ಯಾರಿಗೆ ಬಂತು ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ
– ಪವನ್ ಪರುಪತ್ತೆದಾರ್
ಮೊದಲಿಗೆ ನಿಲುಮೆಯ ಎಲ್ಲ ಓದುಗರಿಗೆ ಸ್ವಾತಂತ್ರ್ಯದಿನದ ಶುಭಾಶಯಗಳು. ೬೫ ನೆ ಸ್ವತಂತ್ರ ದಿನದ ಆಚರಣೆ ಎಲ್ಲ ಕಡೆ ಭರ್ಜರಿಯಿಂದ ಸಾಗಲಿ ಎಂದು ಆಶಿಸೋಣ. ೧೯೪೭ ಆಗಸ್ಟ್ ೧೫ ರಂದು ಸ್ವಾತಂತ್ರ್ಯ ಸಿಕ್ಕಿದ ವಿಷಯ ನಮಗೆಲ್ಲ ತಿಳಿದಿದ್ದೆ. ಇಂದು ನಮಗೆ ಅ ಸ್ವಾತಂತ್ರ್ಯ ಎಷ್ಟರ ಮಟ್ಟಿಗೆ ಸಿಕ್ಕಿದೆಯೆಂದರೆ ನಮ್ಮ ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸುವ ಮಟ್ಟಿಗೆ ಸಿಕ್ಕಿದೆ. ನಾ ಬೇಕಾದರೆ ಬಾಜಿ ಕಟ್ಟುತ್ತೇನೆ ನಾಳಿನ ಪೇಪರ್ ನೋಡಿ ನಮ್ಮ ರಾಜ್ಯದಲ್ಲೇ ಒಂದೆರಡು ಕಡೆಯಾದರು ಧ್ವಜವನ್ನು ಉಲ್ಟಾ ಹಾರಿಸಿರುತ್ತಾರೆ. ಬ್ರಿಟಿಷರ ದಬ್ಬಾಳಿಕೆ ಹದ್ದು ಮೀರಿದಾಗ ಹಿಂಸೆಯ ನಾನಾ ಮಾರ್ಗಗಳು ಪ್ರಯೋಗಿಸಿ ಹುತಾತ್ಮರಾದವರು, ನಂತರ ದೇಶವನ್ನೆಲ್ಲ ಒಟ್ಟಿಗೆ ಸಂಘಟಿಸಿ ಅಹಿಂಸೆಯಿಂದ ಮಾತ್ರ ನಮಗೆ ಸ್ವಾತಂತ್ರ್ಯ ಸಾಧ್ಯ ಎಂದು ತೋರಿಸಿಕೊಟ್ಟು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ ಮಹಾತ್ಮರು, ನಮ್ಮ ಈಗಿನ ಸ್ವಾತಂತ್ರ್ಯವನ್ನೇನಾದರು ನೋಡಿದ್ದರೆ, ಇವರಿಗೆ ಯಾಕಾದ್ರು ಸ್ವಾತಂತ್ರ್ಯ ಕೊಡಿಸಿದೆವೋ ಎಂದು ಮರುಗುತಿದ್ದರೆನೋ…..
ನನ್ನ ಮಾತುಗಳು ಅತಿಶಯೋಕ್ತಿ ಎನಿಸಬಹುದು. ಆದರೆ ನಮ್ಮ ದೇಶದಲ್ಲಿ ಎಲ್ಲರಿಗು ಎಷ್ಟು ಸ್ವಾತಂತ್ರ್ಯವಿದೆ ಅಂತ ನಿಮಗೆ ಗೊತ್ತು. ಟ್ರಾಫಿಕ್ ಪೋಲಿಸ್ ಡಾಕುಮೆಂಟ್ ಸರಿ ಇದ್ದರು ಲಂಚ ಪಡೆಯುವ ಸ್ವಾತಂತ್ರ್ಯ, ಖಾತೆ ಬದಲಾವಣೆ ಮಾಡಿಸಬೇಕಾದರೆ ಪತ್ರ ಸ್ಕಾನ್ನಿಂಗ್ ಮಾಡುವನಿಂದ ಹಿಡಿದು, ಮೊಹರು ಹಾಕುವ ಗುಮಸ್ತನಿಂದ ಹಿಡಿದು, revinue inspector ತನಕ ಲಂಚ ಪಡೆಯುವ ಸ್ವಾತಂತ್ರ್ಯ. ಗೆದ್ದೊಡನೆ ತಮ್ಮ ಕ್ಷೇತ್ರದ ಜನತೆಯನ್ನು ಮರೆತು ರೆಸಾರ್ಟ್ ಗಳಲ್ಲಿ ವಾಸ್ತವ್ಯ ಹೂಡುವ ಸ್ವಾತಂತ್ರ್ಯ, ಪಕ್ಷದ ತತ್ವ ಸಿದ್ಧಾಂತಗಳನ್ನು ಮರೆತು ಪಕ್ಷಾಂತರ ಮಾಡುವ ಸ್ವಾತಂತ್ರ್ಯ, ರೈತನ ಜಮೀನನ್ನು ಕಸಿದು ಅಧುನಿಕರಣದ ಹೆಸರಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುವ ಸ್ವಾತಂತ್ರ್ಯ, ನಮ್ಮ ಭೂಮಿಯ ಸಂಪತ್ತಲ್ಲದೆ ಅಂತರಂಗದಲ್ಲಿರುವ ತರಂಗಾಂತರಗಳನ್ನು ಮೋಸದಿಂದ ಮಾರುವ ಸ್ವಾತಂತ್ರ್ಯ, ಇನ್ನು ತಮಾಷೆಯೆಂದರೆ ತಪ್ಪು ಮಾಡಿ ದುಷ್ಕ್ರುತ್ಯಗಳನ್ನೆಸಗಿ ವಾರ್ಷಿಕ ೧೧ ಕೋಟಿ ಹಣವನ್ನು ಸರ್ಕಾರದಿಂದ ಖರ್ಚು ಮಾಡಿಸಿಕೊಳ್ಳೋ ಸ್ವಾತಂತ್ರ್ಯ ಮತ್ತು ತಪ್ಪಿತಸ್ತ ಎಂದು ಖಾತರಿಯಾದ ಮೇಲು ಶಿಕ್ಷೆ ಇಲ್ಲದೆ ಐಶಾರಾಮಿ ಜೀವನ ನಡೆಸುವ ಸ್ವಾತಂತ್ರ್ಯ, ಇಂತಹದ್ದೆನ್ನಲ್ಲ ವಿರೋಧಿಸಿದರೆ ವಿರೋಧಿಸಿದವರ ವಿರುದ್ದವೇ ಕೇಸು ಜಡಿಯುವ ಸ್ವಾತಂತ್ರ್ಯ.ಆಹಾ ಹೇಳುತ್ತಾ ಹೋದರೆ ಪುಟಗಟ್ಟಲೆ ಇಂತಹ ಸ್ವಾತಂತ್ರ್ಯಗಳು ಸಿಗುತ್ತವೆ.
ಕಾಸರಗೋಡಿನ ಕನ್ನಡಿಗರ ತ್ಯಾಗ ಮತ್ತು ಬಲಿದಾನಗಳನ್ನು ಕರ್ನಾಟಕ ಮರೆತಿದೆಯೇ..!?
– ಕುಮಾರ ರೈತ
“ಕಾಸರಗೋಡು, ಕರ್ನಾಟಕದ ಕನ್ಯಾಕುಮಾರಿ. ಉತ್ತರದಲ್ಲಿ ಬೆಳಗಾವಿ, ಬಳ್ಳಾರಿಗಳಂತೆ ದಕ್ಷಿಣ ಕನ್ನಡದಲ್ಲಿ ನಮ್ಮದು ಕರ್ನಾಟಕದ ಕನ್ಯಾಕುಮಾರಿ. ಕನ್ನಡನಾಡಿನ ಈ ತೆಂಕಣ ಬಾಗಿಲನ್ನು ತೆರೆದಿಟ್ಟು ಕನ್ನಡಿಗರು ಎಚ್ಚರತಪ್ಪಿ ನಿದ್ರೆ ಹೋದುದ್ದೇ ಆದರೆ ನಮ್ಮ ಜನರಿಗೂ, ನಮ್ಮ ನಾಡಿಗೂ ಅಮೂಲ್ಯವಾದ ಕನ್ನಡ ಸಂಸ್ಕೃತಿಗೂ ಪ್ರಮಾದ ಒದಗುವುದರಲ್ಲಿ ಸಂಶಯವಿಲ್ಲ. ವಿಶಾಲ ಕೇರಳ ಚಳವಳಿಯು ಆರಂಭವಾಗಿ ಹತ್ತು ವರ್ಷಗಳು ಸಂದುಹೋದವು. ದಕ್ಷಿಣ ಕನ್ನಡ, ಕೊಡಗು, ನೀಲಗಿರಿ ಜಿಲ್ಲೆಗಳು ಮಲಬಾರಿನೊಂದಿಗೆ ಜತೆಗೊಂಡು ಕೇರಳ ಸಂಸ್ಥಾನ ಅಥವಾ ಪಶ್ಚಿಮ ಪ್ರಾಂತ ಸಂಸ್ಥಾನವೊಂದು ನಿರ್ಮಾಣವಾಗಬೇಕೆಂದು ಈ ಚಳವಳಿಯು ಪ್ರಬಲವಾಗುತ್ತಾ ನಡೆದಿದೆ. ಈ ಚಳವಳಿಯ ಮರ್ಮವನ್ನು ತಿಳಿದುಕೊಂಡು ಕನ್ನಡಿಗರು ಅದನ್ನು ಸಕಾಲದಲ್ಲಿಯೇ ಪ್ರತಿಭಟಿಸದೇ ಹೋದರೆ ಸ್ವಲ್ಪಕಾಲದೊಳಗಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಕಾಸರಗೋಡಾದರೂ ಮಲಬಾರಿನವರ ಮಡಿಲಿಗೆ ಬೀಳಬೇಕಾಗಬಹುದು”
