ವಿಷಯದ ವಿವರಗಳಿಗೆ ದಾಟಿರಿ

Posts tagged ‘ಹೋರಾಟ’

12
ಜುಲೈ

ಅವರ ಹಿಂಸೆಗೆ ನನ್ನಲ್ಲಿ ಉತ್ತರವಿರಲಿಲ್ಲ

– ಚಿತ್ರಾ ಸಂತೋಷ್

ನ್ನ ಕಳೆದೆರಡು ಅಂಕಣದಲ್ಲಿ  ಅನ್ಯಾಯದ ಕುಲುಮೆಯಲ್ಲಿ ಬೆಂದ ಹೆಣ್ಣು ಮಕ್ಕಳಿಬ್ಬರ ಕಥೆ ಹೇಳಿದ್ದೆ. ಈಗ  ಮತ್ತೊಂದು ಕಥೆ ಹೇಳುತ್ತಿದ್ದೇನೆ. ಹೆಣ್ಣು ಮುಂದುವರಿದರೂ ಆಕೆಯ ಮೇಲಿನ ಅನ್ಯಾಯಗಳಿನ್ನೂ ಕೊನೆಯಾಗಲಿಲ್ಲ. ಈಕೆಯ ಹೆಸರು ಸುಲೇಖಾ ಮಹಿಪಾಲ್ . ಊರು ಡೆಹ್ರಾಡೂನ್. ಹುಟ್ಟಿದ್ದು ಜಾಡಮಾಲಿ ಕುಟುಂಬದಲ್ಲಿ. ಅಪ್ಪ ಅಮ್ಮನನ್ನು ವಿಷ ನೀಡಿ ಕೊಂದಾಗ ಸುಲೇಖಾಳಿಗೆ ಇನ್ನೂ ೧೩ ವರ್ಷ. ಅಪ್ಪನಿಂದ ದೂರಾದ ಸುಲೇಖಾಳ ಬದುಕು ಪ್ರತಿಕ್ಷಣವೂ ಶೋಷಣೆಗೊಳಗಾಯಿತು. ಭರವಸೆ ಕಳೆದುಕೊಂಡ ಅವಳ ಬದುಕಿನಲ್ಲಿ ಮತ್ತೆ ಭರವಸೆ ತುಂಬಿದ್ದು  ಸಮಾಧಾನ್ ಎಂಬ ಸರ್ಕಾರೇತರ ಸಂಸ್ಥೆ ಮತ್ತು ತನ್ನ  ಭಾ ಪತಿ. ಈಗ ಅನ್ಯಾಯದ ವಿರುದ್ಧ ಸುಲೇಖಾ ಹೋರಾಟಕ್ಕೆ ಭಾ ಪತಿಯೂ ಕೈ ಜೋಡಿಸಿದ್ದಾರೆ.

ಅಮ್ಮನನ್ನು ಉಳಿಸಿಕೊಳ್ಳಲು ಆಕೆಯಿಂದ ಸಾಧ್ಯವಾಗಲಿಲ್ಲ. ಅಪ್ಪನ ರೌದ್ರವತಾರೆದುರು ಮಗಳು ಅಸಹಾಯಕಳಾಗಿ ಮೌನವಾಗಿದ್ದಳು. ಆಕೆಗಿನ್ನೂ ೧೩ ವರ್ಷ. ಆ ಪುಟ್ಟ ಹೆಣ್ಣು ಮಗಳ ಎದುರು ಅಮ್ಮ ಹತಳಾದಳು.

 
ಮತ್ತಷ್ಟು ಓದು »

11
ಜುಲೈ

ದಕ್ಷಿಣ ಸುಡಾನ್ ಈಗ ಸ್ವತಂತ್ರ

ಗೋವಿಂದ ಭಟ್

ಸೈಕಲು ಪ್ರವಾಸದಲ್ಲಿ ನಾನು ಕೆನ್ಯಾ ರಾಜದಾನಿ ನೈರೋಬಿಗೆ ಹಾರುವುದು. ಅನಂತರ ಉಗಂಡಾ, ಸುಡಾನ್ ದಾರಿಯಾಗಿ ಈಜಿಪ್ಟ್ ತಲಪುವುದು ನನ್ನ ಗುರಿಯಾಗಿತ್ತು. ಬಹು ಪಾಲು ರಸ್ತೆ ಇಲ್ಲದ ಕಾರಣ ಜುಬಾ ಪಟ್ಟಣದಿಂದ ನೈಲ್ ನದಿಯ ದೋಣಿಯಲ್ಲಿ ಉತ್ತರಕ್ಕೆ ಸಾಗುವುದು ನನ್ನ ಆಲೋಚನೆಯಾಗಿತ್ತು. ನನ್ನ ಉದ್ದೇಶಿತ ಹಾದಿಯಲ್ಲಿ ಬಹು ಕಾಲದಿಂದ ಅಂದರೆ ಅಂದಿಗೆ ಮೂವತ್ತು ವರ್ಷದಿಂದ ಜನಾಂಗಿಯ ಕಲಹ ನಡೆಯುತ್ತಿದ್ದರೂ ಹಲವು ಪ್ರವಾಸಿಗರು ದೋಣಿಯಲ್ಲಿ ದಾಟುವುದರಲ್ಲಿ ಸಫಲರಾಗಿದ್ದರು. ಅಲ್ಲಿನ ಒಂದು ದೋಣಿಯ ಚಿತ್ರ ಇಲ್ಲಿದೆ. ನನ್ನ ಜರ್ಮನಿಯ ಸೈಕಲು ಗೆಳೆಯ ಫ್ರೆಡ್ ಪೋಲ್ ೧೯೬೪ ರಲ್ಲಿ ಇಲ್ಲೆ ದಾಟಿದ್ದರು. ಅದಕ್ಕೆ ನಾನು ಸಾಕಷ್ಟು ತಯಾರಿ ನಡೆಸಿದ್ದೆ.

