ಸಾವರ್ಕರ್ ಮತ್ತು ನೆಹರೂ : ಹೋಲಿಸಬಾರದ ವ್ಯಕ್ತಿಗಳು
– ಚಕ್ರವರ್ತಿ ಸೂಲಿಬೆಲೆ
(ಮೇ ೨೮) ಸಾವರ್ಕರ್ ಜನ್ಮ ದಿನ. ಈ ಸಂಧರ್ಭದಲ್ಲಿ ಭಾರತದ ದಿಕ್ಕು ಬದಲಿಸಿದ ಇಬ್ಬರು ವ್ಯಕ್ತಿಗಳ ತುಲನಾತ್ಮಕ ಬರಹ ಇಲ್ಲಿದೆ. ಯಾರು ಯಾವ ಬಗೆಯಲ್ಲಿ ದಿಕ್ಕು ಬದಲಿಸಿದರು ಅಥವಾ ತಪ್ಪಿಸಿದರು ಎನ್ನುವುದು ಓದುಗರ ವಿವೇಚನೆಗೆ ಬಿಟ್ಟಿದ್ದು…
ಇತಿಹಾಸದ ಪುಟಗಳು ಅದೆಷ್ಟು ಬೇಗ ಹಿಂದೆ ಹಿಂದೆ ಹೋಗಿಬಿಡುತ್ತವಲ್ಲ! ಒಂದು ಪುಟವನ್ನು ತಿರುವಿಹಾಕಿದಂತೆ ಆ ಪುಟದಲ್ಲಿರುವ ಸಂಗತಿಗಳನ್ನೆಲ್ಲಾ ಮರೆತುಬಿಟ್ಟರೆ ಮುಗಿದೇಹೋಯಿತು. ನೆನಪಿಟ್ಟುಕೊಂಡು ಮುಂದಡಿ ಇಡುವವ ಮಾತ್ರ ವಿಜಯಿಯಾದಾನು. ನಮ್ಮ ಇತಿಹಾಸ ಒಂಥರಾ ಸೆಮಿಸ್ಟರ್ ಪದ್ಧತಿಯ ಶಿಕ್ಷಣದಂತಾಗಿಬಿಟ್ಟಿದೆ. ಈ ಸೆಮಿಸ್ಟರ್ ನಲ್ಲಿ ಕಲಿತದ್ದು ಮುಂದಿನ ಬಾರಿಗೆ ಬೇಕಾಗಲಾರದು. ಸದ್ಯಕ್ಕೆ ಸಾವರ್ಕರ್ ಭಾರತೀಯರ ಪಾಲಿಗೆ ಹಾಗೆಯೇ ಆಗಿಬಿಟ್ಟಿದ್ದಾರೆ. ಅವರು ಹುಟ್ಟಿ125 ವರ್ಷ ಕಳೆಯುವುದರೊಳಗಾಗಿ ಅವರು ಸಮಾಜದ ಕಣ್ಣಿಂದ ದೂರವೇ ಆಗಿಬಿಟ್ಟಿದ್ದಾರೆ. ಯಾವ ರಾಷ್ಟ್ರದ ಏಕತೆ- ಅಖಂಡತೆಗಾಗಿ; ಯಾವ ಪರಿಪೂರ್ಣ ಸಮಾಜದ ಪರಿಪೂರ್ಣ ಉನ್ನತಿಗಾಗಿ ತಮ್ಮ ಜೀವನವನ್ನೇ ತೇಯ್ದುಬಿಟ್ಟರೋ ಆ ವ್ಯಕ್ತಿ ಅದೇ ದೇಶದ ಸ್ಮೃತಿಯಿಂದ ದೂರವಾಗೋದು ದುರಂತವೇ ಸರಿ.
ಹಾಗೆ ನೋಡಿದರೆ ಕಳೆದ ಶತಕದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬೌದ್ಧಿಕವಾಗಿ ಹಾಗೆಯೇ ಪ್ರತ್ಯಕ್ಷವಾಗಿ ಪಾಲ್ಗೊಂಡ ಅಪರೂಪದ ಸಾಹಸಿ ಸಾವರ್ಕರರೇ ಎಂಬುದರಲ್ಲಿ ಅನುಮಾನವಿಲ್ಲ. ಸಿಕ್ಕಸಿಕ್ಕಲ್ಲಿ ಗುಂಡು ಹೊಡೆದು ಅದನ್ನೇ ಕ್ರಾಂತಿ ಎನ್ನುತ್ತಿರಲಿಲ್ಲ ಸಾವರ್ಕರ್. ಅವರ ಪ್ರತಿಯೊಂದು ಕೆಲಸದ ಹಿಂದೆ ಬೆಟ್ಟದಷ್ಟು ಚಿಂತನೆ, ಫಲಿತಾಂಶದ ನಂತರದ ಪರಿಸ್ಥಿತಿಯ ಕುರಿತು ಮುಂದಾಲೋಚನೆ- ಎಲ್ಲವೂ ಇರುತ್ತಿತ್ತು. ಅವರು ಲೇಖನಿ ಹಿಡಿದರೆ ಆ ಕಾಲಘಟ್ಟದ ಮಹಾಮಹಿಮ ಲೆಖಕರನ್ನೂ ಮೀರಿಸುವಷ್ಟು ಪ್ರತಿಭಾವಂತ. ಪಿಸ್ತೂಲು ಹಿಡಿದರೆ, ಎದುರಾಳಿಗಳ ರಕ್ತವೇ ತಣ್ಣಗಾಗುವಷ್ಟು ಕೆಚ್ಚೆದೆ. ಮಾತಿಗೆ ನಿಂತರೆ ಮೈಯೆಲ್ಲ ಕಿವಿಯಾಗಿ ಕೇಳಬೇಕೆನ್ನಿಸುವ ಮಧುರ ದನಿ, ಅಸ್ಖಲಿತ ವಿಚಾರಗಳ ಧಾರಾಪ್ರವಾಹ. ಬಿಡಿ. ಅಂತಹ ವ್ಯಕ್ತಿ ಯುಗಕ್ಕೊಬ್ಬರೇ!