ಭಾಷಾವಾರು ಪ್ರಾಂತ್ಯ ರಚನೆಯಾಗುವುದಕ್ಕೂ ಒಂಭತ್ತು ವರ್ಷಗಳಿಗೂ ಮೊದಲೇ ಶ್ರೀಧರ ಕಕ್ಕಿಲಾಯರು ಹೇಳಿದ್ದ ಖಚಿತ ಅಭಿಪ್ರಾಯವಿದು. ಇವರು ಕಾಸರಗೋಡಿನ ಸುಪ್ರಸಿದ್ಧ ವಕೀಲರಾಗಿದ್ದರು. ಕಾಸರಗೋಡನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಲು ಸತತ ೨೫ ವರ್ಷ ಹೋರಾಟ ಮಾಡಿದರು. ಅವರ ಜೀವಿತಾವಧಿಯವರೆಗೂ ಈ ಹೋರಾಟದಲ್ಲಿ ಸಕ್ರಿಯರಾಗಿದ್ದರು. ೧೯೪೭ರ ಡಿಸೆಂಬರ್ನಲ್ಲಿ ಕಾಸರಗೋಡಿನ ಬೋರ್ಡ್ ಹೈಸ್ಲೂಲ್ ಆವರಣದಲ್ಲಿ ೩೧ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆತು. ಈ ಸಂದರ್ಭದಲ್ಲಿ ಹೊರಬಂದ ಸ್ಮರಣ ಸಂಚಿಕೆ ‘ತೆಂಕುನಾಡು’ ಸ್ಮರಣ ಸಂಚಿಕೆಯಲ್ಲಿ ಶ್ರೀಧರ ಕಕ್ಕಿಲಾಯರ ಈ ಲೇಖನ ಪ್ರಕಟವಾಯಿತು. ಅದರ ಶೀರ್ಷಿಕೆ ‘ಕನ್ನಡ-ಮಲೆಯಾಳ ಸಮಸ್ಯೆ’
ಇದನ್ನೆಲ್ಲ ಪ್ರಸ್ತಾಪಿಸಲು ಕಾರಣವಿದೆ. ಕಾಸರಗೋಡಿಗೆ ಹೋದಾಗಲೆಲ್ಲ ನಾನು ಭೇಟಿ ಕೊಡುವ ಖಾಯಂ ಸ್ಥಳಗಳ ಸಾಲಿನಲಿಬೇಕಲ್ ಕೋಟೆ ಸೇರಿದೆ. ಇಲ್ಲಿ ಪ್ರಾಣದೇವರ ಗುಡಿಯಿದೆ. ಹೊರಭಾಗದಲ್ಲಿ ಗುಡಿ ಹೆಸರನ್ನು ಕನ್ನಡದಲ್ಲಿ ಬರೆಯಲಾಗಿದೆ. ಬೇಕಲ್ ಕೋಟೆ ನಿರ್ಮಾಣ ಮಾಡಿದ್ದು ಕನ್ನಡಿಗ ರಾಮನಾಯಕ. (ಟಿಪ್ಪು ಸುಲ್ತಾನ್ ಸೈನ್ಯದ ದಂಡನಾಯಕ ( ಮೂಲತಃ ಬೇಕಲ್ ಕೋಟೆ ಕನ್ನಡ ಪ್ರದೇಶ. ಇದಕ್ಕೆ ಅನೇಕ ಕುರುಹುಗಳಿವೆ. ಕೋಟೆ ಇರುವ ಊರಿನ ಹೆಸರು ‘ಅಗಸರ ಹೊಳೆ. ಈ ಎರಡೂ ಪದಗಳು ಅಚ್ಚಗನ್ನಡ.
ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ…!?
– ಕುಮಾರ ರೈತ
ಶೀರ್ಷಿಕೆ ಓದಿದಾಗ ಆಶ್ವರ್ಯ-ಪ್ರಶ್ನಾರ್ಥಕ ಭಾವಗಳು ಮೂಡುವುದು ಸಹಜ. ಆದರೆ ‘ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ ಎನ್ನುವುದು ಅಕ್ಷರಶಃ ಸತ್ಯ. ಗಡಿ ಅಂಚಿನ ಕಾಸರಗೋಡಿನಿಂದ ಕನ್ನಡಕ್ಕೆ ಸ್ಥಾನವೇ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಆ ಸರಕಾರ ನಾನಾ ಬಗೆಯ ತಂತ್ರಗಾರಿಕೆಯನ್ನು ಮಾಡುತ್ತಲೇ ಬಂದಿದೆ. ಭಾಷಾವಾರು ಪ್ರಾಂತ್ಯ ರಚನೆಯಾಗಿ 54 ವರ್ಷ ಸಂದರೂ ಕಾಸರಗೋಡಿನಲ್ಲಿ ಕನ್ನಡ ಉಳಿದಿರುವುದನ್ನು ಕಂಡು ಈ ಬಾರಿ ಪ್ರಬಲ ಅಸ್ತ್ತ ಪ್ರಯೋಗಿಸಿದೆ. ಇದಕ್ಕೆ ತಕ್ಕ ಪ್ರತ್ಯಸ್ತ್ರ ಹೂಡದೇ ಇದ್ದರೆ ಸಂಭವಿಸುವ ಅಪಾಯಗಳು ಅನೇಕ. ಅವುಗಳೇನು…..?
