ಮಡೆಸ್ನಾನ ನಿಲ್ಲಬೇಕಾಗಿರುವುದು ಮಾನವೀಯತೆಗಾಗಿ,ಜಾತಿಗಾಗಿಯಲ್ಲ
– ರಾಕೇಶ್ ಶೆಟ್ಟಿ
ಇದನ್ನ ಈ ದೇಶದ ಕರ್ಮ ಅಂತಲೇ ಅನ್ನಬೇಕೇನೋ, ಅಂದುಕೊಂಡಂತೆ ‘ಮಡೆ ಸ್ನಾನ’ದ ‘ಮಡೆ'(ಮಡೆ=ಎಂಜಲು) ಉರುಳದವರ ಮೇಲೆಯೂ ಬೀಳುತ್ತಿದೆ.ಇಷ್ಟು ದಿನ ಉರುಳಾಡಿದ್ದು ಮನುಷ್ಯರಾದರೆ ಈಗ ಸಮಸ್ತ ಜಾತಿಗಳು ಬಿದ್ದು ಉರುಳಾಡುತ್ತಿವೆ.ಮಡೆ ಸ್ನಾನವನ್ನು ವಿರೋಧಿಸಿ ನಾನು ಈ ಹಿಂದೆ ಬರೆದ ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಲ್ಲಿ ‘ಅದು ಬ್ರಾಹ್ಮಣರ ಎಂಜಲೆಲೆ’ ಅನ್ನುವ ಕಾರಣಕ್ಕೆ ವಿರೋಧಿಸುತಿದ್ದಿರ ಅನ್ನುವಂತಹ ಪ್ರತಿಕ್ರಿಯೆಗಳು ಬ್ಲಾಗಿನಲ್ಲಿ/ಮಿಂಚೆಗಳ ಮೂಲಕ ಬಂದಿವೆ. ನನ್ನ ಲೇಖನದಲ್ಲೂ ಒಂದು ಮಾತನ್ನು ಸ್ಪಷ್ಟವಾಗಿ ಹೇಳಿದ್ದೆ, ಅದ್ಯಾವ ಜಾತಿಯವರು ತಿಂದು ಮತ್ತಿನ್ಯಾವಾ ಜಾತಿಯವ ಅದರ ಮೇಲೆ ಉರುಳಾಡುವುದು ಅಷ್ಟೇ ಅಸಹ್ಯಕರ’ ಅಂತ.
ಅಂದರೆ,ಅದು ಕುಕ್ಕೆಯ ಮಡೆ ಸ್ನಾನವಿರಲಿ ಅಥವಾ ತುರುವೇಕೆರೆಯ ಮಡೆಸ್ನಾನವಿರಲಿ ಎರಡೂ ಅಸಹ್ಯಕರವೇ, ಎರಡೂ ಖಂಡನೀಯವೇ.ಮಡೆ ಸ್ನಾನದ ಪರ-ವಿರೋಧ ಮಾತನಾಡುವವರು ನೆನಪಿಡಬೇಕಾದದ್ದು ‘ಈ ಮಡೆಸ್ನಾನ ನಿಲ್ಲಬೇಕಾಗಿರುವುದು ಮಾನವೀಯತೆಗಾಗಿ ಹೊರತು ಜಾತಿಗಾಗಿಯಲ್ಲ’ ಅನ್ನುವುದು.
