ವಿಷಯದ ವಿವರಗಳಿಗೆ ದಾಟಿರಿ

Posts tagged ‘ಶೋಷಣೆ’

24
ಡಿಸೆ

ಕೌರವರ ನಾಶಕ್ಕೆ ಶ್ರೀಕಾರ ಹಾಕಿದ್ದು ದ್ರೌಪದಿಯೇ ತಾನೇ?

– ರಾಕೇಶ್ ಶೆಟ್ಟಿ

Dehli1ಬಹುಷಃ ಆಗಿನ ಕಾಲವೇ ಚೆನ್ನಾಗಿತ್ತೆನೋ.ಆಗಲಾದರು ಕುರು ಸಭೆಯಲ್ಲಿ ದ್ರೌಪದಿಯ ವಸ್ತ್ರಾಪಹರಣವಾಗುವಾಗ ಅವಳ ಸಹಾಯಕ್ಕೆ ಕರೆದೊಡನೆಯೇ ಶ್ರೀ ಕೃಷ್ಣ ಪರಮಾತ್ಮ ಬಂದಿದ್ದ.ಪಾಪ! ಈ ಕಾಲದ ಹೆಣ್ಣು ಮಕ್ಕಳ ಕೂಗು ಆ ಕಾಣದ ದೇವರಿಗೂ,ಕಾನೂನು ಪಾಲಕರಾದ ಮನುಷ್ಯ(?)ರಿಗೂ ಕೇಳುತ್ತಿಲ್ಲ.ಕುರುಕ್ಷೇತ್ರದ ಯುದ್ಧದ ಮುಗಿದರೂ ಕೌರವರು ಇನ್ನೂ ಸತ್ತಿಲ್ಲ.ದ್ರೌಪದಿಯರ ಗೋಳು ಮುಗಿಯೋಲ್ಲ…

ಕಳೆದ ಶನಿವಾರದ ಬೆಳಗ್ಗಿನಿಂದ ಇಂಡಿಯಾ ಗೇಟ್,ರಾಷ್ಟ್ರಪತಿ ಭವನದ ಮುಂದೆ ನಿಂತು ನ್ಯಾಯ ಕೇಳಿದ ಯುವಕ-ಯುವತಿಯರ ಮೇಲೆಯೇ ಲಾಠಿ ಚಾರ್ಜ್,ಜಲಫಿರಂಗಿ,ಅಶ್ರು ವಾಯು ಪ್ರಯೋಗ ನಡೆಯುತ್ತಿದ್ದರೂ.ಪ್ರಧಾನಿ ಮೌನ ಮೋಹನ್ ಸಿಂಗ್ ತಮ್ಮ ಮೌನ ಮುರಿದಿದ್ದು ಸೋಮವಾರ ಬೆಳಿಗ್ಗೆ.ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ!,ಅದೂ ಸಹ ತಮ್ಮ ಭಾಷಣದ ಕೊನೆಯಲ್ಲಿ “ಟೀಕ್  ಹೈ” ಅಂದರಂತೆ! ಕ್ಯಾಮೆರಾ ಹಿಂದೆ ನಿಂತಿದ್ದ ನಿರ್ದೇಶಕ(ಕಿ) ಯಾರಿದ್ದಿರಬಹುದು? So Called ಯುವನಾಯಕ ರಾಹುಲ್ ಗಾಂಧಿಗೂ ಯುವಕ-ಯುವತಿಯರ ಮೇಲೆ ಪೋಲಿಸ್ ದೌರ್ಜನ್ಯ ಕಾಣಿಸಿಲ್ಲ.ರಷ್ಯಾದಿಂದ ಪುಟಿನ್ ಬರುತಿದ್ದಾರೆ ಅವರೆದುರು ನೀವು ಗಲಾಟೆ ಮಾಡಿದರೆ ಭಾರತದ ಬಗ್ಗೆ ಅವರೇನು ತಿಳಿದುಕೊಂಡಾರು ಅಂತ ಬುದ್ದಿ ಹೇಳುವ ಗೃಹ ಮಂತ್ರಿ ಶಿಂಧೆಗೇ,ವೃದ್ಧರು ,ಮಹಿಳೆಯರು,ಮಕ್ಕಳ ಮೇಲೆ ದೌರ್ಜನ್ಯವೆಸಗಿದ ಪೋಲಿಸರನ್ನು ಮನೆಗೆ ಕಳಿಸಲಾಗದಿದ್ದ ಮೇಲೆ ತಾನು ಕುಳಿತಿರುವ ಕುರ್ಚಿಯಿಂದ ಎದ್ದೋಗಬೇಕು ಅನ್ನುವ ನೈತಿಕತೆ  ಕೂಡ ಉಳಿದಿಲ್ಲವೇ? ಎದ್ದೋಗುವುದನ್ನು ಪಕ್ಕಕ್ಕಿಡಿ,ತನ್ನ  ಪೋಲಿಸ್ ಪಡೆ ಮಾಡಿದ ಘನಂದಾರಿ ಕೆಲಸಕ್ಕಾಗಿ ದೇಶದ ಜನರ ಕ್ಷಮೆ ಕೇಳಲು ಸಹ ಆತ ಸಿದ್ಧನಿಲ್ಲ. ಹಾಳು ಬಿದ್ದು ಹೋಗಲಿ ಕ್ಷಮೆಯೂ ಬೇಡ.ನ್ಯಾಯ ಕೇಳಲು ನಿಂತ ವಿದ್ಯಾರ್ಥಿಗಳನ್ನು ಭೇಟಿಯಾಗುವ ಕುರಿತು ಪ್ರಶ್ನೆ ಕೇಳಿದರೆ, “ಇವತ್ತು ವಿದ್ಯಾರ್ಥಿಗಳು ಪ್ರತಿಭಟಿಸುತ್ತಾರೆ.ನಾಳೆ ಮಾವೋವಾದಿಗಳು ಪ್ರತಿಭಟಿಸುತ್ತಾರೆ.ಹಾಗಂತ ಮಾವೋವಾದಿಗಳು ಭೇಟಿಯಾಗಲು ಸಾಧ್ಯವೇ?” ಅನ್ನುತ್ತಾನಲ್ಲ ಇದೆಂತ ಉಡಾಫೆ ತನದ ಮಾತು? ಎಲ್ಲಿಗೆ ಬಂದು ನಿಂತಿದೆ ನಮ್ಮ ವ್ಯವಸ್ಥೆ?