ದಕ್ಷಿಣ ಸುಡಾನ್ ಈಗ ಸ್ವತಂತ್ರ
– ಗೋವಿಂದ ಭಟ್
ಸೈಕಲು ಪ್ರವಾಸದಲ್ಲಿ ನಾನು ಕೆನ್ಯಾ ರಾಜದಾನಿ ನೈರೋಬಿಗೆ ಹಾರುವುದು. ಅನಂತರ ಉಗಂಡಾ, ಸುಡಾನ್ ದಾರಿಯಾಗಿ ಈಜಿಪ್ಟ್ ತಲಪುವುದು ನನ್ನ ಗುರಿಯಾಗಿತ್ತು. ಬಹು ಪಾಲು ರಸ್ತೆ ಇಲ್ಲದ ಕಾರಣ ಜುಬಾ ಪಟ್ಟಣದಿಂದ ನೈಲ್ ನದಿಯ ದೋಣಿಯಲ್ಲಿ ಉತ್ತರಕ್ಕೆ ಸಾಗುವುದು ನನ್ನ ಆಲೋಚನೆಯಾಗಿತ್ತು. ನನ್ನ ಉದ್ದೇಶಿತ ಹಾದಿಯಲ್ಲಿ ಬಹು ಕಾಲದಿಂದ ಅಂದರೆ ಅಂದಿಗೆ ಮೂವತ್ತು ವರ್ಷದಿಂದ ಜನಾಂಗಿಯ ಕಲಹ ನಡೆಯುತ್ತಿದ್ದರೂ ಹಲವು ಪ್ರವಾಸಿಗರು ದೋಣಿಯಲ್ಲಿ ದಾಟುವುದರಲ್ಲಿ ಸಫಲರಾಗಿದ್ದರು. ಅಲ್ಲಿನ ಒಂದು ದೋಣಿಯ ಚಿತ್ರ ಇಲ್ಲಿದೆ. ನನ್ನ ಜರ್ಮನಿಯ ಸೈಕಲು ಗೆಳೆಯ ಫ್ರೆಡ್ ಪೋಲ್ ೧೯೬೪ ರಲ್ಲಿ ಇಲ್ಲೆ ದಾಟಿದ್ದರು. ಅದಕ್ಕೆ ನಾನು ಸಾಕಷ್ಟು ತಯಾರಿ ನಡೆಸಿದ್ದೆ.
ಆದರೆ ಕೆನ್ಯಾ ತಲಪುವಾಗ ಪರೀಸ್ಥಿತಿ ಕಠೀಣವಾಗಿರುವುದು ಅರಿವಾಯಿತು. ನನ್ನ ದಾರಿಯಲ್ಲಿದ್ದ ಉಗಂಡಾ ಹಾಗೂ ಸುಡಾನ್ ಅಂತರ್ಯುದ್ದ ಬರ್ಜರಿಯಾಗಿ ನಡೆಯುತ್ತಿದ್ದರೆ ಉತ್ತರದ ಇತಿಯೋಪಿಯ ಸಹಾ ದಾರಿ ಬಿಡುತ್ತಿರಲಿಲ್ಲ. ಹಾಗಾಗಿ ನನ್ನ ಯೋಜನೆಗಳೆಲ್ಲ ತಲೆಕೆಳಗಾಗಿ ಯುರೋಪಿನಿಂದ ಹಿಂತಿರುಗುವ ಬದಲು ಅಮೇರಿಕವನ್ನು ಹಾದು ಜಗತ್ತು ಪೂರ್ತಿ ಸುತ್ತು ಬರಲು ತೀರ್ಮಾನಿಸಿದೆ.
ಸುಡಾನ್ ದೇಶದಲ್ಲಿ ಉತ್ತರದಲ್ಲಿ ಅರಬ್ ಮುಸ್ಲಿಮರ ಪ್ರಾಬಲ್ಯ. ಅದಿಕಾರವೆಲ್ಲ ಅವರ ಕೈಯಲ್ಲಿ ಕೇಂದ್ರಿತ. ದಕ್ಷಿಣದಲ್ಲಿ ವಾಸ್ತವ್ಯ ಇರುವುದು ಕರಿಯ ಕ್ರೈಸ್ತ ಅನುಯಾಯಿಗಳು. ಬ್ರೀಟಿಶರು ಸ್ವಾತಂತ್ರ ಕೊಡುವಾಗ ಈಜಿಪ್ಟ್ ಜತೆ ಒಪ್ಪಂದ ಮಾಡಿ ಒಂದು ಕಿತಾಪತಿ ಮಾಡಿದ್ದರು. ಈ ಕರಿ ಜನರೇ ಜೀವಿಸುವ ದಕ್ಷಿಣ ಸುಡಾನ್ ಪ್ರಾಂತ್ಯವನ್ನು ಪಕ್ಕದ ಕರಿಯ ಜನರಿರುವ ಕೆನ್ಯಾ ಉಗಂಡಾದಿಂದ ಬೇರ್ಪಡಿಸಿ ಬಹುಕಾಲ ಈಜಿಪ್ಟ್ ವಶವಾಗಿದ್ದ ಉತ್ತರ ಸುಡಾನ್ ಜತೆ ಸೇರಿಸಿಬಿಟ್ಟರು. ಚಿತ್ರದಲ್ಲಿ ಕಾಣುವಂತೆ ಉತ್ತರಬಾಗ ಮರುಭೂಮಿಯಾದರೆ ದಕ್ಷಿಣಬಾಗದಲ್ಲಿ ಹುಲ್ಲುಗಾವಲು ಹಾಗೂ ಕುರುಚಲು ಕಾಡು. ಉತ್ತರದವರಿಂದ ಸತತವಾಗಿ ದಬ್ಬಾಳಿಕೆ, ಅನ್ಯಾಯ. ಶ್ರೀಲಂಕದಲ್ಲಿ ಇದ್ದಂತಹ ಪರಿಸ್ಥಿತಿ.
ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ ಏನೋ..!!
– ಕೆ.ಎಸ್ ರಾಘವೇಂದ್ರ ನಾವಡ
ನೀವು ಏನಾದ್ರೂ ಹೇಳಿ… ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ.. ಅ೦ಥ ಮತ್ತೊಮ್ರ್ ಪ್ರೂವ್ ಆಗಿ ಹೋಗಿದೆ. ನಮ್ಮ ದೇಶದಲ್ಲಿ ಕೆಲವರ ಹಣೆಬರಹವನ್ನು ಸುಲಭವಾಗಿ ನಿರ್ಧರಿಸಬಹುದು.. ಹಿ೦ದೆ ಹಾವೇರಿಯಲ್ಲಿ ರೈತರ ಮುಷ್ಕರಕ್ಕೆ ಯಡಿಯೂರಪ್ಪ ಗೋಲಿಬಾರ್ ಗೆ ಆದೇಶ ನೀಡುವುದರ ಮೂಲಕ ಅದಕ್ಕೊ೦ದು ಗತಿ ಕಾಣಿಸಿದರು! ಇ೦ದು ರಾಮ್ ದೇವ್ ಹಣೆಬರಹವನ್ನು ಕೇ೦ದ್ರ ಸರ್ಕಾರ ಈ ರೀತಿ ಬರೆಯಿತು!! ಒಟ್ಟಾರೆ ನಾವು ಬ್ರಿಟೀಶ್ ಸತ್ತೆಯ ಕಾಲಕ್ಕೆ ಹೋಗುತ್ತಿದ್ದೇವೇನೋ ಎ೦ಬುದು ನನ್ನ ಸ೦ಶಯ!!
ಭರತ ಭೂಮಿಯಲ್ಲಿ ಬ್ರಿಟೀಶ್ ಆಡಳಿತದಿ೦ದ ಮುಕ್ತರಾಗ ಬಯಸಿ ಸ್ವಾತ೦ತ್ರ್ಯದ ಕನಸು ಕ೦ಡು ಅದಕ್ಕಾಗಿ ಹೋರಾಡಿದವರು- ಶೋಷಿತ ವರ್ಗ – ತಮ್ಮ ಬೇಡಿಕೆಯನ್ನು ನ್ಯಾಯಬಧ್ಧವಾಗಿ ಕೇಳುವವರು- ಜನ ಕಲ್ಯಾಣಕ್ಕಾಗಿ ಹಾತೊರೆದು ಮುನ್ನುಗ್ಗುವವರು – ರಾಜಕೀಯ ವ್ಯವಸ್ಥೆಯನ್ನು ಸುಧಾರಿಸ ಬಯಸುವವರು ಮು೦ತಾದವರ ಹೋರಾಟದ ಅ೦ತ್ಯ ಹೀಗೇ!! ಸರಿ ಸುಮಾರು ಬ್ರಿಟೀಷರಿ೦ದ ಆರ೦ಭವಾದ ಈ ಪ್ರಜೆಗಳ ಧ್ವನಿಯನ್ನು ಅವರುಗಳ ಗ೦ಟಲನ್ನೇ ಹಿಸುಕುವ ಮೂಲಕ ,ಅವರ ಹೋರಾಟಕ್ಕೊ೦ದು ಅನೈತಿಕ ಅ೦ತ್ಯ ನೀಡುವ ಈ ಕ್ರಮ ದುರದೃಷ್ಟವಶಾತ್ ಇಲ್ಲಿಯವರೆವಿಗೂ ಮು೦ದುವರೆದಿದೆ!! ಹಾಗ೦ತ ಎಲ್ಲ ಹೋರಾಟಗಳೂ ಇದೇ ಅ೦ತ್ಯವನ್ನು ಕ೦ಡವೇ ಎ೦ದರೆ ಖಚಿತವಾದ ಉತ್ತರ ನೀಡಲಿಕ್ಕಾಗುವುದಿಲ್ಲ.. “ಕೆಲವು ಸಮಸ್ಯೆಗಳು ತಾವಾಗೇ ಸೃಷ್ಟಿಯಾದರೆ ಕೆಲವನ್ನು ನಾವೇ ಸೃಷ್ಟಿಸಿಕೊಳ್ಳುತ್ತೇವೆ“ ಎ೦ಬ ನಾವಡ ಉವಾಚವೊ೦ದಿದೆ.. ಅದರ ಪ್ರಕಾರ ಪ್ರಸಕ್ತ ಭರತಭೂಮಿಯಲ್ಲಿಯೂ ಏಕೆ ಸಮಸ್ತ ಜಗತ್ತಿನಲ್ಲಿಯೂ ಸರ್ಕಾರ ಗಳು ಹಾಗೂ ಜನತೆಗಳ ವಿಚಾರದಲ್ಲಿ ನಡೆಯುತ್ತಿರುವುದು ಇದೇ!!
