ವಿಷಯದ ವಿವರಗಳಿಗೆ ದಾಟಿರಿ

Posts tagged ‘ವ್ಯಥೆ’

20
ಜೂನ್

‘ಅನ್ಯಾಯ’ದ ಮನೆಯೊಳಗಿನ ಆಶಾಕಿರಣ.

– ಚಿತ್ರಾ ಸಂತೋಷ್

ದೆಹಲಿಯ ಜಿ.ಬಿ. ರಸ್ತೆಯಲ್ಲಿ ನನ್ನ ಪುಟ್ಟ ವಯಸ್ಸು, ಬದುಕು ಮೂರಾಬಟ್ಟೆಯಾಯಿತು ಅನಿಸಿತ್ತು. ನನ್ನ ವಿರುದ್ಧ ನಡೆಯುತ್ತಿರುವ ಅನ್ಯಾಯಗಳಿಗೆ ನನಗೆ ದನಿಯೆತ್ತಲೂ ನನ್ನ ಜೊತೆ ಯಾರಿರಲಿಲ್ಲ. ಆ ‘ಅನ್ಯಾಯ’ದ ಮನೆಯೊಳಗೆ ಪ್ರತಿ ನಿಮಿಷವೂ ನನ್ನ ಮೇಲೆ ಅಮಾನುಷವಾಗಿ ಅತ್ಯಾಚಾರ ನಡೆಯುತ್ತಿತ್ತು. ಐದು ವರ್ಷ ಆ ‘ಸೆರೆಮನೆ’ ಅನುಭವಿಸಿದೆ.
ಅಮ್ಮ ಅಂದ್ರೆ ನನಗೆ ತುಂಬಾ ಪ್ರೀತಿ. ಅವಳಿಗೆ ಒಂದಿಷ್ಟು ನೋವಾದರೂ ಮನಸ್ಸು ಸಹಿಸುತ್ತಿರಲಿಲ್ಲ. ಕೆಲವೊಮ್ಮೆ ಅಮ್ಮ ಮನೆಯಲ್ಲಿದ್ದ ಕಷ್ಟಗಳನ್ನು ನೆನೆದು ಅಳುತ್ತಿದ್ದಳು. ತುಂಬಾ ಸಲ ಅಮ್ಮ ಅಳುವುದನ್ನು ನೋಡಿ ನಾನೂ ಕಣ್ಣೀರಾಗುತ್ತಿದ್ದೆ. ತಲೆಗೆ ಸೆರಗು ಹೊದ್ದು ಅಳುವ ಅವಳನ್ನು ನೋಡಲಾಗದೆ ಸಮಾಧಾನಿಸುತ್ತಿದ್ದೆ. ಬದುಕು ಬರಿದಲ್ಲ, ಅಮ್ಮ ದೊಡ್ಡವಳಾದ ಮೇಲೆ ನಾ ನಿನ್ನ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಭರವಸೆ ತುಂಬುತ್ತಿದ್ದೆ. ಕೆಲವೊಮ್ಮೆ ನನಗೆ ದಿನನಿತ್ಯದ ಶಾಲೆಯ ಖರ್ಚು ಭರಿಸಲೂ ಕಷ್ಟವಾಗುತ್ತಿತ್ತು. ಆದರೂ, ಸಂಜೆ ಶಾಲೆಯಿಂದ ಹೊರಟಾಗ ಅಮ್ಮ ಏನು ತಿಂಡಿ ಮಾಡಿಟ್ಟಿರುತ್ತಾಳೆ ಅಂದುಕೊಂಡೇ ಹೊರಡುತ್ತಿದ್ದೆ.ಸಂಜೆಯಾಗುತ್ತಿದ್ದಂತೆ ಮನಸ್ಸೆಲ್ಲಾ ಮನೆಯಲ್ಲಿರುತ್ತಿತ್ತು. ಅಮ್ಮನ ನೋಡುವ ತವಕವಿತ್ತು. ಅಂದು ಸಂಜೆ ಎಂದಿನಂತೆ ಶಾಲೆಯಿಂದ ಹೊರಟಿದ್ದೆ. ಸುಮಾರು ಐದು ಗಂಟೆ. ಸೂರ್ಯ ಮುಳುಗಲು ಇನ್ನೂ ಕೆಲ ಸಮಯವಿತ್ತು. 