ಸಂಸ್ಕೃತಿ ಸಂಕಥನ – ೭
– ರಮಾನಂದ ಐನಕೈ
ಕ್ರಿಯಾ ಜ್ಞಾನವೇ ಬದುಕಿನ ಶಿಕ್ಷಣ
ನಮ್ಮೂರಿನಲ್ಲೊಬ್ಬ ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕರಿದ್ದಾರೆ. ಎಂ.ಎಸ್.ಸಿ.ಯಲ್ಲಿ ಬಂಗಾ ರದ ಪದಕ ಪಡೆದವರು. ನಿವೃತ್ತಿಯ ನಂತರ ಊರಿಗೆ ಬಂದು ಕೃಷಿಕರಾಗಿದ್ದಾರೆ. ಅವರಿಗೆ ಗೊತ್ತಿ ಲ್ಲದ ವಿಷಯವಿಲ್ಲ. ಯಾವ ಕ್ಷೇತ್ರದ ಬಗ್ಗಾದರೂ ಘಂಟೆಗಟ್ಟಲೇ ಮಾತನಾಡುತ್ತಾರೆ. ತಮಗೆ ಸಿಕ್ಕಾ ಪಟ್ಟೆ ಜ್ಞಾನವಿದೆಯೆಂಬ ಅಹಂಕಾರವೂ ಇದೆ. ಆದರೆ ಒಂದು ತೊಂದರೆ ಅಂದರೆ ಅವರು ಅಂದು ಕೊಂಡಂತೆ ಒಂದೂ ಆಗುವುದಿಲ್ಲ. ಅವರ ಮಾತಿ ನಲ್ಲಿ ತೋರುವ ಚಾಕಚಕ್ಯತೆ ಕೃತಿಯಲ್ಲಿ ಕಾಣುವು ದಿಲ್ಲ. ಉದಾಹರಣೆಗೆ ಅವರು ಶಕ್ತಿಯ ಮೂಲದ ಬಗ್ಗೆ ಅಮೂಲಾಗ್ರ ತಿಳುವಳಿಕೆ ಹೊಂದಿದ್ದಾರೆ. ವಿದ್ಯುತ್ ಅನ್ವೇಷಣೆಯ ಕುರಿತು ಸವಿವರವಾದ ಮಾಹಿತಿ ನೀಡುತ್ತಾರೆ. ವಿದ್ಯುತ್ ಕಂಡು ಹಿಡಿದ ವರು, ವಿದ್ಯುತ್ ಹೇಗೆ ಉತ್ಪಾದಿಸಲ್ಪಡುತ್ತದೆ; ತಂತಿ ಹೇಗೆ ವಿದ್ಯುತ್ ವಾಹಕವಾಗುತ್ತದೆ; ಬಲ್ಪಿನ ಒಳ ಗಡೆಯಿಂದ ಹೇಗೆ ಪ್ರಕಾಶ ನೀಡುತ್ತದೆ ಇತ್ಯಾದಿ. ಅವರ ನೆಚ್ಚಿನ ಆಳು ಶಂಕರ. ಆತ ಅಕ್ಷರ ಜ್ಞಾನಿಯಲ್ಲ. ಅವನಿಗೆ ಈ ಪ್ರಪಂಚದ ಬಗ್ಗೆ ಕಡಿಮೆ ತಿಳುವಳಿಕೆ ಇದೆ. ಮೇಸ್ಟ್ರು ಹೇಳಿದಷ್ಟು ಮಾಡುವುದು ಅವನ ಕಾಯಕ. ವಿದ್ಯುತ್ತಿನ ಬಗ್ಗೆ ಇಷ್ಟೆಲ್ಲ ಮಾಹಿತಿ ನೀಡುವ ಪ್ರಾಧ್ಯಾಪಕರಿಗೆ ಮನೆಯಲ್ಲಿ ಫ್ಯೂಸ್ ಹೋದರೆ, ಹೋಲ್ಡರಿನಲ್ಲಿ ವಯರ್ ಬಿಟ್ಟರೆ ಹಾಕಲು ಬರುವುದಿಲ್ಲ. ಆ ಕೆಲಸ ಮಾಡುವವನು ಶಂಕರ. ವಿದ್ಯುತ್ತಿಗೆ ಸಂಬಂಧಿಸಿದ ಅಷ್ಟೂ ರಿಪೇರಿ ಕೆಲಸವನ್ನು ಶಂಕರ ಮಾಡುತ್ತಾನೆ. ಆತನನ್ನು ಕೇಳಿ ದರೆ ತನಗೆ ಇದರ ಬಗ್ಗೆ ತಿಳುವಳಿಕೆಯೇನಿಲ್ಲ. ಹೀಗೆ ಮಾಡಿ ಮಾಡಿ ಕಲಿತೆ ಅನ್ನುತ್ತಾನೆ. ಜೀವನದ ಚಿಕ್ಕ ಕೆಲಸಕ್ಕೆ ನೆರವಿಗೆ ಬಾರದ ಪ್ರಾಧ್ಯಾಪಕರ ಪಾಂಡಿತ್ಯವನ್ನು ಏನನ್ನೋಣ? ಪ್ರಾಧ್ಯಾಪಕರದ್ದು ಲೋಕಜ್ಞಾನ, ಶಂಕರನದ್ದು ಕ್ರಿಯಾಜ್ಞಾನ ಅನ್ನೋಣವೇ? ಉತ್ತರ ಗೊತ್ತಿಲ್ಲ. ಹುಡುಕಲು ಪ್ರಯತ್ನಿಸೋಣ.
