ಅಮಾಯಕರ ಜೀವಕ್ಕೆ ಬೆಲೆಯಿದೆಯೇ?
– ಮುರುಳಿಧರ್ ದೇವ್
ಭಯಾನಕ ಭಾನುವಾರ, ನಿನ್ನೆಯ ಭಾನುವಾರ ನಿಜಕ್ಕೂ ತುಂಬಾ ಭಯಾನಕವಾಗಿತ್ತು. ಮನೆ ಮನೆಗೆ ಕೇಬಲ್ ಹಾಕುವ , ಕೆಟ್ಟರೆ ಅದನ್ನು ದುರಸ್ತಿ ಮಾಡುವ, ತಿಂಗಳಿಗೆ ಕೇಬಲ್ ಹಣವನ್ನು ಮಾಲೀಕನಿಗೆ ಒಪ್ಪಿಸುವ ಅಮಾಯಕ ಹುಡುಗನೊಬ್ಬ ಹೈ ಟೆನ್ಶನ್ (ವೋಲ್ಟೇಜ್) ವಾಯರ್ ಗೆ ತಗುಲಿ ಚಿಂತಾ ಜನಕ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾನೆ. ಆತ ಮಾಡಿದ ತಪ್ಪೆಂದರೇ ಹೈ ಟೆನ್ಶನ್ ವಾಯರ್ ಕೆಳೆಗೆ ಕಟ್ಟಿಕೊಂಡ ಎರಡು ಅಂತಸ್ತಿನ ಮನೆಯ ಕೇಬಲ್ ದುರಸ್ತಿ ಮಾಡಲು ಪ್ರಯತ್ನಿಸಿದ್ದು. ಈ ಮುಂಚೆ ಅದೇ ಮನೆಗೆ ಪೈಂಟ್ ಮಾಡುವಾಗ, ಪೇಂಟರ್ ಹುಡುಗನೊಬ್ಬ ಕೂದಲೇಳೆ ಅಂತರದಲ್ಲಿ ಇಂತಹ ಅನಾಹುತದಿಂದ ತಪ್ಪಿಸಿಕೊಂಡಿದ್ದ. ಅಂದು ಪೇಂಟರ್ ಹುಡುಗನ ಜೊತೆಗಿದ್ದ ಅದೃಷ್ಟ ಈ ಕೇಬಲ್ ಹುಡುಗನ ಜೊತೆಗಿರಲಿಲ್ಲ. ಈತನ ದೇಹ ಸಂಪೂರ್ಣ ಸುಟ್ಟು ಹೋಗಿದ್ದು ಬದುಕಿದ್ದಾನೆ ಅಂತ ಗುರುತಿಸಲು ಇರುವ ಅಂಶ ಎಂದರೆ ಆತನ ಕಣ್ಣುಗಳು. ಆತನನ್ನು ಎತ್ತಿ ಆಟೋದಲ್ಲಿ ಮಲಗಿಸಬೇಕಾದರೆ ಆತನ ಚರ್ಮ ಕಿತ್ತು ಕೈಗೆ ಬರ್ತಾ ಇತ್ತು. ಇಂತಹ ಸಮಯದಲ್ಲಿ ೧೦೮ ಆಂಬ್ಯುಲೆನ್ಸ್ ಗೆ ಕರೆ ಮಾಡಿದರೆ ಅವರು ಬರುವಷ್ಟರಲ್ಲಿ ಆತನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಶುರುವಾಗಿತ್ತು. ಇನ್ನೂ ಆಂಬ್ಯುಲೆನ್ಸ್ ಬರುವ ವರೆಗೂ ಕಾದರೆ ಆತನ ಪ್ರಾಣಾಪಾಕ್ಷಿ ಆತನಲ್ಲಿ ಇರುತ್ತಿರಲಿಲ್ಲ.
ಕ್ಷಮಿಸಿ,ನಿಮ್ಮ ನೆಮ್ಮದಿಯನ್ನು ಕಲಕುವ ಉದ್ದೇಶ!
– ಚಿತ್ರ ಸಂತೋಷ್
ನನ್ನ ಕಣ್ಣಿನಲ್ಲಿ ಕಣ್ಣೀರು ಎಂದೋ ಬತ್ತಿಹೋಗಿತ್ತು. ಅನ್ಯಾಯದ ವಿರುದ್ಧದ ದನಿ ಕುಗ್ಗಿಹೋಗಿತ್ತು. ನನಗೆ ಈಗ ದನಿ ಇಲ್ಲ. ಒಂದು ವೇಳೆ ದನಿ ಇದ್ದರೂ ಕೇಳುವ ಕಿವಿಗಳು ನನ್ನ ಬಳಿ ಇಲ್ಲ. ಅಪ್ಪ-ಅಮ್ಮನ
ನೆನಪಾಗುತ್ತದೆ. ಲಂಡನ್ನ ನೆನಪುಗಳು ಆಗಾಗ ಸುಳಿಯುತ್ತವೆ. ಬದುಕು ಬೇಡ ಅನಿಸುತ್ತಿದೆ. ಆದರೂ, ನನ್ನ ಕೈಯಾರೆ ನಾನು ಕೊಲೆಯಾಗ ಬಯಸಲಾರೆ. ಎಲ್ಲವನ್ನೂ ಮರೆಯೋಕೆ ಕುಡಿತವನ್ನು ಬದುಕಾಗಿಸಿಕೊಂಡಿದ್ದೇನೆ.
