ಹೊಸ ಚಿಂತನೆ ಮೂಡಿ ಬರಲಿ
– ಡ್ಯಾನಿ ಪಿರೇರಾ,ಹಳ್ಳಿಮೈಸೂರು
ನಿಜ ಹೇಳಬೇಕೆಂದರೆ 2014ರ ಲೋಕಸಭಾ ಚುನಾವಣೆ ನಮ್ಮಲ್ಲಿನ ನೈಜ ರಾಷ್ಟ್ರೀಯತೆಗೆ ಅದರ ಪರಂಪರಾಗತವಾದ ಜಾತ್ಯಾತೀತತೆಯ ನಿಜ ಅರ್ಥವಂತಿಕೆಗೆ ಮತದಾರ ಕೊಡಬೇಕಾದ ಪ್ರಬುದ್ಧ ತೀರ್ಪು ಎನ್ನಬಹುದುದೇನೋ! ಅದರಲ್ಲೂ ಈ ಚುನಾವಣೆ ಈ ದೇಶದ ಅಲ್ಪಸಂಖ್ಯಾತ-ಬಹುಸಂಖ್ಯಾತರೆಂಬ ಸಂಕುಚಿತ ಅವಕಾಶವಾದಿ ಮನೋಭೂಮಿಕೆಯನ್ನೊದ್ದು, ಈ ದೇಶ ಒಂದು ರಾಷ್ಟ್ರವಾಗಿ, ಜಾತಿ-ಮತಗಳ ಸಣ್ಣತನವನ್ನು ಬದಿಗಿಟ್ಟು, ಈ ದೇಶದ ಭವ್ಯ ಭವಿಷ್ಯವನ್ನು ಕಣ್ತುಂಬಿಕೊಳ್ಳಲು ಈ ದೇಶದ ಶ್ರೀಸಾಮಾನ್ಯನಿಗೆ ಸ್ವತಃ ಆ ಭಗವಂತನೇ ನೀಡಿದ ಅವಕಾಶವೆಂದರೆ ಖಂಡಿತ ಉತ್ಪ್ರೇಕ್ಷೆ ಎಂದು ಭಾವಿಸಬೇಕಿಲ್ಲ. ಅದಲ್ಲೂ ಇಲ್ಲಿನ ಅಲ್ಪಸಂಖ್ಯಾತರೆಂದೇ ಬಿಂಬಿಸಲ್ಪಡುವ ಕ್ರೈಸ್ತ-ಮುಸುಲ್ಮಾನ ಬಂಧುಗಳಿಗೂ ಈ ಚುನಾವಣೆ ಈ ದೇಶದ ತಮ್ಮ ವಾರಸಿಕೆ ಶೃತಪಡಿಸಲು ಇದೊಂದು ಸದವಕಾಶ ಎನ್ನಲು ಅವರು ಸಂಕೋಚಪಡಬೇಕಿಲ್ಲ. ಈ ದೇಶದ ಬಹುತೇಕ ರಾಜಕೀಯ ನಾಯಕರು ಬುದ್ಧಿಜೀವಿವರ್ಗ ಅಕ್ಷರಶಃ ಈ ದೇಶದ ನೈಜ ರಾಷ್ಟ್ರೀಯತೆ ಮತ್ತದರ ಪಾರಂಪರಿಕ ಜಾತ್ಯಾತೀತತೆಯ ವೈಶಾಲ್ಯತೆಯನ್ನು ಪ್ರತಿಪಾದಿಸಲು ಸಂಪೂರ್ಣ ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ದೇಶದ ಜಾತಿ-ಪಂಥಗಳಿಗೆ ಮೀರಿದ ಈ ರಾಷ್ಟ್ರ ನನ್ನದು, ಈ ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಗೆ ಸವಾಲಾಗಿರುವ ಭಾರತದ ಇಂದಿನ ಜಾತ್ಯಾತೀತತೆಯ ವ್ಯಾಖ್ಯಾನದ ನೈಜ ಅರ್ಥವನ್ನು ಪುನರ್ರೂಪಿಸುವ ಅವಕಾಶ ಒದಗಿಬಂದಿರುವುದು ಈ ದೇಶದ ಅಲ್ಪಸಂಖ್ಯಾತರೆಂದು