ವಿಷಯದ ವಿವರಗಳಿಗೆ ದಾಟಿರಿ

Posts tagged ‘CSLC’

16
ಡಿಸೆ

ಬೌದ್ಧಿಕ ಅಸಹಿಷ್ಣು ಪಾಕಿಸ್ತಾನ ಕರ್ನಾಟಕಕ್ಕಿಂತ ವಾಸಿ!

– ಪ್ರೇಮಶೇಖರ

ಅಸಹಿಷ್ಣುತೆಎರಡು ವರ್ಷಗಳ ಹಿಂದೆ ಕುವೆಂಪು ವಿಶ್ವವಿದ್ಯಾಲಯದ ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರ (ಸಿಎಸ್‌ಎಲ್‌ಸಿ) ವಚನಸಾಹಿತ್ಯದ ಬಗ್ಗೆ ಇದುವರೆಗೂ ಪೋಷಿಸಿಕೊಂಡು ಬಂದಿರುವ ತಪ್ಪುಕಲ್ಪನೆಗಳನ್ನು ದೂರಮಾಡಲು ನಿಖರ ಸಂಶೋಧನೆಯ ಮಾರ್ಗ ಹಿಡಿದಾಗ ಕಂಗೆಟ್ಟ ನಮ್ಮ ಪಟ್ಟಭದ್ರ ವಿಚಾರವಾದಿಗಳು ಸಂಸ್ಥೆಯ ವಿರುದ್ಧ ವೈಚಾರಿಕ ಗೂಂಡಾಗಿರಿ ನಡೆಸಿದ್ದು, ಅವರ ಉಗ್ರ ಬೌದ್ಧಿಕ ಅಸಹಿಷ್ಣುತೆಗೆ ಪ್ರಮುಖ ಕನ್ನಡ ದೈನಿಕವೊಂದು ವೇದಿಕೆಯಾಗಿ ಪತ್ರಿಕಾಧರ್ಮವನ್ನು ಗಾಳಿಗೆ ತೂರಿದ್ದು, ಕೊನೆಗೆ ಇವರೆಲ್ಲರ ಪಿತೂರಿಯಿಂದ ರಾಜ್ಯದ ಪರಮ ಸೆಕ್ಯೂಲರ್ ಕಾಂಗ್ರೆಸ್ ಸರ್ಕಾರ ಸಂಶೋಧನಾ ಕೇಂದ್ರವನ್ನು ಮುಚ್ಚಿದ್ದು ನೆನಪಿದೆಯೇ? ಇದಕ್ಕಿಂತ ಸ್ವಲ್ಪ ಕಡಿಮೆ ಅಸಹ್ಯಕರ ಹಾಗೂ ಪ್ರತಿಗಾಮಿ ಘಟನೆ ಇದೇ ಡಿಸೆಂಬರ್ 3ರಂದು ಪಾಕಿಸ್ತಾನದಲ್ಲಿ ಘಟಿಸಿದೆ. ಅಂದು ಇಸ್ಲಾಮಾಬಾದ್‌ನ ಕಾಯದ್- ಎಫ್ ಆಜಂ ವಿಶ್ವವಿದ್ಯಾಲಯದ ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ಹಿಸ್ಟಾರಿಕಲ್ ಆಂಡ್ ಕಲ್ಚರಲ್ ರೀಸರ್ಚ್ (ಎನ್‌ಐಎಚ್‌ಸಿಆರ್) ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ.ಸಯೀದ್ ವಖಾರ್ ಅಲಿ ಶಾ ಅವರನ್ನು ಆ ಸ್ಥಾನದಿಂದ ತೆಗೆದುಹಾಕಲಾಯಿತು.

ಅವರು ಮಾಡಿದ ಅಪರಾಧ ಇಷ್ಟೇ- ನವೆಂಬರ್ 25ರಂದು ಸಿಂಧ್ ಪ್ರಾಂತ್ಯದ ಖಾಯರ್ಪುರ್‌ನಲ್ಲಿರುವ ಶಾ ಅಬ್ದುಲ್ ಲತೀಫ್ ವಿಶ್ವವಿದ್ಯಾಲಯ ಮತ್ತು ಎನ್‌ಐಎಚ್ಸಿಆರ್ ಜಂಟಿಯಾಗಿ ‘ಸಿಂಧ್: ಇತಿಹಾಸ ಮತ್ತು ಸಂಸ್ಕೃತಿ’ ಎಂಬ ವಿಷಯದ ಬಗ್ಗೆ ಅಂತಾರಾಷ್ಟ್ರೀಯ ವಿಚಾರಸಂಕಿರಣವೊಂದನ್ನು ಆಯೋಜಿಸಿದವು. ಅಲ್ಲಿ ತಮ್ಮ ಪ್ರಬಂಧ ಮಂಡಿಸುತ್ತ ಪ್ರೊ. ಶಾ, ಪಾಕಿಸ್ತಾನದ ಅಧಿಕೃತ ಇತಿಹಾಸದಲ್ಲಿ ದಾಖಲಾಗಿಲ್ಲದ ಹಲವು ಹೆಸರುಗಳನ್ನು ಪ್ರಸ್ತಾಪಿಸಿದರು. ಭಗತ್ ಸಿಂಗ್‌ರಂತಹ ಸ್ವಾತಂತ್ರ್ಯ ಹೋರಾಟಗಾರರು, ಜಿ. ಎಂ. ಸಯೀದ್, ಬಚ್ಚಾ ಖಾನ್, ವಲೀ ಖಾನ್ ಮುಂತಾದ ಸ್ವಾತಂತ್ಯ್ರೋತ್ತರ ಪಾಕಿಸ್ತಾನದ ಪ್ರಾಂತೀಯ ನಾಯಕರೂ ಪಾಕಿಸ್ತಾನದ ಇತಿಹಾಸದ ಪುಸ್ತಕಗಳಲ್ಲಿ ಸ್ಥಾನ ಪಡೆಯಬೇಕು ಎಂದು ವಾದಿಸಿದರು. ಅವರ ಮಾತುಗಳು ಪಠ್ಯಕ್ರಮಗಳ ಮೇಲೆ ನಿಗಾ ವಹಿಸುವುದಕ್ಕೆಂದೇ ಇರುವ ಸರ್ಕಾರದ ಉನ್ನತ ಶಿಕ್ಷಣ ಆಯೋಗದ ಕೆಂಗಣ್ಣಿಗೆ ಗುರಿಯಾದವು.

ಮತ್ತಷ್ಟು ಓದು »

23
ಮೇ

ಮೂರ್ತಿಗಳೇ.ಯಾರ ಸರ್ಕಾರ ಮತ್ತು ಯಾರು ಫ್ಯಾಸಿಸ್ಟ್ ಗಳು?