ಮತ್ತಷ್ಟು ಓದು 
ಅಶ್ವಮೇಧ ಯಾಗ…
– ವೇದಸುಧೆ
ಅಶ್ವಮೇಧ ಯಾಗ: ಶತಪಥ ಬ್ರಾಹ್ಮಣದಲ್ಲಿ ಅಶ್ವಮೇಧದ ಬಗ್ಗೆ ಹೇಳಿದೆ…….. “ಅಶ್ವಂ ಇತಿ ರಾಷ್ಟ್ರಂ” ಅದರ ವಿವರಣೆ ಹೀಗಿದೆ. ಶ್ವ: ಅಂದರೆ ನಾಳೆ. ಅಶ್ವ: ಅಂದರೆ ಯಾವುದಕ್ಕೆ ನಾಳೆ ಇಲ್ಲವೋ ಅದು.ಯಾವುದಕ್ಕೆ ನಾಳೆ ಎನ್ನುವುದು ಇಲ್ಲವೋ ಅದಕ್ಕೆ ನಿನ್ನೆ ಎಂಬುದೂ ಇಲ್ಲ. ಅಂದರೆ ಯಾವುದು ನಿರಂತರವಾಗಿ ಇದ್ದೇ ಇರುತ್ತದೋ ಅದಕ್ಕೆ ನಿನ್ನೆ ನಾಳೆಗಳಿಲ್ಲ.ಯಾವುದಕ್ಕೆ ನಿನ್ನೆ ನಾಳೆಗಳಿರುತ್ತದೆ ಎಂದರೆ ಯಾವುದುಶಾಶ್ವತ ವಲ್ಲವೋ ಅದಕ್ಕೆ ಇರುತ್ತದೆ. ನಿನ್ನೆ ಇತ್ತು, ಇವತ್ತು ಇದೆ. ನಾಳೆ ಗೊತ್ತಿಲ್ಲ ಅಂದರೆ ಅದು ಶಾಶ್ವತವಲ್ಲ ಎಂದಾಯ್ತು.ಯಾವುದು ನಿನ್ನೆ ಇತ್ತು, ಇವತ್ತೂ ಇದೆ, ನಾಳೆಯೂ ಇರುತ್ತದೋ ಅದು ಮಾತ್ರ ಶಾಶ್ವತ.ಯಾವುದು ನಿರಂತರವಾಗಿರುತ್ತದೆ, ಅದು ಅಶ್ವ.ಆದ್ದರಿಂದಲೇ “ಅಶ್ವಂ ಇತಿ ರಾಷ್ಟ್ರಂ” ನಾನು ಇವತ್ತು ಇದ್ದೀನಿ, ನಾಳೆ ಗೊತ್ತಿಲ್ಲ.ಆದರೆ ರಾಷ್ಟ್ರಶಾಶ್ವತ.[“ದೇಹ ನಶ್ವರವೆಂದು, ದೇಶಶಾಶ್ವತವೆಂದು, ನಶ್ವರವುಶಾಶ್ವತಕೆ ಮುಡಿಪಾಗಲೆಂದು” ಎಂಬ ಗೀತೆ ಕೇಳಿರುವೆ] ನಾವೆಲ್ಲಾ ಪ್ರಜೆಗಳು ಇಂದು ಇದ್ದೀವಿ. ಇನ್ನೊಂದು ಐವತ್ತು ವರ್ಷ ನಾವು ಇರಬಹುದೇನೋ , ಮತ್ತೆ ಬೇರೆ ಪ್ರಜೆಗಳ ಹುಟ್ಟು, ಸಾವು, ಇದೆಲ್ಲಾ ನಡೆಯುತ್ತಲೇ ಇರುತ್ತದೆ.ಎಷ್ಟೋ ತಲೆಮಾರು ಕಳೆಯುತ್ತಲೇ ಇರುತ್ತದೆ ,ಅದರೆ ರಾಷ್ಟ್ರ ಮಾತ್ರ ನಿರಂತರ. ನಿರಂತರವಾಗಿರುವ ಭೂಮಿ ರಾಷ್ಟ್ರ. ಇಂದು ಇದ್ದು ನಾಳೆ ಇಲ್ಲಾವಾಗುವವರು ನಾವು ನೀವು.
ಸಂಸ್ಕೃತಿ ಸಂಕಥನ – ೫
– ರಮಾನಂದ ಐನಕೈ
ಆಧುನಿಕ ಇತಿಹಾಸದಲ್ಲಿ ಪದೇ ಪದೇ ಕಲ್ಯಾಣ ರಾಜ್ಯ ‘ವೆಲ್ಫೇರ್ ಸ್ಟೇಟ್’ದ ಕುರಿತು ಉಲ್ಲೇಖವಾಗುತ್ತದೆ. ಕಲ್ಯಾಣ ರಾಜ್ಯ ಅಂದರೆ ಏನು? ಪ್ರಜೆಗಳ ಸರ್ವತೋಮುಖ ಕ್ಷೇಮವನ್ನು ಹೆಗಲ ಮೇಲೆ ಹೊತ್ತ ಪರಿಕಲ್ಪನೆ ಇದು. ಸಾಮಾಜಿಕ ಭದ್ರತೆ (ಸೋಶಿಯಲ್ ಸೆಕ್ಯುರಿಟಿ) ಕಲ್ಯಾಣ ರಾಜ್ಯದ ಒಂದು ಆದರ್ಶ. ಪ್ರತಿಯೊಬ್ಬ ಪ್ರಜೆಗೆ ಸಾಮಾಜಿಕ ಭದ್ರತೆ ನೀಡುವುದೂ ಕಲ್ಯಾಣ ರಾಜ್ಯದ ಒಂದು ಗುರಿ.
