ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸಂಘ’

12
ಮಾರ್ಚ್

‘ತುರ್ತು ಪರಿಸ್ಥಿತಿ’ ವಿರುದ್ಧದ ಹೋರಾಟದಲ್ಲಿ ಹಾಸನ ಜಿಲ್ಲೆ ವಹಿಸಿದ ಪಾತ್ರ

-ಕ.ವೆಂ.ನಾಗರಾಜ್

ತುರ್ತು ಪರಿಸ್ಥಿತಿಪರಕೀಯರ ಸಂಕೋಲೆಯಿಂದ ೧೯೪೭ರಲ್ಲಿ ದೇಶ ಸ್ವತಂತ್ರಗೊಂಡ ಕೇವಲ ೨೮ ವರ್ಷಗಳ ನಂತರದಲ್ಲಿ ಸ್ವಕೀಯರಿಂದಲೇ ಪ್ರಜಾಪ್ರಭುತ್ವಕ್ಕೆ ಅತಿ ದೊಡ್ಡ ಗಂಡಾಂತರ ೧೯೭೫ರಲ್ಲಿ ತುರ್ತುಪರಿಸ್ಥಿತಿ ರೂಪದಲ್ಲಿ ಬಂದೆರಗಿತ್ತು. ಎರಡು ವರ್ಷಗಳ ಈ ತುರ್ತುಪರಿಸ್ಥಿತಿಯ ಅವಧಿ ದೇಶದ ಅತ್ಯಂತ ಕಲಂಕಿತ ಅವಧಿಯಾಗಿದ್ದು, ಇಂದು ಕಂಡುಬರುತ್ತಿರುವ ಅಧಿಕಾರದ ಹಪಾಹಪಿಗೆ ಭದ್ರ ತಳಪಾಯ ಒದಗಿಸಿತ್ತು. ಅಲಹಾಬಾದ್ ಉಚ್ಚನ್ಯಾಯಾಲಯವು ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಮೇಲಿದ್ದ ಭ್ರಷ್ಠಾಚಾರದ ಆರೋಪವನ್ನು ಎತ್ತಿ ಹಿಡಿದು ಅವರ ಚುನಾವಣೆಯ ಗೆಲುವನ್ನು ಅನೂರ್ಜಿತಗೊಳಿಸಿದ್ದಲ್ಲದೆ ಮುಂದಿನ ಆರು ವರ್ಷಗಳು ಅವರು ಚುನಾವಣೆಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಿದ್ದನ್ನು ಅವರು ಲೆಕ್ಕಿಸದೆ ಹೇಯಮಾರ್ಗ ಹಿಡಿದು ದೇಶದ ಮೇಲೆ ಅನಗತ್ಯವಾದ ತುರ್ತುಪರಿಸ್ಥಿತಿ ಹೇರಿ ಸರ್ವಾಧಿಕಾರಿಯಾಗಿ ಅಟ್ಟಹಾಸದಿಂದ ಮೆರೆದರು. ಕಹಿಯಾದ ಕಠಿಣ ಸತ್ಯವೆಂದರೆ ಭ್ರಷ್ಠಾಚಾರ ತಪ್ಪಲ್ಲವೆಂಬ ಭಾವನೆಗೆ, ಭ್ರಷ್ಠಾಚಾರ ಇಂದು ಮುಗಿಲೆತ್ತರಕ್ಕೆ ಬೆಳೆದಿರುವುದಕ್ಕೆ ಅಂದು ಹಾಕಿದ್ದ ಈ ಭದ್ರ ಬುನಾದಿಯೇ ಕಾರಣ. ಕಾಯದೆ, ಕಾನೂನುಗಳನ್ನು ಅನುಕೂಲಕ್ಕೆ ತಕ್ಕಂತೆ ತಿದ್ದಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘವೂ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳನ್ನು ನಿಷೇಧಿಸಲಾಯಿತು. ಲೋಕಸಭೆಯ ಅವಧಿ ಪೂರ್ಣಗೊಂಡರೂ ಸಂಸತ್ತಿನಲ್ಲಿ ನಿರ್ಣಯ ಮಾಡಿ ಮತ್ತೆ ಎರಡು ವರ್ಷಗಳ ಅವಧಿಗೆ ಮುಂದುವರೆಸಲಾಯಿತು. ಸಂವಿಧಾನಕ್ಕೆ ಹಲವು ತಿದ್ದುಪಡಿಗಳನ್ನು ಮಾಡಲಾಯಿತು. ೧೯೭೫ರ ಜೂನ್ ೨೬ರ ಬೆಳಕು ಹರಿಯುವಷ್ಟರಲ್ಲಿ ಭಾರತದ ಸ್ವತಂತ್ರತೆ ನಿರ್ಬಂಧಿಸಲ್ಪಟ್ಟಿತು. ಅಭಿವ್ಯಕ್ತಿ ಸ್ವಾತಂತ್ರ್ಯ, ಲೇಖನ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ, ಸ್ವಂತ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ, ಇತ್ಯಾದಿ ಎಲ್ಲಾ ನಾಗರಿಕ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು. ದೇಶಾದ್ಯಂತ ನೂರಾರು ವಿರೋಧ ಪಕ್ಷದ ನಾಯಕರುಗಳನ್ನು ಬಂಧಿಸಿ ಸೆರೆಯಲ್ಲಿರಿಸಿದರು. ಜನರು ಸರ್ಕಾರದ ವಿರುದ್ಧ ಮಾತನಾಡಲು ಅಂಜುವಂತೆ ಆಯಿತು. ಆಕಾಶವಾಣಿ ಇಂದಿರಾವಾಣಿ ಆಯಿತು, ದೂರದರ್ಶನ ಇಂದಿರಾದರ್ಶನವಾಯಿತು. ಇಂದಿರಾ ಪರ ಸುದ್ದಿಗಳಿಗೆ ಮಾತ್ರ ಅವಕಾಶ. ‘ಇಂದಿರಾ ಅಂದರೆ ಇಂಡಿಯಾ, ಇಂಡಿಯಾ ಅಂದರೆ ಇಂದಿರಾ’ ಆಗಿಹೋಯಿತು.

