ಕದ್ದ ಸಿನಿಮಾದ ಆಸ್ಕರ್ ಪಯಣ
ಡಾ ಅಶೋಕ್ ಕೆ ಆರ್
“ಬಿಡ್ರೀ ರೀ. ಆಸ್ಕರ್ ಪ್ರಶಸ್ತಿ ಕೊಡೋದು ಪರದೇಶದೋರು. ಅದು ಸಿಗದಿದ್ರೆ ನಾವ್ಯಾಕೆ ತಲೆಕೆಡಿಸಿಕೊಳ್ಳಬೇಕು” ಎಂದು ನಮಗೆ
ನಾವೇ ಸಮಾಧಾನ ಪಟ್ಟುಕೊಳ್ಳುತ್ತೇವಾದರೂ ‘ಸ್ಲಂ ಡಾಗ್ ಮಿಲೇನಿಯರ್’ ಚಿತ್ರದ ಸಂಗೀತಕ್ಕೆ ಎ. ಆರ್. ರೆಹಮಾನ್ ಗೆ ಆಸ್ಕರ್ ಪ್ರಶಸ್ತಿ ಬಂದಾಗ ಖುಷಿಪಟ್ಟಿದ್ದು ಸುಳ್ಳಲ್ಲ. ಮುಂದೊಂದು ದಿನ ಭಾರತೀಯ ಭಾಷೆಯ ಚಿತ್ರವೊಂದಕ್ಕೆ ಆಸ್ಕರ್ ದೊರೆತರೆ ಅಭೂತಪೂರ್ವವಾಗಿ ಸಂಭ್ರಮಿಸುವುದೂ ಸತ್ಯ. ಇಲ್ಲಿಯವರೆಗೆ ಭಾರತ ನಲವತ್ತೈದು ಚಿತ್ರಗಳನ್ನು ಆಸ್ಕರ್ ಪ್ರಶಸ್ತಿಗೆಂದು ಕಳುಹಿಸಿದೆಯಾದರೂ ಯಾವೊಂದು ಚಿತ್ರವೂ ಪ್ರಶಸ್ತಿ ಪಡೆದಿಲ್ಲ. ಪ್ರಶಸ್ತಿಯ ಸನಿಹಕ್ಕೆ ಬಂದಿದ್ದು ಬೆರಳೆಣಿಕೆಯ ಚಿತ್ರಗಳಷ್ಟೇ. ಭಾರತೀಯ ಚಿತ್ರವೆಂದರೆ ಹಿಂದಿ ಚಿತ್ರಗಳು ಮಾತ್ರ ಎಂಬ ಪೂರ್ವಗ್ರಹವೂ ಇದಕ್ಕೆ ಕಾರಣ ಎಂದರೆ ತಪ್ಪಲ್ಲ. ನಲವತ್ತೈದು ಚಿತ್ರಗಳಲ್ಲಿ ಮೂವತ್ತು ಹಿಂದಿ ಭಾಷೆಯವು, 8 ತಮಿಳು, ಮಲಯಾಳಂ, ಮರಾಠಿ ಬಂಗಾಳಿಯ ಎರಡು ಮತ್ತು ಉರ್ದುವಿನ ಒಂದು ಚಿತ್ರ ಆಸ್ಕರ್ ಪ್ರಶಸ್ತಿಗೆ ಭಾರತದಿಂದ ಕಳುಹಿಸಲಾಗಿದೆ. ಈ ವರ್ಷ ಆಸ್ಕರ್ ಗೆ ಭಾರತದಿಂದ ಆಯ್ಕೆ ಮಾಡಿ ಕಳುಹಿಸಿದ ಚಿತ್ರ ಅನುರಾಗ್ ಬಸು ನಿರ್ದೇಶನದ ಹಿಂದಿ ಚಿತ್ರ ‘ಬರ್ಫಿ’. ನಿಜಕ್ಕೂ ಇದು ಆಸ್ಕರ್ ಮೆಟ್ಟಿಲೇರಲು ಸಮರ್ಥವಾದ ಚಿತ್ರವೇ?
ಶಿಕಾರಿ ಮಿಸ್ ಆಯ್ತು..!
– ಶ್ರೀಧರ್ ಜಿ.ಸಿ ಬನವಾಸಿ
ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ಸಂಪೂರ್ಣನಾಯಕನಾಗಿ ಅಭಿನಯಿಸಿದ ಮಲಯಾಳಂ ಸೂಪರ್ ಸ್ಟಾರ್ ಮುಮ್ಮುಟ್ಟಿ ಅಭಿನಯದ `ಶಿಕಾರಿ’ ಬಿಡುಗಡೆಯ ಭಾಗ್ಯವನ್ನು ಕಂಡಿದೆ. ಪ್ರಶಸ್ತಿ ಪುರಸ್ಕೃತ`ಗುಬ್ಬಚ್ಚಿಗಳು’ಸಿನಿಮಾ ಖ್ಯಾತಿಯ ಅಭಯಸಿಂಹ ನಿರ್ದೇಶಕರು. ಚಿತ್ರ ನೋಡಿಬಂದ ಮೇಲೆ ನನಗೆ ಚಿತ್ರದ ಬಗ್ಗೆ ನನಗನಿಸಿದ ಅಂಶಗಳು:
ಭೌತಿಕ…ಭೌಗೋಳಿಕ…ಬೌದ್ದಿಕ ಅಸೂಯೆಯ ಕಲಾತ್ಮಕ ಅನಾವರಣ…!
– ಕುಮಾರ ರೈತ
ಭಾರತ ಮತ್ತು ಚೀನಾ ಸಂಘರ್ಷ ಇಂದು ನೆನ್ನೆಯದಲ್ಲ….ಅದಕ್ಕೆ ಸುದೀರ್ಘ ಇತಿಹಾಸವಿದೆ. ಹಿಂದಿ-ಚೀನಿ ಭಾಯಿ ಭಾಯಿ ಎನ್ನುತ್ತಲೇ ಬೆನ್ನ ಹಿಂದೆ ದ್ರೋಹ ಬಗೆದ ದೇಶವದು. ನಮ್ಮ ದೇಶದ ಗಡಿ ಭಾಗದ ವಿಸ್ತಾರ ಭೂ ಪ್ರದೇಶವನದು ಅಕ್ರಮಿಸಿಕೊಂಡಿದೆ. ಭಾರತೀಯರಿಗೆ ಪುಣ್ಯಸ್ಥಳವಾದ ಮಾನಸ ಗಂಗೋತ್ರಿಗೆ ಹೋಗಬೇಕಾದರೆ ಚೀನಾ ಪರವಾನಗಿ ಪಡೆಯಬೇಕಾದ ದುಸ್ಥಿತಿ ಉಂಟಾಗಿದೆ. ಅದರ ನೆಲದ ದಾಹ ಇನ್ನೂ ಹಿಂಗಿಲ್ಲ. ಈಶಾನ್ಯ ರಾಜ್ಯಗಳ ಗಡಿ ವಿಷಯದಲ್ಲಿ ತಂಟೆ ತೆಗೆಯುತ್ತಲೇ ಇದೆ. ಈ ನಿಟ್ಟಿನಲ್ಲಿಯೇ ಮುಂಜಾಗ್ರತೆಯಿಂದ ಒಂದು ಲಕ್ಷಕ್ಕೂ ಹೆಚ್ಚಿನ ಸೈನಿಕರನ್ನು ಈ ಗಡಿಭಾಗಗಳಲ್ಲಿ ನಿಯೋಜಿಸಲು ಭಾರತ ಸರಕಾರ ನಿರ್ಧರಿಸಿದೆ. ಸ್ನೇಹದ ಮುಖವಾಡ ಧರಿಸಿ ಸಂಚು ರೂಪಿಸಬಹುದಾದ ಚೀನಾಕ್ಕೆ ಭಾರತದ ಮೇಲಿನ ಭೌತಿಕ…ಭೌಗೋಳಿಕ…ಬೌದ್ದಿಕ ಅಸೂಯೆಯನ್ನು ‘ಏಳಮ್ ಅರಿವು’ ಚಿತ್ರ ಕಲಾತ್ಮಕವಾಗಿ ಅನಾವರಣಗೊಳಿಸಿದೆ. ಇದೇ ಈ ಚಿತ್ರದ ಕೇಂದ್ರ ಪ್ರಜ್ಞೆ…! ತಮಿಳಿನ ಏಳಮ್ ಅರಿವು ಎಂದರೆ ಏಳನೇ ಅರಿವು..ಅಥವಾ ಜ್ಞಾನ ಎಂದರ್ಥ..!