ಆದರೆ ಕೆನ್ಯಾ ತಲಪುವಾಗ ಪರೀಸ್ಥಿತಿ ಕಠೀಣವಾಗಿರುವುದು ಅರಿವಾಯಿತು. ನನ್ನ ದಾರಿಯಲ್ಲಿದ್ದ ಉಗಂಡಾ ಹಾಗೂ ಸುಡಾನ್ ಅಂತರ್ಯುದ್ದ ಬರ್ಜರಿಯಾಗಿ ನಡೆಯುತ್ತಿದ್ದರೆ ಉತ್ತರದ ಇತಿಯೋಪಿಯ ಸಹಾ ದಾರಿ ಬಿಡುತ್ತಿರಲಿಲ್ಲ. ಹಾಗಾಗಿ ನನ್ನ ಯೋಜನೆಗಳೆಲ್ಲ ತಲೆಕೆಳಗಾಗಿ ಯುರೋಪಿನಿಂದ ಹಿಂತಿರುಗುವ ಬದಲು ಅಮೇರಿಕವನ್ನು ಹಾದು ಜಗತ್ತು ಪೂರ್ತಿ ಸುತ್ತು ಬರಲು ತೀರ್ಮಾನಿಸಿದೆ.

ಸುಡಾನ್ ದೇಶದಲ್ಲಿ ಉತ್ತರದಲ್ಲಿ ಅರಬ್ ಮುಸ್ಲಿಮರ ಪ್ರಾಬಲ್ಯ. ಅದಿಕಾರವೆಲ್ಲ ಅವರ ಕೈಯಲ್ಲಿ ಕೇಂದ್ರಿತ. ದಕ್ಷಿಣದಲ್ಲಿ ವಾಸ್ತವ್ಯ ಇರುವುದು ಕರಿಯ ಕ್ರೈಸ್ತ ಅನುಯಾಯಿಗಳು. ಬ್ರೀಟಿಶರು ಸ್ವಾತಂತ್ರ ಕೊಡುವಾಗ ಈಜಿಪ್ಟ್ ಜತೆ ಒಪ್ಪಂದ ಮಾಡಿ ಒಂದು ಕಿತಾಪತಿ ಮಾಡಿದ್ದರು. ಈ ಕರಿ ಜನರೇ ಜೀವಿಸುವ ದಕ್ಷಿಣ ಸುಡಾನ್ ಪ್ರಾಂತ್ಯವನ್ನು ಪಕ್ಕದ ಕರಿಯ ಜನರಿರುವ ಕೆನ್ಯಾ ಉಗಂಡಾದಿಂದ ಬೇರ್ಪಡಿಸಿ ಬಹುಕಾಲ ಈಜಿಪ್ಟ್ ವಶವಾಗಿದ್ದ ಉತ್ತರ ಸುಡಾನ್ ಜತೆ ಸೇರಿಸಿಬಿಟ್ಟರು. ಚಿತ್ರದಲ್ಲಿ ಕಾಣುವಂತೆ ಉತ್ತರಬಾಗ ಮರುಭೂಮಿಯಾದರೆ ದಕ್ಷಿಣಬಾಗದಲ್ಲಿ ಹುಲ್ಲುಗಾವಲು ಹಾಗೂ ಕುರುಚಲು ಕಾಡು. ಉತ್ತರದವರಿಂದ ಸತತವಾಗಿ ದಬ್ಬಾಳಿಕೆ, ಅನ್ಯಾಯ. ಶ್ರೀಲಂಕದಲ್ಲಿ ಇದ್ದಂತಹ ಪರಿಸ್ಥಿತಿ.

ಮತ್ತಷ್ಟು ಓದು »

5
ಜುಲೈ

ಚಿನ್ನದ ಹುಡುಗಿಯ ಜೊತೆ ನಿಲ್ಲೋಣ…

5
ಜುಲೈ

ಅಷ್ಟಕ್ಕೂ,ಈ ಪ್ರಜಾಪ್ರಭುತ್ವ ಅಂದರೇನು!?

– ರಾಕೇಶ್ ಶೆಟ್ಟಿ

ಮನಮೋಹನರಿಗಿಂತ ಅಡಾಲ್ಫ್ ಹಿಟ್ಲರ್ ಮೇಲು…!

ದೇಶಕ್ಕಾದ ಅವಮಾನಕ್ಕೆ ಪ್ರತಿಯಾಗಿ ನಂಜು ಕಾರುತಿದ್ದ ಅಡಾಲ್ಫ್ ಹಿಟ್ಲರ್ ಅನ್ನುವ ರಕ್ತ ಪಿಪಾಸು ಸರ್ವಾಧಿಕಾರಿಯನ್ನ, ದೇಶ ಭ್ರಷ್ಟಚಾರದಲ್ಲಿ ಮುಳುಗೇಳುತಿದ್ದರೂ ಸಂಬಂಧವೇ ಇಲ್ಲದಂತಿರುವ,ಕಣ್ಣೆದುರೇ ಅನಾಚಾರ ನಡೆಯುತಿದ್ದರು ಕಣ್ಮುಚ್ಚಿ ಕುಳಿತಿರುವ ಪ್ರಾಮಾಣಿಕ ಪ್ರಧಾನಿ ಮನಮೋಹನರಿಗೆ ಹೋಲಿಸಿದ್ದು ಅತಿಯಾಯ್ತು ಅನ್ನಿಸುತ್ತೆ ಅಲ್ವಾ?