ಮತ್ತಷ್ಟು ಓದು »

7
ನವೆಂ

ಜ್ಞಾನಿಗಳಿಗೆ ಸಾವಿಲ್ಲ. ಆದರೆ ಗಡ್ಕರಿ, ದಾವೂದ್ ನಂತಹ ಬುದ್ದಿವಂತರಿಗೆ ಸಾವಿದೆ!

– ಮಹೇಂದ್ರ ಕುಮಾರ್

           ಸ್ವಾಮಿ ವಿವೇಕಾನಂದರು ಮತ್ತು ದಾವೂದ್ ಇಬ್ರಾಹಿಂ, ಇಬ್ಬರೂ ಸಮಾನ ಬುದ್ದಿವಂತರು. ಸ್ವಾಮಿ ವಿವೇಕಾನಂದರು ತಮ್ಮ ಬುದ್ದಿವಂತಿಕೆಯನ್ನು ಸದುಪಯೋಗ ಪಡಿಸಿಕೊಂಡರು. ಆದರೆ ದಾವೂದ್ ಇಬ್ರಾಹಿಂ ದುರುಪಯೋಗ ಪಡಿಸಿಕೊಂಡ. ಈ ಹೇಳಿಕೆಯನ್ನು ದೇಶದ ಮಹಾನ್ ರಾಷ್ಟ್ರಭಕ್ತಿಯ  ಪ್ರತೀಕ ಎಂದು ಹೇಳಿಕೊಳ್ಳುವ ಭಾರತೀಯ ಜನತಾಪಕ್ಷದ, ಆರ್ ಎಸ್ ಎಸ್ ಗರಡಿಯಲ್ಲಿ ಪಳಗಿ ಏಕಾಏಕಿ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಬಾಯಿಂದ ಉದುರಿರುವ ಅಣಿಮುತ್ತುಗಳು..

ಹೇಳಿಕೇಳಿ ಈತ ದೇಶಭಕ್ತರನ್ನು ಹುಟ್ಟು ಹಾಕುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಟ್ಟಾಳು. ಪ್ರತೀ ವರ್ಷ ವಿವೇಕಾನಂದ ಜಯಂತಿಯನ್ನು ಆಚರಿಸುವ ಪಕ್ಷದ ರಾಷ್ಟ್ರನಾಯಕ. ಇಷ್ಟೇ ಅಲ್ಲದೇ ರಾಷ್ಟ್ರೀಯ  ಕಾರ್ಯಕಾರಣಿಗಳಿಂದ ಹಿಡಿದು ಸಣ್ಣ ಸಣ್ಣ ಕಾರ್ಯಕ್ರಮಗಳವರೆಗೂ ವಿವೇಕಾನಂದರ ಭಾವಚಿತ್ರಗಳನ್ನು ಬಳಸಿಕೊಳ್ಳುವ ರಾಜಕೀಯ ಪಕ್ಷದ ಮುಂದಾಳು.