ಪಾಶ್ಚಾತ್ಯರು ಈ ಸಮಾಜಿಕ ಭದ್ರತೆಯನ್ನು ಕಲ್ಪಿಸಿಕೊಂಡ ರೀತಿ ಭಿನ್ನವಾಗಿದೆ. ಈ ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಬ್ಬ ಮನುಷ್ಯನಿಗೆ ಬದುಕುವ ಹಕ್ಕಿದೆ. ಇದನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿ ಮನುಷ್ಯನಿಗೆ ಬದುಕಲು ಬೇಕಾದ ಅನ್ನ, ನೀರು, ಮನೆ, ಬಟ್ಟೆ ಮುಂತಾದ ಅನೇಕ ಅವಶ್ಯಕತೆಗಳನ್ನು ಪ್ರಭುತ್ವ (ಸ್ಟೇಟ್) ಪೂರೈಸಿ ಅವರಲ್ಲಿ ಭದ್ರತೆಯ ಭಾವನೆಯನ್ನು ಹುಟ್ಟಿಸಬೇಕು. ಆಗ ಪ್ರಜೆಗಳು ಸಂತೋಷವಾಗಿರುತ್ತಾರೆ ಎಂಬುದು ಅವರ ಚಿಂತನೆ. ಇದನ್ನೇ ಸಾಮಾಜಿಕ ಭದ್ರತೆ ಎಂದು ಕರೆದರು. ಇದಕ್ಕಾಗೇ ಅನೇಕ ರಾಷ್ಟ್ರಗಳು ತಮ್ಮನ್ನು ವೆಲ್ಫೇರ್ ಸ್ಟೇಟ್ಸ್ ಎಂದು ಕರೆದುಕೊಂಡವು. ಇದನ್ನು ಸರಳವಾಗಿ ಹೇಳಬಹುದಾದರೆ ಕನಿಷ್ಟ ಅವಶ್ಯಕತೆಯ ಭೌತಿಕ ಸವಲತ್ತುಗಳನ್ನು ನೀಡುವುದೇ ಅವರ ಪ್ರಕಾರ ಸಾಮಾಜಿಕ ಭದ್ರತೆ. ಪಾಶ್ಚಾತ್ಯರ ಈ ಲೋಕಜ್ಞಾನ ಭಾರತೀಯರಿಗೆ ರೋಮಾಂಚಕವಾಗಿ ಕಂಡದ್ದು ಸಹಜ. ಏಕೆಂದರೆ ಪಾಶ್ಚಾತ್ಯ ಸಂಸ್ಕೃತಿಯನ್ನು ಒಂದು ಪರಿಪೂರ್ಣ ಮಾದರಿ ಎಂದು ನಾವು ಸ್ವೀಕರಿಸಿಬಿಟ್ಟಿದ್ದೇವೆ.
ಸಂಸ್ಕೃತಿ ಸಂಕಥನ – ೪
– ರಮಾನಂದ ಐನಕೈ
ಧರ್ಮದ ಮೈಮೇಲೆ – ರಿಲಿಜನ್ನಿನ ಅಂಗಿ
ವಿಪರ್ಯಾಸ ನೋಡಿ. ಒಂದು ಕಡೆ ‘ಹಿಂದೂ ಧರ್ಮ’ ಅನ್ನುತ್ತೇವೆ. ಇನ್ನೊಂದು ಕಡೆ ಅದನ್ನೇ ‘ಹಿಂದೂ ರಿಲಿಜನ್’ ಅನ್ನುತ್ತೇವೆ. ಯಾವುದೇ ಭಾರತೀಯರನ್ನು ಕೇಳಿದರೆ ಇವೆರಡರ ನಡುವೆ ವ್ಯತ್ಯಾಸವೇ ಇಲ್ಲ ಎಂದು ಆತ್ಮವಿಶ್ವಾಸದಿಂದ ಪ್ರತಿಪಾದಿಸುತ್ತಾರೆ. ಇವೆರಡರ ವ್ಯತ್ಯಾಸ ತಿಳಿಯದಿದ್ದದ್ದೇ ಭಾರತೀಯರ ಮುಖ್ಯ ಮಾನಸಿಕ ತೊಂದರೆ. ಹಾಗಾಗೇ ನಿತ್ಯ ಗೊಂದಲದಲ್ಲಿ ಒದ್ದಾಡುತ್ತೇವೆ.