ಆನೆ, ಹುಲಿ, ಸಿಂಹಗಳ ಅಂಗಾಂಗಳನ್ನು ಪ್ರದರ್ಶನಕ್ಕಿಟ್ಟರೆ ದುಡ್ಡು ಕೊಟ್ಟು ನೋಡಲು ಖುಷಿಪಡ್ತೀವಿ. ಆದರೆ, ಒಬ್ಬ ಹೆಣ್ಣಿನ ಅಂಗಾಂಗಳನ್ನು ಪ್ರದರ್ಶನಕ್ಕಿಟ್ಟರೆ…ನೋಡುವುದು ಬಿಡಿ, ಕೇಳಲು ಅಸಹ್ಯವಾಗುತ್ತದೆ. ಆದರೆ, ಇಂಥದ್ದೊಂದು ನೈಜ ಘಟನೆ ಎರಡು ದಶಕಗಳ ಹಿಂದೆ ನಡೆದಿತ್ತು. ಇಂದಿಗೂ ದಕ್ಷಿಣ ಆಫ್ರಿಕಾದ ನೂರಾರು ಹೆಣ್ಣು ಮಕ್ಕಳು ಈ ಕಥೆಯನ್ನು ನೆನೆಸಿಕೊಂಡು ಕಣ್ಣೀರು ಹಾಕುತ್ತಾರೆ.
***** *****
ನನ್ನ ಹೆಸರು ಸಾರಾ. ಹುಟ್ಟಿದ್ದು ೧೭೮೯ರಲ್ಲಿ. ದಕ್ಷಿಣ ಆಫ್ರಿಕಾದ ಕೇಪ್ ಟೌನ್ನಲ್ಲಿ. ನಾನು ಎದ್ದು ನಡೆಯುವ ಹೊತ್ತಿಗೆ ಅಪ್ಪ-ಅಮ್ಮನನ್ನು ಕಳೆದುಕೊಂಡಿದ್ದೆ. ಅವರು ಬಲಿಯಾಗಿದ್ದೂ ಬಡತನಕ್ಕೇ! ಇಂದು ನನ್ನೆದುರು ಅವರ ಮುಖವೂ ಅಸ್ಪಷ್ಟ. ಹಿಂದೆ-ಮುಂದೆ ಯಾರಿಲ್ಲ. ಒಬ್ಬಳೇ ಮಗಳು. ಒಂದಷ್ಟು ದಿನ ಸಂಬಂಧಿಕರ ಆಶ್ರಯದಲ್ಲಿ ಬೆಳೆದೆ. ಆದರೂ, ಅಲ್ಲಿ ನನ್ನ ಬದುಕಿರಲಿಲ್ಲ. ನಮ್ಮೂರಿನ ಪಕ್ಕದ ಡಚ್ ರೈತರ ಮನೆಯಲ್ಲಿ ಜೀತದಾಳಾಗಿ ಸೇರಿಕೊಂಡೆ. ಆಗಿನ್ನೂ ಹರೆಯಕ್ಕೆ ಬಂದ ವಯಸ್ಸು ಜಗತ್ತಿನ ಆಗುಹೋಗುಗಳನ್ನು ತಿಳಿಯಬಲ್ಲವಳಾಗಿದ್ದೆ. ಬಿಳಿಯರು ನಮ್ಮ ಜನಾಂಗದ ವಿರುದ್ಧ ನಡೆಸುತ್ತಿದ್ದ ಅನ್ಯಾಯಗಳ ಕುರಿತು ಕೇಳಿದ್ದೆ. ಎಲ್ಲವೂ ನನ್ನೊಡಲಲ್ಲಿ ಮೌನವಾಗಿದ್ದವು.
ಬೀದಿ-ಬೀದಿಯಲ್ಲಿ ಬೆತ್ತಲಾದೆ!
ಮತ್ತಷ್ಟು ಓದು 
‘ಅನ್ಯಾಯ’ದ ಮನೆಯೊಳಗಿನ ಆಶಾಕಿರಣ.
– ಚಿತ್ರಾ ಸಂತೋಷ್
ದೆಹಲಿಯ ಜಿ.ಬಿ. ರಸ್ತೆಯಲ್ಲಿ ನನ್ನ ಪುಟ್ಟ ವಯಸ್ಸು, ಬದುಕು ಮೂರಾಬಟ್ಟೆಯಾಯಿತು ಅನಿಸಿತ್ತು. ನನ್ನ ವಿರುದ್ಧ ನಡೆಯುತ್ತಿರುವ ಅನ್ಯಾಯಗಳಿಗೆ ನನಗೆ ದನಿಯೆತ್ತಲೂ ನನ್ನ ಜೊತೆ ಯಾರಿರಲಿಲ್ಲ. ಆ ‘ಅನ್ಯಾಯ’ದ ಮನೆಯೊಳಗೆ ಪ್ರತಿ ನಿಮಿಷವೂ ನನ್ನ ಮೇಲೆ ಅಮಾನುಷವಾಗಿ ಅತ್ಯಾಚಾರ ನಡೆಯುತ್ತಿತ್ತು. ಐದು ವರ್ಷ ಆ ‘ಸೆರೆಮನೆ’ ಅನುಭವಿಸಿದೆ.
ನನ್ನ ಬೆಲೆ ೩೦೦ ರೂ!