– ರಾಕೇಶ್ ಶೆಟ್ಟಿ

ಅನಂತಮೂರ್ತಿ - ಸಿದ್ದರಾಮಯ್ಯಇವತ್ತಿನ ಕನ್ನಡ ಪ್ರಭದಲ್ಲಿ ಪ್ರಕಟವಾದ ನನ್ನ ಲೇಖನದ ಪೂರ್ಣ ಭಾಗವಿದು.ಈ ಲೇಖನವನ್ನು ಮೂರ್ತಿಗಳಿಗೂ ಮೇಲ್ ಮಾಡಿದ್ದೇನೆ.
“ಮೋದಿಯನ್ನು ಫ್ಯಾಸಿಸ್ಟ್” ಅಂತ ಮಾತು ಮಾತಿಗೆ ಕರೆಯುತ್ತಿರುವ,ನಾಡಿನ ಸಾಕ್ಷಿ ಪ್ರಜ್ಞೆ ಎಂದು ತಮ್ಮ ಶಿಷ್ಯ ವೃಂದದಿಂದ ಕರೆಸಿಕೊಳ್ಳುವ ನಮ್ಮ ಅನಂತಮೂರ್ತಿಗಳು,ಇತರ ಪ್ರಗತಿಪ್ರರು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ ಗೆಳೆಯರು ಉತ್ತರಿಸಬೇಕಾದ ಪ್ರಶ್ನೆಗಳು. ಉತ್ತರದ ನಿರೀಕ್ಷೆಯಿದೆ…

ಎಲ್ಲಾ ಸಮೀಕ್ಷೆಗಳನ್ನು ಹುಸಿ ಮಾಡಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಏಕಾಂಗಿಯಾಗಿ ಅಭೂತಪೂರ್ವ ಜಯ ದಾಖಲಿಸಿದೆ. ಮೋದಿಯವರ ಗೆಲುವಿನ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಅಭಿಮಾನಿಗಳ ಖುಷಿಯೂ ಮುಗಿಲು ಮುಟ್ಟಿದೆ.ಈ ಖುಷಿಯ ನಡುವೆ ಮುಖ್ಯವಾಗಿ ಪ್ರಸ್ತಾಪವಾಗುತ್ತಿರುವುದು “ನರೇಂದ್ರ ಮೋದಿ ಪ್ರಧಾನಿಯಾದರೆ ತಾವು ಭಾರತದಲ್ಲಿ ಇರಲು ಇಚ್ಛೆ ಪಡುವುದಿಲ್ಲ” ಎಂದು ನೀವು ಕಳೆದ ವರ್ಷದ ಸೆಪ್ಟಂಬರ್ ತಿಂಗಳಿನಲ್ಲಿ ನೀಡಿದ್ದ ಹೇಳಿಕೆ.

ಸಾಹಿತಿಗಳಿಕೇ ರಾಜಕೀಯ ಉಸಾಬರಿ ಅನ್ನುವುದು ಕೆಲವರು ವಾದವಾದರೆ,ಅದಕ್ಕೆ ಪ್ರತಿಯಾಗಿ ಸಾಹಿತಿಗಳಾದವರಿಗೂ ವೈಯುಕ್ತಿಕ ನಿಲುವುಗಳಿದ್ದರೇನು ತಪ್ಪು ಅನ್ನುವ ಪ್ರತಿವಾದವೂ ಕೇಳಿಬರುತ್ತಿದೆ.ಒಂದು ಕ್ಷಣಕ್ಕೆ ಮೂರ್ತಿಗಳ ರಾಜಕೀಯ ನಿಲುವುಗಳನ್ನು ಬದಿಗಿಡೋಣ.ಬುದ್ದಿಜೀವಿಗಳಾದ ಮೂರ್ತಿಗಳಿಗೆ ಮತ್ತವರ ಸೆಕ್ಯುಲರ್ ಸಾಹಿತಿಗಳ ತಂಡಕ್ಕೆ,ನಾಡಿನ ಬೌದ್ಧಿಕ ವಲಯದ ವಿಷಯವೊಂದರ ಮೂಲಕ ಒಂದಿಷ್ಟು ಬಹಿರಂಗ ಪ್ರಶ್ನೆಗಳನ್ನು ಕೇಳಿ ಅವರಿಂದ ಉತ್ತರ ಬಯಸೋಣ.

ನಾಡಿನ ಸಾಕ್ಷಿ ಪ್ರಜ್ಞೆ ಎಂದು ತಮ್ಮ ಶಿಷ್ಯ ವೃಂದದಿಂದ ಕರೆಸಿಕೊಳ್ಳುವ ನಮ್ಮ ಅನಂತ ಮೂರ್ತಿಗಳು,ಇತ್ತೀಚಿನ ದಿನಗಳಲ್ಲಿ ಈ ನಾಡಿನ ತಲ್ಲಣಗಳೆಲ್ಲವಕ್ಕೂ ನಿಜವಾಗಿಯೂ ಸ್ಪಂದಿಸಿದ್ದಾರೆಯೇ? ಉತ್ತರ : ಬಹುಷಃ ಇಲ್ಲವೆನ್ನಬಹುದು.

ಮತ್ತಷ್ಟು ಓದು »

31
ಆಕ್ಟೋ

“ಓಲೈಕೆ ಮತ್ತು ತುಷ್ಟೀಕರಣ” ಜಾತ್ಯಾತೀತತೆಯ ಸಂಕೇತಗಳೇ?

ಮು ಅ ಶ್ರೀರಂಗ ಬೆಂಗಳೂರು

Mindsetಒಂದು ರಾಜಕೀಯ ಧೋರಣೆಗೆ ಕಂಕಣಬದ್ಧವಾದ “ಹೊಸತು”ಎಂಬ ಮಾಸಪತ್ರಿಕೆಯ ಜುಲೈ ೨೦೧೩ರ ಸಂಚಿಕೆಯಲ್ಲಿ “ಆಧುನಿಕೋತ್ತರವಾದವೂ ಸಿ. ಎಸ್. ಎಲ್. ಸಿ. ಚಿಂತನಾಕ್ರಮವೂ”ಎಂಬ ಲೇಖನವನ್ನು ಬೆಂಗಳೂರಿನ ಕೆ. ಪ್ರಕಾಶ್ ಎಂಬುವವರು ಬರೆದಿದ್ದಾರೆ. ೫ ಪುಟಗಳಷ್ಟು ವಿಸ್ತಾರವಾದ ಆ ಲೇಖನದ ೧೬ ಪ್ಯಾರಾಗಳಲ್ಲಿ ಸುಮಾರು ೧೫ ಜನ ಬುದ್ಧಿಜೀವಿಗಳ,ಚಿಂತಕರ,ಉದ್ದುದ್ದದ ವಾಕ್ಯಗಳನ್ನು(ಉದ್ಧರಣೆಗಳು)ಪ್ರಕಾಶ್ ಅವರು ತಮ್ಮ ಲೇಖನಕ್ಕೆ “ಬಲ”ಬರಲಿ ಎಂದು ಉಪಯೋಗಿಸಿಕೊಂಡಿದ್ದಾರೆ. ಆ ದೊಡ್ಡ ದೊಡ್ಡ ವಾಕ್ಯಗಳ ನಡುವೆ “ಫಿಲ್ಲರ್”ತರಹ ತಮ್ಮ ನಾಲ್ಕೈದು ಸಾಲುಗಳನ್ನು ಸೇರಿಸಿದ್ದಾರೆ. ಆ “ಫಿಲ್ಲರ್”ಗಳ ಮುಖ್ಯ ಉದ್ದೇಶ ಕುವೆಂಪು ವಿ. ವಿ.ಯಲ್ಲಿನ ಸಿ ಎಸ್ ಎಲ್ ಸಿ ಯನ್ನು ಖಂಡಿಸುವುದಷ್ಟೇ ಆಗಿದೆ.