ಮತ್ತಷ್ಟು ಓದು »

2
ಜುಲೈ

ಕನ್ನಡ/ಇಂಗ್ಲೀಷ್ ಮಾಧ್ಯಮದ ಜೊತೆಗೆ ಏಕರೂಪ ಶಿಕ್ಷಣದ ಬಗ್ಗೆಯೂ ಚರ್ಚೆ ಆಗಬೇಕಲ್ಲವೇ?

– ರಾಕೇಶ್ ಶೆಟ್ಟಿ

ಕಡೆಗೂ ‘ಸರ್ಕಾರ ಏಕರೂಪ ಶಿಕ್ಷಣ ನೀತಿ ಜಾರಿಗೆ ತರುವ ನಿಟ್ಟಿನಲ್ಲಿ ಚಿಂತಿಸಬೇಕು’ ಅನ್ನುವ ಮಾತುಗಳನ್ನು ಕಸಪಾ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದ್ದಾರೆ.ಕಳೆದ ಹಲವು ದಿನಗಳಿಂದ ಇಂಗ್ಲೀಷ್ ಮಾಧ್ಯಮದ ಸುತ್ತ ನಡೆಯುತ್ತಲಿರುವ ಚರ್ಚೆಯಲ್ಲಿ ನಾನು ನಿರೀಕ್ಷಿಸುತಿದ್ದ ಮಾತು “ಏಕರೂಪ ಶಿಕ್ಷಣ”ದ ಬಗ್ಗೆ.ಪೇಟೆಯ/ಉಳ್ಳವರ ಮಕ್ಕಳಿಗೊಂದು ಶಿಕ್ಷಣ,ಹಳ್ಳಿಯ/ಬಡವರ ಮಕ್ಕಳಿಗೊಂದು ಶಿಕ್ಷಣ ಕೊಟ್ಟು ಕಡೆಗೆ ಸಮಾನತೆ,ಸಾಮಾಜಿಕ ನ್ಯಾಯ,ಭಾಷೆ,ನಾಡು-ನುಡಿಯ ಅಳಿವು ಉಳಿವು ಅಂತ ಮಾತನಾಡುವುದೆಷ್ಟು ಸರಿ?

೧೦ನೆ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲೇ ಓದಿದ ನನಗೆ ಮಾತೃ ಭಾಷೆಯಲ್ಲಿ ಕಲಿಯುವುದೆಷ್ಟು ಸುಲಭ,ಆನಂದದ ವಿಷಯ ಅನ್ನುವುದರ ಅರಿವಿದೆ ಹಾಗೆಯೇ ೧೦ರ ನಂತರ ಇಂಗ್ಲೀಷ್ ಮಾದ್ಯಮಕ್ಕೆ (ಪಿಯುಸಿಯಲ್ಲಿ ಆಯ್ದುಕೊಂಡಿದ್ದು ವಿಜ್ಞಾನ ವಿಷಯ) ಕಾಲಿಟ್ಟಾಗ ಅನುಭವಿಸಿದ ಕಷ್ಟ,ಕೀಳರಿಮೆಯ ಅನುಭವಗಳು ಇವೆ.ಹಾಗಾಗಿ ಈ ಚರ್ಚೆಯಲ್ಲಿ ಮತ್ತು ಈಗಿನ ನಮ್ಮ ಶೈಕ್ಷಣಿಕ ಪರಿಸ್ಥಿತಿಯಲ್ಲಿ ನಾನು ಇಂಗ್ಲೀಷ್ ಮೀಡಿಯಂ ಬೇಕು ಅನ್ನುವುದರ ಪರವೇ ನಿಲ್ಲುತ್ತೇನೆ.

