ವಿಷಯದ ವಿವರಗಳಿಗೆ ದಾಟಿರಿ

Posts tagged ‘ಹೋರಾಟ’

5
ಜೂನ್

ಗಾಂಧಿ ಪಕ್ಷದೊಳಗಿನ ಬ್ರಿಟಿಷರು…!

– ರಾಕೇಶ್ ಶೆಟ್ಟಿ

ತಲೆಬರಹವನ್ನ ನಕಲಿ ಗಾಂಧಿಗಳ ಪಕ್ಷದೊಳಗಿನ ಬ್ರಿಟಿಷರು ಅಂತ ಓದಿಕೊಳ್ಳಿ.ಮಹಾತ್ಮರ ಹೆಸರನ್ನ ಬೇಡ ಬೇಡವೆಂದರೂ ಅನಿವಾರ್ಯವಾಗಿ ಅವರ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುತ್ತಿರುವ ಪಕ್ಷದ/ಸರ್ಕಾರದ ದೌರ್ಜನ್ಯದ ವಿರುದ್ಧ ಮಾತನಾಡುವಾಗ ಬಳಸಿಕೊಳ್ಳಲೇಬೇಕಿದೆ.

ಪ್ರಾಮಾಣಿಕ ಪ್ರಧಾನಿಯ ಸರ್ಕಾರ ಅನೈತಿಕ ಕೆಲಸಕ್ಕೆ ಕಡೆಗೂ ಕೈ ಇಟ್ಟಿದೆ.ಮಧ್ಯರಾತ್ರಿ ಕಳ್ಳರಂತೆ-ದರೋಡೆಕೋರರಂತೆ ರಾಮ್ ಲೀಲಾ ಮೈದಾನಕ್ಕೆ ನುಗ್ಗಿ ಹೆಂಗಸರು-ಮಕ್ಕಳು ಅಂತ ನೋಡದೆಯೆ ರಾಕ್ಷಸರಂತೆ ವರ್ತಿಸಿದ ರೀತಿ ನೋಡಿದರೆ, ಮನಮೋಹನ್ ಸಿಂಗ್ ಅನ್ನುವ ಸೋ-ಕಾಲ್ಡ್ ಪ್ರಧಾನಿಯ ಪ್ರಾಮಾಣಿಕತೆ ಉಪ್ಪಿನಕಾಯಿ ಹಾಕಲಿಕ್ಕಾ ಅಂತ ಕೇಳಲೆಬೇಕಾಗುತ್ತದೆ.

ಹುಚ್ಚು ನಾಯಿ ಕಡಿತಕ್ಕೆ ಚುಚ್ಚು ಮದ್ದು ತೆಗೆದುಕೊಳ್ಳದಿದ್ದರೆ ಏನಾಗುತ್ತೆ ಅನ್ನೋದಕ್ಕೆ ದಿಗ್ವಿಜಯ್ ಸಿಂಗ್ ಆಗಾಗ ನೀಡೋ ಹೇಳಿಕೆಗಳೇ ಉದಾಹರಣೆ.ಇಂತ ದಿಗ್ಗಿ ನಿನ್ನೆ ಹೇಳಿದ ಮಾತು ನೆನಪಿದೆಯಾ? ‘ಸರ್ಕಾರ ರಾಮ್ದೇವ್ ಅವರಿಗೆ ಹೆದರಿಲ್ಲ, ಒಂದು ವೇಳೆ ಹೆದರಿದ್ದರೆ ರಾಮ್ ದೇವ್ ಅವರನ್ನ ಬಂಧಿಸುತಿತ್ತು!’.ಹಾಗೇ ಹೇಳಿದ ಮಧ್ಯರಾತ್ರಿಯೇ ಬ್ರಿಟಿಷರು ಜಲಿಯನ್ ವಾಲಾಬಾಗ್ಗೆ ನುಗ್ಗಿದ ರೀತಿಯಲ್ಲೆ ನುಗ್ಗಿ ಅದೇ ರಾಮ್ ದೇವ್ರನ್ನ ಬಂಧಿಸಿದ್ದಾರೆ.ಅಂದರೆ ಕಾಂಗ್ರೆಸ್ಸ್ ಸರ್ಕಾರದ ಬೆದರಿದೆ ಅಂತಲೇ ಅರ್ಥವಲ್ಲವಾ?

ಮತ್ತಷ್ಟು ಓದು »

5
ಜೂನ್

ಹನುಮಪ್ಪನೆ ಆಗಿರಲಿ ಇಮಾಂ ಸಾಬಿಯೇ ಆಗಿರಲಿ…!