ರಾಮದೇವ್,ಮೀಡಿಯಾ ಮತ್ತು ಸಂಪಾದಕೀಯ
– ಮಹೇಶ ಪ್ರಸಾದ ನೀರ್ಕಜೆ
ಸಂಪಾದಕೀಯ ತಂಡ ಬರೆದ “ಸಂವಿಧಾನವನ್ನೇ ಒಪ್ಪದ ರಾಮದೇವ ಸತ್ಯಾಗ್ರಹಕ್ಕೆ ಇಳಿದಿದ್ದಾರೆ… ಜೈ ಹೋ! ” ಈ ಲೇಖನದ ಬಗ್ಗೆ ನನ್ನ ಕೆಲವು ಅನಿಸಿಕೆಗಳು. ಇವು ಒಟ್ಟಾರೆಯಾಗಿ ಮಾಧ್ಯಮಗಳ ಬೇಜವಾಬ್ದಾರಿತನದ ಬಗ್ಗೆ ನನ್ನ ಕೆಲವು ಟಿಪ್ಪಣಿಗಳು ಕೂಡ ಹೌದು. ಸದಾ ಮಾಧ್ಯಮದ ತಪ್ಪು ಒಪ್ಪುಗಳನ್ನು ಪ್ರಕಟಿಸುವ ತಂಡ ಅದರ ಜೊತೆಜೊತೆಗೆ ಬೇರೆ ಕೆಲವು ವಿಚಾರಗಳನ್ನು ಕೂಡ ಬರೆಯುತ್ತದೆ. ಅದರಲ್ಲೂ ವಿಶೇಷವಾಗಿ ಧಾರ್ಮಿಕ ಸಂಪ್ರದಾಯವಾದಿಗಳ ಬಗ್ಗೆ, ಮೂಢ ನಂಬಿಕೆಗಳ ಬಗ್ಗೆ ಸಾಕಷ್ಟು ಬರಹಗಳನ್ನು ಬರೆದಿದ್ದಾರೆ. ಅವರ ಕೆಲವು ಪ್ರಯತ್ನಗಳ ಬಗೆಗೆ ನನಗೆ ಹೆಮ್ಮೆಯಿದೆ. ಅದರಲ್ಲೂ ಜಿ ಕನ್ನಡ ವಾಹಿನಿಯಲ್ಲಿ ನಡೆಯುತ್ತಿದ್ದ ಬೃಹತ್ ಬ್ರಹ್ಮಾಂಡ ಕಾರ್ಯಕ್ರಮದ ಬಗೆಗಿನ ವಿರೋಧ ಎಲ್ಲರ ಗಮನ ಸೆಳೆದಿತ್ತು. ಆದರೆ ಮೊದಲಿನಿಂದಲೂ ಕೂಡ ನನಗೆ ಸಂಪಾದಕೀಯ ತಂಡದ ಬಗೆಗೆ ಕೆಲವು ಅನುಮಾನಗಳಿವೆ. ಮೊದಲನೆಯದಾಗಿ ತನ್ನ TRP ಹೆಚ್ಚಿಸಿ ಕೊಳ್ಳಲೋ ಎಂಬಂತೆ ಬ್ಲಾಗಿನಲ್ಲಿ ಎಲ್ಲೆಂದರಲ್ಲಿ ಅನಾಮಿಕ ಪ್ರತಿಕ್ರಿಯಗಳ ಮಹಾಪೂರ. ಈ ಪ್ರತಿಕ್ರಿಯೆಗಳನ್ನು ಯಾರು ಬರೆಯುತ್ತಾರೆ, ಅವರ ಪ್ರತಿಕ್ರಿಯೆಗಳಲ್ಲಿ ಏನಾದರು ಕುತ್ಸಿತ ಉದ್ದೇಶಗಳಿವೆಯೇ ಇತ್ಯಾದಿ ಪ್ರಶ್ನೆಗಳು ನನಗೆ ಮೊದಲಿನಿಂದಲೂ ಇವೆ. ಅಲ್ಲದೆ ಮೂಢ ನಂಬಿಕೆಯನ್ನು ವಿರೋಧಿಸುವ ನೆಪದಲ್ಲಿ ಎಲ್ಲಾ ಅಧ್ಯಾತ್ಮಿಕ ವ್ಯಕ್ತಿಗಳನ್ನು ಟೀಕಿಸುವ ಹುನ್ನಾರವೋ ಎಂದು ಕೂಡ ಸಂಶಯವಿದೆ. ಆದರೆ ಕೆಲವು ಬರಹಗಳಲ್ಲಿ ಉತ್ತಮ ಅಧ್ಯಾತ್ಮಿಕ ಮೌಲ್ಯಗಳನ್ನು ಅದರಲ್ಲೂ ವಿವೇಕಾನಂದ, ಬುಧ್ಧ ಗಾಂಧೀಜಿ ಬಗ್ಗೆ ಬರೆದಿದ್ದೂ ಹೌದು. ಒಟ್ಟಿನಲ್ಲಿ ನನ್ನ ಮಟ್ಟಿಗೆ ಸಂಪಾದಕೀಯ ವಿರೋಧಾಭಾಸಗಳ ಗೂಡು. ಇರಲಿ, ಈಗ ಪ್ರಸ್ತುತ ಲೇಖನದ ಬಗ್ಗೆ ಹೇಳುವುದಾದರೆ ನನ್ನ ಪ್ರಕಾರ ಇದರಲ್ಲಿ ಹಲವಾರು ತಪ್ಪುಗ್ರಹಿಕೆಗಳು, ಮತ್ತು ತಪ್ಪು ಮಾಹಿತಿಗಳು ಕಾಣಸಿಗುತ್ತವೆ. ಅವುಗಳನ್ನು ಪಟ್ಟಿ ಮಾಡಿ, ನಿಜ ಸಂಗತಿಯನ್ನು ಹೊರಗೆಡಹುವ ಒಂದು ಪ್ರಯತ್ನ ಇದು.
