ಹೇಗೆ ಹೇಳಲಿ? ಏನು ಹೇಳಲಿ?
– ಪ್ರೊ.ರಾಜಾರಾಮ ಹೆಗಡೆ
ದೇವನೂರು ಮಹಾದೇವರವರ ಲೇಖನಕ್ಕೆ ಪ್ರತಿಕ್ರಿಯೆ {ಪ್ರಜಾವಾಣಿಯಲ್ಲಿ ಅಪ್ರಕಟಿತ ಲೇಖನ}
ದೇವನೂರು ಮಹಾದೇವರ ಪ್ರತಿಕ್ರಿಯೆಯನ್ನು ಓದಿದ ನಂತರ, ಅವರು ಏನನ್ನು ಹೇಗೆ ಹೇಳಿದ್ದಾರೆ ಎಂಬುದನ್ನು ಕಂಡ ನಂತರ ಅವರನ್ನು ಕಾಡಿದ ಆ “ಹೇಗೆ ಹೇಳಲಿ? ಏನು ಹೇಳಲಿ?” ಎಂಬ ಪ್ರಶ್ನೆ ಈಗ ಅವರದಕ್ಕಿಂತ ನನ್ನದೇ ಆಗಿದೆ. ಅವರು ನಮ್ಮ ಕುರಿತು ಏಕೆ ಇಂಥ ಭಾಷೆಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ ಎಂಬುದು ಸ್ಪಷ್ಟ. ಅವರಿಗೆ ಸಿಟ್ಟಿದೆ. ದೇವನೂರರು ಒಂದು ಸಮೂಹದ ಹಿತದೃಷ್ಟಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದಾರೆ. ಅವರ ಜೀವನ ಈ ಕುರಿತಾಗಿಯೇ ಒಂದು ಹೋರಾಟ ಎಂದರೂ ತಪ್ಪಿಲ್ಲ. ಇಷ್ಟನ್ನು ಖಚಿತವಾಗಿ ಹೇಳಬಲ್ಲಷ್ಟು ನಾನು ಅವರನ್ನು ಬಲ್ಲೆ. ಹಾಗೂ ಅದನ್ನು ಗಮನಿಸುವುದು ಮುಂದಿನ ಸಂವಾದಕ್ಕೆ ನಿರ್ಣಾಯಕ ಎಂಬುದಾಗಿ ನನಗನಿಸುತ್ತದೆ. ಏಕೆಂದರೆ ಯಾರದೇ ಪ್ರಾಮಾಣಿಕತೆಯ ಮೇಲೆ ಅಪನಂಬಿಕೆಯನ್ನಿಟ್ಟು ಬೌದ್ಧಿಕ ಚರ್ಚೆಯನ್ನು ಪ್ರಾರಂಭಿಸುವುದರಿಂದ ಚರ್ಚಿಸತಕ್ಕ ವಿಷಯಕ್ಕೆ ನ್ಯಾಯ ಸಲ್ಲುವುದಿಲ್ಲ.
ನಮ್ಮ ದುರುದ್ದೇಶದ ಕುರಿತು ಅವರು ಕಟ್ಟಿಕೊಂಡಿರುವ ಚಿತ್ರಗಳನ್ನು ಅವರ ಲೇಖನದ ಮೂಲಕ ಗ್ರಹಿಸುತ್ತ ಹೋದಾಗ ನಮ್ಮ ಕುರಿತು ಯಾವ ರೀತಿಯ ಚಿತ್ರಣವು ಅವರ ವಲಯದಲ್ಲಿ ಗಟ್ಟಿಯಾಗುತ್ತಿದೆ ಎಂಬುದಕ್ಕೆ ಮತ್ತೊಂದು ದೃಷ್ಟಾಂತ ಸಿಕ್ಕಂತಾಯಿತು. ಹಾಗಂತ ಇದೇನೂ ನನಗೆ ಆಘಾತ ನೀಡಲಿಲ್ಲ. ಈ ಥೆರಪಿಯನ್ನು ನನಗೆ ಹಾಗೂ ನನ್ನ ಗುಂಪಿಗೆ ನಾವು ಬಾಲು ಜೊತೆ ಸೇರಿ ಸಂಶೋಧನೆ ಪ್ರಾರಂಭಿಸಿದಾಗಿನಿಂದಲೂ ನೀಡಲಾಗುತ್ತಿದೆ. ಸಂಶೋಧನೆ ಮಾಡುವುದು ಕೇವಲ ಬೌದ್ಧಿಕ ಪ್ರಶ್ನೆಯೊಂದೇ ಅಲ್ಲ, ಅದು ಪ್ರವಾಹದ ವಿರುದ್ಧ ಈಜುವ ಕೆಲಸ ಕೂಡ ಆಗಿದೆ ಎಂಬುದು ನಮಗೆ ಈಗಾಗಲೇ ಅನುಭವ ವೇದ್ಯವಾಗಿದೆ. ನಮ್ಮ ದುರುದ್ದೇಶದ ಕುರಿತು ಹುಟ್ಟುತ್ತಿರುವ ಕಥೆ ಸಾಕಷ್ಟು ಬೇರುಬಿಡುತ್ತಿದೆ ಎಂಬುದನ್ನು ಪ್ರಜಾವಾಣಿ ಪ್ರತಿಕ್ರಿಯೆಗಳಿಂದ ಮನಗಾಣುತ್ತಿದ್ದೇನೆ. ದೇವನೂರರೇ ಕೊಟ್ಟ ಆಡಿನ ಕಥೆಯಂತೆ ಹತ್ತಾರು ಮಂದಿ ಒಂದು ಸುಳ್ಳನ್ನು ಹೇಳುತ್ತಿದ್ದರೆ, ಹಾಗೂ ನಾವು ಸುಮ್ಮನೇ ಇದ್ದರೆ ಜನ ಅದನ್ನೇ ಸತ್ಯವೆಂದು ನಂಬಿಬಿಡುವ ಸಾಧ್ಯತೆಯಿದೆ. ಒಂದೊಮ್ಮೆ ನಮ್ಮ ಸಂಶೋಧನೆಯು ದೇವನೂರರು ಅಂದುಕೊಂಡಂತೇ ಯಾವುದೇ ಮಾನವ ಸಮುದಾಯದ ಅಹಿತವನ್ನು ಬಯಸುವ ದುರುದ್ದೇಶವನ್ನು ಹೊಂದಿಲ್ಲ ಅಂತಾದರೆ, ಈ ನಿಟ್ಟಿನಲ್ಲಿ ಈಗಿರುವ ಜ್ಞಾನದ ಮಿತಿಗಳನ್ನು ಕಳೆದು ಇನ್ನೂ ಹೆಚ್ಚು ಸ್ಪಷ್ಟತೆಯನ್ನು, ನ್ಯಾಯವನ್ನು ಸಾಧಿಸುವುದು ಅಂತಾದರೆ, ದೇವನೂರರ ನೋವಿಗೆ ಇರಬಹುದಾದ ಕಾರಣಗಳೇ ಮಾಯವಾಗುತ್ತವೆ. ಮುಂದೆ ಅವರ ಜೊತೆ ಅರ್ಥಪೂರ್ಣ ಸಂವಾದ ಸಾಧ್ಯವಾಗಬಹುದು ಎಂಬ ಆಶಯದಿಂದ ಈ ಲೇಖನ.