“ಅರ್ನೆಸ್ಟೊ ಚೆಗುವಾರ ಕ್ರಾಂತಿಕಾರಿ ಭಾವಜೀವಿ”
– ನಾರಾಯಣ್ ಕೆ ಕ್ಯಾಸಂಬಳ್ಳಿ
‘ನಾನು ಎಂದಿಗೂ ಸೋತು ಮನೆಗೆ ಹಿಂತಿರುಗುವುದಿಲ್ಲ. ಸೋಲಿಗಿಂತ ಸಾವನ್ನೆ ಹೆಚ್ಚು ಇಚ್ಛಿಸುತ್ತೇನೆ’ ಎಂದು ಕ್ಯೂಬ ಬಿಡುವ ಮೊದಲು ಹೇಳಿದ ಮಾತಿನಂತೆಯೇ ನಿರಂತರವಾಗಿ ಹೋರಾಟದಲ್ಲೇ ತಮ್ಮ ಜೀವನವನ್ನು ಸವೆದು ಸೋಲಲು ಇಚ್ಛಿಸಿದೆ ತನನ್ನು ಸಾವಿಗೆ ಒಡ್ಡಿಕೊಂಡ ಮಹಾನ್ ಕ್ರಾಂತಿಕಾರಿ, ಮಾನವತಾವಾದಿ, ಗೆರಿಲ್ಲಾ ಯುದ್ಧ ತಂತ್ರ ನಿಪುಣ, ವೈದ್ಯ, ಬರಹಗಾರ, ಬುದ್ಧಿಜೀವಿ ಹಾಗೂ ಕ್ಯೂಬಾ ಕ್ರಾಂತಿಯ ಪ್ರಮುಖ ನೇತಾರ ಅರ್ನೆಸ್ಟೊ ಚೆಗುವರ ಜಗತ್ತಿನ ಕ್ರಾಂತಿಕಾರಿ ಹೋರಾಟಗಾರರಲ್ಲಿ ಪ್ರಮುಖರು. ಚೆಗುವಾರ ಹುಟ್ಟಿದ್ದು ಜೂನ್ 14, 1928ರಂದು ಅರ್ನೆಸ್ಟೊ ಚೆಗುವಾರ ಲಿಂಚ್ ಮತ್ತು ಸೀಲಿಯಾ ಡ ಲಾ ಸೆರ್ನ್ ಎಂಬ ಸ್ಪ್ಯಾನಿಷ್ ಮತ್ತು ಐರಿಷ್ ತಂದೆ ತಾಯಿಗಳ ಮೊದಲ ಮಗನಾಗಿ ಅರ್ಜೆಂಟೀನಾದ ರೊಸಾರಿಯೋ ಪಟ್ಟಣದಲ್ಲಿ. ಚೆಗುವರ ಚಿಕ್ಕಂದಿನಿಂದಲೇ ಬಡವರ, ಶ್ರಮಿಕರ ಪರವಾಗಿ ಹೆಚ್ಚು ಪ್ರೀತಿಯನ್ನು ಬೆಳೆಸಿಕೊಂಡವನು ಮತ್ತು ಎಡಪಂಥೀಯ ಒಲವು ಹೊಂದಿದ್ದ ಕುಟುಂಬದಲ್ಲಿ ಹುಟ್ಟಿಬೆಳೆದ ಅವನಿಗೆ ಚಿಕ್ಕಂದಿನಿಂದಲೇ ಸ್ಪಷ್ಟ ರಾಜಕೀಯ ದೃಷ್ಟಿಕೋನಗಳ ಬಗೆಗೆ ಪರಿಚಯ ದೊರೆಯುತಿತ್ತು.
ಸ್ಪ್ಯಾನಿಷ್ ಅಂತರ್ಯುದ್ಧದ ಕಾಲದಿಂದಲೂ ಗಣತಂತ್ರ ವಾದಿಗಳ ಪ್ರಬಲ ಸಮರ್ಥಕರಾಗಿದ್ದ ತಂದೆಯ ಪ್ರಭಾವ ಚೆಗುವಾರನ ಮೇಲೆ ಸಹಜವಾಗಿಯೇ ಬೀರಿತ್ತು.ಚೆಗುವಾರ ತನ್ನ 19ನೇ ವಯಸ್ಸಿನಲ್ಲಿ (1948) ವೈದ್ಯಕೀಯ ಕಲಿಕೆಗಾಗಿ ಬ್ಯೂನಸ್ ಐರ್ಸ್ ವಿಶ್ವವಿದ್ಯಾನಿಲಯಕ್ಕೆ ಸೇರುತ್ತಾನೆ. ಆದರೆ 1951ರಲ್ಲಿ ವಿಶ್ವವಿದ್ಯಾಲಯದಿಂದ ಒಂದು ವರ್ಷ ರಜೆ ಪಡೆದು ತನ್ನ ಆಪ್ತಮಿತ್ರ ಅಲ್ಬರ್ಟೊ ಗ್ರೆನಡೋ ಜೊತೆಗೂಡಿ ಮೋಟರ್ ಸೈಕಲ್ ಮೇಲೆ ದಕ್ಷಿಣ ಅಮೆರಿಕಾದ ಪ್ರವಾಸ ಹೊರಡುತ್ತಾನೆ. ಚೆಗುವಾರನ ಬದುಕಿನಲ್ಲಿ ಈ ಪ್ರವಾಸ ಬಹಳ ಪ್ರಮುಖವಾದದ್ದು ಮತ್ತು ಚೆಗುವಾರ ತಾನೊಬ್ಬ ಕ್ರಾಂತಿಕಾರಿಯಾಗಿರಲು ಪ್ರಮುಖ ಕಾರಣ ಈ ಪ್ರವಾಸದ ಅನುಭವಗಳೇ. ಅವನೆ ಹೇಳಿದ, ಬರೆದುಕೊಂಡಿರುವ ಹಾಗೆ “ಆಂಡೀಸ್ ಪರ್ವತಶ್ರೇಣಿಯ ಉನ್ನತ ಶಿಖರವಾದ ಮಾಚು ಪಿಚ್ಚುವಿಗೆ ಹೋಗುವ ದಾರಿಯಲ್ಲಿ ಶ್ರೀಮಂತ ಭೂಮಾಲೀಕರಿಂದ ತುಂಡು ಭೂಮಿಗಳನ್ನು ಪಡೆದು ಕೃಷಿ ಮಾಡುತಿದ್ದ ರೈತಾಪಿ ಜನಸಮುದಾಯಗಳ ಹೀನಾಯ ಬದುಕು, ಕಡುಬಡತನ, ನನ್ನ ಮನಸ್ಸಿಗೆ ತಾಕಿತು. ಈ ಜನರಿಗೆ ನೆರವಾಗಬೇಕಿದ್ದಲ್ಲಿ ನಾನು ವೈದ್ಯಕೀಯ ಅಭ್ಯಾಸವನ್ನು ಬಿಟ್ಟು ಸಶಸ್ತ್ರ ಹೋರಾಟದ ರಾಜಕೀಯ ರಂಗಕ್ಕೆ ಪ್ರವೇಶಿಸಬೇಕಿದೆ ಎಂದು ಮನವರಿಕೆಯಾಯಿತು” ಎಂದು ನಂತರ ಚೆಗುವಾರ ಬರೆದುಕೊಳ್ಲುತ್ತಾನೆ. ಹಾಗಾಗಿ ಈ ಮೋಟಾರ್ ಸೈಕಲ್ ಪ್ರವಾಸ್ ಚೆಗುವಾರನ ಕ್ರಾಂತಿ ಬದುಕಿನ ಬಹಳ ದೊಡ್ಡ ತಿರುವು. ಮೋಟಾರ್ ಸೈಕಲ್ ಪ್ರವಾಸದ ಜೊತೆಗಾರ ಆಲ್ಬರ್ಟೊ ಗ್ರಾನಡೊಸ್ ಚೆ ಕುರಿತು ಹೇಳುತ್ತಾ ಟೆಟೆ (‘ಚೆ’ ನನ್ನು ಪ್ರೀತಿಯಿಂದ ಕರೆಯುತ್ತಿದ್ದ ಹೆಸರು) ನನ್ನು ನಾನು ಮೊದಲು ಭೇೀಟಿ ಆಗಿದ್ದು 1941ರಲ್ಲಿ ಅದು ನನ್ನ ಸಹೋದರ ಥಾಮಸ್ ಮೂಲಕ. ಆಗ ನನಗೆ 13 ವರ್ಷ ವಯಸ್ಸು. ನಮ್ಮಿಬ್ಬರನ್ನು ಒಟ್ಟೊಟ್ಟಾಗಿ ತಂದ ವಿಷಯವೆಂದರೆ ಓದುವ ಅಭಿರುಚಿ ಮತ್ತು ನಿಸರ್ಗ ಪ್ರೇಮ. ಚೆ ಮನೆಗೆ ನಾನು ವಾಡಿಕೆಯ ಅಥಿತಿಯಾಗಿದ್ದೆ. ಅಲ್ಲಿದ್ದ ಗ್ರಂಥಭಂಡಾರವನ್ನು ನನ್ನದೆಂಬತೆಯೇ ಬಳಸಿಕೊಳ್ಳುತ್ತಿದ್ದೆ. ಟೆಟೆ (ಚೆ) ಒಬ್ಬ ರೂಢಿಯ ಮಾತುಗಾರನಾಗಿದ್ದ.
ಕನ್ನಡ/ಇಂಗ್ಲೀಷ್ ಮಾಧ್ಯಮದ ಜೊತೆಗೆ ಏಕರೂಪ ಶಿಕ್ಷಣದ ಬಗ್ಗೆಯೂ ಚರ್ಚೆ ಆಗಬೇಕಲ್ಲವೇ?
– ರಾಕೇಶ್ ಶೆಟ್ಟಿ
ಕಡೆಗೂ ‘ಸರ್ಕಾರ ಏಕರೂಪ ಶಿಕ್ಷಣ ನೀತಿ ಜಾರಿಗೆ ತರುವ ನಿಟ್ಟಿನಲ್ಲಿ ಚಿಂತಿಸಬೇಕು’ ಅನ್ನುವ ಮಾತುಗಳನ್ನು ಕಸಪಾ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದ್ದಾರೆ.ಕಳೆದ ಹಲವು ದಿನಗಳಿಂದ ಇಂಗ್ಲೀಷ್ ಮಾಧ್ಯಮದ ಸುತ್ತ ನಡೆಯುತ್ತಲಿರುವ ಚರ್ಚೆಯಲ್ಲಿ ನಾನು ನಿರೀಕ್ಷಿಸುತಿದ್ದ ಮಾತು “ಏಕರೂಪ ಶಿಕ್ಷಣ”ದ ಬಗ್ಗೆ.ಪೇಟೆಯ/ಉಳ್ಳವರ ಮಕ್ಕಳಿಗೊಂದು ಶಿಕ್ಷಣ,ಹಳ್ಳಿಯ/ಬಡವರ ಮಕ್ಕಳಿಗೊಂದು ಶಿಕ್ಷಣ ಕೊಟ್ಟು ಕಡೆಗೆ ಸಮಾನತೆ,ಸಾಮಾಜಿಕ ನ್ಯಾಯ,ಭಾಷೆ,ನಾಡು-ನುಡಿಯ ಅಳಿವು ಉಳಿವು ಅಂತ ಮಾತನಾಡುವುದೆಷ್ಟು ಸರಿ?
೧೦ನೆ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲೇ ಓದಿದ ನನಗೆ ಮಾತೃ ಭಾಷೆಯಲ್ಲಿ ಕಲಿಯುವುದೆಷ್ಟು ಸುಲಭ,ಆನಂದದ ವಿಷಯ ಅನ್ನುವುದರ ಅರಿವಿದೆ ಹಾಗೆಯೇ ೧೦ರ ನಂತರ ಇಂಗ್ಲೀಷ್ ಮಾದ್ಯಮಕ್ಕೆ (ಪಿಯುಸಿಯಲ್ಲಿ ಆಯ್ದುಕೊಂಡಿದ್ದು ವಿಜ್ಞಾನ ವಿಷಯ) ಕಾಲಿಟ್ಟಾಗ ಅನುಭವಿಸಿದ ಕಷ್ಟ,ಕೀಳರಿಮೆಯ ಅನುಭವಗಳು ಇವೆ.ಹಾಗಾಗಿ ಈ ಚರ್ಚೆಯಲ್ಲಿ ಮತ್ತು ಈಗಿನ ನಮ್ಮ ಶೈಕ್ಷಣಿಕ ಪರಿಸ್ಥಿತಿಯಲ್ಲಿ ನಾನು ಇಂಗ್ಲೀಷ್ ಮೀಡಿಯಂ ಬೇಕು ಅನ್ನುವುದರ ಪರವೇ ನಿಲ್ಲುತ್ತೇನೆ.