 

 

 

ನನ್ನ ಬೆಲೆ ೩೦೦ ರೂ!
ಅಮ್ಮ ಜಗುಲಿ ಮೇಲೆ ಕುಳಿತಿದ್ದಳು. ನನಗೆ ಅಮ್ಮನ ಕಾಣುವ ಹಂಬಲ, ಅವಳಿಗೆ ಮಗಳನ್ನು ಕಾಣುವ ವಾತ್ಸಲ್ಯ. ನನ್ನನ್ನೇ ಎದುರು ನೋಡುತ್ತಿದ್ದ ಆಕೆಯ ಮುಖದಲ್ಲಿ ನಾನು ಗೇಟು ದಾಟಿ ಹೋಗುತ್ತಿದ್ದಂತೆ ನಗು ಅರಳಿತು. ‘ಬಾ ಮಗಳೇ’ ಎಂದು ತೆಕ್ಕೆಗೆಳೆದುಕೊಂಡಳು. ಸೂರ್ಯ ಮುಳುಗಲು ಕ್ಷಣಗಳನ್ನು ಎಣಿಸುತ್ತಿದ್ದ. ಅಮ್ಮನೆದುರು ಕುಳಿತ ವ್ಯಕ್ತಿಯ ಹೆಸರು ಪ್ರವೀಣ್ ಪಂಡಿತ್. ಹೆಸರಷ್ಟೇ ಗೊತ್ತಿತ್ತು. ಅಮ್ಮ ಅವನ ಜೊತೆ ಅಷ್ಟು ಕೊಡು, ಇಷ್ಟು ಕೊಡು ಎಂದು ಚೌಕಾಸಿ ಮಾಡುತ್ತಿದ್ದಳು. ನನಗೊಂದೂ ಅರ್ಥವಾಗಲಿಲ್ಲ. ಅಮ್ಮ ಹೇಳಿದ ದುಡ್ಡಿಗೆ ಆತ ಒಪ್ಪಲೇ ಇಲ್ಲ. ಕೊನೆಗೆ ೩೦೦ ರೂ. ಕೊಡುತ್ತೇನೆ ಅಂದ. ಅಮ್ಮ ಒಪ್ಪಿಕೊಂಡು, “ಮಗಳೇ ನೀನು ಅಂಕಲ್ ಜೊತೆ ದೆಹಲಿಗೆ ಹೋಗಬೇಕು” ಎಂದು ಹೇಳಿದಳು.

ಮತ್ತಷ್ಟು ಓದು »

19
ಜೂನ್

ಕನ್ನಡ ಪರ ದನಿಯೆತ್ತಿದರೆ ತಾಲಿಬಾನಿಗಳಾ!?

(ಮಾತೃ ಭಾಷೆಗೆ ಅಪಮಾನಕಾರಿ ಹೇಳಿಕೆ ನೀಡಿದ ವಲಸಿಗರ ಬೆನ್ನು ಬಿದ್ದಿದ್ದಕ್ಕೆ ಕನ್ನಡ ಅಭಿಮಾನಿಗಳಿಗೆ ಸಿಕ್ಕ ಬಿರುದು ’ಇಂಟರ್ನೆಟ್ ತಾಲಿಬಾನಿಗಳು’ ,ಮತ್ತು ಅದನ್ನ ದಯಪಾಲಿಸಿದ್ದು ಕ್ಷ-ಕಿರಣ ಅನ್ನುವ ಬ್ಲಾಗು.ಮಾತೃ ಭಾಷೆಯ ಮಹತ್ವದ ಮತ್ತು ಆ ವಿಷಯದ ಅರಿವಿಲ್ಲದೆ ಬರೆಯುವವರ ಮೇಲೆ ನಿಲುಮೆಗೆ ಅನುಕಂಪವಿದೆ.ಆ ಬರಹಕ್ಕೆ ಹೊಳೆನರಸೀಪುರ ಮಂಜುನಾಥ್ ಅವರ ಉತ್ತರ ಇಲ್ಲಿದೆ – ನಿಲುಮೆ)

– ಹೊಳೆನರಸೀಪುರ ಮ೦ಜುನಾಥ. ಬೆ೦ಗಳೂರು.

ಸನ್ಮಾನ್ಯ ರಾಕೇಶ ಮಥಾಯಿಸ್, ತಮ್ಮ ಬ್ಲಾಗಿನಲ್ಲಿ ತಾವು ಬರೆದಿರುವ ಅಪ್ಪಟ ಕನ್ನಡಾಭಿಮಾನಿ ಬರಹಕ್ಕೆ ನನ್ನ ಪ್ರತ್ಯುತ್ತರ ಹೀಗಿದೆ ನೋಡಿರಿ.

