‘ಚಿತ್ತಗಾಂಗ್’ನಲ್ಲಿ ಸ್ವಾತಂತ್ರ್ಯ’ಸೂರ್ಯ’ನ ಉದಯ…!
– ಭೀಮಸೇನ್ ಪುರೋಹಿತ್
‘ಚಿತ್ತಗಾಂಗ್’ ಅನ್ನೋ ಹೆಸರು ಕೇಳಿದರೆ ಸಾಕು, ಸ್ವಾತಂತ್ರ್ಯ ಇತಿಹಾಸವನ್ನು ಓದಿದ ಪ್ರತಿಯೊಬ್ಬರಿಗೂ ಮೈನವಿರೇಳುತ್ತದೆ. ಅಂಥಾ ಚಮತ್ಕಾರ ನಡೆದ ಸ್ಥಳ ಅದು. ಕ್ರಾಂತಿಕಾರಿಗಳ, ದೇಶಪ್ರೇಮಿಗಳ ಪುಣ್ಯಕ್ಷೇತ್ರವದು.ಆದರೆ, ದೇಶ ವಿಭಜನೆಯಾದ ಮೇಲೆ, ಈಗ ಈ ಜಾಗ ‘ಬಾಂಗ್ಲಾದೇಶ’ದಲ್ಲಿದೆ..
ಅವನ ಹೆಸರು ‘ಸೂರ್ಯಸೇನ್’. ವೃತ್ತಿಯಿಂದ ಶಿಕ್ಷಕ.. ಎಲ್ಲ ವಿದ್ಯಾರ್ಥಿಗಳ ಪ್ರೀತಿಯ ‘ಮಾಸ್ಟರ್ ದಾ’.ಹುಟ್ಟಿದ್ದು ನೌಪರ ಎಂಬ ಗ್ರಾಮದಲ್ಲಿ, 1894 ರಲ್ಲಿ…ಅದಾಗಲೇ, ಬಂಗಾಳದ ಪ್ರಸಿದ್ಧ ಸಂಘಟನೆಗಳಾದ ‘ಅನುಶೀಲನ ಸಮಿತಿ’ ಮತ್ತು ‘ಜುಗಾಂತರ’ ದಿಂದ ಪ್ರಭಾವಿತನಾಗಿದ್ದ..
ಭಾರತದ ಸ್ವಾತಂತ್ರ್ಯ, ಚಿತ್ತಗಾಂಗ್ ಗ್ರಾಮದಿಂದಲೇ ಪ್ರಾರಂಭವಾಗಬೇಕೆಂಬ ಮಹತ್ವಾಕಾಂಕ್ಷೆ ಹೊದಿದ್ದ.. ಅದಕ್ಕಾಗಿ ಮಾಸ್ಟರ್ ದಾ, ಸಂಘಟನೆಯನ್ನೂ ಶುರು ಮಾಡಿದ್ರು.. ಶಿಕ್ಷಕರಾಗಿದ್ದರಿಂದ ಸಂಘಟನೆ ಮಾಡೋದು ಅಷ್ಟೇನೂ ಕಷ್ಟ ಆಗ್ಲಿಲ್ಲ. ಶಾಲೆಯಲ್ಲಿನ, ಕೇವಲ 14-15 ವರ್ಷದೊಳಗಿನ ಪುಟ್ಟ ವಿದ್ಯಾರ್ಥಿಗಳೂ ಸೂರ್ಯಸೇನನ ಜೊತೆ ಸಹಕರಿಸಲು ಮುಂದೆ ಬಂದ್ರು..
ಅಶ್ಫಾಕುಲ್ಲಾ ಖಾನ್” — ದೇಶಭಕ್ತಿಯ ಮೂರ್ತರೂಪ..
– ಭೀಮಸೇನ್ ಪುರೋಹಿತ್
ಆಗಸ್ಟ್ 9 – 1925.. ಅವತ್ತಿನ ರಾತ್ರಿ ಭಾರತದ ಕ್ರಾಂತಿಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ದಾಖಲಾದ ದಿನ.. ಇನ್ನೂ ಮೀಸೆ ಚಿಗುರದ ನವತರುಣರು ಆಂಗ್ಲಶಾಹಿಯೆದುರಿಗೆ ತೊಡೆತಟ್ಟಿ ನಿಂತ ದಿನ ಅದು.. ಅದೇ “ಕಾಕೋರಿ” ಪ್ರಕರಣ..