ಸಿದ್ಧಾಂತ ಮತ್ತು ಐಡಿಯಾಲಜಿ ಒಂದೇ ಅಲ್ಲ – “ಗೆಳೆಯ ಫಣಿರಾಜ್ ರವರ ಪತ್ರಕ್ಕೆ ಒಂದು ಪ್ರತಿಕ್ರಿಯೆ”
– ಪ್ರೊ.ಜೆ.ಎಸ್.ಸದಾನಂದ
ನಿಮ್ಮ ಪತ್ರ ಓದಿದ ನಂತರ ಒಂದು ತರದ ಹಿತಕರ ಅನುಭವವಾಯಿತು. ಹಿತಕರ ಏಕೆಂದರೆ ಇದೂವರೆಗೂ ನಮ್ಮ ಬಗ್ಗೆ ಪ್ರತಿಕ್ರಿಯಿಸಿದ ಬಹಳಷ್ಟು ಮಂದಿಗೆ ನಮ್ಮ ಸಂಶೋಧನೆಯ ಹಿಂದಿರುವ ಕುತಂತ್ರ, ಹುನ್ನಾರ ಹಾಗೂ ಆಮಿಷಕ್ಕೆ ಒಳಗಾಗುತ್ತಿರುವುದಷ್ಟೇ ಕಾಣಿಸುತ್ತಿತ್ತು. ಅದಕ್ಕೆ ವ್ಯತಿರಿಕ್ತವಾಗಿ ನೀವು ನಮ್ಮ ಸಂಶೋಧನೆಯ ಬಗ್ಗೆ ನಿಮಗಿರುವ ಕೆಲವು ಸಂದೇಹಗಳ ಕುರಿತು ತುಂಬಾ (ಸಾಮಾಜಿಕ ಹೋರಾಟದಲ್ಲಿ ಬಹಳ ಕಾಲದಿಂದಲೂ ತೊಡಗಿಸಿಕೊಂಡ ಬದ್ಧತೆಯಿಂದ ಹುಟ್ಟಿದ) ಕಾಳಜಿಯಿಂದ ಚರ್ಚೆ ಮಾಡಲು ಹೊರಟಿದ್ದೀರಿ. ನಮ್ಮ ಉದ್ದೇಶವೂ ಸಹ ನಮ್ಮ ಕೇಂದ್ರದಲ್ಲಿ ಕ್ಯೆಗೊಳ್ಳುತ್ತಿರುವ ಸಂಶೋಧನೆಗಳು ಸಾರ್ವಜನಿಕ ವಿಮರ್ಶೆಗೊಳಪಡಬೇಕು ಮತ್ತು ಅದರ ಪರಿಣಾಮದಿಂದ ನಮಗೂ, ಈ ನಿಟ್ಟಿನಲ್ಲಿ ಸಂಶೋಧನೆ ಮಾಡುತ್ತಿರುವ, ಚಿಂತಿಸುತ್ತಿರುವ ಇತರರಿಗೂ ಪ್ರಚಲಿತ ಚಿಂತನೆಯಲ್ಲಿರುವ (ನಮ್ಮದನ್ನೂ ಒಳಗೊಂಡು) ಲೋಪದೋಷಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸಿಕೊಳ್ಳಲು ಸಹಾಯಕವಾಗಬೇಕು ಎನ್ನುವುದೇ ಆಗಿದೆ.
ನಮ್ಮ ಸಂಶೋಧನಾ ವಿಧಾನದ ಬಗ್ಗೆ ಈಗಾಗಲೇ ಹೇಳಿರುವುದರಿಂದ ಅದನ್ನು ಪುನರಾವರ್ತಿಸುವ ಅಗತ್ಯವಿಲ್ಲ. ಆದರೆ ಒಂದು ವಿಷಯವನ್ನು ಇಲ್ಲಿ ಸ್ಪಷ್ಟಪಡಿಸಲು ಬಯಸುತ್ತೇನೆ. ಜಾತಿವ್ಯವಸ್ಥೆ, ಸೆಕ್ಯುಲರಿಸಂ, ಮಡೆಸ್ನಾನ ಇತ್ಯಾದಿಗಳ ಬಗ್ಗೆ ನಾವಾಗಲೀ ಬಾಲುವಾಗಲಿ ಯಾವುದೇ ವ್ಯೆಜ್ಞಾನಿಕ ಸಿದ್ದಾಂತವನ್ನು ಮಂಡಿಸುತ್ತಿಲ್ಲ. ಮುಂದಿನ ಸಂಶೋಧನೆಗಳು ಕ್ಯೆಗೆತ್ತಿಕೊಳ್ಳಬಹುದಾದ ಸಂಶೋಧನಾ ಪ್ರಶ್ನೆಗಳನ್ನಷ್ಟೇ ಮುಂದಿಡುತ್ತಿದ್ದೇವೆ. ಅದರ ಮೊದಲ ಹಂತವಾಗಿ ಅವುಗಳ ಕುರಿತಾಗಿ ಬರೆದ ಲೇಖನಗಳು ಈ ವಿದ್ಯಮಾನಗಳ ಸದ್ಯದ ಗ್ರಹಿಕೆಯ ಸ್ವರೂಪದಲ್ಲಿ ಇರುವ ಸಮಸ್ಯೆಗಳನ್ನು ಮಾತ್ರ ಗುರುತಿಸುವ ಪ್ರಯತ್ನ ಮಾಡುತ್ತವೆ. ನಾವು ಒಪ್ಪಿಕೊಂಡಿರುವ ಲಿಬರಲ್ ಪ್ರಜಾಪ್ರಭುತ್ವ, ಸೆಕ್ಯುಲರರ ಹಾಗೂ ವ್ಯೆಚಾರಿಕ ಸಿದ್ಧಾಂತಗಳ ಚೌಕಟ್ಟಿನಲ್ಲಿ ಈ ಸಮಸ್ಯೆಯನ್ನು ಪರಿಹರಿಸಲು ಮುಂದಾದಾಗ ಉದ್ಭವಿಸುವ ಸಮಸ್ಯೆಗಳೇನು ಎಂದು ಗುರುತಿಸಲು ಪ್ರಯತ್ನಿಸಿದ್ದೇವೆ. ಇವುಗಳ ಬಗ್ಗೆ ಯಾವುದೇ ಸಂಶೋಧನೆ ನಡೆದಿಲ್ಲ. ಮುಂದೊಂದು ದಿನ ಯಾರಾದರೂ ಸಂಶೋಧನೆ ಕ್ಯೆಗೊಂಡರೆ ನಾವು ಸಮಸ್ಯೆಯನ್ನು ಗುರುತಿಸಿರುವ ವಿಧಾನದಲ್ಲೂ ತಪ್ಪಿದೆ ಎಂದು ತೋರಿಸುವ ಸಾಧ್ಯತೆ ಇದೆ. ಹಾಗಾದಾಗ ಅದನ್ನು ನಾವು ಒಪ್ಪಿಕೊಳ್ಳಲೇಬೇಕು. ನೀವೇಕೆ ಇಂತಹ ವಿಷಯಗಳನ್ನೇ ಸಂಶೋಧನೆಗೆ ಆಯ್ಕೆ ಮಾಡಿಕೊಳ್ಳುತ್ತಿದ್ದೀರಿ ಎಂದು ನಾವು ಖಂಡಿತಾ ಕೇಳುವುದಿಲ್ಲ.
ನಮ್ಮ ವಿಶ್ವವಿದ್ಯಾಲಯಗಳಲ್ಲಿ ಸಾಮಾಜಿಕ ಸಂಶೋಧನೆಗೆ ಭವಿಷ್ಯವಿದೆಯೆ?