ಒಂದು ವೇಳೆ ಸಾಹಿತಿಗಳು ಒತ್ತಾಯಿಸುತ್ತಿರುವಂತೆ ಪ್ರಾಥಮಿಕ ಶಿಕ್ಷಣ ಮಾತೃ ಭಾಷೆಯಲ್ಲೇ ಆಗಬೇಕು ಅನ್ನುವುದಾದರೆ ಅದು ಈ ರಾಜ್ಯದಲ್ಲಿರುವ ಸರ್ಕಾರಿ/ಅನುದಾನಿತ/ಕೇಂದ್ರೀಯ/ಖಾಸಗಿ ಶಾಲೆಗಳಿಗೂ ಏಕರೂಪವಾಗಿ ಅನ್ವಯವಾಗಲಿ. ಅದನ್ನು ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಕನ್ನಡ ಕಡ್ಡಾಯವಾಗಲಿ ಆ ಮೂಲಕ ಬಡವರ ಮಕ್ಕಳು ಮಾತ್ರ ಕನ್ನಡದಲ್ಲಿ ಕಲಿತು ಮುಂದೆ ಇಂಗ್ಲೀಷ್ ಲೋಕಕ್ಕೆ ಕಾಲಿಟ್ಟು ಅರ್ಧಕರ್ಧ ಜನ ಕೀಳರಿಮೆ,ಹೆದರಿಕೆಯಿಂದಾಗಿ ಹಿಂದೆ ಬೀಳಲಿ ಅನ್ನುವುದು ಇಬ್ಬಗೆಯ ನೀತಿಯಾಗುತ್ತದೆ.
ಏಕರೂಪ ಶಿಕ್ಷಣ ಅನ್ನುವಾಗ ಇನ್ನೊಂದು ಅಂಶವನ್ನ ನಾವು ಗಮನಕ್ಕೆ ತೆಗೆದುಕೊಳ್ಳಬೇಕು.ಮಕ್ಕಳನ್ನು ಶಾಲೆಗೇ ಸೇರಿಸುವಾಗ ಅದು ಇಂಗ್ಲೀಷ್ ಮೀಡಿಯಂ ಶಾಲೆಯೇ ಅಂತ ಮಾತ್ರ ಈಗಿನ ಪೋಷಕರು ನೋಡುತ್ತಿಲ್ಲ,ಅದರ ಜೊತೆಗೆ ಅವರು ಅಲ್ಲಿರುವುದು ಸೆಂಟ್ರಲ್ ಸಿಲ್ಲಬಸ್ಸೋ,ಐ.ಸಿ.ಎಸ್.ಈ ಸಿಲ್ಲಬಸ್ಸೋ (ಅಥವಾ ಇನ್ಯಾವುದೋ) ಅನ್ನುವುದನ್ನು ನೋಡುತಿದ್ದಾರೆ.ನಮ್ಮ ಮಕ್ಕಳು ಇಂತ ಸಿಲಬಸ್ಸ್ ಇರೋ ಶಾಲೆಯಲ್ಲಿ ಓದುತಿದ್ದಾರೆ ಅಂತ ಹೇಳಿಕೊಳ್ಳುವುದು ಈಗಿನ ಪೋಷಕರಿಗೆ ಗರ್ವದ ವಿಷಯವಾಗಿದೆ. ಅಸಲಿಗೆ ಈ ರೀತಿ ಬೇರೆ,ಬೇರೆ ಸಿಲ್ಲಬಸ್ಸಿನ ಅಗತ್ಯ ಶಾಲಾ ಮಟ್ಟದಲ್ಲಿ ಏನು ಅನ್ನುವುದು ಸಹ ಚರ್ಚೆಯಾಗಬೇಕಲ್ಲವೇ?
ಈ ಯುದ್ಧ ಭೂಮಿಯಲ್ಲಿ ಸೈನಿಕರ ಬಡಿದಾಟ ಪ್ರಕೃತಿಯೊಂದಿಗೆ!
– ಡಾ ಅಶೋಕ್. ಕೆ. ಆರ್
ಇದು ಪ್ರಪಂಚದ ಅತಿ ಎತ್ತರದ ಯುದ್ಧಭೂಮಿ. ಸಮುದ್ರಮಟ್ಟದಿಂದ ಅಜಮಾಸು 5,753 ಮೀ ಎತ್ತರದಲ್ಲಿರುವ ಹಿಮಚ್ಛಾದಿತ ರಣರಂಗ. ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರತಿಷ್ಠೆಯ ಸಂಕೇತ. 1984ರಿಂದ ಇಲ್ಲಿಯವರೆಗೆ ಪಾಕಿಸ್ತಾನದ ಮೂರು ಸಾವಿರ ಮತ್ತು ಭಾರತದ ಐದು ಸಾವಿರಕ್ಕೂ ಹೆಚ್ಚು ಸೈನಿಕರು ಇಲ್ಲಿ ಹತರಾಗಿದ್ದಾರೆ [ಅನಧಿಕೃತ ವರದಿ; ಅಧಿಕೃತ ವರದಿಯನ್ನು ಎರಡೂ ದೇಶದ ಸರಕಾರಗಳು ಬಹಿರಂಗಗೊಳಿಸುವುದಿಲ್ಲ]. ಬಹಳಷ್ಟು ಮಂದಿಯ ದೇಹವನ್ನು ಇನ್ನೂ ಪತ್ತೆ ಹಚ್ಚಲಾಗಿಲ್ಲ. 80%ಗಿಂತ ಹೆಚ್ಚು ಸಂಖ್ಯೆಯ ಸೈನಿಕರ ಮರಣಕ್ಕೆ ಕಾರಣವಾಗಿದ್ದು ಎದುರಾಳಿಗಳ ಬಂದೂಕಾಗಲೀ, ಆಧುನಿಕ ಕ್ಷಿಪಣಿಗಳಾಗಲೀ ಅಲ್ಲ. ದೇಶಗಡಿಗಳ ಲೆಕ್ಕಿಸದೆ ಈ ಸೈನಿಕರನ್ನು ಬಲಿ ತೆಗೆದುಕೊಂಡಿರುವುದು ಪ್ರಕೃತಿ! ಪ್ರಕೃತಿಯ ಪ್ರಮುಖಾಯುಧ ಹಿಮ!! ಇದು ಸಿಯಾಚಿನ್ ಯುದ್ಧಭೂಮಿ.