ಆ ಹೊತ್ತಿಗಾಗಲೇ, ಅಮೇರಿಕಾದ “ಗದರ್” ಪಾರ್ಟಿಯ ಪ್ರಖರತೆ ಕಮ್ಮಿಯಾಗಿತ್ತು. ಭಾರತದಲ್ಲಿ, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಗದರ್ ಪಾರ್ಟಿಯ ಹಳೆಯ ಕೆಲವು ನಾಯಕರು ಸೇರಿ “ಹಿಂದುಸ್ತಾನ್ ರಿಪಬ್ಲಿಕನ್ ಅಸೋಸಿಯೇಶನ್” ಎಂಬ ಕ್ರಾಂತಿಸಮಿತಿಯನ್ನು ಶುರು ಮಾಡಿದ್ರು. ಗದರ್ ಪಾರ್ಟಿಯ ಪತನದ ನಂತರ ಕ್ರಾಂತಿ ತಣ್ಣಗಾಗಿದೆ ಅಂತ, ಆಂಗ್ಲರು ಈ HRA ಅನ್ನು ಉಪೇಕ್ಷಿಸಿದ್ದರು.. ಅವರ ಆ ಅಲಕ್ಸ್ಯವೇ ಕ್ರಾಂತಿಕಾರಿಗಳಿಗೆ ವಾರವಾಯಿತು..
ರಾಮಪ್ರಸಾದ್ ಮತ್ತು ಅಶ್ಫಾಕ್ ಇಬ್ರೂ ಜೀವಕ್ಕೆ ಜೀವ ಕೊಡೊ ಗೆಳೆಯರು.. ಅವರ ಸ್ನೇಹದ ನಡುವೆ ಧರ್ಮ ಯಾವತ್ತೂ ಅಡ್ಡಿ ಬರ್ಲಿಲ್ಲ.. ಹಾಗೆ ನೋಡಿದರೆ, ರಾಮ್, ಪಕ್ಕಾ ಅರ್ಯಸಮಾಜದ ಹಿಂದೂವಾದಿ. ಆದ್ರೆ ಅವನು ಅಶ್ಫಾಕ್ ನನ್ನು ಅಪಾರವಾಗಿ ಗೌರವಿಸುತ್ತಿದ್ದ. ಹಾಗೆಯೇ ಅಶ್ಫಾಕ್ ಕೂಡ ಯಾವಾಗಲೂ “ನನ್ನ ರಾಮ” ಅಂತಾನೆ ಜಪಿಸುತ್ತಿದ್ದ.. ಅಶ್ಫಾಕ್ ಉತ್ತರಪ್ರದೇಶದ ಷಹಜಹಾನ್ ಪುರದವನು. ಅಶ್ಫಾಕ್ ಒಬ್ಬ ಮಹಾನ್ ಉರ್ದು ಕವಿ ಕೂಡ ಆಗಿದ್ದ.. ಅತ್ಯಂತ ಉದ್ಬೋಧಕ ದೇಶಭಕ್ತಿ ಗೀತೆಗಳನ್ನು ಬರೆದ ಸಾಹಿತಿ ಅವನು.. ಅದೇ ಅಶ್ಫಾಕ್ ಬಿಸ್ಮಿಲ್ಲನ ಸಹವಾಸಕ್ಕೆ ಬಂದೊಡನೆ, ಅವನ ಪಟ್ಟಶಿಷ್ಯನಾಗಿ ದೇಶಕ್ಕೆ ಅರ್ಪಿಸಿಕೊಂಡಿದ್ದ..
ಅಣ್ಣಾ ಹಜಾರೆ – ಶ್ರೀ ಸಾಮಾನ್ಯನ ಮನೆ – ಮನಗಳ ದೀಪ.
