ವಿಷಯದ ವಿವರಗಳಿಗೆ ದಾಟಿರಿ

Posts tagged ‘Mass Hysteria’

21
ಆಕ್ಟೋ

ಪ್ರಶಸ್ತಿ ಹಿಂತಿರುಗಿಸುವಿಕೆ ಮತ್ತು ಸೆಕ್ಯುಲರ್ ಸಮೂಹ ಸನ್ನಿ

– ರಾಕೇಶ್ ಶೆಟ್ಟಿ

ಸಮೂಹ ಸನ್ನಿದೇಶದಲ್ಲಿ ಪ್ರಶಸ್ತಿ ಹಿಂತಿರುಗಿಸುವಿಕೆಯ ಪರ್ವ ಭರ್ಜರಿಯಾಗಿ ಶುರುವಾಗಿದೆ.ಕಲ್ಬುರ್ಗಿ ಹತ್ಯೆಯನ್ನು ಖಂಡಿಸಿ ಚಂಪಾ ಅವರಿಂದ ರಾಜ್ಯದಲ್ಲಿ ಶುರುವಾಗಿದ್ದು ಈಗ ನಯನತಾರಾ ಸೆಹಗಲ್ ಅವರು ಹಿಂದಿರುಗಿಸುವ ಮೂಲಕ ಸಾಮೂಹಿಕ ಸನ್ನಿಯಂತೆ ಹರಡಲಾರಂಭಿಸಿದೆ.ಇವರೆಲ್ಲಾ ನೀಡುತ್ತಿರುವ ಕಾರಣ “ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ.ತುರ್ತು ಪರಿಸ್ಥಿತಿಗಿಂತಲೂ ಭೀಕರವಾದ ಸನ್ನಿವೇಶವಿದೆ.ದಾದ್ರಿ ಹತ್ಯೆಯನ್ನು ವಿರೋಧಿಸಿ,ಕಲ್ಬುರ್ಗಿ ಕೊಲೆ ಪ್ರಕರಣದಲ್ಲಿ ಸಾಹಿತ್ಯ ಅಕಾಡೆಮಿಯ ಮೌನವನ್ನು ವಿರೋಧಿಸಿ,ಮೋದಿಯ ಮೌನವನ್ನು ವಿರೋಧಿಸಿ,’ ಇತ್ಯಾದಿ ಇತ್ಯಾದಿ ಕಾರಣಗಳನ್ನು ನೀಡಿದ್ದಾರೆ.

ನಿಜಕ್ಕೂ ದೇಶದಲ್ಲಿ ತುರ್ತು ಪರಿಸ್ಥಿತಿಯಂತಹ ಗಂಭೀರ ಸನ್ನಿವೇಶ ಸೃಷ್ಟಿಯಾಗಿದೆಯಾ? ಅಥವಾ ಸೆಕ್ಯುಲರ್ ಗುಂಪು ಸಮೂಹ ಸನ್ನಿಗೊಳಗಾಗಿದೆಯೇ? ಊಹೂಂ.ಸನ್ನಿಗೊಳಗಾಗುವಷ್ಟು ಮುಗ್ದರೇನಲ್ಲ ಇವರು. Mass Hysteria ಸೃಷ್ಟಿಸುವಷ್ಟು ಸಾಮರ್ಥ್ಯವುಳ್ಳ ಜನರಿವರು.2002ರ ಗುಜರಾತ್ ಗಲಭೆಯನ್ನು ನೆನಪು ಮಾಡಿಕೊಳ್ಳಿ.ಆಗ ಜನರು ಈ ಹುಟ್ಟು ಹಾಕಿದ ಸಮೂಹ ಸನ್ನಿಯೇನೂ ಕಡಿಮೆಯದೇ,ಒಬ್ಬ ಮುಖ್ಯಮಂತ್ರಿಯ ಮಿತಿಯಲ್ಲಿ ಏನೆಲ್ಲಾ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕಿತ್ತೋ ಅದನ್ನೆಲ್ಲಾ ಮಾಡಿಯೂ ನರೇಂದ್ರ ಮೋದಿಯವರಿಗೆ ನರಹಂತಕ ಪಟ್ಟ ಕಟ್ಟಿಸಿ,ಆಗಿನ ಪ್ರಧಾನಿ ವಾಜಪೇಯಿಯವರಿಂದಲೂ ’ರಾಜಧರ್ಮ ಪಾಲನೆ’ಯ ಮಾತನ್ನೂ ಆಡಿಸಿಬಿಟ್ಟಿತ್ತು ಈ ಸೆಕ್ಯುಲರ್ ಸಮೂಹ ಸನ್ನಿ. ಹಾಗೆಂದು ಗುಜರಾತ್ ಗಲಭೆಯನ್ನೂ ಸಮರ್ಥಿಸುತ್ತಿಲ್ಲ.ಅದಕ್ಕೂ ಮೊದಲು ಈ ದೇಶ ಅಂತ ಗಲಭೆಯನ್ನೇ ನೋಡಿರಲಿಲ್ಲವಾ ಎಂಬ ಪ್ರಶ್ನೆಯನ್ನು ಕೇಳಿಕೊಳ್ಳಿ. ಮತ್ತಷ್ಟು ಓದು »