ವಿಷಯದ ವಿವರಗಳಿಗೆ ದಾಟಿರಿ

Posts tagged ‘ಶ್ರೀರಾಮ’

15
ಏಪ್ರಿಲ್

ನೂರು ಸಾಲಿನ ಸರಳ (ಮಿನಿ) ರಾಮಾಯಣ ಕಾವ್ಯ…

ನಾಗೇಶ ಮೈಸೂರು

Ram-Vs-Ravan-14

ಶ್ರೀ ರಾಮ ಸೀತೆಯ ಕಥೆ ನಮಗೇನು ಹೊಸದಲ್ಲ ಬಿಡಿ.. ಎಲ್ಲಾ ಭಾಷೆಗಳಲ್ಲಿ ಖಂಡುಗಗಟ್ಟಲೆ ಕಥೆ, ಕಾವ್ಯಗಳು ಸಿಕ್ಕುತ್ತವೆ. ಆದರಿದು ಆಧುನಿಕ ವೇಗದ ಜಗ.. ಎಲ್ಲಾ ಸಂಕ್ಷಿಪ್ತದಲ್ಲಿ, ಫಾಸ್ಟ್ ಪುಡ್ಡಿನ ಹಾಗೆ ಶೀಘ್ರಗತಿಯಲ್ಲಿ ಸಿಗುವಂತಿದ್ದರೆ ಅದನ್ನೇ ಬಯಸುವ ಗ್ರಾಹಕ ವರ್ಗವೂ ಸಾಕಷ್ಟು ದೊಡ್ಡದಿದೆ. ಇನ್ನು ಮಿಕ್ಕವರಿಗೆ ದೊಡ್ಡದು, ಚಿಕ್ಕದು ಎನ್ನುವ ಜಿಜ್ಞಾಸೆಗಿಂತ ಸಮಯದ ಅಭಾವ. ಇನ್ನು ಕಿರಿಯರ ವಿಷಯಕ್ಕೆ ಬಂದರೆ ಅವರಿಗೆ ತೀರಾ ಭಾರವಾಗದ ರೀತಿಯಲ್ಲಿ ಅರುಹಬೇಕಾದ ಅನಿವಾರ್ಯ.. ಇದನ್ನೆಲ್ಲಾ ಗಮನದಲ್ಲಿರಿಸಿಕೊಂಡು ಹೆಣೆದ ನೂರು ಸಾಲಿನ, ಚತುಷ್ಪಾದಿ ಅವತಾರದಲ್ಲಿರುವ ಕಾವ್ಯರೂಪಿ ರಾಮಾಯಣ ಸಾರ – ಈ ಶ್ರೀರಾಮ ಚರಿತ. ನರಮಾನವನಾಗಿ ಪಡಿಪಾಟಲು ಪಟ್ಟನೆನ್ನುವ ಹಿನ್ನಲೆಯನ್ನು ಅಂತರ್ಗತವಾಗಿಸಿಕೊಂಡು ಮೂಡಿಬಂದ ಕಥಾಲಹರಿ. ಸರಳ ಲಹರಿ ಹಿತವಾಗಿ ನುಡಿವಂತಿದ್ದು ಮುದ ತಂದರೆ ಧನ್ಯ .

ಮೂರ್ಖತೆಯ ತೆಗುಳು, ದ್ವಾರಪಾಲರ ಅಹಂಕಾರಗಳು

ನೆಮ್ಮದಿಯ ವೈಕುಂಠ, ಕಿಚ್ಚನ್ಹಚ್ಚಿಸಿ ಮಹಾಲಕ್ಷ್ಮಿಗೆ ದಿಗಿಲು

ಸನಕಾದಿ ಮುನಿಗಳ ಶಾಪ, ಭೂಲೋಕದ ಜನ್ಮಪರಿತಾಪ

ಸೇವೆಯಾಳುಗಳ ವತಿಯಿಂದ, ಶ್ರೀ ಹರಿಗೂ ಬಿಡದ ಕೂಪ || ೦೧ ||

ಮತ್ತಷ್ಟು ಓದು »