ಬಸವನ ಗುಡಿಯಲ್ಲಿ ‘ಕರಪ್ಷನ್ ಸಾಕು’ ಆ೦ದೋಲನ. ನಾ ಕ೦ಡ೦ತೆ
– ಹರೀಶ್ ಆತ್ರೇಯ
ಕಿರಣ್ ಬೇಡಿ ಸ್ವಾಮಿ ಅಗ್ನಿವೇಶ್ ರ ಪ್ರಚೋದಕನಕಾರಿ ಭಾಷಣ, ಶ್ರೀ ಬಾಲಸುಬ್ರಹ್ಮಣ್ಯ೦ ರ ನಿರೂಪಣೆ ಮತ್ತು ಗಣ್ಯರ ಭಾಷಣದ ಅನುವಾದ, ಅರವಿ೦ದ್ ಖೇಜ್ರಿವಾಲರ ಜನಲೋಕಪಾಲ್ ಕಾನೂನು ಪಾಠ, ಕೆಲ ಕಾರ್ಯತಕರ್ತರ ಉತ್ಸಾಹ, ನೈಜ ಕಾಳಜಿ. ಇನ್ನೂ ಕೆಲವರ ಶೋ, ವಾಲ೦ಟೀರ್ ಟೀ ಶರ್ಟ್ ಮೇಲೆ ಎಲ್ಲರ ಕಣ್ಣು, ಮಾಸ್ಟರ್ ಹಿರಣ್ಣಯ್ಯರನವರ ಅನುಭವದ ಮಾತು, ಅಣ್ಣಾ ಹಜಾರೆಯವರ ಮುಗ್ಧ ನುಡಿಗಳು, ರಾಜಕಾರಣಿಗಳ/ ಸರ್ಕಾರಿ ಅಧಿಕಾರಿಗಳ ಮೋಸದಿ೦ದ ಬೇಸತ್ತ ಜನರ ಹತಾಶ ನುಡಿಗಳು, ಜೈಕಾರ, ಗಲೀ ಗಲೀಮೆ ಶೋರ್ ಹೈ ಸಾರೆ ನೇತ ಚೋರ್ ಹೈ ಎನ್ನುವ ಘೋಷಣೆಗಳು, ಇನ್ನೂ ಕೆಲವರಿಗೆ ಇಲ್ಲೇನ್ ನಡೀತಿದೆ ಅ೦ತ್ಲೇ ಗೊತ್ತಿಲ್ದೆ ಇರೋ ಅಮಾಯಕತೆ (?) ಇದೆಲ್ಲರ ನಡುವೆ ನಮ್ ಯಡ್ಯೂರಪ್ಪನವರ ಪರ ಅದ್ಯಾರೋ ನರಸಿ೦ಹ (ಮು. ಮುಖ್ಯಮ೦ತ್ರಿ) ಎ೦ಬುವವನ ಪ್ರಚಾರ, ಸ್ವರಾತ್ಮ ತ೦ಡದ ಪಾಪ್ ರೀತಿಯ ಸ೦ಗೀತ ಅದಕ್ಕೆ ಜನರು ತಲೆದೂಗಿದ್ದು, ಇವು ನಿನ್ನೆಯ ಆ೦ದೋಲನದ ಹೈಲೈಟ್.
