ISROಗೆ ಸಾಧ್ಯವಾಗಿದ್ದು HALಗೇಕೆ ಸಾಧ್ಯವಾಗಲಿಲ್ಲ?
– ಅಜಿತ್ ಶೆಟ್ಟಿ ಹೆರಾಂಜೆ
ಸುಮಾರು 78 ವರ್ಷ ಇತಿಹಾಸ ಇರುವ ವಿಮಾನ ತಯಾರಿಕ ಕಂಪೆನಿಯೊಂದು ಇಂದಿಗೂ ತೆವಳುತ್ತ ಕುಂಟುತ್ತಾ ಸಾಗುತ್ತಿದೆ ಅಂದರೆ ಅದಕ್ಕೆಯಾರುಹೊಣೆ? ಅದನ್ನ ನಿರ್ವಹಣೆ ಮಾಡುತ್ತಿರುವ ಸರಕಾರವಾ? ಅಥವಾ ಅಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಾ? ಅಥವಾ ಕಾರ್ಮಿಕರಿಂದ ಕೆಲಸ ತೆಗೆಸುತ್ತಿರುವ ಅಧಿಕಾರಿ ವರ್ಗವಾ? ಅಥವಾ ಇವರೆಲ್ಲರೂ ಕಾರಣರ? ಹೌದು ನಾನು ಎತ್ತಿರುವ ಪ್ರಶ್ನೆ ಹೆಚ್ಎಎಲ್ ಬಗ್ಗೆ.ಈ ಪ್ರಶ್ನೆ ಈಗ ಯಾಕೆ ಗಂಭೀರ ಸ್ವರೂಪ ಪಡೆದಿದೆ ಎಂದರೆ ಇಂದು ಬಹಳಷ್ಟು ಮಂದಿಗೆ ಎಚ್ಎಎಲ್ ಅಂದರೆ ಅಮೇರಿಕದ ಬೋಯಿಂಗ್ ಕಂಪೆನಿಯ ತರವೋ ಅಥವಾ ರಶ್ಯಾದ ಸುಕೋಯಿ ಕಂಪೆನಿಯ ತರಹವೋ ಎಂದು ಅನಿಸೋಕೆ ಶುರು ಆಗಿದೆ. ಆದರೆ ವಾಸ್ತವಾಂಶ ಹಾಗಿಲ್ಲ. ಎಚ್ಎಎಲ್ ಸ್ಥಾಪನೆಯಾಗಿ 79 ವರ್ಷ ಕಳೆದರೂ ಇವತ್ತಿಗೂ ಈ ಕಂಪೆನಿ 79 ವರ್ಷಗಳ ಹಿಂದೆ ತಾನೇನನ್ನು ಮಾಡುತ್ತಿದಯೋ ಬಹುತೇಕ ಅದೇ ಕೆಲಸವನ್ನು ಇಂದಿಗೂ ಮಾಡುತ್ತಿರುವುದು ಈ ದೇಶದ ಬಹುದೊಡ್ಡ ದುರಂತ. ಎಚ್ಎಎಲ್ ಇಂದಿಗೂ ಬಹುತೇಕ ಕೆಲಸ ವಿದೇಶಿ ನಿರ್ಮಿತ ಯುದ್ದ ವಿಮಾನಗಳ ಬಿಡಿಬಾಗಾಗಳನ್ನ ಇಲ್ಲಿಗೆ ತಂದು ಅದೇ ಕಂಪೆನಿಗಳ ಸಹಯೋಗದೊಂದಿಗೆ ಜೋಡಿಸುವ ಕಾರ್ಯವಷ್ಟೆ. ಒಂದು ಸಣ್ಣವ್ಯತ್ಯಾಸ ಅಂದರೆ 79 ವರ್ಷದ ಹಿಂದೆ Harlow PC-5 ವಿಮಾನವನ್ನು ಜೋಡಿಸಿತ್ತು ಇವತ್ತು ಸುಕೋಯಿ ಯಯದ್ದ ವಿಮಾನದ ಬಿಡಿ ಭಾಗವನ್ನ ಜೋಡಿಸಸುತ್ತಿದೆ ಅಷ್ಟೆ. ಎಚ್ಎಎಲ್ ತಾನಾಗಿಯೇ ಅಭಿವೃದ್ಧಿಪಡಿಸಿದ ವಿಮಾನ ಹಾಗು ಹೆಲಿಕಾಪ್ಟರ್ ಸಂಖ್ಯೆ ಬಹಳಾ ಕಡಿಮೆ.