ಅಮ್ಮ ಜಗುಲಿ ಮೇಲೆ ಕುಳಿತಿದ್ದಳು. ನನಗೆ ಅಮ್ಮನ ಕಾಣುವ ಹಂಬಲ, ಅವಳಿಗೆ ಮಗಳನ್ನು ಕಾಣುವ ವಾತ್ಸಲ್ಯ. ನನ್ನನ್ನೇ ಎದುರು ನೋಡುತ್ತಿದ್ದ ಆಕೆಯ ಮುಖದಲ್ಲಿ ನಾನು ಗೇಟು ದಾಟಿ ಹೋಗುತ್ತಿದ್ದಂತೆ ನಗು ಅರಳಿತು. ‘ಬಾ ಮಗಳೇ’ ಎಂದು ತೆಕ್ಕೆಗೆಳೆದುಕೊಂಡಳು. ಸೂರ್ಯ ಮುಳುಗಲು ಕ್ಷಣಗಳನ್ನು ಎಣಿಸುತ್ತಿದ್ದ. ಅಮ್ಮನೆದುರು ಕುಳಿತ ವ್ಯಕ್ತಿಯ ಹೆಸರು ಪ್ರವೀಣ್ ಪಂಡಿತ್. ಹೆಸರಷ್ಟೇ ಗೊತ್ತಿತ್ತು. ಅಮ್ಮ ಅವನ ಜೊತೆ ಅಷ್ಟು ಕೊಡು, ಇಷ್ಟು ಕೊಡು ಎಂದು ಚೌಕಾಸಿ ಮಾಡುತ್ತಿದ್ದಳು. ನನಗೊಂದೂ ಅರ್ಥವಾಗಲಿಲ್ಲ. ಅಮ್ಮ ಹೇಳಿದ ದುಡ್ಡಿಗೆ ಆತ ಒಪ್ಪಲೇ ಇಲ್ಲ. ಕೊನೆಗೆ ೩೦೦ ರೂ. ಕೊಡುತ್ತೇನೆ ಅಂದ. ಅಮ್ಮ ಒಪ್ಪಿಕೊಂಡು, “ಮಗಳೇ ನೀನು ಅಂಕಲ್ ಜೊತೆ ದೆಹಲಿಗೆ ಹೋಗಬೇಕು” ಎಂದು ಹೇಳಿದಳು.
ಕನ್ನಡ ಪರ ದನಿಯೆತ್ತಿದರೆ ತಾಲಿಬಾನಿಗಳಾ!?
(ಮಾತೃ ಭಾಷೆಗೆ ಅಪಮಾನಕಾರಿ ಹೇಳಿಕೆ ನೀಡಿದ ವಲಸಿಗರ ಬೆನ್ನು ಬಿದ್ದಿದ್ದಕ್ಕೆ ಕನ್ನಡ ಅಭಿಮಾನಿಗಳಿಗೆ ಸಿಕ್ಕ ಬಿರುದು ’ಇಂಟರ್ನೆಟ್ ತಾಲಿಬಾನಿಗಳು’ ,ಮತ್ತು ಅದನ್ನ ದಯಪಾಲಿಸಿದ್ದು ಕ್ಷ-ಕಿರಣ ಅನ್ನುವ ಬ್ಲಾಗು.ಮಾತೃ ಭಾಷೆಯ ಮಹತ್ವದ ಮತ್ತು ಆ ವಿಷಯದ ಅರಿವಿಲ್ಲದೆ ಬರೆಯುವವರ ಮೇಲೆ ನಿಲುಮೆಗೆ ಅನುಕಂಪವಿದೆ.ಆ ಬರಹಕ್ಕೆ ಹೊಳೆನರಸೀಪುರ ಮಂಜುನಾಥ್ ಅವರ ಉತ್ತರ ಇಲ್ಲಿದೆ – ನಿಲುಮೆ)
– ಹೊಳೆನರಸೀಪುರ ಮ೦ಜುನಾಥ. ಬೆ೦ಗಳೂರು.
ಸನ್ಮಾನ್ಯ ರಾಕೇಶ ಮಥಾಯಿಸ್, ತಮ್ಮ ಬ್ಲಾಗಿನಲ್ಲಿ ತಾವು ಬರೆದಿರುವ ಅಪ್ಪಟ ಕನ್ನಡಾಭಿಮಾನಿ ಬರಹಕ್ಕೆ ನನ್ನ ಪ್ರತ್ಯುತ್ತರ ಹೀಗಿದೆ ನೋಡಿರಿ.