– ಪವನ್‍ ಪಾರುಪತ್ತೇದಾರ‍್, ಬೆಂಗಳೂರು

ಜನ ಲೋಕಪಾಲ್ ಜಾರಿಗಾಗಿ ಅಣ್ಣಾ ಹಜಾರೆ ಹೋರಾಟ ಮಾಡಿದ್ರು , ಮೇಧಾ ಪಾಟ್ಕರ್ ಹೋರಾಟಗಳನ್ನ ಮಾಡುತ್ತಲೇ ಇರ್ತಾರೆ. ಎರಡು ಗ್ರೇಟ್‍  ಹಗರಣ ಇಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸುಬ್ರಮಣ್ಯನ್ ಸ್ವಾಮಿ ಅವರ ಹೋರಾಟವೇ ಕಾರಣ. ಈಗ ತಾನೆ ಮಿಲಿಂದ್ ಸೋಮನ್ ಹಸಿರು ಕ್ರಾಂತಿ ಮಾಡಲು 531 ಕಿ.ಮೀ. ಓಟ ಮುಗಿಸಿದ್ದಾರೆ.ಇನ್ನು ಎಷ್ಟೋ ಹೋರಾಟಗಳು ನಡಿತನೆ ಇರುತ್ತವೆ. ಆದರೆ ,ಈಗ ಬಾಬಾ ರಾಮದೇವ್ ಹೋರಾಟ ಮಾಡಲು ಪ್ರಾರಂಭ ಮಾಡಿದ ತಕ್ಷಣ ಈ  ಮಾಧ್ಯಮಗಳು ಏಕೆ ಅದಕ್ಕೆ ಕೋಮುವಾದದ ಬಣ್ಣ ಹಚ್ಹುತ್ತಿವೆಯೋ ಅ ದೇವರೇ ಬಲ್ಲ ” ಟೈಮ್ಸ್ ನೌ” ಅರ್ನಬ್ ಗೋಸ್ವಾಮಿ ಇರಬಹುದು ಅಥವಾ “ಸಿಎನ್‍ಎನ್‍”  ನ ರಾಜ್ದೀಪ್ ಸರ್ದೇಸಾಯಿ ಇರಬಹುದು, ಶಾರುಕ್ ಖಾನ್, ಸಲ್ಮಾನ್ ಖಾನ್ ,ಶೋಭಾ ಡೆ ಮುಂತಾದ ಸೆಲೆಬ್ರಿಟಿಗಳು ಆಗಿರಬಹುದು, ಬಾಬಾ ರಾಮದೇವ್ ಮಾಡುತ್ತಿರುವುದು ನಾಟಕ ಅವರಿಗೆ ಯೋಗ ಹೇಳಿಕೊಡುವುದು ಬಿಟ್ಟು ಈ ಕೆಲಸ ಯಾಕೆ ಅಂತ ಕೇಳುತಿದ್ದಾರೆ .ಕಾಂಗ್ರೆಸ್ಸ್ ನ ದಿಗ್ವಿಜಯ್ ಸಿಂಗ್ ಅಂತು ಗಂಟೆಗೊಂದು ಹೇಳಿಕೆ ರಾಮದೇವ್ ವಿರುದ್ದ ನೀಡುತಿದ್ದಾರೆ  ಆದರೆ ಅತ್ತ ಅವರ ಪಕ್ಷದ ಹಿರಿಯ ಸಚಿವರೆಲ್ಲ ಬಾಬ ಅವರನ್ನ ಮೀಟ್ ಮಡಿ ಕಾಂಪ್ರಮೈಸ್‍ ಅಗೋ ತಂತ್ರ ಹೆಣೆಯುತಿದ್ದಾರೆ .

ಇಷ್ಟಕ್ಕೂ ಮಾಧ್ಯಮದವರು ಕೋಮುವಾದದ ಬಣ್ಣ ಕಟ್ಟುತ್ತಿರುವುದು ಯಾಕೆ ರಾಮದೇವ್ ಅವರು ಕಾವಿ ವಸ್ತ್ರ ಧರಿಸಿ ಮರದ ಪಾದರಕ್ಷೆ ಧರಿಸಿದ್ದಾರೆ ಅಂತಲೇನು?? ಭ್ರಷ್ಟಾಚಾರದ ವಿರುದ್ದ ಹೋರಾಡಲು ಕಾವಿಯದರೇನು ಕಪ್ಪು ವಸ್ತ್ರವಾದರೇನು ? ಮರದ ಚಪ್ಪಲಿ ಅದರೇನು ADIDAS ಶೂ ಅದರೇನು? ಭಾರತದ ಪ್ರತಿಯೊಬ್ಬ ಪ್ರಜೆಗೂ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಹಕ್ಕಿದೆ, ಎಲ್ಲ ಡಾಕುಮೆಂಟ್ ಸರಿ ಇದ್ದರು ಪೋಲಿಸ್ ಗಾಡಿ ಅಡ್ಡ ಹಾಕಿದ ಮೇಲೆ 50 ರೂಪಾಯಿ ಲಂಚ ಕೊಟ್ಟ ಪ್ರತಿಯೊಬ್ಬ ನಾಗರಿಕನಿಗೂ ಅವಾಜ್ ಹಾಕುವ ತಾಕತ್ತಿದೆ. ಈ ಎಲ್ಲ ಭಾರತದ ಪ್ರಜೆಗಳಲ್ಲಿ ಬಾಬಾ ರಾಮದೇವ್ ಸಹ ಒಬ್ಬರು ಎಂದು ಏಕೆ ಮಾಧ್ಯಮದವರು ಬಿಂಬಿಸಬಾರದು? ಮಾಧ್ಯಮಗಳಲ್ಲಿ ಅಪ ಪ್ರಚಾರ ಮಾಡಿ ಹೋರಾಟಕ್ಕೆ ತೊಡಕು ಮಾಡಲು ಕಾಂಗ್ರೆಸ್ ಗೆ ಸಹಾಯ ಮಾಡುವ ತಂತ್ರವಾ? ರಾಜಕೀಯ ವ್ಯಕ್ತಿಗಳಿಗೆ ಹೋರಾಟದಲ್ಲಿ ನಿಷೇಧ ಇದೆ ಆದ್ದರಿಂದ ಈ ಹೋರಾಟದಲ್ಲಿ ಯಾವುದೇ ಪಕ್ಷಗಳಿಗೆ ಲಾಭವಂತು ಇಲ್ಲ.ಈ ಹೋರಾಟದ ಯೆಶಸ್ಸಿನಿಂದ ಲಾಭವಗೋದು ನಾಗರಿಕರಿಗೆ. ಆದರೆ ವಿರೋಧ ಪಕ್ಷದಲ್ಲಿರುವ ಬಿಜೆಪಿ ತನ್ನ ಚುನಾವಣೆಯ ಪ್ರಣಾಳಿಕೆಯಲ್ಲೇ ಕಪ್ಪು ಹಣವನ್ನು ತರುವ ಪ್ರಸ್ತಾವನೆ ಮಾಡಿತ್ತು. ಈಗ ಬೆಂಬಲ ಸೂಚಿಸಿದೆ. ಅದಕ್ಕೆ ಮಾಧ್ಯಮಗಳ ಕಣ್ಣಿಗೆ ಬಾಬಾ ರಾಮದೇವ್ ಬಿಜೆಪಿ ಏಜೆಂಟ್ ಆಗಿದ್ದಾರೆ.