ನೆರೆ ದೇಶದ ದ್ವೇಷದ ವಿಷಯವನ್ನು ತೆಗೆದುಕೊಂಡಾಗ ಅದನ್ನು ಹಸಿಹಸಿಯಾಗಿ ನಿರೂಪಿಸಿ ಮೂರನೇ ದರ್ಜೆ ಸಿನಿಮಾ ಮಾಡಿಬಿಡುವ ಸಾಧ್ಯತೆಗಳೆ ಹೆಚ್ಚು. ಆದರೆ ಇಂಥ ಅಪಾಯದಿಂದ ‘ಏಳಮ್ ಅರಿವು’ ಹೊರತಾಗಿದೆ. ಈ ಕಾರಣಕ್ಕಾಗಿಯೂ ಈ ಸಿನಿಮಾ ಪ್ರಸ್ತುತ ಪ್ರಾಮುಖ್ಯತೆ ಪಡೆಯುತ್ತದೆ. ಭಾರತ-ಚೀನಾ ನಡುವೆ ಎರಡು ಸಾವಿರ ವರ್ಷಕ್ಕೂ ಹಿಂದಿನಿಂದಲೂ ವಾಣಿಜ್ಯ ವ್ಯವಹಾರವಿದೆ. ಆದರೆ ಇದಕ್ಕಿಂತಲೂ ಮಿಗಿಲಾಗಿ ಇಲ್ಲಿನ ಶ್ರೀಮಂತ ಬೌದ್ದಿಕತೆ ಮೇಲೆ ಚೀನಾ ಕಣ್ಣಿಟ್ಟಿತ್ತು. ಅಲ್ಲಿಯ ಸಾಮ್ರಾಟರ ನೆರವಿನಿಂದ ಇಲ್ಲಿಗೆ ಪ್ರವಾಸಿಗರಾಗಿ ಬರುತ್ತಿದ್ದವರು ಇಲ್ಲಿನ ಬಹುಮುಖ್ಯ ವಿಷಯ-ವಿಚಾರ-ವಿಜ್ಞಾನಗಳ ಜ್ಞಾನ ಸಂಗ್ರಹಿಸಿ ಸಾಗಿಸುತ್ತಿದ್ದರು. ಚೀನಾ ಕುರಿತು ಮಹಾಭಾರತದಲ್ಲಿಯೂ ಉಲ್ಲೇಖಗಳಿವೆ. ಆದರೆ ಇಲ್ಲಿಂದ ಅಲ್ಲಿಗೆ ಯಾರೂ ಪ್ರವಾಸಿಗರಾಗಿ ಹೋದವರಲ್ಲ. ಪ್ರಚಾರಕರಾಗಿ ಹೋದರು. ಬೌದ್ಧ ಧರ್ಮದ ಪ್ರಚಾರವನ್ನು ಅಲ್ಲಿ ಕೈಗೊಂಡರು.
ಸಂತಸ…ಸಂಕಟ…ಸಂತಾಪ ಆಗುತ್ತೆ ಪರಮಾತ್ಮ….!