ಹಾಗಿದ್ರೆ, ಅಣ್ಣಾ ಸತ್ಯಾಗ್ರಹ ಮಾಡಿ ಮೊಂಡ ಸರ್ಕಾರವನ್ನ ಮಂಡಿಯೂರಿಸಿದಾಗ ’ಓ! ಸರ್ಕಾರ ಈ ತರ ಬಗ್ಗಿದರೆ, ಎಲ್ಲರೂ ಸತ್ಯಾಗ್ರಹ ಮಾಡಿ ಸರ್ಕಾರವನ್ನ ಬ್ಲಾಕ್ ಮೇಲ್ ಮಾಡಲು ಶುರು ಮಾಡುತ್ತಾರೆ!’ ಅಂತ ಆತಂಕ ಪಡುವವರನ್ನ ಕಂಡಾಗ; ’ಪ್ರಜಾಪ್ರಭುತ್ವವಲ್ಲದ ಭ್ರಷ್ಟಚಾರ ಮುಕ್ತ ಸರ್ಕಾರಕ್ಕಿಂತ, ಭ್ರಷ್ಟಚಾರವಿರುವ ಪ್ರಜಾಪ್ರಭುತ್ವ ಸರ್ಕಾರವೇ ಮೇಲು’ ಅನ್ನುವಂತ ಲೇಖನವನ್ನ ಓದಿದಾಗ; ಪ್ರಬಲ ಜನಲೋಕಪಾಲ ಮಸೂದೆಗಾಗಿ ನಡೆಯುತ್ತಿರುವ ಹೋರಾಟ ’ಪ್ರಜಾಪ್ರಭುತ್ವದ ಬುಡವನ್ನೇ ಅಲುಗಾಡಿಸುತ್ತಿದೆ’ ಅಂತ ಕೆಲ ಮಂದಿ ಗುಲ್ಲೆಬ್ಬಿಸುತ್ತಿರುವುದನ್ನ ನೋಡಿದಾಗ ಇದೂ ಅತಿಯಾಯ್ತು ಅನ್ನಿಸುವುದಿಲ್ವಾ?

ಅಷ್ಟಕ್ಕೂ,ಜನರಿಂದ ಆರಿಸಿ ಬಂದ ಸರ್ಕಾರ ತನ್ನ ಪಾಲಿನ ಕೆಲಸವನ್ನ ತಾನು ಸರಿಯಾಗಿ ಮಾಡುತಿದ್ದರೆ ಅಣ್ಣಾ ಹಜ಼ಾರೆ ಯಾಕೆ ಬರಬೇಕಿತ್ತು? ಕಫ್ಫು ಹಣದ ಕಳ್ಳರ ಹೆಸರನ್ನ ಬಾಯ್ಬಿಡಿ ಅಂದಾಗ ’ಅವೆಲ್ಲ ಆಗಲಿಕ್ಕಿಲ್ಲ’ ಅಂತ ವಿತ್ತ ಸಚಿವ ಅಂದ ಮೇಲೆ ತಾನೇ ಜನರ ಪಿತ್ತ ನೆತ್ತಿಗೇರಿದ್ದು? ಸುಪ್ರೀಂ ಕೋರ್ಟ್ ತಪರಾಕಿ ಹಾಕಿದ ಮೇಲೆಯೆ ತೆರಿಗೆ ಕಳ್ಳ ಹಸನ್ ಅಲಿಯನ್ನ ಬಂಧಿಸಿದ್ದೇಕೆ? ಕಳೆದ ಚುನಾವಣೆಗಿಂತಲೂ ಮೊದಲೇ 2G ಹಗರಣ ಬಾಯ್ತೆರೆದು ನಂತರವೂ ಅದೇ ರಾಜನನ್ನ ಮತ್ತೆ ಕರೆದು ಮತ್ತದೇ ಖಾತೆಯನ್ನ ವಹಿಸಿದ ಸರ್ಕಾರಕ್ಕೆ ನೈತಿಕತೆಯಿದಯೇ? ಈಗ ಆತಂಕ ಪಡುತ್ತಿರುವ ಪ್ರಜಾಪ್ರಭುತ್ವದ ಕಾವಲು ಭಟರೆಲ್ಲ ಆಗ ಏನು ಮಾಡುತಿದ್ದರು?ಎಲ್ಲಿದ್ದರು?

ಮತ್ತಷ್ಟು ಓದು »

1
ಜುಲೈ

ಕ್ಷಮಿಸಿ,ನಿಮ್ಮ ನೆಮ್ಮದಿಯನ್ನು ಕಲಕುವ ಉದ್ದೇಶ!

– ಚಿತ್ರ ಸಂತೋಷ್

ನನ್ನ ಕಣ್ಣಿನಲ್ಲಿ ಕಣ್ಣೀರು ಎಂದೋ ಬತ್ತಿಹೋಗಿತ್ತು. ಅನ್ಯಾಯದ ವಿರುದ್ಧದ ದನಿ ಕುಗ್ಗಿಹೋಗಿತ್ತು. ನನಗೆ ಈಗ ದನಿ ಇಲ್ಲ. ಒಂದು ವೇಳೆ ದನಿ ಇದ್ದರೂ ಕೇಳುವ ಕಿವಿಗಳು ನನ್ನ ಬಳಿ ಇಲ್ಲ. ಅಪ್ಪ-ಅಮ್ಮನ ನೆನಪಾಗುತ್ತದೆ. ಲಂಡನ್‌ನ ನೆನಪುಗಳು ಆಗಾಗ ಸುಳಿಯುತ್ತವೆ. ಬದುಕು ಬೇಡ ಅನಿಸುತ್ತಿದೆ. ಆದರೂ, ನನ್ನ ಕೈಯಾರೆ ನಾನು ಕೊಲೆಯಾಗ ಬಯಸಲಾರೆ. ಎಲ್ಲವನ್ನೂ ಮರೆಯೋಕೆ ಕುಡಿತವನ್ನು ಬದುಕಾಗಿಸಿಕೊಂಡಿದ್ದೇನೆ.

ಆನೆ, ಹುಲಿ, ಸಿಂಹಗಳ ಅಂಗಾಂಗಳನ್ನು  ಪ್ರದರ್ಶನಕ್ಕಿಟ್ಟರೆ ದುಡ್ಡು ಕೊಟ್ಟು ನೋಡಲು ಖುಷಿಪಡ್ತೀವಿ. ಆದರೆ, ಒಬ್ಬ ಹೆಣ್ಣಿನ ಅಂಗಾಂಗಳನ್ನು ಪ್ರದರ್ಶನಕ್ಕಿಟ್ಟರೆ…ನೋಡುವುದು ಬಿಡಿ, ಕೇಳಲು ಅಸಹ್ಯವಾಗುತ್ತದೆ. ಆದರೆ, ಇಂಥದ್ದೊಂದು ನೈಜ ಘಟನೆ ಎರಡು ದಶಕಗಳ ಹಿಂದೆ ನಡೆದಿತ್ತು. ಇಂದಿಗೂ ದಕ್ಷಿಣ ಆಫ್ರಿಕಾದ ನೂರಾರು ಹೆಣ್ಣು ಮಕ್ಕಳು ಈ ಕಥೆಯನ್ನು ನೆನೆಸಿಕೊಂಡು ಕಣ್ಣೀರು ಹಾಕುತ್ತಾರೆ.