“ನಾನೊಬ್ಬ ಮಾಧ್ಯಮದ ವಿಧ್ಯಾರ್ಥಿ. ನನ್ನ ಸುತ್ತಮುತ್ತ ಮಾಧ್ಯಮ ಪ್ರಪಂಚದಲ್ಲಿ ನಡೆಯುತ್ತಿರುವ ಜಾತೀಯತೆ, ಲಾಬಿ, ಭ್ರಷ್ಠಾಚಾರ ನೋಡಿ ಕರ್ನಾಟಕ ಮಾಧ್ಯಮ ಲೋಕದ ಮೇಲೆ ಕ್ಷಕಿರಣ ಬೀರುವ ಅಗತ್ಯವಿದೆಯೆಂದೆನಿಸಿ ಪುಟ್ಟ ಪ್ರಯತ್ನ. ಈ ಹಾದಿ ಸುಗಮವಲ್ಲವೆಂಬ ಅರಿವು ನನಗಿದೆ, ಆದರೆ ಹಿಂದಿನ ಕಟ್ಟಳೆ ಪದ್ಧತಿಗೊಳಗಾಗದೆ ಆಗಸವನ್ನೇ ತೆರೆದಿಟ್ಟಿರುವ ಇಂಟರ್ನೆಟ್ ಮಾಧ್ಯಮಕ್ಕೆ ನಾನು ಋಣಿಯಾಗಿದ್ದೇನೆ.” ಎ೦ದು ನಿಮ್ಮ ಪರಿಚಯದಲ್ಲಿ ಹೇಳಿಕೊ೦ಡಿರುವ ತಮ್ಮ ಕಣ್ಣಿಗೆ ಹೊರ ರಾಜ್ಯದವರು ಕನ್ನಡ ನೆಲ, ಜಲ, ಭಾಷೆಯ ಬಗ್ಗೆ ತಳೆದಿರುವ ನಿಲುವು, ತೋರಿಸುತ್ತಿರುವ ಅಸಡ್ಡೆ, ಇವರಿ೦ದಾಗಿ ಅವಕಾಶವ೦ಚಿತರಾಗುತ್ತಿರುವ ಅಸಹಾಯಕ ವಿದ್ಯಾವ೦ತ ಕನ್ನಡಿಗರು ಕಾಣಿಸಲಿಲ್ಲವೇ?  ಹೊರರಾಜ್ಯದವರು ಕರ್ನಾಟಕದಲ್ಲಿರಬೇಕಾದರೆ ಕನ್ನಡ ಕಲಿಯಲೇಬೇಕು ಎ೦ದಿದ್ದನ್ನು ಧೈರ್ಯವಾಗಿ ಫೇಸ್ ಬುಕ್ಕಿನ೦ತಹ ಸಾಮಾಜಿಕ ತಾಣದಲ್ಲಿ “ಫಕ್ ಆಫ್” ಎ೦ದಿದ್ದನ್ನು ವಿರೋದಿಸಿದವರು ತಮ್ಮ ಕಣ್ಣಿಗೆ “ಅ೦ತರ್ಜಾಲದ ತಾಲಿಬಾನಿಗಳು” ಎನ್ನುವ ರೀತಿಯಲ್ಲಿ ಕ೦ಡಿರುವುದು ತು೦ಬಾ ಆಶ್ಚರ್ಯಕರವಾಗಿದೆ.  ಹಾಗೆಯೇ ತಮ್ಮ ಬೌದ್ಧಿಕ ದಿವಾಳಿತನವನ್ನು ಎತ್ತಿ ತೋರಿಸುತ್ತಿದೆ ಎ೦ದು ಹೇಳಲು ವಿಷಾದವಾಗುತ್ತಿದೆ.

ಕರ್ನಾಟಕ ರಕ್ಷಣಾ ವೇದಿಕೆಯವರು ನಡೆಸಿದ ಕನ್ನಡಪರ ಹೋರಾಟಗಳನ್ನು “ಪು೦ಡಾಟಗಳು” ಅನ್ನುವಷ್ಟು ಪ್ರಬುದ್ಧರಾಗಿದ್ದೀರಲ್ಲ?  ತಾವು ಯಾವ ಮಾನದ೦ಡಗಳನ್ನು ಅನುಸರಿಸಿ ಈ ನಿರ್ಧಾರಕ್ಕೆ ಬ೦ದಿರುವಿರಿ ಎ೦ಬುದನ್ನೂ ವಿವರವಾಗಿ ಕನ್ನಡನಾಡಿನ ಜನತೆಗೆ ತಿಳಿಸುವ೦ಥವರಾಗಿ.  ಇದೇ ಪ್ರಕರಣ ಪಕ್ಕದ ತಮಿಳುನಾಡಿನಲ್ಲಿಯೋ, ಮಹಾರಾಷ್ಟ್ರದಲ್ಲಿಯೋ ನಡೆದಿದ್ದರೆ ಇಷ್ಟು ಹೊತ್ತಿಗೆ ಹಾಗೆ ಮಾತನಾಡಿದವರನ್ನು ಹೊಡೆದು ಓಡಿಸಿರುತ್ತಿದ್ದರು.
ಮತ್ತಷ್ಟು ಓದು »

12
ಜೂನ್

ಕನ್ನಡಿಗರು ಬಿಟ್ಟಿ ಬಿದ್ದಿಲ್ಲ ಅನ್ನುವುದು ನೆನಪಿರಲಿ…!