ಮತ್ತಷ್ಟು ಓದು »

5
ಜೂನ್

ರಾಮದೇವ್,ಮೀಡಿಯಾ ಮತ್ತು ಸಂಪಾದಕೀಯ

– ಮಹೇಶ ಪ್ರಸಾದ ನೀರ್ಕಜೆ

ಸಂಪಾದಕೀಯ ತಂಡ ಬರೆದ “ಸಂವಿಧಾನವನ್ನೇ ಒಪ್ಪದ ರಾಮದೇವ ಸತ್ಯಾಗ್ರಹಕ್ಕೆ ಇಳಿದಿದ್ದಾರೆ… ಜೈ ಹೋ! ” ಈ ಲೇಖನದ ಬಗ್ಗೆ ನನ್ನ ಕೆಲವು ಅನಿಸಿಕೆಗಳು. ಇವು ಒಟ್ಟಾರೆಯಾಗಿ ಮಾಧ್ಯಮಗಳ ಬೇಜವಾಬ್ದಾರಿತನದ ಬಗ್ಗೆ ನನ್ನ ಕೆಲವು ಟಿಪ್ಪಣಿಗಳು ಕೂಡ ಹೌದು. ಸದಾ ಮಾಧ್ಯಮದ ತಪ್ಪು ಒಪ್ಪುಗಳನ್ನು ಪ್ರಕಟಿಸುವ ತಂಡ ಅದರ ಜೊತೆಜೊತೆಗೆ ಬೇರೆ ಕೆಲವು ವಿಚಾರಗಳನ್ನು ಕೂಡ ಬರೆಯುತ್ತದೆ. ಅದರಲ್ಲೂ ವಿಶೇಷವಾಗಿ ಧಾರ್ಮಿಕ ಸಂಪ್ರದಾಯವಾದಿಗಳ ಬಗ್ಗೆ, ಮೂಢ ನಂಬಿಕೆಗಳ ಬಗ್ಗೆ ಸಾಕಷ್ಟು ಬರಹಗಳನ್ನು ಬರೆದಿದ್ದಾರೆ. ಅವರ ಕೆಲವು ಪ್ರಯತ್ನಗಳ ಬಗೆಗೆ ನನಗೆ ಹೆಮ್ಮೆಯಿದೆ. ಅದರಲ್ಲೂ ಜಿ ಕನ್ನಡ ವಾಹಿನಿಯಲ್ಲಿ ನಡೆಯುತ್ತಿದ್ದ ಬೃಹತ್ ಬ್ರಹ್ಮಾಂಡ ಕಾರ್ಯಕ್ರಮದ ಬಗೆಗಿನ ವಿರೋಧ ಎಲ್ಲರ ಗಮನ ಸೆಳೆದಿತ್ತು. ಆದರೆ ಮೊದಲಿನಿಂದಲೂ ಕೂಡ ನನಗೆ ಸಂಪಾದಕೀಯ ತಂಡದ ಬಗೆಗೆ ಕೆಲವು ಅನುಮಾನಗಳಿವೆ. ಮೊದಲನೆಯದಾಗಿ ತನ್ನ TRP ಹೆಚ್ಚಿಸಿ ಕೊಳ್ಳಲೋ ಎಂಬಂತೆ ಬ್ಲಾಗಿನಲ್ಲಿ ಎಲ್ಲೆಂದರಲ್ಲಿ ಅನಾಮಿಕ ಪ್ರತಿಕ್ರಿಯಗಳ ಮಹಾಪೂರ. ಈ ಪ್ರತಿಕ್ರಿಯೆಗಳನ್ನು ಯಾರು ಬರೆಯುತ್ತಾರೆ, ಅವರ ಪ್ರತಿಕ್ರಿಯೆಗಳಲ್ಲಿ ಏನಾದರು ಕುತ್ಸಿತ ಉದ್ದೇಶಗಳಿವೆಯೇ ಇತ್ಯಾದಿ ಪ್ರಶ್ನೆಗಳು ನನಗೆ ಮೊದಲಿನಿಂದಲೂ ಇವೆ. ಅಲ್ಲದೆ ಮೂಢ ನಂಬಿಕೆಯನ್ನು ವಿರೋಧಿಸುವ ನೆಪದಲ್ಲಿ ಎಲ್ಲಾ ಅಧ್ಯಾತ್ಮಿಕ ವ್ಯಕ್ತಿಗಳನ್ನು ಟೀಕಿಸುವ ಹುನ್ನಾರವೋ ಎಂದು ಕೂಡ ಸಂಶಯವಿದೆ. ಆದರೆ ಕೆಲವು ಬರಹಗಳಲ್ಲಿ ಉತ್ತಮ ಅಧ್ಯಾತ್ಮಿಕ ಮೌಲ್ಯಗಳನ್ನು ಅದರಲ್ಲೂ ವಿವೇಕಾನಂದ, ಬುಧ್ಧ ಗಾಂಧೀಜಿ ಬಗ್ಗೆ ಬರೆದಿದ್ದೂ ಹೌದು. ಒಟ್ಟಿನಲ್ಲಿ ನನ್ನ ಮಟ್ಟಿಗೆ ಸಂಪಾದಕೀಯ ವಿರೋಧಾಭಾಸಗಳ ಗೂಡು. ಇರಲಿ, ಈಗ ಪ್ರಸ್ತುತ ಲೇಖನದ ಬಗ್ಗೆ ಹೇಳುವುದಾದರೆ ನನ್ನ ಪ್ರಕಾರ ಇದರಲ್ಲಿ ಹಲವಾರು ತಪ್ಪುಗ್ರಹಿಕೆಗಳು, ಮತ್ತು ತಪ್ಪು ಮಾಹಿತಿಗಳು ಕಾಣಸಿಗುತ್ತವೆ. ಅವುಗಳನ್ನು ಪಟ್ಟಿ ಮಾಡಿ, ನಿಜ ಸಂಗತಿಯನ್ನು ಹೊರಗೆಡಹುವ ಒಂದು ಪ್ರಯತ್ನ ಇದು.