‘ರಾಜಕೀಯದಲ್ಲಿ ಧರ್ಮ ಇರಬಾರದು’, ‘ಸಾಹಿತ್ಯದಲ್ಲಿ ಧರ್ಮ ಬರಬಾರದು’, ‘ಕೋಮು ಗಲಭೆಗೆ ಧರ್ಮ ಕಾರಣ’ – ಇತ್ಯಾದಿ ಹೇಳಿಕೆ ಕೇಳಿದಾಗ ನಮಗೆ ಪುನಃ ಗೊಂದಲ. ಏಕೆಂದರೆ ಈ ಹೇಳಿಕೆಯನ್ನು ತೇಲಿ ಬಿಡುವವರು ಬುದ್ಧಿಜೀವಿಗಳು. ಅವರು ರಿಲಿಜನ್ ಎಂಬ ಪರಿಕಲ್ಪನೆಯ ಮೇಲೆ ಪ್ರಜ್ಞಾಪೂರ್ವಕವಾಗಿ ವಾದಿಸುತ್ತಾರೆ. ಆದರೆ ನಾವು ಸಾಮಾನ್ಯ ನಾಗರಿಕರು ಧರ್ಮ ಎಂಬ ಅರ್ಥದ ನೆಲೆಯಲ್ಲಿ ಅದನ್ನು ಗ್ರಹಿಸುತ್ತೇವೆ. ಹಾಗಾಗಿ ಎಲ್ಲವೂ ನಮ್ಮ ಮನಸ್ಸಿಗೆ ಅರ್ಧಸತ್ಯ ಅನಿಸುತ್ತದೆ. ಧರ್ಮ ಬೇಡ ಅಂದರೆ ಪ್ರತಿಯೊಂದಕ್ಕೂ ಅದರದ್ದೇ ಆದ ಕರ್ತವ್ಯ ಬೇಡವೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅಂದರೆ ಧರ್ಮ ಹಾಗೂ ರಿಲಿಜನ್ ಮಧ್ಯೆ ವ್ಯತ್ಯಾಸ ಇರಲೇಬೇಕೆಂಬುದು ನಮ್ಮ ಗೃಹಿಕೆಗೆ ಸೂಚಿಸುತ್ತದೆ. ಎರಡೂ ಒಂದೇ ಆಗಿದ್ದರೆ ಈ ರೀತಿ ಗೊಂದಲ ಏಕೆ ಸೃಷ್ಟಿಯಾಗುತ್ತದೆ? ಇದೇ ಅರ್ಥವಾಗದ ಒಗಟು.
ಸಂಸ್ಕೃತಿ ಸಂಕಥನ – ೩
– ರಮಾನಂದ ಐನಕೈ
ವಿದ್ಯಾವಂತರೆನಿಸಿಕೊಂಡ ನಮಗೆಲ್ಲ ಒಂದು ತೊಂದರೆ ಇದೆ. ಅದೇನೆಂದರೆ ನಮ್ಮ ಜೀವನಶೈಲಿಯೊಂದಿಗೆ ಅನಿವಾರ್ಯವಾಗಿ ಪಾಲಿಸಲೇಬೇಕಾದ ಸಂಪ್ರದಾಯಗಳು. ಇದನ್ನು ಪಾಲಿಸದಿದ್ದರೆ ನಾವು ಸಮುದಾಯದಿಂದ ಹೊರಗುಳಿಯತ್ತೇವೆ. ಕೆಲವೊಮ್ಮೆ ಮಾನಸಿಕವಾಗಿ ನಮ್ಮೊಳಗೇ ಅಭದ್ರತೆಗೊಳಗಾಗುತ್ತೇವೆ. ಹಾಗಂತ ಸಂಪ್ರದಾಯವನ್ನು ಪಾಲಿಸಲು ನಮ್ಮ ವೈಚಾರಿಕತೆ ಅನುವು ಮಾಡಿಕೊಡುವುದಿಲ್ಲ. ನಾವು ಭೌತಿಕವಾಗಿ ಬದುಕುತ್ತಿರುವುದು ಸಂಪ್ರದಾಯದ ಸಮಾಜದಲ್ಲಿ. ಮಾನಸಿಕವಾಗಿ ಬದುಕುತ್ತಿರುಉವದು ವೈಚಾರಿಕತೆಯೆಂಬ ಭ್ರಮೆಯಲ್ಲಿ. ಯಾಕೆ ಹೀಗಾಗುತ್ತಿದೆ? ನಮ್ಮ ಸಂಪ್ರದಾಯಗಳಲ್ಲಿ ನಮಗೇಕೆ ಅರ್ಥ ಕಾಣುತ್ತಿಲ್ಲ? ಅಥವಾ ಅರ್ಥ ಹುಡುಕುವ ಹಠವಾದರೂ ಏಕೆ? ಇವುಗಳಿಗೆಲ್ಲ ಅರ್ಥ ಇರಲೇಬೇಕೆಂದಿದೆಯೇ? ಸ್ವತಂತ್ರ ಭಾರತದ 60 ವರ್ಷ ಕಳೆದರೂ ಇಂಥ ಗೊಂದಲಗಳಿಂದ ಮುಕ್ತರಾಗದೇ ಇದ್ದದ್ದು ನಿಜಕ್ಕೂ ಗಂಭೀರವಾಸ್ತವ.