– ಹೊಳೆನರಸೀಪುರ ಮಂಜುನಾಥ್
ಅಣ್ಣಾ ಹಜಾರೆಯವರ ಬೇಡಿಕೆಗಳನ್ನು ಕೇ೦ದ್ರ ಸರ್ಕಾರ ಒಪ್ಪಿಕೊಳ್ಳುವುದರ ಮೂಲಕ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ. ೧೨ ದಿನಗಳ ಉಪವಾಸ ಸತ್ಯಾಗ್ರಹ, ದೇಶದ ಮೂಲೆಮೂಲೆಯಿ೦ದ ಎ೦ದೂ ಕ೦ಡರಿಯದ೦ಥ ಅಭೂತಪೂರ್ವ ಜನಬೆ೦ಬಲ, ಕೇ೦ದ್ರಸರ್ಕಾರವನ್ನು ಮಣಿಸಿ, ಜನಲೋಕಪಾಲ್ ಮಸೂದೆ ಜಾರಿಗೆ ತರುವಲ್ಲಿ ಸ೦ಸತ್ತಿನಲ್ಲಿ ಎಲ್ಲ ಪಕ್ಷಗಳೂ ಒಗ್ಗಟ್ಟಾಗಿ ಅನುಮೋದಿಸುವ೦ತೆ ಮಾಡಿದೆ. ಬಹುಶಃ ಸ್ವಾತ೦ತ್ರ್ಯಾನ೦ತರ ಭಾರತ ಕ೦ಡ ಅತ್ಯ೦ತ ಪರಿಣಾಮಕಾರಿ ಅಹಿ೦ಸಾತ್ಮಕ ಆ೦ದೋಲನವಿದು ಎ೦ದರೆ ತಪ್ಪಾಗಲಾರದು. ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧಿ ಹೋರಾಟಕ್ಕೆ ಸಿಕ್ಕಿರುವ ಜಯ, ಯಾವುದೇ ಒ೦ದು ಪಕ್ಷಕ್ಕೆ, ಸ೦ಘಟನೆಗೆ ಅಥವಾ ವ್ಯಕ್ತಿಗೆ ಸಿಕ್ಕಿರುವ ಜಯವಲ್ಲ. ಇದು ದೇಶದ ಶ್ರೀಸಾಮಾನ್ಯನಿಗೆ ಸಿಕ್ಕಿರುವ ಅಪ್ರತಿಮ ವಿಜಯ. ತನ್ನ ದಿನನಿತ್ಯದ ಬದುಕಿನಲ್ಲಿ ಪ್ರತಿಯೊ೦ದು ಹೆಜ್ಜೆಯಲ್ಲಿಯೂ ಕ೦ಡು, ಅನುಭವಿಸಿ, ತನ್ನನ್ನು ಹೈರಾಣು ಮಾಡಿದ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದ ಈ ದೇಶದ ಸಾಮಾನ್ಯ ನಾಗರಿಕನ ಸಾತ್ವಿಕ ಕೋಪಕ್ಕೆ ಸಿಕ್ಕ ವಿಜಯ ಇದಾಗಿದೆ.
ಮತ್ತಷ್ಟು ಓದು 
ಜನಲೋಕಪಾಲ ಅನ್ನುವುದು ಮಾಯದಂಡವೇನಲ್ಲ…!
– ರಾಕೇಶ್ ಶೆಟ್ಟಿ
ಒಂದೆಡೆ ಅಣ್ಣಾರನ್ನ ಬೆಂಬಲಿಸಿ ಜನ ಬೀದಿಗಿಳಿದರೆ, ಇನ್ನೊಂದೆಡೆ ಅಣ್ಣಾ ಹೋರಾಟವನ್ನ ಪ್ರಶ್ನಿಸಿ ಹಲವಾರು ಪ್ರಶ್ನೆಗಳೆದ್ದಿವೆ.
’ಜನಲೋಕಪಾಲ್’ ಬಂದ ತಕ್ಷಣ ಎಲ್ಲ ಭ್ರಷ್ಟರು ಮಾಯವಾಗ್ತಾರೆ ಅಂತ ಖುದ್ದು ಅಣ್ಣಾ ಮತ್ತು ಸಿವಿಲ್ ಸೊಸೈಟಿಯವರ್ಯಾರು ಸಹ ಎಲ್ಲೂ ಹೇಳಿಲ್ಲ.ಹಾಗಾಗ್ಯೂ ಇಂತ ವಾದ ಹುಟ್ಟು ಹಾಕಿದ್ದು ಯಾರು? ಬಹುಷಃ ಕಪಿಲ್ ಸಿಬಲ್ ಇರಬೇಕು ಅದನ್ನೆ ಹಿಡಿದು ಕೆಲವರು ’ಜನಲೋಕಪಾಲ್’ ಬಂದ್ರೆ ಭ್ರಷ್ಟಚಾರ ಮಾಯವಾಗುತ್ತಾ!? ಅಂತ ಕೇಳ್ತಾ ಇದ್ದಾರೆ ಕೆಲವರು. ಅಂತವರಿಗೊಂದು ಪ್ರಶ್ನೆ ಪೋಲಿಸ್ ಇಲಾಖೆ ಅನ್ನುವುದು ಬಂದು ಎಷ್ಟು ವರ್ಷಗಳಾಯ್ತು? ಕಳ್ಳತನ-ಕೊಲೆ-ದರೋಡೆ ನಿಂತಿದೆಯಾ ಸ್ವಾಮಿ!? ಇಲ್ಲ ತಾನೆ..! ಆದರೆ ಜನ್ರಿಗೊಂದು ಹೆದರಿಕೆಯಂತೂ ಇರುತ್ತದೆ ತಪ್ಪು ಮಾಡೋಕೆ ಹಾಗೆ ತಪ್ಪು ಮಾಡಿದವರನ್ನ ಹಿಡಿದು ಜೈಲಿಗೆ ಅವರು ನೂಕುತಿದ್ದಾರಲ್ವಾ? ಹಾಗೆಯೇ ಜನಲೋಕಪಾಲ ಅನ್ನುವುದು ಸಹ.ಅದು ಬಂದ ತಕ್ಷಣ ಎಲ್ಲ ಸರಿ ಹೋಗದು.ಅದು ಸುಧಾರಣೆಯ ಒಂದು ಅಸ್ತ್ರವಷ್ಟೆ.