ಮತ್ತಷ್ಟು ಓದು »

1
ಜೂನ್

ಬೆಂಗಳೂರಿನಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನ…

– ಚೇತನ್ ಜೀರಾಳ್

ಬಹುಷಃ ಕಳೆದ ಕೆಲವು ತಿಂಗಳಿಂದ ದೇಶದ ಪ್ರತಿಯೊಬ್ಬ ಪ್ರಜೆಯು ಮಾತನಾಡುತ್ತಿರುವುದು ದೇಶದಲ್ಲಿ ವ್ಯಾಪಕವಾಗಿರುವ ಭ್ರಷ್ಟಾಚಾರದ ಬಗ್ಗೆ. ಈ ಭ್ರಷ್ಟಾಚಾರ ಅನ್ನೋ ಮಹಾಮಾರಿ ಪ್ರತಿಯೊಂದು ಕ್ಷೇತ್ರದಲ್ಲೂ ತನ್ನ ಕರಾಳ ಬಾಹುವನ್ನು ಚಾಚಿದೆ. ಭ್ರಷ್ಟಾಚಾರ ಸಮಾಜದ ನೈತಿಕತೆಯ ಜೊತೆಗೆ , ಇಡೀ ನಾಡನ್ನೇ ಅಧೋಗತಿಯತ್ತ ಕೊಂಡ್ಯೊಯುತ್ತದೆ. ಇಂದು ಭ್ರಷ್ಟಾಚಾರ ಅನ್ನುವುದು ಜಾತಿ, ಮತ, ಧರ್ಮ, ಭಾಷೆ ಹೀಗೆ ಎಲ್ಲವನ್ನು ಮೀರಿ ಬೆಳೆದು ನಿಂತು ನಮ್ಮ ನಾಡಿನ ಏಳಿಗೆಗೆ ಮಾರಕವಾಗಿ ಪರಿಣಮಿಸಿದೆ. ಕೇಂದ್ರ ಹಾಗೂ ರಾಜ್ಯ ಅನ್ನೋ ಭೇದವಿಲ್ಲದೇ ಭ್ರಷ್ಟಾಚಾರ ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ನೆಲೆಗೊಂಡಿದೆ. ಭ್ರಷ್ಟಾಚಾರ ಅಳಿಯದ ಹೊರತು ನಮ್ಮ ರಾಜ್ಯ ಏಳಿಗೆ ಕಾಣುವುದಕ್ಕೆ ಸಾಧ್ಯವೇ ಇಲ್ಲಾ. ಈ ಭ್ರಷ್ಟಾಚಾರ ಎಂಬ ರಕ್ಷಸವನ್ನು ನಾವೆಲ್ಲಾ ಸೇರಿ ಹೊಡೆದು ಹಾಕಲೇ ಬೇಕು.

ಮತ್ತಷ್ಟು ಓದು »

1
ಜೂನ್

ಮನೆಮಗಳಿಗೊಂದು ಗಿಡ ನೆಡುವ ಧರ್ ಹರಾ ನಮಗೂ ಆದರ್ಶವಾಗಲಿ…

– ಚಿತ್ರ ಸಂತೋಷ್

ಹೆಣ್ಣುಮಗಳಿಗಾಗಿ ಗಿಡಗಳನ್ನು ನೆಡುವ ಬಿಹಾರದ ಧರ್‌ಹರಾ ಗ್ರಾಮದ ‘ವಿಶಿಷ್ಟ ಸಂಸ್ಕೃತಿ’ಯನ್ನು ನೋಡಿ ಅಮೆರಿಕಾವೇ ನಿಬ್ಬೆರಗಾಗಿತ್ತು. ಅಮೆರಿಕ ರಾಯಭಾರಿ ಮೆಲನ್ನೆ ವರ್ರ್ ಈ ಗ್ರಾಮವನ್ನು ಮನತುಂಬಾ ಕೊಂಡಾಡಿ, ಈ ಗ್ರಾಮ ವಿಶ್ವಕ್ಕೆ ಮಾದರಿ ಎಂದಿದ್ದರು. ಆದರೆ, ನಮ್ಮದೇ ನೆಲದ ಇಂಥದ್ದೊಂದು ಅಪೂರ್ವ ಸಂಸ್ಕೃತಿಯನ್ನು ನಮ್ಮನೆಯ ಸಂಸ್ಕೃತಿಯನ್ನಾಗಿ ಬೆಳೆಸುವ ‘ಕರ್ತವ್ಯ’ವನ್ನು ನಾವಿನ್ನೂ ಮಾಡೇ ಇಲ್ಲ!

