ಅರಬ್ ರಾಷ್ಟ್ರವಾದ ಎಂಬ ಟ್ಯಾಂಕು; ಷರಿಯಾ ಎಂಬ ಪೈಪು!
– ಸಂತೋಷ್ ತಮ್ಮಯ್ಯ
ಬಹುತೇಕರಿಗೆ ರಾಮಾಯಣದ ಈ ಚಿರಪರಿಚಿತವಾದ ಪ್ರಸಂಗ ವಿಚಿತ್ರವಾಗಿ ಕಾಣಿಸಬಹುದು.
ಸುಬಾಹು ಮತ್ತು ಮಾರೀಚರು ಪದೇ ಪದೇ ಅಡ್ಡಿ ಪಡಿಸುತ್ತಿದ್ದರೂ ವಿಶ್ವಾಮಿತ್ರನೇಕೆ ಪದೇ ಪದೇ ಅಲ್ಲೇ ಯಾಗ ಮಾಡುತ್ತಿದ್ದ ಎನಿಸಬಹುದು. ಜನ್ಮತಃ ಕ್ಷತ್ರಿಯನಾಗಿದ್ದ ವಿಶ್ವಾಮಿತ್ರನೇ ಏಕೆ ಸುಬಾಹು ಮಾರೀಚರನ್ನು ಕೊಲ್ಲಲಿಲ್ಲ ಎಂಬ ಪ್ರಶ್ನೆಯೂ ಮೂಡಬಹುದು. ಹಾಗಾದರೆ ಸುಬಾವು-ಮಾರೀಚರು ವಿಶ್ವಾಮಿತ್ರನಿಗಿಂತಲೂ ಪರಾಕ್ರಮಿಗಳಾಗಿದ್ದರೇ ಎಂದು ಸಂಶಯವನ್ನೂ ಹುಟ್ಟಿಸಬಹುದು. ಅಂಥ ಪ್ರಶ್ನೆ, ಸಂಶಯ, ಗೊಂದಲಗಳು ಹುಟ್ಟುವುದಕ್ಕೆ ಕಾರಣಗಳೂ ಇವೆ. ಏಕೆಂದರೆ ಪ್ರತೀ ಭಾರಿ ಉಪಟಳ ಕೊಟ್ಟಾಗಲೂ ವಿಶ್ವಾಮಿತ್ರ ಅಷ್ಟೇ ಶ್ರದ್ಧೆಯಿಂದ ಯಾಗಕ್ಕೆ ಅಣಿಯಾಗುತ್ತಿದ್ದ. ಪ್ರತೀ ಬಾರಿಯೂ ರಾಕ್ಷಸರು ಹೊಸ ಹೊಸ ವಿಧಾನಗಳ ಮೂಲಕ ಯಾಗಕ್ಕೆ ಅಡ್ಡಿಪಡಿಸುತ್ತಲೇ ಇದ್ದರು. ರಾಕ್ಷಸರು ವಿಶ್ವಾಮಿತ್ರನಿಗಿಂತ ಒಂದು ಹೆಜ್ಜೆ ಮುಂದಿದ್ದರು. ಪ್ರತೀ ಬಾರಿಯೂ ದಾಳಿಯಾಗುವುದೆಂದು ತಿಳಿದಿದ್ದ ಮಿಶ್ವಾಮಿತ್ರ ತಕ್ಕ ಕ್ರಮವನ್ನೂ ಕೈಗೊಳ್ಳುತ್ತಿದ್ದ, ಪ್ರತಿ ಬಾರಿಯೂ ಸೋಲುತ್ತಿದ್ದ. ಕೊನೆಗೆ ವಿಶ್ವಾಮಿತ್ರ ರಾಮ ಲಕ್ಷ್ಮಣರನ್ನು ಕರೆತರುವ ಹೊತ್ತಿಗೆ ಹಣ್ಣುಗಾಯಿ ನೀರುಗಾಯಿ ಅಗಿಹೋಗಿದ್ದ.
