಾಂತರಿಸಿದಾಗ ಇಲ್ಲಿನ ಯಾವ ಹಿಂದುವೂ ಬೀದಿಗೆ ಇಳಿದಿರಲಿಲ್ಲ. ಅಲ್ಲೆಲ್ಲೋ ಪಾಶ್ಚಾತ್ಯ ದೇಶದಲ್ಲಿ ಗಣಪತಿ, ಲಕ್ಷ್ಮಿ, ಬ್ರಹ್ಮದೇವರನ್ನು ಹೆಂಗಸರ ಚಡ್ಡಿಗಳಲ್ಲಿ ಚಿತ್ರಿಸಿ ರಾಂಪ್ವಾಕ್ ಮಾಡಿದಾಗಲೂ ಹಿಂದುಗಳಾರೂ ಬಸ್ಸುಗಳಿಗೆ ಕಲ್ಲು ಬಿಸಾಡಿರಲಿಲ್ಲ. ಅದಾವುದೋ ಕೆರೆಬಿಯನ್ ದೇಶದಲ್ಲಿ ಹಿಂದುವಾದವನು ಅಧ್ಯಕ್ಷನಾಗಬಾರದು ಎಂದಾಗ ಜಗತ್ತಿನಾದ್ಯಂತ ಹಿಂದುಗಳಾರೂ ಖಂಡಿಸಲಿಲ್ಲ. ಅವೆಲ್ಲಾ ಬಿಡಿ. ಕಾಶಿ ವಿಶ್ವನಾಥನ ದರ್ಶನಕ್ಕೆ ಹೋದರೂ ಹಿಂದುಗಳಿಗೆ ಪಕ್ಕದ ಪರಮ ಅಸಹ್ಯವಾದ ಕಟ್ಟಡವೊಂದು ಸಾಮರಸ್ಯದ ಪ್ರತೀಕದಂತೆಯೇ ಕಾಣುತ್ತದೆ. ಅಯೋಧ್ಯೆಯ ರಾಮ ಇನ್ನೂ ಟೆಂಟ್ ವಾಸಿಯಾದರೂ ಬಹುತೇಕರಿಗೆ ಅದೇನೂ ಅಂಥ ಕೊರಗಿನಂತೆ ಕಾಣುವುದಿಲ್ಲ. ಯಾವ ಹಿಂದೂ ಸಂನ್ಯಾಸಿಯೂ ಮೌಲ್ವಿಗಳಂತೆ ಅಬ್ಬರಿಸುವುದಿಲ್ಲ. ಒಂದು ವೇಳೆ ಸಂನ್ಯಾಸಿ ಅಬ್ಬರಿಸಿದರೂ ಯಾರಿಗೂ ಹೆದರಿಕೆಯಾಗುವಂತೆ ಕಾಣುವುದೂ ಇಲ್ಲ.
ಅದು ಹಿಂದುವಿನ ಅತಿಯಾದ ಸಾತ್ತ್ವಿಕತೆಯೋ ಅಥವಾ ಭಂಡತನ ಮಿಶ್ರಿತ ಅತಿಯಾದ ಭಯವೋ ಎಂದು ವಿಶ್ಲೇಷಿಸುವುದು ಕಷ್ಟ. ಆದರೆ ಆತನಿಗೆ ಹಿಂದು ಎಂಬ ಕಾರಣಕ್ಕೆ ಸಿಟ್ಟು ಬರದಿರುವುದಂತೂ ಸತ್ಯ. ಮೇಲಿನ ಎಲ್ಲಾ ಸಂದರ್ಭಗಳಲ್ಲಿ ಅದು ಸಾಭೀತಾಗಿದೆ. ಬೀದಿಗಿಳಿಯಲು, ಪ್ರತಿಭಟಿಸಲು ಹಿಂದುವಿಗೆ ದಿನಕ್ಕೊಂದು ಕಾರಣವಾದರೂ ಸಿಗುತ್ತವೆ. ಆದರೆ ಅದು ನಡೆಯುವುದಿಲ್ಲ. ಏಕೆಂದರೆ ಹಿಂದುವಿಗೆ ಸಮಾಜಕ್ಕಾಗಿ ಎಂದಿಗೂ ಸಿಟ್ಟು ಬರುವುದಿಲ್ಲ.
ವೋಟ್ ಬ್ಯಾಂಕ್ ಭಾಷೆಯಾಗಲಿ ಕನ್ನಡ
– ರಾಕೇಶ್ ಶೆಟ್ಟಿ
ಪತ್ರಿಕೆಗಳಲ್ಲಿ ಆಗೀಗ ‘ಅನ್ನ ಕೊಡುವ ಭಾಷೆಯಾಗಲಿ ಕನ್ನಡ’ ಅನ್ನೋ ಕಳಕಳಿಯ ಲೇಖನಗಳು ಬರುತ್ತಲೇ ಇರುತ್ತವೆ.ಒಂದೆಡೆ ‘ಸರ್ವಂ ಇಂಗ್ಲೀಶ್ ಮಯಂ’ ಮತ್ತೊಂದೆಡೆ ‘ಏಕಮ್ ಭಾರತಂ ಹಿಂದಿಮಯಂ’ (ಈ ಮಂತ್ರ ಸರಿ ಇಲ್ಲ ಅಂತೆಲ್ಲ ಹೇಳ್ಬೆಡಿ 😉 ) ಅನ್ನೋ ಕೇಂದ್ರದ ನೀತಿಯ ನಡುವೆ ಕನ್ನಡ ‘ಅನ್ನ’ ಕೊಡುವ ಭಾಷೆಯಾಗುವುದು ಹೇಗೆ? ನನಗನ್ನಿಸುವ ಹಾಗೆ, ಈಗಿನ ಪರಿಸ್ಥಿತಿಯಲ್ಲಿ ಅನ್ನ ಕೊಡುವ ಭಾಷೆಯಾಗುವ ಶಕ್ತಿ ಬರಬೇಕೆಂದರೆ ಮೊದಲು ‘ವೋಟ್ ಕೊಡುವ ಭಾಷೆಯಾಗಬೇಕು ಕನ್ನಡ’.ಎಲ್ಲ ಪಕ್ಷಗಳು ಕುಣಿಯುವುದು ವೋಟಿಗಾಗಿ,ಪುಡಿ ವೋಟಿಗಾಗಿ ಅನ್ನೋ ಕಾಲವಿದು.ವೋಟಿಗಿರುವಷ್ಟು ಶಕ್ತಿ ಸದ್ಯಕ್ಕೆ ಯಾವುದಕ್ಕಿದೆ ನೀವೇ ಹೇಳಿ?
ಕೆಲವರು ನನ್ನ ಮಾತನ್ನು ಒಪ್ಪಬಹುದು ಇನ್ನ ಕೆಲವರು ಇದನ್ನ ನಿರಾಕರಿಸಬಹುದು. ನಿರಾಕರಿಸುವವರು ಭಾರತದ ರಾಜಕೀಯ ಇತಿಹಾಸವನ್ನೊಮ್ಮೆ ನೋಡುತ್ತಾ ಬನ್ನಿ.ಗಾಂಧೀಜಿ ಕಾಲದಿಂದ ಇಂದಿನವರೆಗೂ ನಮ್ಮಲ್ಲಿ ನಡೆಯುತ್ತಿರುವುದೇ ಓಲೈಕೆಯ ವೋಟ್ ಬ್ಯಾಂಕ್ ರಾಜಕಾರಣ ಅಲ್ವಾ?