ಒಂದು ವೇಳೆ ಸಾಹಿತಿಗಳು ಒತ್ತಾಯಿಸುತ್ತಿರುವಂತೆ ಪ್ರಾಥಮಿಕ ಶಿಕ್ಷಣ ಮಾತೃ ಭಾಷೆಯಲ್ಲೇ ಆಗಬೇಕು ಅನ್ನುವುದಾದರೆ ಅದು ಈ ರಾಜ್ಯದಲ್ಲಿರುವ ಸರ್ಕಾರಿ/ಅನುದಾನಿತ/ಕೇಂದ್ರೀಯ/ಖಾಸಗಿ ಶಾಲೆಗಳಿಗೂ ಏಕರೂಪವಾಗಿ ಅನ್ವಯವಾಗಲಿ. ಅದನ್ನು ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಕನ್ನಡ ಕಡ್ಡಾಯವಾಗಲಿ ಆ ಮೂಲಕ ಬಡವರ ಮಕ್ಕಳು ಮಾತ್ರ ಕನ್ನಡದಲ್ಲಿ ಕಲಿತು ಮುಂದೆ ಇಂಗ್ಲೀಷ್ ಲೋಕಕ್ಕೆ ಕಾಲಿಟ್ಟು ಅರ್ಧಕರ್ಧ ಜನ ಕೀಳರಿಮೆ,ಹೆದರಿಕೆಯಿಂದಾಗಿ ಹಿಂದೆ ಬೀಳಲಿ ಅನ್ನುವುದು ಇಬ್ಬಗೆಯ ನೀತಿಯಾಗುತ್ತದೆ.

ಏಕರೂಪ ಶಿಕ್ಷಣ ಅನ್ನುವಾಗ ಇನ್ನೊಂದು ಅಂಶವನ್ನ ನಾವು ಗಮನಕ್ಕೆ ತೆಗೆದುಕೊಳ್ಳಬೇಕು.ಮಕ್ಕಳನ್ನು ಶಾಲೆಗೇ ಸೇರಿಸುವಾಗ ಅದು ಇಂಗ್ಲೀಷ್ ಮೀಡಿಯಂ ಶಾಲೆಯೇ ಅಂತ ಮಾತ್ರ ಈಗಿನ ಪೋಷಕರು ನೋಡುತ್ತಿಲ್ಲ,ಅದರ ಜೊತೆಗೆ ಅವರು ಅಲ್ಲಿರುವುದು ಸೆಂಟ್ರಲ್ ಸಿಲ್ಲಬಸ್ಸೋ,ಐ.ಸಿ.ಎಸ್.ಈ ಸಿಲ್ಲಬಸ್ಸೋ (ಅಥವಾ ಇನ್ಯಾವುದೋ) ಅನ್ನುವುದನ್ನು ನೋಡುತಿದ್ದಾರೆ.ನಮ್ಮ ಮಕ್ಕಳು ಇಂತ ಸಿಲಬಸ್ಸ್ ಇರೋ ಶಾಲೆಯಲ್ಲಿ ಓದುತಿದ್ದಾರೆ ಅಂತ ಹೇಳಿಕೊಳ್ಳುವುದು ಈಗಿನ ಪೋಷಕರಿಗೆ ಗರ್ವದ ವಿಷಯವಾಗಿದೆ. ಅಸಲಿಗೆ ಈ ರೀತಿ ಬೇರೆ,ಬೇರೆ ಸಿಲ್ಲಬಸ್ಸಿನ ಅಗತ್ಯ ಶಾಲಾ ಮಟ್ಟದಲ್ಲಿ ಏನು ಅನ್ನುವುದು ಸಹ ಚರ್ಚೆಯಾಗಬೇಕಲ್ಲವೇ?

ಮತ್ತಷ್ಟು ಓದು »

12
ಡಿಸೆ

ಮಡೆಸ್ನಾನ ನಿಲ್ಲಬೇಕಾಗಿರುವುದು ಮಾನವೀಯತೆಗಾಗಿ,ಜಾತಿಗಾಗಿಯಲ್ಲ

– ರಾಕೇಶ್ ಶೆಟ್ಟಿ

ಇದನ್ನ ಈ ದೇಶದ ಕರ್ಮ ಅಂತಲೇ ಅನ್ನಬೇಕೇನೋ,  ಅಂದುಕೊಂಡಂತೆ ‘ಮಡೆ ಸ್ನಾನ’ದ ‘ಮಡೆ'(ಮಡೆ=ಎಂಜಲು) ಉರುಳದವರ ಮೇಲೆಯೂ ಬೀಳುತ್ತಿದೆ.ಇಷ್ಟು ದಿನ ಉರುಳಾಡಿದ್ದು ಮನುಷ್ಯರಾದರೆ ಈಗ ಸಮಸ್ತ ಜಾತಿಗಳು ಬಿದ್ದು ಉರುಳಾಡುತ್ತಿವೆ.ಮಡೆ ಸ್ನಾನವನ್ನು ವಿರೋಧಿಸಿ ನಾನು ಈ ಹಿಂದೆ ಬರೆದ ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಲ್ಲಿ ‘ಅದು ಬ್ರಾಹ್ಮಣರ ಎಂಜಲೆಲೆ’ ಅನ್ನುವ ಕಾರಣಕ್ಕೆ ವಿರೋಧಿಸುತಿದ್ದಿರ ಅನ್ನುವಂತಹ ಪ್ರತಿಕ್ರಿಯೆಗಳು ಬ್ಲಾಗಿನಲ್ಲಿ/ಮಿಂಚೆಗಳ ಮೂಲಕ ಬಂದಿವೆ. ನನ್ನ ಲೇಖನದಲ್ಲೂ ಒಂದು ಮಾತನ್ನು ಸ್ಪಷ್ಟವಾಗಿ ಹೇಳಿದ್ದೆ, ಅದ್ಯಾವ ಜಾತಿಯವರು ತಿಂದು ಮತ್ತಿನ್ಯಾವಾ  ಜಾತಿಯವ ಅದರ ಮೇಲೆ ಉರುಳಾಡುವುದು ಅಷ್ಟೇ ಅಸಹ್ಯಕರ’  ಅಂತ.