ಹಿಂದುಸ್ಥಾನ್ ಏರೋನೋಟಿಕ್ಸ್ ಲಿಮಿಟೆಡ್ ಇದರ ಮೂಲ ಹೆಸರು ಹಿಂದುಸ್ಥಾನ್ ಏರ್ಕ್ರಾಫ್ಟ್ ಲಿಮಿಟೆಡ್ ಎಂದು.ಇದನ್ನ 1940 ರಲ್ಲಿ ಅಂದಿನ ಮೈಸೂರು ಸರಕಾರದ ಸಹಯೋಗದೊಂದಿಗೆ 25 ಲಕ್ಷ ರೂಪಾಯಿ ಬಂಡವಾಳ ಹಾಕಿ ಸ್ಥಾಪಿಸಿದವರು ವಾಲ್ ಚಂದ ಹೀರಾಚಂದ್ ಎನ್ನುವವರು.1941ರಲ್ಲಿ ಅಂದಿನ ಬ್ರಿಟಿಷ್ ಸರಕಾರ ಈ ಕಂಪನಿಯ ಮೂರನೇ ಒಂದರಷ್ಟು ಪಾಲನ್ನು ಖರೀದಿಸಿತು. ಕಾರಣ ಅಂದಿನ ಕಾಲಕ್ಕೆ ಬ್ರಿಟಿಷರ ಸೈನ್ಯಕ್ಕೆ ಆಧುನಿಕ ಮಿಲಿಟರಿ ಉಪಕರಣವನ್ನು ಸರಬರಾಜು ಮಾಡಲು ಏಷ್ಯಾ ಖಂಡದಲ್ಲಿ ಒಂದು ವ್ಯವಸ್ಥೆ ಬೇಕಿತ್ತು.ಅದರಂತೆಯೇ 1942 ರಲ್ಲಿ ಅಮೆರಿಕಾದ Central Aircraft Manufacturing Company (CAMCO) ಎನ್ನುವ ಕಂಪೆನಿಯ ಸಹಯೋಗದೊಂದಿಗೆ Harlow PC-5 ಎನ್ನುವ ವಿಮಾನವನ್ನು ನಿರ್ಮಿಸಿತು.ನಂತರ ಇದು ಭಾರತೀಯ ವಾಯು ಪಡೆಯ ಒಂದು ಮುಖ್ಯ ಯುದ್ಧ ವಿಮಾನವಾಗಿ ಬಹಳಷ್ಟು ವರ್ಷ ಸೇವೆ ಸಲ್ಲಿಸಿತು. 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಮೇಲೆ ಈ ಸಂಸ್ಥೆ ಯನ್ನು ಭಾರತ ಸರ್ಕಾರ ಸಂಪೂರ್ಣ ತನ್ನ ಅಧೀನಕ್ಕೆ ತೆಗೆದುಕೊಂಡಿತು, ಅಕ್ಟೋಬರ್ 1, 1964 ರಲ್ಲಿ ಅಂದಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರು ಇದನ್ನ ಹಿಂದುಸ್ಥಾನ್ ಏರೋನೋಟಿಕ್ಸ್ ಲಿಮಿಟೆಡ್ ಎಂದು ಮರು ನಾಮಕರಣ ಮಾಡಿ ಇದಕ್ಕೊಂದು ಮರು ಹುಟ್ಟು ಕೊಟ್ಟರು.ಹೆಚ್ಎಎಲ್ ಅನ್ನು ಆಧುನಿಕ ಭಾರತದ ಸೇನೆಯ ಬೇಡಿಕೆಯನ್ನು ಪೂರೈಸುವ ಒಂದು ಉತ್ತಮ ಸಂಸ್ಥೆಯನ್ನಾಗಿ ಮಾಡ ಬೇಕೆಂಬ ಶಾಸ್ತ್ರಿಯವರ ಕನಸನ್ನ ನಂತರದ ದಿನಗಳಲ್ಲಿ ಬಂದ ಸರ್ಕಾರಗಳು ಸಾಕಾರಗೊಳಿಸುವಲ್ಲಿ ಸೋತಿವೆ. ಹೆಚ್ ಎ ಎಲ್ ಸಂಸ್ಥೆಗೆ ಸುಮಾರು 79 ವರ್ಷದ ಇತಿಹಾಸ ಇದೆ.ಆದರೆ ಇಂದಿಗೂ ವಿಶ್ವದ ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಅಭಿವೃದ್ಧಿಪಡಿಸುವ ವಿಷಯದಲ್ಲಿ ಯಾವುದೇ ಕಂಪೆನಿಗಳ ಹತ್ತಿರಕ್ಕೂ ನಿಲ್ಲುವುದಿಲ್ಲ.