ಪ್ರೊ. ರಾಜಾರಾಮ ಹೆಗಡೆ ಮತ್ತು ಡಾ. ಷಣ್ಮುಖ. ಎ
[ಪ್ರೊ.ರಾಜೇಂದ್ರ ಚೆನ್ನಿಯವರು ಬರೆದಿದ್ದು ಎನ್ನಲಾದ “ಭಾರತದಲ್ಲಿ ಜಾತಿವ್ಯವಸ್ಥೆ ಇದೆಯೆ?” ಎಂಬ ಪುಸ್ತಕದ ವಿಮರ್ಶೆಯು ಅವರ ಆಪ್ತ ವಲಯದಲ್ಲಿ ಸರ್ಕುಲೇಟ್ ಆಗುತ್ತಿದೆ. ಆ ವಿಮರ್ಶೆಯ ಮಿತಿಗಳು ಮತ್ತು ಪೂರ್ವಾಗ್ರಹಗಳನ್ನು ಸ್ಪಷ್ಟಪಡಿಬೇಕೆಂದು ಈ ಲೇಖನವನ್ನು ಬರೆಯಲಾಗಿದೆ]
ಇತ್ತೀಚೆಗೆ ಜಾಲತಾಣದಲ್ಲಿ ಸುತ್ತಾಡುತ್ತಿದ್ದ ಒಂದು ಪುಸ್ತಕ ವಿಮರ್ಶೆಯ ಪ್ರಾರಂಭಿಕ ಸಾಲುಗಳು ನಮ್ಮನ್ನು ಬೆಚ್ಚಿಬೀಳಿಸಿದವು. ಅವು ಹೀಗಿವೆ:
“ಈ ಕೃತಿಯು ನನ್ನಲ್ಲಿ ಹುಟ್ಟಿಸಿದ ವೈಚಾರಿಕ ಕುತೂಹಲವನ್ನು ಹೀಗೆ ವಿವರಿಸಬಹುದು. ಮನುಷ್ಯರು ಓದು, ಬುದ್ಧಿಶಕ್ತಿ, ತರ್ಕ ಹಾಗೂ ಭಾಷೆಯನ್ನು ಮಾನವ ದ್ವೇಷಿಯಾದ ಬೌದ್ಧಿಕ ಕೆಲಸಗಳಿಗೆ ಏಕೆ ಬಳಸುತ್ತಾರೆ? ಪಾಂಡಿತ್ಯವೆಂದು ಕರೆಯಲಾಗುವ ಸಂಗತಿಯು ಒಂದು ವಲಯದಲ್ಲಿ ಅಂತಃಕರಣ, ಪ್ರೀತಿ, ಇತರರ ಬಗ್ಗೆ ಸದ್ಭಾವನೆ ಮುಂತಾದ ಭಾವನೆಗಳಿಂದ ಸಂಪೂರ್ಣ ಪರಕೀಯವಾಗಿ, ಕ್ರೂರವಾದ ಅಭಿಪ್ರಾಯಗಳನ್ನು ಸಮರ್ಥಿಸುವ `ತರ್ಕದ ಟಗರ ಹೋರಟೆ’ ಯಾಕೆ ಆಗುತ್ತದೆ? ಬಹು ಸಂಖ್ಯಾತ ಜನರಿಗೆ ಮನುಷ್ಯರಾಗಿ ಬದುಕುವ ಅವಕಾಶಗಳೇ ಇಲ್ಲವಾಗುತ್ತಿರುವ ಬಡದೇಶದಲ್ಲಿ ಅತಿಶಯವಾದ ಸವಲತ್ತುಗಳನ್ನು ಪಡೆದಿರುವ ವಿಶ್ವವಿದ್ಯಾಲಯಗಳ ಬುದ್ಧಿಜೀವಿ ಹಾಗು ಸಂಶೋಧಕವರ್ಗವು ಈ ಜನರು ಆಳವಾಗಿ ನಂಬಿಕೊಂಡು ಬಂದಿರುವ ಸಮಾನತೆ, ನ್ಯಾಯ ಮುಂತಾದ ಮೌಲ್ಯಗಳನ್ನು ಉಡಾಫೆಯಿಂದ ತಿರಸ್ಕರಿಸುವ ದುಷ್ಟತನದ ಮೂಲವು ಎಲ್ಲಿದೆ? ನಿರ್ದಿಷ್ಟವಾಗಿ ಹೇಳುವುದಾದರೆ ಪಾಂಡಿತ್ಯ ಮತ್ತು ಬುದ್ಧಿಶಕ್ತಿಗಳು Evil ನ ಅತ್ಯಂತ ಆಳವಾದ ಕೆಡುಕಿನ ರೂಪಗಳೇಕೆ ಆಗುತ್ತವೆ?”
ದೇವನೂರರ ಬರಹದ ಕುರಿತು ನಡೆದ ಚರ್ಚೆಯ ಸುತ್ತ . . .
-ಡಾ. ಕಿರಣ್ ಗಾಜನೂರು
“ದೇವನೂರರ ಕುರಿತು ಅಪಾರ ಗೌರವ ಇಟ್ಟುಕೊಂಡೆ ಈ ಮಾತು ಹೇಳುತ್ತಿದ್ದೇನೆ ಅವರ ಲೇಖನದಲ್ಲಿ ಲಾಜಿಕ್ಕೆ ಇಲ್ಲ ಇನ್ನು ತಪ್ಪುಗಳನ್ನು ಹೇಗೆ ಗುರುತಿಸುವುದು ಈಗ ಒಬ್ಬರೂ ಒಂದು ಸಂಶೋಧನೆಯ ಮೂಲಕ ನಿಮಗೆ ಒಂದು ಪ್ರಶ್ನೆ/ವಾದ ಕೇಳುತ್ತಾರೆ ಎಂದು ಇಟ್ಟುಕೊಳ್ಳಿ ಅದಕ್ಕೆ ನೀವು ಬೌದ್ಧಿಕವಾಗಿ ಅಂಧರೆ ಆ ವ್ಯಕ್ತಿ ಯಾವ ಸಂಶೋಧಾನ ವಿಧಾನ ಬಳಸಿ ಯಾವ ಮಾಹಿತಿಯ ಆಧಾರದ ಮೇಲೆ ತನ್ನ ವಾದ ಮಂಡಿಸುತ್ತಿದ್ದಾನೆ ಅದರಲ್ಲಿರುವ ದೂಷಗಳೇನು ಅವನು ಬಳಸಿದ ವಿಧಾನ ಮತ್ತು ಪಡೆದ ಮಾಹಿತಿ ಹೇಗೆ ಆ ವಸ್ಥುವಿನ ಸರಿಯಾಗಿ ವಿವರಿಸುವಲ್ಲಿ ಎಡವಿದೆ ಎಂಬುದನ್ನು ಲಾಜಿಕಲಿ ಸಾಧಿಸಬೇಕಾಗುತ್ತದೆ. ಆದರೆ ದೆವನೂರರ ಬರಹದಲ್ಲಿ ಈ ಅಂಶವೇ ಇಲ್ಲ ಅವರೂ ಇದುವರೆಗೂ ನಂಬಿಕೊಂಡು ಬಂದ ಐಡಿಯಾಲಜಿಯನ್ನು ವಿವರಿಸಿದ್ದಾರೆ ಅಷ್ಟೆ ಈ ರೀತಿಯಾದರೆ ಯಾರೂ ಬೇಕಾದರೂ ಮಾತನಾಡಬಹುದು ಆದರೆ ಅದರಿಂದ ಎನೂ ಪ್ರಯೋಜನ? ಅದೂ ಅಲ್ಲದೆ ದೆವನೂರು ಮತ್ತು ಅವರ ಹಿಂಬಾಲಕರು ನಂಬಿದ ವಿಷಯಗಳೇ ಅಂತಿಮ ಅವರ ವಿವರಣೆಗೆ ವಿರುಧ್ಧದ ಸಂಶೋಧನೆ ಯಾರೂ ಮಾಡಬಾರದು ಮಾಡಿದರೆ ಅವರ ಮೇಲೆ ಕಣ್ಣಿಡಿ ವಿಚಾರಣೇ ಮಾಡಿ ಎಂಬಿತ್ಯಾದಿ ಮಾತನಾಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವ ವಿಷಯವು ಅಲ್ಲ ಒಂದೂ ಕಾಲದಲ್ಲಿ ಆರ್.ಎಸ್.ಎಸ್ ನವರನ್ನು ಯಾವ ಯಾವ ಕಾರಣಕ್ಕೆ ಇವರುಗಳು ವಿರೋಧಿಸಿದ್ದರೂ ಇವತ್ತು ಅವೇ ಲಕ್ಷಣಗಳನ್ನು ಇವರು ಅವಾಹಿಸಿಕೊಂಡು ಮಾತನಾಡುತ್ತಿದ್ದಾರೆ ಇತರರ ಸಂಶೋಧನೆ ಟೀಕಿಸುತ್ತಿದ್ದರೆ. ಅಂದರೆ ಯಾರೂ ಸಂಶೋಧನೆಯನ್ನೆ ಮಾಡಬಾರದು ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದೂ ಎಚ್ಚರಿಸುತ್ತಿದ್ದಾರೆ ಇನ್ನು ಮುಂದೆ ಹೋಗಿ ಜಿನ್ನಾ ನೀಡಿದಂತೆ ಡೈರೆಕ್ಟ್ ಆಕ್ಷನ್ ಗೆ ಕರೆನೀಡುತ್ತಿದ್ದಾರೆ ನನಗೆ ಆಶ್ಚರ್ಯವಾಗುವುದೇ ಇದಕ್ಕೆ ಯಾರೂ ಎನೇ ಸಂಶೋಧನೆ ಮಾಡಲಿ ನಾವು ಅವರೂ ಎತ್ತುವ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ ಆ ಮಟ್ಟದ ಸೈಂಧಾಂತಿಕ ಪಕ್ವತೆ ನಾವು ನಂಬಿದ ಸಿಂಧಾಂತಕ್ಕೆ ಇದೆ ಎಂದು ಆತ್ಮವಿಶ್ವಾಸದಿಂದ ನುಡಿಯುಬೇಕಾದ ಈ ಚಿಂತಕರೂ ಹೀಗೆ ವರ್ತಿಸುತ್ತಿರುವುದು ನಮ್ಮ ಸಂಶೋಧನಾ ಮಾದರಿಯ ವೈಪಲ್ಯ ತೋರಿಸುತ್ತದೆ” ಪೇಸ್ ಬುಕ್ ನಲ್ಲಿ ನಾನೂ ಪ್ರಕಟಿಸಿದ ಈ ಬರಹಕ್ಕೆ ಹಲವರು ಅನೇಕ ರೀತಿಯ ಪ್ರಶ್ನೆಗಳನ್ನು/ಟೀಕೆಗಳನ್ನು ಮಾಡಿದ್ದಾರೆ ಅವೆಲ್ಲವುಗಳನ್ನು ಒಂದೂ ಚರ್ಚೆಯ ಮಾದರಿಯಲ್ಲಿ ಕೆಳಗೆ ಬರೆದಿದ್ದೇನೆ ನೋಡಿ. . . .
