ವಿಷಯದ ವಿವರಗಳಿಗೆ ದಾಟಿರಿ

Posts tagged ‘ಹೋರಾಟ’

22
ಏಪ್ರಿಲ್

ಜೀ ಕನ್ನಡ ವಾಹಿನಿ ಮುಖ್ಯಸ್ಥರಿಗೊಂದು ಬಹಿರಂಗ ಆಗ್ರಹ ಪತ್ರ…

– ಸಂಪಾದಕೀಯ

ಮಾನ್ಯರೆ,

ಈ ಪತ್ರವನ್ನು ಅತ್ಯಂತ ನೋವು, ವಿಷಾದ, ಕಳವಳದಿಂದ ನಿಮಗೆ ಬರೆಯುತ್ತಿದ್ದೇವೆ. ಪತ್ರ ಓದಿದ ನಂತರವಾದರೂ ನೀವು ನಮ್ಮ ಭಾವನೆಗಳಿಗೆ ಸ್ಪಂದಿಸುತ್ತೀರೆಂಬ ನಂಬಿಕೆ ಇದೆ. ಲಕ್ಷ-ಕೋಟಿ ಜನರನ್ನು ತಲುಪುವ ಮೀಡಿಯಾಗಳು ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸಬೇಕು. ಇದು ಕಾನೂನಿನ ಪರಿಭಾಷೆಗಳಿಗೆ ಮಾತ್ರ ಒಳಪಡುವ ವಿಷಯ ಎಂದು ಯಾರೂ ಭಾವಿಸಬೇಕಾಗಿಲ್ಲ, ಕಾನೂನನ್ನೂ ಮೀರಿದ ನೈತಿಕತೆ, ಮಾನವೀಯತೆಯ ಹೊಣೆಗಾರಿಕೆಯನ್ನೂ ಒಪ್ಪಿ ಅನುಸರಿಸಬೇಕಾಗುತ್ತದೆ. ತಾವು ಇಡೀ ಪತ್ರವನ್ನು ಓದಿ, ಸೂಕ್ತ, ಅತ್ಯಗತ್ಯ, ಸಕಾಲಿಕ ನಿರ್ಧಾರಕ್ಕೆ ಬರುವಿರೆಂಬ ನಂಬುಗೆ ನಮಗಿದೆ.

ನಮ್ಮ ತಕರಾರು, ಸಿಟ್ಟು, ಆತಂಕ ಇರುವುದು ನಿಮ್ಮ ವಾಹಿನಿಯಲ್ಲಿ ಪ್ರತಿನಿತ್ಯ ಬೆಳಿಗ್ಗೆ ೯ ಗಂಟೆಗೆ ಪ್ರಸಾರವಾಗುವ ಬೃಹತ್ ಬ್ರಹ್ಮಾಂಡ ಎಂಬ ಜ್ಯೋತಿಷ್ಯ ಸಂಬಂಧಿ ಕಾರ್ಯಕ್ರಮದ ಕುರಿತು. ಈ ಕಾರ್ಯಕ್ರಮವನ್ನು ನಡೆಸಿಕೊಡುವವರು ಶ್ರೀ ನರೇಂದ್ರ ಬಾಬು ಶರ್ಮ ಎಂಬುವವರು. ಇವರು ನಿಮ್ಮ ಚಾನಲ್‌ನಲ್ಲಿ ಕಾರ್ಯಕ್ರಮ ನಡೆಸಿಕೊಡುವುದಕ್ಕೆ ಮುನ್ನ ಸುವರ್ಣ ವಾಹಿನಿಯಲ್ಲಿ ಭವ್ಯ ಬ್ರಹ್ಮಾಂಡ ಎಂಬ ಹೆಸರಿನಲ್ಲಿ, ಅದಕ್ಕೂ ಮುನ್ನ ಕಸ್ತೂರಿ ವಾಹಿನಿಯಲ್ಲಿ ಬ್ರಹ್ಮಾಂಡ ಎಂಬ ಹೆಸರಿನಲ್ಲಿ ಇದೇ ಸ್ವರೂಪದ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದರು. ಬಹಳಷ್ಟು ಜನರಿಗೆ ಗೊತ್ತಿರುವ ಪ್ರಕಾರ ತೀರಾ ಇತ್ತೀಚಿನವರೆಗೆ ನರೇಂದ್ರ ಶರ್ಮ ಅವರು ಕನ್ನಡ ಸಿನಿಮಾಗಳಲ್ಲಿ ಜೂನಿಯರ್ ಆರ್ಟಿಸ್ಟ್ ಆಗಿದ್ದವರು.