ಕರೆಯಲ್ಪಡುತ್ತಿರುವವರು ಮಾಡಬೇಕಾದ ಅವಶ್ಯಕತೆ ಮತ್ತು ಅನಿವಾರ್ಯತೆ ಎಂದರೆ ತಪ್ಪಲ್ಲ. ಈ ದೇಶವನ್ನು ಬ್ರಿಟಿಷರು ಆಳುತ್ತಿದ್ದಾಗ ಹಿಂದುಗಳ ಗುಮ್ಮವನ್ನು ಮುಸಲ್ಮಾನರ ಮುಂದೆ, ಮುಸಲ್ಮಾನರ ಗುಮ್ಮವನ್ನು ಹಿಂದುಗಳ ಮುಂದೆ ತೋರಿಸಿ ಅಖಂಡ ಭಾರತವನ್ನು ತುಂಡಾಗಿಸಿ ಅವರ ಸುತ್ತ ಗಿರಕಿ ಹೊಡೆಯುತ್ತಿದ್ದ ಮುಸ್ಲಿಂ ಲೀಗ್ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಒಂದೊಂದು ತುಂಡನ್ನು ಆಳಲು ಕೊಟ್ಟು, ಬ್ರಿಟಿಷರು ಹೋದ ಮೇಲೆ ಇಲ್ಲಿ ಸುದೀರ್ಘ ಆಡಳಿತ ನಡೆಸಿದ ಕಾಂಗ್ರೆಸ್ಸ್ ಮಾಡಿದ್ದೇನು?
ಜಾತ್ಯಾತೀತರೆನಿಸಿಕೊಳ್ಳಲು ಮುಸಲ್ಮಾನರ ಟೋಪಿ ಧರಿಸಲೇಬೇಕೆ?
– ನರೇಂದ್ರ ಕುಮಾರ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂದನ್ ನೀಲೇಕಣಿಯವರು ಸ್ಪರ್ಧಿಸುತ್ತಿರುವುದು ಅಧಿಕೃತವಾಗಿ ಪ್ರಕಟವಾಗಿದೆ. ಅವರು ಕಾಂಗ್ರೆಸ್ ಅಭ್ಯರ್ಥಿಯೆಂದು ಘೋಷಣೆಯಾದ ಕೂಡಲೇ ಮುಸಲ್ಮಾನರ ಟೋಪಿ ಧರಿಸಿ ತಾವು ಕೂಡಾ “ಜಾತ್ಯಾತೀತ”ರೆಂದು ಲೋಕಕ್ಕೆಲ್ಲಾ ಸಾರಿದರು. ಈ ರೀತಿ ಮುಸಲ್ಮಾನ ಟೋಪಿ ಧರಿಸಿ “ಜಾತ್ಯಾತೀತ”ರಾಗುವುದು ಕಾಂಗ್ರೆಸ್ ಪರಂಪರೆಯೇ ಆದಂತಿದೆ. ಅದಕ್ಕಿಂತಲೂ ಮಿಗಿಲಾಗಿ, ಮುಸಲ್ಮಾನ ಟೋಪಿ ಧರಿಸದಿದ್ದವರನ್ನು “ಕೋಮುವಾದಿ” ಎಂದು ಖಂಡಿಸಲಾಗುತ್ತದೆ. ಒಂದೆರಡು ವರ್ಷದ ಹಿಂದೆ ಗುಜರಾತಿನಲ್ಲಿ ನಡೆದ ಸದ್ಭಾವನಾ ಸಭೆಯೊಂದರಲ್ಲಿ ನರೇಂದ್ರ ಮೋದಿಯವರಿಗೆ ಮುಸಲ್ಮಾನರೊಬ್ಬರು ಟೋಪಿ ನೀಡಿದರು. ಮೋದಿಯವರು ಆ ಟೋಪಿಯನ್ನು ಧರಿಸಲಿಲ್ಲ. ಆ ಕೂಡಲೇ ಅವರನ್ನು “ಕೋಮುವಾದಿ” ಎಂದು ಖಂಡಿಸಲಾಯಿತು.
