ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸಂಸ್ಕೃತಿ’

21
ಏಪ್ರಿಲ್

ನಾವು, ನಮ್ಮ ಹರಕೆ, ನಮ್ಮ ಸೇವೆ!

– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ಆಚರಣೆದಿನಾಂಕ 19-04-2015 ರಂದು ವಿಜಯ ಕರ್ನಾಟಕ ಪತ್ರಿಕೆಯಲ್ಲಿ “ಮಾದಪ್ಪನ ಸನ್ನಿಧಿಯಲ್ಲಿ ಸಣ್ಣ ಸ್ವಚ್ಛಭಾರತ್” ಲೇಖನ ಪ್ರಕಟವಾಯಿತು. ಇದರಲ್ಲಿ ಜಾಗದ ಮಿತಿಯಿಂದಲೋ ಸೈದ್ಧಾಂತಿಕ ಮಿತಿಯಿಂದಲೋ ಲೇಖನದ ಬಹುತೇಕ ಭಾಗಗಳಿಗೆ ಕತ್ತರಿ ಪ್ರಯೋಗವಾಗಿತ್ತು. ಅದರ ಪೂರ್ಣಪಾಠ ಇಲ್ಲಿದೆ.

ಮಲೆ ಮಹದೇಶ್ವರ ಬೆಟ್ಟ. ಬೆಳಿಗ್ಗೆ ಆರು ಗಂಟೆಯ ಸಮಯ. ದೇವಾಲಯದ ಮುಂಭಾಗ ರಾತ್ರಿ ಬಂದ ಯಾತ್ರಿಗಳು ಅನುದ್ದೇಶಪೂರ್ವಕ ಚೆಲ್ಲಿದ ಕಸಕಡ್ಡಿಗಳು ಅಲ್ಲಲ್ಲಿ ಹರಡಿದ್ದವು. ಹರಕೆ ತೀರಿಸಲು ಬಂದ ಭಕ್ತಾದಿಗಳಿಂದ ಬಗೆಬಗೆಯ ಆಚರಣೆಗಳು ಸುತ್ತಲೂ ನಡೆಯುತ್ತಿದ್ದವು. ಮುಖ್ಯ ದೇಗುಲದ ಮುಂಭಾಗದಲ್ಲಿರುವ ಕಲ್ಯಾಣಿ ಪಕ್ಕದ ಜಡೆ ಮಾದೇಶ್ವರ ಗುಡಿಯ ಮುಂದೆ ಹತ್ತಾರು ಹೆಂಗಸರು ಮಕ್ಕಳು ಸೇರಿಕೊಂಡಿದ್ದರು. ಒಬ್ಬ ಹುಡುಗ “ಹಾಲುಮಲೆ ಏಳುಮಲೆ, ಜೇನುಮಲೆ, ಎಪ್ಪತ್ತೇಳುಮಲೆ ನಮ್ಮ ಮುದ್ದು ಮಾದೇಶ್ವರನಿಗೆ ಉಘೇ ಅನ್ರಪ್ಪಾ” ಅನ್ನುತ್ತಿದ್ದಂತೆ ಸುತ್ತ ನೆರೆದಿದ್ದವರು ಒಕ್ಕೊರಲಲ್ಲಿ “ಉಘೇ ಉಘೇ” ಅನ್ನುತ್ತಿದ್ದರು. ಗುಡಿಯ ಮುಂದೆ ಕತ್ತೆಯೊಂದು ತರಬೇತಿ ನೀಡಿದ್ದಾರೇನೋ ಎಂಬಂತೆ ಸ್ತಬ್ದವಾಗಿ ನಿಂತಿತ್ತು. ಕೆಲವು ಹೆಂಗಸರು ಅದರ ಕಾಲು ತೊಳೆದರು. ಮತ್ತೆ ಕೆಲವರು ಅದಕ್ಕೆ ಮಲ್ಲಿಗೆ ಹಾರ ತೊಡಿಸಿದರು. ಮತ್ತೆ ಹಲವರು ಅರಿಶಿಣ ಕುಂಕುಮ ಹಾಕಿ ಅದರ ಕಾಲಿಗೆ ಅಡ್ಡ ಬಿದ್ದರು. ಇನ್ನು ಕೆಲವರು ಆರತಿ ಬೆಳಗಿದರು.

ಕತ್ತೆಯ ಪಕ್ಕದಲ್ಲಿ ಹೊಚ್ಚ ಹೊಸ ತೆಂಗಿನ ಗರಿಯಿಂದ ತಯಾರಿಸಿದ ಒಂದಿಷ್ಟು ಪೊರಕೆಗಳನ್ನು ಸಾಲಾಗಿ ಜೋಡಿಸಿದ್ದರು. ಈ ಪೊರಕೆಗಳಿಗೆ ಅರಿಶಿನ ಕುಂಕುಮ ಹಾಕಿ, ಹೂವು ಏರಿಸಿ ಎಲ್ಲರೂ ಕೈ ಮುಗಿದರು. ಒಬ್ಬೊಬ್ಬರೂ ಒಂದೊಂದು ಪೊರಕೆಯನ್ನು ಕೈಗೆತ್ತಿಕೊಂಡರು. ಹುಡುಗ “ಹಾಲುಮಲೆ ಏಳುಮಲೆ, ಜೇನುಮಲೆ, ಎಪ್ಪತ್ತೇಳುಮಲೆ ನಮ್ಮ ಮುದ್ದು ಮಾದೇಶ್ವರನಿಗೆ ಉಘೇ ಅನ್ರಪ್ಪಾ” ಅನ್ನುತ್ತಿದ್ದ. ಉಳಿದವರು “ಉಘೇ ಉಘೇ” ಅನ್ನುತ್ತ ಸುತ್ತಲ ಕಸ ಕಡ್ಡಿಗಳನ್ನು ಗುಡಿಸಿ ಸ್ವಚ್ಛಮಾಡತೊಡಗಿದರು. ಅರ್ಧಗಂಟೆಯಲ್ಲಿ ಸುತ್ತಲ ಪರಿಸರ ತೊಳೆದಿಟ್ಟಂತೆ ಕಂಗೊಳಿಸತೊಡಗಿತು.