ನರೇಂದ್ರ ಶರ್ಮ ಅವರು ಕಸ್ತೂರಿ ವಾಹಿನಿ ಹಾಗು ಸುವರ್ಣ ವಾಹಿನಿಗಳಲ್ಲಿ ಬ್ರಹ್ಮಾಂಡ ನಡೆಸುತ್ತಿದ್ದಾಗಲೇ ಅವರು ಬಳಸುವ ಭಾಷೆ, ಹೇಳುವ ಹಸಿಹಸಿ ಸುಳ್ಳುಗಳು ಮಾನವಂತರ, ಪ್ರಜ್ಞಾವಂತರ ಆಕ್ರೋಶಕ್ಕೆ ಕಾರಣವಾಗಿತ್ತು. ಮಹಿಳೆಯರನ್ನು ವಿನಾಕಾರಣ ನಿಂದಿಸುವುದು-ಅವಹೇಳನ ಮಾಡುವುದು, ಕೆಳಜಾತಿಯ ಜನರನ್ನು ಗುರಿಪಡಿಸಿ ತಿರಸ್ಕಾರದಿಂದ ಮಾತನಾಡಿ ಅಪಮಾನಿಸುವುದು, ಜ್ಯೋತಿಷ್ಯದ ಹೆಸರಿನಲ್ಲಿ ಸುಳ್ಳುಗಳ ಕಂತೆ ಕಟ್ಟಿ ಜನರನ್ನು ಬೆದರಿಸುವುದು ಇವರು ಹಿಂದಿನಿಂದ ಮಾಡಿಕೊಂಡು ಬಂದಿರುವ ಕೆಲಸ. ಅದನ್ನು ಅವರು ನಿಮ್ಮ ಜೀ ವಾಹಿನಿಯಲ್ಲೂ ಮಾಡುತ್ತಿದ್ದಾರೆ ಹಾಗು ಅದು ಈಗ ಅತಿರೇಕಕ್ಕೆ ತಲುಪಿದೆ.

ನಿಮ್ಮ ಜೀ ವಾಹಿನಿಯ ವೇದಿಕೆಯನ್ನು ಬಳಸಿಕೊಂಡು ನರೇಂದ್ರ ಶರ್ಮ ಏನೇನು ಮಾತನಾಡಿದ್ದಾರೆ ಎಂಬುದಕ್ಕೆ ಕೆಲವು ಸ್ಯಾಂಪಲ್‌ಗಳನ್ನು ಇಲ್ಲಿ ಒದಗಿಸುತ್ತಿದ್ದೇವೆ. ದಯವಿಟ್ಟು ಗಮನವಿಟ್ಟು ಓದಬೇಕಾಗಿ ವಿನಂತಿ. ಮತ್ತಷ್ಟು ಓದು »

19
ಏಪ್ರಿಲ್

ಹಸಿರುಕಾನನದ ಮಗಳೀಕೆ ಗೌರಾದೇವಿ…..

– ಚಿತ್ರ ಸಂತೋಷ್

ಉತ್ತರ ಖಾಂಡದ ರೇನಿ ಗ್ರಾಮದಲ್ಲಿ  ಮರಗಳನ್ನು ಕಡಿಯಲು ಬಂದ ಅಧಿಕಾರಿಗಳ ವಿರುದ್ಧ ಬಂಡೆದ್ದವಳು ಗೌರಾದೇವಿ. ಬುಡಕಟ್ಟು ಜನರಿಗೆ ದಟ್ಟಾರಣ್ಯಗಳೇ ತವರು. ಕಾಡಿಗೂ-ನಮಗೂ ಇರುವುದು ಅಮ್ಮ-ಮಕ್ಕಳ ಸಂಬಂಧ.ಬದುಕಿದರೆ ನಮಗೆ ಆಸರೆ ನೀಡಿದ ಈ ಹಸಿರು ಕಾಡುಗಳಿಗಾಗಿ ಬದುಕಿ …ಎಂದು ಹಳ್ಳಿ ಮನೆಗಳ ಜಗುಲಿಯಲ್ಲಿ ಕುಳಿತು ಜಾಗೃತಿಯ ಕಹಳೆ ವೊಳಗಿಸಿದವಳು ಇವಳೇ ಗೌರಾದೇವಿ. ದೇಶದ್ಯಾಂತ ಪರಿಸರ ಕ್ರಾಂತಿ ಮಾಡಿದ ಚಿಪ್ಕೋ ಚಳವಳಿನ್ನು ಹುಟ್ಟು ಹಾಕಿದ್ದೇ ಇವಳು. ಇಂಥ ಗೌರಾದೇವಿಯನ್ನು ಗೌರವದಿಂದ ನೆನೆಯುವ ಕೆಲಸವನ್ನು ನಾವು ಮಾಡಬೇಕಿದೆ.