*****                                            *****
ನನ್ನ ಹೆಸರು ಸಾರಾ. ಹುಟ್ಟಿದ್ದು ೧೭೮೯ರಲ್ಲಿ. ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ. ನಾನು ಎದ್ದು ನಡೆಯುವ ಹೊತ್ತಿಗೆ ಅಪ್ಪ-ಅಮ್ಮನನ್ನು ಕಳೆದುಕೊಂಡಿದ್ದೆ. ಅವರು ಬಲಿಯಾಗಿದ್ದೂ ಬಡತನಕ್ಕೇ! ಇಂದು ನನ್ನೆದುರು ಅವರ ಮುಖವೂ ಅಸ್ಪಷ್ಟ. ಹಿಂದೆ-ಮುಂದೆ ಯಾರಿಲ್ಲ. ಒಬ್ಬಳೇ ಮಗಳು. ಒಂದಷ್ಟು ದಿನ ಸಂಬಂಧಿಕರ ಆಶ್ರಯದಲ್ಲಿ ಬೆಳೆದೆ. ಆದರೂ, ಅಲ್ಲಿ ನನ್ನ ಬದುಕಿರಲಿಲ್ಲ. ನಮ್ಮೂರಿನ ಪಕ್ಕದ ಡಚ್ ರೈತರ ಮನೆಯಲ್ಲಿ ಜೀತದಾಳಾಗಿ ಸೇರಿಕೊಂಡೆ. ಆಗಿನ್ನೂ ಹರೆಯಕ್ಕೆ ಬಂದ ವಯಸ್ಸು ಜಗತ್ತಿನ ಆಗುಹೋಗುಗಳನ್ನು ತಿಳಿಯಬಲ್ಲವಳಾಗಿದ್ದೆ. ಬಿಳಿಯರು ನಮ್ಮ ಜನಾಂಗದ ವಿರುದ್ಧ ನಡೆಸುತ್ತಿದ್ದ ಅನ್ಯಾಯಗಳ ಕುರಿತು ಕೇಳಿದ್ದೆ. ಎಲ್ಲವೂ ನನ್ನೊಡಲಲ್ಲಿ ಮೌನವಾಗಿದ್ದವು.

ಬೀದಿ-ಬೀದಿಯಲ್ಲಿ ಬೆತ್ತಲಾದೆ!
ಮತ್ತಷ್ಟು ಓದು »

20
ಜೂನ್

‘ಅನ್ಯಾಯ’ದ ಮನೆಯೊಳಗಿನ ಆಶಾಕಿರಣ.

– ಚಿತ್ರಾ ಸಂತೋಷ್

ದೆಹಲಿಯ ಜಿ.ಬಿ. ರಸ್ತೆಯಲ್ಲಿ ನನ್ನ ಪುಟ್ಟ ವಯಸ್ಸು, ಬದುಕು ಮೂರಾಬಟ್ಟೆಯಾಯಿತು ಅನಿಸಿತ್ತು. ನನ್ನ ವಿರುದ್ಧ ನಡೆಯುತ್ತಿರುವ ಅನ್ಯಾಯಗಳಿಗೆ ನನಗೆ ದನಿಯೆತ್ತಲೂ ನನ್ನ ಜೊತೆ ಯಾರಿರಲಿಲ್ಲ. ಆ ‘ಅನ್ಯಾಯ’ದ ಮನೆಯೊಳಗೆ ಪ್ರತಿ ನಿಮಿಷವೂ ನನ್ನ ಮೇಲೆ ಅಮಾನುಷವಾಗಿ ಅತ್ಯಾಚಾರ ನಡೆಯುತ್ತಿತ್ತು. ಐದು ವರ್ಷ ಆ ‘ಸೆರೆಮನೆ’ ಅನುಭವಿಸಿದೆ.
ಅಮ್ಮ ಅಂದ್ರೆ ನನಗೆ ತುಂಬಾ ಪ್ರೀತಿ. ಅವಳಿಗೆ ಒಂದಿಷ್ಟು ನೋವಾದರೂ ಮನಸ್ಸು ಸಹಿಸುತ್ತಿರಲಿಲ್ಲ. ಕೆಲವೊಮ್ಮೆ ಅಮ್ಮ ಮನೆಯಲ್ಲಿದ್ದ ಕಷ್ಟಗಳನ್ನು ನೆನೆದು ಅಳುತ್ತಿದ್ದಳು. ತುಂಬಾ ಸಲ ಅಮ್ಮ ಅಳುವುದನ್ನು ನೋಡಿ ನಾನೂ ಕಣ್ಣೀರಾಗುತ್ತಿದ್ದೆ. ತಲೆಗೆ ಸೆರಗು ಹೊದ್ದು ಅಳುವ ಅವಳನ್ನು ನೋಡಲಾಗದೆ ಸಮಾಧಾನಿಸುತ್ತಿದ್ದೆ. ಬದುಕು ಬರಿದಲ್ಲ, ಅಮ್ಮ ದೊಡ್ಡವಳಾದ ಮೇಲೆ ನಾ ನಿನ್ನ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಭರವಸೆ ತುಂಬುತ್ತಿದ್ದೆ. ಕೆಲವೊಮ್ಮೆ ನನಗೆ ದಿನನಿತ್ಯದ ಶಾಲೆಯ ಖರ್ಚು ಭರಿಸಲೂ ಕಷ್ಟವಾಗುತ್ತಿತ್ತು. ಆದರೂ, ಸಂಜೆ ಶಾಲೆಯಿಂದ ಹೊರಟಾಗ ಅಮ್ಮ ಏನು ತಿಂಡಿ ಮಾಡಿಟ್ಟಿರುತ್ತಾಳೆ ಅಂದುಕೊಂಡೇ ಹೊರಡುತ್ತಿದ್ದೆ.ಸಂಜೆಯಾಗುತ್ತಿದ್ದಂತೆ ಮನಸ್ಸೆಲ್ಲಾ ಮನೆಯಲ್ಲಿರುತ್ತಿತ್ತು. ಅಮ್ಮನ ನೋಡುವ ತವಕವಿತ್ತು. ಅಂದು ಸಂಜೆ ಎಂದಿನಂತೆ ಶಾಲೆಯಿಂದ ಹೊರಟಿದ್ದೆ. ಸುಮಾರು ಐದು ಗಂಟೆ. ಸೂರ್ಯ ಮುಳುಗಲು ಇನ್ನೂ ಕೆಲ ಸಮಯವಿತ್ತು. 