ನಮ್ಮ ಸಮಾಜದಲ್ಲಿ ನಡೆಯುತ್ತಿರುವ ಮತ್ತು ನಡೆದಿರುವ ಶೋಷಣೆಗಳ ಕುರಿತು ಅವುಗಳ ನಿವಾರಣೆಯಗಳ ಕುರಿತು ಇಲ್ಲಿರುವ ಎಲ್ಲರ ಪ್ರಯತ್ನ ಮತ್ತು ಭಾವನೆ ಎಲ್ಲವೂ ತುಂಬಾ ಗೌರವಿಸುವ ವಿಚಾರಗಳೆ ಅಂದರೆ ನಮ್ಮೇಲ್ಲರ ಹಾನೆಸ್ಟ್ ಗುರಿ ಒಂದೇ ಅದು ನಮ್ಮ ಸಮಕಾಲಿನ ಸಮಾಜದ ಶೋಷಣೆಗಳನ್ನು ಹೊಗಲಾಡಿಸಬೇಕು.
ಸಂಶೋಧನೆ ಅಂದರೇನು? – ಒಂದು ಚರ್ಚೆ
“ವಚನ ಸಾಹಿತ್ಯ ಮತ್ತು ಜಾತಿ ವ್ಯವಸ್ಥೆ”ಯ ಚರ್ಚೆ ಶುರುವಾದಾಗ ಒಂದು ’ಅಕಾಡೆಮಿಕ್ ಚರ್ಚೆ’ಯ ನಿರೀಕ್ಷೆ ನಾಡಿನ ಸಂಶೋಧನಾ ವಿದ್ಯಾರ್ಥಿವಲಯದಲ್ಲಿತ್ತು.ಆದರೆ ಈ ಚರ್ಚೆ ಅಕಾಡೆಮಿಕ್ ಆಗುವುದಕ್ಕಿಂತಲೂ ಹೆಚ್ಚಾಗಿ ಪೊಲಿಟಿಕಲ್ ಚರ್ಚೆಯಾಗಿ ಮಾರ್ಪಟ್ಟಿದೆ.೨೧ ಸಾವಿರಕ್ಕೂ ಹೆಚ್ಚು ವಚನಗಳನ್ನು ಅಧ್ಯಯನ ಮಾಡಿದವರ ಜೊತೆ ೨೧ ವಚನಗಳನ್ನೂ ಸರಿಯಾಗಿ ಓದಿಕೊಳ್ಳದವರು ವಾದಕ್ಕಿಳಿಯುತಿದ್ದಾರೆ. ಗೂಗಲ್ ನಲ್ಲಿ ಸರ್ಚ್ ಮಾಡುವುದನ್ನೆ ’ರಿಸರ್ಚ್’ ಅಂದುಕೊಂಡಿರುವಂತಿದೆ ಕೆಲವರು. “ಸಂಶೋಧನೆ” ಅಂದರೇನು ಅನ್ನುವ ಕುತೂಅಲವನ್ನಿಟ್ಟುಕೊಂಡು ನಾನು ಸಿ.ಎಸ್.ಎಲ್.ಸಿ ತಂಡದವರ ಜೊತೆ ನಡೆಸಿದ ಮಾತುಕತೆಯಿದೆ ಇಲ್ಲಿದೆ ನೋಡಿ
ಸಾತ್ವಿಕ್ : ಸಂತೋಷ್ ಶೆಟ್ಟಿ, ಸಂಶೋಧನೆಗೆ ಹೈಪೋಥಿಸಿಸ್ ರಚಿಸಿಕೊಳ್ಳುವಾಗ ಜನರಿಗೆ ಬೇಕಾದ (ಜನಪ್ರಿಯ) ವಾದಗಳನ್ನು ಆರಿಸಿಕೊಳ್ಳಬೇಕೋ ಇಲ್ಲವೇ ಕಠಿಣವಾದರೂ ಸತ್ಯದ ಕಡೆ ಹೆಜ್ಜೆ ಹಾಕಬೇಕೋ? ಅಥವಾ ಇಂದಿನ ಸಂಶೋಧನೆಗಳು ಯಾವ ದಿಕ್ಕಿನಲ್ಲಿವೇ?