ಮತ್ತಷ್ಟು ಓದು »

1
ಡಿಸೆ

ತುಳುನಾಡ ನಂಬಿಕೆಗಳು…

– ಭರತೇಶ ಆಲಸಂಡೆಮಜಲು

ತುಳುನಾಡುಬಾಳಿಗೊಂದು ನಂಬಿಕೆ ಎಂಬಂತೆ, ಈ ಬಾಹ್ಯ ಜಗತ್ತು ನಂಬಿಕೆಯ ತಲೆದಿಂಬುನಿಟ್ಟು ಮಲಗಿದೆ. ಈ ನಂಬಿಕೆಯಲ್ಲಿ ಎಲ್ಲವೂ ಶೂನ್ಯ ಆಕಾಶ ಅನಂತವಾದರೆ, ಅಣು ಪರಮಾಣುಗಳು ಎನೋ ಕತ್ತಲಲ್ಲಿ ತೇಲುವ ಸೂಕ್ಷ್ಮ ಜೀವಿ, ಆ ಆಗಾಧ ಶಕ್ತಿಯ ಕೊಲ್ಮಿಂಚು ಎಲ್ಲೋ ಹುಟ್ಟಿ ಶಕ್ತಿಯ ಅದುಮಿದ ಶೂನ್ಯ, ಸತ್ಯದ ಜಗದಲ್ಲಿ ನಾವೊಂದು ಭ್ರಾಮರಕ ನಿರ್ಮಿತಿಗಳು ಅದೇ ನಿರಾಕಾರ, ನಿರ್ಗುಣ, ನಿರಾಮಯ, ಆಗೋಚರ ಬ್ರಹ್ಮಾಂಡದ ಸ್ವರೂಪಗಳು ನಮ್ಮ ನಮ್ಮ  ಜ್ಞಾನದ ಅಳತೆಯೊಳಗೆ…. “ನೈಜ ಜಗತ್ತಿನಲ್ಲಿ ಬಣ್ಣಗಳೇ ಇಲ್ಲ, ವಾಸನೆಯೂ ಇಲ್ಲ, ಮೃದುತ್ವ ಕಾಠೀಣ್ಯಗಳು ಇಲ್ಲ, ಅವೆಲ್ಲ ಏನಿದ್ದರೂ ನಮ್ಮ ನಿಮ್ಮ ಮಿದುಳಿನಲ್ಲಿ ನಮ್ಮ ನಿಮ್ಮ ಜ್ಞಾನದಲ್ಲಿ” ಎಂದು ಪ್ರಸಿದ್ಧ ನರ ವಿಜ್ಞಾನಿ ನೋಬೆಲ್ ವಿಜೇತ ಸರ್ ಜಾನ್ ಐಕೆಲ್ಸ್ ಹೇಳಿದ್ದಾರೆ.

ನಮ್ಮ ಯೋಚನಾ ಲಹರಿಯ ಶೂನ್ಯ ಜಾಗಗಳಲ್ಲಿ ಈ ನಂಬಿಕೆಗಳು ಅಚ್ಚಳಿದು ನಿಂತಿದೆ ನಮ್ಮ ನಂಬಿಕೆಗಳೇ ಹಾಗೆ ಅದು ಪ್ರಕೃತಿಯ ಅರಾಧನೆಯಿಂದ ಹಿಡಿದು ಗುರು ಹಿರಿಯರ ಪೂಜನೆಯವರೆಗೆ ಅದರಲ್ಲೂ ಕರಾವಳಿ ಇವೂಗಳ ಗೂಡು, ಬೀಡು. ಹಲವಾರು ವೈಶಿಷ್ಟ, ವಿಶೇಷ, ಆಚರಣೆ, ಅರಾಧನೆ, ಪಾಲನೆ ಇವುಗಳಿಂದಾಗಿ ವಿಶ್ವವ್ಯಾಪ್ತಿಯಲ್ಲಿ ಛಾಪನ್ನು ಮೂಡಿಸಿದೆ.  ಎಲ್ಲರ ಮಂದ ದೃಷ್ಠಿ ಇತ್ತ ಕಡೆ ನೆಡುವಂತೆ ಮಾಡಿದೆ. ಇಲ್ಲಿನ ಆಚರಣೆ ಒಂದನ್ನು ಮೀರಿಸುವ ಇನ್ನೊಂದು ಪ್ರಬುದ್ಧವಾದದ್ದು. ಪ್ರಪಂಚದ ಬೇರೆ ಯಾವೂದೇ ಕೋಣೆಯಲ್ಲೂ ಅರಸಿ ಹುಡುಕಿದರೂ ಬಯಸಿ ಸಿಗಲಾರದು. ಯಾವುದೋ ಪೂವಾಗ್ರಹದ ನೆಲೆಯಲ್ಲಿ ತುಳುನಾಡು ತನ್ನ ಭವ್ಯ ಸಂಸ್ಕೃತಿಯ ಕಣಜದ ನೆಲೆಯಲ್ಲಿ ಇನ್ನೂ ಆಚರಣೆಗಳು ಉಳಿದು ನಡೆಯುತಿದೆ. ಒಂದಷ್ಟು ಜಿಜ್ಞಾಸೆ, ವಿಮರ್ಶೆಗಳಿಂದ ಮತ್ತಷ್ಟು ಪ್ರಚಾರವಾಗಿ ಇನ್ನಷ್ಟು ಗಟ್ಟಿಯಾಗಿ ತುಳುವರ ಮನಗಳಲ್ಲಿ ಅಗೆಲುಗಳ ರೂಪದಲ್ಲಿ ಭಾವುಕವಾಗಿ ಬೆಚ್ಚಗೆ ಕುಳಿತಿದೆ.

ಮತ್ತಷ್ಟು ಓದು »

24
ನವೆಂ

ಕಾನೂನಿನ ಹೆಸರಲ್ಲಿ ಮರೆಯಾಗಲಿದೆಯೆ ಕರಾವಳಿಯ ಕಂಬಳ ಕ್ರೀಡೆ?

– ರಾಘವೇಂದ್ರ ಅಡಿಗ. ಹೆಚ್.ಎನ್

ಕಂಬಳಶತಮಾನಗಳ ಇತಿಹಾಸ ಹೊಂದಿರುವ ಕರ್ನಾಟಕದ ಕರಾವಳಿಯಲ್ಲಿನ ಕಂಬಳ ಕ್ರೀಡೆಗೆ ಇದೀಗ ಕಂಟಕವು ಎದುರಾಗಿದೆ. ಹೋರಿಗಳನ್ನು ಹಿಂಸಾತ್ಮಕವಾಗಿ ಬೆದರಿಸುವ ತಮಿಳುನಾಡಿನ ಜಲ್ಲಿಕಟ್ಟು ಸ್ಪರ್ಧೆ ಮತ್ತು ಮಹಾರಾಷ್ಟ್ರದ ಎತ್ತಿನ ಗಾಡಿ ಓಟದ ಸ್ಪರ್ಧೆಯನ್ನು ಸುಪ್ರೀಂ ಕೋರ್ಟ್ 2014ರ ಮೇ 7ರಂದು ನಿಷೇಧಿಸಿ ಆದೇಶ ಹೊರಡಿಸಿತ್ತು. ಪ್ರಾಣಿಗಳನ್ನು ಮನರಂಜನೆಗಾಗಿ ಹಿಂಸಾತ್ಮಕವಾಗಿ ನಡೆಸಿಕೊಳ್ಳಬಾರದು ಎಂಬುದು ನ್ಯಾಯಾಲಯದ ತೀರ್ಪಿನ ತಾತ್ಪರ್ಯವಾಗಿತ್ತು. ಇದೀಗ ಸುಪ್ರೀಂ ಕೊರ್ಟ್ ತೀರ್ಪಿನ ಹಿನ್ನೆಲೆಯನ್ನಿಟ್ಟುಕೊಂಡು ಭಾರತೀಯ ಪ್ರಾಣಿಗಳ ಕಲ್ಯಾಣ ಮಂಡಳಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕಂಬಳ ನಡೆಸದಂತೆ ಸೂಚಿಸಿದೆ. ಹೀಗಾಗಿ ದ.ಕ ಜಿಲ್ಲಾಡಳಿತದ ಕ್ರೀಡೆಗೆ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ಕಂಬಳದ ಆಚರಣೆ, ಇತಿಹಾಸ, ಹಿನ್ನೆಲೆಯ ಮೇಲೆಂದು ಇಣುಕು ನೋಟವಿಲ್ಲಿದೆ.