ಆಪರೇಷನ್ ಮೇಘದೂತ: –
ಬಾಂಗ್ಲಾದೇಶದ ವಿಮೋಚನಾ ಯುದ್ಧದ ನಂತರ 1972ರಲ್ಲಿ ಸಿಮ್ಲಾ ಒಪ್ಪಂದಕ್ಕೆ ಯು.ಎನ್ ನೇತೃತ್ವದಲ್ಲಿ ಭಾರತ ಮತ್ತು ಪಾಕಿಸ್ತಾನ ಸಹಿ ಹಾಕುತ್ತವೆ. ಗಡಿರೇಖೆಯನ್ನು ವಿವರಿಸುವ ಆ ಒಪ್ಪಂದದಲ್ಲಿ ಸಿಯಾಚಿನ್ ಸೇರಿರಲಿಲ್ಲ. ಹಿಮಚ್ಛಾದಿತ ಮರುಭೂಮಿಯ ಮೇಲೆ ಹಕ್ಕು ಸಾಧಿಸಲು ಇವೆರಡೂ ದೇಶಗಳು ಬಡಿದಾಡಲಾರವು ಎಂದುಕೊಂಡಿತ್ತು ಯು.ಎನ್. ಆದರೆ ನಡೆದಿದ್ದೇ ಬೇರೆ! 1967ರಿಂದಲೇ ಅಮೆರಿಕಾದ ರಕ್ಷಣಾ ಸಂಸ್ಥೆಗಳು ತಯಾರಿಸಿದ ನಕ್ಷೆಗಳಲ್ಲಿ ಸಿಯಾಚಿನ್ ಪ್ರದೇಶವನ್ನು ಯಾವುದೇ ಐತಿಹಾಸಿಕ ಆಧಾರಗಳಿಲ್ಲದಾಗ್ಯೂ ಪಾಕಿಸ್ತಾನದ ಭಾಗವಾಗಿ ತೋರಿಸಲಾರಂಭಿಸಿತು. ಪಾಕಿಸ್ತಾನ ಕೂಡ ಅಮೆರಿಕದ ಕುಮ್ಮಕ್ಕಿನಿಂದಾಗಿ ಕ್ರಮೇಣವಾಗಿ ಸಿಯಾಚಿನ್ ಪ್ರದೇಶದ ಮೇಲೆ ಹಕ್ಕು ಚಲಾಯಿಸಲಾರಂಭಿಸಿತು. ಪಾಕಿನ ಈ ವರ್ತನೆಯನ್ನು ಗಮನಿಸಿದ ಭಾರತ ಸರಕಾರ ಕೂಡ ತನ್ನ ಸೈನ್ಯವನ್ನು ‘ಎತ್ತರದ ಪ್ರದೇಶಗಳಲ್ಲಿ ಯುದ್ಧ ತರಬೇತಿಯ’ ನೆಪದಲ್ಲಿ ಸಿಯಾಚಿನ್ ಪ್ರದೇಶಕ್ಕೆ ನಿಯೋಜಿಸಲಾರಂಭಿಸಿತು.
ಕುದಿಯಲಾರಂಭಿಸಿದ ದ್ವೇಷ 1984ರಲ್ಲಿ ಯುದ್ಧ ರೂಪವನ್ನು ಪಡೆಯಿತು. ಸಿಯಾಚಿನ್ ಪ್ರದೇಶವನ್ನು ಹಿಂಪಡೆದುಕೊಳ್ಳಲು ಆಪರೇಷನ್ ಮೇಘದೂತದ ಹೆಸರಿನಲ್ಲಿ ಭಾರತದ ಸೈನಿಕರು ಸಿಯಾಚಿನ್ ಏರಲಾರಂಭಿಸಿದರು. ಸರಿಸುಮಾರು ಸಾವಿರ ಚದುರ ಮೈಲು ಪ್ರದೇಶವನ್ನು ವಶಪಡಿಸಿಕೊಳ್ಳುವುದರಲ್ಲಿ ಭಾರತ ಸಫಲವಾಗಿ ಯುದ್ಧದಲ್ಲಿ ಗೆಲುವು ಪಡೆಯಿತು.