“ಸಹೋದರರೇ  ಈ ಅರಣ್ಯ ಪ್ರದೇಶ ನಮ್ಮ ಜೀವಮೂಲ. ನಮ್ಮ ಹುಟ್ಟಿನಿಂದ ಸಾವಿನ ತನಕದ ಜೀವನ ಬಂಡಿಗೆ ಸಾಥ್ ನೀಡುವುದು ಇದೇ ಹಸಿರು ಕಾನನ. ಈ ‘ರಮೆಯೇ ನಮ್ಮಮ್ಮ. ನೀವು ನಿಮ್ಮ ಹರಿತವಾದ ಗರಗಸವನ್ನು ನಮ್ಮಮ್ಮನ ಕರುಳಿಗೆ ಇಡುವ ವೊದಲು ನನ್ನ ಎದೆಗೆ ಹಿಡಿ”

ಬಹುಶಃ ಚಿಪ್ಕೋ ಚಳವಳಿ ಹುಟ್ಟುವ ವೊದಲು ಓರ್ವ ಬುಡಕಟ್ಟು ಮಹಿಳೆ ಉತ್ತರ ಖಾಂಡದ ಆ ಬೃಹತ್ ಅರಣ್ಯದಲ್ಲಿ ಈ ರೀತಿ ಮರಗಳನ್ನು ತಬ್ಬಿಕೊಂಡು ಸರ್ಕಾರದ ಅಕಾರಿಗಳ ಎದುರು ಈ ರೀತಿ ಅಳಲು ತೋಡಿಕೊಂಡಿದ್ದು ಬಹಳಷ್ಟು ಜನರಿಗೆ ನೆನಪು ಇರಲಿಕ್ಕಿಲ್ಲ. ಚಿಪ್ಕೋ ಚಳವಳಿ ಕುರಿತು ಮಾತೆತ್ತಿದ್ದರೆ ತಕ್ಷಣಕ್ಕೆ ನೆನಪಿಗೆ ಬರುವುದು ಸುಂದರ್ ಲಾಲ್ ಬಹುಗುಣ ಎಂಬ ಮಹಾನ್ ವ್ಯಕ್ತಿ. ಆದರೆ, ಇವರಿಗಿಂತಲೂ ವೊದಲು ಅಲ್ಲಿ ಮಹಿಳೆಯೊಬ್ಬಳ ದನಿಯಿತ್ತು,  ದೇಶದಾದ್ಯಂತ ಬೃಹತ್ ಪರಿಸರ ಕ್ರಾಂತಿಗೆ ಮುನ್ನುಡಿಯಾದ ಆ ಚಳವಳಿಯ ಹಿಂದೆ ಅನಕ್ಷರಸ್ಥೆ ಮಹಿಳೆಯ ಶ್ರಮ ಇತ್ತು, ಕಣ್ಣೀರಿತ್ತು, ಜಾಗೃತಿಯ ಕಹಳೆಯಿತ್ತು.

ಅವಳ ಹೆಸರು ಗೌರಾದೇವಿ.

ಮತ್ತಷ್ಟು ಓದು »

