ವಿಷಯದ ವಿವರಗಳಿಗೆ ದಾಟಿರಿ

Posts tagged ‘ಹಿಮಾಲಯನ್ ಬ್ಲಂಡರ್’

14
ನವೆಂ

ಚಾಚಾ… Oh My God… !!!

– ಅಶ್ವಿನ್ ಅಮೀನ್

Neharu Gandhijiನವೆಂಬರ್ 14. ನೆಹರೂ ಜನ್ಮ ದಿನ. ನಾವು ಶಾಲಾ ದಿನಗಳಲ್ಲಿರುವಾಗ ನಮಗೆಲ್ಲ ಖುಷಿಯ ದಿನ..  ಕಾರಣ ಅಂದು ನಮ್ಮ ದಿನ.. ಮಕ್ಕಳ ದಿನ.. ಮನೋರಂಜನಾ ಕಾರ್ಯಕ್ರಮಗಳು, ಆಟೋಟ, ಸಿಹಿ ತಿಂಡಿ, ಅರ್ಧ ದಿವಸ ರಜಾ ಬೇರೆ.. !! ಆಹಾ ಮಕ್ಕಳಿಗೆ ಅದೇ ಚಂದ.. ಅಂದು ನಾವೆಲ್ಲಾ ‘ಚಾಚಾ…’ ಎನ್ನುತ್ತಾ ಶಿಕ್ಷಕರು ಕೊಟ್ಟ ಸಿಹಿ ತಿನ್ನುತ್ತಾ ಖುಷಿಪಡುತ್ತಿದ್ದೆವು.

ಆದರೆ…

ಆ ಸಿಹಿ ತಿನ್ನುತ್ತಿದ್ದ ಬಾಯಿ ಯಾಕೋ ಇಂದು ಕಹಿಯೆನಿಸುತ್ತಿದೆ.ಮತ್ತೆ ‘ಚಾಚಾ…’ ಎಂದು ಕೂಗಲು ಮನಸ್ಸೇ ಬರುತ್ತಿಲ್ಲ. ನೆಹರೂ ಹೆಸರು ಕೇಳಿದರೇನೇ ಏನೋ ಒಂದು ಆಕ್ರೋಶ, ಅಸಹ್ಯತನ…!ಅಂತಹ ಒಬ್ಬ ದುರ್ಬಲ ಪ್ರಧಾನಿಯನ್ನು ಭಾರತ ಹೊಂದಿತ್ತಾ ಎಂಬ ಬಗ್ಗೆ ಅನುಮಾನ.ಖಂಡಿತಾ ನಾನು ಬದಲಾಗಿಲ್ಲ.ನಾನು ಈಗಲೂ ಅದೇ ದೇಶ ಪ್ರೇಮಿ.ಆದರೆ ನನ್ನ ಜ್ಞಾನ ಬದಲಾಯಿತು.ನನ್ನ ಮುಂದಿದ್ದ ಸುಳ್ಳಿನ ಇತಿಹಾಸ ಕರಗುತ್ತಾ ಹೋದಂತೆ ನೆಹರೂ ಬಗೆಗಿನ ತೆರೆಮರೆಯ ರಹಸ್ಯಗಳು ಒಂದೊಂದಾಗಿ ಗೋಚರಿಸತೊಡಗಿದವು.ಆ ತೆರೆಯ ಹಿಂದೆ ಕಂಡದ್ದೆಲ್ಲ ಸ್ವಾರ್ಥದ,ನಾಚಿಕೆಗೇಡಿನ,ಅಸಹ್ಯಕರ,ಹೇಡಿ ಹಾಗೂ  ಮೂರ್ಖತನದ ಪರಮಾವಧಿ…!

ಕಾಂಗ್ರೆಸ್ಸಿನ ಆಗಿನ ಅಧ್ಯಕ್ಷ ಮೋತಿಲಾಲರು ತನ್ನ ಮಗ ನೆಹರೂರವರನ್ನು ತನ್ನ ನಂತರ ಕಾಂಗ್ರೆಸ್ಸ್ ಅಧ್ಯಕ್ಷ ಪಟ್ಟಕ್ಕೇರಿಸಲು ಗಾಂಧೀಯ ಬೆನ್ನು ಬಿದ್ದಿದ್ದ ಕಾಲವದು.ಹಲವು ವರ್ಷಗಳ ಒತ್ತಡದ ನಂತರ ಗಾಂಧೀ ಮೊತಿಲಾಲರ ಹಠಕ್ಕೆ ಬಗ್ಗಲೇಬೇಕಾಯಿತು. ಉಕ್ಕಿನ ಮನುಷ್ಯ ವಲ್ಲಭ ಭಾಯಿ ಪಟೇಲರಿಗೆ ಬಹುಮತ ಇದ್ದ ಹೊರತಾಗಿಯೂ ಪಟೇಲ್ ಅವರನ್ನು ತಣ್ಣಗಾಗಿಸಿ ನೆಹರೂರವರನ್ನು ಕಾಂಗ್ರೆಸ್ಸ್ ಅಧ್ಯಕ್ಷ ಗಾದಿಯಲ್ಲಿ ಕೂರಿಸಿಯೇ ಬಿಟ್ಟರು.