ಬಿಟಿಯಾಕೀ ಜನ್ಮ್ ಹೋನಾ, ಹಮಾರೆ ಲಿಯೇ ತೋ ಬಹುತ್ ಖುಷಿಕೀ ಬಾತ್ ಹೈ. ಬಿಟಿಯಾ ಹಮಾರೆ ಲಿಯೇ ಬೋಜ್ ನಹೀ ಹೈ,  ಉನ್ಕೋ ಬಿ ಪಡಾಯೆತೋ ಓಬಿ ಸಾಕ್ಷರ್ ಬನಾಯೇಂಗೆ, ಶಾದಿಬೀ ಕರೇಂಗೆ. ಕ್ಯಾಂಕೀ ಬಿಟಿಯಾ ಧೋ ಘರ್ ಕೀ ಚಿರಾಗ್ ಹೈ….(ನಮಗೆ ಹೆಣ್ಣು  ಮಕ್ಕಳು ಹುಟ್ಟುವುದೆಂದರೆ ಅದೊಂದು ಸಂಭ್ರಮ, ಹೆಮ್ಮೆ. ಹೆಣ್ಣು ಮಕ್ಕಳು ನಮಗೆ ಹೊರೆಯಲ್ಲ. ಗಂಡು ಮಕ್ಕಳಂತೆ ಹೆಣ್ಣು ಮಕ್ಕಳಿಗೂ ಶಿಕ್ಷಣ ನೀಡ್ತೀವಿ. ಮದುವೆ ಮಾಡ್ತೀವಿ. ಏಕೆಂದರೆ ಹೆಣ್ಣು ಮಕ್ಕಳು ಎರಡು ಕುಟುಂಬಗಳ ಬಾಂಧವ್ಯವನ್ನು ಬೆಸೆಯುವ ಕೊಂಡಿ)

ಥತ್! ಇದ್ಯಾವುದೋ ಭಾಷಣಕಾರನ ಬೊಗಳೆ ಮಾತುಗಳು ಎಂದೆನಿಸಬಹುದು. ಆದರೆ, ನಿಮ್ಮ ಊಹೆ ಖಂಡಿತಾ ತಪ್ಪು. ಇದು ಕ್ಷಣ ಕ್ಷಣದ ಬದುಕನ್ನೂ ಕೂಲಿ-ನಾಲಿ ಮೂಲಕ ಕಂಡುಕೊಳ್ಳುವ ಜನಸಾಮಾನ್ಯರ ಮಾತು. ಇವರಿಗೆ ಹೆಣ್ಣು ಮಕ್ಕಳು ಹುಟ್ಟಿದರೆ ಹಬ್ಬದ ಸಂಭ್ರಮ. ನಮ್ಮ ಮನೆಮಗಳು ಹುಟ್ಟಿದರೆ, ಅವಳ ಬದುಕು ಅವಳೇ ಕಟ್ಟಿಕೊಳ್ಳುತ್ತಾಳೆ ಅನ್ನೋ ಗಟ್ಟಿ ನಂಬಿಕೆ ಅವರದು. ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆಗಾಗಿ ಪತ್ನಿಯನ್ನು ಪೀಡಿಸುವುದು ಅಥವಾ ಹೆಣ್ಣು ಮಗಳ ಮದುವೆಗಾಗಿ ಲಕ್ಷಾಂತರ ರೂಪಾಯಿ ಸಾಲಮಾಡಿ ಜೀವನಡೀ ಸಾಲ ತೀರಿಸಲು ಪರದಾಡುವುದು…ಇದೆಲ್ಲಾ ಈ ಊರಿನಲ್ಲಿ ಇನ್ನೂ “ಅಪರಿಚಿತ” ಸುದ್ದಿಗಳು. ಇದ್ಯಾವ ಸಂಸ್ಕೃತಿ, ಇದ್ಯಾವ ಊರು? ಅಂತೀರಾ…

ಮತ್ತಷ್ಟು ಓದು »