“ಮಡೆ ಸ್ನಾನ”ದಿಂದ ಪ್ರಾರಂಭವಾಗುವ ಈ ಲೇಖನ ಕೊನೆಗೆ ಬಂದು ನಿಲ್ಲುವುದು  “ವಚನಗಳು vs ಜಾತಿ ವ್ಯವಸ್ಥೆ”ಬಗ್ಗೆ  “ಪ್ರಜಾವಾಣಿ”ಪತ್ರಿಕೆಯಲ್ಲಿ ಸುಮಾರು ಮೂರು ತಿಂಗಳಿನಷ್ಟು ಕಾಲ ನಡೆದ ವಾದ-ಪ್ರತಿವಾದದ “ಅನುಭವ ಮಂಟಪದಲ್ಲಿ”. ಪ್ರಕಾಶ್ ಅವರು ತುಂಬಾ ಆರಾಧಿಸುವ ಪ್ರೊ। ಐಜಾಜ್ ಅಹ್ಮದ್ ಅವರೇ “ಆಧುನಿಕೋತ್ತರವಾದವು ಹಲವು ವಿಭಿನ್ನ ಎಳೆಗಳಿಂದ ರಚಿತವಾಗಿದ್ದು ಅದನ್ನು ಒಂದು ಸುಸಂಬದ್ಧ ಚಿಂತನೆಯಾಗಿ ಮಂಡಿಸುವುದು ಕಷ್ಟ ಎಂದು ಎಚ್ಚರಿಸುತ್ತಲೇ ಅದರ ಪ್ರಮುಖ ಲಕ್ಷಣಗಳನ್ನು ಗುರುತಿಸುತ್ತಾರಂತೆ”(ಹೊಸತು ಜುಲೈ ೨೦೧೩ ಪುಟ ೩೦). ಸಿ ಎಸ್ ಎಲ್ ಸಿ ಯದೂ ಆ ಹಲವು ಹಾದಿಗಳಲ್ಲಿ ಒಂದು ಎಳೆ ಎಂದು  ಪ್ರಕಾಶ್ ಅವರು ಒಪ್ಪಿಕೊಳ್ಳಲು ಸಿದ್ದರಿಲ್ಲ.

ಮತ್ತಷ್ಟು ಓದು »

13
ಆಕ್ಟೋ

ಬಸವ ಚಳುವಳಿಯನ್ನು ಕಾಡುತ್ತಿರುವ ಸಾಹಿತ್ಯ ಲೋಕದ ಬು(ಲ)ದ್ಧಿ ಜೀವಿಗಳು !

– ವಿಶ್ವಾರಾಧ್ಯ ಸತ್ಯಂಪೇಟೆ, ಶಹಾಪುರ

vachana-charche       ಇಷ್ಟು ದಿನಗಳವರೆಗೆ ಧಾರ್ಮಿಕ ಲೋಕದ ಗುಂಗಾಡುಗಳು ಬಸವಣ್ಣನರನ್ನು ಕಾಡುತ್ತಿದ್ದವು. ಅವರು ರಚಿಸಿದ ವಚನಗಳಿಗೆ ತದ್ವಿರುದ್ಧವಾಗಿ ತಾವು ಬದುಕಿದ್ದಲ್ಲದೆ ತಮ್ಮ ಭಕ್ತರ ಹಿಂಡನ್ನು ತಮ್ಮ ಹಿಂದೆ ಕಟ್ಟಿಕೊಂಡು ಬಸವಾದಿ ಶರಣರಿಗೆ ಸಾಕಷ್ಟು ಅಪಚಾರ ಮಾಡಿದ್ದರು. ಇದೀಗ ಸಾಹಿತ್ಯ ಲೋಕದ ಗುಂಗಾಡುಗಳೂ ತಾವೇನು ಕಡಿಮೆ ಇಲ್ಲ ಎಂದು ಬಸವಣ್ಣನವರನ್ನು ಹಾಗೂ ಅವರು ಬರೆದ ವಚನ ಸಾಹಿತ್ಯವನ್ನು ಪರಾಮರ್ಶಿಸುವ ಎಗ್ಗತನ ತೋರುತ್ತ, ಇಲ್ಲ ಸಲ್ಲದ ಕುಯುಕ್ತಿಗಳನ್ನು ನಡೆಸಿದ್ದಾರೆ.  ಹಲವಾರು ವರ್ಷಗಳಿಂದ ಬಸವಣ್ಣನವರ ಕುರಿತು ಪರಾಮರ್ಶಿಸುವ ಬುದ್ದಿವಂತಿಕೆಯನ್ನು ತೋರುತ್ತಿರುವ ಬುದ್ಧಿಜೀವಿ ವೇಷದಾರಿ ಬರಹಗಾರರು ಸಮಯ ಸಿಕ್ಕಾಗಲೆಲ್ಲ ಬಸವಣ್ಣನವರ ಮೇಲೆ ಕೆಸರನ್ನು ಎರಚುತ್ತ ತಾವು ದೊಡ್ಡವರಾಗಬೇಕೆಂಬ ಹುನ್ನಾರ ನಡೆಸಿದ್ದು ಎಲ್ಲರಿಗೂ ಗೊತ್ತಿರುವಸಂಗತಿಯೆ ಆಗಿದೆ.

ಹಿಂದೊಮ್ಮೆ ಗುಲ್ಬರ್ಗಾದ ಕಪಟರಾಳ ಕೃಷ್ಣರಾವ್ ಎಂಬ ಸಂಶೋಧಕನೋರ್ವ ಅನುಭವ ಮಂಟಪವೇ ಇಲ್ಲ ಎಂದು ಸಂಶೋಧಿಸಿ ಹೇಳಿದ್ದ. ಆಗ ಲಿಂಗಾಯತ ಧರ್ಮದವರೆಂದು ಸೋಗುಹಾಕಿರುವ ಸೋಗಲಾಡಿ ಗುರು- ಜಗದ್ಗುರುಗಳೆಲ್ಲ ತಮ್ಮ ತುಟಿಗಳನ್ನು ಹೊಲಿದುಕೊಂಡು ತೆಪ್ಪಗಿದ್ದರು. ಅರೆಬರೆ ಜ್ಞಾನದ ಲಿಂಗವಂತ ಸಮಾಜದ ಜನಗಳು ‘ನಮಗೂ ಬಸವಣ್ಣನವರಿಗೂ ಯಾವ ಬಾದರಾಯಣ ಸಂಬಂಧ ?’ ಎಂದುಕೊಂಡು ಕಪಟರಾಳರ ಕಪಟತನವನ್ನು ಪ್ರಶ್ನಿಸಲು ಹೋಗಲಿಲ್ಲ. ಈಗೀಗ ಬುದ್ದಿಜೀವಿಗಳೆಂದು ತಮ್ಮಷ್ಟಕ್ಕೆ ತಾವೇ ಕರೆದುಕೊಂಡಿರುವ ಕೆಲವು  ಸೋಕಾಲ್ಡ ಜನಗಳು ಬಸವಣ್ಣನವರ ಘನ ವ್ಯಕ್ತಿತ್ವವನ್ನು ಸಂಶೋಧಿಸುತ್ತಿದ್ದೇವೆ ಎಂಬ ನೆವದಲ್ಲಿ ಸಾಕಷ್ಟು ಘಾಸಿಯನ್ನುಂಟುಮಾಡಿದ್ದಾರೆ. ‘ಮಹಾಚೈತ್ರ’ ಕೃತಿಯ ಮೂಲಕ ಎಚ್.ಎಸ್. ಶಿವಪ್ರಕಾಶ, ‘ಆನುದೇವ ಹೊರಗಣದವನು’ ಪುಸ್ತಕದ ಮೂಲಕ ಬಂಜಗೇರಿ ಜಯಪ್ರಕಾಶ, ‘ಧರ್ಮಕಾರಣ’ದ ಮೂಲಕ ಪಿ.ವಿ.ನಾರಾಯಣ ಮುಂತಾದವರು ತಮ್ಮ ಮೂಗಿನ ನೇರಕ್ಕೆ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ಈಗಾಗಲೇ ಮೂತಿಗೆ ಇಕ್ಕಿಸಿಕೊಂಡಿದ್ದಾರೆ.