“ನಾನೊಬ್ಬ ಮಾಧ್ಯಮದ ವಿಧ್ಯಾರ್ಥಿ. ನನ್ನ ಸುತ್ತಮುತ್ತ ಮಾಧ್ಯಮ ಪ್ರಪಂಚದಲ್ಲಿ ನಡೆಯುತ್ತಿರುವ ಜಾತೀಯತೆ, ಲಾಬಿ, ಭ್ರಷ್ಠಾಚಾರ ನೋಡಿ ಕರ್ನಾಟಕ ಮಾಧ್ಯಮ ಲೋಕದ ಮೇಲೆ ಕ್ಷಕಿರಣ ಬೀರುವ ಅಗತ್ಯವಿದೆಯೆಂದೆನಿಸಿ ಪುಟ್ಟ ಪ್ರಯತ್ನ. ಈ ಹಾದಿ ಸುಗಮವಲ್ಲವೆಂಬ ಅರಿವು ನನಗಿದೆ, ಆದರೆ ಹಿಂದಿನ ಕಟ್ಟಳೆ ಪದ್ಧತಿಗೊಳಗಾಗದೆ ಆಗಸವನ್ನೇ ತೆರೆದಿಟ್ಟಿರುವ ಇಂಟರ್ನೆಟ್ ಮಾಧ್ಯಮಕ್ಕೆ ನಾನು ಋಣಿಯಾಗಿದ್ದೇನೆ.” ಎ೦ದು ನಿಮ್ಮ ಪರಿಚಯದಲ್ಲಿ ಹೇಳಿಕೊ೦ಡಿರುವ ತಮ್ಮ ಕಣ್ಣಿಗೆ ಹೊರ ರಾಜ್ಯದವರು ಕನ್ನಡ ನೆಲ, ಜಲ, ಭಾಷೆಯ ಬಗ್ಗೆ ತಳೆದಿರುವ ನಿಲುವು, ತೋರಿಸುತ್ತಿರುವ ಅಸಡ್ಡೆ, ಇವರಿ೦ದಾಗಿ ಅವಕಾಶವ೦ಚಿತರಾಗುತ್ತಿರುವ ಅಸಹಾಯಕ ವಿದ್ಯಾವ೦ತ ಕನ್ನಡಿಗರು ಕಾಣಿಸಲಿಲ್ಲವೇ? ಹೊರರಾಜ್ಯದವರು ಕರ್ನಾಟಕದಲ್ಲಿರಬೇಕಾದರೆ ಕನ್ನಡ ಕಲಿಯಲೇಬೇಕು ಎ೦ದಿದ್ದನ್ನು ಧೈರ್ಯವಾಗಿ ಫೇಸ್ ಬುಕ್ಕಿನ೦ತಹ ಸಾಮಾಜಿಕ ತಾಣದಲ್ಲಿ “ಫಕ್ ಆಫ್” ಎ೦ದಿದ್ದನ್ನು ವಿರೋದಿಸಿದವರು ತಮ್ಮ ಕಣ್ಣಿಗೆ “ಅ೦ತರ್ಜಾಲದ ತಾಲಿಬಾನಿಗಳು” ಎನ್ನುವ ರೀತಿಯಲ್ಲಿ ಕ೦ಡಿರುವುದು ತು೦ಬಾ ಆಶ್ಚರ್ಯಕರವಾಗಿದೆ. ಹಾಗೆಯೇ ತಮ್ಮ ಬೌದ್ಧಿಕ ದಿವಾಳಿತನವನ್ನು ಎತ್ತಿ ತೋರಿಸುತ್ತಿದೆ ಎ೦ದು ಹೇಳಲು ವಿಷಾದವಾಗುತ್ತಿದೆ.
ಕರ್ನಾಟಕ ರಕ್ಷಣಾ ವೇದಿಕೆಯವರು ನಡೆಸಿದ ಕನ್ನಡಪರ ಹೋರಾಟಗಳನ್ನು “ಪು೦ಡಾಟಗಳು” ಅನ್ನುವಷ್ಟು ಪ್ರಬುದ್ಧರಾಗಿದ್ದೀರಲ್ಲ? ತಾವು ಯಾವ ಮಾನದ೦ಡಗಳನ್ನು ಅನುಸರಿಸಿ ಈ ನಿರ್ಧಾರಕ್ಕೆ ಬ೦ದಿರುವಿರಿ ಎ೦ಬುದನ್ನೂ ವಿವರವಾಗಿ ಕನ್ನಡನಾಡಿನ ಜನತೆಗೆ ತಿಳಿಸುವ೦ಥವರಾಗಿ. ಇದೇ ಪ್ರಕರಣ ಪಕ್ಕದ ತಮಿಳುನಾಡಿನಲ್ಲಿಯೋ, ಮಹಾರಾಷ್ಟ್ರದಲ್ಲಿಯೋ ನಡೆದಿದ್ದರೆ ಇಷ್ಟು ಹೊತ್ತಿಗೆ ಹಾಗೆ ಮಾತನಾಡಿದವರನ್ನು ಹೊಡೆದು ಓಡಿಸಿರುತ್ತಿದ್ದರು.
ಮತ್ತಷ್ಟು ಓದು 
ಕನ್ನಡಿಗರು ಬಿಟ್ಟಿ ಬಿದ್ದಿಲ್ಲ ಅನ್ನುವುದು ನೆನಪಿರಲಿ…!
– ರಾಕೇಶ್ ಶೆಟ್ಟಿ
ಹೊಟ್ಟೆ ಪಾಡಿಗೆ ಅಂತ ಹುಟ್ಟಿದ ಊರು ಬಿಟ್ಟು ನಮ್ಮ ಬೆಂಗಳೂರಿಗೆ ಬಂದು, ಇಲ್ಲಿನ ಅನ್ನ,ನೀರು ಕುಡಿದು ’ಕನ್ನಡ ಕಲಿಯಿರಿ’ ಅಂದರೆ ನಮ್ಮ ವಿರುದ್ಧವೇ ತಿರುಗಿ ಬಿದ್ದು ಕನ್ನಡ/ಬೆಂಗಳೂರಿನ ಬಗ್ಗೆ ದ್ವೇಷಕಾರುವುದು ಒಂದು ರೀತಿಯ ಸುಲಭದ ತುತ್ತಾಗಿದೆ.