ಕರಾವಳಿ ಕರ್ನಾಟಕದ ಬೇಸಾಯ ವೃತ್ತಿಯೇ ಪ್ರಮುಖವಾಗಿರುವ ಸಮಾಜದಲ್ಲಿ ಕೋಣಗಳು ಅವರ ಬದುಕಿನ ಅವಿಭಾಜ್ಯ ಅಂಗವಾಗಿ ಹೋಗಿದೆ.  ಬೇಸಾಯಗಾರರು ಭತ್ತದ ಗದ್ದೆಗಳಲ್ಲಿ ಉತ್ತಿದ ಬಳಿಕ ಕೋಣ ಎತ್ತುಗಳನ್ನು ಓಡಿಸುತ್ತಿದ್ದ ಆಚರಣೆ ಮತ್ತು ಆಟ ‘ಕಂಬಳ’. ಕಂಬಳ ಅತವಾ ತುಳು ಭಾಷೆಯಲ್ಲಿ ಹೇಳುವಂತೆ ‘ಕಂಬುಲ’ ಎಂದರೆ ಉಳುವುದಕ್ಕೆ ಮತ್ತು ಬೀಜಗಳ ಬಿತ್ತನೆಗೆ ಸಿದ್ದವಾಗಿರುವ ಕೆಸರುಗದ್ದೆ ಎಂದೇ ಹುರುಳು. ಕೆಸರುಗದ್ದೆಯಲ್ಲಿ, ಬಾಕಿಮಾರು ಗದ್ದೆಯಲ್ಲಿ, ಕಂಬಳ ಗದ್ದೆಯಲ್ಲಿ ದಪ್ಪನೆ ಮಯ್ಯ, ಸಾಕಿದ ಕೋಣಗಳನ್ನು ಓಡಿಸುವುದು ಒಂದು ಮನೋರಂಜನೆ ಆಟ. ಹೀಗೆಂದ ಮಾತ್ರಕ್ಕೆ ಕಂಬಳವು ಕೇವಲ ಕೋಣಗಳ ಓಟದ ಸ್ಪರ್ಧೆಯು ಮಾತ್ರವೇ ಎಂದು ತಿಳಿಯಬೇಕಿಲ್ಲ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿನ ರೈತರು ಭತ್ತದ ಕೊಯ್ಲಿನ ಬಳಿಕದಲ್ಲಿ ಮನರಂಜನೆಗಾಗಿ ಏರ್ಪಡಿಸುತ್ತಿದ್ದ ಆಟವಿದಾಗಿದ್ದು ಇಂತಹಾ ಆಚರಣೆಯ ಜತೆಗೆ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಧಾರ್ಮಿಕ ನಂಬಿಕೆಯೂ ಮಿಳಿತಗೊಂಡಿದೆ.

ಮತ್ತಷ್ಟು ಓದು »

3
ಆಕ್ಟೋ

ಪ್ರೊ.ಬಾಲು ಅವರಿಗೆ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್

Prof Balu2ಕರ್ನಾಟಕದಲ್ಲಿ ಈಗ ಗೌರವ ಡಾಕ್ಟರೇಟ್ ಪದವಿ ಎನ್ನುವುದು ಮಾರುಕಟ್ಟೆಯಲ್ಲಿ ದೊರೆಯುವ ವಸ್ತುವಾಗಿರುವುದು ನಮಗೆಲ್ಲ ಗೊತ್ತಿರುವ ವಿಚಾರವೇ. ಆದರೆ ಯುರೋಪಿನ ವಿಶ್ವವಿದ್ಯಾಲಯಗಳಲ್ಲಿ ಇದು ಇನ್ನೂ ತನ್ನ ಘನತೆ ಹಾಗೆ ಉಳಿಸಿ ಕೊಂಡಿದೆ. ಉದಾಹರಣೆಗೆ, ಪ್ರೊಫೆಸರ್ ಎಸ್. ಎನ್. ಬಾಲಗಂಗಾಧರ ರಾವ್ ಅವರಿಗೆ ೩೦/೯/೨೦೧೩ರಂದು  ಗೌರವ ಡಾಕ್ಟರೇಟ್ ಪದವಿ ಮತ್ತು ಬಂಗಾರದ ಪದಕದೊಂದಿಗೆ ಸನ್ಮಾನ ಮಾಡಿದ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯ ತನ್ನ ೧೫ ವರ್ಷಗಳ ಇತಿಹಾಸದಲ್ಲಿ ಕೊಟ್ಟಿದ್ದು ಕೇವಲ ಬೆರಳೆಣಿಕೆಯಷ್ಟು ಗೌರವ ಡಾಕ್ಟರೇಟ್ ಪದವಿಗಳನ್ನು ಮಾತ್ರ.

ಈ ಸಂದರ್ಭದಲ್ಲಿ ಎಸ್. ಎನ್. ಬಾಲಗಂಗಾಧರ ರಾವ್ ಅವರ ಸಾಧನೆಗಳ ಕುರಿತು ಅಲ್ಲಿನ ಸಮಾಜ ವಿಜ್ಞಾನಗಳ ಡೀನ್ ಮಾಡಿದ ಭಾಷಣದ ಕನ್ನಡ ಅವತರಣಿಕೆಯನ್ನು ನಾವಿಲ್ಲಿ ಕೊಡುತ್ತಿದ್ದೇವೆ.

–      ನಿಲುಮೆ

 

ಮತ್ತಷ್ಟು ಓದು »

4
ಸೆಪ್ಟೆಂ

“ಡುಂಢಿ” ಅನ್ನುವ ಕೃತಿ ಮತ್ತು “ಸೆಕ್ಯುಲರಿಸಂ” ಅನ್ನುವ ಅವಕಾಶವಾದ …!