18
ಏಪ್ರಿಲ್

ವೋಟ್ ಬ್ಯಾಂಕ್ ಭಾಷೆಯಾಗಲಿ ಕನ್ನಡ

– ರಾಕೇಶ್ ಶೆಟ್ಟಿ

ಪತ್ರಿಕೆಗಳಲ್ಲಿ ಆಗೀಗ ‘ಅನ್ನ ಕೊಡುವ ಭಾಷೆಯಾಗಲಿ ಕನ್ನಡ’ ಅನ್ನೋ ಕಳಕಳಿಯ ಲೇಖನಗಳು ಬರುತ್ತಲೇ ಇರುತ್ತವೆ.ಒಂದೆಡೆ ‘ಸರ್ವಂ ಇಂಗ್ಲೀಶ್ ಮಯಂ’ ಮತ್ತೊಂದೆಡೆ ‘ಏಕಮ್ ಭಾರತಂ ಹಿಂದಿಮಯಂ’ (ಈ ಮಂತ್ರ ಸರಿ ಇಲ್ಲ ಅಂತೆಲ್ಲ ಹೇಳ್ಬೆಡಿ 😉 )  ಅನ್ನೋ ಕೇಂದ್ರದ ನೀತಿಯ ನಡುವೆ ಕನ್ನಡ ‘ಅನ್ನ’ ಕೊಡುವ ಭಾಷೆಯಾಗುವುದು ಹೇಗೆ?  ನನಗನ್ನಿಸುವ ಹಾಗೆ, ಈಗಿನ ಪರಿಸ್ಥಿತಿಯಲ್ಲಿ  ಅನ್ನ ಕೊಡುವ ಭಾಷೆಯಾಗುವ ಶಕ್ತಿ ಬರಬೇಕೆಂದರೆ ಮೊದಲು ‘ವೋಟ್ ಕೊಡುವ ಭಾಷೆಯಾಗಬೇಕು ಕನ್ನಡ’.ಎಲ್ಲ ಪಕ್ಷಗಳು ಕುಣಿಯುವುದು ವೋಟಿಗಾಗಿ,ಪುಡಿ ವೋಟಿಗಾಗಿ ಅನ್ನೋ ಕಾಲವಿದು.ವೋಟಿಗಿರುವಷ್ಟು ಶಕ್ತಿ ಸದ್ಯಕ್ಕೆ ಯಾವುದಕ್ಕಿದೆ ನೀವೇ ಹೇಳಿ?

ಕೆಲವರು ನನ್ನ ಮಾತನ್ನು ಒಪ್ಪಬಹುದು ಇನ್ನ ಕೆಲವರು ಇದನ್ನ ನಿರಾಕರಿಸಬಹುದು. ನಿರಾಕರಿಸುವವರು ಭಾರತದ ರಾಜಕೀಯ ಇತಿಹಾಸವನ್ನೊಮ್ಮೆ ನೋಡುತ್ತಾ ಬನ್ನಿ.ಗಾಂಧೀಜಿ ಕಾಲದಿಂದ ಇಂದಿನವರೆಗೂ ನಮ್ಮಲ್ಲಿ ನಡೆಯುತ್ತಿರುವುದೇ ಓಲೈಕೆಯ ವೋಟ್ ಬ್ಯಾಂಕ್ ರಾಜಕಾರಣ ಅಲ್ವಾ?

ಮತ್ತಷ್ಟು ಓದು »

17
ಏಪ್ರಿಲ್

ಎಂಡ್ ‘ದಿ’ ಸಲ್ಫಾನ್…!

12
ಏಪ್ರಿಲ್

ಅವರೆತ್ತರಕ್ಕೆ ಏರಲಾಗದಿದ್ದರೆ ತೆಪ್ಪಗಿರಿ…!

– ರಾಕೇಶ್ ಶೆಟ್ಟಿ

“ಇಂದಿನ ಪರಿಸ್ಥಿತಿಯಲ್ಲಿ ಮಹಾತ್ಮ ಗಾಂಧೀಜಿ ಅವರು ಇದ್ದಿದ್ದರೆ, ಅವರು ಕೂಡಾ ಭ್ರಷ್ಟರಾಗುತ್ತಿದ್ದರು. ರಾಜಕೀಯದಲ್ಲಿ ಉಳಿಯಬೇಕಾದರೆ ಭ್ರಷ್ಟರಾಗದೆ ಇರಲು ಸಾಧ್ಯವೇ ಇಲ್ಲ” ಇಂತ ಹೇಳಿಕೆ ಕೊಟ್ಟೊವ್ರು ಯಾರು ಅನ್ನೋದು ಎಲ್ರಿಗು ಗೊತ್ತಿದೆಯಲ್ವಾ? ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವ್ರು.ಒಂದ್ ಕಡೆ ದೇವೆಗೌಡ್ರು ಫೋಟೊ,ಇನ್ನೊಂದ್ ಕಡೆ ಇದೇ ಮಹಾತ್ಮನ ಫೋಟೊ ಹಾಕೊಂಡಿರೋ ಪಕ್ಷದ ರಾಜ್ಯಾಧ್ಯಕ್ಷರ ಬಾಯಿಯಲ್ಲಿ ಬಂದ ಮುತ್ತಿನಂತ ಮಾತುಗಳಿವು.