 

 

 

ನನ್ನ ಬೆಲೆ ೩೦೦ ರೂ!
ಅಮ್ಮ ಜಗುಲಿ ಮೇಲೆ ಕುಳಿತಿದ್ದಳು. ನನಗೆ ಅಮ್ಮನ ಕಾಣುವ ಹಂಬಲ, ಅವಳಿಗೆ ಮಗಳನ್ನು ಕಾಣುವ ವಾತ್ಸಲ್ಯ. ನನ್ನನ್ನೇ ಎದುರು ನೋಡುತ್ತಿದ್ದ ಆಕೆಯ ಮುಖದಲ್ಲಿ ನಾನು ಗೇಟು ದಾಟಿ ಹೋಗುತ್ತಿದ್ದಂತೆ ನಗು ಅರಳಿತು. ‘ಬಾ ಮಗಳೇ’ ಎಂದು ತೆಕ್ಕೆಗೆಳೆದುಕೊಂಡಳು. ಸೂರ್ಯ ಮುಳುಗಲು ಕ್ಷಣಗಳನ್ನು ಎಣಿಸುತ್ತಿದ್ದ. ಅಮ್ಮನೆದುರು ಕುಳಿತ ವ್ಯಕ್ತಿಯ ಹೆಸರು ಪ್ರವೀಣ್ ಪಂಡಿತ್. ಹೆಸರಷ್ಟೇ ಗೊತ್ತಿತ್ತು. ಅಮ್ಮ ಅವನ ಜೊತೆ ಅಷ್ಟು ಕೊಡು, ಇಷ್ಟು ಕೊಡು ಎಂದು ಚೌಕಾಸಿ ಮಾಡುತ್ತಿದ್ದಳು. ನನಗೊಂದೂ ಅರ್ಥವಾಗಲಿಲ್ಲ. ಅಮ್ಮ ಹೇಳಿದ ದುಡ್ಡಿಗೆ ಆತ ಒಪ್ಪಲೇ ಇಲ್ಲ. ಕೊನೆಗೆ ೩೦೦ ರೂ. ಕೊಡುತ್ತೇನೆ ಅಂದ. ಅಮ್ಮ ಒಪ್ಪಿಕೊಂಡು, “ಮಗಳೇ ನೀನು ಅಂಕಲ್ ಜೊತೆ ದೆಹಲಿಗೆ ಹೋಗಬೇಕು” ಎಂದು ಹೇಳಿದಳು.

ಮತ್ತಷ್ಟು ಓದು »

19
ಜೂನ್

ಕನ್ನಡ ಪರ ದನಿಯೆತ್ತಿದರೆ ತಾಲಿಬಾನಿಗಳಾ!?

(ಮಾತೃ ಭಾಷೆಗೆ ಅಪಮಾನಕಾರಿ ಹೇಳಿಕೆ ನೀಡಿದ ವಲಸಿಗರ ಬೆನ್ನು ಬಿದ್ದಿದ್ದಕ್ಕೆ ಕನ್ನಡ ಅಭಿಮಾನಿಗಳಿಗೆ ಸಿಕ್ಕ ಬಿರುದು ’ಇಂಟರ್ನೆಟ್ ತಾಲಿಬಾನಿಗಳು’ ,ಮತ್ತು ಅದನ್ನ ದಯಪಾಲಿಸಿದ್ದು ಕ್ಷ-ಕಿರಣ ಅನ್ನುವ ಬ್ಲಾಗು.ಮಾತೃ ಭಾಷೆಯ ಮಹತ್ವದ ಮತ್ತು ಆ ವಿಷಯದ ಅರಿವಿಲ್ಲದೆ ಬರೆಯುವವರ ಮೇಲೆ ನಿಲುಮೆಗೆ ಅನುಕಂಪವಿದೆ.ಆ ಬರಹಕ್ಕೆ ಹೊಳೆನರಸೀಪುರ ಮಂಜುನಾಥ್ ಅವರ ಉತ್ತರ ಇಲ್ಲಿದೆ – ನಿಲುಮೆ)

– ಹೊಳೆನರಸೀಪುರ ಮ೦ಜುನಾಥ. ಬೆ೦ಗಳೂರು.

ಸನ್ಮಾನ್ಯ ರಾಕೇಶ ಮಥಾಯಿಸ್, ತಮ್ಮ ಬ್ಲಾಗಿನಲ್ಲಿ ತಾವು ಬರೆದಿರುವ ಅಪ್ಪಟ ಕನ್ನಡಾಭಿಮಾನಿ ಬರಹಕ್ಕೆ ನನ್ನ ಪ್ರತ್ಯುತ್ತರ ಹೀಗಿದೆ ನೋಡಿರಿ.