– ಕುಮಾರ ರೈತ
ಯೋಗರಾಜ ಭಟ್ಟರೆ ನಿಮ್ಮಗೊಂದು ಬಹಿರಂಗ ಪತ್ರ……..‘ಪರಮಾತ್ಮ’ ಚಿತ್ರದ ಬಗ್ಗೆ ನನ್ನ ಅನೇಕ ಸ್ನೇಹಿತರು ನನ್ನೊಂದಿಗೆ ಮಾತನಾಡುತ್ತಿದ್ದರು. ಈ ಪ್ರತಿಯೊಬ್ಬರು ಹೇಳುತ್ತಿದ್ದ ಮಾತು ‘ ಚಿತ್ರ, ನಿರೀಕ್ಷೆಯನ್ನು ಹುಸಿಯಾಗಿಸಿದೆ’ ಇದು ನನ್ನ ಅಭಿಪ್ರಾಯ ಕೂಡ. ಸಿನಿಮಾ ತೆರೆಕಂಡ 12 ದಿನಗಳ ಬಳಿಕ ಈ ಪತ್ರ ಬರೆಯಲು ನನ್ನೊಳಗಿನ ಒತ್ತಡವೇ ಕಾರಣ. ಮಣಿ, ಮುಂಗಾರು ಮಳೆ ಮತ್ತು ಪಂಚರಂಗಿ ಯಿಂದ ಸಹಜವಾಗಿಯೆ ನಿಮ್ಮ ಚಿತ್ರಗಳೆಂದರೆ ನಮಗೆ ಹೆಚ್ಚು ನಿರೀಕ್ಷೆ-ಕುತೂಹಲ. ಪ್ರತಿಭಾನ್ವಿತ ನಟ ಪುನೀತ್ ಅವರು ನಟಿಸುವ ಚಿತ್ರವನ್ನು ನೀವು ನಿರ್ದೇಶಿಸುತ್ತೀರಿ ಎನ್ನುವುದು ಇವೆಲ್ಲವನ್ನೂ ಹೆಚ್ಚು ಮಾಡಿತ್ತು. ಬಹು ಕಲಾತ್ಮಕವಾಗಬಹುದಾಗಿದ್ದ ಚಿತ್ರವೊಂದು ನಿರೀಕ್ಷೆಯ ಮಟ್ಟ ಮುಟ್ಟದಿರಲು ನೀವೇ ಸಂಪೂರ್ಣ ಕಾರಣಕರ್ತರು. ಇದು ಹೇಗೆ….ಎನ್ನುತ್ತೀರಾ….ಮುಂದೆ ಓದಿ…ಭಟ್ಟರೆ…ಪರಮಾತ್ಮ
– ಇಂಚರ
ಈ ನಮ್ಮ ಪರಮಾತ್ಮನಿಗೆ ಹಣ ಮಾಡುವುದರಿಂದ ಆಧ್ಯಾತ್ಮದವರೆಗೂ ಎಲ್ಲವೂ ಸುಲಭ. ಆದರೆ ಎಮ್ ಎಸ್ ಸಿ ಪರೀಕ್ಷೆ ಮಾತ್ರ ಬಿಡಿಸಲಾರದಷ್ಟು ಕಗ್ಗಂಟು. ಈತನ ತಂದೆ ಪ್ರಖ್ಯಾತ ಹೃದಯ ತಜ್ಞ. ವೈದ್ಯನಾಗಿ ಬೇಕಾದಷ್ಟು ಹಣ ಗಳಿಸಬಹುದಾದರೂ, ಆತ್ಮ ತೃಪ್ತಿಗೆ ಹಣವೇ ಮುಖ್ಯ ಅಲ್ಲವೆಂದು ಒಂದಷ್ಟು ಮಕ್ಕಳನ್ನು ಸಾಕಿಕೊಂಡು, ನೆಮ್ಮದಿಯಿಂದ ಬದುಕುತ್ತಿರುವ ಈತನಿಗೆ ಮಗನ ಹೃದಯದ ಬಗ್ಗೆ ಪರಮ ಹೆಮ್ಮೆ. ಈತ ಮಗ ಏನೂ ಮಾಡಿದರೂ ಪ್ರಶ್ನಿಸಲಾರ. ಮಗನ ಮೇಲೆ ಅದಮ್ಯ ವಿಶ್ವಾಸ. ಈಗಿನ ಅಪ್ಪಂದಿಗಿರುವ ಆತಂಕ, ನಿರೀಕ್ಷೆ ಈ ಅಪ್ಪನಿಗಿಲ್ಲ. ಹಾಗೆಯೇ ಅಪ್ಪ ನೀಡಿರುವ ಸ್ವಾತಂತ್ರದ ಇನಿತೂ ದುರುಪಯೋಗ ಪಡೆಯದ ಮಗ ಕಾಲೇಜಿನ ಪರೀಕ್ಷೆಯೊಂದನ್ನು ಬಿಟ್ಟು ಜೀವನದ ಎಲ್ಲಾ ಪರೀಕ್ಷೆಗಳಲ್ಲೂ ಫಸ್ಟ್ ಕ್ಲಾಸ್ ಪಾಸ್. ಮಗ ಪರೀಕ್ಷೆ ಪಾಸಾಗಲಿಲ್ಲವೆಂಬ ಕೊರಗು ಅಥವಾ ಮಗ ತನ್ನಂತೆಯೇ ವೈದ್ಯನಾಗಬೇಕೆಂಬ ಹಂಬಲವೂ ಕೂಡ ಈ ಅಪ್ಪನಿಗಿಲ್ಲ. ಆತನಿಗಿರುವ ಕಾಳಜಿಯೊಂದೇ, ತನ್ನ ಮಗನ ಹೃದಯಕ್ಕೆ ನೋವಾಗಬಾರದು. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವೆಲ್ಲರೂ ಎದುರಿಸುತ್ತಿರುವ ಆತಂಕ, ಒತ್ತಡ, ಸೋಲು, ಕಿರಿಕಿರಿ, ನಿರಾಶೆ ಇವುಗಳೆಲ್ಲವನ್ನೂ ಬಿಟ್ಟು ನಿರಾಳವಾಗಿ ಬದುಕುವುದು ಹೇಗೆ ಎಂಬುದನ್ನು ತೋರಿಸುವ ಮಾದರಿ ಈ ಅಪ್ಪ, ಮಗ!
ಲೈಫು ಇಷ್ಟೇನೇ
– ರೂಪಾ ರಾಜೀವ್
ಗಾಂಧಿನಗರದಲ್ಲಿ ತಯಾರಾಗುವ ಪ್ರತಿ ಚಲನಚಿತ್ರಗಳು ಇಂತಿಂತಹ ಗುಂಪಿಗೆ ಎಂದು ತಯಾರಾಗುತ್ತವೆ. ಉದಾಹರಣೆಗೆ ಮಚ್ಚು, ಲಾಂಗ್, ಫೈಟ್, ಇಂತಹವು ಒಂದು ವರ್ಗದ ವೀಕ್ಷಕರಿಗೆ, ಕಣ್ಣೀರು, ತಾಯಿ ಸೆಂಟಿಮೆಂಟ್ಸ್ ಮತ್ತೊಂದು ವರ್ಗದವರಿಗೆ, ದೇವಿ ಮಹಾತ್ಮೆ ಇಂತಹ ಭಕ್ತಿ ಪ್ರಧಾನ ಚಿತ್ರಗಳು ಇನ್ನೊಂದು ವರ್ಗದ ವೀಕ್ಷಕರಿಗೆ, ಹೀಗೆ. ಯೋಗರಾಜ್ ಭಟ್ ತಮ್ಮ ‘ಪಂಚರಂಗಿ’ ನಿರ್ಮಾಣದ ವೇಳೆಗೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿದ್ದರು, ನಮ್ಮ ಕನ್ನಡ ಚಲನಚಿತ್ರಗಳು ಉಳಿಯಬೇಕಾದರೆ ಅಥವಾ ಥಿಯೇಟರು ಗಳಲ್ಲಿ ಹಣ ಮಾಡಬೇಕೆಂದಿದ್ದರೆ ಆ ಚಿತ್ರವು ಯುವ ಜನಾಂಗವನ್ನು ಅಂದರೆ ೧೮ ವಯಸ್ಸಿನಿಂದ ೨೩ ವರ್ಷದವರನ್ನು ಸೆಳೆಯುವಂತಿರಬೇಕು. ಆ ವರ್ಗದವರಿಗೆ ಸಿನೆಮಾ ಹಿಡಿಸಿದರೆ ಚಿತ್ರವು ಹಿಟ್ ಆಗುವುದು ಎಂದಿದ್ದರು. ಅವರ ಶಿಷ್ಯ ಪವನ್ ಕುಮಾರ್ ಅಕ್ಷರಷಃ ಭಟ್ಟರ ಈ ಮಾತಿಗೆ ಮಾರು ಹೋಗಿ ನಿರ್ದೇಶಿಸಿರುವ ಸಿನೆಮಾ ‘ಲೈಫು ಇಷ್ಟೇನೇ’.