ಆದರೂ ಇತ್ತೀಚೆಗೆ ಬಾಲಗಂಗಾಧರ ಮತ್ತು ಡಂಕಿನ್ ಝಳಕಿ ಎಂಬ ಮಹಾಶಯರುಗಳು ವಚನಕಾರರು ಜಾತಿ ವಿರೋಧಿಗಳಾಗಿದ್ದರು ಎಂಬ ಅಭಿಪ್ರಾಯವು ಆಧುನಿಕ ಸಂದರ್ಭದಲ್ಲಿ ವೀರಶೈವರು ವಸಾಹತುಶಾಹಿ ಪಾಶ್ಚಾತ್ಯ ಚಿಂತಕರ ಪ್ರಭಾವದಿಂದ ಕಟ್ಟಿಕೊಂಡ ಪ್ರಮೇಯವಾಗಿದೆ ಎಂದು ವಾದಿಸುತ್ತಾರೆ. ಜೊತೆಗೆ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡುವುದು ವಚನಕಾರರ ಮೂಲಭೂತ ಗುರಿಯಾಗಿತ್ತು ಎನ್ನುವುದು ಅಸಂಬದ್ಧ ತರ್ಕವಾಗಿದೆ ಎಂದೂ ಜೊತೆಗೆ ಅದು ಬ್ರಾಹ್ಮಣ ವಿರೋಧಿ ಚಳುವಳಿಯ ಅಭಿವ್ಯಕ್ತಿಗಳೆಂದು ಹೇಳಲು ವಚನಗಳಲ್ಲಿಯೇ ಆಧಾರವಿಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ.   ಇದನ್ನು ಕೆಲವು ಜನ ಸೋಕಾಲ್ಡ  ಬು(ಲ)ದ್ದಿ ಜೀವಿಗಳು ವಚನಗಳ ಬಗ್ಗೆ ಹೊಸ ಚಿಂತನೆ ಮತ್ತು ಚರ್ಚೆಗಳಿಗೆ ಅನುವುಮಾಡಿಕೊಟ್ಟದ್ದಕ್ಕೆ ಧನ್ಯವಾದಗಳನ್ನೂ ಅರ್ಪಿಸಿದ್ದು ಅವರ ಎಬಡತನಕ್ಕೆ ಸಾಕ್ಷಿಯಾಗಿದೆಯೆಂದರೂ ತಪ್ಪಾಗುವುದಿಲ್ಲ.

ಮತ್ತಷ್ಟು ಓದು »

3
ಆಕ್ಟೋ

ಪ್ರೊ.ಬಾಲು ಅವರಿಗೆ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್

Prof Balu2ಕರ್ನಾಟಕದಲ್ಲಿ ಈಗ ಗೌರವ ಡಾಕ್ಟರೇಟ್ ಪದವಿ ಎನ್ನುವುದು ಮಾರುಕಟ್ಟೆಯಲ್ಲಿ ದೊರೆಯುವ ವಸ್ತುವಾಗಿರುವುದು ನಮಗೆಲ್ಲ ಗೊತ್ತಿರುವ ವಿಚಾರವೇ. ಆದರೆ ಯುರೋಪಿನ ವಿಶ್ವವಿದ್ಯಾಲಯಗಳಲ್ಲಿ ಇದು ಇನ್ನೂ ತನ್ನ ಘನತೆ ಹಾಗೆ ಉಳಿಸಿ ಕೊಂಡಿದೆ. ಉದಾಹರಣೆಗೆ, ಪ್ರೊಫೆಸರ್ ಎಸ್. ಎನ್. ಬಾಲಗಂಗಾಧರ ರಾವ್ ಅವರಿಗೆ ೩೦/೯/೨೦೧೩ರಂದು  ಗೌರವ ಡಾಕ್ಟರೇಟ್ ಪದವಿ ಮತ್ತು ಬಂಗಾರದ ಪದಕದೊಂದಿಗೆ ಸನ್ಮಾನ ಮಾಡಿದ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯ ತನ್ನ ೧೫ ವರ್ಷಗಳ ಇತಿಹಾಸದಲ್ಲಿ ಕೊಟ್ಟಿದ್ದು ಕೇವಲ ಬೆರಳೆಣಿಕೆಯಷ್ಟು ಗೌರವ ಡಾಕ್ಟರೇಟ್ ಪದವಿಗಳನ್ನು ಮಾತ್ರ.

ಈ ಸಂದರ್ಭದಲ್ಲಿ ಎಸ್. ಎನ್. ಬಾಲಗಂಗಾಧರ ರಾವ್ ಅವರ ಸಾಧನೆಗಳ ಕುರಿತು ಅಲ್ಲಿನ ಸಮಾಜ ವಿಜ್ಞಾನಗಳ ಡೀನ್ ಮಾಡಿದ ಭಾಷಣದ ಕನ್ನಡ ಅವತರಣಿಕೆಯನ್ನು ನಾವಿಲ್ಲಿ ಕೊಡುತ್ತಿದ್ದೇವೆ.

–      ನಿಲುಮೆ

 

ಮತ್ತಷ್ಟು ಓದು »

4
ಸೆಪ್ಟೆಂ

“ಡುಂಢಿ” ಅನ್ನುವ ಕೃತಿ ಮತ್ತು “ಸೆಕ್ಯುಲರಿಸಂ” ಅನ್ನುವ ಅವಕಾಶವಾದ …!