ಈ ಎಡವಟ್ಟುಗಳು ಯಾಕೆ ಹೀಗೆ ಅಂತ?
– ಸಚಿನ್ ಕೆ
ನಮಸ್ಕಾರ ಸಾ. ಎಂಗಿದೀರಾ.
ನೋಡಿ ಸಾ, ಪ್ರಪಂಚ ಹೆಂಗೈತೆ ಅಂದ್ರೆ ಹಿಂಗೂ ಜನ ಇರ್ತಾರ ಅಂತ ಗೊತ್ತಿರ್ಲಿಲ್ಲ.
ಗಾಂಧಿ ಮಆತ್ಮ್ ನ ತರ ನೀವು ಉಪ್ವಾಸ ಮಾಡಿದ್ರೆ ಜನ ಅದರಲ್ಲೂ ಹುಳುಕು ಕಂಡಿಡಿತಾರೆ ಅಂದ್ರೆ, ಈ ಜನ ಎಷ್ಟು ಗಬ್ಬೆದ್ದು ಹೋಗಿದ್ದಾರೆ ಅಂತ. ಆ ಬ್ರಹ್ಮ ಇವರ ತಲೆ ಒಳಗೆ ಮಿದುಳು ಇಟ್ಟಿಲ್ಲ ಅನ್ಸುತ್ತೆ, ಅದರೆ ಬದಲು ಸಗಣಿ ಮಡಗವ್ನೆ. ಈ ಬಡ್ಡೆತ್ತೇವು ಬರೀ ಉಲ್ಟಾ ಮಾತಾಡೋದೆ ಆಗ್ವಾಯ್ತು.
ಅವಯ್ಯ ದೇಸಾನ ಏನೋ ಬದಲಾವ್ಣೆ ಮಾಡ್ತೀನಿ ಅಂತ ಮಾತಾಡ್ತಿಲ್ಲ. ಲಂಚ ತಿನ್ನೋ ಎಲ್ಲ ಬೇವರ್ಸಿ ಮುಂಡೇವು ಗಳಿಗೆ ಸರ್ಯಾದ ಸಿಕ್ಸೆ ಆಗ್ಲಿ ಅಂತ ಗೋರ್ಮೆಂಟ್ ನೋರು ಸರಿಯಾದ ರೂಲ್ಸ್ ಮಾಡ್ಲಿ ಅಂತ. ಆದರೆ ಈ ಉಲ್ಟಾ ಮಾತಾಡ್ತ ಇರೋ ಈ ಹೈಕಳು ಕೇಳೋ ಪ್ರಸ್ನೆಗಳನ್ನು ನೋಡಿದ್ರೆ ನಗ ತಡ್ಯಾಕಾಗ್ತಿಲ್ಲ.