ಮುತ್ತುಗಳು ಬಿದ್ದಾಗ ಆರಿಸಿ ಮನೆಗ್ ತಗೊಂಡು ಹೋಗೊದು ರೂಢಿ,ಆದ್ರೆ ಕುಮಾರ ಸ್ವಾಮಿ ಅವ್ರ ಮುತ್ತನ್ನ ಹಿಡಿದು ಅವರಿಗೆ ಪೈಡ್ ಪೈಡ್ ಅಂತ ಎಲ್ಲ ಕಡೆಯಿಂದ ಬಾರಿಸುತಿದ್ದಾರೆ.ಬಾರಿಸದೆ ಬಿಡ್ಬೇಕಾ? ಒಂದು ಕಡೆ ಮಹಾತ್ಮರ ಹೋರಾಟದಿಂದ ಸ್ಪೂರ್ತಿ ಪಡೆದ ೭೬ ವರ್ಷದ ಅಣ್ಣಾ ಹಜಾರೆಯಂತವರು ಸತ್ತತಿಂಹರನ್ನ ಬಡಿದೆಬ್ಬಿಸಲು ಉಪವಾಸ ಕೂತರೆ,ಇನ್ನೊಂದು ಕಡೆ ಈ ಕುಮಾರಸ್ವಾಮಿ ಮಹಾತ್ಮರ ಬಗ್ಗೆ ಇಂತ ಮಾತನಾಡಲು ಹೊರಟಿದ್ದಾರೆ!

ಮತ್ತಷ್ಟು ಓದು »

12
ಏಪ್ರಿಲ್

ಇನ್ನೊಂದು ಸಮರಕ್ಕೆ ಸಿದ್ಧರಾಗಿ…

-ಸಂಪತ್ ಕುಮಾರ್

ಅಣ್ಣ ಹಜಾರೆಯವರ  ಉಪವಾಸವೇನೋ ಮುಗಿಯಿತು. ರಂಗೋಲೆಯ ಕೆಳಗೆ ನುಸುಳುವ ಬುದ್ಧಿ ಉಳ್ಳ ರಾಜಕಾರಣಿಗಳು ಎಂತಹ ಕಾನೂನು ತಯಾರಿಸುತ್ತರೋ ಕಾದುನೋಡಬೇಕು. ಈಗಾಗಲೇ ಅಸ್ತಿತ್ವದಲ್ಲಿರುವ ಲೋಕಾಯುಕ್ತದಂತಹ ಸಂಸ್ಥೆಯಿಂದ ಆಗುತ್ತಿರುವ ಭ್ರಷ್ಟಾಚಾರಿಗಳ ಬೇಟೆ ಅವರಿಗೆ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗಿರುವುದು ಸರ್ವವೇದ್ಯ. ಅಲ್ಲದೆ ಇಂತಹ ವಿಧೇಯಕ ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವುದೂ ಅನುಮಾನ.ಇಂತಹ ಪರಿಸ್ತಿತಿಯಲ್ಲಿ ಇನ್ನೊದು ಹೋರಾಟದ ಅಗತ್ಯ ಇದೆ.

ಭಾರತದ ರಾಜಕಾರಣಿಗಳ ಕೋಟಿ ಕೋಟಿ ಕಪ್ಪು ಹಣ ಸ್ವಿಸ್ ಬ್ಯಾಂಕಿನಲ್ಲಿ ಕೊಳೆಯುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಹಣವನ್ನು ರಾಷ್ಟ್ರೀಯ ಸಂಪತ್ತೆಂದು ಘೋಷಿಸಿದರೆ ಭಾರತ ತನ್ನೆಲ್ಲ ಸಾಲದಿಂದ ಮುಕ್ತವಾಗಿ, ಹಣ ದುಬ್ಬರ, ಬಡತನ, ಮುಂತಾದ ತನ್ನೆಲ್ಲ ಕಷ್ಟ ಕೋಟಲೆಗಳಿಂದ ಹೊರಬರಲು ಸಾಧ್ಯ. ಇದಕ್ಕಾಗಿ ಅಣ್ಣ ಹಜಾರೆ ಅವರನ್ನು ಈ ಉದ್ದೇಶಕ್ಕಾಗಿ ಪುನಃ ಉಪವಾಸ ಕೂರಲು ಹೇಳುವುದು ಸ್ವಾರ್ಥ ಎನಿಸಬಹುದು. ಈ ವಿಚಾರವನ್ನೇ ತನ್ನ ಚುನಾವಣ ಪ್ರಾಣಾಳಿಕೆ ಮಾಡಿಕೊಂಡಿರುವ ಭಾ.ಜ.ಪ. ದಿಂದ ಇದನ್ನು ರಾಜಕೀಯಗೊಳಿಸಬಾರದು.
ಮತ್ತಷ್ಟು ಓದು »