ಈ ಹೇಳಿಕೆಯನ್ನು ಕೊಡುವಾಗ ಒಂದೋ ತಲೆ ಕೆಟ್ಟಿರಬೇಕು, ಇಲ್ಲವಾದಲ್ಲಿ ವಿವೇಕಾನಂದರ ಬಗ್ಗೆ ಮತ್ತು ಅವರ ಆದರ್ಶ ಚಿಂತನೆಗಳ ಬಗ್ಗೆ ಯಾವುದೇ ಅರಿವಿಲ್ಲದೇ ಒಬ್ಬ ಸಾದಾರಣ ಇವರ ನಾಯಕರೆಂದು ಭಾವಿಸಿರಬೇಕು.. ವಿವೇಕಾನಂದರ ಬಗ್ಗೆ ಸಣ್ಣ ಅರಿವೂ ನಿತಿನ್ ಗಡ್ಕರಿಗೆ ಇದ್ದಿದ್ದೇ ಆದಲ್ಲಿ ಆತನ ಬಾಯಿಂದ ಈ ಮಾತುಗಳು ಹೊರಬರುತ್ತಿರಲಿಲ್ಲ. ಇವರುಗಳಿಗೆ ಆದರ್ಶ ವ್ಯಕ್ತಿಗಳು ಬಳಕೆಗೆ ಮಾತ್ರಾ…

ಮತ್ತಷ್ಟು ಓದು »

5
ನವೆಂ

ಗಡ್ಕರಿಯ ಅ”ವಿವೇಕ” ಮತ್ತು ಸಂಘದ “ಸ್ವಾಮಿ”ನಿಷ್ಠೆ…!

– ರಾಕೇಶ್ ಶೆಟ್ಟಿ

“ಇನ್ನೊಬ್ಬ ವಿವೇಕಾನಂದನಿದ್ದಿದ್ದರೆ ಅವನಿಗೆ ತಿಳಿಯುತಿತ್ತು – ಈ ವಿವೇಕಾನಂದ ಏನು ಮಾಡಿದ್ದಾನೆ ಎಂದು… ಇರಲಿ, ಕಾಲಾಂತರದಲ್ಲಿ ಮತ್ತೆಷ್ಟು ಮಂದಿ ವಿವೇಕಾನಂದರು ಉದಿಸಲಿರುವರೋ!” ಸ್ವಾಮೀಜಿ ದೇಹತ್ಯಾಗದ ದಿನ ತಮ್ಮಷ್ಟಕ್ಕೆ ತಾವೇ ಹೇಳಿಕೊಂಡ ಮಾತುಗಳಿವು. ನಿಜ ವಿವೇಕಾನಂದ ಮಾಡಿ ಹೋಗಿದ್ದೇನು? ಯಾರನ್ನಾದರು ಕೇಳಿ ನೋಡಿ, ತಟ್ಟನೆ “ಅವರು ಸರ್ವ ಧರ್ಮ ಸಮ್ಮೇಳನದಲ್ಲಿ ಹಿಂದೂ ಧರ್ಮದ ಶ್ರೇಷ್ಠತೆಯನ್ನು ಜಗತ್ತಿಗೆ ಸಾರಿದರು” ಅಂತಲೇ ಹೇಳುತ್ತಾರೆ..ಮುಂದೇನು ಮಾಡಿದ್ದರು ಅಂತ ಕೇಳುವಷ್ಟರಲ್ಲಿ ಮಾತು ತಡವರಿಸುತ್ತದೆ… ಬಹುಷಃ ಇದೆಲ್ಲವನ್ನೂ ಅರಿತೇ ಸ್ವಾಮೀಜಿ ಬಹುಷಃ ಮೇಲಿನ ಮಾತನ್ನು ಹೇಳಿದ್ದರು ಅನ್ನಿಸುತ್ತದೆ.

ಆದರೆ,ಮುಂದೊಂದು ದಿನ ತಾನು ಪ್ರತಿಪಾದಿಸುತ್ತಿರುವ “ರಾಷ್ಟ್ರೀಯತೆ(?)” ಅನ್ನುವ ಪದವನ್ನು ಹಿಡಿದು ಪಕ್ಷವೊಂದು ಉದಯಿಸಬಹುದು ಮತ್ತು ಅದಕ್ಕೊಬ್ಬ ಮೇಧಾವಿ ಅಧ್ಯಕ್ಷ ಬಂದು ಅವನು “ಸ್ವಾಮಿ ವಿವೇಕಾನಂದರ ಬುದ್ದಿಮತ್ತೆಯನ್ನು ಮುಂಬೈನ ಕಪ್ಪು ಜಗತ್ತಿನ ಕಳ್ಳನಾಗಿದ್ದವನ ಬುದ್ದಿ ಮತ್ತೆಗೆ ಸರಿಸಮ” ಅಂತೇಳಬಹುದು ಅನ್ನುವುದನ್ನು ಮಾತ್ರ ಊಹಿಸಿರಲಿಕ್ಕಿಲ್ಲ…!