ಸೇನೆ-ಸರ್ಕಾರದ ನಡುವೆ ಬಡವಾಗದಿರಲಿ ನನ್ನ ಭಾರತ
– ರಾಕೇಶ್ ಶೆಟ್ಟಿ
ಆವತ್ತು ಸಂಸತ್ತಿನಲ್ಲಿ ಭಾಷಣಕ್ಕೆ ನಿಂತ ನೆಹರೂ ದೇಶದ ಒಂದಿಂಚು ನೆಲವನ್ನು ಚೀನಿಗಳೀಗೆ ಬಿಟ್ಟುಕೊಡುವುದಿಲ್ಲ.ಎಂತಾ ಯುದ್ಧಕ್ಕಾದರೂ ಸೈನ್ಯ ತಯಾರಿದೆ ಅನ್ನುತ್ತಲೇ ತಮ್ಮ ಕೋಟಿನಿಂದ ತೆಗೆದ ಕೆಂಪು ಗುಲಾಬಿಯನ್ನ ಜನರ ಕಿವಿಗಿಟ್ಟರು.ಅವರ ಭಾಷಣದ ನಂತರದ ಇತಿಹಾಸ ನಿಮಗೆ ಗೊತ್ತಿರಲೇಬಹುದು.ಆ ಕಹಿ ನೆನಪಿಗೆ ೫೦ ವರ್ಷ ಆಗೋ ಸಮಯದಲ್ಲಿ ಮತ್ತೊಮ್ಮೆ ಕಳೆದವಾರ ಸಂಸತ್ತಿನಲ್ಲಿ ರಕ್ಷಣಾ ಸಚಿವ ಆಂಟನಿಯವರೂ ಸಹ ಭಾರತದ ಸೈನ್ಯ ಬಲಿಷ್ಟವಾಗಿದೆ,ಯುದ್ಧ ಸನ್ನದ್ಧವಾಗಿದೆ ಅಂದಿದ್ದಾರೆ.ನೆಹರೂ ಅವರಿಗೂ-ಅವ್ರ ಕಾಲಕ್ಕೂ ತುಲನೆ ಮಾಡಿದರೆ ಆಂಟನಿ ಅವರನ್ನ ಸ್ವಲ್ಪ ನಂಬಬಹುದು ಅನ್ನಿಸುತ್ತದೇ.ಆದರೆ…
ಕಳೆದ ವಾರ ನಡೆದ ವಿದ್ಯಾಮಾನಗಳಿವೆಯಲ್ಲ ಅವೆಲ್ಲ ಗಾಬರಿ ಹುಟ್ಟಿಸುವಂತವು.ಇದಕ್ಕೆ ಮುನ್ನುಡಿ ಬರೆದಿದ್ದು ಜನರಲ್.ವಿ.ಕೆ ಸಿಂಗ್…! ಜನ್ಮ ದಿನಾಂಕದ ರಗಳೆಯ ನಂತರ ಸ್ವಲ್ಪ ದಿನ ಸುಮ್ಮನಾಗಿದ್ದವ್ರು, ಟಿವಿ ಚಾನೆಲ್ನೊಂದಿಗೆ ಮಾತನಾಡುತ್ತ ತಮಗೆ ೧೪ ಕೋಟಿ ಲಂಚ ನೀಡಲು ಬಂದ ಪ್ರಸಂಗದ ಬಗ್ಗೆ ಬಾಯಿಬಿಡುವ ಮೂಲಕ.ಮತ್ತೆ ಆ ವಿಷಯವನ್ನ ನಾನು ರಕ್ಷಣಾ ಮಂತ್ರಿ ಆಂಟನಿ ಅವರಿಗೂ ಹೇಳಿದ್ದೆ ಅನ್ನುವುದು ಬೆಂಕಿಗೆ ತುಪ್ಪ ಸುರಿದಂತಾಗಿ ಹೋಯಿತು.ಸಂಸತ್ತಿನಲ್ಲಿ ಆಂಟನಿ ’ಅವರು ಮೌಕಿಕವಾಗಿ ಹೇಳಿದ್ದರು ನಾನು ಏನು ತಾನೇ ಮಾಡಲಿ” ಅಂತೆಲ್ಲ ಗೋಳಾಡುವಾಗಲೇ, ಜನರಲ್ ಪ್ರಧಾನಿ ಅವ್ರಿಗೆ ಬರೆದ ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಅತ್ಯಂತ ರಹಸ್ಯವಾಗಿರಬೇಕಿದ್ದ ಪತ್ರ ಸೋರಿಕೆಯಾಗಿದ್ದು.!
ಇದು ಭರತವರ್ಷ : ಆ ಹೆಣ್ಣು ಮಗಳ ಹೋರಾಟಕ್ಕೆ ಅಂತ್ಯ ಇದೆಯಾ???
– ರಾಕೇಶ್ ಶೆಟ್ಟಿ
ಮಿಡ್ನಾಪುರದಲ್ಲಿ ಕ್ರಾಂತಿಯ ಕಲರವ…
– ಭೀಮಸೇನ್ ಪುರೋಹಿತ್
ಬಂಗಾಳದ ತೋಟದಿಂದ, ತಾಯಿ ಭಾರತಿಗೆ ಪೂಜಿತಗೊಂಡ ಕ್ರಾಂತಿಯ ಹೂವುಗಳು ಅಸಂಖ್ಯ,ಅಂಥಾ ಒಬ್ಬ ಯುವಕನ ಸ್ಮರಣೆ ಇದು.
ಮಿಡ್ನಾಪುರ ಅನ್ನೋದು ಬಂಗಾಳದ ಒಂದು ಜಿಲ್ಲೆ. “ಅನುಶೀಲನ ಸಮಿತಿ”ಯ ಪ್ರಭಾವದಿಂದ ಅನೇಕ ಯುವಕ ಕ್ರಾಂತಿಕಾರಿಗಳು ಅಲ್ಲಿ ಬೆಳೆದಿದ್ರು..ಮಿಡ್ನಾಪುರದಲ್ಲಿ ಇದ್ದ ಆಂಗ್ಲ ಅಧಿಕಾರಿಗಳು ಅತಿಕ್ರೂರತನದಿಂದ ಆಳ್ವಿಕೆ ನಡೆಸ್ತಿದ್ರು.
ಅಲ್ಲಿನ ಮ್ಯಾಜಿಸ್ಟ್ರೇಟ್ ಗಳಂತೂ, ಕ್ರಾಂತಿಕಾರಿಗಳ ಮೇಲೆ ಕೇಸುಗಳನ್ನ ಹಾಕಿ, ವಿವಿಧ ಶಿಕ್ಷೆಗಳನ್ನ ವಿಧಿಸ್ತಿದ್ರು.ಹೀಗಾಗಿಯೇ, ಮಿಡ್ನಾಪುರದ ಯುವಕರು ಆಲ್ಲಿನ ಬ್ರಿಟಿಷರಿಗೆ ಒಂದು ಬಿಸಿ ಮುಟ್ಟಿಸಿದರು. ತಮ್ಮ ಜಿಲ್ಲೆಗೆ ಒಬ್ಬ ಭಾರತೀಯನನ್ನು ಮ್ಯಾಜಿಸ್ಟ್ರೇಟ್ ಮಾಡೋ ವರೆಗೂ, ಉಳಿದ ಆಂಗ್ಲ ಮ್ಯಾಜಿಸ್ಟ್ರೇಟ್ ಗಳನ್ನ ಕೊಲ್ತಿವಿ ಅಂತ..ಬ್ರಿಟಿಷರು ಇದನ್ನು ಅಷ್ಟೊಂದು ಪರಿಗಣಿಸಲಿಲ್ಲ.