ಏಕೆಂದರೆ ವಿಶ್ವಾಮಿತ್ರನಿಗೆ ರಾಕ್ಷಸರ ಆಚರಣೆಗಳು ತಿಳಿದಿತ್ತೇ ಹೊರತು, ಅವರ ಸಿದ್ಧಾಂತ ಮತ್ತು ಪ್ರವೃತ್ತಿಗಳು ತಿಳಿದಿರಲಿಲ್ಲ ಅಥವಾ ಅವನ್ನು ತಿಳಿಯಲು ಅತ ಬಹುಕಾಲ ತೆಗೆದುಕೊಂಡಿದ್ದ!
ಭಾರತದಲ್ಲಿ ಷರಿಯಾ ಅಥವಾ ಷರಿಯತ್ ಎಂದರೂ ಹಾಗೆಯೇ. ಇಂದಿಗೂ ಮುಸಲ್ಮಾನೇತರರಿಗೆ ಷರಿಯತ್ ಸರಿಯಾ, ತಪ್ಪಾಎಂಬ ಚರ್ಚೆಯೇ ದೊಡ್ಡದಾಗುತ್ತದೆಯೇ ಹೊರತು ಅದರಾಚೆಗೆ ಇಣುಕಿದವರು ಕಡಿಮೆ. ಆದರೆ ಮುಸಲ್ಮಾನರಲ್ಲಿ ಹಾಗಿಲ್ಲ. ಅವರಲ್ಲಿ ಷರಿಯಾ ಏಕಾಗಿ ಇದೆ? ಯಾಕಾಗಿರಬೇಕು? ಅದರ ಮೂಲ ಉದ್ದೇಶವೇನಿದೆ ಎಂಬುದರ ಬಗ್ಗೆ ಸ್ಪಷ್ಟತೆಯಿದೆ. ಆಲ್ ಇಂಡಿಯಾ ಪರ್ಸನಲ್ ಲಾ ಬೋರ್ಡ್ ಪ್ರತೀ ಜಿಲ್ಲೆಯಲ್ಲೂ ಷರಿಯಾ ನ್ಯಾಯಾಲಗಳಿರಬೇಕೆಂದು ಹೇಳುತ್ತಿರುವುದಕ್ಕೂ ಗಹನವಾದ ಕಾರಣವಿದೆ.
ಶಾ ಬಾನು,ಫೆಮಿನಿಸಂ,ಸೆಕ್ಯುಲರಿಸಂ ಮತ್ತು ಸಮಾನ ನಾಗರೀಕ ಸಂಹಿತೆ
– ರಾಕೇಶ್ ಶೆಟ್ಟಿ
ದೇಶದಲ್ಲಿರುವ ಷರಿಯತ್ ಕೋರ್ಟುಗಳಿಗೆ ಕಾನೂನು ಮಾನ್ಯತೆಯಿಲ್ಲ.ಫತ್ವಾ ಹೊರಡಿಸುವುದು ಕಾನೂನು ಬಾಹಿರ ಎಂದು ಸುಪ್ರೀಂ ಕೋರ್ಟು ಇತ್ತೀಚೆಗೆ ನೀಡಿದ ತೀರ್ಪು ಮತ್ತೊಮ್ಮೆ “ಸಮಾನ ನಾಗರೀಕ ಸಂಹಿತೆ”ಯ ಜಾರಿಯ ಬಗ್ಗೆ ಚರ್ಚೆ ಶುರುವಾಗುವಂತೆ ಮಾಡಿದೆ. ಸಮಾನ ನಾಗರೀಕ ಸಂಹಿತೆಯ ಜೊತೆ ಜೊತೆಗೆ ಈ ತೀರ್ಪಿನ ಜೊತೆಗೆ ನೆನಪಾಗುವುದು ೮೦ರ ದಶಕದ ’ಶಾ ಬಾನು ಪ್ರಕರಣ’