– ರಾಕೇಶ್ ಶೆಟ್ಟಿ

Dundi mattu CSLC“ಡುಂಢಿ”ಯ ಬಗ್ಗೆ ಗೆಳೆಯರೊಬ್ಬರ ಜೊತೆ ಮಾತನಾಡುತಿದ್ದೆ. ಅವರು “Immortals of Meluha” ಪುಸ್ತಕವನ್ನು ಉಲ್ಲೇಖಿಸಿ, “ಆ ಪುಸ್ತಕದಲ್ಲಿ ಶಿವ, ಗಾಂಜಾ ಸೇದುತ್ತಾನೆ,ಟಿಬೆಟಿಯನ್ ಮೂಲದವನು ಅಂತ ಬರೆದಿತ್ತು ಅದು ಭರ್ಜರಿ ಸೇಲ್ ಆಗಿತ್ತು.ಈ ಡುಂಢಿ ಪ್ರಿಂಟ್ ಹಾಕಿಸಿದ್ದೇ ೧೫೦-೨೦೦ ಪ್ರತಿಯಂತಲ್ಲ” ಅಂದರು. ನಾನಂದೆ “ನಿಮಗೆ, ’ದೇವರ ಪಾಲಿಟಿಕ್ಸ್’ ಅರ್ಥವಾಗಿಲ್ಲ. ಆ ಪುಸ್ತಕದಲ್ಲಿ ಶಿವನನ್ನು, ’ಟಿಬೆಟಿಯನ್’ ಅನ್ನುವ ಬದಲೋ ’ಬ್ರಾಹ್ಮಣ/ಆರ್ಯ’ ಅಂತೇನಾದರೂ ಚಿತ್ರಿಸಿದ್ದರೇ ಈಗ ಡುಂಢಿಯ ಪರ ಮಾತನಾಡುತ್ತಿರುವ ಕರ್ನಾಟಕದ ಸೋ-ಕಾಲ್ಡ್ ಸೆಕ್ಯುಲರ್ ಗಳೆಲ್ಲ ಆ ಪುಸ್ತಕದ ವಿರುದ್ಧ ಮಾತನಾಡುತಿದ್ದರು”.

“ಒಬ್ಬ ನಕಲಿಯೋ ಅಥವಾ ಹಲವಾರು ಅಸಲಿಗಳ ಒಂದು ಸಂಕೇತವೊ ಆಗಿರುವ ಗಣಪತಿಯನ್ನು ಕುರಿತು ಹಲವು ಪುರಾಣಗಳು ಹಲವಾರು ರೀತಿಯ ಕಥೆಗಳನ್ನು ಹೇಳಿವೆ. ಈ ಢುಂಢೀಯೂ ಹಾಗೇ ಒಂದು ಮನೋರಂಜನೆ ಅಥವಾ ವಿಚಾರಕ್ಕೆ ಹಚ್ಚಬಹುದಾದ, ನಿಜವೆಂದು ನಂಬಲು ಇಷ್ಟ ಪಡುವ ಹೂರಣದ ಒಂದು ಕಲ್ಪನೆಯ ಪುರಾಣವೇ.” ಅನ್ನುವ ಮಾತುಗಳನ್ನಿಟ್ಟುಕೊಂಡ “ಡುಂಢಿ” ಅನ್ನುವ ಕೃತಿಯನ್ನು ಓದದೇ ಅದು ಕೃತಿಯೋ,ವಿಕೃತಿಯೋ ಅಂತ ನಿರ್ಧಾರ ಮಾಡುವುದು ಹೇಗೆ? ಅನ್ನುವ ಪ್ರಶ್ನೆಯನ್ನು ಮುಂದಿಡುತ್ತ ಮತ್ತು ಒಬ್ಬ ಲೇಖಕನನ್ನು ಬಂಧಿಸುವಂತ ಮಟ್ಟದವರೆಗೂ ಹೋಗಿದ್ದನ್ನು ವಿರೋಧಿಸುತ್ತಲೇ,ಈ ಮಾತು ಕೇಳುತಿದ್ದೇನೆ.ನಾನು ನನ್ನ ಗೆಳೆಯರಿಗೆ ಹೇಳಿದ ಮಾತಿನಲ್ಲಿ ಸತ್ಯವಿರಬಹುದು ಅಂತ ನಿಮಗೂ ಅನ್ನಿಸುವುದಿಲ್ಲವೇ? (“ಶಿವ”ನಮ್ಮವನು ಅವನನ್ನು ಹೈಜಾಕ್ ಮಾಡಿದ್ದಾರೆ ಅಂತ ಬರೆದವರನ್ನೂ ನೋಡಿದ್ದೇನೆ. ದೇವರನ್ನೂ ಈ ಮಂದಿ ತಮ್ಮ ಗುಂಪಿನೊಳಗೆ ಸೇರಿಸಿಕೊಳ್ಳುತ್ತಾರೆ ಶಿವಾ ಶಿವಾ…!)

ಮತ್ತಷ್ಟು ಓದು »

22
ಆಗಸ್ಟ್

ರಮಾನಂದ ಐನಕೈ ಅವರ “ನಮಗೆ ನಾವೇ ಪರಕೀಯರು” ಪುಸ್ತಕದ ಕುರಿತು

– ಮು . ಅ . ಶ್ರೀರಂಗ  ಯಲಹಂಕ  ಬೆಂಗಳೂರು

ನಮಗೆ ನಾವೇ ಪರಕೀಯರುರಮಾನಂದ ಐನಕೈ ಅವರ “ನಮಗೆ ನಾವೇ ಪರಕೀಯರು ” (ನ. ನಾ. ಪ) (ಪ್ರಕಾಶಕರು : ರಾಷ್ಟ್ರೋತ್ಹಾನ ಸಾಹಿತ್ಯ ಬೆಂಗಳೂರು -೧೯ )ಪುಸ್ತಕ ಓದುವ ಮುನ್ನ ನಾನು ಪ್ರೊ .ಎಸ್ .ಎನ್. ಬಾಲಗಂಗಾಧರ (ಬಾಲು)ಅವರ ವಿಚಾರಗಳನ್ನು ಆಧರಿಸಿದ ಕನ್ನಡಕ್ಕೆ ಅನುವಾದವಾಗಿರುವ ಮೂರುಪುಸ್ತಕಗಳನ್ನು ಓದಿದ್ದೆ (ಪೂರ್ವಾವಲೋಕನ ,ಭಾರತದಲ್ಲಿ ಜಾತಿ ವ್ಯವಸ್ಥೆ ಇದೆಯೆ? ಮತ್ತು ಹುಡುಕಾಟವನ್ನು ನಿಲ್ಲಿಸದಿರೊಣ). ಸ್ಮೃತಿ-ವಿಸ್ಮೃತಿ ;ಭಾರತೀಯ ಸಂಸ್ಕೃತಿ ತನ್ನ ವಿಚಾರ ಮತ್ತು ಗಾತ್ರದಲ್ಲಿ ತುಂಬಾ ಘನವಾಗಿದೆ ಹೀಗಾಗಿ ನಿಧಾನವಾಗಿ ಓದಿ ಅರ್ಥಮಾಡಿಕೊಳ್ಳಬೇಕಾಗಿದೆ. ಇದುವರೆಗೆ ಸುಮಾರು ಇನ್ನೂರು ಪುಟಗಳನ್ನು ಓದಿದ್ದೆನೆ. ರಮಾನಂದರ ಪ್ರಸ್ತುತ ಪುಸ್ತಕ ಮೇಲೆ ಹೇಳಿದ ಬಾಲು ಅವರ ನಾಲ್ಕು ಪುಸ್ತಕಗಳ ಅದರಲ್ಲೂ ಮುಖ್ಯವಾಗಿ ಸ್ಮೃತಿ-ವಿಸ್ಮೃತಿ ಪುಸ್ತಕದಲ್ಲಿರುವ ವಿಷಯಗಳನ್ನು ನೇರವಾಗಿ ಭಟ್ಟಿ ಇಳಿಸಿರುವುದರ ಪ್ರತಿಫಲ! ಇದಕ್ಕೆ ಪುರಾವೆಗಳು ರಮಾನಂದರ ನ.ನಾ.ಪ.. ಪುಸ್ತಕದಲ್ಲೇ ಇವೆ.