ಮೊನ್ನೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ “ಐಟಿ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಪ್ರವಾಹದಲ್ಲಿ ಕರ್ನಾಟಕ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವವರು ಇನ್ನು ಮುಂದೆ ಪ್ರಾಥಮಿಕ ಕನ್ನಡ ಭಾಷೆ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಲಿದೆ” ಅನ್ನುವ ಪ್ರಸ್ತಾವನೆಯೊಂದನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿತ್ತು.ಇದೇ ವಿಷಯವನ್ನ ಬೆಂಗಳೂರು ಮಿರರ್ ಅನ್ನುವ ಇಂಗ್ಲೀಷ್ ಪತ್ರಿಕೆ ಅನ್ಯ ಭಾಷಿಗರನ್ನ ಉದ್ರೇಕಿಸುವ ರೀತಿಯಲ್ಲಿ ಬರೆದಿದೆ.ಅಲ್ಲಿನ ಪ್ರತಿಕ್ರಿಯೆಗಳನ್ನ ನೋಡಿದರೆ ಬರೆದವರನ್ನ ಅಟ್ಟಾಡಿಸಿ ಬಡಿಯಬೇಕು ಅನ್ನಿಸುತ್ತದೆ.
ಈ ನೆಲದಲ್ಲಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾದರೆ, ಈ ನೆಲದ ಭಾಷೆ,ಸಂಸ್ಕೃತಿ,ಆಚಾರಗಳಿಗೆ ಬೆಲೆ ಕೊಡಬೇಕು ಅನ್ನುವ ಕಾಮನ್ ಸೆನ್ಸ್ ಇವರಲ್ಲಿ ಇಲ್ಲ ಅನ್ನುವುದಕ್ಕಿಂತ, ಯಾವುದಕ್ಕೂ ಪ್ರತಿಕ್ರಿಯಿಸಿದ ಕನ್ನಡಿಗರ ಧೋರಣೆಯನ್ನೆ ಇಂತ ಜನಗಳು ನಮ್ಮ ದೌರ್ಬಲ್ಯ ಅಂದುಕೊಂಡಿದ್ದಾರೆ.ಇಲ್ಲದಿದ್ದರೆ ಫ಼ೇಸ್ಬುಕ್ಕಿನಲ್ಲಿ ಹಾಲಿಡೇಐಕ್ಯು ಕಂಪೆನಿಯ ಉದ್ಯೋಗಿ ರಾಬಿನ್ ಚುಗ್ ಅನ್ನುವ ಪರದೇಶಿ ಕನ್ನಡಿಗರಿಗೆ ಫ಼ಕ್ ಆಫ಼್ ಅನ್ನುತ್ತಿರಲಿಲ್ಲ ಅಲ್ಲವಾ? ಆ ಕಿಡಿಗೇಡಿ ಕೆಲಸ ಮಾಡುವ ಕಂಪೆನಿಯ ವಿಳಾಸವಿಲ್ಲಿದೆ. ಅವರಿಗೊಂದು ಮಿಂಚೆ ಬರೆದು (ಭಾಷೆ ವಿಷಯ ಮುಟ್ಟಿಸುವಂತಿರಲಿ,ಬೈಗುಳ ದಯವಿಟ್ಟು ಬೇಡ) ಈ ಮಣ್ಣಿನ ಭಾಷೆಯ ಬಗ್ಗೆ ಗೌರವ ಇಲ್ಲದ ಇಂತವರನ್ನ ನಿಮ್ಮ ಕಂಪೆನಿಯಲ್ಲಿ ಇಟ್ಟುಕೊಳ್ಳುವಿರಾ ಅಂತಲೇ ಕೇಳಬೇಕು.ಮೊದಲೆ ಅವನಿಗೆ ಇಲ್ಲಿನ ರೀತಿ ರಿವಾಜುಗಳ ಬಗ್ಗೆ ತಕರಾರುಗಳಿವೆ.ಇಂತ ಹುಡುಗನನ್ನ ವಾಪಸ್ ಅವನ ಮನೆಗೆ ಕಳಿಸೋದು ನಮ್ಮ ಕರ್ತವ್ಯವಲ್ಲವೇ ಗೆಳೆಯರೇ?
ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ ಏನೋ..!!
– ಕೆ.ಎಸ್ ರಾಘವೇಂದ್ರ ನಾವಡ
ನೀವು ಏನಾದ್ರೂ ಹೇಳಿ… ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ.. ಅ೦ಥ ಮತ್ತೊಮ್ರ್ ಪ್ರೂವ್ ಆಗಿ ಹೋಗಿದೆ. ನಮ್ಮ ದೇಶದಲ್ಲಿ ಕೆಲವರ ಹಣೆಬರಹವನ್ನು ಸುಲಭವಾಗಿ ನಿರ್ಧರಿಸಬಹುದು.. ಹಿ೦ದೆ ಹಾವೇರಿಯಲ್ಲಿ ರೈತರ ಮುಷ್ಕರಕ್ಕೆ ಯಡಿಯೂರಪ್ಪ ಗೋಲಿಬಾರ್ ಗೆ ಆದೇಶ ನೀಡುವುದರ ಮೂಲಕ ಅದಕ್ಕೊ೦ದು ಗತಿ ಕಾಣಿಸಿದರು! ಇ೦ದು ರಾಮ್ ದೇವ್ ಹಣೆಬರಹವನ್ನು ಕೇ೦ದ್ರ ಸರ್ಕಾರ ಈ ರೀತಿ ಬರೆಯಿತು!! ಒಟ್ಟಾರೆ ನಾವು ಬ್ರಿಟೀಶ್ ಸತ್ತೆಯ ಕಾಲಕ್ಕೆ ಹೋಗುತ್ತಿದ್ದೇವೇನೋ ಎ೦ಬುದು ನನ್ನ ಸ೦ಶಯ!!