“ನಾನೊಬ್ಬ ಮಾಧ್ಯಮದ ವಿಧ್ಯಾರ್ಥಿ. ನನ್ನ ಸುತ್ತಮುತ್ತ ಮಾಧ್ಯಮ ಪ್ರಪಂಚದಲ್ಲಿ ನಡೆಯುತ್ತಿರುವ ಜಾತೀಯತೆ, ಲಾಬಿ, ಭ್ರಷ್ಠಾಚಾರ ನೋಡಿ ಕರ್ನಾಟಕ ಮಾಧ್ಯಮ ಲೋಕದ ಮೇಲೆ ಕ್ಷಕಿರಣ ಬೀರುವ ಅಗತ್ಯವಿದೆಯೆಂದೆನಿಸಿ ಪುಟ್ಟ ಪ್ರಯತ್ನ. ಈ ಹಾದಿ ಸುಗಮವಲ್ಲವೆಂಬ ಅರಿವು ನನಗಿದೆ, ಆದರೆ ಹಿಂದಿನ ಕಟ್ಟಳೆ ಪದ್ಧತಿಗೊಳಗಾಗದೆ ಆಗಸವನ್ನೇ ತೆರೆದಿಟ್ಟಿರುವ ಇಂಟರ್ನೆಟ್ ಮಾಧ್ಯಮಕ್ಕೆ ನಾನು ಋಣಿಯಾಗಿದ್ದೇನೆ.” ಎ೦ದು ನಿಮ್ಮ ಪರಿಚಯದಲ್ಲಿ ಹೇಳಿಕೊ೦ಡಿರುವ ತಮ್ಮ ಕಣ್ಣಿಗೆ ಹೊರ ರಾಜ್ಯದವರು ಕನ್ನಡ ನೆಲ, ಜಲ, ಭಾಷೆಯ ಬಗ್ಗೆ ತಳೆದಿರುವ ನಿಲುವು, ತೋರಿಸುತ್ತಿರುವ ಅಸಡ್ಡೆ, ಇವರಿ೦ದಾಗಿ ಅವಕಾಶವ೦ಚಿತರಾಗುತ್ತಿರುವ ಅಸಹಾಯಕ ವಿದ್ಯಾವ೦ತ ಕನ್ನಡಿಗರು ಕಾಣಿಸಲಿಲ್ಲವೇ?  ಹೊರರಾಜ್ಯದವರು ಕರ್ನಾಟಕದಲ್ಲಿರಬೇಕಾದರೆ ಕನ್ನಡ ಕಲಿಯಲೇಬೇಕು ಎ೦ದಿದ್ದನ್ನು ಧೈರ್ಯವಾಗಿ ಫೇಸ್ ಬುಕ್ಕಿನ೦ತಹ ಸಾಮಾಜಿಕ ತಾಣದಲ್ಲಿ “ಫಕ್ ಆಫ್” ಎ೦ದಿದ್ದನ್ನು ವಿರೋದಿಸಿದವರು ತಮ್ಮ ಕಣ್ಣಿಗೆ “ಅ೦ತರ್ಜಾಲದ ತಾಲಿಬಾನಿಗಳು” ಎನ್ನುವ ರೀತಿಯಲ್ಲಿ ಕ೦ಡಿರುವುದು ತು೦ಬಾ ಆಶ್ಚರ್ಯಕರವಾಗಿದೆ.  ಹಾಗೆಯೇ ತಮ್ಮ ಬೌದ್ಧಿಕ ದಿವಾಳಿತನವನ್ನು ಎತ್ತಿ ತೋರಿಸುತ್ತಿದೆ ಎ೦ದು ಹೇಳಲು ವಿಷಾದವಾಗುತ್ತಿದೆ.

ಕರ್ನಾಟಕ ರಕ್ಷಣಾ ವೇದಿಕೆಯವರು ನಡೆಸಿದ ಕನ್ನಡಪರ ಹೋರಾಟಗಳನ್ನು “ಪು೦ಡಾಟಗಳು” ಅನ್ನುವಷ್ಟು ಪ್ರಬುದ್ಧರಾಗಿದ್ದೀರಲ್ಲ?  ತಾವು ಯಾವ ಮಾನದ೦ಡಗಳನ್ನು ಅನುಸರಿಸಿ ಈ ನಿರ್ಧಾರಕ್ಕೆ ಬ೦ದಿರುವಿರಿ ಎ೦ಬುದನ್ನೂ ವಿವರವಾಗಿ ಕನ್ನಡನಾಡಿನ ಜನತೆಗೆ ತಿಳಿಸುವ೦ಥವರಾಗಿ.  ಇದೇ ಪ್ರಕರಣ ಪಕ್ಕದ ತಮಿಳುನಾಡಿನಲ್ಲಿಯೋ, ಮಹಾರಾಷ್ಟ್ರದಲ್ಲಿಯೋ ನಡೆದಿದ್ದರೆ ಇಷ್ಟು ಹೊತ್ತಿಗೆ ಹಾಗೆ ಮಾತನಾಡಿದವರನ್ನು ಹೊಡೆದು ಓಡಿಸಿರುತ್ತಿದ್ದರು.
ಮತ್ತಷ್ಟು ಓದು »

12
ಜೂನ್

ಕನ್ನಡಿಗರು ಬಿಟ್ಟಿ ಬಿದ್ದಿಲ್ಲ ಅನ್ನುವುದು ನೆನಪಿರಲಿ…!

– ರಾಕೇಶ್ ಶೆಟ್ಟಿ

ಹೊಟ್ಟೆ ಪಾಡಿಗೆ ಅಂತ ಹುಟ್ಟಿದ ಊರು ಬಿಟ್ಟು ನಮ್ಮ ಬೆಂಗಳೂರಿಗೆ ಬಂದು, ಇಲ್ಲಿನ ಅನ್ನ,ನೀರು ಕುಡಿದು ’ಕನ್ನಡ ಕಲಿಯಿರಿ’ ಅಂದರೆ ನಮ್ಮ ವಿರುದ್ಧವೇ ತಿರುಗಿ ಬಿದ್ದು ಕನ್ನಡ/ಬೆಂಗಳೂರಿನ ಬಗ್ಗೆ ದ್ವೇಷಕಾರುವುದು ಒಂದು ರೀತಿಯ ಸುಲಭದ ತುತ್ತಾಗಿದೆ.