– ರಾಕೇಶ್ ಶೆಟ್ಟಿ

ಹೊಟ್ಟೆ ಪಾಡಿಗೆ ಅಂತ ಹುಟ್ಟಿದ ಊರು ಬಿಟ್ಟು ನಮ್ಮ ಬೆಂಗಳೂರಿಗೆ ಬಂದು, ಇಲ್ಲಿನ ಅನ್ನ,ನೀರು ಕುಡಿದು ’ಕನ್ನಡ ಕಲಿಯಿರಿ’ ಅಂದರೆ ನಮ್ಮ ವಿರುದ್ಧವೇ ತಿರುಗಿ ಬಿದ್ದು ಕನ್ನಡ/ಬೆಂಗಳೂರಿನ ಬಗ್ಗೆ ದ್ವೇಷಕಾರುವುದು ಒಂದು ರೀತಿಯ ಸುಲಭದ ತುತ್ತಾಗಿದೆ.

ಮೊನ್ನೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ “ಐಟಿ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಪ್ರವಾಹದಲ್ಲಿ ಕರ್ನಾಟಕ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವವರು ಇನ್ನು ಮುಂದೆ ಪ್ರಾಥಮಿಕ ಕನ್ನಡ ಭಾಷೆ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಲಿದೆ” ಅನ್ನುವ ಪ್ರಸ್ತಾವನೆಯೊಂದನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿತ್ತು.ಇದೇ ವಿಷಯವನ್ನ ಬೆಂಗಳೂರು ಮಿರರ್ ಅನ್ನುವ ಇಂಗ್ಲೀಷ್ ಪತ್ರಿಕೆ ಅನ್ಯ ಭಾಷಿಗರನ್ನ ಉದ್ರೇಕಿಸುವ ರೀತಿಯಲ್ಲಿ ಬರೆದಿದೆ.ಅಲ್ಲಿನ ಪ್ರತಿಕ್ರಿಯೆಗಳನ್ನ ನೋಡಿದರೆ ಬರೆದವರನ್ನ ಅಟ್ಟಾಡಿಸಿ ಬಡಿಯಬೇಕು ಅನ್ನಿಸುತ್ತದೆ.

ಈ ನೆಲದಲ್ಲಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾದರೆ, ಈ ನೆಲದ ಭಾಷೆ,ಸಂಸ್ಕೃತಿ,ಆಚಾರಗಳಿಗೆ ಬೆಲೆ ಕೊಡಬೇಕು ಅನ್ನುವ ಕಾಮನ್ ಸೆನ್ಸ್ ಇವರಲ್ಲಿ ಇಲ್ಲ ಅನ್ನುವುದಕ್ಕಿಂತ, ಯಾವುದಕ್ಕೂ ಪ್ರತಿಕ್ರಿಯಿಸಿದ ಕನ್ನಡಿಗರ ಧೋರಣೆಯನ್ನೆ ಇಂತ ಜನಗಳು ನಮ್ಮ ದೌರ್ಬಲ್ಯ ಅಂದುಕೊಂಡಿದ್ದಾರೆ.ಇಲ್ಲದಿದ್ದರೆ ಫ಼ೇಸ್ಬುಕ್ಕಿನಲ್ಲಿ ಹಾಲಿಡೇಐಕ್ಯು ಕಂಪೆನಿಯ ಉದ್ಯೋಗಿ ರಾಬಿನ್ ಚುಗ್ ಅನ್ನುವ ಪರದೇಶಿ ಕನ್ನಡಿಗರಿಗೆ ಫ಼ಕ್ ಆಫ಼್ ಅನ್ನುತ್ತಿರಲಿಲ್ಲ ಅಲ್ಲವಾ? ಆ ಕಿಡಿಗೇಡಿ ಕೆಲಸ ಮಾಡುವ ಕಂಪೆನಿಯ ವಿಳಾಸವಿಲ್ಲಿದೆ. ಅವರಿಗೊಂದು ಮಿಂಚೆ ಬರೆದು (ಭಾಷೆ ವಿಷಯ ಮುಟ್ಟಿಸುವಂತಿರಲಿ,ಬೈಗುಳ ದಯವಿಟ್ಟು ಬೇಡ) ಈ ಮಣ್ಣಿನ ಭಾಷೆಯ ಬಗ್ಗೆ ಗೌರವ ಇಲ್ಲದ ಇಂತವರನ್ನ ನಿಮ್ಮ ಕಂಪೆನಿಯಲ್ಲಿ ಇಟ್ಟುಕೊಳ್ಳುವಿರಾ ಅಂತಲೇ ಕೇಳಬೇಕು.ಮೊದಲೆ ಅವನಿಗೆ ಇಲ್ಲಿನ ರೀತಿ ರಿವಾಜುಗಳ ಬಗ್ಗೆ ತಕರಾರುಗಳಿವೆ.ಇಂತ ಹುಡುಗನನ್ನ ವಾಪಸ್ ಅವನ ಮನೆಗೆ ಕಳಿಸೋದು ನಮ್ಮ ಕರ್ತವ್ಯವಲ್ಲವೇ ಗೆಳೆಯರೇ?