30
ಮೇ

ಬಸವನ ಗುಡಿಯಲ್ಲಿ ‘ಕರಪ್ಷನ್ ಸಾಕು’ ಆ೦ದೋಲನ. ನಾ ಕ೦ಡ೦ತೆ

– ಹರೀಶ್ ಆತ್ರೇಯ

ಕಿರಣ್ ಬೇಡಿ ಸ್ವಾಮಿ ಅಗ್ನಿವೇಶ್ ರ ಪ್ರಚೋದಕನಕಾರಿ ಭಾಷಣ, ಶ್ರೀ ಬಾಲಸುಬ್ರಹ್ಮಣ್ಯ೦ ರ ನಿರೂಪಣೆ ಮತ್ತು ಗಣ್ಯರ ಭಾಷಣದ ಅನುವಾದ, ಅರವಿ೦ದ್ ಖೇಜ್ರಿವಾಲರ ಜನಲೋಕಪಾಲ್ ಕಾನೂನು ಪಾಠ, ಕೆಲ ಕಾರ್ಯತಕರ್ತರ ಉತ್ಸಾಹ, ನೈಜ ಕಾಳಜಿ. ಇನ್ನೂ ಕೆಲವರ ಶೋ, ವಾಲ೦ಟೀರ್ ಟೀ ಶರ್ಟ್ ಮೇಲೆ ಎಲ್ಲರ ಕಣ್ಣು, ಮಾಸ್ಟರ್ ಹಿರಣ್ಣಯ್ಯರನವರ ಅನುಭವದ ಮಾತು, ಅಣ್ಣಾ ಹಜಾರೆಯವರ ಮುಗ್ಧ ನುಡಿಗಳು, ರಾಜಕಾರಣಿಗಳ/ ಸರ್ಕಾರಿ ಅಧಿಕಾರಿಗಳ ಮೋಸದಿ೦ದ ಬೇಸತ್ತ ಜನರ ಹತಾಶ ನುಡಿಗಳು, ಜೈಕಾರ, ಗಲೀ ಗಲೀಮೆ ಶೋರ್ ಹೈ ಸಾರೆ ನೇತ ಚೋರ್ ಹೈ ಎನ್ನುವ ಘೋಷಣೆಗಳು, ಇನ್ನೂ ಕೆಲವರಿಗೆ ಇಲ್ಲೇನ್ ನಡೀತಿದೆ ಅ೦ತ್ಲೇ ಗೊತ್ತಿಲ್ದೆ ಇರೋ ಅಮಾಯಕತೆ (?) ಇದೆಲ್ಲರ ನಡುವೆ ನಮ್ ಯಡ್ಯೂರಪ್ಪನವರ ಪರ ಅದ್ಯಾರೋ ನರಸಿ೦ಹ (ಮು. ಮುಖ್ಯಮ೦ತ್ರಿ) ಎ೦ಬುವವನ ಪ್ರಚಾರ, ಸ್ವರಾತ್ಮ ತ೦ಡದ ಪಾಪ್ ರೀತಿಯ ಸ೦ಗೀತ ಅದಕ್ಕೆ ಜನರು ತಲೆದೂಗಿದ್ದು, ಇವು ನಿನ್ನೆಯ ಆ೦ದೋಲನದ ಹೈಲೈಟ್.

ಹನ್ನೊ೦ದು ಗ೦ಟೆಯಿ೦ದ ೨:೫೦ರ ತನಕ ಕಾರ್ಯಕರ್ತರ ಜನಗಳ ಮತ್ತು ಅಲ್ಲಿ ಆಡುತ್ತಿದ್ದ ಯುವಕರ ಮುಖಗಳನ್ನು ಗಮನಿಸುತ್ತಾ ಬ೦ದೆ. ಅಣ್ಣಾ ಹಜಾರೆಯವ್ರು ಬ೦ದದ್ದು ೨:೫೦ ಕ್ಕೆ. ಅಲ್ಲಿಯವರೆಗೂ ಒ೦ದೆರಡು ಬಾರಿ ಸ್ಟೇಜಿನ ಹತ್ರ ಸುತ್ತ ಮುತ್ತ ಓಡಾಡ್ತಾ ಎಲ್ಲರ ಅಭಿಪ್ರಾಯಗಳನ್ನ ಸ೦ಗ್ರಹಿಸುತ್ತಾ ನಿ೦ತೆ. ಕಾರ್ಯಕರ್ತನೊಬ್ಬ “ನೀವು ವಾಲ೦ಟೀರಾ”? ಅ೦ತ ಕೇಳಿದ “ಅಲ್ಲಪ್ಪ” ಅ೦ದೆ “ಹೀಗೆಲ್ಲಾ ಓಡಾಡ್ಬೇಡಿ ಸರ್ ಬಾ೦ಬ್ ಥ್ರೆಟ್ ಇದೆ “ಅ೦ದ ಆಯ್ತಣ್ಣ ಅ೦ತ ಒ೦ಕಡೆ ಕೂತು ಅವರ ಕೆಲ್ಸಾನ ಗಮನಿಸುತ್ತಾ ಬ೦ದೆ. ಮನೇಲಿ ಇರಕ್ಕೆ ಬೋರ್ ಆಗಿ ನಾವೂ ಟಿ ವೀಲಿ ಕಾಣ್ತೀವಲ್ಲ ಅ೦ತ ಯೋಚಿಸ್ಕೊ೦ಡ್ ಬ೦ದು ಟೈಟ್ಸ್, ಅರೆ ತೋಳಿನ ಟಾಪ್ (ಇನ್ನೂ ಕೆಲವರು ಬನೀನ್ ಥರದ್ದು, ಬೇಡ ಬಿಡಿ) ಹಾಕ್ಕೊ೦ಡ್ “ಹೇ ಇಟ್ಸ್ ವೆರಿ ಫನ್ನಿ ಯೋ ನೋ, ಐ ಅಯಾಮ್ ಆಲ್ಸೋ ಎ ವಾಲ೦ಟೀರ್ ಹಿಯರ್, ಇಲ್ಲಿ ಸಕ್ಕತ್ತಾಗಿದೆ, ಐ ವಾನ ವೇರ್ ದಿಸ್ ಟಿ ಶರ್ಟ್, ಹ್ಮ್ ಲೆಟ್ಸ್ ಗೋ ಇನ್ ಸೈಡ್ ದಿ ವಾನ್ ” ಅ೦ತ ಹೋದವರು ಅರ್ಧ ಗ೦ಟೆಯನ೦ತರ ಸರ್ವಾ೦ಗ ಸು೦ದರಿಯರಾಗಿ ಬ೦ದರು.