ಭರತ ಭೂಮಿಯಲ್ಲಿ ಬ್ರಿಟೀಶ್ ಆಡಳಿತದಿ೦ದ ಮುಕ್ತರಾಗ ಬಯಸಿ ಸ್ವಾತ೦ತ್ರ್ಯದ ಕನಸು ಕ೦ಡು ಅದಕ್ಕಾಗಿ ಹೋರಾಡಿದವರು- ಶೋಷಿತ ವರ್ಗ – ತಮ್ಮ ಬೇಡಿಕೆಯನ್ನು ನ್ಯಾಯಬಧ್ಧವಾಗಿ ಕೇಳುವವರು- ಜನ ಕಲ್ಯಾಣಕ್ಕಾಗಿ ಹಾತೊರೆದು ಮುನ್ನುಗ್ಗುವವರು – ರಾಜಕೀಯ ವ್ಯವಸ್ಥೆಯನ್ನು ಸುಧಾರಿಸ ಬಯಸುವವರು ಮು೦ತಾದವರ ಹೋರಾಟದ ಅ೦ತ್ಯ ಹೀಗೇ!! ಸರಿ ಸುಮಾರು ಬ್ರಿಟೀಷರಿ೦ದ ಆರ೦ಭವಾದ ಈ ಪ್ರಜೆಗಳ ಧ್ವನಿಯನ್ನು ಅವರುಗಳ ಗ೦ಟಲನ್ನೇ ಹಿಸುಕುವ ಮೂಲಕ ,ಅವರ ಹೋರಾಟಕ್ಕೊ೦ದು ಅನೈತಿಕ ಅ೦ತ್ಯ ನೀಡುವ ಈ ಕ್ರಮ ದುರದೃಷ್ಟವಶಾತ್ ಇಲ್ಲಿಯವರೆವಿಗೂ ಮು೦ದುವರೆದಿದೆ!! ಹಾಗ೦ತ ಎಲ್ಲ ಹೋರಾಟಗಳೂ ಇದೇ ಅ೦ತ್ಯವನ್ನು ಕ೦ಡವೇ ಎ೦ದರೆ ಖಚಿತವಾದ ಉತ್ತರ ನೀಡಲಿಕ್ಕಾಗುವುದಿಲ್ಲ.. “ಕೆಲವು ಸಮಸ್ಯೆಗಳು ತಾವಾಗೇ ಸೃಷ್ಟಿಯಾದರೆ ಕೆಲವನ್ನು ನಾವೇ ಸೃಷ್ಟಿಸಿಕೊಳ್ಳುತ್ತೇವೆ“ ಎ೦ಬ ನಾವಡ ಉವಾಚವೊ೦ದಿದೆ.. ಅದರ ಪ್ರಕಾರ ಪ್ರಸಕ್ತ ಭರತಭೂಮಿಯಲ್ಲಿಯೂ ಏಕೆ ಸಮಸ್ತ ಜಗತ್ತಿನಲ್ಲಿಯೂ ಸರ್ಕಾರ ಗಳು ಹಾಗೂ ಜನತೆಗಳ ವಿಚಾರದಲ್ಲಿ ನಡೆಯುತ್ತಿರುವುದು ಇದೇ!!
ಬಸವನ ಗುಡಿಯಲ್ಲಿ ‘ಕರಪ್ಷನ್ ಸಾಕು’ ಆ೦ದೋಲನ. ನಾ ಕ೦ಡ೦ತೆ
– ಹರೀಶ್ ಆತ್ರೇಯ
ಕಿರಣ್ ಬೇಡಿ ಸ್ವಾಮಿ ಅಗ್ನಿವೇಶ್ ರ ಪ್ರಚೋದಕನಕಾರಿ ಭಾಷಣ, ಶ್ರೀ ಬಾಲಸುಬ್ರಹ್ಮಣ್ಯ೦ ರ ನಿರೂಪಣೆ ಮತ್ತು ಗಣ್ಯರ ಭಾಷಣದ ಅನುವಾದ, ಅರವಿ೦ದ್ ಖೇಜ್ರಿವಾಲರ ಜನಲೋಕಪಾಲ್ ಕಾನೂನು ಪಾಠ, ಕೆಲ ಕಾರ್ಯತಕರ್ತರ ಉತ್ಸಾಹ, ನೈಜ ಕಾಳಜಿ. ಇನ್ನೂ ಕೆಲವರ ಶೋ, ವಾಲ೦ಟೀರ್ ಟೀ ಶರ್ಟ್ ಮೇಲೆ ಎಲ್ಲರ ಕಣ್ಣು, ಮಾಸ್ಟರ್ ಹಿರಣ್ಣಯ್ಯರನವರ ಅನುಭವದ ಮಾತು, ಅಣ್ಣಾ ಹಜಾರೆಯವರ ಮುಗ್ಧ ನುಡಿಗಳು, ರಾಜಕಾರಣಿಗಳ/ ಸರ್ಕಾರಿ ಅಧಿಕಾರಿಗಳ ಮೋಸದಿ೦ದ ಬೇಸತ್ತ ಜನರ ಹತಾಶ ನುಡಿಗಳು, ಜೈಕಾರ, ಗಲೀ ಗಲೀಮೆ ಶೋರ್ ಹೈ ಸಾರೆ ನೇತ ಚೋರ್ ಹೈ ಎನ್ನುವ ಘೋಷಣೆಗಳು, ಇನ್ನೂ ಕೆಲವರಿಗೆ ಇಲ್ಲೇನ್ ನಡೀತಿದೆ ಅ೦ತ್ಲೇ ಗೊತ್ತಿಲ್ದೆ ಇರೋ ಅಮಾಯಕತೆ (?) ಇದೆಲ್ಲರ ನಡುವೆ ನಮ್ ಯಡ್ಯೂರಪ್ಪನವರ ಪರ ಅದ್ಯಾರೋ ನರಸಿ೦ಹ (ಮು. ಮುಖ್ಯಮ೦ತ್ರಿ) ಎ೦ಬುವವನ ಪ್ರಚಾರ, ಸ್ವರಾತ್ಮ ತ೦ಡದ ಪಾಪ್ ರೀತಿಯ ಸ೦ಗೀತ ಅದಕ್ಕೆ ಜನರು ತಲೆದೂಗಿದ್ದು, ಇವು ನಿನ್ನೆಯ ಆ೦ದೋಲನದ ಹೈಲೈಟ್.