ಇದು ಯಾವ ಸೀಮೆ ಜಾತ್ಯಾತೀತತೆ? ಒಂದು ಕೋಮಿನ ಟೋಪಿ ಧರಿಸಿದರೆ ಜಾತ್ಯಾತೀತ, ಧರಿಸದಿದ್ದರೆ ಕೋಮುವಾದಿ!? ಈ ದೇಶದಲ್ಲಿ ಬೇರೆ ಕೋಮುಗಳೇ ಇಲ್ಲವೆ? ಅವುಗಳಲ್ಲಿ ಅನೇಕ ಕೋಮುಗಳೂ ಅಲ್ಪಸಂಖ್ಯಾತವಲ್ಲವೇ? ಆ ಕೋಮುಗಳ ಲಾಂಚನವನ್ನೋ, ಟೋಪಿಯನ್ನೋ ಈ ರಾಜಕಾರಣಿಗಳು ಏಕೆ ಧರಿಸಿ ಪತ್ರಿಕೆಗಳಲ್ಲಿ ಚಿತ್ರ ಹಾಕಿಸಿಕೊಳ್ಳುವುದಿಲ್ಲ? ಮುಸಲ್ಮಾನ ಟೋಪಿ ಧರಿಸದಿದ್ದವರು ಕೋಮುವಾದಿಯಾಗುವುದಾದರೆ, ಆ ಉಳಿದ ಅಲ್ಪಸಂಖ್ಯಾತ ಕೋಮುಗಳ ಟೋಪಿ ಧರಿಸದಿದ್ದವರೂ ಕೋಮುವಾದಿ ಆಗಬೇಕಲ್ಲವೇ? ಮುಸಲ್ಮಾನರಿಗಿಂತ ಬಹಳ ಕಡಿಮೆ ಸಂಖ್ಯೆಯಲ್ಲಿರುವವರು ಜೈನರು. ಯಾವ ರಾಜಕಾರಣಿಯೂ ಜೈನರ ದಿರಿಸು ಧರಿಸಿ ತನ್ನ “ಜಾತ್ಯಾತೀತತೆ”ಯನ್ನು ಮೆರೆದದ್ದು ನನಗೆ ತಿಳಿದಿಲ್ಲ. ಅಥವಾ ಪಾರ್ಸಿ ಲಾಂಚನ ಧರಿಸಿಯೋ, ಇಲ್ಲವೇ ಬೌದ್ಧರ ದಿರಿಸು ಧರಿಸಿಯೋ, ಕ್ರೈಸ್ತರಂತೆ ವೇಷ ಹಾಕಿದ್ದೋ ಎಲ್ಲೂ ನೋಡಿಲ್ಲ.
ಕಾಂಗ್ರೆಸ್ಸಿನ ‘ನಮೋ’ನಿಯಾ ಮತ್ತು ಸೆಕ್ಯುಲರ್ ‘ನಾಯಿಮರಿ’
– ರಾಕೇಶ್ ಶೆಟ್ಟಿ
ಭಾರತದಲ್ಲಿ ಭಾವುಕತೆಗೇನಾದರೂ ಬರವುಂಟೇ? ಹಾಗೇನಾದರೂ ಇದ್ದಿದ್ದರೆ ನಮ್ಮ ಸ್ಥಿತಿ ಸ್ವಲ್ಪಮಟ್ಟಿಗಾದರೂ ಸುಧಾರಿಸುತ್ತಿತ್ತೋ ಏನೋ? ಆದರೆ,ಭಾವುಕತೆ ಅನ್ನುವುದು ನಮ್ಮ ಅಸ್ಮಿತೆಯ ಭಾಗವಾಗಿರುವುದರಿಂದಲೇ ನಮ್ಮ ರಾಜಕಾರಣಿಗಳು,ರಾಜಕೀಯ ಪಕ್ಷಗಳು ಪದೇ ಪದೇ ಭಾವುಕತೆಯ ಬಿರುಗಾಳಿಯೆಬ್ಬಿಸಿ ತಮ್ಮ ಹಗರಣ,ವೈಫಲ್ಯಗಳನ್ನು ಮುಚ್ಚಿಕೊಳ್ಳುವುದು.ಅದರಲ್ಲೂ ಇಂತ ವಿಷಯದಲ್ಲಿ ಕಾಂಗ್ರೆಸ್ಸ್ ಪಕ್ಷದ್ದು ಉಳಿದೆಲ್ಲರಿಗಿಂತ ಒಂದು ‘ಕೈ’ ಮೇಲೆಯೇ ಹೌದು.