ಕಲಾವಿದರು ಕಸಿದುಕೊಳ್ಳುತ್ತಿರುವ ಕನ್ನಡ ಗ್ರಾಹಕನ ಸ್ವಾತಂತ್ರ್ಯ.!
– ಮಹೇಶ್ ರುದ್ರಗೌಡರ್
ಜೀ ಟಿವಿಯಲ್ಲಿ ಜಾನ್ಸಿ ರಾಣಿ ಅನ್ನೊ ಹಿಂದಿ ದಾರಾವಾಹಿಯನ್ನು ಕನ್ನಡಕ್ಕೆ ಡಬ್ ಮಾಡಿ ಪ್ರಸಾರ ಮಾಡಿದ್ರು ಅಂತ ನಮ್ಮ ಕಿರುತೆರೆ ಕಲಾವಿದರು ಆ ವಾಹಿನಿಯ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದರು. ಕಲಾವಿದರ ಪ್ರಕಾರ ಇದರಿಂದ ಕಿರುತೆರೆಯನ್ನೇ ನಂಬಿ ಜೀವನ ನಡೆಸುತ್ತಿರುವ ಅನೇಕ ಕುಟುಂಬಗಳು ಬೀದಿಗೆ ಬರುತ್ತವಂತೆ. ಇದರ ಜೊತೆಗೆ ಜೀ ಟಿವಿಯ ಈ ನಡೆ ಕನ್ನಡ ವಿರೋದಿಯಂತೆ. ಇವರ ವಾದವನ್ನು ಮತ್ತು ಕನ್ನಡತನವನ್ನು ಸ್ವಲ್ಪ ಆಳವಾಗಿ ನೋಡಿ ಬರೋಣ ಬನ್ನಿ.
ಹುರುಳಿಲ್ಲದ ವಾದ.!
ಈ ದಾರಾವಾಹಿ ಈಗಾಗಾಲೇ ತೆಲುಗು, ತಮಿಳು ಬಾಶೆಗೆ ಡಬ್ ಆಗಿ ಅಲ್ಲಿ ಪ್ರಸಾರವಾಗುತ್ತಿದೆ. ಹಾಗಾದರೆ ಆಂದ್ರ ತಮಿಳುನಾಡಿನಲ್ಲಿ ಕಲಾವಿದರೇ ಇಲ್ಲವೇ.? ಅಲ್ಲಿಯೂ ಕಲಾವಿದರಿದ್ದಾರೆ, ಅವರಲ್ಲಿಯೂ ಅನೇಕರಿಗೆ ಕಿರುತೆರೆಯಿಂದಲೇ ಹೊಟ್ಟೆ ತುಂಬುತ್ತದೆ. ಅಲ್ಲಿ ಅವರಿಗೆ ಇಲ್ಲದ ಸಮಸ್ಯೆ ದಿಡೀರನೇ ಕರ್ನಾಟಕಕ್ಕೆ ಬಂದ ಕೂಡಲೇ ಹೇಗೆ ಹುಟ್ಟುತ್ತದೆ. ಇದಕ್ಕೆ ಯಾರು ಕಾರಣ. ಯಾಕೆ ಈ ಮನಸ್ಥಿತಿ.! ಇದೇ ಸಂದರ್ಬದಲ್ಲಿ ಒಬ್ಬ ಕಲಾವಿದರು ಹೇಳಿದ್ರು, ಒಂದು ದಾರಾವಾಹಿ ಕನ್ನಡಕ್ಕೆ ಡಬ್ ಮಾಡಲು ಬಿಟ್ಟರೆ, ಅದರ ಜೊತೆಗೆ ನೂರಾರು ದಾರಾವಾಹಿಗಳು ಬಂದು ನಿಲ್ಲುತ್ತವೆ ಅಂತ.! ಇದು ಯಾವ ಮನಸ್ಥಿತಿಯನ್ನು ತೋರಿಸುತ್ತದೆ. ಸ್ಪರ್ದೆ ಎದುರಿಸುವ ಹಿಂಜರಿಕೆಯನ್ನು