ಏನಿದು ಶಾ ಬಾನು ಪ್ರಕರಣ : ಇಂದೋರಿನ ವಕೀಲ ಮೊಹಮ್ಮದ್ ಅಹ್ಮದ್ ಖಾನ್ ನ ಪತ್ನಿ ಶಾ ಬಾನು.ಮದುವೆಯಾಗಿ ೧೪ ವರ್ಷಗಳ ನಂತರ ಎರಡನೇ ಮದುವೆಯಾದ ಅಹ್ಮದ್ ಖಾನ್.ಇಬ್ಬರು ಹೆಂಡಿರ ಜೊತೆ ಸಂಸಾರ ನಡೆಸಿ ಕಡೆಗೆ ಕೆಲ ವರ್ಷಗಳ ನಂತರ ಐದು ಮಕ್ಕಳ ತಾಯಿಯಾಗಿದ್ದ ಶಾ ಬಾನುವನ್ನು ಆಕೆಯ ೬೨ನೇ ವಯಸ್ಸಿನಲ್ಲಿ ಆಕೆಯ ಐದು ಮಕ್ಕಳ ಜೊತೆಗೆ ಹೊರಹಾಕಿದ.ಒಪ್ಪಂದದಂತೆ ಮಾಸಿಕ ೨೦೦ ರೂ ಜೀವನಾಂಶವನ್ನು ಆಕೆಗೆ ನೀಡದಿದ್ದರ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಏಪ್ರಿಲ್ ೧೯೭೮ರಲ್ಲಿ ದಾವೆ ಹೂಡುತ್ತಾರೆ ಶಾ ಬಾನು.ಮಾಸಿಕ ೫೦೦ರೂ ಜೀವನಾಂಶ ಬೇಕೆಂದು ಕೇಳಿಕೊಳ್ಳುತ್ತಾರೆ.
ನವೆಂಬರ್ ೧೯೭೮ರಲ್ಲಿ ಖಾನ್ ಶಾ ಬಾನು ಅವರಿಗೆ ತಲಾಖ್ ನೀಡಿ,ಈಗ ಆಕೆ ನನ್ನ ಪತ್ನಿಯಲ್ಲ ಮತ್ತು ಆಕೆಗೆ ಇಸ್ಲಾಮಿಕ್ ಲಾ ಮೂಲಕ ಕೊಡಬೇಕಾದ ೫,೪೦೦ ರೂ ಬಿಟ್ಟರೆ ನಾನು ಇನ್ನಾವುದೇ ಹಣವನ್ನು ಕೊಡಬೇಕಾಗಿಲ್ಲ ಎಂದು ವಾದಿಸುತ್ತಾನೆ ಖಾನ್.ಆಗಸ್ಟ್ ೧೯೭೯ರಲ್ಲಿ ಸ್ಥಳೀಯ ನ್ಯಾಯಾಲಯ ಮಾಸಿಕ ೨೫ರೂ ನೀಡುವಂತೆ ತೀರ್ಪು ಕೊಟ್ಟಿತ್ತು.ಶಾ ಬಾನು ಕೇಸನ್ನು ಹೈಕೋರ್ಟಿಗೆ ಕೊಂಡೊಯ್ದರು.ಅಲ್ಲಿ ಶಾ ಬಾನು ಪರವಾಗಿ ೧೯೮೦ರ ಜುಲೈನಲ್ಲಿ ಬಂದ ತೀರ್ಪು ಮಾಸಿಕ ೧೭೯ ರೂ ನೀಡುವಂತೆ ತೀರ್ಪು ನೀಡುತ್ತದೆ.ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಖಾನ್ ಹೋಗುತ್ತಾನೆ.ಶಾ ಬಾನು ಈಗ ನನ್ನ ಪತ್ನಿಯಲ್ಲ ಇಸ್ಲಾಮಿಕ್ ಕಾನೂನಿಂತೆ ಆಕೆಗೆ ನಾನು ತಲಾಖ್ ನೀಡಿ ಎರಡನೇ ಮದುವೆಯಾಗಿದ್ದೇನೆ ಎನ್ನುತ್ತಾನೆ.