ಮತ್ತಷ್ಟು ಓದು »

9
ಜೂನ್

ಬೆಂಗಳೂರು ಕೇಂದ್ರಾಡಳಿತ ಪ್ರದೇಶವಾಗಲಿ

– ಶ್ರೀ ಹರ್ಷ ಸಾಲಿಮಠ

ಇದೊಂದು ಮಾತನ್ನು ಅತ್ಯಂತ ತೀವ್ರ ಸಂಕಟದಿಂದ ಹೇಳುತ್ತಿದ್ದೇನೆ. ಕಾಲಿಗೆ ಗ್ಯಾಂಗ್ರಿನ್ ಆದಾಗ ಕಾಲನ್ನು ಕತ್ತರಿಸುತ್ತಾರಲ್ಲ ಹಾಗೆ.  ನೋವಾಗುತ್ತದೆ ಆದರೆ ಬದುಕಲು ಅದು ಅನಿವಾರ್ಯ. ಕನ್ನಡ/ಕರುನಾಡು ಉಳಿಯಬೇಕೆಂದರೆ ಈ ಕೆಲಸ ಆಗಬೇಕಾಗಿದೆ.

ಬೆಂಗಳೂರಲ್ಲಿ ಕನ್ನಡ ಸಿಗುವುದಿಲ್ಲ.ಕನ್ನಡಿಗರು ಕಾಣೆಯಾಗುತ್ತಿದ್ದಾರೆ ಎಂಬ ಮಾತನ್ನು ಅತಿಶಯೋಕ್ತಿ ಎಂದುಕೊಂಡಿದ್ದೆ.ಇತ್ತೀಚಿನ ನನ್ನ ಕೆಲ ಅನುಭವಗಳು ಇದು ಸತ್ಯವೆಂದು ಬಿಂಬಿಸಿವೆ. ನಾನು ಎರಡು ಕಂಪನಿಗಳಿಗೆ ಇಂಟರ್‍ ವ್ಯೂ ಪ್ಯಾನೆಲಿಸ್ಟ್ ಆಗಿದ್ದೇನೆ. ಎರಡು ಕಾಲೇಜುಗಳಿಗೆ ಅಕಡೆಮಿಕ್ ಕನ್ಸಲ್ಟಂಟ್ ಆಗಿದ್ದೇನೆ. ನನ್ನ ಅನುಭವ ಮತ್ತು ವಿಶ್ಲೇಷಣೆಯಿಂದ ಇದೊಂದು ಅಭಿಪ್ರಾಯವನ್ನು ಮುಂದಿಡುತ್ತಿದ್ದೇನೆ.

ಇಲ್ಲಿಯವರೆಗೆ ಕಂಪನಿಗಳಿಗಾಗಿ ಸುಮಾರು ಸೂರು ಜನರ ಸಂದರ್ಶನ ನಡೆಸಿದ್ದೇನೆ. ದಯವಿಟ್ಟು ನಂಬಿ. ಇಲ್ಲಿಯವರೆಗೆ ಒಬ್ಬನೇ ಒಬ್ಬ ಕನ್ನಡಿಗ ಸಂದರ್ಶನಕ್ಕಾಗಿ ಬಂದಿಲ್ಲ! ನಾನು ಮತ್ತು ಪ್ಯಾನೆಲ್ ನಲ್ಲಿರುವ ಕೆಲವರು ಕನ್ನಡಿಗ ಗೆಳೆಯರು ಕನ್ನಡದ ಹುಡುಗರು ಬಂದರೆ ಕೊಂಚ ದಡ್ಡರಿದ್ದರೂ ಸರಿ ಶತಾಯಗತಾಯ ಮುಂದಕ್ಕೆ ತಳ್ಳಬೇಕೆಂದು ಯೋಜಿಸಿಕೊಂಡಿದ್ದೆವು. ಆದರೆ ಕನ್ನಡದ ಒಬ್ಬ ಹುಡುಗನಾದರೂ ಬಂದರೆ ತಾನೆ? ಬಂದವರು ಬಹುತೇಕರು ತೆಲುಗರು ಮತ್ತು ಬಿಹಾರಿಗಳು! ಕೃಷ್ಣದೇವರಾಯ ವಿಶ್ವವಿದ್ಯಾಲಯದ ಲ್ಲಿ ಬಿಎಎಸ್ಸಿ  ಪದವಿ ಮುಗಿಸಿ ಎರಡು ವರುಷಗಳ ಸುಳ್ಳು ಅನುಭವ ಹಾಕಿಕೊಂಡು ಬರುತ್ತಾರೆ. ಕಂಪನಿಗಳಾದರೋ ಇವರು ಸುಳ್ಳರು ಎಂದು ತಿಳಿದೂ ತೆಗೆದುಕೊಳ್ಳುತ್ತವೆ. ಏಕೆಂದರೆ ಈಗ ಬಹುತೇಕ ಕಂಪನಿಗಳು ಸರ್ವಿಸ್ ಮತ್ತು ಮೇಂಟೆನೆನ್ಸ್ ಕೆಲಸಗಳನ್ನು ನಡೆಸುತ್ತಿವೆ. ಈ ಕೆಲಸಕ್ಕೆ ಹೆಚ್ಚಿನ ಕೌಶಲ್ಯ ಅಗತ್ಯವಿಲ್ಲ. ಒಂದೆರಡು ತಿಂಗಳಲ್ಲಿ ಯಾರಾದರೂ ಕಲಿಯಬಹುದು. ಗಿರಾಕಿಗಳಿಗೆ ತೋರಿಸಲು ಬಿಲ್ಲಿಂಗಿಗಾಗಿ ಕೆಲವು ನೌಕರರ ಅವಶ್ಯಕತೆ ಇರುತ್ತದೆ. ಹಾಗಾಗಿ ಕೌಶಲ್ಯದ ಬಗ್ಗೆ ಹೆಚ್ಚಿನ ತಲೆ ಕೆಡಿಸಿಕೊಳ್ಳದೇ ಕಂಪನಿಗಳು ಇವರನ್ನು ಕೊಳ್ಳುತ್ತವೆ. ಇವರು ಕಡಿಮೆ ಸಂಬಳಕ್ಕೆ ರಾತ್ರಿ ಪಾಳಿಗೂ ಕೆಲಸ ಮಾಡಲು ತಯಾರಿರುವುದರಿಂದ ಕಂಪನಿಗಳಿಗೂ ಲಾಭ!
ಮತ್ತಷ್ಟು ಓದು »