ಭ್ರಷ್ಟಾಚಾರ ಎಂದರೆ ಅನುಕೂಲ ಸಿಂಧು
– ಪವನ್ ಪರುಪತ್ತೆದಾರ
ನನಗೊಬ್ಬ ಸ್ನೇಹಿತ ಇದ್ದಾನೆ ಪ್ರವೀಣ್ ಅಂತ, ನನ್ನ ಜೊತೆ ಓದಿಲ್ಲವಾದರೂ ನನ್ನ ಸಹಪಾಠಿ ಅವನು, ಒಂದೇ ತರಗತಿ ಆದರೆ ಬೇರೆ ಶಾಲೆ. ಅವನ ಕೆಲಸ ತಾಲ್ಲೂಕು ಕಚೇರಿಯಲ್ಲಿ. ಸರ್ಕಾರದಿಂದ ಕೊಟ್ಟ ಕೆಲಸ ಅಲ್ಲ, ಅವನೇ ಹುಡುಕಿ ಕೊಂಡಿರುವ ವೃತ್ತಿ. ನಿಜ ಹೇಳಬೇಕೆಂದರೆ ನಮ್ಮೂರಿನ ತಾಲ್ಲೂಕು ಕಚೇರಿಯೋಳಗಿರುವರಿಗಿಂತ ಇವನು ಹೆಚ್ಚು ಕೆಲಸ ಮಾಡುತ್ತಾನೆ. ಪಹಣಿ, registration, ಖಾತೆ ಬದಲಾವಣೆ, encumberance ಸರ್ಟಿಫಿಕೇಟ್, survey sketch ಕಾಪಿ, ನಿಮಗೇನು ಬೇಕು?? ತಾಲ್ಲೂಕು ಕಚೇರಿಯ ಗೇಟ್ ನ ಪ್ಯೂನ್ ಇಂದ ಹಿಡಿದು ತಹಶೀಲ್ದಾರ್ ತನಕ, ಏನು ಕೆಲಸ ಬೇಕಾದರುಮಾಡಿಕೊಡುತ್ತಾನೆ(ಮಾಡಿಸಿಕೊಡುತ್ತಾನೆ).
ಇತ್ತೀಚಿಗೆ ನನಗೆ ಬಹಳ ಜರೂರಾಗಿ ನಮ್ಮ ಜಮೀನಿನ ಪಹಣಿ ಬೇಕಾಗಿತ್ತು. ನಮ್ಮ ಊರಿನ ಪಹಣಿ ಕೇಂದ್ರ ಬಹಳ ದಿನಗಳಿಂದ ದುರಸ್ಥಿಯಲ್ಲಿತ್ತು. ಆಗಷ್ಟೇ ಕೊಡಲು ಶುರು ಮಾಡಿದ್ದರು. ಅದ್ದರಿಂದ ತಾಲ್ಲೂಕು ಕಚೇರಿ ಬಳಿ ಹೋಗಿ ಸಾಲು ನೋಡಿದೊಡನೆ ಭಯವಾಯ್ತು. ಅದರಲ್ಲೂ ನಮ್ಮ ಸರ್ಕಾರೀ ಕಛೇರಿಯೋಳಗಿನ ಗಣಕ ಯಂತ್ರಗಳು ಯಾವಾಗ ಕೆಡುತ್ತವೋ ಗೊತ್ತಿಲ್ಲ. ಇವತ್ತು ಕೆಟ್ಟರೆ ಇನ್ನು ರಿಪೇರಿ ಆಗುವುದು ಯಾವಾಗಲೋ??? ಅಲ್ಲಿವರೆಗೂ ನನಗೂ ಕಾಯುವ ಅವಕಾಶವಿರಲಿಲ್ಲ. ಮತ್ತಷ್ಟು ಓದು 
ಸುಮ್ಮನೆ ಬರಲಿಲ್ಲ ಸ್ವಾತಂತ್ರ್ಯ…!
– ರಾಕೇಶ್ ಶೆಟ್ಟಿ
ಇವತ್ತು ೬೫ನೇ ಸ್ವಾತಂತ್ರ್ಯ ಸಂಭ್ರಮ,ದೆಹಲಿಯ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ಮಾಡಿ ಭಾಷಣ ಮಾಡಲಿದ್ದಾರೆ ನಮ್ಮ ಪ್ರಾಮಾಣಿಕ ಪ್ರಧಾನಿ.ಮತ್ತೆ ನಾಳೆ ಇದೇ ಪ್ರಾಮಾಣಿಕ ಪ್ರಧಾನಿಯ
ಸರ್ಕಾರದ ಅನೈತಿಕತೆಯ ವಿರುದ್ಧ ಅಣ್ಣಾ ಹಜ಼ಾರೆ ಮತ್ತೆ ಉಪವಾಸ ಕೂರುತಿದ್ದಾರೆ.ಅಣ್ಣಾ ಇದನ್ನ ಎರಡನೇ ಸ್ವಾತಂತ್ರ್ಯ ಹೋರಾಟ ಅನ್ನುತಿದ್ದಾರೆ.ಆದರೆ ಮೊದಲ ಸ್ವಾತಂತ್ರ್ಯ ಹೋರಾಟದ ಆಳ-ಅಗಲಗಳನ್ನ ಸರಿಯಾಗಿ ತಿಳಿಯಲಾಗದೇಯೆ ಶಾಲೆ-ಕಾಲೇಜು ಪಾಸಾಗಿ ಬಂದ ನಮ್ಮಲ್ಲಿ ಅದಿನ್ನೆಷ್ಟು ಜನಕ್ಕೆ ಈ ಎರಡನೇ ಹೋರಾಟ ಕಿಚ್ಚು ಹಚ್ಚಬಹುದು,ಅದನ್ನ ಕಾಲವೇ ಉತ್ತರಿಸಲಿದೆ.