– ರಾಕೇಶ್ ಶೆಟ್ಟಿ

Dundi mattu CSLC“ಡುಂಢಿ”ಯ ಬಗ್ಗೆ ಗೆಳೆಯರೊಬ್ಬರ ಜೊತೆ ಮಾತನಾಡುತಿದ್ದೆ. ಅವರು “Immortals of Meluha” ಪುಸ್ತಕವನ್ನು ಉಲ್ಲೇಖಿಸಿ, “ಆ ಪುಸ್ತಕದಲ್ಲಿ ಶಿವ, ಗಾಂಜಾ ಸೇದುತ್ತಾನೆ,ಟಿಬೆಟಿಯನ್ ಮೂಲದವನು ಅಂತ ಬರೆದಿತ್ತು ಅದು ಭರ್ಜರಿ ಸೇಲ್ ಆಗಿತ್ತು.ಈ ಡುಂಢಿ ಪ್ರಿಂಟ್ ಹಾಕಿಸಿದ್ದೇ ೧೫೦-೨೦೦ ಪ್ರತಿಯಂತಲ್ಲ” ಅಂದರು. ನಾನಂದೆ “ನಿಮಗೆ, ’ದೇವರ ಪಾಲಿಟಿಕ್ಸ್’ ಅರ್ಥವಾಗಿಲ್ಲ. ಆ ಪುಸ್ತಕದಲ್ಲಿ ಶಿವನನ್ನು, ’ಟಿಬೆಟಿಯನ್’ ಅನ್ನುವ ಬದಲೋ ’ಬ್ರಾಹ್ಮಣ/ಆರ್ಯ’ ಅಂತೇನಾದರೂ ಚಿತ್ರಿಸಿದ್ದರೇ ಈಗ ಡುಂಢಿಯ ಪರ ಮಾತನಾಡುತ್ತಿರುವ ಕರ್ನಾಟಕದ ಸೋ-ಕಾಲ್ಡ್ ಸೆಕ್ಯುಲರ್ ಗಳೆಲ್ಲ ಆ ಪುಸ್ತಕದ ವಿರುದ್ಧ ಮಾತನಾಡುತಿದ್ದರು”.

“ಒಬ್ಬ ನಕಲಿಯೋ ಅಥವಾ ಹಲವಾರು ಅಸಲಿಗಳ ಒಂದು ಸಂಕೇತವೊ ಆಗಿರುವ ಗಣಪತಿಯನ್ನು ಕುರಿತು ಹಲವು ಪುರಾಣಗಳು ಹಲವಾರು ರೀತಿಯ ಕಥೆಗಳನ್ನು ಹೇಳಿವೆ. ಈ ಢುಂಢೀಯೂ ಹಾಗೇ ಒಂದು ಮನೋರಂಜನೆ ಅಥವಾ ವಿಚಾರಕ್ಕೆ ಹಚ್ಚಬಹುದಾದ, ನಿಜವೆಂದು ನಂಬಲು ಇಷ್ಟ ಪಡುವ ಹೂರಣದ ಒಂದು ಕಲ್ಪನೆಯ ಪುರಾಣವೇ.” ಅನ್ನುವ ಮಾತುಗಳನ್ನಿಟ್ಟುಕೊಂಡ “ಡುಂಢಿ” ಅನ್ನುವ ಕೃತಿಯನ್ನು ಓದದೇ ಅದು ಕೃತಿಯೋ,ವಿಕೃತಿಯೋ ಅಂತ ನಿರ್ಧಾರ ಮಾಡುವುದು ಹೇಗೆ? ಅನ್ನುವ ಪ್ರಶ್ನೆಯನ್ನು ಮುಂದಿಡುತ್ತ ಮತ್ತು ಒಬ್ಬ ಲೇಖಕನನ್ನು ಬಂಧಿಸುವಂತ ಮಟ್ಟದವರೆಗೂ ಹೋಗಿದ್ದನ್ನು ವಿರೋಧಿಸುತ್ತಲೇ,ಈ ಮಾತು ಕೇಳುತಿದ್ದೇನೆ.ನಾನು ನನ್ನ ಗೆಳೆಯರಿಗೆ ಹೇಳಿದ ಮಾತಿನಲ್ಲಿ ಸತ್ಯವಿರಬಹುದು ಅಂತ ನಿಮಗೂ ಅನ್ನಿಸುವುದಿಲ್ಲವೇ? (“ಶಿವ”ನಮ್ಮವನು ಅವನನ್ನು ಹೈಜಾಕ್ ಮಾಡಿದ್ದಾರೆ ಅಂತ ಬರೆದವರನ್ನೂ ನೋಡಿದ್ದೇನೆ. ದೇವರನ್ನೂ ಈ ಮಂದಿ ತಮ್ಮ ಗುಂಪಿನೊಳಗೆ ಸೇರಿಸಿಕೊಳ್ಳುತ್ತಾರೆ ಶಿವಾ ಶಿವಾ…!)

ಮತ್ತಷ್ಟು ಓದು »

22
ಆಗಸ್ಟ್

ರಮಾನಂದ ಐನಕೈ ಅವರ “ನಮಗೆ ನಾವೇ ಪರಕೀಯರು” ಪುಸ್ತಕದ ಕುರಿತು

– ಮು . ಅ . ಶ್ರೀರಂಗ  ಯಲಹಂಕ  ಬೆಂಗಳೂರು

ನಮಗೆ ನಾವೇ ಪರಕೀಯರುರಮಾನಂದ ಐನಕೈ ಅವರ “ನಮಗೆ ನಾವೇ ಪರಕೀಯರು ” (ನ. ನಾ. ಪ) (ಪ್ರಕಾಶಕರು : ರಾಷ್ಟ್ರೋತ್ಹಾನ ಸಾಹಿತ್ಯ ಬೆಂಗಳೂರು -೧೯ )ಪುಸ್ತಕ ಓದುವ ಮುನ್ನ ನಾನು ಪ್ರೊ .ಎಸ್ .ಎನ್. ಬಾಲಗಂಗಾಧರ (ಬಾಲು)ಅವರ ವಿಚಾರಗಳನ್ನು ಆಧರಿಸಿದ ಕನ್ನಡಕ್ಕೆ ಅನುವಾದವಾಗಿರುವ ಮೂರುಪುಸ್ತಕಗಳನ್ನು ಓದಿದ್ದೆ (ಪೂರ್ವಾವಲೋಕನ ,ಭಾರತದಲ್ಲಿ ಜಾತಿ ವ್ಯವಸ್ಥೆ ಇದೆಯೆ? ಮತ್ತು ಹುಡುಕಾಟವನ್ನು ನಿಲ್ಲಿಸದಿರೊಣ). ಸ್ಮೃತಿ-ವಿಸ್ಮೃತಿ ;ಭಾರತೀಯ ಸಂಸ್ಕೃತಿ ತನ್ನ ವಿಚಾರ ಮತ್ತು ಗಾತ್ರದಲ್ಲಿ ತುಂಬಾ ಘನವಾಗಿದೆ ಹೀಗಾಗಿ ನಿಧಾನವಾಗಿ ಓದಿ ಅರ್ಥಮಾಡಿಕೊಳ್ಳಬೇಕಾಗಿದೆ. ಇದುವರೆಗೆ ಸುಮಾರು ಇನ್ನೂರು ಪುಟಗಳನ್ನು ಓದಿದ್ದೆನೆ. ರಮಾನಂದರ ಪ್ರಸ್ತುತ ಪುಸ್ತಕ ಮೇಲೆ ಹೇಳಿದ ಬಾಲು ಅವರ ನಾಲ್ಕು ಪುಸ್ತಕಗಳ ಅದರಲ್ಲೂ ಮುಖ್ಯವಾಗಿ ಸ್ಮೃತಿ-ವಿಸ್ಮೃತಿ ಪುಸ್ತಕದಲ್ಲಿರುವ ವಿಷಯಗಳನ್ನು ನೇರವಾಗಿ ಭಟ್ಟಿ ಇಳಿಸಿರುವುದರ ಪ್ರತಿಫಲ! ಇದಕ್ಕೆ ಪುರಾವೆಗಳು ರಮಾನಂದರ ನ.ನಾ.ಪ.. ಪುಸ್ತಕದಲ್ಲೇ ಇವೆ.