ಅಂದರೆ,ಅದು ಕುಕ್ಕೆಯ ಮಡೆ ಸ್ನಾನವಿರಲಿ ಅಥವಾ ತುರುವೇಕೆರೆಯ ಮಡೆಸ್ನಾನವಿರಲಿ ಎರಡೂ ಅಸಹ್ಯಕರವೇ, ಎರಡೂ ಖಂಡನೀಯವೇ.ಮಡೆ ಸ್ನಾನದ ಪರ-ವಿರೋಧ ಮಾತನಾಡುವವರು ನೆನಪಿಡಬೇಕಾದದ್ದು ‘ಈ ಮಡೆಸ್ನಾನ ನಿಲ್ಲಬೇಕಾಗಿರುವುದು ಮಾನವೀಯತೆಗಾಗಿ ಹೊರತು ಜಾತಿಗಾಗಿಯಲ್ಲ’ ಅನ್ನುವುದು.

ಮತ್ತಷ್ಟು ಓದು »

12
ಸೆಪ್ಟೆಂ

ಕಮ್ಯೂನಿಸ೦ ಎ೦ದರೆ ನರಮೇಧ.. ನರಮೇಧವೆ೦ದರೆ ಕಮ್ಯೂನಿಸ೦!?

– ಕೆ.ಎಸ್ ರಾಘವೇಂದ್ರ ನಾವಡ

  “ಕಮ್ಯೂನಿಸ೦ ಎ೦ದರೆ ನರಮೇಧ.. ನರಮೇಧವೆ೦ದರೆ ಕಮ್ಯೂನಿಸ೦ “ ಎ೦ಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆಯಲ್ಲ!!

ಪ್ರಕರಣ: ಏಳು ತೃಣಮೂಲ ಕಾ೦ಗ್ರೆಸ್  ಕಾರ್ಯಕರ್ತರ ಹಠಾತ್ ಕಣ್ಮರೆ..

ಸ್ಠಳ: ಪಶ್ಚಿಮ ಮಿಡ್ನಾಪುರದ “ಪಿಸಾಯಲ“ ಹೆಸರಿನ ಪ್ರದೇಶ

ಕಾಲ : ೨೦೦೨

ಆ ನರಮೇಧದ ಹಿ೦ದಿನ ರೂವಾರಿಯ  ಹೆಸರು ಸುಶಾ೦ತ್ ಘೋಷ್!!

ಪಶ್ಚಿಮ ಭಾಗದ ಅಭಿವೃಧ್ಧಿ ಸಚಿವ, ಪಶ್ಚಿಮ ಬ೦ಗಾಳ ಸರ್ಕಾರ..

 

ಅ೦ತೂ ಕಮ್ಯೂನಿಸ್ಟರ ಬಣ್ಣ ಬಯಲಾಗತೊಡಗಿದೆ. ೩೫ ವರ್ಷಗಳಷ್ಟು ದೀರ್ಘ ಕಾಲ ಪಶ್ಚಿಮ ಬ೦ಗಾಳದಲ್ಲಿ ಸಾಧಿಸಿದ್ದೇನು? ಎ೦ಬುದಕ್ಕೆ ಈಗ ಉತ್ತರಗಳು ಸಿಗತೊಡಗಿವೆ! ಆದರೆ ಈ ರೀತಿಯ ಉತ್ತರ ಮಾತ್ರ ಯಾರೂ ನಿರೀಕ್ಷಿಸಿರಲಾರರು!   ಒಮ್ಮೆ ಮಮತಾ ದೀದಿ   ಥರಗುಟ್ಟಿ ಹೋಗಿದ್ದಾರೆ! ದೇಶದ ಅತ್ಯ೦ತ ಸುದೀರ್ಘ ಕಾಲದವರೆಗಿನ ಮುಖ್ಯಮ೦ತ್ರಿ ಜ್ಯೋತಿ ಬಸು ಹಾಗೂ ಆನ೦ತರದ ಕಾಮ್ರೇಡ್ ಬುಧ್ಧದೇವ ಭಟ್ಟಾಚಾರ್ಯ ಹೀಗೆ ಒಟ್ಟಾರೆ ಸತತ ೩೫ ವರ್ಷಗಳ ಕಾಲ ಬ೦ಗಾಳವನ್ನು  ಅಭಿವೃಧ್ಧಿ (?)ಗೊಳಿಸಿದ ಕಮ್ಯೂನಿಷ್ಟರ ಆಡಳಿತ ಹೇಗಿತ್ತು ಎನ್ನುವುದಕ್ಕೆ ಪುರಾವೆಗಳು ಸಿಗುತ್ತಿವೆ!

ಮತ್ತಷ್ಟು ಓದು »

19
ಆಗಸ್ಟ್

ಈ ಎಡವಟ್ಟುಗಳು ಯಾಕೆ ಹೀಗೆ ಅಂತ?

– ಸಚಿನ್ ಕೆ
ನಮಸ್ಕಾರ ಸಾ. ಎಂಗಿದೀರಾ.
ನೋಡಿ ಸಾ, ಪ್ರಪಂಚ ಹೆಂಗೈತೆ ಅಂದ್ರೆ ಹಿಂಗೂ ಜನ ಇರ್ತಾರ ಅಂತ ಗೊತ್ತಿರ್ಲಿಲ್ಲ.