,         ೧. ಬಾಲು ಅವರೇ ತಮ್ಮ ಮುನ್ನುಡಿಯಲ್ಲಿ—ರಮಾನಂದರ ಎಲ್ಲಾ ಲೇಖನಗಳು ಈ ವಿಷಯಗಳ ಕುರಿತಾಗಿ ಬೆಲ್ಜಿಯಂ ಹಾಗೂ ಭಾರತದಲ್ಲಿ ಕುವೆಂಪು ವಿ. ವಿ. ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರದಲ್ಲಿ ನಡೆಯುತ್ತಿರುವ ಸಂಶೋಧನೆಗಳಿಂದ ಪ್ರಭಾವಿತವಾಗಿವೆ ಎಂದ್ದಿದ್ದಾರೆ (ಪುಟxii)

೨. ಲೇಖಕರ ಮಾತಿನಲ್ಲಿ ಸ್ವತಃ ರಮಾನಂದ ಐನಕೈ ಅವರೇ ಮೇಲೆ ಹೇಳಿದ ಬಾಲು ಅವರ ಮಾತುಗಳನ್ನೇ ಅನುಮೋದಿಸಿದ್ದಾರೆ—ಬಾಲು ಅವರ ಮೂಲ ಸಿದ್ಧಾಂತಕ್ಕೆ ಚ್ಯುತಿ ಬಾರದ ಹಾಗೆ ಅವರ ವಿಚಾರಗಳನ್ನು ನನ್ನ ಅನುಭವಗಳ ಮೂಲಕ ಸರಳವಾಗಿ ನಿರೂಪಿಸುವ ಕೆಲಸ ಮಾಡಿದ್ದೇನೆ (ಪುಟ xvi )(ರಮಾನಂದರ ಅನುಭವಗಳ ಪ್ರಮಾಣ ಈ ಪುಸ್ತಕದ ವಿಚಾರದಲ್ಲಿ ತೀರಾ ಕಡಿಮೆ ಎಂಬುದು ಓದುಗರಿಗೆ ಮನವರಿಕೆಯಾಗುತ್ತದೆ!)

೩. ರಮಾನಂದರ ಪ್ರಸ್ತುತ ಪುಸ್ತಕ್ಕಕ್ಕೆ (ನ.ನಾ.ಪ) ಹಿನ್ನೆಲೆ ಬರೆದಿರುವ ದಾ॥ ರಾಜಾರಾಮ ಹೆಗಡೆಯವರು ಸಹ ರಮಾನಂದರದು ಸ್ವತಂತ್ರ ಲೇಖನಗಳಾದರೂ ಕೂಡ ಭಾರತೀಯ ಸಂಸ್ಕೃತಿಯ ಕುರಿತು ಎಸ್ . ಎನ್ . ಬಾಲಗಂಗಧರ ಅವರ ಹೊಸ ವಾದಗಳಿಂದ ಪ್ರಭಾವಿತವಾಗಿವೆ. (ಪುಟ xviii)

ಮತ್ತಷ್ಟು ಓದು »

10
ಜೂನ್

CSLC ಯ ಸಂಶೋಧನೆ ಮತ್ತು ಪ್ರಗತಿಪರರ ಫ್ಯಾಸಿಸ್ಟ್ ಧೋರಣೆ

CSLC– ರಾಕೇಶ್ ಶೆಟ್ಟಿ

ಅಲ್ಲಿಯವರೆಗೂ ಸುಖಾ ಸುಮ್ಮನೆ ಭೂಮಿಯ ಸುತ್ತ ಗಿರಕಿ ಹೊಡೆಯುತಿದ್ದ ಸೂರ್ಯನಿಗೆ ಸುತ್ತುವುದರಿಂದ ಮುಕ್ತಿ ಕೊಡಿಸಿ,’ಭೂಮಿಯೇ ಸೂರ್ಯನ ಸುತ್ತ ಸುತ್ತುತ್ತಿದೆ’ ಅಂದವನು ಕೋಪರ್ನಿಕಸ್. ಅವನ ಕೆಲಸವನ್ನ ಮುಂದುವರಿಸಿದವರು ಗೆಲಿಲಿಯೋ ಮತ್ತು ಬ್ರುನೋ.ಈ ಮೂವರು ಬರುವವರೆಗೂ ಸೂರ್ಯನೇ ಭೂಮಿಯ ಸುತ್ತ ಸುತ್ತುತ್ತಾನೆ ಅಂತಲೇ ಜನರು ನಂಬಿದ್ದರು.ಅದೇ ಜನರ ಮಧ್ಯದಿಂದ ಎದ್ದು ಬಂದು,’ಇಲ್ಲ ಸ್ವಾಮಿ ಭೂಮಿಯೇ ಸುತ್ತೋದು’ ಅಂದಿದ್ದ ಕೋಪರ್ನಿಕಸ್ ಅದೇ ಜನರಿಂದ ಹುಚ್ಚ ಅನ್ನಿಸಿಕೊಂಡಿದ್ದ.ಅವನ ನಂತರ ಬಂದ ಗೆಲಿಲಿಯೋ ಮತ್ತು ಬ್ರುನೋ ಸಹ ಕೋಪರ್ನಿಕಸ್ ವಾದಕ್ಕೆ ಸೈ ಅಂದರು.

ಸಮಾಜದ ನಂಬಿಕೆಯ ಬುಡವನ್ನು ಅಲುಗಾಡಿಸುವ ಯಾವುದೇ ಪ್ರಯತ್ನಕ್ಕೆ ದೊಡ್ಡ ಮಟ್ಟದಲ್ಲೇ ಅಡೆ-ತಡೆಗಳು ಎದುರಾಗಬೇಕಲ್ಲವೇ? ಗೆಲಿಲಿಯೋ,ಬ್ರೂನೋಗು ಅದೇ ಆಯಿತು. ಇವರ ಸಂಶೋಧನೆಯಿಂದ ಕನಲಿ ಕೆಂಡವಾದ ಪೋಪ್ ಎಂಟನೇ ಅರ್ಬನ್,“Heliocentric System” ಅನ್ನುವುದೇ ಸುಳ್ಳು ಎಂದು ಸಾರ್ವಜನಿಕವಾಗಿ ಗೆಲಿಲಿಯೋ ಮತ್ತು ಬ್ರೂನೋನನ್ನು ಖಂಡಿಸಿ, ಅವರಿಬ್ಬರ ಸಂಶೋಧನೆಗೂ ನಿರ್ಬಂಧವನ್ನೂ ಹೇರಿದರು.

ಗೆಲಿಲಿಯೋನನ್ನು ಜೈಲಿಗೂ ತಳ್ಳಲಾಯಿತು, ಸಾಯುವವರೆಗೂ ಗೃಹ ಬಂಧನದಲ್ಲಿರಿಸಲಾಯಿತು.1642ರಲ್ಲಿ ಗೆಲಿಲಿಯೋ ಮರಣವನ್ನಪ್ಪಿದಾಗ ಆತನನ್ನು ಕ್ರೈಸ್ತರ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡುವುದಕ್ಕೂ ಬಿಡಲಿಲ್ಲ.ಇನ್ನು ಬಾಹ್ಯಾಕಾಶವೆಂಬುದು Finite ಅಲ್ಲ, Infinite. ಅದಕ್ಕೆ ಕೊನೆಯೇ ಇಲ್ಲ ಎಂದು ವಾದಿಸುವ ಧೈರ್ಯ ತೋರಿದ ಬ್ರೂನೋನನ್ನಂತೂ,೧೫೯೨ರಲ್ಲಿ ಬಂಧಿಸಿ ರೋಮನ್ ಕ್ಯಾಥೋಲಿಕ್ ಚರ್ಚ್‌ನ ನ್ಯಾಯಾಲಯದ(The Inquisition) ಮುಂದೆ 7 ವರ್ಷಗಳ ಕಾಲ ವಿಚಾರಣೆ ಗೊಳಪಡಿಸಿ, ಕೊನೆಗೆ ಉರಿವ ಜ್ವಾಲೆಯಲ್ಲಿ ಸುಡುವ ಮರಣದಂಡನೆಯನ್ನು ವಿಧಿಸಿದರು.

ಮತ್ತಷ್ಟು ಓದು »

7
ಜೂನ್

ಶಿವ ನಾನು, ಶಿವ ನಾನು!

Shankaraacharya1ಈ ಬರಹವು ’ಎಲ್ಲರ ಕನ್ನಡ ‘ ದಲ್ಲಿದೆ.ಎಲ್ಲರ ದನಿಗೂ ವೇದಿಕೆಯಾಗುವ ನಿಲುಮೆಯ ಎಂದಿನ ನಿಲುವಿನಂತೆ ಈ ಲೇಖನವನ್ನು “ನಿಲುಮೆ” ಪ್ರಕಟಿಸುತ್ತಿದೆ.ಆದರೆ ವಿಷಯಗಳು ಸಾಮಾನ್ಯ ಕನ್ನಡಿಗರಿಗೆ ತಲುಪಬೇಕೆಂದರೆ ವಿಷಯ ಸಾಮಾನ್ಯ ಕನ್ನಡದಲ್ಲಿದ್ದರೆ ಒಳಿತಾದ್ದರಿಂದ ಪ್ರಚಲಿತ ಬಳಕೆಯಲ್ಲಿರುವ ಕನ್ನಡದ ಲೇಖನಗಳನ್ನು ಅಪೇಕ್ಷಿಸುತ್ತದೆ.

– ಕಿರಣ್ ಬಾಟ್ನಿ

{ಇತ್ತೀಚೆಗೆ ಜಾತಿಗಳ ಬಗೆಗಿನ ಚರ‍್ಚೆ ಹಾದಿ ತಪ್ಪುತ್ತಿದೆ ಎಂದು ನನ್ನ ಅನಿಸಿಕೆ. ಒಂದು ಕಡೆ ’ಬಲಗಡೆ’ಯವರಲ್ಲಿ ಮುಂಚೂಣಿಯಲ್ಲಿದ್ದಾರೆ ಎನಿಸಿಕೊಂಡವರು ಬಾರತದಲ್ಲಿ ಜಾತಿಯೇರ‍್ಪಾಡೆಂಬುದೇ ಇಲ್ಲ ಎಂದು ವಾದಿಸಿ ಆ ಮೂಲಕ ಕೂಡಣಮಾರ‍್ಪಿಗೆ ಅರ‍್ತವೇ ಇಲ್ಲವೆಂಬ ಅನಿಸಿಕೆಯನ್ನು ಬಿತ್ತುತ್ತಿದ್ದಾರೆ. ಇನ್ನೊಂದು ಕಡೆ ’ಎಡಗಡೆ’ಯವರಲ್ಲಿ ಜಾತಿಯೇರ‍್ಪಾಡಿನ ಕೆಡುಕುಗಳ ಬಗ್ಗೆ ಹಾಡಿ ಗೋಳಾಡುವುದೇ ಒಂದು ಕಸುಬಾಗಿ ಬಿಟ್ಟಿರುವುದರಿಂದ ಅವರಿಂದ ಕೂಡಣಮಾರ‍್ಪಿನ ನಿಟ್ಟನ್ನು ಬಯಸುವುದೇ ತಪ್ಪೆಂಬಂತಿದೆ. ಇನ್ನು ಇವೆರಡು ಗುಂಪುಗಳು ಅರಿವನ್ನು ಹಂಚಿಕೊಳ್ಳುವುದಂತೂ ದೂರದ ಮಾತು.

ಇವೆರಡರ ನಡುವಿನ ಹಾದಿಯೊಂದನ್ನು ನಾವು ಕಂಡುಕೊಳ್ಳದೆ ಹೋದರೆ ಒಟ್ಟಾರೆಯಾಗಿ ಕನ್ನಡಿಗರಿಗೆ ಏಳಿಗೆಯಿಲ್ಲ ಎಂಬ ನಂಬಿಕೆ ನನ್ನಲ್ಲಿ ಬಹಳ ಗಟ್ಟಿಯಾಗಿದೆ. ’ಎಲ್ಲರಕನ್ನಡ’ವನ್ನು ನಾನು ಒಪ್ಪಿ ಅದನ್ನೇ ಬಳಸುವ ಹಟ ಹಿಡಿದಿರುವುದಕ್ಕೆ ಈ ನಂಬಿಕೆ ಒಂದು ಮುಕ್ಯವಾದ ಕಾರಣ. ಹುಟ್ಟಿನಿಂದ ಮಾದ್ವ ಬ್ರಾಮಣ ಜಾತಿಗೆ ಸೇರಿದ ನಾನು ಈ ನಡುಹಾದಿಯಲ್ಲಿ ನಡೆಯುವಾಗ ಸಂಸ್ಕ್ರುತದಲ್ಲಿ ಈಗಾಗಲೇ ಇರುವ ಮತ್ತು ಕನ್ನಡದ ಕೂಡಣವನ್ನು ಒಡೆಯದೆ ಅದನ್ನು ಇಡಿಯಾಗಿ ಆದ್ಯಾತ್ಮಿಕ ಎತ್ತರಕ್ಕೊಯ್ಯುವಂತಹ ಅರಿವನ್ನು ನನ್ನ ಕಯ್ಲಾದಶ್ಟು ಎಲ್ಲರಕನ್ನಡಕ್ಕೆ ತರಬೇಕಾದುದು ನನ್ನ ಕರ‍್ತವ್ಯವೆಂದೇ ತಿಳಿದುಕೊಂಡಿದ್ದೇನೆ.