೨೪ ಗಂಟೆಯ ಮೀಡಿಯಾ ಯುಗದಲ್ಲಿ ದೊಡ್ಡ ದೊಡ್ಡ ಹಗರಣಗಳು ಸುದ್ದಿಯಾದಗಾಲೆಲ್ಲ ಕಾಂಗ್ರೆಸ್ಸ್ ಅದರಿಂದ ಹೊರಬರಲು ಒಂದು ಸಣ್ಣ ಎಳೆಯೇನಾದರೂ ಸಿಗುತ್ತದೆಯಾ ಅಂತ ನೋಡುತ್ತಿರುತ್ತದೆ.ಈ ಬಾರಿ ರೂಪಾಯಿ ಮೌಲ್ಯ ಕುಸಿದು,ಆಡಳಿತ ವ್ಯವಸ್ಥೆಯೇ ಹಳ್ಳ ಹಿಡಿದು ಕುಳಿತಿರುವಾಗ ಅದಕ್ಕೆ ಕಾಣಿಸಿದ ಬೆಳಕಿನ ಹಾದಿ “ನಾಯಿ ಮರಿ”…!
ಹೌದು. ಗುಜರಾತ್ ಮುಖ್ಯಮಂತ್ರಿ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಬಳಸಿದ ನಾಯಿ ಮರಿ ಪದ.ರಾಯಿಟರ್ಸ್ ನೀಡಿದ ಸಂದರ್ಶನದಲ್ಲಿ ನಾಯಿ ಮರಿ ಬಂದಿದ್ದು ಹೇಗೆ ಅಂತ ನೋಡಿದರೆ,
“ಸಂದರ್ಶಕ: “ಏನು (೨೦೦೨ ರ ಗಲಭೆ) ನಡೆಯಿತೋ ಆ ಬಗ್ಗೆ ನೀವು ಪಶ್ಚಾತ್ತಾಪ ಪಡುತ್ತಿರಾ?”
‘ಹಿಂದು’ ಶಬ್ದ ಕೇಳುತ್ತಲೇ ಇವರೇಕೆ ಹುಯಿಲೆಬ್ಬಿಸುತ್ತಾರೆ?
– ಪ್ರವೀಣ್ ಪಟವರ್ಧನ್
ಕೆಲ ದಿನಗಳ ಹಿಂದಷ್ಟೇ ಬೋಧ್ಗಯಾ ಬಾಂಬ್ ಬ್ಲಾಸ್ಟ್ ಪ್ರಕರಣದ ನಂತರ ನೀಡಿದ್ದ ವಿಚಿತ್ರ- ವಿಕೃತ ಹೇಳಿಕೆಗಳನ್ನು ಆಧರಿಸಿ, ತಮಗೆ ಸಮಯ ಬಂದಾಗಲೆಲ್ಲಾ ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಿ, ಇತರರ (ಉದ್ದೇಶಪೂರ್ವಕವಾಗಿ ಗುಜರಾತಿನ ಮುಖ್ಯಮಂತ್ರಿ ಮೋದಿಯವರ) ತೇಜೋವಧೆ ಮಾಡುವ ಕಾಂಗ್ರೆಸ್ಸಿಗ “ಒಸಾಮಾ ಜೀ” ಎಂದು ಮುಕ್ತ ಮನಸ್ಸಿನಿಂದ ಮರ್ಯಾದೆ ನೀಡಿದ ಖ್ಯಾತಿಯ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯಸಿಂಗ್ ಅವರನ್ನು ಕುರಿತು Facebook ಜಾಲತಾಣದಲ್ಲಿ ಒಂದು ವ್ಯಂಗ್ಯ ಚಿತ್ರ ಹರಿದಾಡುತ್ತಿತ್ತು. ಸಂಕ್ಷಿಪ್ತವಾಗಿ ಹೇಳುವುದಾದರೆ ವ್ಯಂಗ್ಯಚಿತ್ರದಲ್ಲಿ ಇದ್ದುದು ಇಷ್ಟೇ. “ಟೀವಿಯಲ್ಲಿ ದಿಗ್ವಿಜಯಸಿಂಗ್ ಒಂದು ಪತ್ರಿಕಾ ಹೇಳಿಕೆ ನೀಡುತ್ತಿದ್ದಾಗ ಮನೆಯಲ್ಲಿನ ಸಾಕಿದ ನಾಯಿಗಳು ಟೀವಿ ನೋಡುತ್ತಾ ಬೊಗಳುತ್ತಿವೆ. ಮುಂದೇನೂ ಹೇಳಲಾರೆ. ನೀವೇ ಅರ್ಥ ಮಾಡಿಕೊಳ್ಳಬಲ್ಲಿರಷ್ಟೇ.