ಸಂಪ್ರದಾಯ ಅಂದರೆ ತಲೆತಲಾಂತರದಿಂದ ನಡೆಸಿಕೊಂಡು ಬಂದ ಆಚರಣೆಗಳು. ನಮ್ಮ ಹಿರಿಯರು ಅವರ ಹಿರಿಯರನ್ನು ಅನುಕರಿಸಿದರು. ಅವರ ಹಿರಿಯರು ಅವರ ಹಿರಿಯರನ್ನು… ಹೀಗೆ ಯಾಕೆ ಆಚರಿಸಬೇಕೆಂದು ಯಾರೂ ಯಾರನ್ನೂ ಪ್ರಸ್ನಿಸಲಿಲ್ಲ. ಪ್ರಶ್ನಿಸುವ ಜಿಜ್ಞಾಸ ಹುಟ್ಟಲೇ ಇಲ್ಲ. ಏಕೆಂದರೆ ಎಲ್ಲರೂ ಅದು ತಮ್ಮದು ಎಂದು ನಂಬಿದ್ದರು. ಪ್ರೀತಿಸುತ್ತಿದ್ದರು. ಸ್ವಾತಂತ್ರ್ಯಾನಂತರ ನಮಗೆ ಸಂಪ್ರದಾಯಗಳ ಕುರಿತು ಹೆಚ್ಚು ಪ್ರಶ್ನೆಗಳು ಏಳಲು ಶುರುವಾಗಿವೆ. ಅದಕ್ಕೆ ಕಾರಣ ನಾವು ಪ್ರಭಾವಿಸಿಕೊಂಡ ಎರವಲು ವೈಚಾರಿಕತೆ ಅಥವಾ ವಿಚಾರವಾದ. ಅದು ನಮ್ಮ ಶಿಕ್ಷಣ ಹಾಗೂ ಓದುತ್ತಿರುವ ಸಮಾಜವಿಜ್ಞಾನಗಳಿಂದ ಸೃಷ್ಟಿಯಾದದ್ದು. ಪರೋಕ್ಷವಾಗಿ ಹೇಳಬಹುದಾದರೆ ಪಾಶ್ಚಾತ್ಯರು ಹೇಳಿಕೊಟ್ಟ ಕಂಠಪಾಠ. ಅವರ ಪ್ರಕಾರ ವೈಚಾರಿಕತೆಯತ್ತ ಸಾಗುವುದೇ ಪ್ರಗತಿ ಅಥವಾ ನಾಗರಿಕತೆಯ ಲಕ್ಷಣ. ಭಾರತೀಯ ಸಂಪ್ರದಾಯಗಳು (ಹಿಂದೂ ರಿಲಿಜನ್) ಅವೈಚಾರಿಕವಾದ್ದರಿಂದ ಭಾರತ ಹಿಂದುಳಿದ ದೇಶ. ಇಲ್ಲಿಯ ಜನ ಮೂಢರು ಮತ್ತು ದಡ್ಡರು. ಅರ್ಥವಿಲ್ಲದ ಆಚರಣೆಗಳನ್ನು ಮಾಡುವವರು ಎಂಬಿತ್ಯಾದಿ. ಇದೇ ನಿಜ ಎಂದು ನಾವೆಲ್ಲ ನಂಬಿಕೊಂಡಿದ್ದರಿಂದ ನಮ್ಮ ಸಂಪ್ರದಾಯಗಳು ನಮಗೆ ಅರ್ಥಹೀನ ಅನಿಸುತ್ತದೆ.