ಸಂತೋಷ್ ಶೆಟ್ಟಿ : ಸಾತ್ವಿಕ್ , ಜನರಿಗೆ ಬೇಕಾದ ಜನಪ್ರಿಯ ವಾದಗಳನ್ನು ಆಯ್ಕೆ ಮಾಡಿಕೊಂಡು ಸಂಶೋಧನೆ ಮಾಡಲು ಏನಿದೆ? ಈಗಾಗಲೆ ಪ್ರಚಲಿತದಲ್ಲಿರುವ ವಾದವನ್ನು ಪುಷ್ಠೀಗೊಳಿಸಬೇಕೆಂಬ ಐಡಿಯಾಲಜಿಯ ಬೆನ್ನು ಹತ್ತಿದರೆ ಅಂತಹ ವಿಷಯಗಳನ್ನು ಆಯ್ಕೆ ಮಾಡಬಹುದು, ಹಾಗೆ ಮಾಡುವ ಮೂಲಕ ಚಲಾವಣೆಯಲ್ಲಿರುವ ವಾದವೇ ಸತ್ಯವೆಂದು ಕೆಲವಾರು ಫ್ಯಾಕ್ಡ್ ನ್ನು ಸೇರಿಸಬಹುದು. ಹೀಗೆ ಮಾಡುವುದರಿಂದ ಯಾವ ಸಂಶೋಧನೆಯೂ ಆಗುವುದಿಲ್ಲ, ಏಕೆಂದರೆ ಮೊದಲೇ ಹೇಳಿದಂತೆ ಸಂಶೋಧನೆ ಮಾಡಿ ಕಂಡುಕೊಳ್ಳುವಂತದ್ದು ಅಲ್ಲಿ ಏನೂ ಇರುವುದಿಲ್ಲ.ಇನ್ನೊಂದು ಮಾರ್ಗವೆಂದರೆ ಅಧ್ಯಯನ ಮಾಡಲು ಮೊದಲು ಅಧ್ಯಯನದ ವಿಷಯಕ್ಕೆ ಸಂಬಂಧಿಸಿದ ಸಾಹಿತ್ಯವನ್ನು ಪರಿಶೀಲಿಸಿ ಅಲ್ಲಿಂದ ಸಮಸ್ಯೆಯನ್ನು ಎತ್ತಿಕೊಳ್ಳಬೇಕಾಗುತ್ತದೆ. ಜನರು ಏನನ್ನು ಒಪ್ಪುತ್ತಾರೆ ಏನನ್ನು ತಿರಸ್ಕರಿಸುತ್ತಾರೆ ಎಂಬುದಕ್ಕಿಂತ ಆ ವಿಷಯದ ಕುರಿತು ಏನೇನು ಅಧ್ಯಯನಗಾಳಗಿವೆ ಎಂಬುದನ್ನು ಗಮನಿಸಿ ಅದಕ್ಕಿಂತ ಮುಂದೆ ಹೋಗುವ ಕಾರ್ಯವನ್ನು ಸಂಶೋಧನೆ ಮಾಡಬೇಕಾಗುತ್ತದೆ. ಇನ್ನು ಈಗಿರುವ ಸಂಶೋಧನೆಯ ಕುರಿತು ನಾನು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ, ಆದರೆ ಸಂಶೋಧನೆ ಮಾಡದೆ ಮತ್ತು ಸಂಶೋಧನೆಯನ್ನು ಅರ್ಥವೂ ಮಾಡಿಕೊಳ್ಳದೆ ಹಾಗೂ ಚರ್ಚೆಯನ್ನೂ ಮಾಡದೆ ಪ್ರತಿಕ್ರಿಯಿಸುವವರು ಮಾತ್ರ ಹೆಚ್ಚಾಗಿದ್ದಾರೆ. ಅವರ ಬಹುತೇಕ ಪ್ರಶ್ನೆಗಳು ನಿಜವಾಗಿಯೂ ತಿಳಿದುಕೊಳ್ಳಲು ಇರುವ ಹಂಬಲವನ್ನು ಸೂಚಿಸದೆ ಅವರ ಅಸಮಾಧಾನವನ್ನು ಹೊರಹಾಕುವುದನ್ನು ಸೂಚಿಸುತ್ತದೆ…
ದೇವನೂರು ಮಹಾದೇವರ ಪ್ರತಿಕ್ರಿಯೆ ಮತ್ತು ನನ್ನ ಗೊಂದಲಗಳು
-ಡಾ.ಸಂತೋಷ್ ಕುಮಾರ್ ಪಿ.ಕೆ
ಪ್ರಜಾವಾಣಿಯಲ್ಲಿ ದೇವನೂರು ಮಹಾದೇವ ರವರು ಬರೆದ ಲೇಖನಕ್ಕೆ ಪ್ರತಿಕ್ರಿಯೆ.
ನನ್ನ ವಿದ್ಯಾರ್ಥಿ ಜೀವನದಿಂದಲೂ ದೇವನೂರು ಮಹಾದೇವ ಎಂಬ ಆದರ್ಶವ್ಯಕ್ತಿಯ ಕುರಿತು ಕೇಳಿದ್ದೆ, ಹಾಗೂ ಕೆಲವೊಮ್ಮೆ ನೋಡುವ ಭಾಗ್ಯವೂ ಒದಗಿತ್ತು. ಕನ್ನಡ ಬಂಡಾಯ ಸಾಹಿತ್ಯ ಮತ್ತು ಸಾಮಾಜಿಕ ಚಳುವಳಿಗಳಲ್ಲಿ ತಮ್ಮ ಜೀವನವನ್ನೇ ಮುಡುಪಾಗಿಟ್ಟು, ಶಾಂತಿ ಮತ್ತು ಅಹಿಂಸಾ ಮಾರ್ಗವಾಗಿ ಹೋರಾಡುತ್ತಿರುವುದು ಅವರ ವ್ಯಕ್ತಿತ್ವದ ಆಕರ್ಷಣೆಯಾಗಿದೆ. ಇದಕ್ಕೆ ಮಾರುಹೋದ ಹಲವಾರು ಯುವಸಮುದಾಯಗಳು ಅವರನ್ನು “ಆಧುನಿಕ ಸಂತ” ಎಂಬಂತೆ ಬಿಂಬಿಸುತ್ತವೆ. ಅಷ್ಟು ಶಾಂತಚಿತ್ತ ಮತ್ತು ಧೀಮಂತ ಹೋರಾಟಗಾರೆಂದೆ ಖ್ಯಾತಿ ಪಡೆದ ದೇವನೂರು ರವರು ಏನೇ ಬರೆದರೂ ಅದನ್ನು ಓದಲು ನನ್ನನ್ನೂ ಸೇರಿ ಅಪಾರ ಅಭಿಮಾನಿಗಳ ಬಳಗವೇ ಇದೆ. ವಚನ ಕುರಿತ ಚರ್ಚೆಗೆ ಅವರ ಪ್ರತಿಕ್ರಿಯೆಯನ್ನು ಓದಿದ ಮೇಲೆ ಅವರ ಮೇಲಿದ್ದ ನನ್ನ ಗೌರವ, ನಂಬಿಕೆಗಳು ಆ ಲೇಖನವನ್ನು ಅವರೇ ಬರೆದಿದ್ದಾ ಎಂಬ ಅನುಮಾನವನ್ನು ಮೂಢಿಸಿದೆ. ಅದೇನೇ ಇದ್ದರೂ ದೇವನೂರು ಮಹಾದೇವ ರವರು ಕೆಲವು ತಪ್ಪುನಂಬಿಕೆಗಳ ಹಿನ್ನೆಲೆಯಲ್ಲಿ ಈ ಲೇಖನವನ್ನು ಬರೆದಿದ್ದಾರೆ, ಅವುಗಳನ್ನು ನನ್ನ ಓದಿನ ಮಿತಿಯಲ್ಲಿ ಚರ್ಚಿಸಲು ಬಯಸುತ್ತೇನೆ.
೧. ಲೇಖನದ ಪ್ರಾರಂಭದಲ್ಲಿ ಒಂದು ಉದಾಹರಣೆಯನ್ನು ನೀಡುವ ಮೂಲಕ ಅಂಕಿ ಸಂಖ್ಯೆಯ ಆಧಾರವಾದ ವಿವರಣೆಯನ್ನು ವಿರೋಧಿಸಿದ್ದಾರೆ: ಅದೆಂದರೆ “ತಾಯಿಯನ್ನು ’ತಾಯಿ” ಎಂದು ಇಷ್ಟು ಸಾರಿ (ಅಂಕಿ ಸಂಖ್ಯೆಗಳ ಲೆಕ್ಕದಲ್ಲಿ) ಕರೆಯದಿದ್ದರೆ ಬಂಜೆ ಎಂದು ಕರೆದು ದಿಗ್ವಿಜಯ ಸಾಧಿಸಿಬಿಡುತ್ತಾರೆ”. ಇಲ್ಲಿ ತೆಗೆದುಕೊಂಡಿರುವ ಉದಾಹರಣೆಯನ್ನು ಮತ್ತೊಂದು ರೀತಿಯಲ್ಲಿ ಇಡಬಹುದು, ಒಲ್ಲೊಬ್ಬರು ಮಹಿಳೆ ಇದ್ದಾರೆ ಹಾಗೂ ಮಗನ ವಯಸ್ಸಿನ ವ್ಯಕ್ತಿಯೊಬ್ಬ ಇದ್ದಾನೆ ಎಂದಿಟ್ಟುಕೊಳ್ಳಿ. ಆಕೆಗೆ ಅಪಾರ ಆಸ್ತಿ ಇದ್ದು ಬೇರೆ ಯಾರೂ ವಾರಸ್ದಾರರು ಇಲ್ಲ ಎಂದಿಟ್ಟುಕೊಳ್ಳುವ, ಅವಳ ಆಸ್ತಿಯನ್ನು ಕಬಳಿಸಲು ಯಾರೋ ಆಕೆಯನ್ನು ಅಮ್ಮ ಅಮ್ಮ ಎಂದು ನೂರು ಸಾವಿರ ಲಕ್ಷ ಬಾರಿ ಕರೆಯುತ್ತಾರೆ ಎಂದಾದರೆ, ಅವರ ನಡುವೆ ಇರುವುದು ತಾಯಿ ಮಕ್ಕಳ ಸಂಬಂಧವೆ? ಅಥವಾ ಬೇರೆ ತರಹದ ಸಂಬಂಧವೆ? ಇಲ್ಲಿ ಆಸ್ತಿಗೋಸ್ಕರ ಆತ ಎಷ್ಟು ಬಾರಿ ತಾಯಿ ಎಂದು ಕರೆದರೂ ಆಕೆ ಆತನಿಗೆ ತಾಯಿಯಾಗಲು ಸಾಧ್ಯವಿಲ್ಲ, ಇದನ್ನು ಪ್ರಮಾಣೀಕರಿಸುವುದು ಹೇಗೆ? ಹೇಗೆಂದರೆ ಅವರ ನಡುವೆ ನಿಜವಾಗಿಯೂ ತಾಯಿ-ಮಗನ ಸಂಬಂಧವಿದೆಯೇ? ಎಂದು ಪರೀಕ್ಷೆ ಮಾಡುವುದು. ಆ ಪರೀಕ್ಷೆಯನ್ನೇ ಮಾಡದೆ ಕೆಲವು ಬಾರಿ ಆತ ಆಕೆಯನ್ನು ತಾಯಿ ಎಂದು ಕರೆದಿದ್ದಾನೆ ಆದ್ದರಿಂದ ಆಕೆ ಆತನ ತಾಯಿಯೇ ಎಂದು ನಿರ್ಣಯಕ್ಕೆ ಬರುವುದು ತೀರಾ ಅವಾಸ್ತವಿಕವಾಗುತ್ತದೆ. ಅಂತೆಯೇ ಜಾತಿ, ಕುಲ ಎಂಬ ಪದಗಳು ವಚನಗಳಲ್ಲಿ ಇದ್ದ ಮಾತ್ರಕ್ಕೆ ಅವುಗಳನ್ನು ಸಮಗ್ರವಾಗಿ ಅಧ್ಯಯನ ಮಾಡದೆ ಜಾತಿ ವಿರೋಧ ಎಂದು ನಿರ್ಣಯಕ್ಕೆ ಬರುವುದು ಅವಸರದ ತೀರ್ಮಾನವಾಗುತ್ತದೆ. ಹಾಗೆ ನೋಡಿದರೆ ಅಂಕಿ ಅಂಶಗಳ ಮೂಲಕ ವಚನಗಳನ್ನು ಅರ್ಥೈಸುವುದು ಮುಖ್ಯವಾದ ಗುರಿ ನಮ್ಮದಲ್ಲ ಹಾಗೂ ಅದರ ಆಧಾರದ ಮೇಲೆಯೇ ವಚನಗಳ ಕುರಿತ ವಾದವೂ ಬೆಳೆದಿಲ್ಲ, ಬದಲಿಗೆ ವಚನಗಳನ್ನು ಸಮಗ್ರವಾಗಿ ನೋಡಿದಾಗ ಹೇಗೆ ಕಾಣುತ್ತದೆ ಎಂಬುದನ್ನು ವಾದಿಸುವ ಸಂದರ್ಭದಲ್ಲಿ ನಗಣ್ಯವಾಗಿ ಅಥವಾ ಅಷ್ಟೇನೂ ಪ್ರಮುಖವಲ್ಲದ ವಿಷಯ ಅದಾಗಿದೆ.
ವಚನಗಳ ಧ್ವನಿಯನ್ನು ಎಲ್ಲಿ ಹುಡುಕಬೇಕು?
– ರಾಜಾರಾಮ ಹೆಗಡೆ
ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರ, ಕುವೆಂಪು ವಿಶ್ವವಿದ್ಯಾನಿಲಯ
{ಡಾ. ಆಶಾದೇವಿಯವರು ಪ್ರಜಾವಾಣಿಯಲ್ಲಿ ಪ್ರಕಟವಾದ ಲೇಖನಕ್ಕೆ ಪ್ರತಿಕ್ರಿಯೆಯಾಗಿ ಬರೆದು ಪ್ರಜಾವಾಣಿಗೆ ಕಳುಹಿಸಿದ್ದ ಅಪ್ರಕಟಿತ ಲೇಖನ}
ಡಾ. ಆಶಾದೇವಿಯವರ ಪ್ರತಿಕ್ರಿಯೆಯಲ್ಲಿ ನನ್ನ ವಿಚಾರಗಳ ಕುರಿತು ವ್ಯಕ್ತವಾದ ಎರಡು ಮುಖ್ಯ ಅಭಿಪ್ರಾಯಗಳ ಕುರಿತು ನನ್ನ ಆಕ್ಷೇಪಣೆಯಿದೆ: 1. ನಾವು ಉಲ್ಲೇಖಿಸುತ್ತಿರುವ ಸಂಶೋಧನಾ ವಿಧಾನವೇ ಒಂದು ಕಣ್ಕಟ್ಟು ಅಥವಾ ಮಾಯೆ. ಅದು ಸ್ವಘೋಷಿತ. ಆ ಮೂಲಕ ನಾವು ಕನ್ನಡಿಗರಿಗೆ ಮೋಸಮಾಡುತ್ತಿದ್ದೇವೆ. 2. ಈ ಸಂಶೋಧನೆಯ ಹಿಂದೆ ಒಂದು ಜಾಗತಿಕ ಹುನ್ನಾರವಿದೆ. ಇಂಥ ಹೇಳಿಕೆಗಳನ್ನು ಇದುವರೆಗೆ ನಾವು ನಿರ್ಲಕ್ಷಿಸಿಕೊಂಡು ಬಂದಿದ್ದೆವು. ಆದರೆ ಇಂಥ ಹೇಳಿಕೆಗಳನ್ನು ಸತ್ಯವೆಂಬಂತೆ ಪುನಃ ಪುನಃ ಮಾಡಲಾಗುತ್ತಿರುವುದರಿಂದ ನಾವು ಇದನ್ನು ಗಂಭೀರವಾಗಿ ಎಣಿಸಲೇಬೇಕಿದೆ.
ಆಶಾದೇವಿಯವರೊಂದೇ ಅಲ್ಲ, ನಾವು ಮಂಡಿಸಿದ ವಿಷಯದ ಕುರಿತು ಆಕ್ಷೇಪಣೆಯೆತ್ತುತ್ತಿರುವ ಬಹುತೇಕರು ಇಂಥ ಆರೋಪಗಳನ್ನು ಯಾವುದೇ ಎಗ್ಗಿಲ್ಲದೇ ತಾವು ಕಂಡುಕೊಂಡ ಸತ್ಯವೆಂಬಂತೆ ಹೇಳುತ್ತಿದ್ದಾರೆ. ಅಂದರೆ ನಾವು ಮೋಸಗಾರರು, ವಿದೇಶೀ ಹಣವನ್ನು ಕಬಳಿಸಲಿಕ್ಕೆ ಇಂಥ ಮಾತುಗಳನ್ನು ಹೇಳುತ್ತಿದ್ದೇವೆ, ಪೂರ್ವಾಗ್ರಹ ಪೀಡಿತರು, ನಮಗೊಂದು ಹುನ್ನಾರವಿದೆ, ನಾವು ದಲಿತರ, ಶೋಷಿತರ ವಿರೋಧಿಗಳು, ವಚನಕಾರರು ಯಾವ ಶಕ್ತಿಗಳ ವಿರುದ್ಧ ಹೋರಾಡಿದ್ದರೊ ನಾವು ಅವೇ ಶಕ್ತಿಗಳು, ಇತ್ಯಾದಿ. ಇವು ಸಣ್ಣಪುಟ್ಟ ಆರೋಪಗಳಲ್ಲ ಎಂಬುದನ್ನು ಪ್ರತ್ಯೇಕ ತಿಳಿಸಬೇಕಿಲ್ಲ. ಇದು ಯಾರ ವಿರುದ್ಧ ಯಾರನ್ನು ಎತ್ತಿಕಟ್ಟುವ ಹುನ್ನಾರ ಎಂಬುದು ನನಗೆ ತಿಳಿಯುತ್ತಿಲ್ಲ. ಇದು ಚಾರಿತ್ರ್ಯಹರಣದ ಪ್ರಯತ್ನ. ನಮ್ಮ ಕುರಿತು ಪ್ರಮಾಣಿತ ಸತ್ಯವೋ ಎಂಬಂತೆ ಈ ಆರೋಪಗಳನ್ನು ಅವರು ಸಾರ್ವಜನಿಕವಾಗಿ ಇಡುತ್ತಿದ್ದಾರೆ. ಮಾಧ್ಯಮವೊಂದರಲ್ಲಿ ಇಂಥ ಗುರುತರ ಆಪಾದನೆಗಳನ್ನು ಮಾಡುವಾಗ ಸಾಕ್ಷ್ಯಾಧಾರಗಳು ಬೇಕಾಗುತ್ತವೆ. ಅದಿಲ್ಲದ ಹೇಳಿಕೆಗಳು ಮಾನನಷ್ಟಕ್ಕೆ ಸಮನಾಗುತ್ತವೆ. ಹಾಗಾಗಿ ಮೊದಲು ಅದಕ್ಕೆ ಇವರೆಲ್ಲ ಸಾಕ್ಷ್ಯಾಧಾರಗಳನ್ನು ಒದಗಿಸಬೇಕು, ಇಲ್ಲದಿದ್ದಲ್ಲಿ ಇದು ಕಪೋಲ ಕಲ್ಪಿತ ಹೇಳಿಕೆ ಎಂಬುದಾಗಿ ಸ್ಪಷ್ಟೀಕರಿಸಬೇಕು ಎಂಬುದು ನನ್ನ ಆಗ್ರಹ.