ಇಲ್ಲಿ ಬಹಳ ಚಿಕ್ಕದಾದ ಅಂತಹ ಒಂದು ಮೊಗಸನ್ನು ಮಾಡಿದ್ದೇನೆ. ಎಲ್ಲರಕನ್ನಡದಲ್ಲಿ ಹೀಗೆ ಗೇದರೆ ಬ್ರಾಮಣರು ಜಾತಿಯೇರ‍್ಪಾಡನ್ನು ಕೆಡವಲು ನೆರವಾಗಬಹುದು ಮತ್ತು ಬ್ರಾಮಣಿಕೆಯನ್ನು ಒಂದು ಜಾತಿಯಂತೆ ಕಾಣುವುದನ್ನು ನಿಲ್ಲಿಸಿ ಹಿಂದಿನ ಬ್ರಾಮಣರು ಮಾಡಿದ ಕೆಲಸದಲ್ಲಿ ನಿಜವಾಗಲೂ ಉಳಿಸಿಕೊಳ್ಳತಕ್ಕುದನ್ನು ಉಳಿಸಿಕೊಂಡು ಆ ಮೂಲಕ ಕೂಡಣಕ್ಕೆ ನೆರವಾಗಬಹುದು. ಇದನ್ನು ಎಶ್ಟು ಸಾರಿ ಕೂಗಿ ಹೇಳಿದರೂ ಸಾಲದು. – ಕಿ. ಬಾ.}

ಮತ್ತಷ್ಟು ಓದು »

26
ಮೇ

ಜಾತಿವ್ಯವಸ್ಥೆ ಇಲ್ಲ ಎಂದರೆ…

-ಡಾ. ಷಣ್ಮುಖ ಮತ್ತು ಡಾ. ಪ್ರವೀಣ

vachana-charcheಜಾತಿಗಳಿವೆ ಜಾತಿವ್ಯವಸ್ಥೆ ಇಲ್ಲ ಎಂದರೆ ಏನು? ಹಾಗಾದರೆ ಈ ಮೇಲು-ಕೀಳು, ತಾರತಮ್ಯ, ಶೋಷಣೆಗಳು ಇಲ್ಲ ಅಂತ ಹೇಳ್ತಾ ಇದೀರಾ?  ಪದೇ ಪದೇ ನಮಗೆ ಇದುವರೆಗೂ ಎದುರಾಗಿರುವ (ಅಂತರ್ಜಾಲದ ಚರ್ಚೆಗಳಲ್ಲಿರಬಹುದು, ಸೆಮಿನಾರ್, ಕಾರ್ಯಾಗಾರಗಳಲ್ಲಿರಬಹುದು) ಕೆಲವೇ ಒಳ್ಳೆಯ ಪ್ರಶ್ನೆಗಳಲ್ಲಿ ಇವೂ ಕೂಡ. ಅವುಗಳ ಸುತ್ತ ಈ ಬರಹ ಚರ್ಚಿಸುವ ಪ್ರಯತ್ನ ಮಾಡುತ್ತದೆ.

ಜಾತಿಗಳಿಲ್ಲ ಎಂದು ವಾದಿಸುತ್ತಿರುವ ಮೂರ್ಖರ ಗುಂಪೊಂದು ಇದೆ ಎಂದು ಹೇಳುತ್ತಾ ಬಂದಿರುವುದನ್ನು ನೀವು ಕೇಳಿರುವ ಸಾಧ್ಯತೆ ಇದೆ. ಆಗ ನಿಮಗೂ ಅನಿಸಿರಬಹುದು -ಇವರೆಂಥ ಮೂರ್ಖರಯ್ಯ.! ಕಣ್ಮುಂದೆ ಕಾಣುವ ಸಂಗತಿಗಳನ್ನು ನಿರಾಕರಿಸುತ್ತಿರುವರಲ್ಲ! ಇದೆಂಥಾ ಸಂಶೋಧನೆ, ಇದರ ಹಿಂದೆ ಯಾವುದೋ ಹುನ್ನಾರ/ ಕುಯುಕ್ತಿ ಇದ್ದಿರಬಹುದು!     ಅಂತಹ ಯಾವುದೇ ಪ್ರಮೇಯಗಳನ್ನು, ಹೇಳಿಕೆಗಳನ್ನು ಮಾಡಿರುವ ಒಂದೇ ಒಂದು ಉದಾಹರಣೆ ಕೂಡ ನಮ್ಮ ಗುಂಪಿನ ಬರಹಗಳಿಂದ ತೆಗೆದು ತೋರಿಸಲು ಸಾಧ್ಯವಿಲ್ಲ. ಹಾಗಿದ್ದರೂ ಈ ರೀತಿಯ ಆರೋಪಗಳು ಎಲ್ಲಿಂದ ಹೊರಟಿತು? ಹಾಗಾದರೆ ಜಾತಿಗಳ ಕುರಿತು ನಮ್ಮ ವಾದವೇನು? ಎಂಬ ಪ್ರಶ್ನೆಗಳು ಏಳುವುದು ಸಹಜ.

ಜಾತಿಯ ಕುರಿತ ನಮ್ಮ ವಾದವನ್ನು ಸರಳವಾಗಿ ಸಾರಾಂಶೀಕರಿಸುವುದಾದರೆ, ಭಾರತದಲ್ಲಿ ವಸಾಹತು ಪೂರ್ವದಿಂದಲೂ ಜಾತಿಗಳಿದ್ದವು, ಈಗಲೂ ಇವೆ.. ಇವುಗಳನ್ನು ಯೂರೋಪಿಯನ್ನರು ತೆಗೆದುಕೊಂಡು ಬಂದರು, ಇಲ್ಲಿ ಸೃಷ್ಟಿ ಮಾಡಿದರು ಎಂಬುದು ಸರಿಯಾದ ವಿವರಣೆಯಲ್ಲ. ಆದರೆ ಭಾರತೀಯ ಸಮಾಜವನ್ನು ನೋಡುವ ಒಂದು ನಿರ್ದಿಷ್ಟ ಚೌಕಟ್ಟನ್ನು ಯೂರೋಪಿಯನ್ನರು ನಿರ್ಮಿಸಿದರು. ಅದುವೇ “ಜಾತಿವ್ಯವಸ್ಥೆ”.

ಹಾಗಾದರೆ,  ವ್ಯವಸ್ಥೆಎಂದರೇನು? ಅವುಗಳ ಲಕ್ಷಣಗಳಾವುವು ?