ಮೊನ್ನೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ “ಐಟಿ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಪ್ರವಾಹದಲ್ಲಿ ಕರ್ನಾಟಕ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವವರು ಇನ್ನು ಮುಂದೆ ಪ್ರಾಥಮಿಕ ಕನ್ನಡ ಭಾಷೆ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಲಿದೆ” ಅನ್ನುವ ಪ್ರಸ್ತಾವನೆಯೊಂದನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿತ್ತು.ಇದೇ ವಿಷಯವನ್ನ ಬೆಂಗಳೂರು ಮಿರರ್ ಅನ್ನುವ ಇಂಗ್ಲೀಷ್ ಪತ್ರಿಕೆ ಅನ್ಯ ಭಾಷಿಗರನ್ನ ಉದ್ರೇಕಿಸುವ ರೀತಿಯಲ್ಲಿ ಬರೆದಿದೆ.ಅಲ್ಲಿನ ಪ್ರತಿಕ್ರಿಯೆಗಳನ್ನ ನೋಡಿದರೆ ಬರೆದವರನ್ನ ಅಟ್ಟಾಡಿಸಿ ಬಡಿಯಬೇಕು ಅನ್ನಿಸುತ್ತದೆ.

ಈ ನೆಲದಲ್ಲಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾದರೆ, ಈ ನೆಲದ ಭಾಷೆ,ಸಂಸ್ಕೃತಿ,ಆಚಾರಗಳಿಗೆ ಬೆಲೆ ಕೊಡಬೇಕು ಅನ್ನುವ ಕಾಮನ್ ಸೆನ್ಸ್ ಇವರಲ್ಲಿ ಇಲ್ಲ ಅನ್ನುವುದಕ್ಕಿಂತ, ಯಾವುದಕ್ಕೂ ಪ್ರತಿಕ್ರಿಯಿಸಿದ ಕನ್ನಡಿಗರ ಧೋರಣೆಯನ್ನೆ ಇಂತ ಜನಗಳು ನಮ್ಮ ದೌರ್ಬಲ್ಯ ಅಂದುಕೊಂಡಿದ್ದಾರೆ.ಇಲ್ಲದಿದ್ದರೆ ಫ಼ೇಸ್ಬುಕ್ಕಿನಲ್ಲಿ ಹಾಲಿಡೇಐಕ್ಯು ಕಂಪೆನಿಯ ಉದ್ಯೋಗಿ ರಾಬಿನ್ ಚುಗ್ ಅನ್ನುವ ಪರದೇಶಿ ಕನ್ನಡಿಗರಿಗೆ ಫ಼ಕ್ ಆಫ಼್ ಅನ್ನುತ್ತಿರಲಿಲ್ಲ ಅಲ್ಲವಾ? ಆ ಕಿಡಿಗೇಡಿ ಕೆಲಸ ಮಾಡುವ ಕಂಪೆನಿಯ ವಿಳಾಸವಿಲ್ಲಿದೆ. ಅವರಿಗೊಂದು ಮಿಂಚೆ ಬರೆದು (ಭಾಷೆ ವಿಷಯ ಮುಟ್ಟಿಸುವಂತಿರಲಿ,ಬೈಗುಳ ದಯವಿಟ್ಟು ಬೇಡ) ಈ ಮಣ್ಣಿನ ಭಾಷೆಯ ಬಗ್ಗೆ ಗೌರವ ಇಲ್ಲದ ಇಂತವರನ್ನ ನಿಮ್ಮ ಕಂಪೆನಿಯಲ್ಲಿ ಇಟ್ಟುಕೊಳ್ಳುವಿರಾ ಅಂತಲೇ ಕೇಳಬೇಕು.ಮೊದಲೆ ಅವನಿಗೆ ಇಲ್ಲಿನ ರೀತಿ ರಿವಾಜುಗಳ ಬಗ್ಗೆ ತಕರಾರುಗಳಿವೆ.ಇಂತ ಹುಡುಗನನ್ನ ವಾಪಸ್ ಅವನ ಮನೆಗೆ ಕಳಿಸೋದು ನಮ್ಮ ಕರ್ತವ್ಯವಲ್ಲವೇ ಗೆಳೆಯರೇ?

ಮತ್ತಷ್ಟು ಓದು »

11
ಜೂನ್

ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ ಏನೋ..!!

– ಕೆ.ಎಸ್ ರಾಘವೇಂದ್ರ ನಾವಡ

ನೀವು ಏನಾದ್ರೂ ಹೇಳಿ… ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ.. ಅ೦ಥ ಮತ್ತೊಮ್ರ್ ಪ್ರೂವ್ ಆಗಿ ಹೋಗಿದೆ. ನಮ್ಮ ದೇಶದಲ್ಲಿ ಕೆಲವರ ಹಣೆಬರಹವನ್ನು ಸುಲಭವಾಗಿ ನಿರ್ಧರಿಸಬಹುದು.. ಹಿ೦ದೆ ಹಾವೇರಿಯಲ್ಲಿ ರೈತರ ಮುಷ್ಕರಕ್ಕೆ ಯಡಿಯೂರಪ್ಪ ಗೋಲಿಬಾರ್ ಗೆ ಆದೇಶ ನೀಡುವುದರ ಮೂಲಕ ಅದಕ್ಕೊ೦ದು ಗತಿ ಕಾಣಿಸಿದರು! ಇ೦ದು ರಾಮ್ ದೇವ್ ಹಣೆಬರಹವನ್ನು ಕೇ೦ದ್ರ ಸರ್ಕಾರ ಈ ರೀತಿ ಬರೆಯಿತು!! ಒಟ್ಟಾರೆ ನಾವು ಬ್ರಿಟೀಶ್ ಸತ್ತೆಯ ಕಾಲಕ್ಕೆ ಹೋಗುತ್ತಿದ್ದೇವೇನೋ ಎ೦ಬುದು ನನ್ನ ಸ೦ಶಯ!!