,         ೧. ಬಾಲು ಅವರೇ ತಮ್ಮ ಮುನ್ನುಡಿಯಲ್ಲಿ—ರಮಾನಂದರ ಎಲ್ಲಾ ಲೇಖನಗಳು ಈ ವಿಷಯಗಳ ಕುರಿತಾಗಿ ಬೆಲ್ಜಿಯಂ ಹಾಗೂ ಭಾರತದಲ್ಲಿ ಕುವೆಂಪು ವಿ. ವಿ. ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರದಲ್ಲಿ ನಡೆಯುತ್ತಿರುವ ಸಂಶೋಧನೆಗಳಿಂದ ಪ್ರಭಾವಿತವಾಗಿವೆ ಎಂದ್ದಿದ್ದಾರೆ (ಪುಟxii)

೨. ಲೇಖಕರ ಮಾತಿನಲ್ಲಿ ಸ್ವತಃ ರಮಾನಂದ ಐನಕೈ ಅವರೇ ಮೇಲೆ ಹೇಳಿದ ಬಾಲು ಅವರ ಮಾತುಗಳನ್ನೇ ಅನುಮೋದಿಸಿದ್ದಾರೆ—ಬಾಲು ಅವರ ಮೂಲ ಸಿದ್ಧಾಂತಕ್ಕೆ ಚ್ಯುತಿ ಬಾರದ ಹಾಗೆ ಅವರ ವಿಚಾರಗಳನ್ನು ನನ್ನ ಅನುಭವಗಳ ಮೂಲಕ ಸರಳವಾಗಿ ನಿರೂಪಿಸುವ ಕೆಲಸ ಮಾಡಿದ್ದೇನೆ (ಪುಟ xvi )(ರಮಾನಂದರ ಅನುಭವಗಳ ಪ್ರಮಾಣ ಈ ಪುಸ್ತಕದ ವಿಚಾರದಲ್ಲಿ ತೀರಾ ಕಡಿಮೆ ಎಂಬುದು ಓದುಗರಿಗೆ ಮನವರಿಕೆಯಾಗುತ್ತದೆ!)

೩. ರಮಾನಂದರ ಪ್ರಸ್ತುತ ಪುಸ್ತಕ್ಕಕ್ಕೆ (ನ.ನಾ.ಪ) ಹಿನ್ನೆಲೆ ಬರೆದಿರುವ ದಾ॥ ರಾಜಾರಾಮ ಹೆಗಡೆಯವರು ಸಹ ರಮಾನಂದರದು ಸ್ವತಂತ್ರ ಲೇಖನಗಳಾದರೂ ಕೂಡ ಭಾರತೀಯ ಸಂಸ್ಕೃತಿಯ ಕುರಿತು ಎಸ್ . ಎನ್ . ಬಾಲಗಂಗಧರ ಅವರ ಹೊಸ ವಾದಗಳಿಂದ ಪ್ರಭಾವಿತವಾಗಿವೆ. (ಪುಟ xviii)

ಮತ್ತಷ್ಟು ಓದು »

10
ಜೂನ್

CSLC ಯ ಸಂಶೋಧನೆ ಮತ್ತು ಪ್ರಗತಿಪರರ ಫ್ಯಾಸಿಸ್ಟ್ ಧೋರಣೆ

CSLC– ರಾಕೇಶ್ ಶೆಟ್ಟಿ

ಅಲ್ಲಿಯವರೆಗೂ ಸುಖಾ ಸುಮ್ಮನೆ ಭೂಮಿಯ ಸುತ್ತ ಗಿರಕಿ ಹೊಡೆಯುತಿದ್ದ ಸೂರ್ಯನಿಗೆ ಸುತ್ತುವುದರಿಂದ ಮುಕ್ತಿ ಕೊಡಿಸಿ,’ಭೂಮಿಯೇ ಸೂರ್ಯನ ಸುತ್ತ ಸುತ್ತುತ್ತಿದೆ’ ಅಂದವನು ಕೋಪರ್ನಿಕಸ್. ಅವನ ಕೆಲಸವನ್ನ ಮುಂದುವರಿಸಿದವರು ಗೆಲಿಲಿಯೋ ಮತ್ತು ಬ್ರುನೋ.ಈ ಮೂವರು ಬರುವವರೆಗೂ ಸೂರ್ಯನೇ ಭೂಮಿಯ ಸುತ್ತ ಸುತ್ತುತ್ತಾನೆ ಅಂತಲೇ ಜನರು ನಂಬಿದ್ದರು.ಅದೇ ಜನರ ಮಧ್ಯದಿಂದ ಎದ್ದು ಬಂದು,’ಇಲ್ಲ ಸ್ವಾಮಿ ಭೂಮಿಯೇ ಸುತ್ತೋದು’ ಅಂದಿದ್ದ ಕೋಪರ್ನಿಕಸ್ ಅದೇ ಜನರಿಂದ ಹುಚ್ಚ ಅನ್ನಿಸಿಕೊಂಡಿದ್ದ.ಅವನ ನಂತರ ಬಂದ ಗೆಲಿಲಿಯೋ ಮತ್ತು ಬ್ರುನೋ ಸಹ ಕೋಪರ್ನಿಕಸ್ ವಾದಕ್ಕೆ ಸೈ ಅಂದರು.

ಸಮಾಜದ ನಂಬಿಕೆಯ ಬುಡವನ್ನು ಅಲುಗಾಡಿಸುವ ಯಾವುದೇ ಪ್ರಯತ್ನಕ್ಕೆ ದೊಡ್ಡ ಮಟ್ಟದಲ್ಲೇ ಅಡೆ-ತಡೆಗಳು ಎದುರಾಗಬೇಕಲ್ಲವೇ? ಗೆಲಿಲಿಯೋ,ಬ್ರೂನೋಗು ಅದೇ ಆಯಿತು. ಇವರ ಸಂಶೋಧನೆಯಿಂದ ಕನಲಿ ಕೆಂಡವಾದ ಪೋಪ್ ಎಂಟನೇ ಅರ್ಬನ್,“Heliocentric System” ಅನ್ನುವುದೇ ಸುಳ್ಳು ಎಂದು ಸಾರ್ವಜನಿಕವಾಗಿ ಗೆಲಿಲಿಯೋ ಮತ್ತು ಬ್ರೂನೋನನ್ನು ಖಂಡಿಸಿ, ಅವರಿಬ್ಬರ ಸಂಶೋಧನೆಗೂ ನಿರ್ಬಂಧವನ್ನೂ ಹೇರಿದರು.