ಆಗ ಅಲ್ಲಿಗೆ ‘ಜೇಮ್ಸ್ ಪ್ಯಾಡಿ’ ಅನ್ನೋನು ಮ್ಯಾಜಿಸ್ಟ್ರೇಟ್ ಆಗಿ ಬಂದ. ಪ್ರತಿಜ್ಞೆ ಮಾಡಿದ್ದ ಕ್ರಾಂತಿಕಾರಿಗಳು, ಅದೊಂದು ಸಮಾರಂಭದಲ್ಲಿ, ಅತಿಥಿಯಾಗಿ ಬಂದಿದ್ದ ಅವನನ್ನು ಗುಂಡು ಹಾರಿಸಿ ಕೊಂದೇ ಬಿಟ್ಟರು. ಬ್ರಿಟಿಷರು ಕಲ್ಕತ್ತೆಯಿಂದ ವೈದ್ಯರನ್ನು ಕರೆಸಿದರು. ವೈದ್ಯರು ಪ್ಯಾಡಿ ಯಾ ದೇಹದಿಂದ ಗುಂಡುಗಳನ್ನು ಹೊರತೆಗೆದರೂ, ಅವನನ್ನು ಬದುಕಿಸಲಾಗಲಿಲ್ಲ.. ಯುವಕರ ನಿಲುವು ಸ್ಪಷ್ಟವಾಗಿತ್ತು. ಆಂಗ್ಲರು ಈಗ ಸ್ವಲ್ಪ ಚಿನ್ತಿಸಲಾರಮ್ಭಿಸಿದರು..
ಆನಂತರ ‘ಡಾಗ್ಲಾಸ್’ ಎಂಬ ಆಂಗ್ಲನನ್ನು ಮತ್ತೆ ಮ್ಯಾಜಿಸ್ಟ್ರೇಟ್ ಆಗಿ ನಿಯೋಜಿಸಿದರು.. ಆತ ಮೊದಲಿಂದಲೂ ಹೆದರಿದ್ದ.ಅದೊಮ್ಮೆ “ಡಿಸ್ಟ್ರಿಕ್ಟ್ ಬೋರ್ಡ್” ನ ಸಭೆ ಇತ್ತು. ಸಂಜೆಯವರೆಗೂ ಶಾಂತಿಯುತವಾಗಿಯೇ ಇತ್ತು. ಆದರೆ ಗಂಟೆ ೫ ಆಗುತ್ತಿದ್ದಂತೆ ಇಬ್ರು ಯುವಕರು, ‘ಡಾಗ್ಲಾಸ್’ ನ ಹತ್ರ ಬಂದ್ರು. ನೋಡುನೋಡುತ್ತಲೇ ಆ ಆಂಗ್ಲನ ಮೇಲೆ ಗುಂಡು ಹಾರಿಸಲಾಯಿತು..ಆ ಅಧಿಕಾರಿ ಧರೆಗುರುಳಿದ.
ಮಡೆಸ್ನಾನ ನಿಲ್ಲಬೇಕಾಗಿರುವುದು ಮಾನವೀಯತೆಗಾಗಿ,ಜಾತಿಗಾಗಿಯಲ್ಲ
– ರಾಕೇಶ್ ಶೆಟ್ಟಿ
ಇದನ್ನ ಈ ದೇಶದ ಕರ್ಮ ಅಂತಲೇ ಅನ್ನಬೇಕೇನೋ, ಅಂದುಕೊಂಡಂತೆ ‘ಮಡೆ ಸ್ನಾನ’ದ ‘ಮಡೆ'(ಮಡೆ=ಎಂಜಲು) ಉರುಳದವರ ಮೇಲೆಯೂ ಬೀಳುತ್ತಿದೆ.ಇಷ್ಟು ದಿನ ಉರುಳಾಡಿದ್ದು ಮನುಷ್ಯರಾದರೆ ಈಗ ಸಮಸ್ತ ಜಾತಿಗಳು ಬಿದ್ದು ಉರುಳಾಡುತ್ತಿವೆ.ಮಡೆ ಸ್ನಾನವನ್ನು ವಿರೋಧಿಸಿ ನಾನು ಈ ಹಿಂದೆ ಬರೆದ ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಲ್ಲಿ ‘ಅದು ಬ್ರಾಹ್ಮಣರ ಎಂಜಲೆಲೆ’ ಅನ್ನುವ ಕಾರಣಕ್ಕೆ ವಿರೋಧಿಸುತಿದ್ದಿರ ಅನ್ನುವಂತಹ ಪ್ರತಿಕ್ರಿಯೆಗಳು ಬ್ಲಾಗಿನಲ್ಲಿ/ಮಿಂಚೆಗಳ ಮೂಲಕ ಬಂದಿವೆ. ನನ್ನ ಲೇಖನದಲ್ಲೂ ಒಂದು ಮಾತನ್ನು ಸ್ಪಷ್ಟವಾಗಿ ಹೇಳಿದ್ದೆ, ಅದ್ಯಾವ ಜಾತಿಯವರು ತಿಂದು ಮತ್ತಿನ್ಯಾವಾ ಜಾತಿಯವ ಅದರ ಮೇಲೆ ಉರುಳಾಡುವುದು ಅಷ್ಟೇ ಅಸಹ್ಯಕರ’ ಅಂತ.
ಅಂದರೆ,ಅದು ಕುಕ್ಕೆಯ ಮಡೆ ಸ್ನಾನವಿರಲಿ ಅಥವಾ ತುರುವೇಕೆರೆಯ ಮಡೆಸ್ನಾನವಿರಲಿ ಎರಡೂ ಅಸಹ್ಯಕರವೇ, ಎರಡೂ ಖಂಡನೀಯವೇ.ಮಡೆ ಸ್ನಾನದ ಪರ-ವಿರೋಧ ಮಾತನಾಡುವವರು ನೆನಪಿಡಬೇಕಾದದ್ದು ‘ಈ ಮಡೆಸ್ನಾನ ನಿಲ್ಲಬೇಕಾಗಿರುವುದು ಮಾನವೀಯತೆಗಾಗಿ ಹೊರತು ಜಾತಿಗಾಗಿಯಲ್ಲ’ ಅನ್ನುವುದು.