ತೋರಿಸುತ್ತದೆ ಅಲ್ಲವೇ.! ಸ್ಪರ್ದೆ ಎಂದ ತಕ್ಷಣ ಬೀದಿಗೆ ಬರುವ ಮಾತು ಇತರ ಬಾಶೆಯ ಕಲಾವಿದರ ಬಾಯಲ್ಲಿ ಬರದೇ ಬರೀ ನಮ್ಮ ಕಲಾವಿದರ ಬಾಯಲ್ಲಿ ಮಾತ್ರ ಏಕೆ ಬರುತ್ತದೆ.? ಒಂದು ಹಿಂದಿ ಬಾಶೆಯಲ್ಲಿರುವ ದಾರಾವಾಹಿಯನ್ನು ಕನ್ನಡ ಚಾನಲ್ಲಿನಲ್ಲಿ ಕನ್ನಡದಲ್ಲಿ ತೋರಿಸಿದರೇ ಅದು ಕನ್ನಡ ವಿರೋದಿ ಎನ್ನುವ ಇವರ ಕನ್ನಡತನಕ್ಕೆ ಏನನ್ನಬೇಕು. ಡಬ್ ಮಾಡದೇನೇ ಹಿಂದಿಯಲ್ಲೇ ತೋರಿಸಿದರೆ ಅದು ಕನ್ನಡಪರವಾಗುವುದೋ.! ಮತ್ತಷ್ಟು ಓದು 
ಪರಭಾಷೆಯ ಚಿತ್ರಗಳಿಗೆ ಮಾರುಕಟ್ಟೆ ನಿರ್ಮಿಸಿ ಕೊಡುತ್ತಿರುವವರ್ಯಾರು?
– ಅರುಣ್ ಜಾವಗಲ್
ಸುವರ್ಣ ಕನ್ನಡ ಪಿಲಂ ಅವಾರ್ಡ್ ಕಾರ್ಯಕ್ರಮ ಕಳೆದ ವಾರ ಟಿವಿಯಲ್ಲಿ ನೋಡಿದೆ. ನಿಜಕ್ಕು ಅದ್ಬುತವಾದ ಕಾರ್ಯಕ್ರಮ, ಪರಬಾಶೆಗಳಲ್ಲಿ ಮಾತ್ರ ನಡೆಯುತ್ತಿದ್ದ ಅದ್ದೂರಿ ಕಾರ್ಯಕ್ರಮಗಳು, ಇತ್ತೀಚಿನ ದಿನಗಳಲ್ಲಿ ಕನ್ನಡದಲ್ಲು ನಡೆಯಲು ಪ್ರಾರಂಬವಾಗಿರೋದು ನಿಜಕ್ಕೂ ಸಂತೋಶಕರ. ಈ ರೀತಿಯ ಕಾರ್ಯಕ್ರಮಗಳು, ಕನ್ನಡ ಚಿತ್ರರಂಗ, ತಾವೇನು ಯಾರಿಗೂ ಕಡಿಮೆಯಿಲ್ಲ ಅನ್ನೊದನ್ನ ಎತ್ತಿಹಿಡಿದಿದೆ….ಡಬ್ಬಿಂಗ್ ಬೇಕು/ಬೇಡ ಅನ್ನೋದನ್ನ ಪ್ರೇಕ್ಷಕ ನಿರ್ಧಾರ ಮಾಡ್ಲಿ
ಮನೋರಂಜನೆ ಎನ್ನೋದು ಎಲ್ಲರ ಹಕ್ಕು, ಒಬ್ಬ ವ್ಯಕ್ತಿ ಮನೊರಂಜನೆಯನ್ನು ತನ್ನ ಭಾಷೆಯಲ್ಲೆ ಪಡೆಯುವುದು ಕೂಡ ಆ ವ್ಯಕ್ತಿಯ ಹಕ್ಕೂ ಕೂಡ. ಇದನ್ನ ತಡೆಯಲು ಯಾವುದೇ ಕಾನೂನು ಮುಂದೆಬರುವುದಿಲ್ಲ. ಇದಕ್ಕಾಗಿಯೇ ಇರಬೇಕು ಇಂದಿಗೂ ಕನ್ನಡಕ್ಕೆ ಡಬ್ ಮಾಡಬಾರದು ಅನ್ನೋ ಕಾನೂನು ಇಲ್ಲ.