ಮತ್ತಷ್ಟು ಓದು »

6
ಫೆಬ್ರ

ದೇಶ – ಭಾಷೆಗಳ ನಡುವೆ

– ರಾಕೇಶ್ ಶೆಟ್ಟಿ

ಆಗ ದೇಶದಲ್ಲಿ ಆಹಾರ ಸಮಸ್ಯೆಯಿತ್ತು.ಅಂತ ಕ್ಲಿಷ್ಟಕರ ಸಮಯದಲ್ಲಿ ಪ್ರಧಾನಿಯಾಗಿದ್ದವರು ಲಾಲ್ ಬಹದ್ದೂರ್ ಶಾಸ್ತ್ರಿಗಳು.ಆಹಾರದ ಸಮಸ್ಯೆಗೆ ಅಮೇರಿಕಾ PL480 (food for peace) ಕಾರ್ಯಕ್ರಮದಲ್ಲಿ ಕಳಿಸುತಿದ್ದ ಗೋಧಿ ತುಂಬಾ ಕಳಪೆ ಮಟ್ಟ ಮುಟ್ಟಿದಾಗ,ಅಂತ ಗೋಧಿಯನ್ನ ಬಳಸುವುದನ್ನ ವಿರೋಧಿಸಿದ ಶಾಸ್ತ್ರಿಗಳು ‘ಇಂತ ಅವಮಾನದ ಬದಲು ಒಪ್ಪೊತ್ತು ಉಪವಾಸ ಇರೋಣ’ ಅಂತ ದೇಶದ ಜನಕ್ಕೆ ಕರೆ ಕೊಟ್ಟಿದ್ದರು,ಹಾಗೆ ಕರೆಕೊಡುವ ಮೊದಲೇ ಅವರ ಮನೆಯಲ್ಲಿ ರಾತ್ರಿ ಅಡಿಗೆ ಮಾಡುವಂತಿಲ್ಲ ಅಂತ ಹೇಳಿದ್ದರು! , ‘ನೀ ಬಯಸುವ ಬದಲಾವಣೆ ನಿನ್ನಿಂದಲೇ ಆಗಲಿ’ ಅನ್ನುವ ಗಾಂಧೀ ಮಾತನ್ನ ಪಾಲಿಸಿ ತೋರಿಸಿದ್ದರು ಶಾಸ್ತ್ರಿಗಳು!

ಆರ್.ಎಸ್.ಎಸ್ ನ ಎರಡನೇ ಸರಸಂಘಚಾಲಕರಾದ ಶ್ರೀ ಮಾಧವ ಸದಾಶಿವ ಗೋಲ್ವಾಲ್ಕರ್ ಅವರ “ಚಿಂತನಗಂಗಾ” ಪುಸ್ತಕದ ಸುತ್ತ ಅಂತರ್ಜಾಲದಲ್ಲಿ ನಡೆಯುತ್ತಿರುವ ಚರ್ಚೆ ಫ಼ಾಲೋ ಮಾಡುವಾಗ “ಸಂಘದಲ್ಲಿ ವಿಚಾರ ಸ್ವಾತಂತ್ರವಿದೆಯೇ” ಎನ್ನುವ ಪದ ಬಳಕೆ ನೋಡಿ ನಗು ಬಂತು.ಅಸಲಿಗೆ ಯಾವುದೇ ಸಂಘಟನೆ,ಸ್ವಸ್ಥ ಸಮಾಜದಲ್ಲಿ ವಿಚಾರ ಸ್ವಾತಂತ್ರ್ಯವಿರಲೇಬೇಕು ಅದು ಇರಲಿ ಅಂತ ಕೇಳುವುದು ತಪ್ಪೇನು ಅಲ್ಲ.ಆದರೆ ವಿಚಾರ ಸ್ವಾತಂತ್ರ್ಯದ ಬಗ್ಗೆ ಕೇಳಿದವರು ಯಾರು ಅನ್ನುವುದು ಮುಖ್ಯವಾಗುತ್ತದಲ್ಲವೇ? ವೇದಾಂತ ಇರೋದು ಬೇರೆಯವ್ರಿಗೆ ಹೇಳೋಕ್ ಮಾತ್ರ ಅಂದುಕೊಂಡವರಿಗಾಗಿಯೇ ಗಾಂಧೀಜಿಯವರು ‘ನೀ ಬಯಸುವ ಬದಲಾವಣೆ ನಿನ್ನಿಂದಲೇ ಆಗಲಿ’  ಅಂದಿದ್ದು.

ಮತ್ತಷ್ಟು ಓದು »