ಹನ್ನೊ೦ದು ಗ೦ಟೆಯಿ೦ದ ೨:೫೦ರ ತನಕ ಕಾರ್ಯಕರ್ತರ ಜನಗಳ ಮತ್ತು ಅಲ್ಲಿ ಆಡುತ್ತಿದ್ದ ಯುವಕರ ಮುಖಗಳನ್ನು ಗಮನಿಸುತ್ತಾ ಬ೦ದೆ. ಅಣ್ಣಾ ಹಜಾರೆಯವ್ರು ಬ೦ದದ್ದು ೨:೫೦ ಕ್ಕೆ. ಅಲ್ಲಿಯವರೆಗೂ ಒ೦ದೆರಡು ಬಾರಿ ಸ್ಟೇಜಿನ ಹತ್ರ ಸುತ್ತ ಮುತ್ತ ಓಡಾಡ್ತಾ ಎಲ್ಲರ ಅಭಿಪ್ರಾಯಗಳನ್ನ ಸ೦ಗ್ರಹಿಸುತ್ತಾ ನಿ೦ತೆ. ಕಾರ್ಯಕರ್ತನೊಬ್ಬ “ನೀವು ವಾಲ೦ಟೀರಾ”? ಅ೦ತ ಕೇಳಿದ “ಅಲ್ಲಪ್ಪ” ಅ೦ದೆ “ಹೀಗೆಲ್ಲಾ ಓಡಾಡ್ಬೇಡಿ ಸರ್ ಬಾ೦ಬ್ ಥ್ರೆಟ್ ಇದೆ “ಅ೦ದ ಆಯ್ತಣ್ಣ ಅ೦ತ ಒ೦ಕಡೆ ಕೂತು ಅವರ ಕೆಲ್ಸಾನ ಗಮನಿಸುತ್ತಾ ಬ೦ದೆ. ಮನೇಲಿ ಇರಕ್ಕೆ ಬೋರ್ ಆಗಿ ನಾವೂ ಟಿ ವೀಲಿ ಕಾಣ್ತೀವಲ್ಲ ಅ೦ತ ಯೋಚಿಸ್ಕೊ೦ಡ್ ಬ೦ದು ಟೈಟ್ಸ್, ಅರೆ ತೋಳಿನ ಟಾಪ್ (ಇನ್ನೂ ಕೆಲವರು ಬನೀನ್ ಥರದ್ದು, ಬೇಡ ಬಿಡಿ) ಹಾಕ್ಕೊ೦ಡ್ “ಹೇ ಇಟ್ಸ್ ವೆರಿ ಫನ್ನಿ ಯೋ ನೋ, ಐ ಅಯಾಮ್ ಆಲ್ಸೋ ಎ ವಾಲ೦ಟೀರ್ ಹಿಯರ್, ಇಲ್ಲಿ ಸಕ್ಕತ್ತಾಗಿದೆ, ಐ ವಾನ ವೇರ್ ದಿಸ್ ಟಿ ಶರ್ಟ್, ಹ್ಮ್ ಲೆಟ್ಸ್ ಗೋ ಇನ್ ಸೈಡ್ ದಿ ವಾನ್ ” ಅ೦ತ ಹೋದವರು ಅರ್ಧ ಗ೦ಟೆಯನ೦ತರ ಸರ್ವಾ೦ಗ ಸು೦ದರಿಯರಾಗಿ ಬ೦ದರು.
ಬದಲಾವಣೆ ಬಯಸುವುದಾದರೆ ಬಸವನಗುಡಿಗೆ ಬನ್ನಿ…
– ರಾಕೇಶ್ ಶೆಟ್ಟಿ
ಬಸವನಗುಡಿಗೆ ಬಂದ ತಕ್ಷಣ ಬದಲಾವಣೆಯಾಗುತ್ತಾ? ಅನ್ನುವ ಪ್ರಶ್ನೆ ನಿಮ್ಮದಾದರೆ ನನ್ನ ಉತ್ತರ ’ಇಲ್ಲ’! ಅಂತಲೇ. ಭ್ರಷ್ಟಚಾರ ಅನ್ನುವ ಬ್ರಹ್ಮ ರಾಕ್ಷಸನ ವಿರುದ್ಧ ಅಣ್ಣ ಹಜ಼ಾರೆ ನೇತೃತ್ವದಲ್ಲಿ ಶುರುವಾಗಿರುವ ಈ ಹೋರಾಟವೇ ಅಂತಿಮವಲ್ಲ.ಇದು ಆರಂಭವಷ್ಟೆ ಅನ್ನುವುದು ನನ್ನ ಅಭಿಪ್ರಾಯ.
ಅಂತಿಮವಾಗುವುದಾದರೂ ಹೇಗೆ ಹೇಳಿ, ಭ್ರಷ್ಟಚಾರ ಅಂದಾಕ್ಷಣ ಎಲ್ಲರ ಕಣ್ಣು ಮೊದಲು ಬೀಳುವುದೂ ಕಳ್ಳ(ಎಲ್ಲ ಅಲ್ಲ) ರಾಜಕಾರಣಿಗಳ ಮೇಲೆ,ಆಮೇಲೆ ಸರ್ಕಾರಿ ಕಛೇರಿ ಮತ್ತು ಅಧಿಕಾರಿಗಳ ಮೇಲೆ.ತಪ್ಪೇನಿಲ್ಲ ಬಿಡಿ…! ಭ್ರಷ್ಟಚಾರ ಅನ್ನೋ ಪಿರಮಿಡ್ನ ತುತ್ತ ತುದಿಯಲ್ಲಿರೋ ಅವರ ಮೇಲೆ ಎಲ್ಲರ ಕಣ್ಣು ಬೀಳುವುದು ಸಹಜ.ಆದರೆ, ’ನಾವುಗಳೆಷ್ಟು ಸಾಚಾ?’ ಅಂತ ನಮ್ಮನ್ನೇ ನಾವ್ಯಾವತ್ತಾದರೂ ಕೇಳಿಕೊಂಡಿದ್ದೇವೆಯೇ?