ವಚನ ಸಾಹಿತ್ಯ ಹಾಗೂ ಜಾತಿ ವ್ಯವಸ್ಥೆ: ರಾಜೇಂದ್ರ ಚೆನ್ನಿಯವರಿಗೊಂದು ಪ್ರತಿಕ್ರಿಯೆ
– ಡಂಕಿನ್ ಝಳಕಿ
ಇದು ರಾಜೇಂದ್ರ ಚೆನ್ನಿಯವರು ಲಡಾಯಿ ಬ್ಲಾಗ್ನಲ್ಲಿ ಬರೆದ ಲೇಖನಕ್ಕೆ ನನ್ನ ಪ್ರತಿಕ್ರಿಯೆ. ಅವರ ಲೇಖನ ಸಾಕಷ್ಟು ಉದ್ದವಿದ್ದರೂ ಅದರಲ್ಲಿ ಉತ್ತರ ಕೊಡಲು ಯೋಗ್ಯವಾದ ವಿಚಾರಗಳಿರುವುದು ಎರಡು ಅಥವಾ ಮೂರು ಮಾತ್ರ. ಉಳಿದದ್ದೆಲ್ಲಾ ವೈಯುಕ್ತಿಕ ನಿಂದನೆಗಳು, ಆಧಾರ ರಹಿತ ಆಪಾದನೆಗಳು, ಮತ್ತು ಬಾಲಿಶ ಹಾಸ್ಯಗಳು. ಅವುಗಳಿಗೆ ಉತ್ತರ ಕೊಡುವುದು ಘನತೆಯ ವಿಚಾರವಲ್ಲ.
೧.ಮೇಲುಚಲನೆಯ ಕುರಿತು: ಡಾ.ಷಣ್ಮುಖರವರು ಹೇಳುವ ನನ್ನ “ಪ್ರಬಂಧದಲ್ಲಿ ಎಲ್ಲೂ ಈಗ ಇರುವ ವಚನಗಳು ಜಾತಿ(ವ್ಯವಸ್ಥೆ) ವಿರೋಧಿ ಚಳುವಳಿ ಎಂಬ ಕಥೆಯನ್ನು ವೀರಶೈವರು ತಮ್ಮ ಮೇಲುಚಲನೆಗಾಗಿ ಹರಡಿದರು ಎನ್ನುವ ವಾದವಿಲ್ಲ” ಎಂಬುದನ್ನು ಅಲ್ಲಗಳೆಯುತ್ತಾ ಚೆನ್ನಿಯವರು ನಾನು ನನ್ನ ಪ್ರಬಂಧದಲ್ಲಿ ತನ್ನ ಅಸ್ಮಿತೆ ಹಾಗೂ ಸಂಘಟನೆಯನ್ನು ಬಲಪಡಿಸುವ ಪ್ರಯತ್ನದಲ್ಲಿ ಬ್ರಿಟಿಷರು ಕಟ್ಟಿಕೊಟ್ಟ ಚಿತ್ರಣಗಳನ್ನು ತನಗೆ ಅಪ್ಯಾಯಮಾನವಾಗಿ ಕಂಡಿದ್ದರಿಂದ ಆಧುನಿಕ ವೀರಶೈವ ಶಿಕ್ಷಿತ ವರ್ಗವು ಒಪ್ಪಿಕೊಂಡಿತು ಎಂದು ವಾದಿಸುತ್ತೇನೆ ಎಂದು ಹೇಳುತ್ತಾರೆ.
ವಚನ ಸಂಶೋಧನೆಯ ವಿಮರ್ಶೆ: ನಿರ್ಬಲ ವಾದ, ತಾರ್ಕಿಕ ಸಮಸ್ಯೆ
– ಡಂಕಿನ್ ಝಳಕಿ
`ಪ್ರಜಾವಾಣಿ’ಯಲ್ಲಿ ವಚನಗಳ ಕುರಿತ ನಮ್ಮ ಸಂಶೋಧನೆಯ ಬಗ್ಗೆ ನಡೆಯುತ್ತಿರುವ ಚರ್ಚೆಯಲ್ಲಿ ಒಂದು ಸಮಸ್ಯೆ ಮತ್ತೆ ಮತ್ತೆ ಚರ್ಚೆಗೆ ಬಂದಿದೆ. ಈ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳಬೇಕಾದರೆ ಈ ಮುಂದಿನ ಮಾತುಗಳನ್ನು ಕುರಿತು ನಾವು ಚಿಂತಿಸಬೇಕು: ವಚನಕಾರರು ಜಾತಿಯ ಬಗ್ಗೆ ತಮ್ಮ ಸಿಟ್ಟು, ಅಸಮಾಧಾನ ಮತ್ತು ಕೊರಗುಗಳನ್ನು ಹೇಳಿದ್ದಾರೆಂಬುದಕ್ಕೆ ಸಾಕಷ್ಟು ಪುರಾವೆಗಳನ್ನು ವಚನಗಳಲ್ಲಿ ತೋರಿಸಬಹುದು. ಅವುಗಳ ಸಂಖ್ಯೆ ವಿರಳವೆಂಬುದು ಅವುಗಳ ಪ್ರಾಮುಖ್ಯವನ್ನು ಕುಂದಿಸುವುದಿಲ್ಲ.
ಶಿವಪ್ರಕಾಶರ ಈ ಹೇಳಿಕೆಯ ಎರಡನೇ ಸಾಲನ್ನು ಗಮನಿಸಿ. ಈ ಸಾಲನ್ನು ನೋಡಿದಾಗಲೆಲ್ಲಾ ನನಗೆ ಅನಿಸಿದ್ದು ಈ ಆಕ್ಷೇಪಣೆಗೆ ಸಮರ್ಪಕವಾದ ಉತ್ತರ ನಮ್ಮ ಲೇಖನದಲ್ಲೇ ಇದೆಯಲ್ಲಾ ಎಂದು. ಹಾಗೇಕೆ ಅನಿಸುತ್ತದೆ ಎಂದೂ ಹೇಳಿ ಬಿಡುತ್ತೇನೆ. ಸಮಗ್ರ ವಚನ ಸಂಪುಟಗಳಲ್ಲಿರುವ ಒಟ್ಟು 21,788 ವಚನಗಳಲ್ಲಿ, ನಮ್ಮ ಲೇಖನ ತೋರಿಸುವ ಪ್ರಕಾರ, ಜಾತಿ ವಿರೋಧಿ ಚಳವಳಿ ಎಂಬ ವಿಷಯದ ಚರ್ಚೆಗೆ ಸರಿಯಾಗಿ ಉಳಿದುಕೊಳ್ಳುವ ವಚನಗಳು 72 ಮಾತ್ರ.