ಅಣ್ಣಾ ಉಪವಾಸ ಹೋರಾಟಕ್ಕೆ ಜಯವಾಗಲಿ ಅಂತ ಹಾರೈಸುತ್ತ,ಅಣ್ಣಾ ಉಪವಾಸ ಸತ್ಯಾಗ್ರಹಕ್ಕೆ ಆರಂಭದಲ್ಲೆ ಕಲ್ಲು ಹಾಕಿ ತಲೆಕೆಟ್ಟವರಂತೆ ಮಾತನಾಡುತ್ತಿರುವ ಕಾಂಗ್ರೆಸ್ಸಿನ ಮಂದಿಗೂ ಮತ್ತು ಕೇಂದ್ರ ಗೃಹ ಸಚಿವರಿಗೂ ಮತ್ತು ಕನಿಷ್ಠ ದೆಹಲಿ ಪೋಲಿಸ್ ಪರ್ಮಿಷನ್ ಸಹ ಕೊಡಿಸಲಾಗದ ಅಸಾಹಯಕ ಆದರೆ At the same time ಪ್ರಾಮಾಣಿಕ ಪ್ರಧಾನಿಯ ಶೋಚನೀಯ ಸ್ಥಿತಿಗೆ ಕಂಬನಿ ಮಿಡಿಯುತ್ತ, ಉಪವಾಸ ಸತ್ಯಾಗ್ರಹದಂತ ಹೋರಾಟದ ಅಸ್ತ್ರ ಹಿಡಿದು ನಿಲ್ಲುವವರ ಮನಸ್ಥಿತಿಯ ಕುರಿತಾಗಿ ಮಹಮ್ಮದ್ ಅಲಿ ಜಿನ್ನಾ ಹೇಳಿರುವ ಮಾತುಗಳು ನೆನಪಿಸಿಕೊಳ್ಳುತಿದ್ದೇನೆ.
“ಯಾವ ಮನುಷ್ಯ ಉಪವಾಸ ಸತ್ಯಾಗ್ರಹಕ್ಕೆ ಇಳಿಯುತ್ತಾನೋ ಅಂತವನು ಅವನ ಮನಸಿನ ಮಾತಿನಂತೆ ನಡೆಯುತ್ತಾನೆ ಮತ್ತು ಅವನಿಗೆ ಅವನೇನು ಮಾಡುತ್ತಿದ್ದಾನೆ ಎಂಬುದರ ಸಂಪೂರ್ಣ ಅರಿವಿರುತ್ತದೆ.ಅವರನ್ನು ಹಾದಿ ತಪ್ಪಿದವರು ಅನ್ನುವ ಮೊದಲು ಅವರನ್ನು ಹಾದಿ ತಪ್ಪಿಸಿರುವುದು ಈ ವ್ಯವಸ್ತೆ ಅನ್ನುವುದನ್ನ ಮರೆಯಬಾರದು,ಮತ್ತು ಈ ವ್ಯವಸ್ತೆಯ ವಿರುದ್ಧ ಯುವಕರು ಸಿಡಿದಿದ್ದಾರೆ” . ಅವರು ಹಾಗೇ ಹೇಳಿದ್ದು ಕ್ರಾಂತಿಕಾರಿ ಭಗತ್ ಸಿಂಗ್ ಮತ್ತು ಸಂಗಡಿಗರು ಬ್ರಿಟಿಶ್ ಕೈದಿಗಳಂತೆ ಭಾರತೀಯ ಕೈದಿಗಳಿಗೂ ಜೈಲಿನಲ್ಲಿ ಸಮಾನ ಹಕ್ಕು ನೀಡುವಂತೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟವನ್ನ ಬಹಿರಂಗವಾಗಿ ಬೆಂಬಲಿಸಿ.