ವಿಶ್ವವನ್ನೇ ಅಚ್ಚರಿಯ ತೆಕ್ಕೆಗೆ ಸೆಳೆಯುವ ಭಾರತದ ದೈತ್ಯ
– ಸುರೇಶ್ ಮುಗಬಾಳ್
ತಮಿಳುನಾಡಿನಲ್ಲಿ ಶಶಿಕಲಾ ನಟರಾಜನ್ ತನ್ನ ಆಸೆ ಈಡೇರದೆ ಸೆರೆಮನೆಯತ್ತ ಮುಖಮಾಡಿದಾಗ, ಇತ್ತ ಇಡೀ ಪ್ರಪಂಚವೇ ನಮ್ಮ ದೇಶದತ್ತ ಮುಖಮಾಡಿತ್ತು. ಶಶಿಕಲಾ ಸೆರೆಮನೆಗೆ ಹೋಗುವುದನ್ನು ನೋಡಲಿಕ್ಕಲ್ಲಾ, ನಮ್ಮ ಹೆಮ್ಮೆಯ ISRO ( Indian Space Research Organisation) PSLV-C37 ಗ್ರಹ ನೌಕೆಯ ಸಹಾಯದಿಂದ 104 ಉಪಗ್ರಹಗಳನ್ನು ಒಂದೇ ಬಾರಿಗೆ ಕಕ್ಷೆಗೆ ಸೇರಿಸುವುದರೊಂದಿಗೆ ಯಾರೂ ಮಾಡದ ಸಾಧನೆಗೆ ಕೈ ಹಾಕಿದೆ ಎಂದು. ಅಚ್ಚರಿ ಪಡಲೇಬೇಕು..! ಏಕೆ ಗೊತ್ತೇ? ಭಾರತೀಯ ಟಿ.ವಿ. ಮಾಧ್ಯಮಗಳು ಇಡೀ ದಿನ ಶಶಿಕಲಾರ ಬಗ್ಗೆ ಪ್ರಸಾರ ಮಾಡುತ್ತಿದ್ದರೆ ಅಲ್ಲೆಲ್ಲೋ ಅಮೇರಿಕಾ, ಸ್ವಿಡ್ಜರ್ಲ್ಯಾಂಡ್, ನೆದರ್ಲ್ಯಾಡ್, ಯು.ಎ.ಇ., ಇಸ್ರೇಲ್, ಖಜಕೀಸ್ತಾನ್ ದೇಶಗಳು ತಮ್ಮ ಮಾಧ್ಯಮಗಳ ತಲೆಪಂಕ್ತಿಯಲ್ಲಿ (Headlines) ನಮ್ಮ ದೇಶದ ಸಾಧನೆಯನ್ನು ಬಿತ್ತರಿಸಿದವು. ತಮ್ಮದೇ ದೇಶದ ವಿಜ್ಞಾನಿಗಳು ಭೂಕಕ್ಷೆಗೆ ಉಪಗ್ರಹಗಳನ್ನು ಸೇರಿಸಿದವರಂತೆ ಅಲ್ಲಿನ ಪ್ರಜೆಗಳು ಖುಷಿಪಟ್ಟುಕೊಂಡರು. ನಮ್ಮ ಟಿ.ವಿ.ಮಾಧ್ಯಮಗಳ ಕತೆಯೇ ಬೇರೆ, ಸುದ್ದಿ ಬಿತ್ತರಿಸುವಾಗ ಗಮನಾರ್ಹವಾದ ಸುದ್ದಿಗಳು 2-3 ನಿಮಿಷಗಳಿಗಷ್ಟೇ ಸೀಮಿತವಾಗಿಸಿಬಿಡುತ್ತವೆ. ಅದೇ ಕೊಳಕು ರಾಜಕೀಯವು ಮಾಧ್ಯಮಗಳ ತುಂಬೆಲ್ಲಾ ಹರಡಿರುತ್ತದೆ. ಚೀನಾದ ಪ್ರಮುಖ ಪತ್ರಿಕೆಯೊಂದು ಭಾರತದ ಈ ಸಾಧನೆಯನ್ನು ಕೊಂಡಾಡಿ, ಸಂಪಾದಕೀಯದಲ್ಲಿ ಮೆಚ್ಚುಗೆಯ ಮಾತುಗಳನ್ನಾಡಿತ್ತು. ಮತ್ತಷ್ಟು ಓದು
ವಿಜ್ಞಾನಿಗಳೇಕೆ ಪೂಜೆ ಮಾಡಬಾರದು?