ಮತ್ತಷ್ಟು ಓದು »

24
ಮೇ

ಬದಲಾವಣೆ ಬಯಸುವುದಾದರೆ ಬಸವನಗುಡಿಗೆ ಬನ್ನಿ…

– ರಾಕೇಶ್ ಶೆಟ್ಟಿ

ಬಸವನಗುಡಿಗೆ ಬಂದ ತಕ್ಷಣ ಬದಲಾವಣೆಯಾಗುತ್ತಾ? ಅನ್ನುವ ಪ್ರಶ್ನೆ ನಿಮ್ಮದಾದರೆ ನನ್ನ ಉತ್ತರ ’ಇಲ್ಲ’! ಅಂತಲೇ. ಭ್ರಷ್ಟಚಾರ ಅನ್ನುವ ಬ್ರಹ್ಮ ರಾಕ್ಷಸನ ವಿರುದ್ಧ ಅಣ್ಣ ಹಜ಼ಾರೆ ನೇತೃತ್ವದಲ್ಲಿ ಶುರುವಾಗಿರುವ ಈ ಹೋರಾಟವೇ ಅಂತಿಮವಲ್ಲ.ಇದು ಆರಂಭವಷ್ಟೆ ಅನ್ನುವುದು ನನ್ನ ಅಭಿಪ್ರಾಯ.

ಅಂತಿಮವಾಗುವುದಾದರೂ ಹೇಗೆ ಹೇಳಿ, ಭ್ರಷ್ಟಚಾರ ಅಂದಾಕ್ಷಣ ಎಲ್ಲರ ಕಣ್ಣು ಮೊದಲು ಬೀಳುವುದೂ ಕಳ್ಳ(ಎಲ್ಲ ಅಲ್ಲ) ರಾಜಕಾರಣಿಗಳ ಮೇಲೆ,ಆಮೇಲೆ ಸರ್ಕಾರಿ ಕಛೇರಿ ಮತ್ತು ಅಧಿಕಾರಿಗಳ ಮೇಲೆ.ತಪ್ಪೇನಿಲ್ಲ ಬಿಡಿ…! ಭ್ರಷ್ಟಚಾರ ಅನ್ನೋ ಪಿರಮಿಡ್ನ ತುತ್ತ ತುದಿಯಲ್ಲಿರೋ ಅವರ ಮೇಲೆ ಎಲ್ಲರ ಕಣ್ಣು ಬೀಳುವುದು ಸಹಜ.ಆದರೆ, ’ನಾವುಗಳೆಷ್ಟು ಸಾಚಾ?’ ಅಂತ ನಮ್ಮನ್ನೇ ನಾವ್ಯಾವತ್ತಾದರೂ ಕೇಳಿಕೊಂಡಿದ್ದೇವೆಯೇ?

ಮತ್ತಷ್ಟು ಓದು »

23
ಮೇ

ನೀವೂ ಭ್ರಷ್ಟಚಾರದ ವಿರೋಧಿಗಳೇ? ಹಾಗಿದ್ದರೆ, ಬಸವನಗುಡಿಗೆ ಬನ್ನಿ…

2
ಮೇ

ಕುರುಕ್ಷೇತ್ರದ ಯುದ್ಧಕ್ಕೆ ಕೃಷ್ಣನೇ ಸರಿ ಅಣ್ಣಾ !

– ರಾಕೇಶ್ ಶೆಟ್ಟಿ

ಕುಂಭಕರ್ಣ ನಿದ್ದೆಯಿಂದ ಎದ್ದ ಭಾರತವನ್ನ ಮತ್ತೆ ನಿದ್ದೆಗೆ ದೂಡಲಾಗುತ್ತಿದೆಯಾ? ಇಂತದ್ದೊಂದು ಪ್ರಶ್ನೆ ಕಾಡಲಾರಂಭಿಸಿದೆ.ಕೆಲವೆ ದಿನದ ಹಿಂದೆ ಅಣ್ಣಾ ಹಜ಼ಾರೆಯವರ ಉಪವಾಸ ಸತ್ಯಾಗ್ರಹದಿಂದ ನಿದ್ದೆಯಲ್ಲಿದ್ದ ಜನ (ಎಲ್ಲ ಜನ ಅಂತೇಳಲು ಸಾಧ್ಯವಿಲ್ಲ) ಎದ್ದು ಬಂದು, ಕಡೆಗೆ ಸೋನಿಯಾ ಮೇಡಂ ಅವರ ಯುಪಿಎ ಸರ್ಕಾರ ಅಣ್ಣನ ಮುಂದೆ ಮಂಡಿಯೂರಿ ಕುಳಿತಾಗಲೇ, ‘ಪಿಕ್ಚರ್ ಅಭಿ ಬಾಕಿ ಹೈ ಮೇರಿ ದೋಸ್ತ್’ ಅಂತ ಬಹುಷಃ ಬಹುತೇಕರಿಗೆ ಅನ್ನಿಸಿತ್ತು.ಅದನ್ನ ನಿಜ ಮಾಡಲೆಂಬಂತೆ ಜನಲೋಕಪಾಲ ಸಮಿತಿ ರಚನೆಯಾದ ಮರುದಿನವೇ ಕೇಂದ್ರ ಮಂತ್ರಿ ಕಪಿಲ್ ಸಿಬಲ್, ಖುದ್ದು ಸಮಿತಿಯ ಸದಸ್ಯರಾಗಿದ್ದೂ, ಸಮಿತಿಯ ಬಗ್ಗೆ ಕೊಂಕು ನುಡಿದು,ಕಡೆಗೆ ನಂಬಿಕೆಯಿಲ್ಲದಿದ್ದರೆ ತೊಲಗಿ ಅಂತ ಅಣ್ಣಾ ಗದರಿದ್ಮೇಲೆ ಯಥಾಪ್ರಕಾರ ರಾಜಕಾರಣಿಗಳ ಹೇಳಿಕೆಯಂತೆ ’ತಪ್ಪಾಗಿ ಅರ್ಥೈಸಲಾಗಿದೆ; ಅಂತೇಳಿ ತೇಪೆ ಹಾಕಿದ್ರು.ಮೊಯ್ಲಿ,ಮನೀಶ್ ತಿವಾರಿಯವ್ರು ಕೊಂಕಿಸಿದ್ದಾಯ್ತು.