ಆಗಲೂ ಸಹ ಕಾಂಗ್ರೆಸ್ಸ್ ಭಗತ್ ಸಿಂಗ್ ಅವರ ಉಪವಾಸದ ಹೋರಾಟದ ಬಗ್ಗೆ ಈಗ ಅಣ್ಣಾ ಅವರ ಹೋರಾಟದ ವಿರುದ್ಧ ಇರುವಂತೆಯೆ ಇತ್ತು. ಅದಿರಲಿ, ಈ ಹೋರಾಟ ನಡೆದಿದ್ದು ಬರೋಬ್ಬರಿ ೬೩ ದಿನಗಳ ಕಾಲ! ಕಡೆಗೂ ಭಗತ್ ಸಿಂಗ್ ಮತ್ತವರ ಗೆಳೆಯರ ಎದುರು ಬ್ರಿಟಿಷ್ ಸರ್ಕಾರ ಮಂಡಿಯೂರಲೇ ಬೇಕಾಯಿತು,ಆದರೆ ಅಷ್ಟರೊಳಗಾಗಲೇ ನಾವು ’ಜತೀನ್ ದಾ’ ಅವರನ್ನ ಕಳೆದುಕೊಂಡಾಗಿತ್ತು 😦
ಸತ್ಯೇಂದ್ರನಾಥ್ ಬೋಸ್ – Another Forgotten Hero…
– ಭೀಮ ಸೇನ್ ಪುರೋಹಿತ್
ನಮ್ಮ ದೇಶದ ಸ್ವಾತಂತ್ರ್ಯಹೋರಾಟಕ್ಕೆ ಅತಿಹೆಚ್ಚು ಹಾಗು ಪ್ರಖರ ಕೊಡುಗೆಗಳನ್ನು ನೀಡಿದ ಯಶಸ್ಸು ‘ಪಶ್ಚಿಮ ಬಂಗಾಳ’ ರಾಜ್ಯಕ್ಕೆ ಸಲ್ಲುತ್ತದೆ. ಆ ಬಂಗಾಳದ ಮತ್ತೊಂದು ಹುಲಿಯೇ “ಸತ್ಯೇಂದ್ರನಾಥ್ ಬೋಸ್”. ಇವನ ಇಡೀ ಕುಟುಂಬವೇ ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿತ್ತು. ಅವನ ತಂದೆ ‘ರಾಜನಾರಾಯಣ ಬೋಸ್’, ಸಹೋದರರಾದ ‘ಜ್ಞಾನೇಂದ್ರನಾಥ್ ಬೋಸ್’,’ಭೂಪೆಂದ್ರನಾಥ್ ಬೋಸ್’,ಎಲ್ಲರೂ ಸ್ವಾತಂತ್ರ್ಯ ಹೋರಾಟಗಾರರೆ.. ಮಿಡ್ನಾಪುರ್ ಜಿಲ್ಲೆಯಲ್ಲಿ ಜನಿಸಿದ ಸತ್ಯೇನ್, ಓದಿನಲ್ಲಿ ಜಾಣ. ಬಿ.ಎ ತನಕ ಓದಿದರೂ, ಮುಂದೆ ಓದಲಾಗಲಿಲ್ಲ..ಇನ್ನೊಂದು ವಿಶೇಷ ಅಂದ್ರೆ, ಈ ಸತ್ಯೇಂದ್ರನಾಥ್, ಶ್ರೀ ಅರವಿಂದ್ ಘೋಶರಿಗೆ ಸಂಬಂಧಿ…
“ಅಲಿಪುರ ಬಾಂಬ್ ಪ್ರಕರಣ” ಮತ್ತು “ಮಾಣಿಕ್ ತೊಲಾ ಗಾರ್ಡನ್ ಬಾಂಬ್ ಪ್ರಕರಣ”, ಈ ಎರಡು ಪ್ರಕರಣಗಳೂ, ಸ್ವಾತಂತ್ರ್ಯಹೋರಾಟದ ಸಮಯದಲ್ಲಿ, ಬಂಗಾಳ ಪ್ರಾಂತದಲ್ಲಿ ನಡೆದ ಬಹುದೊಡ್ಡ ಬ್ರಿಟಿಶ್ ವಿರೋಧಿ ಕಾರ್ಯಗಳು.. ಇವೆರಡರ ಹಿಂದೆ ಇದ್ದಿದ್ದು ಬಂಗಾಳದ “ಅನುಶೀಲನ ಸಮಿತಿ” ಹಾಗು “ಯುಗಾಂತರ ಸಮಿತಿ”ಯ ಕ್ರಾಂತಿಕಾರಿಗಳು, ಹಾಗು ಈ ಕ್ರಾಂತಿಕಾರಿಗಳನ್ನ ಪ್ರೆರೆಪಿಸಿದವ್ರು, ಮಹಾನ್ ರಾಷ್ಟ್ರವಾದಿ ( ನಾನಂತೂ ಅವರನ್ನ ‘ಮಹರ್ಷಿ’ ಅಂತಾನೆ ಕರೆಯೋದು ) ಶ್ರೀ ಅರವಿಂದ್ ಘೋಷ್…. ಈ ಎರಡು ಪ್ರಕರಣಗಳಾದ ಮೇಲೆ ಬ್ರಿಟಿಷರು ಎಚ್ಚೆತ್ತು ತನಿಖೆ ಶುರು ಮಾಡಿದ್ರು.. ಎರಡರಲ್ಲಿಯೂ ಬಳಸಲಾದ ಬಾಂಬ್ ಗಳು ಒಂದೇ ಥರದ್ದು ಅಂತ ಗೊತ್ತಾಯ್ತು. ಹೀಗಾಗಿ ಅನುಶೀಲನ ಸಮಿತಿ ಹಾಗು ಯುಗಾಂತರದ ಕೆಲವು ಕ್ರಾಂತಿಕಾರಿಗಳನ್ನ ಬಂಧಿಸಲಾಯ್ತು. ಜೊತೆಗೆ ಇವರೆಲ್ಲರ ಹಿಂದೆ ಇರೋರು ಅರವಿಂದ ಘೋಶರೆ ಅಂತ ಅಪಾದನೆ ಹೊರಿಸಿ ಅವರನ್ನೂ ಜೈಲಿಗೆ ಕಳಿಸಿದರು..ಇದು ಕ್ರಾಂತಿಕಾರಿಗಳಲ್ಲಿ ಬೇಸರ ಹಾಗು ಆಕ್ರೋಶವನ್ನ ಮೂಡಿಸ್ತು..
ಕೋರ್ಟ್ ನಲ್ಲಿ ವಿಚಾರಣೆ ಆರಂಭವಾಯ್ತು. ಬ್ರಿಟಿಷರು ಎಂದಿನಂತೆ ಕ್ರಾಂತಿಕಾರಿಗಳಿಗೆ ಚಿತ್ರಹಿಂಸೆ ಕೊಟ್ಟು ಬಾಯಿಬಿಡಿಸೋದಕ್ಕೆ ಪ್ರಯತ್ನಿಸಿದರು.. ಅದಕ್ಕೆ ಹೆದರಿ, ಬ್ರಿಟಿಷರ ಆಮಿಷಕ್ಕೆ ಸೋತು, ‘ನರೇನ್ ಗೋಸ್ವಾಮಿ’ ಅನ್ನೋನು approver ಆಗ್ಬಿಟ್ಟ.. ಭಾರತದ ಇತಿಹಾಸದುದ್ದಕ್ಕೂ ದೇಶಭಕ್ತರಷ್ಟೇ, ದೇಶದ್ರೋಹಿಗಳೂ ಇದಾರೆ..!!!
ಇತ್ತ ಕೋರ್ಟ್ ನಲ್ಲಿ ನರೇನ್ ಎಲ್ಲರ ವಿರುದ್ಧ ಸಾಕ್ಷಿ ಹೇಳೋದಕ್ಕೆ ಶುರು ಮಾಡಿದ. ಅಷ್ಟೇ ಆಗಿದ್ರೆ ಸುಮ್ನಿರ್ತಿದ್ರೆನೋ.. ಆದ್ರೆ ನರೇನ್, ಅರವಿಂದ ಘೋಷ್ ವಿರುದ್ಧನೂ ಸಾಕ್ಷಿ ಹೇಳೋದಕ್ಕೆ ತಯಾರಾದ.ಅಲ್ಲಿಗೆ ಕ್ರಾಂತಿಕಾರಗಳ ಸಿಟ್ಟು ಮಿತಿ ಮೀರಿತು..ಜೈಲಿನ ಒಳಗಿದ್ದ ‘ಸತ್ಯೇಂದ್ರನಾಥ್’ ಹಾಗು ಅವನ ಗೆಳೆಯ ‘ಕನ್ನಯ್ಯಲಾಲ್ ದತ್ತ’ ಇಬ್ರೂ ಸೇರಿ ಆ ದ್ರೋಹಿ ನರೇನ್ ಸಂಹಾರಕ್ಕೆ ಪ್ಲಾನ್ ಹಾಕಿದರು…