19
ಏಪ್ರಿಲ್

ಕನ್ನಡ ಆಡಳಿತ ಭಾಷೆ ಯಾಕಾಗಿಲ್ಲ ಗೊತ್ತೆ!?

– ವಸಂತ್ ಶೆಟ್ಟಿ

ಕನ್ನಡ ನಾಡು ಏಕೀಕರಣಗೊಂಡು ದಶಕಗಳೇ ಕಳೆದರೂ ಕನ್ನಡ ಎಲ್ಲ ಹಂತದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಂಡಿಲ್ಲ ಅನ್ನುವ ಕೂಗು ನಾವೆಲ್ಲರೂ ಕೇಳಿಯೇ ಇರುತ್ತೇವೆ. ಇದಕ್ಕೆ ಸರ್ಕಾರದ ಇಚ್ಛಾಶಕ್ತಿಯ ಕೊರತೆಯೇ ಕಾರಣ ಎಂದೂ ಕೇಳಿರುತ್ತೇವೆ. ಭಾಷಾ ವಿಜ್ಞಾನಿ ಕೆ.ವಿ.ನಾರಾಯಣ ಅವರ ಕನ್ನಡ ಜಗತ್ತು: ಅರ್ಧ ಶತಮಾನ ಅನ್ನುವ ಹೊತ್ತಗೆ ಓದುತ್ತಾ ಇದ್ದೆ. ಅಲ್ಲಿ ಈ ಬಗ್ಗೆ ಅವರು ಕೊಡುವ ವಿವರಣೆ ಒಂದು ರೀತಿಯಲ್ಲಿ ಬೇರೆಯಾಗಿದೆ ಅನ್ನಬಹುದು. ಸರ್ಕಾರದ ಹೆಚ್ಚಿನ ಪ್ರಯತ್ನ (ಬಾಯಿ ಮಾತಲ್ಲಿ ಅಂತ ಬೇಕಾದ್ರೂ ಅಂದುಕೊಳ್ಳೊಣ 🙂 )ದ ನಂತರವೂ ಆಡಳಿತದಲ್ಲಿ ಕನ್ನಡ ಬಳಕೆ ಒಂದು ರೀತಿಯಲ್ಲಿ ಪಿರಮಿಡ್ ನಂತೆ ನಮಗೆ ಗೋಚರಿಸುತ್ತೆ. ಕೆಳ ಹಂತದಲ್ಲಿ ಕನ್ನಡ ವ್ಯಾಪಕವಾಗಿ ಬಳಕೆಯಾದರೆ, ಮೇಲೆ ಮೇಲೆ ಹೋದಂತೆ ಅದರ ಪ್ರಮಾಣ ಕಡಿಮೆಯಾಗುತ್ತ ಹೋಗುತ್ತದೆ. ಹಾಗಿದ್ದರೆ ಆಡಳಿತದಲ್ಲಿ ಕನ್ನಡದ ಬಳಕೆ ಅಂದುಕೊಂಡ ಮಟ್ಟದಲ್ಲಿ ಗೆಲುವು ಪಡೆಯದಿರಲು ಕಾರಣವೇನು ಎಂದು ಅವರು ಕೊಟ್ಟ ವಿವರಣೆಯನ್ನು ಈ ಕೆಳಗೆ ಕೊಟ್ಟಿರುವೆ.