ಸಂಸ್ಕೃತಿ ಸಂಕಥನ – ೨
-ರಮಾನಂದ ಐನಕೈ
ಸಂಸ್ಕೃತಿ ಸಂಕಥನ – ೧
ಭಾರತೀಯ ಸಂಸ್ಕೃತಿಯ ಕುರಿತಾದ ನಮ್ಮ ಸ್ಮೃತಿ ವಿಸ್ಮೃತಿಯಾಗಿದೆ. ಇದಕ್ಕೆ ಕಾರಣವೇನು ಈ ಮರೆವನ್ನು ಪುನಃ ನೆನಪಿಸಿಕೊಳ್ಳುವುದು ಹೇಗೆ? ಸಂಸ್ಕೃತಿಯನ್ನು ಮರೆತದ್ದರಿಂದ ಆದ ಪರಿಣಾಮಗಳೇನು? ಹೀಗೆ ಯೋಚಿಸಲು ಹೋದರೆ ನಮ್ಮೆದುರು ನೂರಾರು ಪ್ರಶ್ನೆಗಳುಂಟು. ಭಾರತೀಯರು ತಮ್ಮ ಸಂಸ್ಕೃತಿಯ ಕುರಿತಾಗಿ ಕೇಳುತ್ತಿರುವ, ಓದುತ್ತಿರುವ, ನಂಬಿಕೊಂಡಿರುವ ಹಲವು ಸಂಗತಿಗಳು ತಪ್ಪು ತಿಳುವಳಿಕೆಂದ ಕೂಡಿದ್ದರಿಂದ ವರ್ತಮಾನದ ಭಾರತದಲ್ಲಿ ಅನೇಕಾನೇಕ ಸಮಸ್ಯೆಗಳು ಜೀವಪಡೆಯುತ್ತಲೇ ಇವೆ. ಈ ಸತ್ಯ ಅರ್ಥವಾಗಬೇಕಾದರೆ ಇತ್ತೀಚೆಗೆ ಪ್ರಕಟಗೊಂಡ ಎರಡು ಕನ್ನಡದ ಪುಸ್ತಕಗಳನ್ನು ಪ್ರತಿಯೊಬ್ಬರೂ ಓದಲೇಬೇಕು.
ಒಂದು ಸ್ಮೃತಿ-ವಿಸ್ಮೃತಿ ಭಾರತೀಯ ಸಂಸ್ಕೃತಿ ಎಂಬ ಪುಸ್ತಕ ಇದು ಪ್ರೊ. ಬಾಲಗಂಗಾಧರರ ಸಂಶೋಧನಾ ಗ್ರಂಥ ಇದನ್ನು ಪ್ರೊ. ರಾಜಾರಾಮ ಹೆಗಡೆ ಕನ್ನಡಕ್ಕೆ ಅನುವಾದಿಸಿದ್ದಾರೆ. ಇನ್ನೊಂದು ಪುಸ್ತಕ ಪೂರ್ವಾವಲೋಕನ. ಇದು ಬಾಲಗಂಗಾಧರರ ಬಿಡಿ ಲೇಖನಗಳ ಅನುವಾದಗಳ ಸಂಗ್ರಹ. ಇವೆರಡೂ ಕೂಡಾ ಭಾರತೀಯ ಸಮಾಜ ವಿಜ್ಞಾನವನ್ನು ಪುನರ್ಪರಿಶೀಲನೆಗೆ ಹಚ್ಚುವ ಮಹತ್ವದ ಕೃತಿಗಳು.
ಸಂಸ್ಕೃತಿ ಸಂಕಥನ – ೧
– ರಮಾನಂದ ಐನಕೈ
ಭಾರತೀಯ ಸಂಸ್ಕೃತಿಯ ವಿಷಯದಲ್ಲಿ ಇಂದಿಗೂ ಕೂಡಾ ಗೊಂದಲವಿದೆ. ನಮ್ಮ ಆಚರಣೆಗಳು ಅರ್ಥವಿಲ್ಲದ್ದು. ಮೌಢ್ಯದಿಂದ ಕೂಡಿದ್ದು…. ಇತ್ಯಾದಿ. ನಮ್ಮ ಸುಶೀಕ್ಷಿತ ಜನರೂ ಕೂಡ ಇದನ್ನೇ ಪುನರುಚ್ಚರಿಸುತ್ತಿದ್ದಾರೆ. ಆದರೆ ಇದು ನಿಜ ಅಲ್ಲ. ಇವು ಕೇವಲ ಪಾಶ್ಚಾತ್ಯರಿಗೆ ನಮ್ಮ ಸಂಸ್ಕೃತಿಯ ಕುರಿತಾದ ಅನುಭವಗಳು. ಅವರ ಅನುಭವಗಳೇ ನಮಗೆ ಆದರ್ಶವಾಗಿದೆ.ಬೆಲ್ಜಿಯಂನ ಗೆರಿಟ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಬಾಲಗಂಗಾಧರ ಅವರು ಈ ಕುರಿತು ದೀರ್ಘ ಸಂಶೋಧನೆ ಮಾಡಿದ್ದಾರೆ. ಇವರ ಸಂಶೋಧನೆ ಭಾರತೀಯ ಸಂಸ್ಕೃತಿಯ ಮೇಲೆ ಹೊಸ ಬೆಳಕು ಚೆಲ್ಲಲಿದೆ.