– ಡಾ. ಪ್ರವೀಣ್ ಟಿ. ಎಲ್
ಉಪನ್ಯಾಸಕರು, ಕುವೆಂಪು ವಿಶ್ವವಿದ್ಯಾನಿಲಯ
ಮಂಗಳಯಾನದ ಯಶಸ್ವೀ ಕಾರ್ಯಾಚರಣೆ ಬಗ್ಗೆ ಇಡೀ ದೇಶವೇ ಸಂತಸಪಟ್ಟಿದೆ. ಇಡೀ ವಿಶ್ವವೇ ಭಾರತದ ಕಡೆಗೆ ನೋಡುವಂತರ ಸಾಧನೆಯನ್ನು ಭಾರತೀಯ ವಿಜ್ಞಾನಿಗಳು ಮಾಡಿರುವುದು ಮಹಾನ್ ಸಾಧನೆಯೇ ಸರಿ. ಆದರೆ ಕೆಲವು ‘ಚಿಂತಕರು’ ಈ ಇಡೀ ಕಾರ್ಯಾಚರಣೆಯ ಮುಖ್ಯಸ್ಥರಾಗಿದ್ದ ವಿಜ್ಞಾನಿ ರಾಧಾಕೃಷ್ಣನ್ರವರ ನಡೆಯ ಕುರಿತು ತಮ್ಮ ಕುಹಕ, ತಕರಾರುಗಳನ್ನು ಅಂತರ್ಜಾಲ, ಮತ್ತಿತರ ಕಡೆಗಳಲ್ಲಿ ಹರಿಯಬಿಡುತ್ತಿದ್ದಾರೆ. ರಾಧಾಕೃಷ್ಣನ್ರವರು ‘MOM’ ನ ಸಣ್ಣ ಮಾದರಿಯೊಂದನ್ನು ತಿರುಪತಿಗೆ ತಂದು, ತಮ್ಮ ಧರ್ಮಪತ್ನಿಯೊಡನೆ ಪೂಜಾ ಕಾರ್ಯಗಳನ್ನು ನೇರವೇರಿಸಿದ್ದು ಅವರ ಟೀಕೆಗೆ ಕಾರಣ.
ಉಡಾವಣೆಗೊಂಡ ‘MOM’ ಮಂಗಳನ ತಲುಪುವ ಮುಂಚೆಯೇ ಇದೊಂದು ವಿಫಲಯತ್ನವೇನೋ ಎಂಬಂತೆ ಕೆಲವರು ತಮ್ಮ ಪ್ರತಿಕ್ರಿಯೆಗಳನ್ನು ನೀಡಿದ್ದರು. ಇನ್ನೂ ಕೆಲವರು ವಿಫಲವಾಗಿದೆ ಎಂಬ ತೀರ್ಮಾನಕ್ಕೂ ಬಂದಿದ್ದರು. ಅಷ್ಟೇ ಅಲ್ಲದೇ ಈ ವಿಫಲತೆಗೆ ವಿಜ್ಞಾನಿಗಳು ತಿರುಪತಿಗೆ ತೆರಳಿ ‘ತಲೆಬೋಳಿಸಿ’ಕೊಳ್ಳದೇ ವಾಪಾಸಾದುದೇ ಪ್ರಮುಖ ಕಾರಣ ಎಂಬಂತೇ ಕುಹಕವಾಡಲು ಶುರುಮಾಡಿದರು. ಕುಹಕಗಳಿಗೆಲ್ಲಾ ಉತ್ತರವನ್ನು ವಿಜ್ಞಾನಿಗಳು ಈಗಾಗಲೇ ನೀಡಿದ್ದಾರೆ.