ಮತ್ತಷ್ಟು ಓದು »

5
ಜೂನ್

ಚೀನಿಗಳೊಂದಿಗಿನ ಯುದ್ಧ ಸೈನಿಕ ಕಾರ್ಯಾಚರಣೆಯೇ ಆಗಬೇಕಿಲ್ಲ

– ರಾಕೇಶ್ ಶೆಟ್ಟಿ

chini yuddhaಮೂರುವರೆ ವರ್ಷಗಳ ಹಿಂದಿನ ಮಾತು.ಬಹುಷಃ ೨೦೦೯ರ ನವೆಂಬರ್ ತಿಂಗಳಿರಬಹುದು.ಪ್ರಧಾನಿ ಮ(ಮೌ?)ನಮೋಹನ್ ಸಿಂಗ್ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು.ಅದನ್ನು ಚೀನಾ ಖಡಕ್ ಆಗಿ ವಿರೋಧಿಸಿ, ’ನೀವು ಭಾರತೀಯರು ೧೯೬೨ ರ ಅನುಭವವನ್ನ ಮರೆತಿದ್ದಿರ!’ ಅಂತ ಬಹಿರಂಗವಾಗೇ ಹೇಳುವ ದಾರ್ಷ್ಟ್ಯ ತೋರಿತ್ತು.ಅಂದು ಅದು ಕ್ಯಾತೆ ತೆಗೆದಿದ್ದು ’ತವಾಂಗ್’ ನ ಕುರಿತಾಗಿ.

ಚೀನಿಗಳ ಬೆದರಿಕೆ ಬಗ್ಗೆ ಮಾತಡುವುದಕ್ಕಿಂತ ಮೊದಲು, ಏನಿದು ‘ತವಾಂಗ್’ ಅದಕ್ಕಾಗಿ ಯಾಕಿಷ್ಟು ಕಿತ್ತಾಟ? ಇದು ಯಾರಿಗೆ ಸೇರಿದ್ದು? ಭಾರತೀಯರಿಗೋ? ಚೀನಿಗಳಿಗೋ? ಈ ಮೊದಲು ಇದು ಯಾರಿಗೆ ಸೇರಿತ್ತು? ಅಂತ ನೋಡ ಹೊರಟರೆ, ಐತಿಹಾಸಿಕಾವಾಗಿ ಅಂದರೆ ೧೯೧೪ರಲ್ಲಿ ಬ್ರಿಟಿಷರು ಮೆಕ್-ಮಹೂನ್  ರೇಖೆಯನ್ನ ಗುರುತಿಸುವವರೆಗೂ ಅದು ಆಗಿನ ‘ಟಿಬೆಟ್’ ಗೆ ಸೇರಿತ್ತು. ೧೯೧೪ರಲ್ಲಿ ತವಾಂಗ್ ಅನ್ನು ೧೩ನೆ ಲಾಮ ಭಾರತಕ್ಕೆ ಬಿಟ್ಟು ಕೊಟ್ಟರು.ಆ ನಂತರ ಬಂದ ೧೪ನೆ ಅಂದರೆ ಈಗಿನ ‘ದಲೈ ಲಾಮ’ ಕೂಡ ತವಾಂಗ್ ಅನ್ನು ಭಾರತದ ಅಂಗವೆಂದೇ ಮಾನ್ಯ ಮಾಡಿದರು.

ಆದರೆ ೧೯೫೦ ರ ದಶಕದಲ್ಲಿ ಚೀನಿಗಳು ‘ಟಿಬೆಟ್’ ಅನ್ನು ಆಕ್ರಮಿಸಿಕೊಂಡರಲ್ಲ. ಈಗ ಅವರು ಹೇಳುವುದು , ‘ಒಂದು ಕಾಲದಲ್ಲಿ ತವಾಂಗ್ ಟಿಬೆಟ್ಗೆ ಸೇರಿತ್ತು, ಈಗ ಟಿಬೆಟ್ ನಮಗೆ ಸೇರಿದೆ, ಹಾಗಾಗಿ ಈ ತವಾಂಗ್ ನಮಗೆ ಸೇರಬೇಕು’ ಅಂತ (ಅದರ ಜೊತೆಗೆ ಇರಲಿ ಅಂತ ಇಡಿ ಅರುಣಾಚಲ ಪ್ರದೇಶವನ್ನು ಕೊಡಿ ಅನ್ನುತಿದ್ದಾರೆ).

ಮತ್ತಷ್ಟು ಓದು »