ಮತ್ತಷ್ಟು ಓದು »

7
ಮೇ

ಸಿದ್ಧಾಂತ ಮತ್ತು ಐಡಿಯಾಲಜಿ ಒಂದೇ ಅಲ್ಲ – “ಗೆಳೆಯ ಫಣಿರಾಜ್ ರವರ ಪತ್ರಕ್ಕೆ ಒಂದು ಪ್ರತಿಕ್ರಿಯೆ”

 – ಪ್ರೊ.ಜೆ.ಎಸ್.ಸದಾನಂದ

SIನಿಮ್ಮ ಪತ್ರ ಓದಿದ ನಂತರ ಒಂದು ತರದ ಹಿತಕರ ಅನುಭವವಾಯಿತು. ಹಿತಕರ ಏಕೆಂದರೆ ಇದೂವರೆಗೂ ನಮ್ಮ ಬಗ್ಗೆ ಪ್ರತಿಕ್ರಿಯಿಸಿದ ಬಹಳಷ್ಟು ಮಂದಿಗೆ ನಮ್ಮ ಸಂಶೋಧನೆಯ ಹಿಂದಿರುವ ಕುತಂತ್ರ, ಹುನ್ನಾರ ಹಾಗೂ ಆಮಿಷಕ್ಕೆ ಒಳಗಾಗುತ್ತಿರುವುದಷ್ಟೇ ಕಾಣಿಸುತ್ತಿತ್ತು. ಅದಕ್ಕೆ ವ್ಯತಿರಿಕ್ತವಾಗಿ ನೀವು ನಮ್ಮ ಸಂಶೋಧನೆಯ ಬಗ್ಗೆ ನಿಮಗಿರುವ ಕೆಲವು ಸಂದೇಹಗಳ ಕುರಿತು ತುಂಬಾ (ಸಾಮಾಜಿಕ ಹೋರಾಟದಲ್ಲಿ ಬಹಳ ಕಾಲದಿಂದಲೂ ತೊಡಗಿಸಿಕೊಂಡ ಬದ್ಧತೆಯಿಂದ ಹುಟ್ಟಿದ) ಕಾಳಜಿಯಿಂದ ಚರ್ಚೆ ಮಾಡಲು ಹೊರಟಿದ್ದೀರಿ. ನಮ್ಮ ಉದ್ದೇಶವೂ ಸಹ ನಮ್ಮ ಕೇಂದ್ರದಲ್ಲಿ ಕ್ಯೆಗೊಳ್ಳುತ್ತಿರುವ ಸಂಶೋಧನೆಗಳು ಸಾರ್ವಜನಿಕ ವಿಮರ್ಶೆಗೊಳಪಡಬೇಕು ಮತ್ತು ಅದರ ಪರಿಣಾಮದಿಂದ ನಮಗೂ, ಈ ನಿಟ್ಟಿನಲ್ಲಿ ಸಂಶೋಧನೆ ಮಾಡುತ್ತಿರುವ, ಚಿಂತಿಸುತ್ತಿರುವ ಇತರರಿಗೂ ಪ್ರಚಲಿತ ಚಿಂತನೆಯಲ್ಲಿರುವ (ನಮ್ಮದನ್ನೂ ಒಳಗೊಂಡು) ಲೋಪದೋಷಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸಿಕೊಳ್ಳಲು ಸಹಾಯಕವಾಗಬೇಕು ಎನ್ನುವುದೇ ಆಗಿದೆ.

ನಮ್ಮ ಸಂಶೋಧನಾ ವಿಧಾನದ ಬಗ್ಗೆ ಈಗಾಗಲೇ ಹೇಳಿರುವುದರಿಂದ ಅದನ್ನು ಪುನರಾವರ್ತಿಸುವ ಅಗತ್ಯವಿಲ್ಲ. ಆದರೆ ಒಂದು ವಿಷಯವನ್ನು ಇಲ್ಲಿ ಸ್ಪಷ್ಟಪಡಿಸಲು ಬಯಸುತ್ತೇನೆ. ಜಾತಿವ್ಯವಸ್ಥೆ, ಸೆಕ್ಯುಲರಿಸಂ, ಮಡೆಸ್ನಾನ ಇತ್ಯಾದಿಗಳ ಬಗ್ಗೆ ನಾವಾಗಲೀ ಬಾಲುವಾಗಲಿ ಯಾವುದೇ ವ್ಯೆಜ್ಞಾನಿಕ ಸಿದ್ದಾಂತವನ್ನು ಮಂಡಿಸುತ್ತಿಲ್ಲ. ಮುಂದಿನ ಸಂಶೋಧನೆಗಳು ಕ್ಯೆಗೆತ್ತಿಕೊಳ್ಳಬಹುದಾದ ಸಂಶೋಧನಾ ಪ್ರಶ್ನೆಗಳನ್ನಷ್ಟೇ ಮುಂದಿಡುತ್ತಿದ್ದೇವೆ. ಅದರ ಮೊದಲ ಹಂತವಾಗಿ ಅವುಗಳ ಕುರಿತಾಗಿ ಬರೆದ ಲೇಖನಗಳು ಈ ವಿದ್ಯಮಾನಗಳ ಸದ್ಯದ ಗ್ರಹಿಕೆಯ ಸ್ವರೂಪದಲ್ಲಿ ಇರುವ ಸಮಸ್ಯೆಗಳನ್ನು ಮಾತ್ರ ಗುರುತಿಸುವ ಪ್ರಯತ್ನ ಮಾಡುತ್ತವೆ. ನಾವು ಒಪ್ಪಿಕೊಂಡಿರುವ ಲಿಬರಲ್ ಪ್ರಜಾಪ್ರಭುತ್ವ, ಸೆಕ್ಯುಲರರ ಹಾಗೂ ವ್ಯೆಚಾರಿಕ ಸಿದ್ಧಾಂತಗಳ ಚೌಕಟ್ಟಿನಲ್ಲಿ ಈ ಸಮಸ್ಯೆಯನ್ನು ಪರಿಹರಿಸಲು ಮುಂದಾದಾಗ ಉದ್ಭವಿಸುವ ಸಮಸ್ಯೆಗಳೇನು ಎಂದು ಗುರುತಿಸಲು ಪ್ರಯತ್ನಿಸಿದ್ದೇವೆ. ಇವುಗಳ ಬಗ್ಗೆ ಯಾವುದೇ ಸಂಶೋಧನೆ ನಡೆದಿಲ್ಲ. ಮುಂದೊಂದು ದಿನ ಯಾರಾದರೂ ಸಂಶೋಧನೆ ಕ್ಯೆಗೊಂಡರೆ ನಾವು ಸಮಸ್ಯೆಯನ್ನು ಗುರುತಿಸಿರುವ ವಿಧಾನದಲ್ಲೂ ತಪ್ಪಿದೆ ಎಂದು ತೋರಿಸುವ ಸಾಧ್ಯತೆ ಇದೆ. ಹಾಗಾದಾಗ ಅದನ್ನು ನಾವು ಒಪ್ಪಿಕೊಳ್ಳಲೇಬೇಕು. ನೀವೇಕೆ ಇಂತಹ ವಿಷಯಗಳನ್ನೇ ಸಂಶೋಧನೆಗೆ ಆಯ್ಕೆ ಮಾಡಿಕೊಳ್ಳುತ್ತಿದ್ದೀರಿ ಎಂದು ನಾವು ಖಂಡಿತಾ ಕೇಳುವುದಿಲ್ಲ.

ಮತ್ತಷ್ಟು ಓದು »