ಈ ‘ವೈಜ್ಞಾನಿಕ’ ಚಿಂತಕರ ಪ್ರಮುಖ ತಕರಾರೆಂದರೆ, ವಿಜ್ಞಾನಿಗಳು ದೇವಸ್ಥಾನಗಳಿಗೆ ತೆರಳಿ ತಾವು ತಯಾರಿಸಿದ ಆಯುಧದ ಪೂಜೆ ನೆರವೇರಿಸಿರುವುದು ಎಷ್ಟು ಸರಿ. ವಿಜ್ಞಾನಿಗಳಿಗೆ ವಿಶ್ವದ ಸೃಷ್ಟಿಯ ಕುರಿತು ವೈಜ್ಞಾನಿಕ ಕಾರಣಗಳು ತಿಳಿದಿದ್ದರೂ ಸಹಾ ದೇವರ ಅಸ್ತಿತ್ವವನ್ನು ನಂಬುತ್ತಾರೆ ಮತ್ತು ತಮ್ಮ ವೈಜ್ಞಾನಿಕ ಪ್ರಯೋಗಗಳಲ್ಲಿ ದೇವರ ಕೈವಾಡ ಇದೆ ಎಂದುಕೊಳ್ಳುವುದು ಅಜ್ಞಾನ/ ಮೂಢತೆ ಎಂಬುದವರ ವಾದ. ISRO ಒಂದು ಸರ್ಕಾರಿ ಸಂಸ್ಥೆಯಾಗಿದ್ದು, ಭಾರತ ಒಂದು ಜಾತ್ಯಾತೀತ ರಾಷ್ಟ್ರ ಎಂಬುದನ್ನು ರಾಧಾಕೃಷ್ಣನ್ರವರು ನೆನಪಿಡಬೇಕು ಎಂದು ಅಪ್ಪಣೆ ಹೊರಡಿಸುತ್ತಾರೆ.
ಮೇಲಿನ ತಕರಾರುಗಳು ಭಾರತದ ಕುರಿತ ಈ ಚಿಂತಕರ ಅಜ್ಞಾನವನ್ನೂ, ಅವೈಜ್ಞಾನಿಕತೆಯನ್ನೂ, ಮೌಢ್ಯತೆಯನ್ನೂ ಪ್ರದರ್ಶಿಸುತ್ತಿವೆ. ಈ ಚಿಂತಕರುಗಳು ತಪ್ಪಾದ ‘ಯೂರೋಪಿನ ಗ್ರಹಿಕೆ’ಗಳಿಂದ ಕೂಡಿದ ತಮ್ಮ ವಿವರಣೆಗಳನ್ನೇ ವೈಜ್ಞಾನಿಕ ಎಂದು, ತಾವೇ ವಿಜ್ಞಾನದ ಪಿತಾಮಹರೆಂಬ ತೀರ್ಮಾನಕ್ಕೆ ಬಂದಿದ್ದಾರೆ. ಜೊತೆಗೆ ಯೂರೋಪಿನ ಸೆಕ್ಯುಲರ್ ಚಿಂತನೆಯ ನಕಲನ್ನು ಭಾರತದಲ್ಲಿ ವೈಜ್ಞಾನಿಕತೆಯ ಹೆಸರಲ್ಲಿ ವ್ಯಾಪಾರ ಮಾಡುತ್ತಿರುವುದು ಕಂಡುಬರುತ್ತದೆ. ವಿಜ್ಞಾನಿಗಳ ಈ ನಡೆಯನ್ನು ಅವೈಜ್ಞಾನಿಕ, ಮೌಢ್ಯ ಎನ್ನಲು ಕಾರಣ ಅವರ ಆಚರಣೆ ಮತ್ತು ನಂಬಿಕೆಗಳ ನಡುವಿನ ಸಂಬಂಧ. ಅಂದರೆ ಬಾಹ್ಯಾಕಾಶ ನೌಕೆಯ ಉಡಾವಣೆಗೂ ದೇವರ ಮೇಲಿನ ನಂಬಿಕೆಗೂ ಸಂಬಂಧ ಇದೆ ಎಂಬುದು. ದೇವರೇ ಬಂದು ಕ್ಷಿಪಣಿಯನ್ನು ಉಡಾವಣೆ ಮಾಡುತ್ತಾನೆ ಎಂದೇನೂ ವಿಜ್ಞಾನಿಗಳು ನಂಬಿಲ್ಲವಲ್ಲ. ಹಾಗಿದ್ದರೆ ಅವರು ವರ್ಷಗಟ್ಟಲೇ ಶ್ರಮಪಟ್ಟು ತಯಾರಿಸುವ ಅವಶ್ಯಕತೆಯಾದರೂ ಏನಿತ್ತು. ಅಲ್ಲದೇ ಅದಕ್ಕೆ ನಿರ್ದಿಷ್ಟ ಕಾಲಕ್ಕೆ ಬೇಕಾಗುವಷ್ಟು ಇಂಧನವನ್ನು, ಆಧುನಿಕ ತಂತ್ರಜ್ಞಾನವನ್ನು ಬಳಸುವ ಅಗತ್ಯವಾದರೂ ಏಕೆ?