ಈ ಅಪಯಶಸ್ಸನ್ನು ಎರಡು ದಿಕ್ಕಿನಿಂದ ವಿಶ್ಲೇಷಿಸಬೇಕಾದ ಅಗತ್ಯವಿದೆ. ಕಾರ್ಯಕ್ರಮ ಯಶಸ್ಸು ಪಡೆಯದಿರಲು ಅದರ ಹಿಂದಿನ ಯೋಜನಾ ತಂತ್ರಗಳಲ್ಲಿ ಕೊರತೆ ಇರುತ್ತದೆ. ಅಥವಾ ಅನುಷ್ಠಾನದ ಹಂತದಲ್ಲಿ ಹಲವು ಎಡರು ತೊಡರುಗಳಿರಬೇಕು. ಈ ದಿಕ್ಕಿನಿಂದ ನೋಡಿದಾಗ ಕನ್ನಡ ಅನುಷ್ಠಾನಕ್ಕೆ ಬೇಕಾದ ಭಾಷಾನೀತಿ ಮತ್ತು ಯೋಜನೆಗಳು ರಾಜ್ಯ ಸರ್ಕಾರಕ್ಕೆ ಇಲ್ಲವೆಂಬ ನಿರ್ಣಯಕ್ಕೆ ಬರುವುದು ಸಾಧ್ಯ. ಆದರೆ ಇದನ್ನು ಇನ್ನೊಂದು ದಿಕ್ಕಿನಲ್ಲಿ ನೋಡಿದಾಗ ಬೇರೆಯ ಸಾಧ್ಯತೆ ಗೋಚರಿಸುತ್ತದೆ.

ಮತ್ತಷ್ಟು ಓದು »

17
ಏಪ್ರಿಲ್

ಎಂಡ್ ‘ದಿ’ ಸಲ್ಫಾನ್…!