ಭರತ ಭೂಮಿಯಲ್ಲಿ  ಬ್ರಿಟೀಶ್ ಆಡಳಿತದಿ೦ದ ಮುಕ್ತರಾಗ ಬಯಸಿ ಸ್ವಾತ೦ತ್ರ್ಯದ ಕನಸು ಕ೦ಡು ಅದಕ್ಕಾಗಿ ಹೋರಾಡಿದವರು- ಶೋಷಿತ ವರ್ಗ – ತಮ್ಮ ಬೇಡಿಕೆಯನ್ನು ನ್ಯಾಯಬಧ್ಧವಾಗಿ ಕೇಳುವವರು- ಜನ ಕಲ್ಯಾಣಕ್ಕಾಗಿ ಹಾತೊರೆದು ಮುನ್ನುಗ್ಗುವವರು – ರಾಜಕೀಯ ವ್ಯವಸ್ಥೆಯನ್ನು ಸುಧಾರಿಸ ಬಯಸುವವರು ಮು೦ತಾದವರ ಹೋರಾಟದ ಅ೦ತ್ಯ ಹೀಗೇ!! ಸರಿ ಸುಮಾರು ಬ್ರಿಟೀಷರಿ೦ದ ಆರ೦ಭವಾದ ಈ ಪ್ರಜೆಗಳ ಧ್ವನಿಯನ್ನು  ಅವರುಗಳ ಗ೦ಟಲನ್ನೇ ಹಿಸುಕುವ ಮೂಲಕ ,ಅವರ ಹೋರಾಟಕ್ಕೊ೦ದು ಅನೈತಿಕ ಅ೦ತ್ಯ ನೀಡುವ ಈ ಕ್ರಮ ದುರದೃಷ್ಟವಶಾತ್ ಇಲ್ಲಿಯವರೆವಿಗೂ ಮು೦ದುವರೆದಿದೆ!! ಹಾಗ೦ತ ಎಲ್ಲ ಹೋರಾಟಗಳೂ ಇದೇ ಅ೦ತ್ಯವನ್ನು ಕ೦ಡವೇ ಎ೦ದರೆ ಖಚಿತವಾದ ಉತ್ತರ ನೀಡಲಿಕ್ಕಾಗುವುದಿಲ್ಲ.. “ಕೆಲವು ಸಮಸ್ಯೆಗಳು ತಾವಾಗೇ ಸೃಷ್ಟಿಯಾದರೆ ಕೆಲವನ್ನು ನಾವೇ ಸೃಷ್ಟಿಸಿಕೊಳ್ಳುತ್ತೇವೆ“ ಎ೦ಬ ನಾವಡ ಉವಾಚವೊ೦ದಿದೆ.. ಅದರ ಪ್ರಕಾರ ಪ್ರಸಕ್ತ ಭರತಭೂಮಿಯಲ್ಲಿಯೂ ಏಕೆ ಸಮಸ್ತ ಜಗತ್ತಿನಲ್ಲಿಯೂ  ಸರ್ಕಾರ ಗಳು ಹಾಗೂ ಜನತೆಗಳ ವಿಚಾರದಲ್ಲಿ ನಡೆಯುತ್ತಿರುವುದು ಇದೇ!!

ಮತ್ತಷ್ಟು ಓದು »

7
ಜೂನ್

ನಾವಿನ್ನೂ ಬ್ರಿಟಿಷರ ಆಳ್ವಿಕೆಯಲ್ಲಿದ್ದೇವೆಯೇ?

– ಸಂಪತ್ ಕುಮಾರ್

ಸ್ವತಂತ್ರ, ಸಂವಿಧಾನಾತ್ಮಕವಾಗಿ ಕಾರ್ಯ ನಿರ್ವಹಿಸುವ  ದೇಶದಲ್ಲಿ ಇಂತಹ ಘಟನೆಗಳು ನಡೆಯಲು ಸಾಧ್ಯವೇ!? ಜೂನ್ ೪ ರ ಘಟನೆ ನಾವೆಲ್ಲರೂ ತಲೆತಗ್ಗಿಸುವಂತೆ ಮಾಡಿದೆ.ಪ್ರಜೆಗಳ ಮೂಲಭೂತ ಹಕ್ಕುಗಳ ಕಗ್ಗೊಲೆಯಾಗಿದೆ. ಗಾಂಧಿಜಿ ಹೇಳಿಕೊಟ್ಟ ಸತ್ಯಾಗ್ರಹದಂತಹ ಅಸ್ತ್ರ ಬೆಲೆ ಕಳೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಗೆ ಪ್ರಚೋದನೆ ನೀಡಿದಂತಾಗಿದೆ.
ಪ್ರಜೆಗಳ ದನಿಯನ್ನು ಹತ್ತಿಕ್ಕಲು ಹೊಸ ವಿಧಾನವನ್ನು ಸರಕಾರ ಹೇಳಿಕೊಟ್ಟಿದೆ. ಬಾಬಾ ರಾಮದೇವ್ ಅವರ ಅಹಿಸಾತ್ಮಕ ಪ್ರತಿಭಟನೆಗೆ ಹಿಂಸಾತ್ಮಕ ಉತ್ತರ ನೀಡಿ ಸರ್ಕಾರ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ಏಪ್ರಿಲ್ ೧೨ ರಂದು ನಾನು ನಿಲುಮೆಯಲ್ಲಿ ಬರೆದ ಲೇಖನ “ಇನ್ನೊಂದು ಸಮರಕ್ಕೆ ಸಿದ್ದರಾಗಿ” ಸದಾಶಯದಂತೆ ಬಾಬಾ ರಾಮದೇವ್ ಅವರು ಸತ್ಯಾಗ್ರಹಕ್ಕೆ ಕುಳಿತದ್ದು ಸಂತೋಷದ ವಿಚಾರವಾಗಿರುತ್ತದೆ. ಲೋಕಪಾಲದಂತಹ ಬಹು ಆಯಾಮದ ಸಮಸ್ಯೆಯನ್ನು ಎದುರಿಸುವ ಬದಲು, “ಕಪ್ಪು ಹಣ” ದಂತಹ ಒಂದೇ ಸಮಸ್ಯೆಯನ್ನು ಎದುರಿಸಿ ಬಾಬಾ ಯಶಸ್ಸನ್ನು ಪಡೆಯುವ ಹಂತದಲ್ಲಿರುವಾಗಲೇ ಹೀಗೆ ಸತ್ಯಾಗ್ರಹವನ್ನು ಹತ್ತಿಕ್ಕಿದ್ದು ಸಮಸ್ಯೆಯನ್ನು ಉಲ್ಬಣಗೊಳಿಸಿದೆ. ಸರಕಾರದ ಸರ್ವಾಧೀಕಾರದ ಧೋರಣೆ ಎಂದಿಗೂ ಸಲ್ಲ.

ಮತ್ತಷ್ಟು ಓದು »