ಕುರುಕ್ಷೇತ್ರದ ಯುದ್ಧಕ್ಕೆ ಕೃಷ್ಣನೇ ಸರಿ ಅಣ್ಣಾ !
– ರಾಕೇಶ್ ಶೆಟ್ಟಿ
ಕುಂಭಕರ್ಣ ನಿದ್ದೆಯಿಂದ ಎದ್ದ ಭಾರತವನ್ನ ಮತ್ತೆ ನಿದ್ದೆಗೆ ದೂಡಲಾಗುತ್ತಿದೆಯಾ? ಇಂತದ್ದೊಂದು ಪ್ರಶ್ನೆ ಕಾಡಲಾರಂಭಿಸಿದೆ.ಕೆಲವೆ ದಿನದ ಹಿಂದೆ ಅಣ್ಣಾ ಹಜ಼ಾರೆಯವರ ಉಪವಾಸ ಸತ್ಯಾಗ್ರಹದಿಂದ ನಿದ್ದೆಯಲ್ಲಿದ್ದ ಜನ (ಎಲ್ಲ ಜನ ಅಂತೇಳಲು ಸಾಧ್ಯವಿಲ್ಲ) ಎದ್ದು ಬಂದು, ಕಡೆಗೆ ಸೋನಿಯಾ ಮೇಡಂ ಅವರ ಯುಪಿಎ ಸರ್ಕಾರ ಅಣ್ಣನ ಮುಂದೆ ಮಂಡಿಯೂರಿ ಕುಳಿತಾಗಲೇ, ‘ಪಿಕ್ಚರ್ ಅಭಿ ಬಾಕಿ ಹೈ ಮೇರಿ ದೋಸ್ತ್’ ಅಂತ ಬಹುಷಃ ಬಹುತೇಕರಿಗೆ ಅನ್ನಿಸಿತ್ತು.ಅದನ್ನ ನಿಜ ಮಾಡಲೆಂಬಂತೆ ಜನಲೋಕಪಾಲ ಸಮಿತಿ ರಚನೆಯಾದ ಮರುದಿನವೇ ಕೇಂದ್ರ ಮಂತ್ರಿ ಕಪಿಲ್ ಸಿಬಲ್, ಖುದ್ದು ಸಮಿತಿಯ ಸದಸ್ಯರಾಗಿದ್ದೂ, ಸಮಿತಿಯ ಬಗ್ಗೆ ಕೊಂಕು ನುಡಿದು,ಕಡೆಗೆ ನಂಬಿಕೆಯಿಲ್ಲದಿದ್ದರೆ ತೊಲಗಿ ಅಂತ ಅಣ್ಣಾ ಗದರಿದ್ಮೇಲೆ ಯಥಾಪ್ರಕಾರ ರಾಜಕಾರಣಿಗಳ ಹೇಳಿಕೆಯಂತೆ ’ತಪ್ಪಾಗಿ ಅರ್ಥೈಸಲಾಗಿದೆ; ಅಂತೇಳಿ ತೇಪೆ ಹಾಕಿದ್ರು.ಮೊಯ್ಲಿ,ಮನೀಶ್ ತಿವಾರಿಯವ್ರು ಕೊಂಕಿಸಿದ್ದಾಯ್ತು.
ಬಹುಷಃ ಗಾಂಧೀಜಿ,ಜೆಪಿ ನಂತರ ಈ ಮಟ್ಟಕ್ಕೆ ಜನರನ್ನ ಸೆಳೆದಿದ್ದು ಅಣ್ಣಾ ಹಜ಼ಾರೆಯವರೇ ಇರಬೇಕು.ಅವರ ಈ ಪರಿಯ ಜನಪ್ರಿಯತೆ ಪುಡಿವೋಟಿಗಾಗಿ ದೇಶವನ್ನೆ ಬೇಕಾದರು ಮಾರಬಲ್ಲ (ಪುರುಲಿಯಾ ಶಸ್ತ್ರಾಸ್ತ್ರ ಕರ್ಮಕಾಂಡಕ್ಕಿಂತ ದೇಶವನ್ನ ಅಡ ಇಡುವ ಉದಾಹರಣೆ ಬೇಕಾ?) ಹಗಲು ವೇಷದ ರಾಜಕಾರಣಿಗಳ ಕಣ್ಣು ಕೆಂಪಗಾಗುವಂತೆ ಮಾಡಿದ್ದು ಸುಳ್ಳಲ್ಲ.ಸಾಲಾಗಿ ಎಲ್ಲ ಅಣ್ಣನ ವಿರುದ್ಧ ಸದ್ದಿಲ್ಲದೆ ಕೆಲಸ ಶುರು ಹಚ್ಚಿಕೊಂಡರು…!