ಸುದ್ದಿ ಮಾತಿನ ಭಟ್ಟರು ಸುದ್ದಿಯದಾಗ…
ಸಾತ್ವಿಕ್ ಎನ್ ವಿ
‘ಸರ್, ಆಗಸತ್ತರಕ್ಕೆ ನೀವು ಬೆಳೆಸಿದ ಪತ್ರಿಕೆ ಇ೦ದೆ ಸದ್ದಿಲ್ಲದೆ ಹೊರಬರಲು ಕಾರಣವೇನು ? ಹೊಸ ಚಿ೦ತನೆಗಳು, ಮೊನಚಾದ ಬರಹಗಳು, ಅ೦ಕಣಗಳು ಒ೦ದೇ ಎರಡೇ..ಲವಲವಕೆ ಯ೦ತಹ ಹೊಸ ರೂಪವನ್ನು ಪತ್ರಿಕೆಗೆ ಪರಿಚಯಿಸಿದಿರಿ, ರಾಜಕಾರಣಿ ಗಳ ಮಾನ ಹರಾಜು ಹಾಕಿ ಪತ್ರಿಕೊಧ್ಯಮದ ಘನತೆ ಹೆಚ್ಚಿಸಿದಿರಿ…..ನೀವಿಲ್ಲದ ಪತ್ರಿಕೆ ಇನ್ನುಮು೦ದೆ ನೀರಸ…ನಿಮ್ಮೂದಿಗೆ ನಾವಿದ್ದೇವೆ..’
ಇಂಥ ಒಂದು ಕಾಮೆಂಟ್ ವಿಶ್ವೇಶ್ವರ ಭಟ್ಟರ ಫೇಸ್ ಬುಕ್ ನಲ್ಲಿ ಇದೆ ಅಂದ್ರೆ ಅವರ ಬರಹಗಳನ್ನು ಆರಾಧಿಸುವ ಜನ ಎಷ್ಟಿರಬಹುದೆಂದು ಯೋಚಿಸಿ. ಪತ್ರಿಕೆಯ ಸಂಪಾದಕನಾದವನಿಗೆ ಇದಕ್ಕಿಂತ ಹೆಮ್ಮೆ ಬೇಕೆ? ಒಂದು ಕಾಲವಿತ್ತು. ಪತ್ರಿಕೆಯ ಸಂಪಾದಕರ ಹೆಸರುಗಳನ್ನು ಪತ್ರಿಕೆಯ ಕಡೆಯ ಸಾಲುಗಳಲ್ಲಿ ಹುಡುಕಬೇಕಾಗಿತ್ತು. ಈ ಸಂಸ್ಕೃತಿಯನ್ನು ತಪ್ಪಿಸಿ ದಿನವೂ ಬರೆಯುವ ಯಾರಾದರೂ ಸಂಪಾದಕರಿದ್ದರೆ ಅದು ವಿಶ್ವೇಶ್ವರ ಭಟ್ಟರು ಮಾತ್ರ ಎಂಬಂತಾಗಿತ್ತು.