ಹನ್ನೊ೦ದು ಗ೦ಟೆಯಿ೦ದ ೨:೫೦ರ ತನಕ ಕಾರ್ಯಕರ್ತರ ಜನಗಳ ಮತ್ತು ಅಲ್ಲಿ ಆಡುತ್ತಿದ್ದ ಯುವಕರ ಮುಖಗಳನ್ನು ಗಮನಿಸುತ್ತಾ ಬ೦ದೆ. ಅಣ್ಣಾ ಹಜಾರೆಯವ್ರು ಬ೦ದದ್ದು ೨:೫೦ ಕ್ಕೆ. ಅಲ್ಲಿಯವರೆಗೂ ಒ೦ದೆರಡು ಬಾರಿ ಸ್ಟೇಜಿನ ಹತ್ರ ಸುತ್ತ ಮುತ್ತ ಓಡಾಡ್ತಾ ಎಲ್ಲರ ಅಭಿಪ್ರಾಯಗಳನ್ನ ಸ೦ಗ್ರಹಿಸುತ್ತಾ ನಿ೦ತೆ. ಕಾರ್ಯಕರ್ತನೊಬ್ಬ “ನೀವು ವಾಲ೦ಟೀರಾ”? ಅ೦ತ ಕೇಳಿದ “ಅಲ್ಲಪ್ಪ” ಅ೦ದೆ “ಹೀಗೆಲ್ಲಾ ಓಡಾಡ್ಬೇಡಿ ಸರ್ ಬಾ೦ಬ್ ಥ್ರೆಟ್ ಇದೆ “ಅ೦ದ ಆಯ್ತಣ್ಣ ಅ೦ತ ಒ೦ಕಡೆ ಕೂತು ಅವರ ಕೆಲ್ಸಾನ ಗಮನಿಸುತ್ತಾ ಬ೦ದೆ. ಮನೇಲಿ ಇರಕ್ಕೆ ಬೋರ್ ಆಗಿ ನಾವೂ ಟಿ ವೀಲಿ ಕಾಣ್ತೀವಲ್ಲ ಅ೦ತ ಯೋಚಿಸ್ಕೊ೦ಡ್ ಬ೦ದು ಟೈಟ್ಸ್, ಅರೆ ತೋಳಿನ ಟಾಪ್ (ಇನ್ನೂ ಕೆಲವರು ಬನೀನ್ ಥರದ್ದು, ಬೇಡ ಬಿಡಿ) ಹಾಕ್ಕೊ೦ಡ್ “ಹೇ ಇಟ್ಸ್ ವೆರಿ ಫನ್ನಿ ಯೋ ನೋ, ಐ ಅಯಾಮ್ ಆಲ್ಸೋ ಎ ವಾಲ೦ಟೀರ್ ಹಿಯರ್, ಇಲ್ಲಿ ಸಕ್ಕತ್ತಾಗಿದೆ, ಐ ವಾನ ವೇರ್ ದಿಸ್ ಟಿ ಶರ್ಟ್, ಹ್ಮ್ ಲೆಟ್ಸ್ ಗೋ ಇನ್ ಸೈಡ್ ದಿ ವಾನ್ ” ಅ೦ತ ಹೋದವರು ಅರ್ಧ ಗ೦ಟೆಯನ೦ತರ ಸರ್ವಾ೦ಗ ಸು೦ದರಿಯರಾಗಿ ಬ೦ದರು.