17
ಫೆಬ್ರ

ಜೀವನವೆಂದರೆ ಅಲ್ಪವಿರಾಮಗಳ ಸಂತೆ,ಕೊನೆಗೊಂದು ಪೂರ್ಣವಿರಾಮ – ೧

– ಚೇತನ್ ಕೋಡುವಳ್ಳಿ

ಇಂಜಿನಿಯರಿಂಗ್ ಮುಗಿಸಿಕೊಂಡು ರಾಜ್ಯ ರಸ್ತೆ ಸಾರಿಗೆಯ ಕೆಂಪು ಬಸ್ಸಿನಲ್ಲಿ ಬೆಂಗಳೂರಿಗೆ ಬಂದು ಇಳಿದ ಹುಡುಗ, ಕಣ್ಣುಗಳಲ್ಲಿ ಕನುಸುಗಳ ರಾಶಿ, ಕಷ್ಟಪಟ್ಟು ಓದಿಸಿದ ಅಪ್ಪ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ, ತಂಗಿಯ ಮದುವೆಯ ಜವಾಬ್ದಾರಿ, ಅದಕ್ಕಿಂತ ಮೊದಲು ತನಗೊಂದು ಸೂರು ಹುಡುಕಿಕೊಳ್ಳುವ, ಆಮೇಲೆ ಬದುಕಿಗೊಂದು ಕೆಲಸ ಪಡೆಯುವ ಸಾಹಸ, ಗೆಳೆಯರ ಜೊತೆಗೂಡಿ ಒಂದು ಬಾಡಿಗೆ ಮನೆ, ನಂತರ ಕೆಲಸ ಹುಡುಕುವ ನಿರಂತರ ಕಾಯಕ, ಬಿ, ಎಂ, ಟಿ, ಸಿಯ ಡೈಲಿ ಪಾಸ್ ತೆಗೆದುಕೊಂಡು ಕಂಡ ಕಂಡ ಕಂಪನಿಗಳಲ್ಲಿ ರೆಸ್ಯುಮ್ಗಳನ್ನು ಸುರಿದು ಸಂಜೆಯ ಹೊತ್ತಿಗೆ ಬಸವಳಿದು ಮನೆಗೆ ಬಂದು ಸೇರಿ, ಅಡಿಗೆ ಮಾಡಿ ತಿಂದು, ಹಾಸಿಗೆಯ ಮೇಲೆ ಬಿದ್ದಾಕ್ಷಣ ನಾಳೆಯೋ ನಾಡಿದ್ದೋ ರೆಸ್ಯುಮ್ಗಳನ್ನು ಕೊಟ್ಟು ಬಂದ ಕಂಪನಿಗಳಿಂದ ಕಾಲ್ ಬರುವುದೋ ಎನ್ನುವ ಕನಸುಗಳು, ಬುಧವಾರದ ಅಸೆಂಟ್ ನೋಡಿ ಶನಿವಾರದ ವಾಕ್ ಇನ್ಗೆ ಸಿದ್ಧತೆ, ಶನಿವಾರ ಅಲ್ಲಿ ಹೋಗಿ ನೋಡಿದರೆ ಜನಸಾಗರ, ಇಷ್ಟು ಜನದಲ್ಲಿ ಕೆಲಸ ಸಿಗುವುದೋ ಇಲ್ಲವೋ ಎನ್ನುವ ಹತಾಶೆಯ ನಡುವೆ ಕಷ್ಟಪಟ್ಟು ನಿಂತು ರಿಟನ್ ಟೆಸ್ಟ್ ಬರೆದು, ಕೊನೆಗೆ ಫಲಿತಾಂಶ ಬಂದ ಮೇಲೆ ಮೊದಲನೇ ಸುತ್ತಿನಲ್ಲೇ ಹೊರಬಿದ್ದು, ತನ್ನ ಗೆಳೆಯರ ಪರಿಸ್ಥಿತಿಯೂ ಹಾಗೆಯೇ ಆಗಿ, ಅಲ್ಲಿಂದ ಮಜೆಸ್ಟಿಕ್ಗೆ ಬಂದು ಕಪಾಲಿಯಲ್ಲೋ ಸಂತೋಷ್ ಥಿಯೇಟರ್ನಲ್ಲೋ ಒಂದು ಸಿನೆಮಾ ನೋಡಿ ಮತ್ತೆ ಮನೆ ಕಡೆಗೆ ಪ್ರಯಾಣ, ಹೀಗೆ ಅಲ್ಲಿ ಇಲ್ಲಿ ಹುಡುಕಿ ಕೊನೆಗೊಂದು ದಿನ ಯಾವುದೋ ಕಂಪನಿಯಲ್ಲಿ ಕೆಲಸ, ತನ್ನ ಗೆಳೆಯರಿಗೂ ಹಾಗೆ ಒಂದೊಂದು ಕಡೆ, ಕೆಲಸ ಸಿಕ್ಕಾಗಲೆಲ್ಲ ಒಬ್ಬೊಬ್ಬರಿಂದ ಪಾರ್ಟಿ, ಈ ನಡುವೆ ಊರಿನಲ್ಲಿ ಕಷ್ಟವಿದ್ದರೂ ತನಗೆ ಬರುತ್ತಿರುವ ಸಂಬಳ ಕಡಿಮೆ ಎಂದುಕೊಂಡು ಸ್ವಲ್ಪವನ್ನೂ ಕಳಿಸದೆ, ವೀಕೆಂಡ್ ಸಿನೆಮಾ, ವಿಂಡೋ ಶಾಪಿಂಗ್, ಬಟ್ಟೆ ಖರೀದಿ, ಬಣ್ಣದ ಲೋಕ, ಅಲ್ಲಲ್ಲಿ ಸುತ್ತಾಟ, ತನಗಾಗಿ ಹೊಸ ಮೊಬೈಲ್, ಲ್ಯಾಪ್ ಟಾಪ್, ತನ್ನ ಆಫೀಸಿನಲ್ಲೇ ತನ್ನೊಂದಿಗೆ ಕೆಲಸ ಮಾಡುತ್ತಿರುವ ಹುಡುಗಿಯೊಂದಿಗೆ ಒಡನಾಟ, ಅವಳ ಜೊತೆ ಸುತ್ತಾಡಲು ಸಾಲದಿಂದ ತೆಗೆದುಕೊಂಡ ಬೈಕ್, ಬಂದ ಸಂಬಳವೆಲ್ಲ ತಮ್ಮಿಬ್ಬರ ಸುತ್ತಾಟಕ್ಕೆ, ತನ್ನ ಮಗ ನೋಡಲು ಬರಲೇ ಇಲ್ಲ ಎಂದು ಅಮ್ಮನ ಚಡಪಡಿಕೆ, ತನ್ನ ಮಗನನ್ನು ಹೋಗಿ ನೋಡಿಕೊಂಡು ಬರಲು ಹೊರಟ ಅಪ್ಪ, ತನ್ನ ಮಗ ಸಾವಿರ ಸಾವಿರ ದುಡಿಯುತ್ತಿದ್ದರೂ ಅದೇ ಕೆಂಪು ಬಸ್ಸಿನಲ್ಲಿ ಬೆಂಗಳೂರಿಗೆ ಪಯಣ, ಸಂಜೆ ತಲುಪಿ ಕಾಯಿನ್ ಬೂತಿಂದ ಕರೆ ಮಾಡಿದರೆ ಮಗನಿಂದ ಬಂದ ಉತ್ತರ ಸ್ವಲ್ಪ ಹೊತ್ತು ಕಾಯಿ ಎಂದು, ಅಲ್ಲಿ ಇವನು ತನ್ನ ಹುಡುಗಿಯೊಂದಿಗೆ ಊರೆಲ್ಲ ಸುತ್ತಾಡಿ ಐಶಾರಾಮಿ ಹೋಟೆಲ್ಲಿನಲ್ಲಿ ಊಟ ಮಾಡಿ ವಾಪಸ್ ಮನೆಗೆ ಬರುವಾಗ ರಾತ್ರಿ!

ಮತ್ತಷ್ಟು ಓದು »