ಗಾಂಧಿ ಮಆತ್ಮ್ ನ ತರ ನೀವು ಉಪ್ವಾಸ ಮಾಡಿದ್ರೆ ಜನ ಅದರಲ್ಲೂ ಹುಳುಕು ಕಂಡಿಡಿತಾರೆ ಅಂದ್ರೆ, ಈ ಜನ ಎಷ್ಟು ಗಬ್ಬೆದ್ದು ಹೋಗಿದ್ದಾರೆ ಅಂತ. ಆ ಬ್ರಹ್ಮ ಇವರ ತಲೆ ಒಳಗೆ ಮಿದುಳು ಇಟ್ಟಿಲ್ಲ ಅನ್ಸುತ್ತೆ, ಅದರೆ ಬದಲು ಸಗಣಿ ಮಡಗವ್ನೆ. ಈ ಬಡ್ಡೆತ್ತೇವು ಬರೀ ಉಲ್ಟಾ ಮಾತಾಡೋದೆ ಆಗ್ವಾಯ್ತು.

ಅವಯ್ಯ ದೇಸಾನ ಏನೋ ಬದಲಾವ್ಣೆ ಮಾಡ್ತೀನಿ ಅಂತ ಮಾತಾಡ್ತಿಲ್ಲ. ಲಂಚ ತಿನ್ನೋ ಎಲ್ಲ ಬೇವರ್ಸಿ ಮುಂಡೇವು ಗಳಿಗೆ ಸರ್ಯಾದ ಸಿಕ್ಸೆ ಆಗ್ಲಿ ಅಂತ ಗೋರ್ಮೆಂಟ್ ನೋರು ಸರಿಯಾದ ರೂಲ್ಸ್ ಮಾಡ್ಲಿ ಅಂತ. ಆದರೆ ಈ ಉಲ್ಟಾ ಮಾತಾಡ್ತ ಇರೋ ಈ ಹೈಕಳು ಕೇಳೋ ಪ್ರಸ್ನೆಗಳನ್ನು ನೋಡಿದ್ರೆ ನಗ ತಡ್ಯಾಕಾಗ್ತಿಲ್ಲ.

ಮತ್ತಷ್ಟು ಓದು »

16
ಆಗಸ್ಟ್

ಹೋರಾಟದ ಸಾಗರಕೆ ಸಾವಿರಾರು ನದಿಗಳು.ನೀವು!?

8
ಆಗಸ್ಟ್

ಪೌರ ಕಾರ್ಮಿಕರ ಬದುಕು ಹಸನಾಗುವುದು ಯಾವಾಗ?

– ಪವನ್ ಯಂ.ಟಿ

ನಾಳೆ ಬೆಳಗ್ಗೆ ೫ ಗಂಟೆಗೆ ಅಲಾರಾಮ್ ಇಡು ಮಗಳೆ ೫:೩೦ ರ ಬಸ್ಸು ಮಿಸ್ ಆಗೋದ್ರೆ ಕಸವೆಲ್ಲ ಅಲ್ಲೇ ಉಳಿದು ಬಿಡುತ್ತೆ, ನಿನ್ನೆ ದಿನ ಸಂತೆ ಬೇರೆ ಇತ್ತು. ಕಸದ ರಾಶಿಯೇ ಬಿದ್ದಿರ ಬಹುದು. ಬೇಗ ಹೋಗಿ ಕ್ಲೀನ್ ಮಾಡಬೇಕು…! ಎಂದು ಪೌರಕಾರ್ಮಿಕೆ ಮಲ್ಲಮ್ಮ ತನ್ನ ಮಗಳಿಗೆ ಹೇಳಿ ಮಲಗಿಕೊಂಡಳು. ಮಲ್ಲಮ್ಮನಿಗಿರುವ ಒಂದೇ ಆಲೋಚನೆ ತನಗೆ ವಹಿಸಿದ ವಾರ್ಡನಂಬರ್ ೭ರಲ್ಲಿ ಬಿದ್ದಿರುವ ಕಸವನ್ನು ತೆಗೆದು ಶುಚಿಗೊಳಿಸುವುದು. ಎಲ್ಲಿ ಬೆಳಗ್ಗೆ ಬಸ್ಸು ಮಿಸ್ಸಾದರೆ ಕಸದ ರಾಶಿ ಅಲ್ಲಿಯೇ ಉಳಿದು ಮೇಲಾಧಿಕಾರಿಗಳು, ಗುತ್ತಿಗೆದಾರರು ನನ್ನನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆಯೋ ಅನ್ನುವ ಭಯ ಮಲ್ಲಮ್ಮನಿಗೆ. ಇದು ಕೇವಲ ಒಬ್ಬ ಪೌರಕಾರ್ಮಿಳ/ನ  ಚಡಪಡಿಕೆಯಲ್ಲ. ನಮ್ಮ ದೇಶದಲ್ಲಿ ಅಥವಾ ರಾಜ್ಯದಲ್ಲಿ ದುಡಿಯುತ್ತಿರುವ ಎಲ್ಲಾ ಪೌರ ಕಾರ್ಮಿಕರ ಚಡಪಡಿಕೆಯಾಗಿದೆ. ಪೌರ ಕಾರ್ಮಿಕರಿಗೆ ದಿನಬೆಳಗಾದರೆ ಸ್ವಚ್ಚತೆಯದ್ದೇ ಚಿಂತೆ. ಅವರು ಈ ಕೆಲಸವನ್ನು ತಮ್ಮ ಒಟ್ಟೆ ಪಾಡಿಗಾಗಿ ಮಾಡಿದರೂ ಸಹ  ಅದರ ಹಿಂದೆ ಪ್ರತಿಯೊಬ್ಬ ನಾಗರೀಕನ ಆರೋಗ್ಯದ ಕುರಿತ ಕಾಳಜಿ ಅವರಲ್ಲಿ ಮನೆ ಮಾಡಿರುತ್ತದೆ.

ನಾವು ಬೆಳಗ್ಗೆ ಎದ್ದು ಸುಮಾರು ೭ ಗಂಟೆಯ ಸಮಯಕ್ಕೆ ಪಟ್ಟಣಕ್ಕೆ ಒಂದು ಸುತ್ತು ಬಂದರೆ ಸಾಕು ಪೌರ ಕಾರ್ಮಿಕರು ಪಡುವ ಕಷ್ಟ, ಅವರು ಮಾಡುವ ಕೆಲಸ, ನಮ್ಮ ಕಣ್ಣಿಗೆ ಕಾಣುತ್ತದೆ. ನಮಗೆ ಅಸಯ್ಯ ಎನ್ನಿಸುವ ಕೆಲಸವನ್ನು ಅವರು ಮಾಡಿದಂತೆ ಕಂಡರೂ ಅವರೆಲ್ಲ ನಮ್ಮ ಪಾಲಿನ ದೇವರಿದ್ದಂತೆ, ಇಂದು ನಾವೆಲ್ಲ ಒಳ್ಳೆಯ, ಕೈತುಂಬಾ, ಹಣ ಬರುವ ಕೆಲಸವನ್ನು ಮಾತ್ರ ಹುಡುಕುತ್ತೇವೆ. ಒಂದು ವೇಳೆ ಪೌರ ಕಾರ್ಮಿಕರೇ ಇಲ್ಲವೆಂದಿದ್ದರೇ ಇಂದು ನಮ್ಮ ಆರೋಗ್ಯದ ಪರಿಸ್ಥಿತಿ ಏನಾಗುತ್ತಿತ್ತು ಎನ್ನುವುದನ್ನು ನೀವೇ ಯೋಚಿಸಿ.

ಮತ್ತಷ್ಟು ಓದು »

6
ಆಗಸ್ಟ್

ಕಾಸರಗೋಡಿನ ಕನ್ನಡಿಗರ ತ್ಯಾಗ ಮತ್ತು ಬಲಿದಾನಗಳನ್ನು ಕರ್ನಾಟಕ ಮರೆತಿದೆಯೇ..!?

– ಕುಮಾರ ರೈತ

 “ಕಾಸರಗೋಡು, ಕರ್ನಾಟಕದ ಕನ್ಯಾಕುಮಾರಿ. ಉತ್ತರದಲ್ಲಿ ಬೆಳಗಾವಿ, ಬಳ್ಳಾರಿಗಳಂತೆ ದಕ್ಷಿಣ ಕನ್ನಡದಲ್ಲಿ ನಮ್ಮದು ಕರ್ನಾಟಕದ ಕನ್ಯಾಕುಮಾರಿ. ಕನ್ನಡನಾಡಿನ ಈ ತೆಂಕಣ ಬಾಗಿಲನ್ನು ತೆರೆದಿಟ್ಟು ಕನ್ನಡಿಗರು ಎಚ್ಚರತಪ್ಪಿ ನಿದ್ರೆ ಹೋದುದ್ದೇ ಆದರೆ ನಮ್ಮ ಜನರಿಗೂ, ನಮ್ಮ ನಾಡಿಗೂ ಅಮೂಲ್ಯವಾದ ಕನ್ನಡ ಸಂಸ್ಕೃತಿಗೂ ಪ್ರಮಾದ ಒದಗುವುದರಲ್ಲಿ ಸಂಶಯವಿಲ್ಲ. ವಿಶಾಲ ಕೇರಳ ಚಳವಳಿಯು ಆರಂಭವಾಗಿ ಹತ್ತು ವರ್ಷಗಳು ಸಂದುಹೋದವು. ದಕ್ಷಿಣ ಕನ್ನಡ, ಕೊಡಗು, ನೀಲಗಿರಿ ಜಿಲ್ಲೆಗಳು ಮಲಬಾರಿನೊಂದಿಗೆ ಜತೆಗೊಂಡು ಕೇರಳ ಸಂಸ್ಥಾನ ಅಥವಾ ಪಶ್ಚಿಮ ಪ್ರಾಂತ ಸಂಸ್ಥಾನವೊಂದು ನಿರ್ಮಾಣವಾಗಬೇಕೆಂದು ಈ ಚಳವಳಿಯು ಪ್ರಬಲವಾಗುತ್ತಾ ನಡೆದಿದೆ. ಈ ಚಳವಳಿಯ ಮರ್ಮವನ್ನು ತಿಳಿದುಕೊಂಡು ಕನ್ನಡಿಗರು ಅದನ್ನು ಸಕಾಲದಲ್ಲಿಯೇ ಪ್ರತಿಭಟಿಸದೇ ಹೋದರೆ ಸ್ವಲ್ಪಕಾಲದೊಳಗಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಕಾಸರಗೋಡಾದರೂ ಮಲಬಾರಿನವರ ಮಡಿಲಿಗೆ ಬೀಳಬೇಕಾಗಬಹುದು”