ಅವರೆತ್ತರಕ್ಕೆ ಏರಲಾಗದಿದ್ದರೆ ತೆಪ್ಪಗಿರಿ…!
– ರಾಕೇಶ್ ಶೆಟ್ಟಿ
“ಇಂದಿನ ಪರಿಸ್ಥಿತಿಯಲ್ಲಿ ಮಹಾತ್ಮ ಗಾಂಧೀಜಿ ಅವರು ಇದ್ದಿದ್ದರೆ, ಅವರು ಕೂಡಾ ಭ್ರಷ್ಟರಾಗುತ್ತಿದ್ದರು. ರಾಜಕೀಯದಲ್ಲಿ ಉಳಿಯಬೇಕಾದರೆ ಭ್ರಷ್ಟರಾಗದೆ ಇರಲು ಸಾಧ್ಯವೇ ಇಲ್ಲ” ಇಂತ ಹೇಳಿಕೆ ಕೊಟ್ಟೊವ್ರು ಯಾರು ಅನ್ನೋದು ಎಲ್ರಿಗು ಗೊತ್ತಿದೆಯಲ್ವಾ? ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವ್ರು.ಒಂದ್ ಕಡೆ ದೇವೆಗೌಡ್ರು ಫೋಟೊ,ಇನ್ನೊಂದ್ ಕಡೆ ಇದೇ ಮಹಾತ್ಮನ ಫೋಟೊ ಹಾಕೊಂಡಿರೋ ಪಕ್ಷದ ರಾಜ್ಯಾಧ್ಯಕ್ಷರ ಬಾಯಿಯಲ್ಲಿ ಬಂದ ಮುತ್ತಿನಂತ ಮಾತುಗಳಿವು.
ಮುತ್ತುಗಳು ಬಿದ್ದಾಗ ಆರಿಸಿ ಮನೆಗ್ ತಗೊಂಡು ಹೋಗೊದು ರೂಢಿ,ಆದ್ರೆ ಕುಮಾರ ಸ್ವಾಮಿ ಅವ್ರ ಮುತ್ತನ್ನ ಹಿಡಿದು ಅವರಿಗೆ ಪೈಡ್ ಪೈಡ್ ಅಂತ ಎಲ್ಲ ಕಡೆಯಿಂದ ಬಾರಿಸುತಿದ್ದಾರೆ.ಬಾರಿಸದೆ ಬಿಡ್ಬೇಕಾ? ಒಂದು ಕಡೆ ಮಹಾತ್ಮರ ಹೋರಾಟದಿಂದ ಸ್ಪೂರ್ತಿ ಪಡೆದ ೭೬ ವರ್ಷದ ಅಣ್ಣಾ ಹಜಾರೆಯಂತವರು ಸತ್ತತಿಂಹರನ್ನ ಬಡಿದೆಬ್ಬಿಸಲು ಉಪವಾಸ ಕೂತರೆ,ಇನ್ನೊಂದು ಕಡೆ ಈ ಕುಮಾರಸ್ವಾಮಿ ಮಹಾತ್ಮರ ಬಗ್ಗೆ ಇಂತ ಮಾತನಾಡಲು ಹೊರಟಿದ್ದಾರೆ!
ಈ ಹೋರಾಟ ಗೆಲ್ಲಲೇಬೇಕು…!
– ಬನವಾಸಿ ಬಳಗ
ಕಿಸನ್ ಬಾಬುರಾವ್ ಹಜಾರೆ ಎಂಬ ಹೆಸರಿನ ಆ ಹಿರಿಯರು ಇವತ್ತಿನಿಂದ ಭ್ರಷ್ಟಾಚಾರದ ವಿರುದ್ಧದ ಒಂದು ದೊಡ್ಡ ಹೋರಾಟಕ್ಕೆ ಮುನ್ನುಡಿ ಹಾಡಿದ್ದಾರೆ. ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ರೆಲೆಗನ್ ಸಿದ್ಧಿ ಎಂಬ ಹಳ್ಳಿಯನ್ನು ಮಾದರಿ ಹಳ್ಳಿಯಾಗಿ ರೂಪಿಸಿ, ತನ್ನಿಡೀ ಬದುಕನ್ನೇ ಸಮಾಜಕ್ಕಾಗಿ ಮೀಸಲಿಟ್ಟ ಈ ಹಿರಿಯರು ದೆಹಲಿಯ ಜಂತರ್ ಮಂತರ್ ಬಳಿ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ.