ಇರುವ ಈ 72 ವಚನಗಳಲ್ಲಿ, ವಚನಗಳು ಜಾತಿಯನ್ನು ವಿರೋಧಿಸುತ್ತವೆ ಎಂದು ಸಾಧಿಸ ಹೊರಡುವ ಚಿಂತಕರು ಬಳಸುವುದು ಕೇವಲ ಎಂಟು ಹತ್ತು ವಚನಗಳನ್ನು ಮಾತ್ರ. ಕೇವಲ ಎಂಟು ಹತ್ತು ವಚನಗಳನ್ನು ಆಯ್ದುಕೊಂಡು ಎಂಟುನೂರು ವರ್ಷಗಳ ಸುದೀರ್ಘ ಇತಿಹಾಸ ಉಳ್ಳ ಇಡಿಯ ವಚನ ಸಂಪ್ರದಾಯದ ಬಗ್ಗೆ ಮಾತನಾಡುವುದಾದರೆ, ಯೋಚಿಸಿ ನೋಡಿ, ನಾವು ಏನನ್ನು ಬೇಕಾದರೂ ಸಾಧಿಸಿಬಿಡಬಹುದು.
ವಚನಗಳನ್ನು ಆಧ್ಯಾತ್ಮಿಕ ಸಂದರ್ಭದಲ್ಲಿಟ್ಟು ನೋಡಿದಾಗ ಕಾಣಿಸುವುದೇನು?
– ಬಾಲಗಂಗಾಧರ ಎಸ್. ಎನ್.
ಗೆಂಟ್ ವಿಶ್ವವಿದ್ಯಾಲಯ, ಬೆಲ್ಜಿಯಂ
ವಚನಗಳ ಉದ್ದೇಶವು ಜಾತಿವಿನಾಶ ಚಳವಳಿಯಲ್ಲ ಎಂಬ ನನ್ನ ಹಾಗೂ ನನ್ನ ಸಹಸಂಶೋಧಕರ ವಾದವು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ನನ್ನ ವಾದಕ್ಕೆ ಪ್ರತಿಕ್ರಿಯಿಸಿದವರೆಲ್ಲರೂ ನನ್ನ ವಾದವು ವಚನಗಳ ಹಿರಿಮೆಯನ್ನು ಅಲ್ಲಗಳೆಯುತ್ತಿದೆ ಎಂಬುದಾಗಿ ಭಾವಿಸಿದ್ದಾರೆ. ಅದನ್ನು ಸ್ಪಷ್ಟೀಕರಿಸಲು ವಚನಗಳನ್ನು ಆಧ್ಯಾತ್ಮಿಕ ಸಂದರ್ಭದಲ್ಲಿಟ್ಟು ನೋಡಬೇಕೆಂಬುದು ನಮ್ಮ ವಾದವೆಂಬುದನ್ನು ಓದುಗರ ಗಮನಕ್ಕೆ ತಂದಿದ್ದೂ ಆಗಿದೆ. ಆ ಹೇಳಿಕೆಯ ಕುರಿತೂ ಅನೇಕ ಪ್ರತಿಕ್ರಿಯೆಗಳು ಬಂದವು. ಈ ಪ್ರತಿಕ್ರಿಯೆಗಳಲ್ಲಿ ಪರೋಕ್ಷವಾಗಿ ಇವರೆಲ್ಲರೂ ಆಧ್ಯಾತ್ಮ ಸಂಪ್ರದಾಯವನ್ನು ಬ್ರಾಹ್ಮಣರಿಗೆ ಸಮೀಕರಿಸುವುದು ಕಂಡುಬರುತ್ತದೆ. ಇಲ್ಲಿ ಬಹುಶಃ ಈ ಅಭಿಪ್ರಾಯಗಳಿಗೆ ಉತ್ತರ ನೀಡುವುದಕ್ಕಿಂತ ನಾನು ಏನು ಹೇಳುತ್ತಿದ್ದೇನೆ ಎಂಬುದನ್ನು ಮತ್ತೂ ಸ್ಪಷ್ಟೀಕರಿಸುವುದು ಸೂಕ್ತ ಎನ್ನಿಸುತ್ತದೆ.
ಭಾರತೀಯ ಆಧ್ಯಾತ್ಮ ಪರಂಪರೆಯು ಇಂದಿನವರೆಗೂ ಐತಿಹಾಸಿಕ ಏಳು ಬೀಳುಗಳನ್ನೆಲ್ಲ ದಾಟಿಕೊಂಡು ಅವ್ಯಾಹತವಾಗಿ ಮುಂದುವರಿದುಕೊಂಡು ಬಂದಿದೆ. ಆದರೆ ಅದರ ಕುರಿತು ಅಧಿಕೃತವಾಗಿ ತಿಳಿದುಕೊಳ್ಳುವ ಗುರಿಯನ್ನು ಸಮಾಜ ವಿಜ್ಞಾನವು ಇನ್ನೂ ತಲುಪಿಲ್ಲ. ಏಕೆಂದರೆ, ಅದರ ಒಂದು ವಿಶೇಷತೆಯೆಂದರೆ ಅದನ್ನು ಗುರು, ಶಿಷ್ಯವೃತ್ತಿ, ಸತತ ಸಾಧನೆ ಇತ್ಯಾದಿಗಳಿಂದಲೇ ಕಲಿಯಬೇಕಾಗುತ್ತದೆ. ಅದರ ಕುರಿತು ನಮ್ಮ ಆಧುನಿಕ ಪರಿಭಾಷೆಗಳಲ್ಲಿ ಮಾತನಾಡಲು ಹಾಗೂ ಅರ್ಥಮಾಡಿಕೊಳ್ಳಲು ನಾವಿನ್ನೂ ಸರಿಯಾದ ಭಾಷೆಯನ್ನು ಬೆಳೆಸಿಕೊಂಡಿಲ್ಲವೆಂಬುದು ವಚನದ ಕುರಿತ ಈ ಚರ್ಚೆಯಂದ ಧೃಡಪಡುತ್ತದೆ. ಏಕೆ ಈ ಸಂಪ್ರದಾಯವನ್ನು ಪ್ರವೇಶಿಸಲು ನಮಗೆ ಸಾಧ್ಯವಾಗುತ್ತಿಲ್ಲವೆಂದರೆ ಈಗ ಇರುವ ವಿವರಣೆಗಳೆಲ್ಲವೂ ಕ್ರೈಸ್ತ ಥಿಯಾಲಜಿಯನ್ನಾಧರಿಸಿ ಹುಟ್ಟಿದಂಥವು. ಅಂದರೆ, ಭಾರತೀಯ ಆಧ್ಯಾತ್ಮಿಕ ಪರಂಪರೆಯನ್ನು ಪ್ರಪ್ರಥಮವಾಗಿ ಸಮಾಜ ವಿಜ್ಞಾನದ ಪರಿಭಾಷೆಯಲ್ಲಿ ಇಟ್ಟ ಐರೋಪ್ಯರು ತಮಗೆ ಗೊತ್ತಿದ್ದ ಒಂದೇ ಒಂದು ಪರಿಭಾಷೆಗಳ ಲೋಕದಿಂದ ಇದನ್ನು ವರ್ಣಿಸಿದರು, ಅದೇ ಕ್ರೈಸ್ತರ ಥಿಯಾಲಜಿಯ ಲೋಕ. ಅಂದರೆ, ಇಂದು ಆಧ್ಯಾತ್ಮದ ಜ್ಞಾನದ ಹಿನ್ನೆಲೆಯನ್ನು ಹೊಂದಿದವರು ಏನನ್ನು ಹೇಳುತ್ತಿದ್ದಾರೆ ಎಂಬುದನ್ನು ಇಂದಿನ ಸಮಾಜ ವಿಜ್ಞಾನಿಗಳು ಸಂಶೋಧನಾ ಭಾಷೆಯಲ್ಲಿ ವರ್ಣಿಸಬೇಕಾದರೆ ಥಿಯಾಲಜಿಗೂ ಹೊರತಾದ ವೈಜ್ಞಾನಿಕ ಭಾಷೆಯೊಂದರ ಅಗತ್ಯವಿದೆ.
ಮತ್ತಷ್ಟು ಓದು 