ಗೆಲಿಲಿಯೋನನ್ನು ಜೈಲಿಗೂ ತಳ್ಳಲಾಯಿತು, ಸಾಯುವವರೆಗೂ ಗೃಹ ಬಂಧನದಲ್ಲಿರಿಸಲಾಯಿತು.1642ರಲ್ಲಿ ಗೆಲಿಲಿಯೋ ಮರಣವನ್ನಪ್ಪಿದಾಗ ಆತನನ್ನು ಕ್ರೈಸ್ತರ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡುವುದಕ್ಕೂ ಬಿಡಲಿಲ್ಲ.ಇನ್ನು ಬಾಹ್ಯಾಕಾಶವೆಂಬುದು Finite ಅಲ್ಲ, Infinite. ಅದಕ್ಕೆ ಕೊನೆಯೇ ಇಲ್ಲ ಎಂದು ವಾದಿಸುವ ಧೈರ್ಯ ತೋರಿದ ಬ್ರೂನೋನನ್ನಂತೂ,೧೫೯೨ರಲ್ಲಿ ಬಂಧಿಸಿ ರೋಮನ್ ಕ್ಯಾಥೋಲಿಕ್ ಚರ್ಚ್‌ನ ನ್ಯಾಯಾಲಯದ(The Inquisition) ಮುಂದೆ 7 ವರ್ಷಗಳ ಕಾಲ ವಿಚಾರಣೆ ಗೊಳಪಡಿಸಿ, ಕೊನೆಗೆ ಉರಿವ ಜ್ವಾಲೆಯಲ್ಲಿ ಸುಡುವ ಮರಣದಂಡನೆಯನ್ನು ವಿಧಿಸಿದರು.

ಮತ್ತಷ್ಟು ಓದು »

26
ಮೇ

ಜಾತಿವ್ಯವಸ್ಥೆ ಇಲ್ಲ ಎಂದರೆ…

-ಡಾ. ಷಣ್ಮುಖ ಮತ್ತು ಡಾ. ಪ್ರವೀಣ

vachana-charcheಜಾತಿಗಳಿವೆ ಜಾತಿವ್ಯವಸ್ಥೆ ಇಲ್ಲ ಎಂದರೆ ಏನು? ಹಾಗಾದರೆ ಈ ಮೇಲು-ಕೀಳು, ತಾರತಮ್ಯ, ಶೋಷಣೆಗಳು ಇಲ್ಲ ಅಂತ ಹೇಳ್ತಾ ಇದೀರಾ?  ಪದೇ ಪದೇ ನಮಗೆ ಇದುವರೆಗೂ ಎದುರಾಗಿರುವ (ಅಂತರ್ಜಾಲದ ಚರ್ಚೆಗಳಲ್ಲಿರಬಹುದು, ಸೆಮಿನಾರ್, ಕಾರ್ಯಾಗಾರಗಳಲ್ಲಿರಬಹುದು) ಕೆಲವೇ ಒಳ್ಳೆಯ ಪ್ರಶ್ನೆಗಳಲ್ಲಿ ಇವೂ ಕೂಡ. ಅವುಗಳ ಸುತ್ತ ಈ ಬರಹ ಚರ್ಚಿಸುವ ಪ್ರಯತ್ನ ಮಾಡುತ್ತದೆ.

ಜಾತಿಗಳಿಲ್ಲ ಎಂದು ವಾದಿಸುತ್ತಿರುವ ಮೂರ್ಖರ ಗುಂಪೊಂದು ಇದೆ ಎಂದು ಹೇಳುತ್ತಾ ಬಂದಿರುವುದನ್ನು ನೀವು ಕೇಳಿರುವ ಸಾಧ್ಯತೆ ಇದೆ. ಆಗ ನಿಮಗೂ ಅನಿಸಿರಬಹುದು -ಇವರೆಂಥ ಮೂರ್ಖರಯ್ಯ.! ಕಣ್ಮುಂದೆ ಕಾಣುವ ಸಂಗತಿಗಳನ್ನು ನಿರಾಕರಿಸುತ್ತಿರುವರಲ್ಲ! ಇದೆಂಥಾ ಸಂಶೋಧನೆ, ಇದರ ಹಿಂದೆ ಯಾವುದೋ ಹುನ್ನಾರ/ ಕುಯುಕ್ತಿ ಇದ್ದಿರಬಹುದು!     ಅಂತಹ ಯಾವುದೇ ಪ್ರಮೇಯಗಳನ್ನು, ಹೇಳಿಕೆಗಳನ್ನು ಮಾಡಿರುವ ಒಂದೇ ಒಂದು ಉದಾಹರಣೆ ಕೂಡ ನಮ್ಮ ಗುಂಪಿನ ಬರಹಗಳಿಂದ ತೆಗೆದು ತೋರಿಸಲು ಸಾಧ್ಯವಿಲ್ಲ. ಹಾಗಿದ್ದರೂ ಈ ರೀತಿಯ ಆರೋಪಗಳು ಎಲ್ಲಿಂದ ಹೊರಟಿತು? ಹಾಗಾದರೆ ಜಾತಿಗಳ ಕುರಿತು ನಮ್ಮ ವಾದವೇನು? ಎಂಬ ಪ್ರಶ್ನೆಗಳು ಏಳುವುದು ಸಹಜ.

ಜಾತಿಯ ಕುರಿತ ನಮ್ಮ ವಾದವನ್ನು ಸರಳವಾಗಿ ಸಾರಾಂಶೀಕರಿಸುವುದಾದರೆ, ಭಾರತದಲ್ಲಿ ವಸಾಹತು ಪೂರ್ವದಿಂದಲೂ ಜಾತಿಗಳಿದ್ದವು, ಈಗಲೂ ಇವೆ.. ಇವುಗಳನ್ನು ಯೂರೋಪಿಯನ್ನರು ತೆಗೆದುಕೊಂಡು ಬಂದರು, ಇಲ್ಲಿ ಸೃಷ್ಟಿ ಮಾಡಿದರು ಎಂಬುದು ಸರಿಯಾದ ವಿವರಣೆಯಲ್ಲ. ಆದರೆ ಭಾರತೀಯ ಸಮಾಜವನ್ನು ನೋಡುವ ಒಂದು ನಿರ್ದಿಷ್ಟ ಚೌಕಟ್ಟನ್ನು ಯೂರೋಪಿಯನ್ನರು ನಿರ್ಮಿಸಿದರು. ಅದುವೇ “ಜಾತಿವ್ಯವಸ್ಥೆ”.

ಹಾಗಾದರೆ,  ವ್ಯವಸ್ಥೆಎಂದರೇನು? ಅವುಗಳ ಲಕ್ಷಣಗಳಾವುವು ?

ಮತ್ತಷ್ಟು ಓದು »

17
ಮೇ

ಸಾಮಾಜಿಕ ಸಂಶೋಧನೆ ಯಾಕಾಗಿ?

– ಪ್ರೊ.ಜೆ.ಎಸ್.ಸದಾನಂದ

Vachana Charche{ಪ್ರಜಾವಾಣಿಯಲ್ಲಿ ಪ್ರಕಟವಾದ ದೇವನೂರು ಮಹಾದೇವ ಅವರ ಲೇಖನಕ್ಕೆ ಪ್ರತಿಕ್ರಿಯೆ, ಈ ಲೇಖನವನ್ನು ಪ್ರಜಾವಾಣಿಗೆ ಬಹಳ ಹಿಂದೆಯೇ ಕಳುಹಿಸಿದ್ದು ಪ್ರಜಾವಾಣಿಯಲ್ಲಿ ಮಾತ್ರ ಇನ್ನೂ ಪ್ರಕಟಿಸಲಾಗಿಲ್ಲ}