ರಾಜಕಾರಣಿಯೆಂದರೆ ಅಲ್ಲಿ ವಾದ-ವಿವಾದಗಳು ಸಾಮಾನ್ಯ. ಈಗಿನ ರಾಜಕಾರಣದಲ್ಲಿ ಜನಪರ ಕೆಲಸ ಮಾಡುವುದಕ್ಕಿಂತ ವಾದಗಳಿಗೆ ಸಿಲುಕಿಕೊಳ್ಳುವುದೇ ಹೆಚ್ಚು. ಒಬ್ಬರ ಮೇಲೋಬ್ಬರ ಕೆಸರೆರಚಾಟ. ವಿರೋಧ ಪಕ್ಷದ ವ್ಯಕ್ತಿಯ ತೇಜೋವಧೆ, ಸುಳ್ಳು ಆರೋಪ, ಅರ್ಥವಿಹೀನ ಹೇಳಿಕೆ ಇವೆಲ್ಲವೂ ಕೆಸರೆರೆಚಾಟದ ವಿವಿಧ ಮುಖಗಳು. ನಿಮ್ಮ ಸರ್ಕಾರ ಹೀಗೆ ಮಾಡಿದ್ದು ಸರಿಯೇ ಎಂಬ ಪ್ರಶ್ನೆಗೆ ಸಿಗುವ ಉತ್ತರ, ನಮ್ಮ ಹಿಂದಿನ ಸರ್ಕಾರ ಇದಕ್ಕಿಂತಲೂ ಕೆಟ್ಟ ಕೆಲಸ ಮಾಡಿತ್ತು ಅದರ ಬಗ್ಗೆ ಮಾತಾಡೋಣವೇ ಎಂದು ಕುಟುಕಿ ತಮ್ಮ ಲೋಪಗಳನ್ನು cover-up ಮಾಡಿಕೊಳ್ಳುವವರೇ ಈ ದಿನ ಹೆಚ್ಚು.
ಈ ಸ್ವಾತಂತ್ರ್ಯಕ್ಕೆ ಅಸ್ಸಾಮಿನ ಉರಿಯ ಅರಿವುಂಟೇ?