ಭಾಷಾವಾರು ಪ್ರಾಂತ್ಯ ರಚನೆಯಾಗುವುದಕ್ಕೂ ಒಂಭತ್ತು ವರ್ಷಗಳಿಗೂ ಮೊದಲೇ ಶ್ರೀಧರ ಕಕ್ಕಿಲಾಯರು ಹೇಳಿದ್ದ ಖಚಿತ ಅಭಿಪ್ರಾಯವಿದು. ಇವರು ಕಾಸರಗೋಡಿನ ಸುಪ್ರಸಿದ್ಧ ವಕೀಲರಾಗಿದ್ದರು. ಕಾಸರಗೋಡನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಲು ಸತತ ೨೫ ವರ್ಷ ಹೋರಾಟ ಮಾಡಿದರು. ಅವರ ಜೀವಿತಾವಧಿಯವರೆಗೂ ಈ ಹೋರಾಟದಲ್ಲಿ ಸಕ್ರಿಯರಾಗಿದ್ದರು. ೧೯೪೭ರ ಡಿಸೆಂಬರ್ನಲ್ಲಿ ಕಾಸರಗೋಡಿನ ಬೋರ್ಡ್ ಹೈಸ್ಲೂಲ್ ಆವರಣದಲ್ಲಿ ೩೧ನೇ  ಕನ್ನಡ ಸಾಹಿತ್ಯ ಸಮ್ಮೇಳನ ನಡೆತು. ಈ ಸಂದರ್ಭದಲ್ಲಿ ಹೊರಬಂದ ಸ್ಮರಣ ಸಂಚಿಕೆ ‘ತೆಂಕುನಾಡು’ ಸ್ಮರಣ ಸಂಚಿಕೆಯಲ್ಲಿ ಶ್ರೀಧರ ಕಕ್ಕಿಲಾಯರ ಈ ಲೇಖನ ಪ್ರಕಟವಾಯಿತು. ಅದರ ಶೀರ್ಷಿಕೆ ‘ಕನ್ನಡ-ಮಲೆಯಾಳ ಸಮಸ್ಯೆ’

ಇದನ್ನೆಲ್ಲ ಪ್ರಸ್ತಾಪಿಸಲು ಕಾರಣವಿದೆ. ಕಾಸರಗೋಡಿಗೆ ಹೋದಾಗಲೆಲ್ಲ ನಾನು ಭೇಟಿ ಕೊಡುವ ಖಾಯಂ ಸ್ಥಳಗಳ ಸಾಲಿನಲಿಬೇಕಲ್ ಕೋಟೆ ಸೇರಿದೆ. ಇಲ್ಲಿ ಪ್ರಾಣದೇವರ ಗುಡಿಯಿದೆ. ಹೊರಭಾಗದಲ್ಲಿ ಗುಡಿ ಹೆಸರನ್ನು ಕನ್ನಡದಲ್ಲಿ ಬರೆಯಲಾಗಿದೆ. ಬೇಕಲ್ ಕೋಟೆ ನಿರ್ಮಾಣ ಮಾಡಿದ್ದು  ಕನ್ನಡಿಗ ರಾಮನಾಯಕ.  (ಟಿಪ್ಪು ಸುಲ್ತಾನ್ ಸೈನ್ಯದ  ದಂಡನಾಯಕ ( ಮೂಲತಃ ಬೇಕಲ್ ಕೋಟೆ ಕನ್ನಡ ಪ್ರದೇಶ. ಇದಕ್ಕೆ ಅನೇಕ ಕುರುಹುಗಳಿವೆ. ಕೋಟೆ ಇರುವ ಊರಿನ ಹೆಸರು ‘ಅಗಸರ ಹೊಳೆ. ಈ ಎರಡೂ ಪದಗಳು ಅಚ್ಚಗನ್ನಡ.

ಮತ್ತಷ್ಟು ಓದು »

1
ಆಗಸ್ಟ್

ಕಥೆಯಾದಳು ಹುಡುಗಿ!

– ಚಿತ್ರ ಸಂತೋಷ್

ವೇಶ್ಯಾವಾಟಿಕೆ ಎನ್ನುವುದು ಗಂಡಸು ಸೃಷ್ಟಿಸುವ ಸಮಸ್ಯೆ ಎಂದವನು ಚಾಣಕ್ಯ. ಆದರೆ, ನನಗನಿಸಿದ ಮಟ್ಟಿಗೆ ಇದು ಸಮಾಜವೇ ಸೃಷ್ಟಿಸುವ ಸಮಸ್ಯೆ. ಉತ್ತರ ಕರ್ನಾಟಕದ ಕೆಲಭಾಗಳಲ್ಲಿ ಈಗಲೂ ಹೆಣ್ಣನ್ನು ವೇಶ್ಯಾವಾಟಿಕೆಗೆ ತಳ್ಳುವ ಕೆಟ್ಟಪದ್ಧತಿ ಚಾಲ್ತಿಯಲ್ಲಿದೆ. ಇಲ್ಲಿ ಯಾವ ಕಾನೂನುಗಳೂ ಕೆಲಸಮಾಡುತ್ತಿಲ್ಲ.