ಬಹುಷಃ ಗಾಂಧೀಜಿ,ಜೆಪಿ ನಂತರ ಈ ಮಟ್ಟಕ್ಕೆ ಜನರನ್ನ ಸೆಳೆದಿದ್ದು ಅಣ್ಣಾ ಹಜ಼ಾರೆಯವರೇ ಇರಬೇಕು.ಅವರ ಈ ಪರಿಯ ಜನಪ್ರಿಯತೆ ಪುಡಿವೋಟಿಗಾಗಿ ದೇಶವನ್ನೆ ಬೇಕಾದರು ಮಾರಬಲ್ಲ (ಪುರುಲಿಯಾ ಶಸ್ತ್ರಾಸ್ತ್ರ ಕರ್ಮಕಾಂಡಕ್ಕಿಂತ ದೇಶವನ್ನ ಅಡ ಇಡುವ ಉದಾಹರಣೆ ಬೇಕಾ?) ಹಗಲು ವೇಷದ ರಾಜಕಾರಣಿಗಳ ಕಣ್ಣು ಕೆಂಪಗಾಗುವಂತೆ ಮಾಡಿದ್ದು ಸುಳ್ಳಲ್ಲ.ಸಾಲಾಗಿ ಎಲ್ಲ ಅಣ್ಣನ ವಿರುದ್ಧ ಸದ್ದಿಲ್ಲದೆ ಕೆಲಸ ಶುರು ಹಚ್ಚಿಕೊಂಡರು…!

ಮತ್ತಷ್ಟು ಓದು »

26
ಏಪ್ರಿಲ್

ಕ್ರಾಂತಿಗೆ ಅಕ್ಷರದ ಹಂಗೇಕೆ?

– ಚಿತ್ರ ಸಂತೋಷ್

ಮಧ್ಯಪ್ರದೇಶದ ತಲನ್‌ಪುರ ಗ್ರಾಮದಲ್ಲಿ ಓದು ಬರಹ ತಿಳಿಯದ ಬುಡಕಟ್ಟು ಮಹಿಳೆಯರೇ ಸಾಮಾಜಿಕ ಕ್ರಾಂತಿಗೆ ಮುನ್ನುಡಿಯಾಗಿದ್ದಾರೆ. ನಿತ್ಯ ಕುಡಿದು, ಸಂಸಾರದ ಒಂದಿಷ್ಟು ಚಿಂತೆಯಿಲ್ಲದ ಪುರುಷರಿಗೆ ಬುದ್ಧಿ ಕಲಿಸಬೇಕೆಂಬ ಉದ್ದೇಶದಿಂದ ಇಡೀ ಹಳ್ಳಿಯ ಮಹಿಳೆಯರು ಒಂದಾಗಿ ಸಾರಾಯಿ ನಿಷೇಧ ಮಾಡಿದ್ದಾರೆ.

ಆ ಹಳ್ಳಿಯೇ ಹಾಗೆಯೇ. ಬುಡಕಟ್ಟು  ಬದುಕುಗಳ ಸಂಗಮ. ನೂರಕ್ಕೂ ಹೆಚ್ಚು ಬುಡಕಟ್ಟು ಕುಟುಂಬಗಳನ್ನು ಹೊಂದಿರುವ ಆ  ಹಳ್ಳಿಯಲ್ಲಿ ಹೊತ್ತಿನ ಊಟಕ್ಕೂ ಕಷ್ಟ. ಪತಿ-ಪತ್ನಿಯರು ಎಲ್ಲಾರೂ ಕೂಲಿಗಾಗಿ ಅರಸುವವರು. ವಿದ್ಯೆ, ಶಿಕ್ಷಣ ಎಂಬುವುದು ಅವರ ಪಾಲಿಗೆ ಮರೀಚಿಕೆ. ಸಾಂಪ್ರದಾಯಿಕ ಬದುಕಿನ ಚೌಕಟ್ಟಿನಲ್ಲಿಯೇ ಇಂದಿಗೂ ಬದುಕು ಸವೆಸುವ ಅಲ್ಲಿನ ಕುಟುಂಬಗಳಲ್ಲಿ  ಆಧುನಿಕತೆಯ ಥಳುಕಿಲ್ಲ. ಸಿನಿಮಾ, ಫ್ಯಾಷನ್ ಯಾವುದೂ  ಗೊತ್ತಿಲ್ಲ. ದುಡಿಯುವುದು, ದಿನದ ಮೂರು ಹೊತ್ತಿನ ಅನ್ನ ತುಂಬಿಸಿಕೊಳ್ಳುವುದಷ್ಟೇ ಅವರಿಗೆ ಗೊತ್ತು.

ಅದು ಮಧ್ಯಪ್ರದೇಶದ ತಲನ್‌ಪುರ್ ಎಂಬ ಹಳ್ಳಿ
. ಇಲ್ಲಿನ  ಜನಸಂಖ್ಯೆ ಸುಮಾರು ೩೦೦೦. ಇಂದೋರ್‌ನಿಂದ ಇಲ್ಲಿಗೆ ಸುಮಾರು ೧೮೦ ಕಿ.ಮೀ. ದೂರವಿದೆ.

ಮತ್ತಷ್ಟು ಓದು »