– ಸಂತೋಶ್ ತಮ್ಮಯ್ಯ
ನೇಪಾಳದ ಹಿಂದೂ ರಾಜನನ್ನು ಪದಚ್ಯುತಗೊಳಿಸಿದಾಗ ಭಾರತದಲ್ಲಿ ಯಾವ ಕಮ್ಯುನಿಷ್ಟ್ ಕಾಮ್ರೆಡನಿಗೂ ಪೆಟ್ಟು ಬಿದ್ದಿರಲಿಲ್ಲ. ಪಾಕಿಸ್ಥಾನದ ರಿಂಕಲ್ ಕುಮಾರಿಯನ್ನು ಮತಾಂಧರು ಮತಾಂತರಿಸಿದಾಗ ಇಲ್ಲಿನ ಯಾವ ಹಿಂದುವೂ ಬೀದಿಗೆ ಇಳಿದಿರಲಿಲ್ಲ. ಅಲ್ಲೆಲ್ಲೋ ಪಾಶ್ಚಾತ್ಯ ದೇಶದಲ್ಲಿ ಗಣಪತಿ, ಲಕ್ಷ್ಮಿ, ಬ್ರಹ್ಮದೇವರನ್ನು ಹೆಂಗಸರ ಚಡ್ಡಿಗಳಲ್ಲಿ ಚಿತ್ರಿಸಿ ರಾಂಪ್ವಾಕ್ ಮಾಡಿದಾಗಲೂ ಹಿಂದುಗಳಾರೂ ಬಸ್ಸುಗಳಿಗೆ ಕಲ್ಲು ಬಿಸಾಡಿರಲಿಲ್ಲ. ಅದಾವುದೋ ಕೆರೆಬಿಯನ್ ದೇಶದಲ್ಲಿ ಹಿಂದುವಾದವನು ಅಧ್ಯಕ್ಷನಾಗಬಾರದು ಎಂದಾಗ ಜಗತ್ತಿನಾದ್ಯಂತ ಹಿಂದುಗಳಾರೂ ಖಂಡಿಸಲಿಲ್ಲ. ಅವೆಲ್ಲಾ ಬಿಡಿ. ಕಾಶಿ ವಿಶ್ವನಾಥನ ದರ್ಶನಕ್ಕೆ ಹೋದರೂ ಹಿಂದುಗಳಿಗೆ ಪಕ್ಕದ ಪರಮ ಅಸಹ್ಯವಾದ ಕಟ್ಟಡವೊಂದು ಸಾಮರಸ್ಯದ ಪ್ರತೀಕದಂತೆಯೇ ಕಾಣುತ್ತದೆ. ಅಯೋಧ್ಯೆಯ ರಾಮ ಇನ್ನೂ ಟೆಂಟ್ ವಾಸಿಯಾದರೂ ಬಹುತೇಕರಿಗೆ ಅದೇನೂ ಅಂಥ ಕೊರಗಿನಂತೆ ಕಾಣುವುದಿಲ್ಲ. ಯಾವ ಹಿಂದೂ ಸಂನ್ಯಾಸಿಯೂ ಮೌಲ್ವಿಗಳಂತೆ ಅಬ್ಬರಿಸುವುದಿಲ್ಲ. ಒಂದು ವೇಳೆ ಸಂನ್ಯಾಸಿ ಅಬ್ಬರಿಸಿದರೂ ಯಾರಿಗೂ ಹೆದರಿಕೆಯಾಗುವಂತೆ ಕಾಣುವುದೂ ಇಲ್ಲ.
ಅದು ಹಿಂದುವಿನ ಅತಿಯಾದ ಸಾತ್ತ್ವಿಕತೆಯೋ ಅಥವಾ ಭಂಡತನ ಮಿಶ್ರಿತ ಅತಿಯಾದ ಭಯವೋ ಎಂದು ವಿಶ್ಲೇಷಿಸುವುದು ಕಷ್ಟ. ಆದರೆ ಆತನಿಗೆ ಹಿಂದು ಎಂಬ ಕಾರಣಕ್ಕೆ ಸಿಟ್ಟು ಬರದಿರುವುದಂತೂ ಸತ್ಯ. ಮೇಲಿನ ಎಲ್ಲಾ ಸಂದರ್ಭಗಳಲ್ಲಿ ಅದು ಸಾಭೀತಾಗಿದೆ. ಬೀದಿಗಿಳಿಯಲು, ಪ್ರತಿಭಟಿಸಲು ಹಿಂದುವಿಗೆ ದಿನಕ್ಕೊಂದು ಕಾರಣವಾದರೂ ಸಿಗುತ್ತವೆ. ಆದರೆ ಅದು ನಡೆಯುವುದಿಲ್ಲ. ಏಕೆಂದರೆ ಹಿಂದುವಿಗೆ ಸಮಾಜಕ್ಕಾಗಿ ಎಂದಿಗೂ ಸಿಟ್ಟು ಬರುವುದಿಲ್ಲ.