ನನಗೆ ೨೨ ವರ್ಷ. ನಾವು ಐವರು ಹೆಣ್ಣುಮಕ್ಳು. ಮನೆಯಲ್ಲಿ ಬಡತನ. ನಮ್ಮ ಮದುವೆ ಕುರಿತು ಯೋಚನೆ ಮಾಡಿ ಮಾಡಿ ಅಪ್ಪಹಾಸಿಗೆ ಡಿದಿದ್ದ. ನಾನೇ ದೊಡ್ಡವಳು. ನನ್ನ ಕೊನೆಯ ತಂಗಿಯ ಹುಟ್ಟುವಾಗಲೇ ಹೆರಿಗೆಯಲ್ಲಿ ತೊಂದರೆಯಾಗಿ ಅಮ್ಮ ಸಾವನ್ನಪ್ಪಿದ್ದಳು.  ನಾನು ದೊಡ್ಡವಳಾಗಿದ್ದರಿಂದ ನನಗೆ ಸಣ್ಣ ವಯಸ್ಸಿನಲ್ಲೇ ಒಬ್ಬ ಮುದುಕನ ಜೊತೆ ಅಪ್ಪ ಮದುವೆ ಮಾಡಿದ್ದ. ಆದರೆ, ಅವನಿಗೆ ಆಗಲೇ ಮೂರು ಮಂದಿ ಪತ್ನಿಯರಿದ್ದರು. ಮರಳಿ ಮನೆಗೆ ಬಂದೆ. ಕೆಲಸ ಹುಡುಕುವುದು ಅನಿವಾರ್ಯವಾಯಿತು. ನಮ್ಮೂರಿನ ಅಂಕಲ್ ಒಬ್ರು ಕೆಲಸ ಕೊಡಿಸುತ್ತೇನೆ ಎಂದು ಆಶ್ವಾಸನೆ ನೀಡಿದ್ದರು. ಅಪ್ಪನಿಗೂ ಹೇಳದೆ ಅವನನ್ನು ನಂಬಿ ಮುಂಬೈಗೆ ತೆರಳಿದೆ.

ಮತ್ತಷ್ಟು ಓದು »

12
ಜುಲೈ

ಅವರ ಹಿಂಸೆಗೆ ನನ್ನಲ್ಲಿ ಉತ್ತರವಿರಲಿಲ್ಲ

– ಚಿತ್ರಾ ಸಂತೋಷ್

ನ್ನ ಕಳೆದೆರಡು ಅಂಕಣದಲ್ಲಿ  ಅನ್ಯಾಯದ ಕುಲುಮೆಯಲ್ಲಿ ಬೆಂದ ಹೆಣ್ಣು ಮಕ್ಕಳಿಬ್ಬರ ಕಥೆ ಹೇಳಿದ್ದೆ. ಈಗ  ಮತ್ತೊಂದು ಕಥೆ ಹೇಳುತ್ತಿದ್ದೇನೆ. ಹೆಣ್ಣು ಮುಂದುವರಿದರೂ ಆಕೆಯ ಮೇಲಿನ ಅನ್ಯಾಯಗಳಿನ್ನೂ ಕೊನೆಯಾಗಲಿಲ್ಲ. ಈಕೆಯ ಹೆಸರು ಸುಲೇಖಾ ಮಹಿಪಾಲ್ . ಊರು ಡೆಹ್ರಾಡೂನ್. ಹುಟ್ಟಿದ್ದು ಜಾಡಮಾಲಿ ಕುಟುಂಬದಲ್ಲಿ. ಅಪ್ಪ ಅಮ್ಮನನ್ನು ವಿಷ ನೀಡಿ ಕೊಂದಾಗ ಸುಲೇಖಾಳಿಗೆ ಇನ್ನೂ ೧೩ ವರ್ಷ. ಅಪ್ಪನಿಂದ ದೂರಾದ ಸುಲೇಖಾಳ ಬದುಕು ಪ್ರತಿಕ್ಷಣವೂ ಶೋಷಣೆಗೊಳಗಾಯಿತು. ಭರವಸೆ ಕಳೆದುಕೊಂಡ ಅವಳ ಬದುಕಿನಲ್ಲಿ ಮತ್ತೆ ಭರವಸೆ ತುಂಬಿದ್ದು  ಸಮಾಧಾನ್ ಎಂಬ ಸರ್ಕಾರೇತರ ಸಂಸ್ಥೆ ಮತ್ತು ತನ್ನ  ಭಾ ಪತಿ. ಈಗ ಅನ್ಯಾಯದ ವಿರುದ್ಧ ಸುಲೇಖಾ ಹೋರಾಟಕ್ಕೆ ಭಾ ಪತಿಯೂ ಕೈ ಜೋಡಿಸಿದ್ದಾರೆ.

ಅಮ್ಮನನ್ನು ಉಳಿಸಿಕೊಳ್ಳಲು ಆಕೆಯಿಂದ ಸಾಧ್ಯವಾಗಲಿಲ್ಲ. ಅಪ್ಪನ ರೌದ್ರವತಾರೆದುರು ಮಗಳು ಅಸಹಾಯಕಳಾಗಿ ಮೌನವಾಗಿದ್ದಳು. ಆಕೆಗಿನ್ನೂ ೧೩ ವರ್ಷ. ಆ ಪುಟ್ಟ ಹೆಣ್ಣು ಮಗಳ ಎದುರು ಅಮ್ಮ ಹತಳಾದಳು.

 
ಮತ್ತಷ್ಟು ಓದು »