ವಿಷಯದ ವಿವರಗಳಿಗೆ ದಾಟಿರಿ

Posts tagged ‘ananth kumar hegade’

18
ಜನ

ಅನಂತಕುಮಾರ್ ಹೇಳಿದ್ದರಲ್ಲೇನು ತಪ್ಪಿದೆ?

– ಜೆಬಿಆರ್ ರಂಗಸ್ವಾಮಿ

ಅನಂತ ಕುಮಾರ್ ಹೆಗಡೆಯವರ ಮಾತುಗಳನ್ನು ಕೇಳಿದೆ. ಯಾವ context ನಲ್ಲಿ ಯಾಕಾಗಿ ಆ ಮಾತುಗಳನ್ನಾಡಿದ್ದಾರೆ ? ಅದನ್ನೂ ಆಲಿಸಿದೆ. ಅವರು ಉದ್ದೇಶಿಸಿ ಹೇಳಿದ ಮಾತುಗಳಲ್ಲಿ ಅಪರಾಧವೇನಿದೆ ? ಅನ್ನಿಸಿತು‌. ಮತ್ತೊಮ್ಮೆ ಎಲ್ಲ ಛಾನಲ್ಗಳಲ್ಲಿ ಅವರು ಆಡಿದ ಮಾತುಗಳನ್ನು ಗ್ರಹಿಸಲು ಯತ್ನಿಸಿದೆ. ಕಾವ್ಯಾನಂದರ ( ಕುವೆಂಪು ಅಲ್ಲ ) ಮೊದಲು ನೀನು ಮಾನವನಾಗು ಎಂಬುದನ್ನು ಉಲ್ಲೇಖಿಸಿ ಪ್ರಾಸಂಗಿಕವಾಗಿ ಮಾತನಾಡಿದ್ದಾರೆಯೇ ಹೊರತು, ಆ ಮಾತುಗಳನ್ನು ಅವಹೇಳನ ಮಾಡಿದ್ದಾರೆ ಅನ್ನಿಸಲಿಲ್ಲ. ಕಾವ್ಯಾನಂದರನ್ನು ಟೀಕಿಸಲಿಲ್ಲ. ಬುದ್ದಿಜೀವಿಗಳು ಎಂದೊಡನೆ ‘ಪುಸ್ತಕ ಬರೆವ ಎಲ್ಲರೂ’ ಅಂದುಕೊಳ್ಳಬೇಕಿಲ್ಲ. ಆ ಹೆಸರಿನಲ್ಲಿ ವ್ಯಾಪಾರ ಮಾಡುವ ಗೋಸುಂಬೆಗಳು, ದುರ್ಲಾಭ ಪಡೆದುಕೊಳ್ಳುವ ವಂಚಕರು; ಫೋನು, ಫ್ಯಾನು, ಗೂಟದ ಕಾರಿನ ಸವಲತ್ತಿಗಾಗಿ ಹಾತೊರೆವ ಅಪ್ರಾಮಾಣಿಕರ ಗುಂಪನ್ನು ಉದ್ದೇಶಿಸಿ ಹೇಳಿದ ಮಾತುಗಳು ಎಂದು ಯಾರಿಗಾದರೂ ಗೊತ್ತಾಗುತ್ತದೆ. ಬುದ್ದಿಜೀವಿಗಳ ಸೋಗಿನಲ್ಲಿ ಪರಾನ್ನಪುಷ್ಟರಾಗಿರುವ ಗಂಜಿಗಿರಾಕಿಗಳನ್ನು ಎಲ್ಲ ಕಡೆಯೂ ನಾವು ದಿನವೂ ನೋಡುತ್ತಿಲ್ಲವೇ ? ಮತ್ತಷ್ಟು ಓದು »