ಹೈಟೆಕ್ ಬಹಿಷ್ಕಾರ…!
– ರಾಕೇಶ್ ಶೆಟ್ಟಿ
‘ಬೇರೆ ಬೇರೆ ವಿಷಯಗಳಲ್ಲಿ ಒಟ್ಟಿಗೆ ಸೇರಿ ಕೆಲಸ ಮಾಡಿದ ಗೆಳೆಯರು ಈಗ ಜನಲೋಕಪಾಲ ವಿಷಯವಾಗಿ ತಾತ್ವಿಕ ಭಿನ್ನಭಿಪ್ರಾಯಗಳನ್ನು ಇಟ್ಟುಕೊಂಡು ವಿರುದ್ಧವಾಗಿ ಮಾತನಾಡುತ್ತಿರುವುದು ಬೇಸರತರಿಸಿದೆ ‘ ಅಂತ ಆ ಗೆಳೆಯ ಕಳೆದ ಆಗಸ್ಟಿನಲ್ಲಿ ಫೆಸ್ಬುಕ್ಕಿನಲ್ಲಿ ಬರೆದುಕೊಂಡಿದ್ದರು.ಅದಕ್ಕೆ ನಾನು ‘ಸಾಮಾಜಿಕ ಕಳಕಳಿಯಿರುವ ಎಲ್ಲ ಮನಸ್ಸುಗಳು ಅಂತಿಮವಾಗಿ ಬಯಸುವುದು ಒಳ್ಳೆಯ ಸಮಾಜವನ್ನಷ್ಟೇ,ತಾತ್ವಿಕ ಭಿನ್ನಭಿಪ್ರಾಯ್ಗಳನ್ನ ವೈಯುಕ್ತಿಕವಾಗಿ ನೋಡಬೇಡಿ’ ಅನ್ನುವಂತೆ ಬರೆದಿದ್ದೆ.ಅವರೂ ಅದನ್ನ ಇಷ್ಟ ಪಟ್ಟಿದ್ದರು.
ಅದಾಗಿ ಬಹುಷಃ ೩-೪ ದಿನಗಳು ನಾನು ಊರಿನಲ್ಲಿ ಇರಲಿಲ್ಲ,ವಾಪಸ್ಸು ಬಂದವನು ಫೇಸ್ಬುಕ್ ತೆಗೆದಾಗ ಗೊತ್ತಾಗಿದ್ದು , ತಾತ್ವಿಕ ಭಿನ್ನಾಭಿಪ್ರಾಯಗಳನ್ನ ವೈಯುಕ್ತಿಕ ಮಟ್ಟಕ್ಕೆ ಆ ಗೆಳೆಯ ಮಾತ್ರವಲ್ಲದೆ ಅವನ ‘ಬಳಗ’ವೂ ತೆಗೆದುಕೊಂಡು ನನಗೆ ಅವರ ಗೂಗಲ್ ಗುಂಪಿನಿಂದ,ಫೆಸ್ಬುಕ್ಕ್ ಗೆಳೆತನದಿಂದ ‘ಹೈಟೆಕ್ -ಬಹಿಷ್ಕಾರ’ ಹಾಕಿದೆ ಅಂತ…! ಈ ಹೈಟೆಕ್ ಬಹಿಷ್ಕಾರ ಹಾಕಿಸಿಕೊಳ್ಳುವಂತೆ ನಡೆದಿದ್ದಾರೂ ಏನು ಅಂತ ನೋಡ ಹೊರಟರೆ….
ಅಣ್ಣಾ ಹಜ಼ಾರೆ ಜನಲೋಕಪಾಲ ಮಸೂದೆಗಾಗಿ ಜಂತರ್ ಮಂಥರ್ನಲ್ಲಿ ಉಪವಾಸ ಕುಳಿತ ದಿನಗಳಿವೆಯಲ್ಲ ಅವು ಈ ದೇಶದಲ್ಲಿ ಇನ್ನೇನು ಬದಲಾವಣೆ ಸಾಧ್ಯವೇ ಇಲ್ಲ ಅನ್ನುವಂತಿದ್ದ ಜನರ ಮನಸ್ಸಿಗೆ ಆಶಾಭಾವನೆ ಮೂಡಿಸಿದ ದಿನಗಳು.ಆಗ ’ಈ ಹೋರಾಟ ಗೆಲ್ಲಲೇ ಬೇಕು’ ಅಂದವರು ಅದ್ಯಾಕೋ ಮತ್ತೆ ಅಣ್ಣಾ ’ರಾಮ ಲೀಲಾ ಮೈದಾನ’ಕ್ಕೆ ಬಂದು ನಿಂತಾಗ ’ಪ್ರಜಾಪ್ರಭುತ್ವದ ಬುಡಕ್ಕೆ ಬೆಂಕಿ ತಗುಲಿದೆ’ ಅನ್ನಲಾರಂಭಿಸಿದರು.ಆಗಲೇ ಅಣ್ಣಾ ಹೋರಾಟವನ್ನು ಬೆಂಬಲಿಸುತಿದ್ದವರು-ವಿರೋಧಿಸುವ ಗೆಳೆಯರ ನಡುವೆ ತಾತ್ವಿಕ ಭಿನ್ನಾಭಿಪ್ರಾಯಗಳ ಚರ್ಚೆ ಫ಼ೇಸ್ಬುಕ್ಕಿನಲ್ಲಿ ಶುರುವಾಗಿದ್ದು.ಈ ಹೋರಾಟ ಸರಿಯಿಲ್ಲ ಅನ್ನಲು ಅವರುಗಳು ಏನೇನು ಅಂಶ ಮುಂದಿಡುತಿದ್ದರೋ, ಹೋರಾಟ ಹೇಗೆ ಸರಿ ಅಂತ ನಾವುಗಳು ನಮ್ಮ ವಾದ ಮುಂದಿಟ್ಟಿದ್ದೆವು. ಮತ್ತಷ್ಟು ಓದು 