ದೇವನೂರು ಮಹಾದೇವ ಅವರ ಲೇಖನದಲ್ಲಿ (ಪ್ರಜಾವಾಣಿ ದಿನಾಂಕ: 29/4/2013) ನಮಗೆ ಕಾಣುವುದು ನಮ್ಮ ಸಂಶೋಧನೆಯ ಬಗ್ಗೆ ಇರುವ ಕೋಪ, ಅಸಹನೆ ಹಾಗೂ ತಿರಸ್ಕಾರ. ಇದಕ್ಕೆ ಕಾರಣವೇನು? ಅವರನ್ನು ಸ್ವಲ್ಪಮಟ್ಟಿಗೆ ಬಲ್ಲ ನನಗೆ ಅನಿಸುವುದಿಷ್ಟು. ಇಂತಹ ಸಿಟ್ಟು ಅಸಹನೆಗೆ ಮೂಲ ಕಾರಣ ಸಮಾಜದಲ್ಲಿರುವ ಅನ್ಯಾಯ, ಶೋಷಣೆ ಮುಂತಾದ ನಕಾರಾತ್ಮಕ ಅಂಶಗಳನ್ನು ಬುಡಸಮೇತ ಕಿತ್ತೊಗೆಯಬೇಕೆಂಬ ಗುರಿಯ ಬಗ್ಗೆ ಅವರಿಗಿರುವ ಬದ್ಧತೆ ಹಾಗೂ ಅಂತಹ ಅನ್ಯಾಯ, ಶೋಷಣೆಗಳಿಗೆ ಮೂಲ ಕಾರಣ ಯಾವುದು ಎನ್ನುವುದು ಎನ್ನುವುದರ ಕುರಿತು ಅವರಿಗಿರುವ ದೃಢ ನಂಬಿಕೆ. ಜಾತಿ ವ್ಯವಸ್ಥೆಯನ್ನು ಕಿತ್ತೊಗೆಯದ ಹೊರತು ನಮ್ಮ ಸಮಾಜದ ಅನ್ಯಾಯಗಳನ್ನು ಸರಿಪಡಿಸಲಾಗದು ಎನ್ನುವುದರ ಬಗ್ಗೆ ಅವರಿಗೆ ಯಾವ ಸಂಶಯವೂ ಇಲ್ಲ. ಅವರು ಮುಟ್ಟಬೇಕಾದ ಗುರಿ ಹಾಗೂ ಆ ನಿಟ್ಟಿನಲ್ಲಿ ಅವರು ಸಾಗುತ್ತಿರುವ ಮಾರ್ಗದ ನಡುವೆ ಯಾವ ವ್ಯತ್ಯಾಸವೂ ಅವರಿಗೆ ಕಾಣಿಸುವುದಿಲ್ಲ. ಹಾಗಾಗಿ ಸಾಗುತ್ತಿರುವ ಮಾರ್ಗದ ಕುರಿತು ಎತ್ತಲಾಗುವ ಪ್ರಶ್ನೆಗಳು ಮುಟ್ಟಬೇಕಾದ ಗುರಿಯನ್ನೇ ಪ್ರಶ್ನಾರ್ಹಗೊಳಿಸುವಂತೆ ಅಥವಾ ಅಂತಹ ಗುರಿಗಳಿಂದ ನಮ್ಮನ್ನು ವಿಮುಖಗೊಳಿಸುವ ಹುನ್ನಾರದಂತೆ ಅವರಿಗನಿಸುತ್ತಿದೆ.

ಅವರ ಈ ಅನಿಸಿಕೆ ಎಷ್ಟರಮಟ್ಟಿಗೆ ಸರಿ? ಈ ಪ್ರಶ್ನೆಗೆ ಉತ್ತರಿಸಬೇಕಾದರೆ ಬಾಲುರವರು ಭಾರತದಲ್ಲಿ ಜಾತಿವ್ಯವಸ್ಥೆ ಇಲ್ಲ ಎನ್ನುವ ಪ್ರಾಕ್ಕಲ್ಪನೆಯನ್ನು (ಇದೊಂದು ಸಂಶೋಧನೆಯ ಮುಖಾಂತರ ಸಾಬೀತಾಗಬೇಕಾದ ಪ್ರಾಕ್ಕಲ್ಪನೆ ಮಾತ್ರ) ಏಕೆ ಮುಂದಿಡುತ್ತಾರೆ ಎನ್ನುವುದರ ಹಿನ್ನೆಲೆಯನ್ನು ನಾವು ನೋಡಬೇಕು. ಭಾರತದಲ್ಲಿ ಜಾತಿವ್ಯವಸ್ಥೆಯ ಸ್ವರೂಪ ಹಾಗು ಅದರ ಪರಿಣಾಮಗಳ ಕುರಿತು ಈಗಾಗಲೇ ಅಸಂಖ್ಯಾತ ಸಂಶೋಧನಾ ಗ್ರಂಥಗಳು ಹೊರಬಂದಿವೆ. ಜಾತಿವ್ಯವಸ್ಥೆಯ ಸ್ವರೂಪದ ಬಗ್ಗೆ ವಿದ್ವಾಂಸರಲ್ಲಿ ಒಮ್ಮತದ ಅಭಿಪ್ರಾಯವನ್ನು ನಾವು ಕಾಣುವುದಿಲ್ಲ. ಅದಕ್ಕೆ ತದ್ವಿರುದ್ದವಾಗಿ ಭಾರತದಲ್ಲಿ ಎಲ್ಲಡೆ ಕಂಡುಬರುವ ಜಾತಿಗಳನ್ನು ಒಂದು ಚೌಕಟ್ಟಿನಲ್ಲಿಟ್ಟು ನೋಡಲು ಸಾಧ್ಯವಿಲ್ಲ ಎನ್ನುವುದುನ್ನು ಎಲ್ಲಾ ವಿದ್ವಾಂಸರೂ ಹೆಚ್ಚು ಕಡಿಮೆ ಒಪ್ಪುತ್ತಾರೆ. ಬಾಲು ಅವರ ಪ್ರಕಾರ ಇದ್ಕಕೆ ಮುಖ್ಯ ಕಾರಣ ಈ ಎಲ್ಲಾ ಸಂಶೋಧನೆಗಳು ಜಾತಿವ್ಯವಸ್ಥೆ ಎನ್ನುವುದು ಹಿಂದೂ ರಿಲಿಜನ್ನ ಪ್ರಧಾನ ಲಕ್ಷಣ ಎನ್ನುವ ಇದುವರೆಗೆ ಯಾವುದೇ ಸಂಶೋಧನೆಯಿಂದ ಸಾಬೀತಾಗದ ನಂಬಿಕೆಯನ್ನು ಆಧರಿಸಿವೆ. ಹಿಂದೂ ರಿಲಿಜನ್ ಎನ್ನುವುದು ಅಸ್ತಿತ್ವದಲ್ಲಿ ಇದೆ ಮತ್ತು ಭಾರತದಲ್ಲಿರುವ ಎಲ್ಲಾ ಜಾತಿಗಳು ಅದರ ನ್ಯೆತಿಕ ನಿರ್ಬಂಧದಲ್ಲಿ ಬಂದಿಸಲ್ಪಟ್ಟಿವೆ ಎನ್ನುವುದು ಒಂದು ಸಾಮಾನ್ಯ ನಂಬಿಕೆಯಾಗಿ ಮುಂದುವರೆದುಕೊಂಡು ಬಂದಿದೆಯೇ ಹೊರತು ಅದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳನ್ನು ಯಾರಿಗೂ ಕೊಡಲು ಸಾಧ್ಯವಾಗಿಲ್ಲ.

ಮತ್ತಷ್ಟು ಓದು »