ಭಾರತೀಯ ಸಂಸ್ಕೃತಿಯ ಕುರಿತಾದ ನಮ್ಮ ತಪ್ಪು ತಿಳುವಳಿಕೆ ಹೇಗೆ ಜೀವನದ ಬೇರೆ ಬೇರೆ ರಂಗದ ಮೇಲೆ ಅಡ್ಡ ಪರಿಣಾಮ ಮಾಡಿದೆ ಎಂಬ ಬಾಲಗಂಗಾಧರರ ವಾದವನ್ನು ಸರಳವಾಗಿ ಅನುಭವಕ್ಕೆ ದಕ್ಕುವಂತೆ ನಿರೂಪಿಸಲಿದ್ದಾರೆ ರಮಾನಂದ ಐನಕೈ. ಹೊಸ ಅಂಕಣ ‘ಸಂಸ್ಕೃತಿ ಸಂಕಥನ’ ಆರಂಭವಾಗಲಿದೆ.
ಇದು ಹೇಳುವಷ್ಟು ಸುಲಭವಲ್ಲ. ಆದರೂ ಒಂದು ಕ್ಷಣ ವರ್ತಮಾನದ ನಮ್ಮ ಸಿದ್ಧ ನಂಬಿಕೆಗಳನ್ನು ಪೂರ್ವಾಗ್ರಹಗಳನ್ನು ಬದಿಗಿಟ್ಟು ಮುಂದುವರಿಯೋಣ.
ಕಳೆದ ೬೦ ವರ್ಷಗಳ ನಮ್ಮ ಸ್ವತಂತ್ರ ಭಾರತದಲ್ಲಿ ನೂರಾರು ರೀತಿಯ ಮನಸ್ಸುಗಳು ಬೆಳೆಯುತ್ತ ಬಂದಿವೆ. ಪ್ರತಿಯೊಂದು ಮನಸ್ಸೂ ತನ್ನದೇ ರೀತಿಯ ವೈಚಾರಿಕ ಹಾಗೂ ಮಾನಸಿಕ ಸಾಮ್ರಾಜ್ಯವನ್ನು ಕಟ್ಟಿಕೊಂಡಿದೆ ಹಾಗೂ ಅದೇ ಅಂತಿಮ ಸತ್ಯ ಎಂದು ಪ್ರತಿಪಾದಿಸುತ್ತಲಿದೆ.ಈ ಕಾರಣಕ್ಕಾಗೇ ದೇಶದಲ್ಲಿ ಅಸಂಖ್ಯಾತ ವೈವಿಧ್ಯಮಯ ಸಮಸ್ಯೆಗಳು ಇನ್ನೂ ಜೀವಂತವಾಗಿವೆ. ಇವುಗಳನ್ನೆಲ್ಲ ಸೇರಿಸಿ ನಾವು ಮುಖ್ಯವಾಗಿ ಎರಡು ರೀತಿಯ ಮನಸ್ಸುಗಳನ್ನು ಗುರುತಿಸೋಣ.
ಪೂರ್ವಾವಲೋಕನ : ಒಂದು ಸಂವಾದ
– CSLC
ಕನ್ನಡದ ವಿದ್ವಾಂಸ ಜಗತ್ತಿಲ್ಲಿ ನಮ್ಮ ಸಮಾಜದ ಮತ್ತು ಸಮಾಜವಿಜ್ಞಾನದ ಕುರಿತು ವೈಜ್ಞಾನಿಕವಾಗಿ ಹೆಚ್ಚು ಚರ್ಚೆಯಾಗಬೇಕೆಂಬ ಉದ್ದೇಶದಿಂದ ಬಾಲಗಂಗಾಧರರ ಹಲವಾರು ಆಂಗ್ಲ ಭಾಷೆಯ ಲೇಖನಗಳನ್ನು ಕನ್ನಡಕ್ಕೆ ಅನುವಾದಿಸಿಲಾದ ’ಪೂರ್ವಾವಲೋಕನ’ ಕೃತಿಯನ್ನು (ಅಭಿನವ ಪ್ರಕಾಶನ) ಇತ್ತೀಚೆಗೆ ಪ್ರಕಟಿಸಲಾಗಿದೆ. ಈ ಪುಸ್ತಕದಲ್ಲಿರುವ ಕೆಲವಾರು ಲೇಖನಗಳ ಆಧಾರದ ಮೇಲೆ “ಪೂರ್ವಾವಲೋಕನ : ಒಂದು ಸಂವಾದ” ಒಂದು ದಿನ ಕಾರ್ಯಾಗಾರವನ್ನು ಇದೇ ತಿಂಗಳ ೨೪ ರಂದು ಸರ್ಕಾರಿ ಕಲಾ ಕಾಲೇಜು, ಕೆ.ಆರ್. ಸರ್ಕಲ್ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.