ದಿ ಕಲರ್ ಪರ್ಪಲ್ – ನಾ ನೋಡಿದ ಸಿನೆಮಾ
ಇಂಚರ
ಇತ್ತೀಚೆಗೆ ನೋಡಿದ ಚಿತ್ರ ‘ದಿ ಕಲರ್ ಪರ್ಪಲ್’. ಅಲೈಸ್ ವಾಕರ್ ಎಂಬುವವರ ನಾವೆಲ್ ಆಧಾರಿತವಾದ ಈ ಚಿತ್ರ ತೆರೆಗಂಡಿದ್ದು ೧೯೮೫ ರಲ್ಲಿ. ಇದರ ನಿರ್ದೇಶಕರು ಸ್ಟೀವನ್ ಸ್ಪೀಲ್ ಬರ್ಗ್. ಇದು ಸಿಲಿ ಎಂಬ ಆಫ್ರಿಕನ್ ಅಮೇರಿಕನ್ ಹುಡುಗಿಯ ಕಥೆ. ಕಥೆ ಶುರುವಾಗೋದು ಹೀಗೆ. ಸಿಲಿಯ ತಾಯಿ ಹೆರಿಗೆ ನೋವಿನಲ್ಲಿರುತ್ತಾಳೆ. ಹೆಣ್ಣು ಮಗುವೊಂದು ಜನಿಸುತ್ತದೆ. ತಂದೆ ಆಗ ತಾನೇ ಜನಿಸಿದ ಮಗುವನ್ನು ಹೊರಗೆ ಮಾರಲು ತೆಗೆದುಕೊಂಡು ಹೋಗುತ್ತಾನೆ. ಇದನ್ನೆಲ್ಲಾ ಕಣ್ಣಾರೆ ಕಂಡ ಸಿಲಿ ಗೆ ಎಚ್ಚರಿಕೆ ಕೊಟ್ಟು ಹೋಗುತ್ತಾನೆ. ಸುಮಾರು ೧೯೦೦ ರ ದಶಕದಲ್ಲಿ ಈ ಅಶಿಕ್ಷಿತ ಬಡ ಕಪ್ಪು(ಆಫ್ರಿಕನ್) ಹೆಣ್ಣು ಮಕ್ಕಳ ಶೋಷಣೆ ಹೇಗೆ ನಡೆಯುತ್ತಿತ್ತು? ಗಂಡಸರ ದಬ್ಬಾಳಿಕೆ, ಅಮೇರಿಕನ್ ವೈಟ್ ನವರ ದರ್ಪ, ಅಶಿಕ್ಷಿತ ಕಪ್ಪು ಜನರ ಅದ್ರಲ್ಲೂ ಹೆಣ್ಣುಮಕ್ಕಳ ಅಸಹಾಯಕತೆಯನ್ನು ಚಿತ್ರ ಕಣ್ಣಿಗೆ ಕಟ್ಟುವಂತೆ ತೋರಿಸುತ್ತಾ ಹೋಗುತ್ತದೆ.
ಸಿಲಿಗೆ ೧೪ ವರ್ಷ, ಆಕೆಯ ತಾಯಿ ಹೆತ್ತು, ಹೆತ್ತು ಸುಸ್ತಾದಳೆಂದು, ಸಿಲಿಯ ತಂದೆ, ಸಿಲಿಯ ಮೇಲೆ ಬಲಾತ್ಕಾರ ಮಾಡುತ್ತಾನೆ. ಇದರಿಂದಾಗಿ ಸಿಲಿಗೆ ೨ ಮಕ್ಕಳಾಗುತ್ತವೆ. ಅವರಿಬ್ಬರನ್ನೂ ಮಕ್ಕಳಿಲ್ಲದ ಅಮೇರಿಕನ್ ವೈಟ್ ದಂಪತಿಗಳಿಗೆ ಮಾರಿಬಿಡುತ್ತಾನೆ. ತಾಯಿ ಸಾಯುತ್ತಾಳೆ. ಸಿಲಿ ತನ್ನ ತಂದೆಯ ಹೆಂಡತಿಯಾಗುತ್ತಾಳೆ! ಸಿಲಿಗೊಬ್ಬಳು ಅತ್ಯಂತ ಪ್ರೀತಿ ಪಾತ್ರಳಾದ ತಂಗಿ ನೆಟ್ಟಿ. ಈಕೆಯ ಮೇಲೆ ತಮ್ಮ ತಂದೆಯ ಕಣ್ಣು ಬೀಳದಂತೆ ಕಾಪಾಡುವ ಸಿಲಿ ಆಕೆಯನ್ನು ಶಾಲೆಗೆ ಹೋಗುವಂತೆ ನೋಡಿಕೊಳ್ಳುತ್ತಾಳೆ. ಚರ್ಚ್ ನಲ್ಲಿ ನೆಟ್ಟಿಯನ್ನು ನೋಡಿದ ವಿಧುರನೊಬ್ಬ ಸಿಲಿಯ ತಂದೆಯ ಬಳಿ ಬಂದು ಆಕೆಯನ್ನು ಮದುವೆ ಮಾಡಿಕೊಡಲು ಕೇಳುತ್ತಾನೆ. ಆದರೆ ಸಿಲಿಯ ತಂದೆ ಸಿಲಿಯನ್ನೇ ಮಾಡಿಕೋ ಎಂದು ಹೇಳುತ್ತಾನೆ. ಆಕೆ ಚೆನ್ನಾಗಿಲ್ಲ, ಕಪ್ಪು, ಆಕೆಯ ನಗು ಚೆನ್ನಾಗಿಲ್ಲ, ಆಕೆ ಈಗಾಗಲೇ ಹಾಳಾಗಿದ್ದಾಳೆ, ಇದೆಲ್ಲವೂ ಈ ವಿಧುರನ ಕಂಪ್ಲೇಂಟ್. ಆದರೆ ಅದಕ್ಕೆಲ್ಲವೂ ಸಮಜಾಯಿಶಿ ಕೊಡುತ್ತಾನೆ ಸಿಲಿಯ ತಂದೆ. ವಧು ಪರೀಕ್ಷೆಯಂತೂ ಥೇಟ್ ಪ್ರಾಣಿಗಳ ವ್ಯಾಪಾರದ ಹಾಗೇ ಭಾಸವಾಗುತ್ತದೆ. ಆಕೆಯನ್ನು ತಿರುಗಿಸಿ, ನಡೆಸಿ ತೋರಿಸುವ ತಂದೆ, ಒಪ್ಪಿಕೊಳ್ಳುವ ಈತ. ಸಿಲಿಯ ಮದುವೆಯಾಗುತ್ತದೆ. ಮತ್ತಷ್ಟು ಓದು 




